ಕಡಬ ನ್ಯೂಸ್

51,168 ಮಂದಿ ವಿಶೇಷ ಚೇತನರು, ವೃದ್ಧರಿಂದ ಮನೆಯಿಂದಲೇ ಮತದಾನ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಮೇ.1 ರಾಜ್ಯದಲ್ಲಿ 80 ವರ್ಷ ಮೇಲ್ಪಟ್ಟ ವೃದ್ಧರು ಹಾಗೂ ದಿವ್ಯಾಂಗರಿಗೆ ಕಲ್ಪಿಸಲಾಗಿರುವ ಮನೆಯಿಂದಲೇ ಮತದಾನ ಮಾಡುವ ಸೌಲಭ್ಯ ಎರಡನೇ ದಿನವಾದ ಭಾನುವಾರವು ಮತದಾನ ಮುಂದುವರಿದಿದ್ದು,  ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ವಿಶೇಷ ಮತದಾನದ ಅವಕಾಶವನ್ನು ಕಲ್ಪಿಸಿದೆ. ಬ್ಯಾಲೆಟ್ ಪೇಪರ್ ಮೂಲಕ ಮಾಡುವ ಮತದಾನದ ಪ್ರಕ್ರಿಯೆ ಏಪ್ರಿಲ್ 29 ರಿಂದ ಪ್ರಾರಂಭವಾಗಿದ್ದು, ಮೇ 6 ರಂದು ಕೊನೆಗೊಳ್ಳಲಿದೆ. ಭಾನುವಾರ ರಾಜ್ಯಾದ್ಯಂತ ಒಟ್ಟು 20,049 ದಿವ್ಯಾಂಗರು ಹಾಗೂ 80 ವರ್ಷ ಮೇಲ್ಪಟ್ಟ […]

51,168 ಮಂದಿ ವಿಶೇಷ ಚೇತನರು, ವೃದ್ಧರಿಂದ ಮನೆಯಿಂದಲೇ ಮತದಾನ Read More »

ಕರ್ನಾಟಕ

ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.29. ಕಾಲೇಜಿನಲ್ಲಿಯೇ ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದು, ಕಾಲೇಜು ಪೆಸ್ಟ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಭಾಸ್ಕರ್​ಗೆ ಇನ್ನೊಂದು ಗುಂಪು ಚಾಕುವಿನಿಂದ ಇರಿದಿದ್ದು, ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೊಲೆ

ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೀದರ್ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ) newskadaba.com. ವಿಜಯಪುರ, ಏ.29. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು ಇಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ರಾಜ್ಯ ಪ್ರವಾಸದ ವೇಳಾಪಟ್ಟಿ ಪ್ರಕಾರ ವಿಜಯಪುರಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿಯವರಿಗೆ ವಿಶೇಷ ಉಡುಗೊರೆ ನೀಡಲು ಜಿಲ್ಲಾ ಬಿಜೆಪಿ ಮುಖಂಡರು ಸಿದ್ದತೆ ಮಾಡಿಕೊಂಡಿದ್ದಾರೆ. ಪ್ರಧಾನಿ ಮೋದಿಯವರಿಗೆ ಜ್ಞಾನಯೋಗಾಶ್ರಮದ ಲಿಂಗೈಕ್ಯ ಸಿದ್ದೇಶ್ವರ ಶ್ರೀಗಳ ಭಾವಚಿತ್ರ, ಮತ್ತು ಅವರು ಬರೆದಿದ್ದ “ಅಂತಿಮ ಅಭಿವಂದನ ಪತ್ರ” ವಿಲ್​ ಪ್ರತಿಯನ್ನು ನೀಡಲಿದ್ದಾರೆ.   ಈ ಹಿಂದೆ ಮೈಸೂರಿನ ಸುತ್ತೂರು

ಬೀದರ್ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ Read More »

ರಾಷ್ಟ್ರೀಯ ನ್ಯೂಸ್

ನೇಪಾಳದಲ್ಲಿ ನಡುಗಿದ ಭೂಮಿ ➤ 2 ಗಂಟೆಗಳ ಅಂತರದಲ್ಲಿ ಎರಡು ಬಾರಿ ಭೂಕಂಪ

(ನ್ಯೂಸ್ ಕಡಬ) newskadaba.com ನೇಪಾಳ. ಏ.28. ಶುಕ್ರವಾರ ಬೆಳಗಿನ ಜಾವ ಎರಡು ಗಂಟೆಯೊಳಗೆ ನೇಪಾಳದ ಬಾಜುರಾದ ದಹಕೋಟ್‌ ನಲ್ಲಿ ಎರಡು ಭೂಕಂಪಗಳು ಸಂಭವಿಸಿವೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಮೊದಲ ಭೂಕಂಪವು ರಿಕ್ಟರ್ ಮಾಪಕದಲ್ಲಿ 4.8 ರಷ್ಟಿತ್ತು, ರಾತ್ರಿ 11:58 ಕ್ಕೆ (ಸ್ಥಳೀಯ ಕಾಲಮಾನ) ಸಂಭವಿಸಿದೆ, ನಂತರ ಶುಕ್ರವಾರ ಮುಂಜಾನೆ 1:30 ಕ್ಕೆ 5.9 ರ ತೀವ್ರತೆಯೊಂದಿಗೆ ಮತ್ತೊಂದು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಇನ್ನು ನೇಪಾಳದ ಸುರ್ಖೇತ್ ಜಿಲ್ಲೆಯ ಭೂಕಂಪನ ಕೇಂದ್ರದ

ನೇಪಾಳದಲ್ಲಿ ನಡುಗಿದ ಭೂಮಿ ➤ 2 ಗಂಟೆಗಳ ಅಂತರದಲ್ಲಿ ಎರಡು ಬಾರಿ ಭೂಕಂಪ Read More »

ಅಂತರ್ರಾಷ್ಟ್ರೀಯ ನ್ಯೂಸ್

ಬೇಸಿಗೆಯಲ್ಲಿ ಮಾಡುವ ಮಾವಿನ ಹಣ್ಣಿನ ರೆಸಿಪಿಗಳಿವು!

(ನ್ಯೂಸ್ ಕಡಬ) newskadaba.com.ಬೆಂಗಳೂರು, ಏ.28. ಬೇಸಿಗೆ ಕಾಲ ಬಂತಂದ್ರೆ ಮಾವಿನ ಸೀಸನ್ ಶುರುವಾಯ್ತು ಎಂದೇ ಅರ್ಥ. ಭಾರತದ ರಾಷ್ಟ್ರೀಯ ಹಣ್ಣು ಮಾವು. ಇದನ್ನು ಹಣ್ಣುಗಳ ರಾಜ ಎಂದೇ ಕರೆಯಲಾಗುತ್ತದೆ. ಅದರಲ್ಲಿಯೂ ಮಾವಿನ ಹಣ್ಣಿನ ರುಚಿಗೆ ಮನಸೋತವರೇ ಇಲ್ಲ. ಮಾವಿನ ಹಣ್ಣನ್ನು ನೆನೆಪಿಸಿಕೊಂಡರೆ ಸಾಕು ಎಂತವರಿಗೆ ಆದರೂ ಬಾಯಲ್ಲಿ ನೀರು ಬರುತ್ತದೆ. ಭಾರತದಲ್ಲಿ ಮ್ಯಾಂಗೋ ಮಿಲ್ಕ್ ಶೇಕ್, ಮ್ಯಾಂಗೋ ಲಸ್ಸಿ ಹೀಗೆ ಅನೇಕ ಜನಪ್ರಿಯ ಖಾದ್ಯಗಳಿದೆ. ಬೇಸಿಗೆ ಕಾಲದಲ್ಲಿ ಮಾವಿನ ಹಣ್ಣಿನ ವಿಧವಿಧವಾದ ಭಕ್ಷ್ಯಗಳನ್ನು ಸವಿದು ಜನ ಆನಂದಿಸುತ್ತಾರೆ.

ಬೇಸಿಗೆಯಲ್ಲಿ ಮಾಡುವ ಮಾವಿನ ಹಣ್ಣಿನ ರೆಸಿಪಿಗಳಿವು! Read More »

ಆರೋಗ್ಯ ಮಾಹಿತಿ, ಕರ್ನಾಟಕ

ತಮಿಳು ರಾಜ್ಯ ಗೀತೆಗೆ ಅಗೌರವ ➤ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಕ್ಷಮೆಯಾಚನೆಗೆ ಡಿಎಂಕೆ ಸಂಸದೆ ಕನಿಮೋಳಿ ಆಗ್ರಹ

(ನ್ಯೂಸ್ ಕಡಬ) newskadaba.com. ಚೆನ್ನೈ, ಏ.28. ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯ ಚುನಾವಣಾ ಪ್ರಚಾರದ ವೇಳೆ ರಾಜ್ಯ ಗೀತೆ ‘ತಮಿಳು ಥಾಯ್ ವಜ್ತು’ಗೆ ‘ಅಗೌರವ’ ತೋರಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ತಮಿಳುನಾಡು ಮುಖ್ಯಸ್ಥ ಕೆ ಅಣ್ಣಾಮಲೈ ಕ್ಷಮೆಯಾಚಿಸಬೇಕು ಎಂದು ಡಿಎಂಕೆ ಸಂಸದೆ ಕನಿಮೋಳಿ ಒತ್ತಾಯಿಸಿದ್ದಾರೆ. ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ಕನಿಮೋಳಿ, ‘ತಮ್ಮದೇ ಪಕ್ಷದ ಸದಸ್ಯರು ‘ತಮಿಳು ಥಾಯ್ ವಜ್ತು’ ಅನ್ನು ಕೀಳಾಗಿ ಕಾಣುವುದನ್ನು ತಡೆಯಲು ಸಾಧ್ಯವಾಗದ ವ್ಯಕ್ತಿ ತಮಿಳುನಾಡಿನ ಜನರ ಬಗ್ಗೆ ಹೇಗೆ ಕಾಳಜಿ ವಹಿಸುತ್ತಾರೆ?’ ಎಂದಿದ್ದಾರೆ. ಇದಕ್ಕೆ

ತಮಿಳು ರಾಜ್ಯ ಗೀತೆಗೆ ಅಗೌರವ ➤ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಕ್ಷಮೆಯಾಚನೆಗೆ ಡಿಎಂಕೆ ಸಂಸದೆ ಕನಿಮೋಳಿ ಆಗ್ರಹ Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ➤ ಬೈಕ್ ಗೆ ಡಿಕ್ಕಿ ಹೊಡೆದು ಲಾರಿ ಚಾಲಕ ಎಸ್ಕೇಪ್

(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.28. ಮಡಿವಾಳ ಸಮೀಪದ ಮೈಕೋಬಂಡೆ ಬಳಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ. ವೇಗವಾಗಿ ಬಂದ ಕಂಟೇನರ್ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆಗಿದ್ದಾರೆ. ಡಿಕ್ಕಿಯ ರಭಸಕ್ಕೆ ಗಾಯಗೊಂಡ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಇನ್ನು ಮೃತನ ಹೆಸರು ಹಾಗೂ ವಿಳಾಸ ತಿಳಿದು ಬಂದಿಲ್ಲ. ಘಟನೆ ಸಂಬಂಧ ಆಡುಗೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿಯ ಪತ್ತೆಗಾಗಿ ಸಿಸಿಟವಿಯನ್ನ

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ➤ ಬೈಕ್ ಗೆ ಡಿಕ್ಕಿ ಹೊಡೆದು ಲಾರಿ ಚಾಲಕ ಎಸ್ಕೇಪ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನೈತಿಕ ಸಂಬಂಧ ➤ ಗೆಳೆಯನಿಂದಲೇ ಹತ್ಯೆಗೀಡಾದ ಮಹಿಳೆ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.27.  ತನ್ನನ್ನು ಬಿಟ್ಟು ಪರಸ್ತ್ರೀಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಗೆಳೆಯನೊಂದಿಗೆ ಮಹಿಳೆ ಗಲಾಟೆ ಮಾಡಿದ ಪರಿಣಾಮ ಕೋಪಗೊಂಡ ಗೆಳೆಯ ಆಕೆಯನ್ನು ಹತ್ಯೆ ಮಾಡಿರುವ ಘಟನೆಯೊಂದು ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶರಗುಣಂ (35) ಹತ್ಯೆಯಾದ ಮಹಿಳೆಯಾಗಿದ್ದಾರೆ. ಆರೋಪಿ ಗಮೇಶ್ ಮಹಿಳೆಯನ್ನು ಹತ್ಯೆ ಮಾಡಲು ಯತ್ನಿಸಿದ್ದು, ಬಳಿಕ ಆಕೆಯನ್ನು ಆತನೇ ಆಸ್ಪತ್ರೆಗೆ ದಾಖಲಿಸಿದ್ದಾನೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿದ್ದಾರೆಂದು ಪೊಲೀಸರು ಹೇಳಿದ್ದಾರೆ. ಮೃತ ಮಹಿಳೆ ಶರಗುಣಂ ಮೂಲತಃ ತಮಿಳುನಾಡು ಮೂಲದವರಾಗಿದ್ದು,

ಅನೈತಿಕ ಸಂಬಂಧ ➤ ಗೆಳೆಯನಿಂದಲೇ ಹತ್ಯೆಗೀಡಾದ ಮಹಿಳೆ Read More »

ಕ್ರೈಮ್ ನ್ಯೂಸ್

ಕ್ರೂರವಾಗಿ ಮೂರು ಮೇಕೆಗಳನ್ನು ಬಲಿ ನೀಡಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com. ಚಿತ್ರದುರ್ಗ, ಏ.27. ಜಿಲ್ಲೆಯ ಪರಶುರಾಂಪುರ ಗ್ರಾಮದಲ್ಲಿ ಯುಗಾದಿ ಹಬ್ಬದ ವೇಳೆ ಸಾರ್ವಜನಿಕರ ಕಣ್ಣಿಗೆ ಕಾಣುವಂತೆ ಬಹಿರಂಗವಾಗಿ ಮೂರು ಮೇಕೆಗಳನ್ನು ಬಲಿ ನೀಡಿದ್ದ ವ್ಯಕ್ತಿಯೊಬ್ಬನ ವಿರುದ್ಧ ಚಿತ್ರದುರ್ಗ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿಕೊಂಡಿದ್ದಾರೆ. ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಭಯ ಭೀತಿಗೊಳಗಾದ ಮೂರು ಮೇಕೆಗಳ ಮುಂದೆ ನಿಂತು ಆರೋಪಿ ಕತ್ತಿಯಂತಹ ಆಯುಧದಿಂದ ಒಂದರ ಹಿಂದೆ ಒಂದರಂತೆ ಮೂರೂ ಮೇಕೆಗಳ ತಲೆ

ಕ್ರೂರವಾಗಿ ಮೂರು ಮೇಕೆಗಳನ್ನು ಬಲಿ ನೀಡಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೆಹಲಿ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ➤ ಯುವಕನ ಬಂಧನ

(ನ್ಯೂಸ್ ಕಡಬ) newskadaba.com. ನವದೆಹಲಿ, ಏ.27. ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಹಾಕಿದ ಆರೋಪದ ಮೇಲೆ ಉತ್ತರ ಪ್ರದೇಶದ 20 ವರ್ಷದ ಯುವಕನನ್ನು ಬಂಧಿಸಲಾಗಿದೆ. ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ಪಿಸಿಆರ್ ಕರೆ ಮಾಡಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಇದೆ ಎಂದಿದ್ದರು. ಇದಾದ ನಾಲ್ಕು ದಿನಗಳ ನಂತರ ಆರೋಪಿಯ ಬಂಧನವಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ➤ ಯುವಕನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top