ಕಡಬ ನ್ಯೂಸ್

ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳು ನಾಳೆಯಿಂದ ಪುನಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 30: ಕೋವಿಡ್-19 ಕಾರಣಗಳಿಂದ ಕಳೆದ ಎಂಟು ತಿಂಗಳಿನಿಂದ ಮುಚ್ಚಲ್ಪಟ್ಟಿದ್ದ ವೈದ್ಯಕೀಯ ಕಾಲೇಜುಗಳು ರಾಜ್ಯದಲ್ಲಿ  ನಾಳೆಯಿಂದ ಆರಂಭವಾಗಲಿದ್ದು, ಕೇಂದ್ರ ಸರ್ಕಾರದ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಅನುಸರಿಸಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸುವಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕಾಲೇಜುಗಳಿಗೆ ಸೂಚನೆ ನೀಡಿದೆ.     ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಎಲ್ಲ ಸಂಯೋಜಿತ ವೈದ್ಯಕೀಯ ಕಾಲೇಜುಗಳನ್ನು ಡಿಸೆಂಬರ್ 1 ರ ಮಂಗಳವಾರದಂದು ಪುನಾರಂಭಗೊಳಿಸಿ ತಕ್ಷಣವೇ ಪ್ರಾಯೋಗಿಕ ತರಗತಿಗಳನ್ನು ನಡೆಸುವ ಬಗ್ಗೆ ಗಮನ ಹರಿಸಬೇಕು. […]

ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳು ನಾಳೆಯಿಂದ ಪುನಾರಂಭ Read More »

ಕರ್ನಾಟಕ

ಉಡುಪಿ: ಪ್ರಸಾದ್ ನಾರ್ಣಕಜೆಯವರಿಂದ ‘ಉಪಾಸಣೆ” ಪುಸ್ತಕ ಬಿಡುಗಡೆ

(ನ್ಯೂಸ್ ಕಡಬ) newskadaba.com ಉಡುಪಿ ನ. 30: ಕಳೆದ ದಿನ ಉಡುಪಿ ಕನ್ನಡ ಪರಿಷತ್‍ನ ಪುಸ್ತಕ ಅನಾವರಣ ಕಾರ್ಯಕ್ರಮದಲ್ಲಿ ಇತಿಹಾಸ ಅಧ್ಯಾಪಕರಾಗಿರುವ ಪ್ರಸಾದ್ ನಾರ್ಣಕಜೆ ಯವರು ಮಲೆನಾಡು ಪ್ರಕಾಶನದವರು ಪ್ರಕಟಿಸಿದ ನಾರಾಯಣ ಶೆವಿರೆ ಅವರ “ಉಪಾಸಣೆ” ಪುಸ್ತಕ ಬಿಡುಗಡೆಗೊಳಿಸಿ ಬಳಿಕ ಮಾತನಾಡಿದರು.     ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕ.ಸಾ.ಪ.ಉಡುಪಿ ಜಿಲ್ಲೆಯ ಅಧ್ಯಕ್ಷ ನೀಲಾವರ ಸುರೇಂದ್ರ ವಹಿಸಿದ್ದರು. ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಗೌರವ ಉಪಸ್ಥಿತರಿದ್ದರು.  

ಉಡುಪಿ: ಪ್ರಸಾದ್ ನಾರ್ಣಕಜೆಯವರಿಂದ ‘ಉಪಾಸಣೆ” ಪುಸ್ತಕ ಬಿಡುಗಡೆ Read More »

ಕರಾವಳಿ

ಬಿಜೆಪಿ ನಾಯಕಿ ಮತ್ತು ಶಾಸಕಿ ಕೊರೋನಾಗೆ ಬಲಿ

(ನ್ಯೂಸ್ ಕಡಬ) newskadaba.com ರಾಜಸ್ಥಾನ ನ. 30: ರಾಜಸ್ಥಾನದ ಬಿಜೆಪಿ ನಾಯಕಿ ಮತ್ತು ಶಾಸಕಿ ಕಿರಣ್ ಮಹೇಶ್ವರಿ ಕೊರೋನಾಗೆ ಬಲಿಯಾಗಿದ್ದಾರೆ. ಕಿರಣ್‌ ಮಹೇಶ್ವರಿ ಅವರು ಮೆಡಂತ ಆಸ್ಪತ್ರೆಯಲ್ಲಿ ಕೊರೋನಾಗೆ‌ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಫಲಿಸದೇ ಭಾನುವಾರ ರಾತ್ರಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು. ಮಹೇಶ್ವರಿ ಅವರು ರಾಜ್ಸಾಮಂದ್‌ ಕ್ಷೇತ್ರದಿಂದ ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು. ಕಿರಣ್ ಮಹೇಶ್ವರಿ ಅವರ ಅಕಾಲಿಕ ನಿಧನದಿಂದ ಬಹಳ ಬೇಸರವಾಗಿದೆ. ಅವರ ಕುಟುಂಬ, ಸ್ನೇಹಿತರಿಗೆ ಸಂತಾಪ ಸೂಚಿಸುತ್ತಿದ್ದೇನೆ ಎಂದು ಅಶೋಕ್‌ ಗೆಹ್ಲೋಟ್‌ ಅವರು ಟ್ವೀಟ್‌

ಬಿಜೆಪಿ ನಾಯಕಿ ಮತ್ತು ಶಾಸಕಿ ಕೊರೋನಾಗೆ ಬಲಿ Read More »

ಕರಾವಳಿ

ಯೇನೆಕಲ್ಲು: ಗ್ರಾಮ ವಿಕಸ ಸಮಿತಿ ಯೇನೆಕಲ್ಲು ವತಿಯಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಯೇನೆಕಲ್ಲು ನ. 30: ಶ್ರೀ ಶಂಖಪಾಲ ದೇವಸ್ಥಾನದ ಅಡಿಕೆ ತೋಟದಲ್ಲಿ ತುಂಬಿದ್ದ ಕಳೆಯನ್ನು ಕಳೆದ ದಿನ ಗ್ರಾಮ ವಿಕಸ ಸಮಿತಿ ಯೇನೆಕಲ್ಲು ಇದರ ವತಿಯಿಂದ ಸ್ವಚ್ಚತೆ ಮಾಡಲಾಯಿತು.     ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ಗ್ರಾಮ ಸಮಿತಿ ಯೇನೆಕಲ್ಲು ಇದರ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.  

ಯೇನೆಕಲ್ಲು: ಗ್ರಾಮ ವಿಕಸ ಸಮಿತಿ ಯೇನೆಕಲ್ಲು ವತಿಯಿಂದ ಶ್ರಮದಾನ Read More »

ಕರಾವಳಿ

ಡಿಸೆಂಬರ್ ಮೂರನೇ ವಾರ SSLC ಪರೀಕ್ಷೆ ವೆಳ್ಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು  ನ. 30: ರಾಜ್ಯದಲ್ಲಿ ಶಾಲೆ ಆರಂಭದ ಕುರಿತಂತೆ ಚರ್ಚೆ ನಡೆದಿರುವ ಬೆನ್ನಲ್ಲೇ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಪ್ರೌಢ ಶಿಕ್ಷಣಾ ಪರಿಕ್ಷಾ ಮಂಡಳಿಗೆ ತಾತ್ಕಾಲಿಕ ವೇಳಾಪಟ್ಟಿ ರೂಪಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ ಎನ್ನಲಾಗಿದೆ.   ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ ಕರೆದು ಎಸ್ ಎಸ್ ಎಲ್ ಸಿ ಪರೀಕ್ಷೆಗಳ ವೇಳಾಪಟ್ಟಿ ಕುರಿತು ಚರ್ಚಿಸಲಿದ್ದಾರೆಂದು ತಿಳಿದುಬಂದಿದ್ದು, ಡಿಸೆಂಬರ್

ಡಿಸೆಂಬರ್ ಮೂರನೇ ವಾರ SSLC ಪರೀಕ್ಷೆ ವೆಳ್ಳಾಪಟ್ಟಿ ಪ್ರಕಟ Read More »

ಕರಾವಳಿ

ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಶವಶೈತ್ಯಾಗಾರ ಸಮರ್ಪಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 30: ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಅಂತಾರಾಷ್ಟ್ರೀ ಲಯನ್ಸ್ ಸೇವಾ ಸಂಸ್ಥೆ ಜಿಲ್ಲೆ 317ಡಿ ಪ್ರಾಂತ್ಯ-2ರ ಪ್ರಾಂತೀಯ ಸಮ್ಮೇಳನ ಪುನರ್ಜನ್ಮ ನೆನಪಿಗಾಗಿ ನೀಡಲಾದ ಶೈತ್ಯಾಗಾರವನ್ನು ಆಸ್ಪತ್ರೆಯ ಆವರಣದಲ್ಲಿ ಸಮರ್ಪಿಸಲಾಯಿತು.   ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಈ ಸಂದರ್ಭ ಮಾತನಾಡಿ, ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ಜತೆ ಜತೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯಗಳಿಗೆ ಸ್ಪಂದನೆ ನೀಡುವ ಕಾರ್ಯ ಮಾಡಲಾಗುತ್ತಿದೆ. ಇಲ್ಲಿ ಎಲ್ಲಾ ವೈದ್ಯರ ಸೇವೆ ಲಭ್ಯವಿದ್ದು, ರೋಗಿಗಳಿಗೆ ಉತ್ತಮ ಸೇವೆ ಲಭ್ಯವಾಗುತ್ತಿದೆ. ಶೀಘ್ರದಲ್ಲಿ

ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಶವಶೈತ್ಯಾಗಾರ ಸಮರ್ಪಣೆ Read More »

ಕರಾವಳಿ

ಉಪ್ಪಿನಂಗಡಿ: ಬೈಕ್ ಪಿಕಪ್ ಢಿಕ್ಕಿ ➤ ಸವಾರರಿಬ್ಬರೂ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಲ್ಲೇರಿ ನ. 30: ಉಪ್ಪಿನಂಗಡಿ ಸಮೀಪದ ಕಲ್ಲೇರಿ ಹುಣ್ಸೆಕಟ್ಟೆ ಎಂಬಲ್ಲಿ ಬೈಕೊಂದು ಪಿಕಪ್ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.     ಮೃತಪಟ್ಟ ವ್ಯಕ್ತಿಯನ್ನು ಕೃಷ್ಣಪ್ರಸಾದ್ ರೈ (36) ಮತ್ತು ಜಯರಾಮ ಗೌಡ(29) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯಿಂದ ಕಲ್ಲೇರಿ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಎದುರುಕಡೆಯಿಂದ ಬಂದ ಪಿಕಪ್ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿದ್ದಾರೆ. ಅಪಘಾತವೆಸಗಿದ ಪಿಕಪ್

ಉಪ್ಪಿನಂಗಡಿ: ಬೈಕ್ ಪಿಕಪ್ ಢಿಕ್ಕಿ ➤ ಸವಾರರಿಬ್ಬರೂ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಮುರ್ಡೇಶ್ವರ: ಸಮುದ್ರದಲ್ಲಿ ಮುಳುಗಿ ಬೆಂಗಳೂರಿನ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಭಟ್ಕಳ ನ. 30: ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಮುರುಡೇಶ್ವರ ಸಮುದ್ರದಲ್ಲಿ ಬೆಂಗಳೂರಿನ ಬಾಣಸಂದ್ರ ನಿವಾಸಿ ಮಂಜುನಾಥ್ ವೆಂಕಟೇಶ್ ಮಡಿವಾಳ (20) ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.   ಮೃತ ಮಂಜುನಾಥ್ ವೆಂಕಟೇಶ್ ತನ್ನ ಏಳು ಜನ ಸ್ನೇಹಿತರೊಂದಿಗೆ ಈಜುತ್ತಿರುವಾಗ ಈ ದುರ್ಘಟನೆ ನಡೆದಿದೆ. ಈಜಲು ಸಮುದ್ರಕ್ಕೆ ಇಳಿದಿದ್ದ ಈ ಏಳು ಜನರ ಪೈಕಿ ಮಂಜುನಾಥ್ ಅವರನ್ನು ಹೊರತು ಪಡಿಸಿ ಉಳಿದವರು ನೀರಿನಿಂದ ಮೇಲೆ ಬಂದಿದ್ದರು. ಆದರೆ ಮಂಜುನಾಥ್ ಅಲೆಗಳ ರಭಸಕ್ಕೆ ಸಿಲುಕಿ ಜೀವನ್ಮರಣ

ಮುರ್ಡೇಶ್ವರ: ಸಮುದ್ರದಲ್ಲಿ ಮುಳುಗಿ ಬೆಂಗಳೂರಿನ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ

ಬಿ.ಸಿ.ರೋಡ್ ಸೇತುವೆ ಬಳಿ ಕಾರುಗಳ ಡಿಕ್ಕಿ ➤ ಸರಣಿ ಅಪಘಾತ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 30: ಬಿ.ಸಿ.ರೋಡ್ ನೇತ್ರಾವತಿ ಸೇತುವೆ ಬಳಿ ಮೂರು ಕಾರುಗಳು ಡಿಕ್ಕಿಯಾಗಿ ಸರಣಿ ಅಪಘಾತ ಕಳೆದ ದಿನ ಸಂಭವಿಸಿದೆ.   ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದು, ಬಂಟ್ವಾಳ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಭಾನುವಾರ ರಾತ್ರಿ ಅಪಘಾತ ನಡೆದಿದ್ದು, ಇದರಿಂದಾಗಿ ತುಂಬಾ ಹೊತ್ತುವಾಹನಗಳು ಸಾಲುಗಟ್ಟಿ ನಿಂತವು. ಬಳಿಕ ಪೊಲೀಸರು ವಾಹನಗಳನ್ನು ತೆರವುಗೊಳಿಸಿದರು.    

ಬಿ.ಸಿ.ರೋಡ್ ಸೇತುವೆ ಬಳಿ ಕಾರುಗಳ ಡಿಕ್ಕಿ ➤ ಸರಣಿ ಅಪಘಾತ Read More »

ಕರಾವಳಿ

ಹೊಸಮಠ: ಅಕ್ರಮ ಮರಳು ದಂಧೆ ➤ ವಾಹನ ಸಹಿತ ಇಬ್ಬರು ವಶಕ್ಕೆ

(ನ್ಯೂಸ್ ಕಡಬ) newskadaba.com ಹೊಸಮಠ ನ. 29: ಕಳೆದ ದಿನ ರಾತ್ರಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಕುಟ್ರುಪಾಡಿ ಗ್ರಾಮದ ನಾಡೋಳಿಯಲ್ಲಿ ಒಂದು ಪಿಕಪ್ ವಾಹನ ಮತ್ತು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಉಳಿದಂತೆ ಇಬ್ಬರು ಎರಡು ವಾಹನಗಳನ್ನು ಚಲಾಯಿಸಿಕೊಂಡು  ಪರಾರಿಯಾಗಿರುವ ಘಟನೆ ನಡೆದಿದೆ.     ಅಕ್ರಮ ಮರಳು ಸಾಗಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈಗಾಗಲೇ ಕುಮಾರಧಾರ ಹಾಗೂ ಗುಂಡ್ಯ ಹೊಳೆಯಲ್ಲಿ ನಿರಂತರವಾಗಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು

ಹೊಸಮಠ: ಅಕ್ರಮ ಮರಳು ದಂಧೆ ➤ ವಾಹನ ಸಹಿತ ಇಬ್ಬರು ವಶಕ್ಕೆ Read More »

ಕರಾವಳಿ
Scroll to Top