ಕಡಬ ನ್ಯೂಸ್

ಸುಳ್ಯದ ಖ್ಯಾತ ಚಿತ್ರಕಲಾ ಶಿಕ್ಷಕ ನಿಧನ

(ನ್ಯೂಸ್ ಕಡಬ) newskadaba.com ಸುಳ್ಯ ನ. 11: ಸುಳ್ಯದ ಖ್ಯಾತ ಚಿತ್ರಕಲಾ ಶಿಕ್ಷಕ ಮಹಾಬಲ ಕುಳರವರು ಮರದಿಂದ ಬಿದ್ದು ಗಾಯಗೊಂಡು ವಿಧಿವಶರಾಗಿದ್ದಾರೆ.   ಮಂಗಳವಾರದಮದು ತಮ್ಮ ಮನೆಯ ಬಳಿಯಿದ್ದ ಮರದ ರೆಂಬೆ ಕಡಿಯುತ್ತಿದ್ದ ವೇಳೆ ಮರದಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಸುಳ್ಯ ತಾಲೂಕಿನ ಖ್ಯಾತ ಚಿತ್ರಕಲಾ ಶಿಕ್ಷಕ ಕುಳ ಅವರು ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗಿನ ವೇಳೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಹಾಬಲ ಕುಳ ಅವರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪಂಜ ಸರ್ಕಾರಿ ಕಾಲೇಜಿನಲ್ಲಿಪ್ರೌಢಶಾಲಾ […]

ಸುಳ್ಯದ ಖ್ಯಾತ ಚಿತ್ರಕಲಾ ಶಿಕ್ಷಕ ನಿಧನ Read More »

ಕರಾವಳಿ

ಪಂಜ: ಯಕ್ಷಗಾನ ಕಲಾವಿದರಿಗೆ ಪಂಚಲಿಂಗೇಶ್ವರ ದೇವಾಲಯದ ವತಿಯಿಂದ ಗೌರವ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಪಂಜ, ನ.11: ಪರಿವಾರ ಪಂಚಲಿಂಗೇಶ್ವರ ದೇವಾಲಯ ಪಂಜ ಇದರ ವತಿಯಿಂದ ಯಕ್ಷಗಾನ ಭಾಗವತರಾದ ರವಿಚಂದ್ರ ಕನ್ನಡಿಕಟ್ಟೆ ಹಾಗೂ ರಾಘವೇಂದ್ರ ಆಚಾರ್ ಜನ್ಸಾಲೆ ಅವರಿಗೆ ಹಾಗೂ ಇತರ ಹಿಮ್ಮೇಳನ ಕಲಾವಿದರಿಗೂ ಶಾಲು ಹೊದಿಸಿ, ದೇವರ ಪ್ರಸಾದವನ್ನು ನೀಡಿ ಗೌರವಿಸಲಾಯಿತು.   ಕಾರ್ಯಕ್ರಮದಲ್ಲಿ ದೇವಳದ ಅರ್ಚಕರಾದ ಶ್ರೀ ನಾಗರಾಜ ಹೆಗಡೆ ಅದೇ ರೀತಿ ದೇವಳದ ಆಡಳಿತಾಧಿಕಾರಿಗಳಾದ ಡಾ. ದೇವಿಪ್ರಸಾದ್ ಕಾನತ್ತೂರು ಹಾಗೂ ಇತತರು ಉಪಸ್ಥಿತರಿದ್ದರು.    

ಪಂಜ: ಯಕ್ಷಗಾನ ಕಲಾವಿದರಿಗೆ ಪಂಚಲಿಂಗೇಶ್ವರ ದೇವಾಲಯದ ವತಿಯಿಂದ ಗೌರವ ಸಲ್ಲಿಕೆ Read More »

ಕರಾವಳಿ

ಪುತ್ತೂರು: ಸೋಲಾರ್ ದೀಪ ನೀಡಿ ಮಾತು ಉಳಿಸಿಕೊಂಡ ಶಾಸಕ ಸಂಜೀವ ಮಠಂದೂರು

(ನ್ಯೂಸ್ ಕಡಬ) newskadaba.com ಪುತ್ತೂರು, ನ.11: ಶಾಸಕ ಸಂಜೀವ ಮಠಂದೂರು ಅವರು ಮಾಣಿಲ ದಂಡೆಪ್ಪಾಡಿ ಕಿಟ್ಟ ಮೂಲ್ಯ ಅವರ ಮನೆಯಲ್ಲಿ ಬೆಳಕು ಕಾಣದ ಮನೆಯೊಂದಕ್ಕೆ ಬೆಳಕು ನೀಡುವ ಭರವಸೆ  ನೀಡಿದಂತೆ ಸೋಲಾರ್ ದೀಪವವನ್ನು ಉದ್ಘಾಟಿಸಿದರು.     ತಿಂಗಳ ಹಿಂದೆ ಮನೆಗೆ ಭೇಟಿ ನೀಡಿದ ಅವರು ಸೋಲಾರ್ ದೀಪ ಕೊಡಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಶಾಸಕರು ಸೋಲಾರ್ ದೀಪ ಅಳವಡಿಸಿ ತನ್ನ ಭರವಸೆ ಪೂರೈಸಿದ್ದಾರೆ. ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯೆ ಜಯಶ್ರೀ ಕೋಡಂದೂರು, ಪೆರುವಾಯಿ ಸೇವಾ ಸಹಕಾರಿ ಸಂಘದ

ಪುತ್ತೂರು: ಸೋಲಾರ್ ದೀಪ ನೀಡಿ ಮಾತು ಉಳಿಸಿಕೊಂಡ ಶಾಸಕ ಸಂಜೀವ ಮಠಂದೂರು Read More »

ಕರಾವಳಿ

ಅರಣ್ಯ ಸಚಿವ ಆನಂದ್ ಸಿಂಗ್ ನಿವಾಸದ ಬಳಿ ಬಂದ ಮೊಸಳೆ

(ನ್ಯೂಸ್ ಕಡಬ) newskadaba.com ಹೊಸಪೇಟೆ ನ. 11:  ಅರಣ್ಯ ಸಚಿವ ಆನಂದ್ ಸಿಂಗ್ ನಿವಾಸದ ಬಳಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಕೆಲಕಾಲ ಆತಂಕ ಸೃಷ್ಟಿಸಿತ್ತು.ಬಳ್ಳಾರಿ ಜಿಲ್ಲೆ ಹೊಸಪೇಟೆ ನಗರದ ಬೈಪಾಸ್ ಬಳಿ ಎಲ್‍ಎಲ್‍ಸಿ ಕಾಲುವೆ ಇದೆ. ಕಳೆದ ದಿನ ರಾತ್ರಿ ಕಾಲುವೆಯಿಂದ ಮೊಸಳೆಯು ಸಚಿವರ ನಿವಾಸದ ಮುಂಭಾಗದ ರಸ್ತೆಗೆ ಬಂದಿತ್ತು.       ಮೊಸಳೆ ಇರುವ ಮಾಹಿತಿ ಅರಿತ ಕಮಲಾಪುರದ ಅಟಲ್ ವಾಜಪೇಯಿ ಝೂಲಾಜಿಕಲ್ ಪಾರ್ಕ್ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಲ್ಲದೆ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ. ನಂತರ

ಅರಣ್ಯ ಸಚಿವ ಆನಂದ್ ಸಿಂಗ್ ನಿವಾಸದ ಬಳಿ ಬಂದ ಮೊಸಳೆ Read More »

ಕರ್ನಾಟಕ

ಮಣಿಪಾಲ: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಭೂಪ ➤ ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮಣಿಪಾಲ, ನ.11: ಮಣಿಪಾಲದಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಹಣ ಹಾಗೂ ದಾಖಲೆ ಪತ್ರಗಳನ್ನು ಪಡೆದು ವಂಚಿಸಿಕೊಂಡಿರುವ ಘಟನೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಗಣೇಶ್ ನಾಯ್ಕ್ ಎಂದು ಗುರುತಿಸಲಾಗಿದೆ.     ಪ್ರಕರಣದಲ್ಲಿ ಆರೋಪಿತನು ತಾನು ಕೊಂಕಣ ರೈಲ್ವೆ ಇಲಾಖೆಯಲ್ಲಿ ಟಿ ಸಿ ಆಗಿರುವುದಾಗಿ ಹೇಳಿ  ಉದ್ಯೋಗ ಕೊಡುವುದಾಗಿ  ವ್ಯಕ್ತಿಯನ್ನು  ನಂಬಿಸಿ 20,000 ಹಣ ಹಾಗೂ ದಾಖಲೆ ಪತ್ರಗಳನ್ನು ತೆಗೆದುಕೊಂಡು ವಂಚಿಸಿದ್ದಾನೆ. ಅಲ್ಲದೇ ಮತ್ತೊಬ್ಬ ಯುವತಿಯಿಂದ ಹಣ ಪಡೆದು

ಮಣಿಪಾಲ: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಭೂಪ ➤ ಆರೋಪಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ತೊಡಿಕಾನ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ತೊಡಿಕಾನ, ನ.11: ತೊಡಿಕಾನ ಗ್ರಾಮದ ಮುಪ್ಪಸೇರು ನಿವಾಸಿಯೊಬ್ಬರು ಮನೆ ಸಮೀಪದ ಹೊಳೆ ಬದಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳೆದ ದಿನ ನಡೆದಿದೆ.     ನೇಣಿಗೆ ಶರಣಾದ ವ್ಯಕ್ತಿಯನ್ನು ಮುಪ್ಪಸೇರು ನಿವಾಸಿ ಧರ್ಮಪಾಲ (48) ಎಂದು ಗುರುತಿಸಲಾಗಿದೆ. ಇವರು ತೊಡಿಕಾನ ದೇವಾಲಯ ಬಳಿ ಮಿನಿ ಕ್ಯಾಂಟಿನ್ ಒಂದರಲ್ಲಿ ಕೆಲಸ ಮಾಡಿತ್ತಿದ್ದರು. ಇವರ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು ಹಾಗೂ ಸಹೋದರರನ್ನು ಅಗಲಿದ್ದಾರೆ.

ತೊಡಿಕಾನ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಹೆಚ್ಚುತ್ತಲೇಯಿದೆ ಕಾರು ಕಳವು ಪ್ರಕರಣ

(ನ್ಯೂಸ್ ಕಡಬ) newskadaba.com ಪುತ್ತೂರು, ನ.11: ಇತ್ತೀಚಿಗೆ ಪುತ್ತೂರಿನಲ್ಲಿ ಕಾರು ಕಳವು ಪ್ರಕರಣಗಕಳ್ಳರಗಳ ಹಾವಳಿ ಹೆಚ್ಚಾಗುತ್ತಿದ್ದು, ಕಳ್ಳರು ತಮ್ಮ ಕೈಚಲಕ ಮುಂದುವರಿಸುತ್ತಲೇ ಇದ್ದಾರೆ.  ಇದೀಗ ಕಳೆದ ದಿನದಂದು ಇನ್ನೊಂದು ಕಾರು ಕಳವು ಆಗಿರುವ ಘಟನೆ ಬೆಳಕಿಗೆ ಬಂದಿದೆ.     ಹೀಗೆ ಈ ವಾರದೊಳಗೆ ಮೂರು ಕಾರುಗಳನ್ನು ಕಳ್ಳರು ಕಳವುಗೈದಿದ್ದಾರೆ ಎಂದು ವರದಿಯಾಗಿದೆ.  

ಪುತ್ತೂರು: ಹೆಚ್ಚುತ್ತಲೇಯಿದೆ ಕಾರು ಕಳವು ಪ್ರಕರಣ Read More »

ಕರಾವಳಿ

ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತ

(ನ್ಯೂಸ್ ಕಡಬ) newskadaba.com ದಾವಣಗೆರೆ ನ. 10:  ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತಕ್ಕೀಡಾದ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.ಘಟನೆಯಲ್ಲಿ ಪ್ರಶಾಂತ್ ಶೆಟ್ಟರ್ ಹಾಗೂ ಅವರ ಪತ್ನಿ ಅಂಚಲ್ ಗೆ ಸಣ್ಣಪುಟ್ಟ ಗಾಯಗಳಾಗಿದೆ.   ಗಾಯಾಳುಗಳನ್ನು ಹೈಟೆಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಡಿವೈಡರ್ ಬಳಿ ಲಾರಿ ಹಾಗೂ ಲ್ಯಾಂಡ್ ರೋವರ್ ಡಿಸ್ಕವರಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.ಶೆಟ್ಟರ್ ಪುತ್ರ ಇಂದು ದಾವಣಗೆರೆಯಿಂದ ಹುಬ್ಬಳ್ಳಿ ನಿವಾಸಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅವಘಡ

ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತ Read More »

ಕರಾವಳಿ

ಶ್ರೀನಗರ: ಶೋಫಿಯಾನ್‍ನಲ್ಲಿ ಎನ್ ಕೌಂಟರ್ ➤ ಇಬ್ಬರು ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com ಶ್ರೀನಗರ, ನ.10: ದಕ್ಷಿಣ ಕಾಶ್ಮೀರದ ಸೋಪಿಯಾನ್‌ ಜಿಲ್ಲೆಯ ಕುಟ್ಪೊರಾ ಪ್ರದೇಶದಲ್ಲಿ ಇಂದು ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಯು ಉಗ್ರರಿಬ್ಬರನ್ನು  ಹೊಡೆದುರುಳಿಸಿದ್ದಾರೆ. ಜಮ್ಮು-ಕಾಶ್ಮೀರದ ಪೊಲೀಸರು ನಿಖರ ಮಾಹಿತಿ ಮೇರೆಗೆ ಸೇನೆಯ 34-ರಾಷ್ಟ್ರೀಯ ರೈಫಲ್ಸ್‌ ಮತ್ತು ಇಂದು ಕುಟ್ಪೊರಾ ಪ್ರದೇಶದಲ್ಲಿ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.  ಈ ವೇಳೆ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಮೊದಲು ಗುಂಡು ಹಾರಿಸಿದರು. ಈ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಇವರು ಯಾವ ಸಂಘಟನೆಗೆ ಸೇರಿದವರು ಎಂಬುದರ ಬಗ್ಗೆ ಮಾಹಿತಿ ಲಭ್ಯವಿಲ್ಲ.

ಶ್ರೀನಗರ: ಶೋಫಿಯಾನ್‍ನಲ್ಲಿ ಎನ್ ಕೌಂಟರ್ ➤ ಇಬ್ಬರು ಉಗ್ರರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಆರ್‌.ಆರ್ ‌ನಗರದಲ್ಲಿ ಹ್ಯಾಟ್ರಿಕ್‌ ಸಾಧನೆಗೈದ ಮುನಿರತ್ನ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 10: ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಹ್ಯಾಟ್ರಿಕ್‌ ಸಾಧನೆ ಮಾಡಿದ್ದಾರೆ. ಎರಡು ಬಾರಿ ಕಾಂಗ್ರೆಸ್‌ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರನೇ ಬಾರಿ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ.     20ನೇ ಸುತ್ತು ಮುಕ್ತಾಯಗೊಂಡಿದ್ದು ಬಿಜೆಪಿಯ ಮುನಿರತ್ನ 1,03,139,  ಕಾಂಗ್ರೆಸ್‌ನ ಕುಸುಮಾ 58,258 ಜೆಡಿಎಸ್‌ ಕೇಶವಮೂರ್ತಿ 8,794, ನೋಟಾಗೆ 1,878 ಮತ ಬಿದ್ದಿದೆ. ಮುನಿರತ್ನ 42,045 ಮತಗಳಿಂದ ಮುನ್ನಡೆಯಲ್ಲಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.ಆರಂಭದಿಂದಲೂ ಮುನಿರತ್ನ ಮುನ್ನಡೆ ಸಾಧಿಸಿದ್ದರು.    

ಆರ್‌.ಆರ್ ‌ನಗರದಲ್ಲಿ ಹ್ಯಾಟ್ರಿಕ್‌ ಸಾಧನೆಗೈದ ಮುನಿರತ್ನ Read More »

ಕರಾವಳಿ
Scroll to Top