ಕಡಬ ನ್ಯೂಸ್

ಮಂಗಳೂರು ವಿವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪ್ರೊಫೆಸರ್​. ಅರಬಿ ಸೇವೆಯಿಂದ ವಜಾ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 31: ಮಂಗಳೂರು ವಿವಿಯ ಸಂಶೋಧನಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ವಿವಿಯ ಅರ್ಥಶಾಸ್ತ್ರ ವಿಭಾಗದ ಪ್ರೊ.ಅರಬಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅವರನ್ನು ಸೇವೆಯಿಂದ ವಜಾಗೊಳಿಸಲು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ಈ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿನಿ 2018ರಲ್ಲಿ ಸಾಕ್ಷಿ ಸಮೇತ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಳು. ವಿವಿ ಆಡಳಿತದ ಸಮಿತಿ ತನಿಖೆ ಕೈಗೊಂಡ ನಂತರ ವರದಿಯನ್ನು ಅಂದಿನ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಎ.ಎಂ ಖಾನ್‌ ಅವರಿಗೆ […]

ಮಂಗಳೂರು ವಿವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪ್ರೊಫೆಸರ್​. ಅರಬಿ ಸೇವೆಯಿಂದ ವಜಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸರ್ಕಾರಿ ಸೇವೆಯಲ್ಲಿರುವವರ ಗಮನಕ್ಕೆ ➤ ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ನಟಿಸಲು ನಿಷೇದ.!?

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 31: ಕರ್ನಾಟಕ ರಾಜ್ಯ ನಾಗರಿಕ ಸೇವೆ (ನಡವಳಿಕೆ) ನಿಯಮ-2020 ಕರಡನ್ನು ರಾಜ್ಯ ಸರ್ಕಾರ ಇತ್ತೀಚೆಗೆ ಪ್ರಕಟಿಸಿದೆ. ರಾಜ್ಯ ಸರ್ಕಾರಿ ಸೇವೆಯಲ್ಲಿರುವವರು ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ನಟಿಸಲು ನಿಷೇಧ ಹೇರುವ ಪ್ರಸ್ತಾಪವನ್ನು ಕರಡುವಿನಲ್ಲಿ ಮಾಡಲಾಗಿದೆ. ಸರ್ಕಾರಿ ಸೇವೆಯಲ್ಲಿರುವವರು ಏನು ಮಾಡಲು ಮುಕ್ತರು, ಏನು ಮಾಡಬಾರದು ಎಂಬುದರ ಬಗ್ಗೆ ಕರಡುವಿನಲ್ಲಿ ವಿವರಣೆಯನ್ನೂ ನೀಡಲಾಗಿದೆ.   ಕರಡು ನಿಯಮಗಳ ಗಮನಾರ್ಹ ಅಂಶಗಳ ಉಲ್ಲೆಖದಂತೆ ‘ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಪಡೆಯದ ಹೊರತು ಸರ್ಕಾರಿ ಸೇವೆಯಲ್ಲಿರುವ ಯಾವುದೇ ವ್ಯಕ್ತಿ

ಸರ್ಕಾರಿ ಸೇವೆಯಲ್ಲಿರುವವರ ಗಮನಕ್ಕೆ ➤ ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ನಟಿಸಲು ನಿಷೇದ.!? Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ರಾಷ್ಟ್ರೀಯ ಏಕತಾ ದಿವಸ ➤ ಸರ್ದಾರ್​ ಪಟೇಲರ ಏಕತಾ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದ ಪ್ರಧಾನಿ

(ನ್ಯೂಸ್ ಕಡಬ) newskadaba.com ಕೆವಾಡಿಯಾ ಅ. 31: ರಾಷ್ಟ್ರೀಯ ಏಕತಾ ದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಗುಜರಾತ್ ಪ್ರವಾಸದಲ್ಲಿದ್ದಾರೆ. ಪ್ರವಾಸದ ಎರಡನೇ ಹಾಗೂ ಕೊನೆಯ ದಿನವಾದ ಇಂದು (ಅ.31) ಪ್ರಧಾನಿ ಮೋದಿ, ಸರ್ದಾರ್ ವಲ್ಲಭಭಾಯಿ ಪಟೇಲರ ಜನ್ಮದಿನ ಹಿನ್ನೆಲೆಯಲ್ಲಿ ಕೆವಾಡಿಯಾದಲ್ಲಿರುವ ಸರ್ದಾರ್​ ಪಟೇಲರ ಏಕತಾ ಪ್ರತಿಮೆಗೆ ಭೇಟಿ ನೀಡಿ ಪುಷ್ಪಾರ್ಚನೆ ಸಲ್ಲಿಸಿದರು.       ಬಳಿಕ ಪ್ರಧಾನಿ ಮೋದಿ ಅವರು ಕೇಂದ್ರ ಸಶಸ್ತ್ರ ಪಡೆ ಹಾಗೂ ಗುಜರಾತ್ ಪೊಲೀಸ್ ಪರೇಡ್ ವಿಕ್ಷೀಸಿದ್ದಾರೆ.ಇಂದು

ರಾಷ್ಟ್ರೀಯ ಏಕತಾ ದಿವಸ ➤ ಸರ್ದಾರ್​ ಪಟೇಲರ ಏಕತಾ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದ ಪ್ರಧಾನಿ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 31:  ನಗರದಲ್ಲಿ ಗುಂಡಿನ ದಾಳಿ ನಡೆದಿದೆ. ನಗರದ ಫಳ್ನಿರ್ ಬಳಿಯ ಹೋಟೆಲ್ ಒಂದರಲ್ಲಿ ಕಳೆದ ದಿನ (ಅ.30) ಸಂಜೆ ನಡೆದ ತಿಂಡಿ ವಿಚಾರ ಸಂದರ್ಭ ಮಾತಿಗೆ ಮಾತು ಬೆಳೆದು ಶೂಟೌಟ್ ನಡೆದಿದೆ. ಫಳ್ನಿರ್ ಮಲಬಾರ್ ಗೋಲ್ಡ್‌ ಸಮೀಪದ MFC ರೆಸ್ಟೋರೆಂಟಿಗೆ ಸುಮಾರು 5.15 ರ ಸುಮಾರಿಗೆ ತಿಂಡಿ ತಿನ್ನಲು ಬಂದಿದ್ದ ನಾಲ್ವರು ಯುವಕರು ಮಾರಾಟಕ್ಕೆ ಇಟ್ಟ ತಿಂಡಿಗೆ ಕೈ ಹಾಕಿ ತೆಗೆಯುತ್ತಿದ್ದಾಗ ಹೊಟೇಲ್ ಬೆರಳೆಣಿಕೆಯ ಸಿಬಂದಿಗಳು ಅಕ್ಷೇಪ ವ್ಯಕ್ತ ಪಡಿಸಿದಾಗ ಮಾತಿಗೆ

ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬದಲ್ಲಿ ವಕೀಲ ಅಶ್ವಿತ್ ಕಂಡಿಗರವರ ಕಛೇರಿ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ ಅ. 30:  ಇಲ್ಲಿನ ಶ್ರೀ ಗಣೇಶ್ ಬಿಲ್ಡಿಂಗ್ ನಲ್ಲಿ ನ್ಯಾಯವಾದಿ ಅಶ್ವಿತ್ ಕಂಡಿಗರವರ ಕಛೇರಿ ಅ.30ರಂದು ಶುಭಾರಂಭಗೊಂಡಿತು. ಕಛೇರಿಯನ್ನು ವಿವೇಕಾನಂದ ಕಾನೂನು ಮಹಾ ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಅಕ್ಷತಾ ಎ.ಪಿ. ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಹೈಕೋರ್ಟ್ ನ್ಯಾಯವಾದಿ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಪ್ರೇಮ್ ಪ್ರಸಾದ್ ಶೆಟ್ಟಿ ಬೆಂಗಳೂರು, ಹೈಕೋರ್ಟ್ ನ್ಯಾಯವಾದಿ ಕೇತನ್ ಬಂಗೇರ, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ, ಬೆಳಂದೂರು ಬಿಜೆಪಿ ಮಹಾಶಕ್ತಿ

ಕಡಬದಲ್ಲಿ ವಕೀಲ ಅಶ್ವಿತ್ ಕಂಡಿಗರವರ ಕಛೇರಿ ಶುಭಾರಂಭ Read More »

ಕರಾವಳಿ

ಕಾರವಾರ :500 ಕೆಜಿಯ ಬೃಹತ್ ಮೀನು ಬಲೆಗೆ

(ನ್ಯೂಸ್ ಕಡಬ) newskadaba.com ಕಾರವಾರ ಅ. 30: ಸುಮಾರು 500 ಕೆ.ಜಿ.ಗೂ ಹೆಚ್ಚು ತೂಕವಿರುವ ಬೃಹತ್ ಗಾತ್ರದ ಮೂರು ತೊರ್ಕೆ ಮೀನುಗಳು ಭಟ್ಕಳ ಮೀನುಗಾರರ ಬಲೆಗೆ ಬಿದ್ದಿದ್ದು, ಮೀನುಗಾರರು ಸಂತಸಗೊಂಡಿದ್ದಾರೆ .ಇಂದು ಬೆಳಗ್ಗೆ ಅರಬ್ಬಿ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ ರಾಧಾಕೃಷ್ಣ, ರಾಜಶ್ರೀ ಬೋಟ್ ಗಳಿಗೆ ಬ್ರಹತ್ ಗಾತ್ರದ ಮೂರು ತೊರ್ಕೆ ಮೀನು ಸಿಕ್ಕಿದ್ದು, ಪ್ರತಿ ಮೀನಿನ ತೂಕ 500 ಕೆ.ಜಿ. ಮೀರಿಲಿದೆ ಎಂದು ಅಂದಾಜಿಸಲಾಗಿದೆ. ಸುಮಾರು 2 ಮೀಟರ್ ಗೂ ಅಧಿಕ ಉದ್ದದ ಈ ಮೀನುಗಳನ್ನು ಹರಸಾಹಸಪಟ್ಟು ಮೀನುಗಾರರು

ಕಾರವಾರ :500 ಕೆಜಿಯ ಬೃಹತ್ ಮೀನು ಬಲೆಗೆ Read More »

ಕರಾವಳಿ, ಕರ್ನಾಟಕ

ಗೇರು ಬೀಜ ಕಾರ್ಖಾನೆಯಲ್ಲಿ ಕಳ್ಳತನ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ ಅ. 30: ಗೇರು ಬೀಜ ಕಾರ್ಖಾನೆಯಲ್ಲಿನ ಕಳ್ಳತನದ ಪ್ರಕರನಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ.  ಬಂಧಿತರನ್ನು ಪುತ್ತೂರಿನ ಮೊಟ್ಟೆತಡ್ಕ ಸೈಯದ್ ಮೊಹಮ್ಮದ್ (37) ಬಂಟ್ವಾಳ ಮಿತ್ತೂರು ಉಮರ್ ಫಾರೂಕ್ (36) ಬಂಧಿತರಿಂದ ಮಾರುತಿ ಸುಝುಕಿ ಕಾರು, ಮತ್ತು ಕಾರ್ಖಾನೆಯಿಂದ ಕಳವಾದ 1.40 ಲಕ್ಷ ಮೌಲ್ಯದ 32 ಗೇರು ಬೀಜ ಡಬ್ಬ ಮೂರು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಉಡುಪಿ ಹೆಬ್ರಿ ಮತ್ತು ಅಜೆಕಾರು

ಗೇರು ಬೀಜ ಕಾರ್ಖಾನೆಯಲ್ಲಿ ಕಳ್ಳತನ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುರೇಂದ್ರ ಬಂಟ್ವಾಳ್‌ ಹತ್ಯೆ ಪ್ರಕರಣ ➤ ಐವರು ಆರೋಪಿಗಳಿಗೆ ಪೊಲೀಸ್‌ ಕಸ್ಟಡಿ

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 30: ಬಂಟ್ವಾಳ ಭಂಡಾರಿಬೆಟ್ಟು ಬಳಿಯ ವಸತಿ ಸಂಕೀರ್ಣದಲ್ಲಿ ಅ. 20ರಂದು ನಡೆದ ಚಿತ್ರನಟ ಸುರೇಂದ್ರ ಬಂಟ್ವಾಳ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.   ಬಂಟ್ವಾಳದ ಅಮ್ಟಾಡಿ ಗ್ರಾಮದ ಅಜೆಕಲ ನಿವಾಸಿ ಸತೀಶ್‌ ಕುಲಾಲ್‌, ನೀರುಮಾರ್ಗ ಬೊಂಡಂತಿಲ ನಿವಾಸಿ ಗಿರೀಶ್‌, ವೆಂಕಪ್ಪ ಯಾನೆ ವೆಂಕಟೇಶ್‌, ಪ್ರದೀಪ್‌ ಯಾನೆ ಪಪ್ಪು ಹಾಗೂ ಶರೀಫನ್ನು ಬಂಧಿಸಲಾಗಿದೆ.ಇವರಿಗೆ ಐದು ದಿನಗಳ ಪೊಲೀಸ್‌ ಕಸ್ಟಡಿ ವಿಧಿಸಲಾಗಿದೆ. ದ.ಕ.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್‌ ಹಾಗೂ ಬಂಟ್ವಾಳ

ಸುರೇಂದ್ರ ಬಂಟ್ವಾಳ್‌ ಹತ್ಯೆ ಪ್ರಕರಣ ➤ ಐವರು ಆರೋಪಿಗಳಿಗೆ ಪೊಲೀಸ್‌ ಕಸ್ಟಡಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಡುಬಿದ್ರಿ: ವಿಷ ಸೇವಿಸಿ ಆಟೋ ಚಾಲಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಅ. 30: ಪಡುಬಿದ್ರಿಯ ನಡ್ಸಾಲು ಗ್ರಾಮದ ನಿವಾಸಿ ಆಟೋ ಚಾಲಕನಾಗಿದ್ದ ಎಮ್ ಸತೀಶ್ ಪೂಜಾರಿ (58) ಎಂಬುವರು ಆತ್ಮಹ್ಯೆಗೆ ಶರಣಾಗಿದ್ದಾರೆ. ವೃತ್ತಿಯಲ್ಲಿ ಆಟೋ ಚಾಲಕ ನಾಗಿದ್ದ ಇವರು  ಕೊರೊನಾ ಕಾರಣದಿಂದ ದುಡಿಮೆ ಇಲ್ಲದೆ ಸಾಲವನ್ನು ಮರುಪಾವತಿಸಲು ಆಗದೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಅ.27ರ ಮಂಗಳವಾರದಂದು ಸುಮಾರು 11.00 ಗಂಟೆ ಸಮಯಕ್ಕೆ ಪಡುಬಿದ್ರಿ ಕಾಮತ್‌ ಪೆಟ್ರೋಲ್ ಬಂಕ್ ಬಳಿ ವಿಷ ಸೇವಿಸಿದ್ದರು. ಬಳಿಕ ವಿಷ ಸೇವಿಸಿರುವ ಬಗ್ಗೆ

ಪಡುಬಿದ್ರಿ: ವಿಷ ಸೇವಿಸಿ ಆಟೋ ಚಾಲಕ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇಂದು ಹಸೆಮಣೆ ಏರಲಿದ್ದಾರೆ ನಟಿ ಕಾಜಲ್ ಅಗರ್​ವಾಲ್

(ನ್ಯೂಸ್ ಕಡಬ) newskadaba.com ಮುಂಬೈ ಅ. 30: ಬಹುಭಾಷಾ ನಟಿ ಕಾಜಲ್​ ಅಗರ್​ವಾಲ್​ ಇಂದು ಹಸೆಮಣೆ ಏರಲಿದ್ದಾರೆ. ಬಹುಕಾಲದ ಗೆಳೆಯ ಗೌತಮ್​ ಕಿಚ್ಲು ಜೊತೆ ಕಾಜಲ್‌ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.ಮದುವೆ ನಂತರವೂ ಚಿತ್ರರಂಗದಲ್ಲಿ ಸಕ್ರಿಯವಾಗಿರುವುದಾಗಿ ಅವರು ಭರವಸೆ ನೀಡಿದ್ದಾರೆ.   ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿರುವ ಕಾಜಲ್​, ಉದ್ಯಮಿ ಗೌತಮ್​ ಕಿಚ್ಲು ಜೊತೆ ಡೇಟಿಂಗ್‌ ಮಾಡುತ್ತಿದ್ದಾರೆ ಎಂಬ ಸುದ್ದಿ ಬಹಳ ದಿನಗಳಿಂದಲೂ ಹರಿದಾಡುತ್ತಿತ್ತು. ಕೆಲವೇ ದಿನಗಳ ಹಿಂದೆ ಅವರು ತಮ್ಮ ಮದುವೆ ಸುದ್ದಿಯನ್ನು ಅನೌನ್ಸ್​ ಮಾಡಿದ್ರು. ಈಗಾಗಲೇ ಮೆಹೆಂದಿ ಹಾಗೂ

ಇಂದು ಹಸೆಮಣೆ ಏರಲಿದ್ದಾರೆ ನಟಿ ಕಾಜಲ್ ಅಗರ್​ವಾಲ್ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ
Scroll to Top