ಕಡಬ ನ್ಯೂಸ್

ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಮರ ಬಿದ್ದ ಪರಿಣಾಮ ಶಿಕ್ಷಕ ದಾರುಣ ಅಂತ್ಯ

(ನ್ಯೂಸ್ ಕಡಬ) newskadaba.com. ವಿಜಯಪುರ, ಮೇ.1. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಲಮಟ್ಟಿ ಮುಖ್ಯ ರಸ್ತೆಯ ಹುಲ್ಲೂರ ಗ್ರಾಮದ ಹಳ್ಳದ ಹತ್ತಿರ ಬೈಕ್ ನಲ್ಲಿ ಸಂಚರಿಸುತ್ತಿದ್ದ ಸವಾರನ ಮೇಲೆ ಮರವೊಂದು ಮುರಿದು ಬಿದ್ದು ಸವಾರ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಕಲಾವಿದರೂ ಆಗಿದ್ದ ಶಿಕ್ಷಕ ಪ್ರಕಾಶ‌ ವೀರಭದ್ರಪ್ಪ ಛಲವಾದಿ (35) ಸಾವನ್ನಪ್ಪಿರುವವರು. ಬಾಗಲಕೋಟೆ ಜಮಖಂಡಿ ತಾಲೂಕು ಚಿಮ್ಮಡ ಗ್ರಾಮದವರಾಗಿದ್ದ ವೀರಭದ್ರಪ್ಪ ಅವರು ನಿಡಗುಂದಿಯಲ್ಲಿ ಮನೆ ಮಾಡಿ‌ ಕುಟುಂಬ ಸಮೇತರಾಗಿ ವಾಸವಿದ್ದರು. ಮುದ್ದೇಬಿಹಾಳ ತಾಲೂಕು ಸಿದ್ದಾಪೂರ ಪಿಟಿ ಗ್ರಾಮದ ಸರ್ಕಾರಿ […]

ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಮರ ಬಿದ್ದ ಪರಿಣಾಮ ಶಿಕ್ಷಕ ದಾರುಣ ಅಂತ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ ಮೀನು ಹಿಡಿಯಲು ಹೋಗಿ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com. ಉಪ್ಪಿನಂಗಡಿ, ಮೇ.1, ಮೀನು ಹಿಡಿಯಲೆಂದು ತೆರಳಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆಂಪಿಮಜಲು ಎಂಬಲ್ಲಿನ ನೇತ್ರಾವತಿ ನದಿಯ ಸನ್ಯಾಸಿ ಕಯ ಎಂಬ ಪ್ರದೇಶದಲ್ಲಿ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರೂಪೇಶ್ (17) ಮೃತರು ಎಂದು ತಿಳಿದು ಬಂದಿದೆ. ಬಜತ್ತೂರು ಗ್ರಾಮದ ಪೆಲತ್ರೋಡಿ ಮನೆ ನಿವಾಸಿ ಓಡಿಯಪ್ಪ ಎಂಬವರ ಪುತ್ರ ರೂಪೇಶ್ ಕಬಡ್ಡಿ ಆಟಗಾರನಾಗಿಯೂ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದ. ಈತ ಈ

ಉಪ್ಪಿನಂಗಡಿ ಮೀನು ಹಿಡಿಯಲು ಹೋಗಿ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ ಅಕ್ರಮ ಗೋ ಸಾಗಟದ ಪಿಕಪ್ ಚೆಕ್ ಪೋಸ್ಟ್ ಗೆ ಢಿಕ್ಕಿ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com. ಕಡಬ, ಮೇ.1.  ಪೊಲೀಸ್‌ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರ ಸೂಚನೆಯನ್ನು ಲೆಕ್ಕಿಸದೆ ಪಿಕಪ್‌ ವಾಹನವೊಂದು ಬ್ಯಾರಿಕೇಡ್‌ಗೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ರಾಮಕುಂಜ ಬಳಿ ಮುಖ್ಯರಸ್ತೆಯಲ್ಲಿರುವ ಆತೂರು ಪೊಲೀಸ್‌ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ. ಪರಾರಿಯಾದ ಪಿಕಪ್ ವಾಹನದಲ್ಲಿ ದನದ ಮಾಂಸ ಸಾಗಿಸಲಾಗುತ್ತಿತ್ತು ಎಂದು ಸ್ಥಳೀಯರು ಆರೋಪವನ್ನು ಮಾಡಿದ್ದಾರೆ. ಪಿಕಪ್ ವಾಹನ ಅತೀ ವೇಗವಾಗಿ ಚೆಕ್‌ಪೋಸ್ಟ್‌ನತ್ತ ನುಗ್ಗಿದ್ದು, ಕರ್ತವ್ಯದಲ್ಲಿದ್ದ ಪೊಲೀಸ್‌ ಸಿಬಂದಿ ಗಾಬರಿಗೊಂಡು ಪಕ್ಕಕ್ಕೆ ಹಾರಿ ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಇನ್ನು, ಪರಾರಿಯಾದ ವಾಹನವನ್ನು

ಕಡಬ ಅಕ್ರಮ ಗೋ ಸಾಗಟದ ಪಿಕಪ್ ಚೆಕ್ ಪೋಸ್ಟ್ ಗೆ ಢಿಕ್ಕಿ ➤ ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ ದಿನಸಿ ಅಂಗಡಿ ಬೆಂಕಿಗಾಹುತಿ… ಸುಟ್ಟು ಕರಕಲಾದ ಅಂಗಡಿ ಸಾಮಗ್ರಿ

(ನ್ಯೂಸ್ ಕಡಬ) newskadaba.com. ಸುಳ್ಯ,  ಮೇ.1. ದಿನಸಿ ಅಂಗಡಿಗೆ ಬೆಂಕಿ ಬಿದ್ದು ಸಾಮಗ್ರಿ ಸುಟ್ಟು ಹೋಗಿರುವ ಘಟನೆ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರಿನಲ್ಲಿ ರವಿವಾರ ಸಂಭವಿಸಿದೆ.  ಅರಂಬೂರಿನ ಕರ್ನಾಟಕ ಫ್ಲೈ ವುಡ್‌ ಫ್ಯಾಕ್ಟರಿಯ ಎದುರಿನಲ್ಲಿರುವ ದಿವಾಕರ ಮಾಸ್ತರ್‌ ಎಂಬವರಿಗೆ ಸೇರಿದ ಅಂಗಡಿಯಲ್ಲಿ ದುರಂತ ಸಂಭವಿಸಿದೆ. ಕಟ್ಟಡದೊಳಗಿನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಫ್ಲೈ ವುಡ್‌ ಫ್ಯಾಕ್ಟರಿ ಕಾರ್ಮಿಕರು ಸ್ಥಳೀಯರಿಗೆ ತಿಳಿಸಿದ್ದಾರೆ. ಅಂಗಡಿ ಕಟ್ಟಡದ ಹಿಂದುಗಡೆಯಲ್ಲೇ ದಿವಾಕರ ಮಾಸ್ತರ್‌ ವಾಸ್ತವ್ಯ ಇದ್ದರು. ಸ್ಥಳೀಯರು ಸೇರಿ ಅಂಗಡಿಯ ಶಟರ್‌ ತೆರೆದು ನೋಡಿದಾಗ

ಸುಳ್ಯ ದಿನಸಿ ಅಂಗಡಿ ಬೆಂಕಿಗಾಹುತಿ… ಸುಟ್ಟು ಕರಕಲಾದ ಅಂಗಡಿ ಸಾಮಗ್ರಿ Read More »

ಕರಾವಳಿ

ಉಪ್ಪಿನಂಗಡಿ: ಏಕಕಾಲಕ್ಕೆ 7 ಅಂಗಡಿಗಳಿಗೆ ನುಗ್ಗಿ ಕಳ್ಳತನ

(ನ್ಯೂಸ್ ಕಡಬ) newskadaba.com. ಉಪ್ಪಿನಂಗಡಿ, ಮೇ.1.  ಇಲ್ಲಿನ ಬ್ಯಾಂಕ್‌ ರಸ್ತೆಯಲ್ಲಿನ 7 ಅಂಗಡಿಗಳಲ್ಲಿ ಕಳ್ಳತನ ನಡೆದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಹಳೆ ಬಸ್‌ ನಿಲ್ದಾಣದ ಬಳಿಯ ಚಿನ್ನ – ಬೆಳ್ಳಿ ಆಭರಣದ ಅಂಗಡಿಯ ಮಾಡಿನ ಹೆಂಚು ತೆಗೆದು ಒಳ ನುಗ್ಗಿದ ಕಳ್ಳ ಚಿನ್ನಾಭರಣದ ತಿಜೋರಿಯ ಬಾಗಿಲು ತೆರೆಯಲು ವಿಫ‌ಲವಾಗಿ, ಚಿಲ್ಲರೆ ಮೊತ್ತವನ್ನು ಎಗರಿಸಿದ್ದಾನೆ. ಸನಿಹದ ಮೆಡಿಕಲ್‌ ಶಾಪಿನ ಹೆಂಚು ತೆಗೆದು ಒಳ ನುಗ್ಗಿದ ಕಳ್ಳ, ಅಂಗಡಿ ಯೊಳಗಿದ್ದ ಮೊಬೈಲ್‌ವೊಂದನ್ನು ಕದ್ದೊಯ್ದಿದ್ದು, ಹಣಕ್ಕಾಗಿ ಹುಡುಕಾಟ ನಡೆಸಿದ್ದಾನೆ. ಅದೇ ಕಟ್ಟಡದ

ಉಪ್ಪಿನಂಗಡಿ: ಏಕಕಾಲಕ್ಕೆ 7 ಅಂಗಡಿಗಳಿಗೆ ನುಗ್ಗಿ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು – ಮುಂಬಯಿ ಮಧ್ಯೆ ಮತ್ಸ್ಯ ಗಂಧ ರೈಲು ಸಂಚಾರಕ್ಕೆ 25ವರ್ಷದ ಸಂಭ್ರಮ

(ನ್ಯೂಸ್ ಕಡಬ) newskadaba.com. ಉಡುಪಿ, ಮೇ.1.  ಮಂಗಳೂರು ಹಾಗೂ ಮುಂಬಯಿ ಮಧ್ಯೆ ಓಡಾಡುವ ಮತ್ಸ್ಯ ಗಂಧ ಎಕ್ಸ್‌ಪ್ರೆಸ್‌ ರೈಲು 1998ರ ಮೇ 1ರಂದು ತನ್ನ ಮೊದಲ ದಿನದ ಓಡಾಟವನ್ನು ಆರಂಭಿಸಿತು. 2023ರ ಮೇ 1ಕ್ಕೆ ಈ ಮಾರ್ಗದಲ್ಲಿ ಮತ್ಸ್ಯ ಗಂಧ ಎಕ್ಸ್‌ಪ್ರೆಸ್‌ ಸಂಚಾರವನ್ನು ಆರಂಭಿಸಿ 25 ವರ್ಷ ಪೂರ್ಣಗೊಳ್ಳಲಿದೆ. ಉಡುಪಿ ರೈಲು ಯಾತ್ರಿ ಸಂಘವು ಈ ಅವಿಸ್ಮರಣೀಯ ರೈಲು ಓಡಾಟವನ್ನು ವಿಶೇಷ ರೀತಿಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಮೇ 1ರ ಮಧ್ಯಾಹ್ನ 3.48ಕ್ಕೆ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ರೈಲು ಉಡುಪಿ

ಮಂಗಳೂರು – ಮುಂಬಯಿ ಮಧ್ಯೆ ಮತ್ಸ್ಯ ಗಂಧ ರೈಲು ಸಂಚಾರಕ್ಕೆ 25ವರ್ಷದ ಸಂಭ್ರಮ Read More »

ಕರ್ನಾಟಕ

ಬಸ್‌ ಚಲಾಯಿಸುತ್ತಿರುವಾಗ ಪ್ರಜ್ಞೆ ತಪ್ಪಿದ ಚಾಲಕ – ಪ್ರಯಾಣಿಕರ ಜೀವ ಉಳಿಸಿದ ವಿದ್ಯಾರ್ಥಿ!

(ನ್ಯೂಸ್ ಕಡಬ) newskadaba.com. ವಾಷಿಂಗ್ಟನ್ ಮೇ.1.  ಅಮೆರಿಕಾದ ಮಿಚಿಗನ್‌ ನಲ್ಲಿ ಬಸ್‌ ಚಲಿಸುತ್ತಿರುವ ಸಂದರ್ಭದಲ್ಲಿ ಏಕಾಏಕಿ ಚಾಲಕ ಪ್ರಜ್ಞಾಹೀನನಾಗಿದ್ದು, ಈ ಸಂದರ್ಭದಲ್ಲಿ 7ನೇ ತರಗತಿ ವಿದ್ಯಾರ್ಥಿಯೊಬ್ಬ ತಕ್ಷಣವೇ ಬಸ್‌ ಅನ್ನು ನಿಲ್ಲಿಸಿದ ಪರಿಣಾಮ ತನ್ನ ಸಹಪಾಠಿಗಳ ಪ್ರಾಣ ಉಳಿದಿದೆ. ವಾರೆನ್‌ ಕನ್ಸಾಲಿಡೇಟೆಡ್‌ ಶಾಲೆ ಬಿಡುಗಡೆ ಮಾಡಿದ ವಿಡಿಯೋದಲ್ಲಿ ಬಸ್‌ ಚಲಾಯಿಸುತ್ತಿದ್ದ ಚಾಲಕ ಅಸ್ವಸ್ಥಗೊಂಡಿದ್ದು, ಆ ಸಂದರ್ಭದಲ್ಲಿ ವಿದ್ಯಾರ್ಥಿ ದಿಲ್ಲೊನ್‌ ರೀವ್ಸ್‌ ಚಾಲಕನ ಬಳಿ ಬಂದಿರುವ ದೃಶ್ಯ ಸೆರೆಯಾಗಿದೆ. ಬಸ್‌ ನಲ್ಲಿ ಸುಮಾರು 66 ಪ್ರಯಾಣಿಕರಿದ್ದು ಎಲ್ಲರೂ ಸುರಕ್ಷಿತರಾಗಿದ್ದಾರೆ

ಬಸ್‌ ಚಲಾಯಿಸುತ್ತಿರುವಾಗ ಪ್ರಜ್ಞೆ ತಪ್ಪಿದ ಚಾಲಕ – ಪ್ರಯಾಣಿಕರ ಜೀವ ಉಳಿಸಿದ ವಿದ್ಯಾರ್ಥಿ! Read More »

ಅಂತರ್ರಾಷ್ಟ್ರೀಯ ನ್ಯೂಸ್

ಇನ್ಸ್ಟಾಗ್ರಾಮ್‌ ಲೈವ್‌ ಬಂದು ಆತ್ಮಹತ್ಯೆಗೆ ಶರಣಾದ ಜನಪ್ರಿಯ ಕೊರಿಯೊಗ್ರಾಫ‌ರ್‌

(ನ್ಯೂಸ್ ಕಡಬ) newskadaba.com. ಹೈದರಾಬಾದ್, ಮೇ.1. ತೆಲುಗಿನ ಜನಪ್ರಿಯ ನೃತ್ಯ ನಿರ್ದೇಶಕ (ಕೊರಿಯೊಗ್ರಾಫ‌ರ್‌) ಚೈತನ್ಯ ಅವರು ಇನ್ಸ್ಟಾಗ್ರಾಮ್‌ ಲೈವ್‌ ಬಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ತೆಲುಗು ನೃತ್ಯ ಕಾರ್ಯಕ್ರಮ ʼಧೀʼ ಯಲ್ಲಿ ಕೊರಿಯೊಗ್ರಾಫ‌ರ್ ಆಗಿ ಫೇಮ್‌ – ನೇಮ್‌ ಪಡೆದುಕೊಂಡಿದ್ದ ಚೈತನ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್‌ ಲೈವ್‌ ನಲ್ಲಿ ತಮ್ಮ ಕಷ್ಟದ ಬಗ್ಗೆ ಮಾತನಾಡಿದ್ದು, ನನ್ನ ಅಪ್ಪ, ಅಮ್ಮ, ಸಹೋದರಿ ನನಗೆ ಯಾವುದೇ ಕಷ್ಟಬಾರದಾಗೆ ನೋಡಿಕೊಂಡಿದ್ದಾರೆ. ನಾನು ನನ್ನೆಲ್ಲ ಸ್ನೇಹಿತರಲ್ಲಿ ಕ್ಷಮೆ

ಇನ್ಸ್ಟಾಗ್ರಾಮ್‌ ಲೈವ್‌ ಬಂದು ಆತ್ಮಹತ್ಯೆಗೆ ಶರಣಾದ ಜನಪ್ರಿಯ ಕೊರಿಯೊಗ್ರಾಫ‌ರ್‌ Read More »

ಕ್ರೈಮ್ ನ್ಯೂಸ್

ದೇಶದ ಭದ್ರತೆಗೆ ಧಕ್ಕೆ ತರುವ 14 ಮೊಬೈಲ್ ಆ್ಯಪ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com. ನವದೆಹಲಿ, ಮೇ.1. ಕೇಂದ್ರ ಸರ್ಕಾರ 14 ಮೊಬೈಲ್ ಮೆಸೇಂಜರ್ ಅಪ್ಲಿಕೇಶನ್‌ಗಳನ್ನು ಬ್ಯಾನ್ ಮಾಡಿ ಆದೇಶ ಹೊರಡಿಸಿದೆ. ಭಯೋತ್ಪಾದಕ ಚಟುವಟಿಕೆಗಳ ಮೇಲೆ ದೊಡ್ಡ ಪ್ರಚಾರವಾಗಿ ಶಿಸ್ತುಕ್ರಮದ ರೂಪದಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದ್ದು ಭಯೋತ್ಪಾದಕರು ಹೆಚ್ಚಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಬೆಂಬಲಿಗರು ಮತ್ತು ಓವರ್ ಗ್ರೌಂಡ್ ವರ್ಕರ್ಸ್ ಜೊತೆ ಸಂವಹನ ನಡೆಸಲು ಮತ್ತು ಪಾಕಿಸ್ತಾನದಿಂದ ಸೂಚನೆಗಳನ್ನು ಸ್ವೀಕರಿಸಲು ಬಳಸುತ್ತಿದ್ದ 14 ಮೊಬೈಲ್ ಸಂದೇಶ ಅಪ್ಲಿಕೇಶನ್‌ಗಳನ್ನು ಕೇಂದ್ರವು ನಿಷೇಧಿಸಿದೆ. ರಕ್ಷಣಾ ಮತ್ತು ಜಾಗೃತ

ದೇಶದ ಭದ್ರತೆಗೆ ಧಕ್ಕೆ ತರುವ 14 ಮೊಬೈಲ್ ಆ್ಯಪ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

ಹಳ್ಳ ದಾಟುತ್ತಿದ್ದ ಒಂದೇ ಕುಟುಂಬದ ಮೂವರು ನೀರುಪಾಲು

ನ್ಯೂಸ್ ಕಡಬ) newskadaba.com. ಬೀದರ್, ಮೇ.1. ಹಳ್ಳ ದಾಟುತ್ತಿದ್ದಾಗ ಒಂದೇ ಕುಟುಂಬದ ಮೂವರು ನೀರಿನಲ್ಲಿ ಕೊಚ್ಚಿ ಹೋದ ಘಟನೆ ಔರಾದ್‌ನಲ್ಲಿ​ ನಡೆದಿದೆ. ಜಿಲ್ಲೆಯಲ್ಲಿ ಅಕಾಲಿಕ ಮಳೆ ಮುಂದುವರೆದಿದೆ. ಸುರಿದ ಭಾರಿ ಮಳೆಗೆ ಹಳ್ಳಗಳು ನದಿಯಂತಾಗಿವೆ. ಒಂದೇ ಕುಟುಂಬದ ಮೂವರು ಹಳ್ಳ ದಾಟುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಕ್ಕು ಕೊಚ್ಚಿ ಹೋದ ಘಟನೆ ಔರಾದ್ ತಾಲೂಕಿನ ಹೆಡಗಾಪೂರ್ ಗ್ರಾಮದಲ್ಲಿ ಸಂಜೆ ನಡೆದಿದೆ.  ಸುನಂಧಾ ಸಂಗಪ್ಪ ಲದ್ದೆ, ಮಗ ಸುಮಿತ್​ ಹಾಗೂ ಮಗಳು ಐಶ್ವರ್ಯ ನಾಪತ್ತೆಯಾಗಿದ್ದಾರೆ. ಸಂಗಪ್ಪ ಲದ್ದೆ ಜೊತೆ ಜಮೀನಿಗೆ

ಹಳ್ಳ ದಾಟುತ್ತಿದ್ದ ಒಂದೇ ಕುಟುಂಬದ ಮೂವರು ನೀರುಪಾಲು Read More »

ಕರ್ನಾಟಕ
Scroll to Top