ಕಡಬ ನ್ಯೂಸ್

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ನವದೆಹಲಿ ಅ. 26: ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ ಮನ್ನಾ ಘೋಷಿಸಿದ್ದು,2 ಕೋಟಿವರೆಗಿನ ಸಾಲಕ್ಕೆ ಈ ಮನ್ನಾ ಅನ್ವಯವಾಗಲಿದೆ. ಇದರಿಂದ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ 6,500ಕೋಟಿ ರೂಪಾಯಿ ಹೊರೆಯಾಗಲಿದೆ. ಕೊರೋನಾ ಲಾಖ್ ಡೌನ್ ಅವಧಿಯ ಮಾರ್ಚ್ 1 ರಿಂದ ಅಗಸ್ಟ್ 31ರ ವರೆಗಿನ ಸಾಲದ ಕಂತು ಮರುಪಾವತಿ ಮುಂದೂಡಿಗೆ […]

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

ವಿಜಯದಶಮಿಗೆ ಶುಭ ಕೋರಿದ ಸಿಎಂ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 26: ಕೊರೋನಾ ಸೋಂಕಿನ ಭಯದ ನಡುವೆಯೇ ರಾಜ್ಯಾದ್ಯಂತ ದಸರಾ ಹಬ್ಬ ಆಚರಿಸಲಾಗುತ್ತಿದೆ. ವಿಜಯ ದಶಮಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ. “ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಹಬ್ಬದ ಹಾರ್ದಿಕ ಶುಭ ಕಾಮನೆಗಳು, ಅಧರ್ಮದ ವಿರುದ್ಧ ಧರ್ಮದ ಸಂಕೇತವೇ ವಿಜಯದಶಮಿ, ಈ ಕೋವಿಡ್ ಮಹಾಮಾರಿ ವಿರುದ್ಧ ನಮಗೆ ನಾಡದೇವತೆ ಚಾಮುಂಡೇಶ್ವರಿ ಗೆಲುವನ್ನು ಅನುಗ್ರಹಿಸಲಿ ಎಂದು ಪ್ರಾರ್ಥಿಸೋಣ” ಎಂದು ಟ್ವೀಟ್ ಮಾಡಿದ್ದಾರೆ.  

ವಿಜಯದಶಮಿಗೆ ಶುಭ ಕೋರಿದ ಸಿಎಂ ಯಡಿಯೂರಪ್ಪ Read More »

ಕರಾವಳಿ, ಕರ್ನಾಟಕ

ಮೈಸೂರು ಅರಮನೆಯಲ್ಲಿ ವಿಜಯದಶಮಿ ಆಚರಣೆ ಆರಂಭ

(ನ್ಯೂಸ್ ಕಡಬ) newskadaba.com ಮೈಸೂರು ಅ. 26: ದಸರಾ ಹಿನ್ನೆಲೆಯಲ್ಲಿ ಮೈಸೂರಿನ ಅರಮನೆಯಲ್ಲಿ ಸರಳ ವಿಜಯದಶಮಿ ಆಚರಣೆಗಳು ಆರಂಭಗೊಂಡಿದ್ದು, ಇಂದು ರಾಜವಂಶಸ್ಥರಿಂದ ಉತ್ತರ ಪೂಜೆ ನೆರವೇರಲಿದೆ. ಬೆಳಗ್ಗೆ 9.30ಕ್ಕೆ ಪಟ್ಟದ ಆನೆ, ಕುದುರೆ, ಒಂಟೆ, ಹಸುಗಳು ಆನೆ ಬಾಗಿಲಿಗೆ ಆಗಮಿಸಲಿದ್ದು, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್​ ಅವರು ವಿಜಯಯಾತ್ರೆ ಹೊರಡಲಿದ್ದಾರೆ. ಬೆಳಗ್ಗೆ 9.45ಕ್ಕೆ ಖಾಸ ಆಯುಧಗಳಿಗೆ ಉತ್ತರ ಪೂಜೆ ನಡೆಯಲಿದ್ದು, ನಂತರ ಅವುಗಳನ್ನು ಬೆಳ್ಳಿ ರಥದಲ್ಲಿ ಭುವನೇಶ್ವರಿ ದೇವಾಲಯಕ್ಕೆ ರವಾನಿಸಲಾಗುವುದು. ಭುವನೇಶ್ವರಿ ದೇವಾಲಯದಲ್ಲಿ ಯದುವೀರ ಅವರು ಬನ್ನಿಪೂಜೆ ನೆರವೇರಿಸಲಿದ್ದಾರೆ.

ಮೈಸೂರು ಅರಮನೆಯಲ್ಲಿ ವಿಜಯದಶಮಿ ಆಚರಣೆ ಆರಂಭ Read More »

ಕರ್ನಾಟಕ

ಪುತ್ತೂರು :ಕಾರು ಹಾಗೂ ಓಮ್ನಿ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಪುತ್ತೂರು ಅ. 25: ಇಂದು ಪುತ್ತೂರಿನ ಸಮೀಪದ ಭಕ್ತಕೋಡಿಯಲ್ಲಿ ಕಾರು ಹಾಗೂ ಓಮ್ನಿ ಮಧ್ಯೆ ಅಪಘಾತ ಸಂಭವಿಸಿದೆ. ಪರಿಣಾಮ ಚಾಲಕನಿಗೆ ಗಾಯವಾಗಿದೆ. ಪುತ್ತೂರು ಸಿಟಿಯ ದರ್ಬೆ- ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಭಕ್ತಕೋಡಿ ಎಂಬಲ್ಲಿ ಕಾರು ಹಾಗೂ ಓಮ್ನಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓಮ್ನಿ ಚಾಲಕನಿಗೆ ಗಂಭೀರಾ ಗಾಯವಾಗಿದೆ. ಅಪಘಾತದ ವೇಗಕ್ಕೆ ಓಮ್ನಿ ನಿಯಾ ಮುಂಬಾಗ ಜಖಂಗೊಂಡಿದೆ. ಇನ್ನು ಗಾಯಾಗೊಂಡ ಚಾಲಕನ್ನು ಚಿಕ್ಸಿತೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಪುತ್ತೂರು :ಕಾರು ಹಾಗೂ ಓಮ್ನಿ ನಡುವೆ ಅಪಘಾತ Read More »

ಕರಾವಳಿ

ಉಡುಪಿಯಲ್ಲಿ ಯುವತಿ ಅನುಮಾನಾಸ್ಪದ ಸಾವು ➤ ಆಸ್ಪತ್ರೆಗೆ ದಾಖಲಿಸಿದ ಯುವಕ ಎಸ್ಕೇಪ್

(ನ್ಯೂಸ್ ಕಡಬ) newskadaba.com ಉಡುಪಿ ಅ. 25: ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಯುವತಿಯನ್ನು ಉಡುಪಿ ತಾಲೂಕು ಕುಕ್ಕೆಹಳ್ಳಿ ನಿವಾಸಿ ರಕ್ಷಿತಾ ನಾಯಕ್ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಪ್ರಶಾಂತ್ ಕುಂದರ್ ಎಂಬಾತ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಕ್ಷಿತಾಳನ್ನು ಆಟೋದಲ್ಲಿ ಕರೆದುಕೊಂಡು ಬಂದು ಉಡುಪಿಯ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಿದ್ದಾನೆ. ವೈದ್ಯರು ಯುವತಿ ಮೃತಪಟ್ಟಿದ್ದಾಳೆ ಎಂದು ಘೋಷಿಸಿದ ಕೂಡಲೇ ಯುವಕ, ಯುವತಿಯ ಮನೆಯವರಿಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾನೆ. ಕೆಲವೇ ಕ್ಷಣಗಳಲ್ಲಿ ಯುವಕ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಉಡುಪಿ

ಉಡುಪಿಯಲ್ಲಿ ಯುವತಿ ಅನುಮಾನಾಸ್ಪದ ಸಾವು ➤ ಆಸ್ಪತ್ರೆಗೆ ದಾಖಲಿಸಿದ ಯುವಕ ಎಸ್ಕೇಪ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲಕ್ಕೆ ಬಡಿದು ಅಣ್ಣನಿಂದಲೇ ತಂಗಿಯ ಬರ್ಬರ ಹತ್ಯೆ.!

(ನ್ಯೂಸ್ ಕಡಬ) newskadaba.com  ರಾಜಸ್ಥಾನ ಅ. 25: ತಾನು ಪ್ರೀತಿ ಮಾಡಿದಾತನನ್ನು ಮದುವೆಯಾಗುತ್ತೇನೆ ಎಂದ ಸಹೋದರಿಯನ್ನು ಸಹೋದರನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಆರೋಪಿ ಸಹೋದರನನ್ನು ಪವನ್(24) ಎಂದು ಗುರುತಿಸಲಾಗಿದೆ. ಅಣ್ಣ-ತಂಗಿ ಇಬ್ಬರೂ ರಾಜಸ್ಥಾನದ ಅಲ್ವಾರ್ ಪಟ್ಟಣದ ಭಿವಾಡಿ ನಿವಾಸಿಗಳಾಗಿದ್ದಾರೆ. ಈ ಘಟನೆ ಶುಕ್ರವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಆರೋಪಿ ಏರ್ ಕಂಡೀಷನರ್ ರಿಪೇರಿ ಮಾಡುವ ಅಂಗಡಿ ಹೊಂದಿದ್ದನು. ಯುವತಿಯ ಪ್ರಿಯತಮ ವಿಷ್ಣು ಅದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಆರೋಪಿ ಪವನ್ ತನ್ನ ತಂಗಿಯ ತಲೆಯನ್ನು

ನೆಲಕ್ಕೆ ಬಡಿದು ಅಣ್ಣನಿಂದಲೇ ತಂಗಿಯ ಬರ್ಬರ ಹತ್ಯೆ.! Read More »

ಕ್ರೈಮ್ ನ್ಯೂಸ್

ಪುಷ್ಪರಥದ ಬದಲು ಚಿನ್ನದ ರಥದಲ್ಲಿ ಮೂಕಾಂಬಿಕೆಯ ಉತ್ಸವ ➤ ಅರ್ಚಕರಲ್ಲಿ ಹಾಗೂ ಭಕ್ತರಲ್ಲಿ ಅಸಮಾಧಾನ

(ನ್ಯೂಸ್ ಕಡಬ) newskadaba.com ಉಡುಪಿ ಅ. 25: ಕೊಲ್ಲೂರು ಮೂಕಾಂಬಿಕಾ ಸನ್ನಿಧಾನದಲ್ಲಿ ನವಮಿಯಂದು ನಡೆದ ಮಹಾರಥೋತ್ಸವ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ.  ಪುಷ್ಪಾಲಂಕೃತ ಮರದ ರಥದ ಬದಲು ಚಿನ್ನದ ರಥವನ್ನು ಉತ್ಸವಕ್ಕೆ ಬಳಸಿದ್ದು ಇದಕ್ಕೆ ಕಾರಣ.ಕೊಲ್ಲೂರಲ್ಲಿ ನವಮಿಗೆ ಪ್ರತಿವರ್ಷ ಉತ್ಸವಮೂರ್ತಿಯನ್ನು ಮರದ ಪುಷ್ಪಾಲಂಕೃತ ರಥದಲ್ಲಿಟ್ಟು ದೇಗುಲದ ಪ್ರಾಂಗಣದಲ್ಲಿ ಮೆರವಣಿಗೆ ಮಾಡಲಾಗುತ್ತದೆ. ಆದರೆ ಈ ಬಾರಿ ಚಿನ್ನದ ರಥದಲ್ಲಿಟ್ಟು ಮೂಕಾಂಬಿಕಾ ದೇವಿಯ ರಥೋತ್ಸವ ಮಾಡಲಾಗಿದೆ. ಇದು ಕೆಲ ಅರ್ಚಕರಿಗೆ ಅಸಮಾಧಾನ ತಂದಿದೆ. ಅಲ್ಲದೆ ಕೆಲ ಭಕ್ತರೂ ಇದಕ್ಕೆ ದನಿಗೂಡಿಸಿದ್ದಾರೆ.ಹತ್ತು ವರ್ಷದ ಹಿಂದೆ

ಪುಷ್ಪರಥದ ಬದಲು ಚಿನ್ನದ ರಥದಲ್ಲಿ ಮೂಕಾಂಬಿಕೆಯ ಉತ್ಸವ ➤ ಅರ್ಚಕರಲ್ಲಿ ಹಾಗೂ ಭಕ್ತರಲ್ಲಿ ಅಸಮಾಧಾನ Read More »

ಕರಾವಳಿ, ಕರ್ನಾಟಕ

ಬಜರಂಗದಳದಿಂದ ಭರ್ಜರಿ ಕಾರ್ಯಾಚರಣೆ ➤ 12 ಗೋವುಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 25: ಕರಾವಳಿಯಲ್ಲಿ ಮಾತ್ರ ದಿನದಿಂದ ದಿನಕ್ಕೆ ಅಕ್ರಮ ಗೋಸಾಗಾಟ ಪ್ರಕರಣಗಳು ಪತ್ತೆಯಾಗುತ್ತಲೇಯಿದೆ. ಪೊಲೀಸರು ಕ್ರಮ ಕೈಗೊಂಡರು ಕ್ಯಾರೆ ಅನ್ನದೇ ಖದೀಮರು ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಲೇಯಿದ್ದರೆ. ಇಂತಹ ಹೀನಾಯ ಕೃತ್ಯಗಳಿಗೆ ಯಾವಾಗ ಮುಕ್ತಿ ದೊರೆಯುತ್ತದೋ ತಿಳಿದಿಲ್ಲ. ಅದರಂತೆ ಕಳೆದ ದಿನ ರಾತ್ರಿವೇಳೆಯಲ್ಲಿ ಸಣ್ಣ ಟೆಂಪೋವೊಂದರಲ್ಲಿ ಹಿಂಸಾತ್ಮಕವಾಗಿ ಒಂದರ ಮೇಲೊಂದರಂತೆ ಒಟ್ಟು 12 ದನಗಳನ್ನು ಸಾಗಾಟ ಮಾಡುತ್ತಿದ್ದ ಖದೀಮರನ್ನು ಬಜರಂಗದಳದವರು ತಡೆದಿದ್ದಾರೆ. ಬಂಟ್ವಾಳದಿಂದ ಟೆಂಪೋವನ್ನು ಅಟ್ಟಿಸಿಕೊಂಡು ಬಂದ ಭಜರಂಗದಳದವರು ಉಳ್ಳಾಲದ ಕಸಾಯಿಖಾನೆಗೆ

ಬಜರಂಗದಳದಿಂದ ಭರ್ಜರಿ ಕಾರ್ಯಾಚರಣೆ ➤ 12 ಗೋವುಗಳ ರಕ್ಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಹೆಚ್‍.ಕೆ. ಶ್ರೀನಿವಾಸ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 25: ನಿರ್ಮಾಪಕ ಹೆಚ್. ಕೆ ಶ್ರೀನಿವಾಸ್ ವಿಧಿವಶರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಮೃತರು ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ. ಅನಾರೋಗ್ಯದ ಕಾರಣ ರಂಗದೊರೆ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀನಿವಾಸ್ ಹೃದಯಾಘಾತದಿಂದ ಕಳೆದ ದಿನ ನಿಧನ ಹೊಂದಿದ್ದಾರೆ. “ಮಾಯಾ ಮುಸುಕು”, “ಗುಂಡನ ಮದುವೆ”, “ಪಟ್ಟಣಕ್ಕೆ ಬಂದ ಪುಟ್ಟ”, “ಚಂದನ ಚಿಗುರು”, “ಕರುನಾಡು” ಮತ್ತು “ಗುರುಕುಲ” ಚಿತ್ರಗಳ ನಿರ್ಮಾಪಕಾರಾಗಿದ್ದ ಶ್ರೀನಿವಾಸ್ ಅವರ “ಗುರುಕುಲ” ಚಿತ್ರಕ್ಕೆ ಅತ್ಯುತ್ತಮ ಮಕ್ಕಳ ಚಿತ್ರ ರಾಜ್ಯ ಪ್ರಶಸ್ತಿ ಲಭಿಸಿತ್ತು.

ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಹೆಚ್‍.ಕೆ. ಶ್ರೀನಿವಾಸ್ ವಿಧಿವಶ Read More »

ಕರ್ನಾಟಕ

ರಾಗಿಣಿ, ಸಂಜನಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 25: ಡ್ರಗ್ಸ್ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಕಾಯ್ದಿರಿಸಿದೆ.   ಒಂದೂವರೆ ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ನಟಿಯರು ಇಂದಿನವರೆಗೂ ಜೈಲಿನಲ್ಲೇ ಕಾಲ ಕಳೆಯುತ್ತಿದ್ದಾರೆ. ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸಿರುವ ಸಿಸಿಬಿ ಇಬ್ಬರಿಗೂ ಜಾಮೀನು ನೀಡದಂತೆ ಮನವಿ ಮಾಡಿದೆ. ಜಾಮೀನು ವಿಚಾರಣೆ ಮುಂದುಡಿಕೆ ಆಗಿರುವ ಕಾರಣ ಇಬ್ಬರೂ ನಟಿಯರು ದಸರಾ ಹಬ್ಬವನ್ನು ಜೈಲಿನಲ್ಲೇ ಆಚರಿಸಿಕೊಳ್ಲಬೇಕಾದ ಸ್ಥಿತಿ

ರಾಗಿಣಿ, ಸಂಜನಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top