ಕಡಬ ನ್ಯೂಸ್

ಕೋವಿಡ್‌ಗೆ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25:  ಕೊರೊನಾದಿಂದ ಬೀದರ್ ನ ಬಸವಕಲ್ಯಾಣದ ಶಾಸಕ ಬಿ.ನಾರಾಯಣರಾವ್ ಅವರು ತಮ್ಮ 65 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮಧಾಹ್ನ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ.   ಅಗಸ್ಟ್ 31 ರಂದು ನಾರಾಯಣ್ ರಾವ್ ಅವರಿಗೆ ಕೊರೊನಾ ಸೋಂಕು ಇರುವುದು ಧೃಡಪಟ್ಟಿತ್ತು.ತದನಂತರ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ದಿನ ವಿಧಿವಶರಾಗಿದ್ದಾರೆ. ಶಾಸಕರ ನಿಧನಕ್ಕೆ ಸಿಎಂ […]

ಕೋವಿಡ್‌ಗೆ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ವಿಧಿವಶ Read More »

ಕರಾವಳಿ

ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ.!!

(ನ್ಯೂಸ್ ಕಡಬ) newskadaba.com ಚೆನ್ನೈ , ಸೆ. 25:  ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದೆ.       ಕೊರೊನಾ ಹಿನ್ನಲೆ ಅಗಸ್ಟ್ 5 ರಂದು ಚೆನೈ ನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ ಎಸ್ ಪಿಬಿ ಅವರ ಆರೋಗ್ಯ ಹದಗೆಟ್ಟ ಪರಿಣಾಮ ಅವರನ್ನು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ನಂತರ ಚಿಕಿತ್ಸೆಗೆ ಸ್ಪಂದಿಸಿದ ಅವರು ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದರು.

ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ.!! Read More »

ಕರಾವಳಿ

ಡ್ರಗ್ಸ್‌‌‌ ಪ್ರಕರಣ : ನಿರೂಪಕಿ ಅನುಶ್ರೀಗೆ ಸಿಸಿಬಿ ನೋಟಿಸ್‌‌..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24:   ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಿರೂಪಕಿ, ನಟಿ ಅನುಶ್ರೀ ಅವರಿಗೆ ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ ಎಂದು ವರದಿಯಾಗಿದೆ.     ನಿರೂಪಕಿ ಅನುಶ್ರೀ ಹೆಸರು ಡ್ರಗ್ಸ್​ ಉರುಳಿನಲ್ಲಿ ಸಿಲುಕಿದ್ದು, ವಿಚಾರಣೆಗೆ ಹಾಜರಾಗುವಂತೆ ಮಂಗಳೂರು ಸಿಸಿಬಿ ಪೊಲೀಸರು ವಾಟ್ಸ್‌ಆಯಪ್​ ಮೂಲಕ ನೋಟಿಸ್​ ಜಾರಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಡ್ರಗ್ಸ್‌‌‌ ಪ್ರಕರಣ : ನಿರೂಪಕಿ ಅನುಶ್ರೀಗೆ ಸಿಸಿಬಿ ನೋಟಿಸ್‌‌..!! Read More »

ಕರಾವಳಿ, ಕರ್ನಾಟಕ

ಉಡುಪಿ : ನಡು ರಸ್ತೆಯಲ್ಲೇ ವ್ಯಕ್ತಿಯ ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 24:    ಸಂಬಂಧಿಕರ ಮನೆಗೆ ತೆರಳಿದ್ದ ಕಾರ್ಕಳ ತಾಲೂಕು ಇನ್ನಾ ಗ್ರಾಮದ ಕಿಶನ್ ಹೆಗ್ಡೆ ಎಂಬುವವರನ್ನು ಹಿರಿಯಡ್ಕ ಸಮೀಪದಲ್ಲಿ ಇಂದು (ಸೆ.24) ದುಷ್ಕರ್ಮಿಗಳ ತಂಡವೊಂದು ,ನಡು ರಸ್ತೆಯಲ್ಲೆ ಹಾಡಹಗಲೇ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ.   ಕೊಲೆಗೆ ನಿಖರವಾದ ಕಾರಣ ಏನೆಂಬುವುದು ಇನ್ನಷ್ಟೆ ತಿಳಿದು ಬರಬೇಕಿದೆ, ಘಟನಾ ಸ್ಥಳಕ್ಕೆ ಹಿರಿಯಡ್ಕ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.  

ಉಡುಪಿ : ನಡು ರಸ್ತೆಯಲ್ಲೇ ವ್ಯಕ್ತಿಯ ಬರ್ಬರ ಹತ್ಯೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಂಚೆ ಕಛೇರಿಯಿಂದ ಮನೆ ಬಾಗಿಲಿಗೆ ಬ್ಯಾಂಕಿಂಗ್‌ ➤1 ನಿಮಿಷದಲ್ಲಿ ಮನೆ ಬಾಗಿಲಲ್ಲೇ ಖಾತೆ ಓಪನ್.!

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.24: ಭಾರತ ಸರಕಾರ ಅಂಚೆ ಕಛೇರಿಯಿಂದ ಬ್ಯಾಂಕಿಂಗ್‌ ಮನೆ ಬಾಗಿಲಿಗೆ ಅಭಿಯಾನ ಎಲ್ಲಾ ಅಂಚೆ ಕಛೇರಿಗಳಲ್ಲೂ ಸೆ.29 ರಂದು ನಡೆಯಲಿದೆ.   ಸ್ಥಳೀಯ ಅಂಚೆ ಕಛೇರಿಯ ಅಂಚೆ ವಿತರಕರ ಮೂಲಕ 1 ನಿಮಿಷದಲ್ಲಿ ಮನೆ ಬಾಗಿಲಲ್ಲೇ ಖಾತೆ ತೆರೆಯುವ ಅಭಿಯಾನ ಇದಾಗಿದ್ದು, ಕಾಗದ ರಹಿತ, ಪಾಸ್ಬುಕ್‌ ರಹಿತ ಪೂರ್ಣ ಡಿಜಿಟಲ್‌ ಖಾತೆ ಹಾಗೂ ಶೂನ್ಯ ಮೊತ್ತದ ಖಾತೆಗೆ ಇದರಲ್ಲಿ ಅವಕಾಶವಿದೆ. ಖಾತೆ ತೆರೆಯುವವರ ಆಧಾರ್‌ ಕಾರ್ಡ್‌ ಹಾಗೂ ಮೊಬೈಲ್‌ ಸಂಖ್ಯೆ ಹೊಂದಿರಬೇಕು.

ಅಂಚೆ ಕಛೇರಿಯಿಂದ ಮನೆ ಬಾಗಿಲಿಗೆ ಬ್ಯಾಂಕಿಂಗ್‌ ➤1 ನಿಮಿಷದಲ್ಲಿ ಮನೆ ಬಾಗಿಲಲ್ಲೇ ಖಾತೆ ಓಪನ್.! Read More »

ಕರಾವಳಿ, ಕರ್ನಾಟಕ

ಪಂಜ : ಔಷಧಕ್ಕಾಗಿ ತೆರಳಿದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.24:  ವ್ಯಕ್ತಿಯೊಬ್ಬರು ಮುಂಜಾನೆ ಉಜಿರೆ ಖಾಸಗಿ ಆಸ್ಪತ್ರೆಗೆ ಔಷಧಕ್ಕಾಗಿ ತೆರಳಿದ ಪಂಜದ ಕೃಷ್ಣ ನಗರದ ನಿವಾಸಿ ದಿ. ಶೇಷಪ್ಪ ಆಚಾರ್ಯರವರ ಪುತ್ರ ವಸಂತ ಆಚಾರ್ಯರವರು ಆಸ್ಪತ್ರೆಯಲ್ಲಿಯೇ ಹೃದಯಾಘಾತದಿಂದ ನಿಧನರಾದ ಘಟನೆ ಇಂದು ಸಂಭವಿಸಿದೆ.     ಮುಂಜಾನೆ ಉಜಿರೆ ಖಾಸಗಿ ಆಸ್ಪತ್ರೆಗೆ ಔಷಧಕ್ಕಾಗಿ ತೆರಳಿ, ಅಲ್ಲಿ ತಲುಪಿ ಸ್ವಲ್ಪ ಹೊತ್ತಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.ಎಂದು ತಿಳಿದುಬಂದಿದೆ    

ಪಂಜ : ಔಷಧಕ್ಕಾಗಿ ತೆರಳಿದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು Read More »

ಕರಾವಳಿ

ಮತ್ತೆ ಕರ್ನಾಟಕದಲ್ಲಿ ಲಾಕ್ ಡೌನ್ ಇಲ್ಲ ➤ ಡಿಸಿಎಂ ಅಶ್ವತ್ಥ್ ನಾರಾಯಣ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 24:  ಕೊರೋನಾ ಸೋಂಕಿನ ಪ್ರಕರಣಗಳು ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವ ಕಾರಣ, ಕಳೆದ ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಸಿಎಂ ಯಡಿಯೂರಪ್ಪ ಜೊತೆಗೆ ವೀಡಿಯೋ ಕಾನ್ಫೆರೆನ್ಸ್ ನಲ್ಲಿ ಕೊರೋನಾ ಕಂಟ್ರೋಲ್ ಗಾಗಿ ಲಾಕ್ ಡೌನ್ ಸಲಹೆ ನೀಡಿದ್ದರು. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಆಗಲಿದೆ ಎನ್ನುವ ಕುರಿತಂತೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥ್ ನಾರಾಯಣ್, ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡೋದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.  

ಮತ್ತೆ ಕರ್ನಾಟಕದಲ್ಲಿ ಲಾಕ್ ಡೌನ್ ಇಲ್ಲ ➤ ಡಿಸಿಎಂ ಅಶ್ವತ್ಥ್ ನಾರಾಯಣ್ ಸ್ಪಷ್ಟನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ದೆಹಲಿಯಲ್ಲಿ ಇಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಅಂತ್ಯಕ್ರಿಯೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 24: ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು 66ನೇ ವಯಸ್ಸಿನಲ್ಲಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಕೋವಿಡ್‌ನಿಂದ ನವದೆಹಲಿಯ ಏಮ್ಸ್‌ ಅಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದರು.   ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾಲ್ಕನೇ ಬಾರಿ ಸಂಸದರಾಗಿದ್ದ ಸುರೇಶ್ ಅಂಗಡಿ ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಮೃತಪಟ್ಟ ಮೊದಲ ಕೇಂದ್ರ ಸಚಿವರು. ಗೈಡ್​ಲೈನ್ಸ್​ ಪ್ರಕಾರ ಕೊರೊನಾ ಸೋಂಕಿಗೀಡಾಗಿ ನಿಧನರಾದವರ ಮೃತದೇಹವನ್ನ ಒಂದು ರಾಜ್ಯದಿಂದ

ದೆಹಲಿಯಲ್ಲಿ ಇಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಅಂತ್ಯಕ್ರಿಯೆ Read More »

ಕರಾವಳಿ

ಹಿರಿಯ ನಟ ರಾಕ್​ಲೈನ್ ಸುಧಾಕರ್ ನಿಧನ..!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ. 24:  ತಮ್ಮ ವಿಶಿಷ್ಟ ಕಾಮಿಡಿ ನಟನೆಯ ಮೂಲಕ ಸ್ಯಾಂಡಲ್ ವುಟ್ ಚಿತ್ರರಂಗದಲ್ಲಿ ನಟರಾಗಿ ಗುರ್ತಿಸಿಕೊಂಡಿದ್ದಂತ ನಟ ರಾಕ್ ಲೈನ್ ಸುಧಾಕರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.   ಶೂಟಿಂಗ್​ ಸಮಯದಲ್ಲೇ ಹೃದಯಾಘತ ಸಂಭವಿಸಿದ್ದರಿಂದ ಹಿರಿಯ ನಟ ರಾಕ್​ಲೈನ್​ ಸುಧಾಕರ್​ ಮೃತಪಟ್ಟಿದ್ದಾರೆ. ಕನ್ನಡದಲ್ಲಿ ಸಾಕಷ್ಟು ಪೋಷಕ ಪಾತ್ರ ಹಾಗೂ ಕಾಮಿಡಿ ಪಾತ್ರಗಳಲ್ಲಿ ಅವರು ನಟಿಸಿದ್ದರು. ಅವರ ಅಗಲಿಕೆ ಇಡೀ ಚಿತ್ರರಂಗವೇ ಶೋಕ ವ್ಯಕ್ತಪಡಿಸಿದೆ. ಕೆಲ ದಿನಗಳ ಹಿಂದಷ್ಟೇ ಸುಧಾಕರ್​ಗೆ ಕೊರೋನಾ ಸೋಂಕು ತಗುಲಿತ್ತು. ಇದಕ್ಕಾಗಿ ಅವರು

ಹಿರಿಯ ನಟ ರಾಕ್​ಲೈನ್ ಸುಧಾಕರ್ ನಿಧನ..!! Read More »

ಕರ್ನಾಟಕ

ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ನೆಲ್ಯಾಡಿ ➤ ಪತ್ನಿ, ಚಿಕ್ಕಮ್ಮ ಮೇಲೆ ಆಸಿಡ್ ದಾಳಿ,ಆರೋಪಿ ಪರಾರಿ..!!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 24: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ಎರಚಿದ ಘಟನೆ ಕಡಬ ತಾಲೂಕಿನ ನೆಲ್ಯಾಡಿಯ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಸ್ಥಳೀಯ ನಿವಾಸಿ 38 ವರುಷ ಪ್ರಾಯದ ಬಿಜು ಎಂಬಾತ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ನೆಲ್ಯಾಡಿ ನಿವಾಸಿ ಬಿಜು ತನ್ನ ಪತ್ನಿ ಶೈನಿ ಹಾಗೂ ಪತ್ನಿಯ ಚಿಕ್ಕಮ್ಮ ಝಾನ್ಸಿ ಮೇಲೆ ಆಸಿಡ್ ದಾಳಿ ನಡೆಸಿದ ಪರಿಣಾಮ

ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ನೆಲ್ಯಾಡಿ ➤ ಪತ್ನಿ, ಚಿಕ್ಕಮ್ಮ ಮೇಲೆ ಆಸಿಡ್ ದಾಳಿ,ಆರೋಪಿ ಪರಾರಿ..!! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top