ಕಡಬ ನ್ಯೂಸ್

ಸಿಎಂ ಮಾಧ್ಯಮ ಸಲೆಹಗಾರ ‘ಮಹದೇವ್ ಪ್ರಕಾಶ್ ‘ ರಾಜೀನಾಮೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 19: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದ ನಂತ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾಗಿ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ನೇಮಕಗೊಂಡಿದ್ದರು. ಇಂತಹ ಸಿಎಂ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್ ಅವರು, ತಮ್ಮ ಸಿಎಂ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.     ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ತಮ್ಮ ರಾಜೀನಾಮೆ ಪತ್ರದಲ್ಲಿ ಕಳೆದ ಒಂದು ವರ್ಷದಿಂದ ಮಾಧ್ಯಮ […]

ಸಿಎಂ ಮಾಧ್ಯಮ ಸಲೆಹಗಾರ ‘ಮಹದೇವ್ ಪ್ರಕಾಶ್ ‘ ರಾಜೀನಾಮೆ Read More »

ಕರ್ನಾಟಕ

ಅಪೌಷ್ಠಿಕತೆಯಿಂದ ಬಳಲುತ್ತಿರುವ 10 ಸಾವಿರ ಮಕ್ಕಳಿಗೆ ಕೊಹ್ಲಿ ನೆರವು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ ನ. 19: ಅಪೌಷ್ಟಿಕತೆಯಿಂದ ಬಳಲುವ ದೇಶದ ಸುಮಾರು 10 ಸಾವಿರದಷ್ಟು ಮಕ್ಕಳಿಗೆ ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಬೆಂಬಲವಾಗಿ ನಿಂತಿದ್ದಾರೆ.ಈ ಹಿಂದೆ ಪ್ರವಾಹಕ್ಕೀಡಾದವರಿಗೆ, ಕೋವಿಡ್​ ಸಂತ್ರಸ್ತರಿಗೆ ಆರ್ಥಿಕ ನೆರವು ನೀಡಿದ್ದ ಕಿಂಗ್​ ಕೊಹ್ಲಿ ಇದೀಗ ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಿಕೊಡುವ ಯೋಜನೆಗೆ ಮುಂದಾಗಿದ್ದಾರೆ. ಅಪೌಷ್ಟಿಕತೆಯಿಂದ ಬಳಲುತ್ತಿರುವ 10 ಸಾವಿರ ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ನಿರ್ಧರಿಸಿದ್ದಾರೆ. ಸ್ಯಾನಿಟೇಷನ್(ವೈಜ್​)​ ಉತ್ಪನ್ನಗಳ ರಾಯಭಾರಿಯಾಗಿರುವ ವಿರಾಟ್ ಆ ಸಂಸ್ಥೆಯಿಂದ ಬರುವ ಲಾಭವನ್ನು ಬಡ

ಅಪೌಷ್ಠಿಕತೆಯಿಂದ ಬಳಲುತ್ತಿರುವ 10 ಸಾವಿರ ಮಕ್ಕಳಿಗೆ ಕೊಹ್ಲಿ ನೆರವು Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 19. ಇಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಯವರ ಜನ್ಮ ದಿನಾಚರಣೆಯನ್ನು ನಗರದ ಮಲ್ಲಿಕಟ್ಟೆಯಲ್ಲಿರುವ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನಡೆಯಿತು.     ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಇಂದಿರಾ ಗಾಂಧಿ ಕೊಡುಗೆಗಳನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಜೆ.ಆರ್.ಲೋಬೊ, ಪಕ್ಷದ ಮುಖಂಡರಾದ ಸದಾಶಿವ ಉಳ್ಳಾಲ, ಶಶಿಧರ ಹೆಗ್ಡೆ, ಸುಧೀರ್, ವಿಶ್ವಾಸ್ ದಾಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.    

ಮಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನಾಚರಣೆ Read More »

ಕರಾವಳಿ

ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ➤ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ K S R T C

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 19. ಕೊರೋನಾ ಕಾರಣದಿಂದ ರಾಜ್ಯದಲ್ಲಿ ಬಂದ್ ಆಗಿದ್ದ ಕಾಲೇಜ್ ಗಳು ನವೆಂಬರ್ 17 ರಿಂದ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಲಾಗಿದೆ.     ಈ ಮೂಲಕ ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ತಾಂತ್ರಿಕ, ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಕೆಎಸ್‌ಆರ್‌ಟಿಸಿಯು 2019-20ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಿರುವ ಬಸ್‍ಪಾಸ್‍ನ್ನು ಡಿಸೆಂಬರ್ 10ರವರೆಗೂ ವಿಸ್ತರಿಸಲಾಗಿದೆ. ಈಗಾಗಲೇ ಕಾಲೇಜುಗಳು ಪ್ರಾರಂಭವಾಗಿರುವುದರಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕಾಲೇಜುಗಳಿಗೆ ದಾಖಲಾಗಿರುವ ಶುಲ್ಕ

ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ➤ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ K S R T C Read More »

ಕರ್ನಾಟಕ

ಮುಲ್ಕಿ: ಸ್ಪೋರ್ಟ್ಸ್ ಕ್ಲಬ್ ನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್-19 ಉಚಿತ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com ತೋಕೂರು ನ. 19: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ,ನೆಹರು ಯುವ ಕೇಂದ್ರ ಮಂಗಳೂರು,ಯುವ ಸಬಲೀಕರಣ ಮತ್ತು ದ.ಕ. ಜಿಲ್ಲಾ ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಡುಪಣಂಬೂರು ಗ್ರಾಪಂ, ದ.ಕ. ಜಿಲ್ಲಾ ಯುವಜನ ಒಕ್ಕೂಟ ಮಾರ್ಗದರ್ಶನದಲ್ಲಿ ಪ್ರಾ.ಆ. ಕೇಂದ್ರ ಅತ್ತೂರು, ಕೆಮ್ರಾಲ್ ಸಂಯೋಜನೆಯಲ್ಲಿ ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಹಳೆಯಂಗಡಿ ತೋಕೂರು ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ತೋಕೂರು ಸಹಕಾರದಲ್ಲಿ

ಮುಲ್ಕಿ: ಸ್ಪೋರ್ಟ್ಸ್ ಕ್ಲಬ್ ನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್-19 ಉಚಿತ ಪರೀಕ್ಷಾ ಶಿಬಿರ Read More »

ಕರಾವಳಿ

ಈಶ್ವರಮಂಗಲ: ತೋಟದ ಕಣಿವೆಗೆ ಬಿದ್ದ ಕಾಡುಕೋಣ

(ನ್ಯೂಸ್ ಕಡಬ) newskadaba.com ಈಶ್ವರಮಂಗಲ, ನ. 19. ಈಶ್ವರಮಂಗಲ ಅಲೆಪ್ಪಾಡಿಯೋರ್ವರ ಮನೆಯ ತೋಟಕ್ಕೆ ಬಂದ ಕಾಡುಕೋಣ ಅವರ ತೋಟದ ಕಣಿವೆಗೆ ಬಿದ್ದ ಘಟನೆ ಇಂದು ನಡೆದಿದೆ.     ತೋಟದ ಮಾಲಕ ರಮೇಶ್ ಆಳ್ವರು ಘಟನೆಯ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ಅರಣ್ಯ ಇಲಾಖೆಯವರು ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿ ಕಾಡು ಕೋಣವನ್ನು ರಕ್ಷಿಸಿದ್ದಾರೆ.    

ಈಶ್ವರಮಂಗಲ: ತೋಟದ ಕಣಿವೆಗೆ ಬಿದ್ದ ಕಾಡುಕೋಣ Read More »

ಕರಾವಳಿ

ಕುಂದಾಪುರ: ಬೇಟೆಯಾಡಲು ಕಾಡಿಗೆ ಅಕ್ರಮ ಪ್ರವೇಶ ಮಾಡಿದ ವಾಹನ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಕುಂದಾಪುರ, ನ. 19. ಕಳೆದ ದಿನ ರಾತ್ರಿ ಕುಂದಾಪುರ ತಾಲೂಕು ಹರ್ಕೂರು ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆಯಾಡುವ ಉದ್ಧೇಶದಿಂದ ಕಾಡಿಗೆ ಅಕ್ರಮ ಪ್ರವೇಶ ಮಾಡಿದ ವಾಹನವನ್ನು ಅರಣ್ಯ ಇಲಾಖಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.     ತಕ್ಷಣವೇ ಅರಣ್ಯ ಇಲಾಖಾ ಸಿಬ್ಬಂದಿಗಳು ದಾಳಿ ಮಾಡಿದ್ದು, ಅವರನ್ನು ಕಂಡು ಬೇಟೆಗಾರರು ಪರಾರಿಯಾದ ಘಟನೆ ನಡೆದಿದೆ. ಸುಮಾರು ಹದಿನೈದು ಕಿ.ಮೀ ಬೊಲೇರೊ ವಾಹನವನ್ನು ಬೆನ್ನಟ್ಟಿದ್ದ ಅಧಿಕಾರಿಗಳು ಬೊಲೇರೊ ವಾಹನ, ಕಬ್ಬಿಣದ ರಾಡ್, ಟರ್ಪಾಲ್ ಮತ್ತು ಒಂದು

ಕುಂದಾಪುರ: ಬೇಟೆಯಾಡಲು ಕಾಡಿಗೆ ಅಕ್ರಮ ಪ್ರವೇಶ ಮಾಡಿದ ವಾಹನ ಪೊಲೀಸರ ವಶಕ್ಕೆ Read More »

ಕರಾವಳಿ

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ➤ 10. ಕೋಟಿ ದಂಡ ಕಟ್ಟಿದ ಶಶಿಕಲಾ

(ನ್ಯೂಸ್ ಕಡಬ) newskadaba.com ತಮಿಳುನಾಡು ನ. 19: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಹಾಯಕಿ ವಿ.ಕೆ ಶಶಿಕಲಾ 10 ಕೋಟಿ ರೂ ದಂಡ ಪಾವತಿಸಿದ್ದಾರೆ. ಆರ್ಥಿಕ ವಂಚನೆಯ ಆರೋಪದ ಮೇಲೆ ಜೈಲಿನಲ್ಲಿರುವ ಶಶಿಕಲಾ ಅವರು ಶೀಘ್ರದಲ್ಲೇ ಜಾಮೀನಿನ ಮೇಲೆ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ವಕೀಲ ಎನ್. ರಾಜಾ ಸೆಂತೂರ್ ಪಾಂಡ್ಯ ಹೇಳಿದ್ದಾರೆ. ಆದರೆ, ಎಐಎಡಿಎಂಕೆ ಶಶಿಕಲಾ ಬಗ್ಗೆ ತನ್ನ ನಿಲುವನ್ನು ಬದಲಾಯಿಸಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಇ ಪಳನಿಸ್ವಾಮಿ ಹೇಳಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ➤ 10. ಕೋಟಿ ದಂಡ ಕಟ್ಟಿದ ಶಶಿಕಲಾ Read More »

ರಾಷ್ಟ್ರೀಯ ನ್ಯೂಸ್

ಉಡುಪಿ :ಯಾವುದೇ ದಾಖಲೆಗಳಿಲ್ಲದೆ ಬ್ಯಾಂಕ್ ಖಾತೆಯಿಂದ ಹಣ ಎಗರಿಸಿದ ಅಪರಿಚಿತರು.!?

(ನ್ಯೂಸ್ ಕಡಬ) newskadaba.com ಉಡುಪಿ ನ. 19: ಎಟಿಎಂ ಕಾರ್ಡ್ ಇಲ್ಲದೇ, ಯಾವುದೇ ಬ್ಯಾಂಕ್ ದಾಖಲೆ ಕೂಡ ಇಲ್ಲದೇ ವ್ಯಕ್ತಿಯೊಬ್ಬರ ಖಾತೆಯಿಂದ ಅಪರಿಚಿತ ವ್ಯಕ್ತಿಗಳು ಹಣ ವಿತ್ ಡ್ರಾ ಮಾಡಿರುವ ಆತಂಕಕಾರಿ ಘಟನೆ ನಡೆದಿದೆ.     ಉಡುಪಿ ಮೂಲದ ಮೂಡುಬೆಟ್ಟು ನಿವಾಸಿ ಸದಾನಂದ ಭಂಡಾರಿ(62) ಅವರ ಕೆನರಾ ಬ್ಯಾಂಕ್ ಖಾತೆಯಿಂದ ಬೆಂಗಳೂರಿನ ಅಲಂಕಾರ್ ಫ್ಲಾಜಾ ಎಂಬಲ್ಲಿ ಹಣ ವಿತ್ ಡ್ರಾ ಮಾಡಲಾಗಿದೆ ಎಂದು ತಿಳಿದು ಬಂದಿದೆ.ರೂ.10 ಸಾವಿರದಂತೆ ಒಟ್ಟು 40 ಸಾವಿರ ರೂಪಾಯಿಗಳನ್ನು ವಿತ್ ಡ್ರಾ ಮಾಡಲಾಗಿದೆ.

ಉಡುಪಿ :ಯಾವುದೇ ದಾಖಲೆಗಳಿಲ್ಲದೆ ಬ್ಯಾಂಕ್ ಖಾತೆಯಿಂದ ಹಣ ಎಗರಿಸಿದ ಅಪರಿಚಿತರು.!? Read More »

ಕರಾವಳಿ

ತಲೆ, ಕೈಕಾಲು ಕತ್ತರಿಸಿ ಯುವತಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಮಂಡ್ಯ ನ. 19: ಯುವತಿಯ ತಲೆ, ಕೈಕಾಳು ಕತ್ತರಿಸಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದ್ದು, ಹತ್ಯೆಯ ಬಳಿಕ ಹೇಮಾವತಿ ನದಿಗೆ ಯುವತಿಯ ದೇಹದ ಭಾಗಗಳನ್ನು ಎಸೆಯಲಾಗಿದೆ.    ಈ ಕೃತ್ಯ ಎರಡು ದಿನಗಳ ಹಿಂದೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಯುವತಿಯ ದೇಹದ ಅಂಗಗಳು ನೀರಿನಲ್ಲಿ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಾಲೆಯಲ್ಲಿ ಯುವತಿಯ ದೇಹದ ಜೊತೆಗೆ ಕೈಕಾಲುಗಳೂ ಪತ್ತೆಯಾಗಿದ್ದು, ಕೈಯಲ್ಲಿ ಮೀನಿನ ಚಿತ್ರವಿರುವ ಹಚ್ಚೆ ಗುರುತು ಇದೆ.ಮಂಡ್ಯ ಜಿಲ್ಲೆ ಕೆಆರ್ ಪೇಟೆ

ತಲೆ, ಕೈಕಾಲು ಕತ್ತರಿಸಿ ಯುವತಿಯ ಬರ್ಬರ ಹತ್ಯೆ Read More »

ಕರಾವಳಿ
Scroll to Top