ಕಡಬ ನ್ಯೂಸ್

ಡ್ರಗ್ಸ್ ನಂಟಿನ ಆರೋಪ ➤ ನಶೆ ನಟಿಮಣಿಯರಿಗೆ ಜೈಲೇ ಗತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 29 :ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ನಂಟಿನ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಎನ್‍ ಡಿಪಿಎಸ್ ವಿಶೇಷ ನ್ಯಾಯಾಲಯವು ನಟಿಯರಾದ ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾಗೊಳಿಸಿದೆ. ಹೀಗಾಗಿ ನಟಿಯರಿಬ್ಬರಿಗೂ ಮತ್ತಷ್ಟು ದಿನ ಜೈಲೇ ಗತಿಯಾಗಿದೆ. ಎನ್ ಡಿಪಿಎಸ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿ.ಎಂ ಸೀನಪ್ಪ ಅವರು ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ರಾಗಿಣಿ ಮತ್ತು ಸಂಜನಾ ಹೈಕೋರ್ಟ್ ಮೊರೆಹೋಗುವ ನಿರೀಕ್ಷೆಯಿದೆ. ಮುಂದಿನ ಎರಡು ದಿನಗಳಲ್ಲಿ ನಟಿಯರ […]

ಡ್ರಗ್ಸ್ ನಂಟಿನ ಆರೋಪ ➤ ನಶೆ ನಟಿಮಣಿಯರಿಗೆ ಜೈಲೇ ಗತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಸಕ ಎಚ್ .ಕೆ ಪಾಟೀಲ್ ಅವರಿಗೆ ಕೋರೋನಾ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 28:  ಕಾಂಗ್ರೆಸ್ ನ ಹಿರಿಯ ಮುಖಂಡರು ಹಾಗೂ ಗದಗ ಶಾಸಕ ಎಚ್‌.ಕೆ.ಪಾಟೀಲ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.   ಅವರು ಬೆಂಗಳೂರ ಮನೆಯಲ್ಲಿಯೇ ಚಿಕಿತ್ಸೆಯೊಂದಿಗೆ ಕ್ವಾರಂಟಿನ್ ಆಗಿದ್ದಾರೆ. ಇತ್ತೀಚಿಗೆ ಮಹಾರಾಷ್ಟ್ರ ರಾಜ್ಯದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿ ಪಾಟೀಲ ಅಧಿಕಾರ ವಹಿಸಿಕೊಂಡಿದ್ದರು. ಕಳೆದ ಮೂರು ದಿನಗಳ ಹಿಂದೆ ಮಹಾರಾಷ್ಟ್ರ ಪ್ರವಾಸ ಕೈಗೊಂಡಿದ್ದರು ಮಹಾರಾಷ್ಟ್ರದ ಪ್ರವಾಸ ನಂಟುನಿಂದ ಪಾಸಿಟಿವ್ ದೃಢ ಪಟ್ಟಿರುವ ಶಂಕೆ ವ್ಯಕ್ತವಾಗಿದೆ. 10 ದಿನಗಳ ಕಾಲ ಮನೆಯಲ್ಲಿ ಕ್ವಾರಂಟಿನ್ ಆಗಿರುತ್ತೆನೆ

ಶಾಸಕ ಎಚ್ .ಕೆ ಪಾಟೀಲ್ ಅವರಿಗೆ ಕೋರೋನಾ ದೃಢ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ದೆವ್ವ ಬಿಡಿಸುತ್ತೇನೆಂದು ಮಗುವನ್ನೇ ಕೊಂದ ಮಾಂತ್ರಿಕ..!!

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಸೆ. 28: ಮಗುವಿಗೆ ದೆವ್ವ, ಭೂತ ಮೆಟ್ಟಿಕೊಂಡಿದೆ, ಬಿಡಿಸುತ್ತೇನೆ ಎಂದು ಮಂತ್ರವಾದಿಯೊಬ್ಬ 2 ವರ್ಷದ ಕಂದಮ್ಮಳನ್ನೇ ಬಲಿ ಪಡೆದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೃತ ಮಗು ಪೂರ್ಣಿಕಾ ಎಂದು ಗುರುತಿಸಲಾಗಿದೆ. ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಅಜ್ಕಿಕ್ಯಾತನಹಳ್ಳಿ ನಿವಾಸಿಗಳಾದ ಪ್ರವೀಣ್ ಹಾಗೂ ಬೇಬಿ ದಂಪತಿಯ ಪುತ್ರಿ. 2 ವರ್ಷದ ಪೂರ್ಣಿಕಾ ಆಗಾಗ ಬೆಚ್ಚಿ ಬೀಳುತ್ತಿದ್ದಳಂತೆ. ಹಾಗಾಗಿ ಆಕೆಯನ್ನು ಸ್ಥಳೀಯ ಮಂತ್ರವಾದಿ ರಾಕೇಶ್ ಎಂಬಾತನ ಬಳಿ ಕರೆದುಕೊಂಡು ಹೋಗಿದ್ದಾರೆ. ಮಂತ್ರವಾದಿ ರಾಕೇಶ್, ಮಗುಗೆ ದೆವ್ವ

ದೆವ್ವ ಬಿಡಿಸುತ್ತೇನೆಂದು ಮಗುವನ್ನೇ ಕೊಂದ ಮಾಂತ್ರಿಕ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ➤ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 28:  ಇಂದು ಭೂ ಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತ ಪಡಿಸಿ ರಾಜ್ಯದ ಹಲವೆಡೆ ರೈತಾಪಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ.       ಅದರಂತೆ ಕಾರ್ಮಿಕ ಸಂಘದಿಂದ ಪ್ರತಿಭಟನೆ ಇಂದು ಸುಳ್ಯದಲ್ಲಿ ಬೃಹತ್ ಮಟ್ಟದಲ್ಲಿ ನಡೆಯುತ್ತಿದೆ.  ಸುಳ್ಯ ಜ್ಯೋತಿ ಸರ್ಕಲ್ ಬಳಿ ಸೇರಿದ ವಿವಿಧ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮತ್ತು ರೈತರು ಮೆರವಣಿಗೆ ನಡೆಸುತ್ತಿದ್ದಾರೆ.    

ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ➤ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಕನ್ನಡದ ಖ್ಯಾತ ವಿಮರ್ಶಕ ಜಿ.ಎಸ್.ಆಮೂರ ವಿಧಿವಶ

(ನ್ಯೂಸ್ ಕಡಬ) newskadaba.com ಧಾರವಾಡ, ಸೆ. 28:  ಹಿರಿಯ ಸಾಹಿತಿ, ವಿಮರ್ಶಕ ಡಾಕ್ಟರ್ ಜಿ.ಎಸ್.ಆಮೂರ ಅವರು ಸೋಮವಾರ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಅವರು ಬೆಳಗ್ಗೆ 5ಗಂಟೆಗೆ ನಸುಕಿನಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಜಿ.ಎಸ್. ಆಮೂರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಸೇರಿ, ಅನೇಕ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.ಡಾ: ಜಿ.ಎಸ್.ಅಮೂರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ‘ಅಧ್ಯಾಪಕರಾಗಿ ವೃತ್ತಿಜೀವನ ಪ್ರಾರಂಭಿಸಿದ ಅಮೂರ ಅವರು , ಆಗಲೇ ‘ಕಾಮಿಡಿಯ

ಕನ್ನಡದ ಖ್ಯಾತ ವಿಮರ್ಶಕ ಜಿ.ಎಸ್.ಆಮೂರ ವಿಧಿವಶ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಾರ್ಕಳ : ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ.!!

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 28:  ಕಾರ್ಕಳ ತಾಲ್ಲೂಕಿನ ಚಿಕ್ಕಲಬೆಟ್ಟು ಗ್ರಾಮದಲ್ಲಿ ಭಾನುವಾರ ಉದ್ಯಮಿ ಸುನೀಲ್‌ ಶೆಟ್ಟಿ (45) ಎಂಬುವರು ನಾಡ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುಣೆಯಲ್ಲಿ ಹೋಟೆಲ್‌ ಉದ್ಯಮ ನಡೆಸುತ್ತಿದ್ದ ಸುನೀಲ್ ಶೆಟ್ಟಿ ಲಾಕ್‌ಡೌನ್ ಬಳಿಕ ವ್ಯವಹಾರದಲ್ಲಿ ತೀವ್ರ ನಷ್ಟ ಅನುಭವಿಸಿದ್ದರು. ಸಾಲದ ಹೊರೆ ಕೂಡ ಹೆಚ್ಚಾಗಿತ್ತು. ಆರ್ಥಿಕ ಸಂಕಷ್ಟದಿಂದ ಮನನೊಂದು ಮನೆಯ ಸಮೀಪದ ಗದ್ದೆಯಲ್ಲಿ ಗುಂಡು ಹಾರಿಸಿಕೊಂಡಿದ್ದಾರೆ . ಸೋಮವಾರ ಪುಣೆಗೆ ತೆರಳುವುದಾಗಿ ಮನೆಯವರಿಗೆ ತಿಳಿಸಿದ್ದ ಸುನೀಲ್ ಶೆಟ್ಟಿ ಅಷ್ಟರಲ್ಲಿ

ಕಾರ್ಕಳ : ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ.!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 28:  ಕರ್ನಾಟಕ ಬಂದ್ ಗೆ ದಕ್ಷಿಣ ಕನ್ನಡದಲ್ಲಿ ನೀರಸ ಪ್ರತಿಕ್ರಿಯೆ ದೊರೆತಿದ್ದು, ಎಂದಿನಂತೆ ಖಾಸಗಿ ಬಸ್‌ಗಳು ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳು, ಆಟೋಗಳು ರಸ್ತೆಗಿಳಿದಿವೆ. ಬಂದರು ಪ್ರದೇಶದಲ್ಲಿ ವ್ಯಾಪಾರ-ವಹಿವಾಟುಗಳು ಆರಂಭವಾಗಿವೆ.   ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ನಗರದಾದ್ಯಂತ 300 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.ಬಲವಂತವಾಗಿ ಬಂದ್ ನಡೆಸಲು ಮುಂದಾದವರಿಗೆ ಮತ್ತು ಕೋವಿಡ್ 19 ನಿಯಮಾವಳಿ ಉಲ್ಲಂಘಿಸಿದವರಿಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ Read More »

ಕರಾವಳಿ, ಕರ್ನಾಟಕ

ಗುತ್ತಿಗಾರು : ಅಕ್ರಮ ಗೋ ಸಾಗಾಟ, ಆರೋಪಿಗಳು ಪೊಲೀಸರ ವಶಕ್ಕೆ.!!

(ನ್ಯೂಸ್ ಕಡಬ) newskadaba.com ಗುತ್ತಿಗಾರು , ಸೆ. 28:  ಗುತ್ತಿಗಾರಿನ ಕಡ್ತಲ್ ಕಜೆ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಕಳೆದ ದಿನ ರಾತ್ರಿ ಪತ್ತೆ ಹಚ್ಚಲಾಗಿದೆ. ಪಿಕಪ್ ವಾಹನದಲ್ಲಿ ಮೂರು ಗೋವುಗಳನ್ನು ಸಾಗಿಸಲಾಗುತಿತ್ತು. ಕೊಲ್ಲಮೊಗ್ರದಿಂದ ತರಲಾಗಿತ್ತೆನ್ನಲಾಗಿದೆ. ಗುತ್ತಿಗಾರಿನ ಭಜರಂಗದಳದ ಭಗತ್ ಸಿಂಗ್ ಶಾಖೆ ಹಾಗೂ ಹಿಂದೂ ಜಾಗರಣ ವೇದಿಕೆಯವರು ತಡೆ ಹಿಡಿದು ವಿಚಾರಿಸಿದಾಗ ಯಾವುದೇ ದಾಖಲೆಗಳಿಲ್ಲದ್ದು ಕಂಡು ಬಂದಿದೆ. ಬಳಿಕೆ ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿ ನೀಡಿ, ಗೋವು ಮತ್ತು ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಲಾಗಿದೆ ತಿಳಿದು

ಗುತ್ತಿಗಾರು : ಅಕ್ರಮ ಗೋ ಸಾಗಾಟ, ಆರೋಪಿಗಳು ಪೊಲೀಸರ ವಶಕ್ಕೆ.!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ತುಳುನಾಡಿನ ದೈವ ಕೊರಗಜ್ಜನ ಆಶೀರ್ವಾದ ಪಡೆದ ಡಿ ಬಾಸ್

(ನ್ಯೂಸ್ ಕಡಬ) newskadaba.com ಮಂಗಳೂರು,  ಸೆ. 27:  ತುಳುನಾಡಿನ ಅತ್ಯಂತ ಕಾರ್ಣಿಕ ಹಾಗೂ ಪ್ರಸಿದ್ಧ ದೈವಗಳಲ್ಲಿ ಒಂದಾದ ಕೊರಗಜ್ಜನ ದರ್ಶನವನ್ನು ಕನ್ನಡ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಪಡೆದುಕೊಂಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದೆ. ಹೇಳಿ ಕೇಳಿ ಡಿ ಬಾಸ್ ಅಪ್ಪಟ್ಟ ಪ್ರಾಣಿ ಪೇಮಿ. ಯಾವಾಗಲು ತಮ್ಮ ಮುದ್ದಿನ ಕುದುರೆಗಳ ಜೊತೆ ಕಾಲ ಕಳೆಯುತ್ತ, ಕಾಡು ಮೇಡು ಸುತ್ತುತ, ಹೊಸ ಹೊಸ ಸ್ಥಳಗಳಿಗೆ ಭೇಟಿ ನೀಡುವ ದರ್ಶನ್ ರವರು, ಕೆಲ ತಿಂಗಳ

ಮಂಗಳೂರು: ತುಳುನಾಡಿನ ದೈವ ಕೊರಗಜ್ಜನ ಆಶೀರ್ವಾದ ಪಡೆದ ಡಿ ಬಾಸ್ Read More »

ಕರಾವಳಿ, ಕರ್ನಾಟಕ

ಕೋಡಿಂಬಾಳ: ದಿ.ಹರೀಶ್ ಮಜ್ಜಾರು ಸ್ಮರಣಾರ್ಥ ಸೋಲಾರ್‌ ಬೀದಿ ದೀಪ ಅಳವಡಿಕೆ‌

(ನ್ಯೂಸ್ ಕಡಬ) newskadaba.com ಕೋಡಿಂಬಾಳ, ಸೆ.27: ಕೋಡಿಂಬಾಳ ಗ್ರಾಮದ ಮಜ್ಜಾರು ನಿವಾಸಿ ಹರೀಶ್‌ ರವರು ಅಕಾಲಿಕವಾಗಿ  2018  ಸೆ.27 ರಂದು ವಿಧಿವಶರಾಗಿದ್ದರು. ಇವರ ಸ್ಮರಣಾರ್ಥ ಮಜ್ಜಾರು ಕ್ರಾಸ್‌ ಬಳಿ ಬಂಧು-ಬಳಗದವರು ಹಾಗೂ ಮಿತ್ರರಿಂದ ಕೊಡುಗೆಯಾಗಿ ನೀಡಲಾಗಿದ್ದ ಸೋಲಾರ್‌ ಬೀದಿ ದೀಪವನ್ನು ಇಂದು ಅಳವಡಿಸಲಾಯಿತು.   ಈ ಸಂದರ್ಭದಲ್ಲಿ ಮಾತನಾಡಿದ ಪ್ರಶಾಂತ್‌ ಗುಂಡಿಮಜಲು ಅವರು, ಹರೀಶ್‌ ಮಜ್ಜಾರು ಅವರು ಸಂಘಟನೆಯಲ್ಲಿ ತೊಡಗಿಸಿಕೊಂಡು ಉತ್ತಮ ನಡೆನುಡಿಗಳಿಂದ ಸಮಾಜಮುಖಿಯಾಗಿ ಕೆಲಸ ನಿರ್ವಹಿಸಿ ಕುಟುಂಬವರ್ಗ, ಸಮಾಜದಲ್ಲಿ ಆದರ್ಶವಾಗಿ ಬೆಳೆದುಬಂದವರು. ಇವರು ವಿಧಿವಶರಾಗಿದ್ದು ನಮಗೆಲ್ಲ

ಕೋಡಿಂಬಾಳ: ದಿ.ಹರೀಶ್ ಮಜ್ಜಾರು ಸ್ಮರಣಾರ್ಥ ಸೋಲಾರ್‌ ಬೀದಿ ದೀಪ ಅಳವಡಿಕೆ‌ Read More »

ಕರಾವಳಿ
Scroll to Top