ಕಡಬ ನ್ಯೂಸ್

ಸವಣೂರು: ಚಾಲಕನ ನಿಯಂತ್ರಣ ತಪ್ಪಿ ಪಿಕ್-ಅಪ್ ವಾಹನ ಪಲ್ಟಿ

(ನ್ಯೂಸ್ ಕಡಬ) newskadaba.com ಸವಣೂರು, ಅ. 28. ಚಾಲಕನ ನಿಯಂತ್ರಣ ತಪ್ಪಿ ಪಿಕಾಪ್‌ ಜೀಪೊಂದು ಕಾಣಿಯೂರು ಪುತ್ತೂರು ರಸ್ತೆಯ ಸವಣೂರು ಚಾಪಳ್ಳದಲ್ಲಿ ರಸ್ತೆ ಧರೆಯಿಂದ ಕೆಳಗೆ ಪಲ್ಟಿಯಾಗಿದೆ.     ಪಿಕಾಪ್‌ ಜೀಪಿನ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅದೃಷ್ಟವಶತ್‌ ನಿಂದ ಪಾರಾಗಿದ್ದಾರೆ.    

ಸವಣೂರು: ಚಾಲಕನ ನಿಯಂತ್ರಣ ತಪ್ಪಿ ಪಿಕ್-ಅಪ್ ವಾಹನ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಧರ್ಮಸ್ಥಳ: ಧರ್ಮೋತ್ಥಾನ ಟ್ರಸ್ಟ್ ಗೆ ರಾಜ್ಯೋತ್ಸವ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಉಜಿರೆ, ಅ. 28. ಹೇರಳ ಹಣ ವೆಚ್ಚಮಾಡಿ ಹೊಸ ದೇವಸ್ಥಾನಗಳ ನಿರ್ಮಾಣಕ್ಕಿಂತ ಐತಿಹಾಸಿಕ ಹಿನ್ನೆಲೆಯ ಪುರಾತನ ದೇಗುಲಗಳ ರಕ್ಷಣೆಯ ಕಾರ್ಯ ಹೆಚ್ಚು ಮಹತ್ವಪೂರ್ಣವಾದದ್ದು ಎಂಬ ಆಶಯದೊಂದಿಗೆ 1991ರಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷರಾಗಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ (ರಿ) ಪ್ರಾರಂಭಿಸಲಾಯಿತು.     ರಾಜ್ಯದ 25 ಜಿಲ್ಲೆಗಳಲ್ಲಿ ಈವರೆಗೆ ಒಟ್ಟು ರೂ. 253 ದೇವಾಲಯಗಳು ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣಾ ಕಾರ್ಯಕ್ಕಾಗಿ ರೂ. 29.34 ಕೋಟಿ ವಿನಿಯೋಗಿಸಲಾಗಿದೆ.

ಧರ್ಮಸ್ಥಳ: ಧರ್ಮೋತ್ಥಾನ ಟ್ರಸ್ಟ್ ಗೆ ರಾಜ್ಯೋತ್ಸವ ಪ್ರಶಸ್ತಿ Read More »

ಕರಾವಳಿ

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 11 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ. 28. ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ 11 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.     ಕಡಬ ತಾಲೂಕಿನ ಇಚ್ಲಂಪಾಡಿಯ 26 ವರ್ಷದ ಯುವಕ, ಚಾರ್ವಕದ 43 ವರ್ಷದ ವ್ಯಕ್ತಿ, ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ 27 ವರ್ಷದ ಮಹಿಳಾ ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 11 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ತನ್ನನ್ನು “ರಾಗಿಣಿ” ಇರುವ ಸೆಲ್ ಗೆ ವರ್ಗಾಹಿಸುವಂತೆ “ಆಡಂ ಪಾಷಾ” ಕಿರಿಕ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 28: ಸ್ಯಾಂಡಲ್‍ವುಡ್ ಮಾಡೆಲ್‍ಹಾಗೂ ನಟ ಆಡಂ ಪಾಷಾ ನನ್ನು ಈಗಾಗಲೇ ಬಂಧಿಸಲಾಗಿದೆ. ಆದರೆ ಅವರ ತಕರಾರುಗಳು ಜೈಲಿನಲ್ಲಿ ನಿಂತಿಲ್ಲ. ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ಆಡಂ ಪಾಷಾನನ್ನು ಯಾವ ಸೆಲ್ ನಲ್ಲಿ ಇರಿಸಬೆಕೇಂಬ ಚರ್ಚೆಯ ಬಳಿಕ ಕೊನೆಗೆ ಪುರುಷನೂ ಅಲ್ಲ, ಮಹಿಳೆಯೂ ಅಲ್ಲ ಎಂಬ ತೀರ್ಮಾನದ ಮೇಲೆ ವಿಶೇಷ ಸೆಲ್ ನಲ್ಲಿ ಇರಿಸಲಾಗಿತ್ತು.     ಆದರೆ ಪಾಷಾ ಮಾತ್ರ, ಇನ್ನನ್ನು ರಾಗಿಣಿ ಇರುವ ಸೆಲ್ ನಲ್ಲಿಯೇ ಇರಿಸಬೆಕೆಂದು ಪಟ್ಟು

ತನ್ನನ್ನು “ರಾಗಿಣಿ” ಇರುವ ಸೆಲ್ ಗೆ ವರ್ಗಾಹಿಸುವಂತೆ “ಆಡಂ ಪಾಷಾ” ಕಿರಿಕ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿನಲ್ಲಿ ಮತ್ತಿಬ್ಬರು ಶಂಕಿತ ಐಸಿಸ್ ಉಗ್ರರ ಸೆರೆ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಅ. 28: ಸಿಲಿಕಾನ್ ಸಿಟಿಯಲ್ಲಿ ಇತ್ತೀಚೆಗೆ ಉಗ್ರರು ಸೆರೆ ಸಿಕ್ಕ ಹಿನ್ನೆಲೆ ಎನ್​ಐಎ ಅಧಿಕಾರಿಗಳು ಥಣಿಸಂದ್ರದ ಬಳಿ ಎರಡು‌ ಮನೆಗಳ ಮೇಲೆ ದಾಳಿ ನಡೆಸಿ, ಮತ್ತಿಬ್ಬರನ್ನು ವಶಕ್ಕೆ ಪಡಿದಿದ್ದಾರೆ. ಶಂಕಿತ ಐಸಿಸ್​ ಉಗ್ರರ‌ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು, ಶೋಧಕಾರ್ಯ ಮುಂದುವರೆಸಿದ್ದಾರೆ.   ಇತ್ತೀಚೆಗೆ ಖಾಸಗಿ ಆಸ್ಪತ್ರೆಯ ವೈದ್ಯ ಡಾ. ಬ್ರೇವ್ ಎಂಬಾತನನ್ನ ಎನ್​ಐಎ ಬಂಧಿಸಿತ್ತು. ನಂತರ ಈತನ ಜೊತೆ ಸಂಪರ್ಕ ಇರುವ ಇನ್ನಿಬ್ಬರನ್ನ ಬಂಧಿಸಲಾಗಿತ್ತು.ಬಂಧಿತರಿಂದ ಸಾಕಷ್ಟು ಮಾಹಿತಿ ಕಲೆ

ಬೆಂಗಳೂರಿನಲ್ಲಿ ಮತ್ತಿಬ್ಬರು ಶಂಕಿತ ಐಸಿಸ್ ಉಗ್ರರ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನ್ಯಕೋಮಿನ ಯುವತಿಯರನ್ನು ಕರೆದೊಯ್ದ ಟ್ಯಾಕ್ಸಿ ಚಾಲಕನ ಮೇಲೆ ಹಲ್ಲೆ!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 28: ಕೊಟ್ಟಿಗೆ ಹಾರದ ಟ್ಯಾಕ್ಸಿ ಚಾಲಕ ಮಹಮ್ಮದ್ ದಿಸಾನ್ ಎಂಬುವರು ಚಾರ್ಮಾಡಿ ಗ್ರಾಮದ ಹಳ್ಳ ಸೇತುವೆ ಎಂಬಲ್ಲಿ ತನ್ನ ವಾಹನದಲ್ಲಿ ಉಜಿರೆಯಿಂದ ಕೊಟ್ಟಿಗೆ ಹಾರಕ್ಕೆ ಪ್ರಯಾಣಿಕರನ್ನು ,ಯುವತಿಯರನ್ನು ಕಳೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಕಾರು ಹಾಗೂ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕೈಯಲ್ಲಿ ಮಾರಕ ಆಯುಧಗಳನ್ನು ಹಿಡಿದು ವಾಹನಕ್ಕೆ ಅಡ್ಡಗಟ್ಟಿದ್ದಾರೆ. ವಾಹನ ಮುಂದೆ ಹೋಗದಂತೆ ಅವ್ಯಾಚ ಶಬ್ದಗಳಿಂದ ನಿಂದಿಸಿ, ಕೊಲ್ಲುವ ಬೆದರಿಕೆ ಹಾಕಿದ್ದಾರೆ, ಜತೆಗೆ ರಾಡ್, ಹೆಲ್ಮೆಟ್ ನಿಂದ ಹೊಡೆದು, ತುಳಿದು ಹಲ್ಲೆ

ಅನ್ಯಕೋಮಿನ ಯುವತಿಯರನ್ನು ಕರೆದೊಯ್ದ ಟ್ಯಾಕ್ಸಿ ಚಾಲಕನ ಮೇಲೆ ಹಲ್ಲೆ! Read More »

ಕರಾವಳಿ, ಕ್ರೈಮ್ ನ್ಯೂಸ್

ಚಕ್ರಬಡ್ಡಿ ಹಣ ನ. 5ರೊಳಗೆ ಸಾಲಗಾರರ ಖಾತೆಗೆ ವಾಪಸ್‍..!

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 28. ಕೊರೊನಾನಿಂದಾಗಿ ವಿವಿಧ ಸಾಲ ಪಡೆದವರಿಗೆ ವಿಧಿಸಲಾಗಿದ್ದ ಚಕ್ರಬಡ್ಡಿಯನ್ನು ನ.5 ರೊಳಗೆ ಅವರ ಖಾತೆಗಳಿಗೆ ವಾಪಸ್ ನೀಡುವಂತೆ ಕೇಂದ್ರ ಸರ್ಕಾರ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಸೂಚನೆ ನೀಡಿದೆ.     ಎರಡು ಕೋಟಿ ರೂ.ವರೆಗಿನ ಸಾಲ ಪಡೆದವರಿಗೆ ಈ ಸೌಲಭ್ಯ ಲಭಿಸಲಿದೆ. ಈ ಸಂಬಂಧ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ ಪ್ರಮಾಣಪತ್ರ ಸಲ್ಲಿಸಿದ್ದು, ಬ್ಯಾಂಕುಗಳು, ಸಹಕಾರಿ ಸಂಸ್ಥೆಗಳು, ಖಾಸಗಿ ಹಣಕಾಸು ಸಂಸ್ಥೆಗಳು, ವಸತಿ ಸಾಲ ನೀಡಿಕೆ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದ್ದು,

ಚಕ್ರಬಡ್ಡಿ ಹಣ ನ. 5ರೊಳಗೆ ಸಾಲಗಾರರ ಖಾತೆಗೆ ವಾಪಸ್‍..! Read More »

ರಾಷ್ಟ್ರೀಯ ನ್ಯೂಸ್

ವ್ಯಕ್ತಿಯ ಕೊಲೆಗೈದು, ಡಿಕ್ಕಿಯಲ್ಲಿಟ್ಟು ಕಾರು ಸಮೇತ ಸುಟ್ರು.!?

(ನ್ಯೂಸ್ ಕಡಬ) newskadaba.com ಹಾಸನ ಅ. 28: ಕಾರಿನ ಡಿಕ್ಕಿಯಲ್ಲಿ ಸುಟ್ಟು ಕರಕಲಾದ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಎಂ.ಹೊನ್ನೇನಹಳ್ಳಿ ಬಳಿ ನಡೆದಿದೆ. ಕಾರಿನ ಡಿಕ್ಕಿಯಲ್ಲಿ ಮೃತದೇಹ ಇಟ್ಟು ನಂತರ ಕಾರಿಗೆ ಬೆಂಕಿ ಹಾಕಲಾಗಿದೆ. ಕಾರು ಸಂಪೂರ್ಣ ಸುಟ್ಟು ಹೋಗಿದೆ. ಮೃತದೇಹ ಗುರುತು ಸಿಗದಷ್ಟು ಸುಟ್ಟು ಕರಕಲಾಗಿದೆ.ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ನಂತರ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿ ಇಟ್ಟು, ಕಾರಿಗೆ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯಾಗಿರುವವರ ಬಗ್ಗೆ ಯಾವುದೇ ಮಾಹಿತಿ

ವ್ಯಕ್ತಿಯ ಕೊಲೆಗೈದು, ಡಿಕ್ಕಿಯಲ್ಲಿಟ್ಟು ಕಾರು ಸಮೇತ ಸುಟ್ರು.!? Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ :ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದತನ ಅರೇಸ್ಟ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 28: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಅರೆಸ್ಟ್ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ನಡೆದಿದೆ. ನಾವೂರಿನ ನಿವಾಸಿ ಜನಾರ್ದನ ಪೂಜಾರಿ(42) ಎಂಬಾತ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅ.22 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಪುಸಲಾಯಿಸಿ ಕೆರದುಕೊಂಡು ಹೋಗಿ ಕುವೆಟ್ಟು ಗ್ರಾಮದ ಮದ್ದಡ್ಕ ಬಳಿಯ ಸ್ನೇಹಿತನ ರೂಮಿನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಅಪ್ರಾಪ್ತೆ ಈ ವಿಚಾರವನ್ನು ಅ.26 ರಂದು ಮನೆಯವರಿಗೆ ತಿಳಿಸಿದ್ದಾಳೆ. ತಕ್ಷಣವೇ

ಬೆಳ್ತಂಗಡಿ :ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದತನ ಅರೇಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರ್ಕಳ :ವಾಹನದ ಟಯರ್ ಸಿಡಿದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ ಅ. 28: ಕಾರ್ಕಳದಲ್ಲಿ ಕ್ವಾಲೀಸ್ ವಾಹನದ ಟಯರ್ ಸಿಡಿದು ಯುವಕ ಸಾವನ್ಬಪ್ಪಿದ ಘಟನೆ ಕುತ್ಲೂರು ಸಮೀಪದ ಕುಕ್ಕೆಜೆಯಲ್ಲಿ ನಡೆದಿದೆ. ಕೋಲಾರದ ನಸಾಪುರದ ರಾಕೇಶ್(24) ಮೃತ ದುರ್ದೈವಿ.   ಕಳೆದ ದಿನ ಕೋಲಾರದ ನರ್ಸಾಪುರದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕ್ವಾಲೀಸ್ ವಾಹನದ ಟಯರ್ ಸಿಡಿದು ವಾಹನ ಪಲ್ಟಿಯಾಗಿದೆ. ಘಟನೆಯಲ್ಲಿ ಕ್ವಾಲೀಸ್ ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿತ್ತು, ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ರಾಕೇಶ್ ಎಂಬುವರು ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.    

ಕಾರ್ಕಳ :ವಾಹನದ ಟಯರ್ ಸಿಡಿದು ಯುವಕ ಮೃತ್ಯು Read More »

ಕರಾವಳಿ
Scroll to Top