ಕಡಬ ನ್ಯೂಸ್

ಉಡುಪಿ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ಆರೋಪಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ ನ. 16: ಉಡುಪಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಆರೋಪದಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ನ ಸಿಬ್ಬಂದಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.   ಕಾಪುವಿನ ಬ್ಯಾಂಕ್ ಆಫ್ ಬರೋಡ ಶಾಖೆಯ ಆಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಸುಕೇಶ್ ಶೆಟ್ಟಿ(23) ಎಂಬಾತ ಬಂಧಿತ ಆರೋಪಿಯಾಗಿದ್ದು, ಈತ ಹತ್ತನೆ ತರಗತಿಯ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದಿದ್ದಾನೆ. ಎಂದು ಉಡುಪಿಯ ಮಹಿಳಾ ಠಾಣೆಯಲ್ಲಿ ಬಾಲಕಿ ಪೋಷಕರು ದೂರು ನೀಡಿದ್ದಾರೆ.  ಸದ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.  

ಉಡುಪಿ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ಆರೋಪಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ: ತುಲಾಭಾರ,ಅನ್ನಪ್ರಾಶನ ಸೇವೆ ಆರಂಭ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ನ. 16: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ದಿಂದ ತುಲಾಭಾರ ಮತ್ತು ಅನ್ನಪ್ರಾಶನ ಸೇವೆಗಳು ಆರಂಭಗೊಂಡಿವೆ. ಇದರಿಂದಾಗಿ ಕ್ಷೇತ್ರದಲ್ಲಿ ಇದೀಗ ಎಲ್ಲ ಸೇವೆಗಳು ಪ್ರಾರಂಭಗೊಂಡಿವೆ.   ದೀಪಾವಳಿ ಪ್ರಯುಕ್ತ ಪಲ್ಲಕ್ಕಿ ಮತ್ತು ಬಂಡಿ ಉತ್ಸವ ನೆರವೇರಿದವು. ಕ್ಷೇತ್ರದಲ್ಲಿ ಸೋಮವಾರ ದೇವರು ಹೊರಾಂಗಣ ಪ್ರವೇಶಿಸುವ ಮೂಲಕ ಉತ್ಸವಾದಿಗಳು ಆರಂಭಗೊಳ್ಳಲಿವೆ. ಲಕ್ಷ ದೀಪೋತ್ಸವದ ನಂತರ ರಥ ಬೀದಿಯಲ್ಲಿ ರಥೋತ್ಸವಗಳೂ ನಡೆಯಲಿವೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್‌. ತಿಳಿಸಿದ್ದಾರೆ.    

ಕುಕ್ಕೆ ಸುಬ್ರಹ್ಮಣ್ಯ: ತುಲಾಭಾರ,ಅನ್ನಪ್ರಾಶನ ಸೇವೆ ಆರಂಭ Read More »

ಕರಾವಳಿ

ಕೋವಿಡ್‌ ಪ್ರಮಾಣಪತ್ರವಿಲ್ಲದೆ ಕಾಲೇಜುಗಳಿಗೆ ಪ್ರವೇಶವಿಲ್ಲ ➤ ದ.ಕ. ಜಿಲ್ಲಾಡಳಿತ

(ನ್ಯೂಸ್ ಕಡಬ) newskadaba.com ಮಂಗಳೂರು ನ. 16: ನ.17ರಿಂದ ಪದವಿ ಕಾಲೇಜುಗಳು ಪ್ರಾರಂಭವಾಗಲಿದ್ದು, ಕಾಲೇಜಿಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್‌ ಟೆಸ್ಟ್‌ ಮಾಡಿಸಿಕೊಂಡು ಪ್ರಮಾಣಪತ್ರದೊಂದಿಗೆ ಹಾಜರಾಗಬೇಕು ಎಂದು ದ.ಕ. ಜಿಲ್ಲಾಡಳಿತ ಹೇಳಿದೆ.ವಿದ್ಯಾರ್ಥಿಗಳು ಕೋವಿಡ್‌ ಟೆಸ್ಟನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಮಾಡಿಸಿಕೊಳ್ಳಬಹುದಾಗಿದೆ. ಈಗಾಗಲೇ ಕೋವಿಡ್‌ ಟೆಸ್ಟ್‌ ಮ್ಯಾಪಿಂಗ್‌ ಕಾಲೇಜುಗಳಿಗೆ ಲಿಂಕ್‌ ಮಾಡಲಾಗಿದೆ. ಕೋವಿಡ್‌ ಟೆಸ್ವ್‌ ಪ್ರಮಾಣಪತ್ರ ಹೊಂದದೇ ಇರುವ ವಿದ್ಯಾರ್ಥಿಗಳಿಗೆ ಪ್ರವೇಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.ನ.17ರಂದು ಕಾಲೇಜು ಆರಂಭವೆಂದು

ಕೋವಿಡ್‌ ಪ್ರಮಾಣಪತ್ರವಿಲ್ಲದೆ ಕಾಲೇಜುಗಳಿಗೆ ಪ್ರವೇಶವಿಲ್ಲ ➤ ದ.ಕ. ಜಿಲ್ಲಾಡಳಿತ Read More »

ಕರಾವಳಿ

ಕಡಬ: ಹೆರಿಗೆ ವೇಳೆ ತೀವ್ರ ರಕ್ತಸ್ರಾವಕ್ಕೊಳಗಾಗಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕೊಂಬಾರು, ನ.15. ಬಾಣಂತಿ ಮಹಿಳೆಯೋರ್ವರು ತೀವ್ರ ರಕ್ತಸ್ರಾವಕ್ಕೊಳಗಾಗಿ ಮೃತಪಟ್ಟ ಘಟನೆ ಭಾನುವಾರದಂದು ಕಡಬದಲ್ಲಿ ನಡೆದಿದೆ.     ಮೃತ ಮಹಿಳೆಯನ್ನು ಕೊಂಬಾರು ಗ್ರಾಮದ ಮಣಿಬಾಂಡ ಸಮೀಪದ ಕೆರೊಂದೋಡಿ ನಿವಾಸಿ ಬಾಲಕೃಷ್ಣ ಎಂಬವರ ಪತ್ನಿ ಸುನೀತಾ(35) ಎಂದು ಗುರುತಿಸಲಾಗಿದೆ. ಏಳನೇ ಗರ್ಭಿಣಿಯಾಗಿದ್ದ ಈಕೆಗೆ ಭಾನುವಾರದಂದು ಮನೆಯಲ್ಲೇ ಹೆರಿಗೆಯಾಗಿದ್ದು, ತೀವ್ರ ರಕ್ತಸ್ರಾವಕ್ಕೊಳಗಾದ ಮಹಿಳೆಯನ್ನು ತಕ್ಷಣವೇ 108 ಆಂಬ್ಯುಲೆನ್ಸ್ ಮೂಲಕ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ ಅದಾಗಲೇ ಮೃತಪಟ್ಟರು ಎಂದು ತಿಳಿದುಬಂದಿದೆ. ಮಗು ಆರೋಗ್ಯವಾಗಿದ್ದು, ಪುತ್ತೂರಿನ

ಕಡಬ: ಹೆರಿಗೆ ವೇಳೆ ತೀವ್ರ ರಕ್ತಸ್ರಾವಕ್ಕೊಳಗಾಗಿ ಮಹಿಳೆ ಮೃತ್ಯು Read More »

ಕರಾವಳಿ

ದೀಪಾವಳಿ ಪಟಾಕಿ ಅನಾಹುತ ➤ ಬೆಳಕಿನ ಹಬ್ಬದಲ್ಲಿ ಬೆಳಕನ್ನೆ ಕಳೆದು ಕೊಳ್ಳುವ ಭೀತಿ.!

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 15: ಹಸಿರು ಪಟಾಕಿ ಚರ್ಚೆಗಳ ನಡುವೆಯೇ ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ 10ಕ್ಕೂ ಅಧಿಕ ಮಕ್ಕಳು ಕಣ್ಣು ಹಾಗೂ ಮುಖಕ್ಕೆ ಗಾಯ ಮಾಡಿಕೊಂಡು ತಮ್ಮ ಭವಿಷ್ಯಕ್ಕೆ ಕೊಡಲಿಯೇಟು ನೀಡಿದ್ದಾರೆ.   ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ ಗಾಯಗೊಂಡ 10 ಮಕ್ಕಳ ಪೈಕಿ ನಾಲ್ವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. 12 ವರ್ಷದ ಸುವೇಲ್ ಎಂಬ ಬಾಲಕ ಮಿಂಟೋ ಕಣ್ಣಾಸ್ಪತ್ರೆಗೆ ದಾಖಲಾಗಿದ್ದು, ಈತನ ಎರಡೂ ಕಣ್ಣುಗಳಿಗೂ ತೀವ್ರ ಹಾನಿಯಾಗಿದೆ. ಸುವೇಲ್ ನಿನ್ನೆ ರಾತ್ರಿ ಪಟಾಕಿ ಹೂವಿನ ಕುಂಡ

ದೀಪಾವಳಿ ಪಟಾಕಿ ಅನಾಹುತ ➤ ಬೆಳಕಿನ ಹಬ್ಬದಲ್ಲಿ ಬೆಳಕನ್ನೆ ಕಳೆದು ಕೊಳ್ಳುವ ಭೀತಿ.! Read More »

ಕರಾವಳಿ

ಏಳನೇ ಬಾರಿಗೆ ಮತ್ತೆ ಬಿಹಾರ ಸಿಎಂ ಪಟ್ಟ ಅಲಂಕರಿಸಿದ ನಿತೀಶ್​ ಕುಮಾರ್​

(ನ್ಯೂಸ್ ಕಡಬ) newskadaba.com ಬಿಹಾರ ನ. 15: ಬಿಹಾರ ಮುಖ್ಯಮಂತ್ರಿ ಪಟ್ಟಕ್ಕೆ ನಿತೀಶ್​ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಬಹಳ ಕುತೂಹಲ ಕೆರಳಿಸಿದ್ದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಎನ್​ಡಿಎ ಸರ್ಕಾರಕ್ಕೆ ಅಧಿಕಾರ ಸಿಕ್ಕಿದ್ದು, ನಿತೀಶ್​ ಕುಮಾರ್​ಗೆ ಮತ್ತೆ ಸಿಎಂ ಪಟ್ಟ ಕಟ್ಟಲು ಎನ್​ಡಿಎ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.ಇಂದು ನಡೆದ ಎನ್​ಡಿಎ ಸಭೆಯಲ್ಲಿ ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್​ ಕುಮಾರ್​ ಅವರನ್ನು ಆಯ್ಕೆ ಮಾಡಲಾಗಿದೆ.   ಜೆಡಿಯು ಕಡಿಮೆ ಸ್ಥಾನ ಗೆದ್ದರೂ ನಿತೀಶ್​ಗೆ ನಾಲ್ಕನೇ ಬಾರಿ ಮುಖ್ಯಮಂತ್ರಿ ಆಗುವ

ಏಳನೇ ಬಾರಿಗೆ ಮತ್ತೆ ಬಿಹಾರ ಸಿಎಂ ಪಟ್ಟ ಅಲಂಕರಿಸಿದ ನಿತೀಶ್​ ಕುಮಾರ್​ Read More »

ರಾಷ್ಟ್ರೀಯ ನ್ಯೂಸ್

ನ. 18 ರಂದು ಕೆ.ಎಂ.ಎಫ್. ವತಿಯಿಂದ ಕೌಶಲ್ಯಾಭಿವೃದ್ಧಿ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 15: ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಮಂಗಳೂರು ಮತ್ತು ದ.ಕ ಜಿಲ್ಲಾಸಹಕಾರಿ ಯೂನಿಯನ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 67ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ‘ಕೊರೋನಾ ಸೋಂಕು-ಆತ್ಮನಿರ್ಭರ ಭಾರತ -ಸಹಕಾರ ಸಂಸ್ಥೆಗಳು’ ಎಂಬ ಧ್ಯೇಯಯೊಂದಿಗೆ ‘ವ್ಯವಹಾರ ಉದ್ಯೋಗ ಕಳೆದುಕೊಂಡವರು, ಭಾಧಿತರು ಪುನರುದ್ಯೋಗಸ್ಥರಾಗಲು ಕೌಶಲ್ಯಾಭಿವೃದ್ಧಿ’ ದಿನಾಚರಣೆ ನವೆಂಬರ್ 18 ರಂದು ಬೆಳಿಗ್ಗೆ 10.30 ಕ್ಕೆ ಮಂಗಳೂರು ಕುಲಶೇಖರ ಡೇರಿ ಆವರಣದಲ್ಲಿ ನಡೆಯಲಿದೆ.     ಮಂಗಳೂರು

ನ. 18 ರಂದು ಕೆ.ಎಂ.ಎಫ್. ವತಿಯಿಂದ ಕೌಶಲ್ಯಾಭಿವೃದ್ಧಿ ದಿನಾಚರಣೆ Read More »

ಕರಾವಳಿ

ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ವಿಧಿವಶ

(ನ್ಯೂಸ್ ಕಡಬ) newskadaba.com ಕೋಲ್ಕತಾ ನ. 15: ಕಳೆದೊಂದು ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ವಿಧಿವಶರಾಗಿದ್ದಾರೆ. 85 ವರ್ಷದ ಸೌಮಿತ್ರ ಚಟರ್ಜಿಯವರು ಸ್ಪಂದಿಸುತ್ತಿಲ್ಲ ಮತ್ತು ಒಂದಕ್ಕಿಂತ ಹೆಚ್ಚು ಲೈಫ್ ಸಪೋರ್ಟ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸೌಮಿತ್ರ ಚಟರ್ಜಿಯವರು ಆಸ್ಪತ್ರೆಯಲ್ಲಿ ಕೊನೆಯುಸೆರೆಳೆದಿದ್ದಾರೆಂದು ವರದಿಗಳು ತಿಳಿಸಿವೆ. ಕ್ಯಾನ್ಸರ್ ನಿಂದ ಬಳಲುತ್ತಿರುವ ಸೌಮಿತ್ರ ಚಟರ್ಜಿ ಅವರಿಗೆ ಇತ್ತೀಚೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಹೀಗಾಗಿ, ‌ ಅವರ ಆರೋಗ್ಯದಲ್ಲಿ

ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ಸೋಮವಾರದಿಂದ ಅಯ್ಯಪ್ಪನ ದರ್ಶನಕ್ಕೆ ಅವಕಾಶ ➤ ಕೊರೊನಾ ನೆಗೆಟಿವ್ ಇದ್ರೆ ಮಾತ್ರ ಪ್ರವೇಶಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ತಿರುವನಂತಪುರಂ ನ. 15: ಸೋಮವಾರದಿಂದ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೆ ಕಟ್ಟುನಿಟ್ಟಿನ ಕೊರನಾ ನಿಯಮಾವಳಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಶಬರಿಮಲೆ ಅಯ್ಯಪ್ಪ ದೇವಾಲಯದ ಪ್ರಧಾನ ಅರ್ಚಕ ಎ.ಕೆ.ಸುಧೀರ್ ನಂಬೂಥಿರಿಯವರು ಪ್ರಧಾನ ಅರ್ಚಕ ಕಂದರರು ರಾಜೀವರು ಅವರ ನೇತೃತ್ವದಲ್ಲಿ ಇಂದು ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲು ತೆರೆಯಲಿದ್ದಾರೆ. ಸೋಮವಾರ ವೃಶ್ಚಿಕದ ಮೊದಲ ದಿನವಾದ್ದರಿಂದ ಹೊಸ ಪ್ರಧಾನ ಅರ್ಚಕರು ದೇವಸ್ಥಾನದ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಿದ್ದಾರೆ. ಸೋಮವಾರ ಬೆಳಗ್ಗೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೆ

ಸೋಮವಾರದಿಂದ ಅಯ್ಯಪ್ಪನ ದರ್ಶನಕ್ಕೆ ಅವಕಾಶ ➤ ಕೊರೊನಾ ನೆಗೆಟಿವ್ ಇದ್ರೆ ಮಾತ್ರ ಪ್ರವೇಶಕ್ಕೆ ಅವಕಾಶ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು :ಮೆಡಿಕಲ್‌ ಕಾಲೇಜ್‌ಗೆ ಮೀಸಲಿಟ್ಟಿದ್ದ ಜಾಗ ಸೀ ಫುಡ್‌ ಪಾರ್ಕ್‌ಗೆ ನೀಡಿದ ಸರ್ಕಾರ

(ನ್ಯೂಸ್ ಕಡಬ) newskadaba.com ಪುತ್ತೂರು ನ. 15: ಮೆಡಿಕಲ್‌ ಕಾಲೇಜಿಗೆಂದೇ ಮೀಸಲಿರಿಸಿದ್ದ 40 ಎಕರೆ ಜಾಗ ರದ್ದುಪಡಿಸಲು ಸರಕಾರ ಮುಂದಾಗಿದೆ.ಪುತ್ತೂರು-ಉಪ್ಪಿನಂಗಡಿ ರಸ್ತೆಯ ಪಕ್ಕದಲ್ಲಿ, ಬನ್ನೂರು ಗ್ರಾಮದ ಸೇಡಿಯಾಪು ಹಳ್ಳಿಯಲ್ಲಿ ಸರಕಾರಿ ಮೆಡಿಕಲ್‌ ಕಾಲೇಜು ಸ್ಥಾಪನೆ ಉದ್ದೇಶದಿಂದ 4 ವರ್ಷದ ಹಿಂದೆ 40 ಎಕರೆ ಜಾಗವನ್ನು ಅಂದಿನ ಶಾಸಕಿ ಶಕುಂತಳಾ ಶೆಟ್ಟಿ ಮುತುವರ್ಜಿಯಿಂದ ಮೀಸಲಿಡಲಾಗಿತ್ತು.     ಈ ಜಾಗವನ್ನು ಮೆಡಿಕಲ್‌ ಕಾಲೇಜು ಉದ್ದೇಶದಿಂದ ರದ್ದುಪಡಿಸಿ, ಅದನ್ನು ಸೀ ಫುಡ್‌ ಪಾರ್ಕ್‌ಗೆ ಕಾದಿರಿಸಲು ನಿರ್ಧರಿಸಲಾಗಿದೆ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ

ಪುತ್ತೂರು :ಮೆಡಿಕಲ್‌ ಕಾಲೇಜ್‌ಗೆ ಮೀಸಲಿಟ್ಟಿದ್ದ ಜಾಗ ಸೀ ಫುಡ್‌ ಪಾರ್ಕ್‌ಗೆ ನೀಡಿದ ಸರ್ಕಾರ Read More »

ಕರಾವಳಿ
Scroll to Top