ಕಡಬ ನ್ಯೂಸ್

ಪ್ರೊ ಕಬಡ್ಡಿ ಲೀಗ್ ಮುಂದಿನ ವರ್ಷಕ್ಕೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ ನ. 29: ಕೋವಿಡ್ -19 ಕಾರಣದಿಂದಾಗಿ ಪ್ರೊ ಕಬಡ್ಡಿ ಲೀಗ್ (ಪಿಕೆಎಲ್)ನ ಎಂಟನೇ ಆವೃತ್ತಿಯ ಟೂರ್ನಿಯನ್ನು ಮುಂದೂಡಲಾಗಿದೆ. ಆಟಗಾರರ ಅಧಿಕೃತ ಮಾರ್ಗಸೂಚಿಗಳು ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಂಘಟಕರು ಶನಿವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಿಕೆಎಲ್‌ನ 8ನೇ ಆವೃತ್ತಿಯನ್ನು ಮುಂದೂಡಿದ್ದಕ್ಕಾಗಿ ನಾವು ವಿಷಾದಿಸುತ್ತೇವೆ. ಪುನರಾರಂಭಿಸಲು ಮುಂದಿನ ವರ್ಷ ಸೂಕ್ತ ಸಮಯ ನೋಡುತ್ತೇವೆ ಎಂದು ಸಂಘಟಕರು ತಿಳಿಸಿದ್ದಾರೆ.     ಸ್ಟಾರ್ ಸ್ಪೋರ್ಟ್ಸ್ ಲೀಗ್‌ನ ಐದು ವರ್ಷಗಳ ಒಪ್ಪಂದವು ಕಳೆದ ವರ್ಷ […]

ಪ್ರೊ ಕಬಡ್ಡಿ ಲೀಗ್ ಮುಂದಿನ ವರ್ಷಕ್ಕೆ Read More »

ರಾಷ್ಟ್ರೀಯ ನ್ಯೂಸ್

ಶಿಲೀಂಧ್ರಶಾಸ್ತ್ರ ಸಂಶೋಧನಾ ಕ್ಷೇತ್ರ ➤ ಪ್ರೊ.ಕೆ.ಆರ್. ಶ್ರೀಧರ್‍ರವರಿಗೆ ವಿಶೇಷ ಸ್ಥಾನಮಾನ

(ನ್ಯೂಸ್ ಕಡಬ) newskadaba.com ಮಂಗಳೂರು ನ. 29: ಮಂಗಳೂರು ವಿಶ್ವವಿದ್ಯಾನಿಲಯದ ಜೀವವಿಜ್ಞಾನ ವಿಭಾಗದ ಪ್ರೊ. ಕೆ.ಆರ್.ಶ್ರೀಧರ್‍ರವರಿಗೆ ಅಮೇರಿಕಾದ ಪ್ರತಿಷ್ಠಿತ ಸ್ಟ್ಯಾನ್ ಪೋರ್ಡ್ ವಿಶ್ವವಿದ್ಯಾನಿಲಯದಿಂದ ನಿರ್ವಹಿಸಲ್ಪಟ್ಟ ಮೆಗಾ ದತ್ತಾಂಶ ವಿಶ್ಲೇಷಣೆಯ ಪ್ರಕಾರ ಶಿಲೀಂಧ್ರಶಾಸ್ತ್ರ ಸಂಶೋಧನಾಕ್ಷೇತ್ರದಲ್ಲಿ ವಿಶ್ವದಅಗ್ರ 2%ವಿಜ್ಞಾನಿಗಳಲ್ಲಿ ಉನ್ನತ ಸ್ಥಾನಮಾನ ಲಭಿಸಿದೆ. ಸ್ಟ್ಯಾನ್ ಪೋರ್ಡ್  ವಿಶ್ವವಿದ್ಯಾನಿಲಯದ ವಿಜ್ಞಾನಿಗಳು “ಓಪನ್ ಅಕ್ಸ್‍ಸ್ ಜರ್ನ್‍ಲ್ ಪ್ಲಾಸ್ ಬಯಾಲಜಿ” (PLOS Biology)ಯಲ್ಲಿ ಈ ಮಾಹಿತಿಯನ್ನು ಪ್ರಕಟಿಸಿದ್ದಾರೆ.ಪ್ರೊ.ಕೆ.ಆರ್.ಶ್ರೀಧರ್‍ರವರು ಕರ್ನಾಟಕದ ದಕ್ಷಿಣಕನ್ನಡ, ಕೊಡಗು ಮತ್ತು ಪಶ್ಚಿಮಘಟ್ಟ ಪ್ರದೇಶಗಲ್ಲಿನ ಶಿಲೀಂದ್ರಗಳ ಕುರಿತು ನಿರ್ವಹಿಸಿದ ಸಂಶೋಧನೆಗೆ ವಿಶೇಷ ಸ್ಥಾನಮಾನದ ಗೌರವ

ಶಿಲೀಂಧ್ರಶಾಸ್ತ್ರ ಸಂಶೋಧನಾ ಕ್ಷೇತ್ರ ➤ ಪ್ರೊ.ಕೆ.ಆರ್. ಶ್ರೀಧರ್‍ರವರಿಗೆ ವಿಶೇಷ ಸ್ಥಾನಮಾನ Read More »

ಕರಾವಳಿ

ಉಳ್ಳಾಲ: ಸ್ಕೂಟರ್ ಗೆ ಕಾರು ಡಿಕ್ಕಿ ➤ ಸ್ಕೂಟರ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಉಳ್ಳಾಲ ನ. 29: ತೊಕ್ಕೊಟ್ಟು ನಾಗನಕಟ್ಟೆ ಬಳಿ ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ  ನಡೆದಿದೆ. ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಇಕ್ಬಾಲ್ ಅಹ್ಮದ್ ಎಂದು ಗುರುತಿಸಲಾಗಿದೆ.     ತೊಕ್ಕೊಟ್ಟಿನಿಂದ ಸ್ಕೂಟರ್ ನಲ್ಲಿ ನಾಗನಕಟ್ಟೆಗೆ ಬರುತ್ತಿದ್ದಾಗ ಓವರ್‍ ಬ್ರಿಡ್ಜ್ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸ್ಕೂಟರ್ ಡಾಂಬರು ರಸ್ತೆಯಲ್ಲಿ ಬಿದ್ದಿದ್ದು, ಸ್ಕೂಟರ್ ಸವಾರನಿಗೆ ಗಂಭಿರ ಗಾಯವಾಗಿದೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ

ಉಳ್ಳಾಲ: ಸ್ಕೂಟರ್ ಗೆ ಕಾರು ಡಿಕ್ಕಿ ➤ ಸ್ಕೂಟರ್ ಸವಾರ ಗಂಭೀರ Read More »

ಕರಾವಳಿ

ನಗರದಲ್ಲಿ ಮತ್ತೊಂದು ‘ಉರ್ದುವಿನಲ್ಲಿ ಕಾಣಿಸಿಕೊಂಡ ಉಗ್ರ’ ಬರಹ

(ನ್ಯೂಸ್ ಕಡಬ) newskadaba.com ಮಂಗಳೂರು ನ. 29: ಉಗ್ರ ಸಂಘಟನೆ ಪರ ಜೈಕಾರ ಘೋಷಣೆ ಬರಹ ಕಾಣಿಸಿಕೊಂಡ ಎರಡೇ ದಿನಗಳ ಅಂತರದಲ್ಲಿ ನಗರದ ಕೋರ್ಟ್ ಆವರಣದಲ್ಲಿ ಮತ್ತೊಂದು ಇಂತಹದ್ದೇ ಬರವಣಿಗೆ ಕಾಣಿಸಿಕೊಂಡಿದೆ. ಈ ಬಾರಿ ಉರ್ದುವಿನಲ್ಲಿ ಕಾಣಿಸಿಕೊಂಡ ಬರವಣಿಗೆಯಲ್ಲಿ ‘ಪ್ರವಾದಿಗೆ ಕೋಪ ಬಂದರೆ ದೇಹದಿಂದ ತಲೆ ಬೇರ್ಪಡುವುದು’ ಅನ್ನೋ ಅರ್ಥದಲ್ಲಿ ಮತ್ತದೇ ಕಪ್ಪು ಬಣ್ಣದ ಸ್ಪ್ರೇ ಪೇಂಟ್ ಬಳಿದು ಈ ಕೃತ್ಯ ನಡೆಸಲಾಗಿದೆ.   ಕಳೆದ ದಿನ ಸಂಜೆ ವೇಳೆಗೆ ಈ ಕೃತ್ಯ ಗಮನಕ್ಕೆ ಬಂದಿದ್ದು, ತಕ್ಷಣ ಪೊಲೀಸ್

ನಗರದಲ್ಲಿ ಮತ್ತೊಂದು ‘ಉರ್ದುವಿನಲ್ಲಿ ಕಾಣಿಸಿಕೊಂಡ ಉಗ್ರ’ ಬರಹ Read More »

ಕರಾವಳಿ, ಕ್ರೈಮ್ ನ್ಯೂಸ್

ಅರಂತೋಡು: ಕಾರು ಪಲ್ಟಿ ➤ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಅರಂತೋಡು ನ. 29: ಕಳೆದ ದಿನ ಮಾಣಿ ಮೈಸೂರು ರಸ್ತೆಯ ಅರಂತೋಡು ಸಮೀಪ ಓಮ್ನಿ ಕಾರು ಪಲ್ಟಿ ಹೊಡೆದ ಪರಿಣಾಮ ಕಾರು ಜಖಂಗೊಂಡಿದ್ದು, ಪ್ರಯಾಣಿಕರು ಪಾರಾದ ಘಟನೆ ನಡೆದಿದೆ.     ಓಮ್ನಿ ಕಾರು ಸುಳ್ಯದಿಂದ ಮೈಸೂರು ಕಡೆಗೆ ತೆರಳುತ್ತಿದ್ದು, ಪ್ರ ಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅದೃಷ್ಟವಶತ್ ನಿಂದ ಪಾರಾಗಿದ್ದಾರೆ.    

ಅರಂತೋಡು: ಕಾರು ಪಲ್ಟಿ ➤ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು Read More »

ಕರಾವಳಿ

ಕೋಟ :ಸ್ಕೂಟಿಗೆ ಡಿಕ್ಕಿ ಹೊಡೆದ ಫಾರ್ಚೂನ್ ➤ ಯುವತಿ ಮೃತ್ಯು, ಮತ್ತೋರ್ವ ಯುವತಿ ಗಂಭೀರ

(ನ್ಯೂಸ್ ಕಡಬ) newskadaba.com ಕೋಟ ನ. 29: ಕಳೆದ ದಿನ  ಉಡುಪಿಯ ಕೋಟದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಯುವತಿಯೋರ್ವಳು ಸಾವನ್ನಪ್ಪಿದ್ದಾಳೆ. ಮತ್ತೋರ್ವ ಯುವತಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ.     ಕೋಟ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ರ ಕೃಷ್ಣಭವನ ಹೋಟೆಲ್ ಎದುರುಗಡೆ ಈ ಅಪಘಾತ ಸಂಭವಿಸಿದ್ದು, ಶ್ರೇಯಾ ಶಾನುಭಾಗ್ (24) ಮೃತಪಟ್ಟು ಪ್ರಜ್ಞಾ (25) ಗಂಭೀರ ಗಾಯಗೊಂಡಿದ್ದಾರೆ. ಬೇಳೂರು ನಿವಾಸಿ ಶ್ರೇಯಾ ಕುಂದಾಪುರದಿಂದ ಬ್ರಹ್ಮಾವರ ಕಡೆ ಸ್ಕೂಟಿಯಲ್ಲಿ ಬರುತ್ತಿದ್ದ ಸಂದರ್ಭ ಫಾರ್ಚೂನ್ ವಾಹನ

ಕೋಟ :ಸ್ಕೂಟಿಗೆ ಡಿಕ್ಕಿ ಹೊಡೆದ ಫಾರ್ಚೂನ್ ➤ ಯುವತಿ ಮೃತ್ಯು, ಮತ್ತೋರ್ವ ಯುವತಿ ಗಂಭೀರ Read More »

ಕರಾವಳಿ

ಮಂಗಳೂರು: ಗ್ರಾಪಂ ಚುನಾವಣೆ ಗೆಲುವಿಗೆ ಡಿಸಿಎಂ, ಬಿಜೆಪಿ ರಾಜ್ಯಾಧ್ಯಕ್ಷರಿಂದ ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಬೇಕು ಎಂದು ಪ್ರಾರ್ಥಿಸಿ ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ವಿಶೇಷ ಪೂಜೆ ಸಲ್ಲಿಸಿದರು.ಎರಡು ದಿನಗಳ ಕರಾವಳಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರ ನೇತೃತ್ವದಲ್ಲಿ ಕದ್ರಿ ದೇವಸ್ಥಾನಕ್ಕೆ ಬಂದ ಬಿಜೆಪಿ ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು. ಅಶ್ವತ್ಥ ನಾರಾಯಣ ಕದ್ರಿ ಮಂಜುನಾಥ ಸನ್ನಿಧಿಯಲ್ಲಿ ದೀಪಾರಾಧನೆ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್

ಮಂಗಳೂರು: ಗ್ರಾಪಂ ಚುನಾವಣೆ ಗೆಲುವಿಗೆ ಡಿಸಿಎಂ, ಬಿಜೆಪಿ ರಾಜ್ಯಾಧ್ಯಕ್ಷರಿಂದ ವಿಶೇಷ ಪೂಜೆ Read More »

ಕರಾವಳಿ, ಕರ್ನಾಟಕ

ಸಿಎಂಗೆ ಕಪ್ಪುಬಾವುಟ ಪ್ರದರ್ಶನ ➤ 9 ಮಂದಿ ವಿರುದ್ಧ FIR

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಚಾಮರಾಜನಗರದಿಂದ ಮಳವಳ್ಳಿ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಾಹನಕ್ಕೆ ಕಪ್ಪುಪಟ್ಟಿ ಪ್ರದರ್ಶನ ಮಾಡಿದ ಹಿನ್ನೆಲೆ 9 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪಟ್ಟಣದ ಅನಂತ ರಾಂ ವೃತ್ತದ ಬಳಿ ಸಿಎಂ ವಾಹನ ತೆರಳುತ್ತಿದ್ದ ವೇಳೆ ರಸ್ತೆ ಮಧ್ಯೆ ಏಕಾಏಕಿ ಧಾವಿಸಿ ವಾಹನಕ್ಕೆ ಕಪ್ಪುಪಟ್ಟಿ ಪ್ರದರ್ಶಿಸಲು ಮುಂದಾದ ಜನವಾದಿ ಮಹಿಳಾ ಸಂಘಟನೆ ರಾಜ್ಯ ಘಟಕ ಅಧ್ಯಕ್ಷೆ ದೇವಿ ಅವರನ್ನು ಪೊಲೀಸರು ತಡೆಯಲು ಯತ್ನಿಸಿದರು. ಈ ವೇಳೆ ಪೊಲೀಸರ

ಸಿಎಂಗೆ ಕಪ್ಪುಬಾವುಟ ಪ್ರದರ್ಶನ ➤ 9 ಮಂದಿ ವಿರುದ್ಧ FIR Read More »

ಕರಾವಳಿ

ಸುಳ್ಯ: ಕೆ.ವಿ.ಜಿ ಪಾಲಿಟೆಕ್ನಿಕ್‍ನ NSS ಸೇವಾ ಸಂಗಮ ಟ್ರಸ್ಟ್ ನಿಂದ ಸ್ವಚ್ಚ ಕಾಲೋನಿ ಸ್ಪರ್ಧೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಸುಳ್ಯ ನ. 28: NSS ಸೇವಾ ಸಂಗಮ ಟ್ರಸ್ಟ್ ನಿಂದ ಸುಳ್ಯ ಮತ್ತು ಕಡಬ ತಾಲೂಕು ಮಟ್ಟದ “ಸ್ವಚ್ಚ ಕಾಲೋನಿ” ಸ್ಪರ್ಧೆಗೆ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘವು ಇತ್ತೀಚೆಗೆ ಚಾಲನೆ ನೀಡಲಾಯಿತು. ಪ್ರಸ್ತುತ ಸುಳ್ಯ ಹಾಗೂ ಕಡಬ ತಾಲೂಕಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸ್ವಚ್ಚ ಭಾರತ ಕಲ್ಪನೆಗೆ ಪೂರಕವಾಗಿ ಹಮ್ಮಿಕೊಂಡ ಈ ವಿನೂತನ ಸ್ಪರ್ಧೆಯನ್ನು ಪರಿಶಿಷ್ಟ ವರ್ಗಗಳ ಕಾಲೋನಿಗಳಿಗೆ ಸೀಮಿತಗೊಳಿಸಲಾಗಿದ್ದು, ಈ ಸ್ಪರ್ಧೆಯಲ್ಲಿ ವಿಜೇತ

ಸುಳ್ಯ: ಕೆ.ವಿ.ಜಿ ಪಾಲಿಟೆಕ್ನಿಕ್‍ನ NSS ಸೇವಾ ಸಂಗಮ ಟ್ರಸ್ಟ್ ನಿಂದ ಸ್ವಚ್ಚ ಕಾಲೋನಿ ಸ್ಪರ್ಧೆಗೆ ಚಾಲನೆ Read More »

ಕರಾವಳಿ

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 8 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ ನ. 28: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 8 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.     ಕಡಬ ತಾಲೂಕಿನ ಬಂಟ್ರ ನೆಕ್ಕಿಲಾಡಿಯ 65 ವರ್ಷದ ವ್ಯಕ್ತಿ, ಚಾರ್ವಕದ 44 ವರ್ಷದ ವ್ಯಕ್ತಿ, ಕೌಕ್ರಾಡಿಯ 60 ವರ್ಷದ ಮಹಿಳೆ, 65 ವರ್ಷದ ವ್ಯಕ್ತಿ, ಕೊಣಾಲು ನಿವಾಸಿ 19 ವರ್ಷದ ಯುವತಿಯಲ್ಲಿ ಕೊರೋನಾ ದೃಢಪಟ್ಟಿದೆ. ಇನ್ನು ಪುತ್ತೂರು ತಾಲೂಕಿನ ತಿಂಗಳಾಡಿ ನಿವಾಸಿ 23 ವರ್ಷದ ಯುವಕ, ನೆಟ್ಟಣಿಗೆ ಮುಡ್ನೂರು

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 8 ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ
Scroll to Top