ಕಡಬ ನ್ಯೂಸ್

ಅನೈತಿಕ ಸಂಬಂಧ ಆರೋಪ ➤ ಪತಿ ವಿರುದ್ಧ ಪತ್ನಿಯಿಂದಲೇ ದೂರು..!!

(ನ್ಯೂಸ್ ಕಡಬ) newskadaba.com ಮುಲ್ಕಿ, ಸೆ. 15. ಸರಕಾರಿ ಹಾಸ್ಟೇಲ್ ನಲ್ಲಿ ಅಡುಗೆ ಕೆಲಸದಲ್ಲಿರುವವನ ಅಕ್ರಮ ಸಂಬಂಧದ ಬಗ್ಗೆ ಮತ್ತು ಸರಕಾರಿ ಸ್ವತ್ತುಗಳನೇ ಮಾರಾಟಕ್ಕೆ ಸಂಬಂಧಿಸಿದಂತೆ ಪಡು ಪಣಂಬೂರು ಗ್ರಾಮದ ನಿವಾಸಿ ಆತನ ಪತ್ನಿಯೇ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.   ಮುಲ್ಕಿಯಲ್ಲಿರುವ ಸರ್ಕಾರಿ ಹಾಸ್ಟೆಲ್ನಲ್ಲಿ ನೌಕರನಾಗಿರುವ ಈತ ಸರ್ಕಾರಿ ಹಾಸ್ಟೆಲ್ ಮಕ್ಕಳಿಗೆ ನೀಡಿರುವ ಹೊದಿಕೆಗಳನ್ನು ಕದ್ದೊಯ್ದು ಅಕ್ರಮ ಸಂಬಂಧ ಹೊಂದಿರುವ ಮಹಿಳೆಗೆ ನೀಡುತ್ತಿದ್ದ. ಕೆಲವನ್ನು ಮಾರಾಟ ಮಾಡಿದ್ದು ಮನೆಗೂ ತಂದಿದ್ದಾನೆ. ಇದರ ಜೊತೆಗೆ ತನಗೆ […]

ಅನೈತಿಕ ಸಂಬಂಧ ಆರೋಪ ➤ ಪತಿ ವಿರುದ್ಧ ಪತ್ನಿಯಿಂದಲೇ ದೂರು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶ್ರೀ ಕ್ಷೇತ್ರ ಪಣೋಲಿಬೈಲು ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ರಶ್ಮಿ ಎಸ್. ಆರ್ ನೇಮಕ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.15: ತುಳುನಾಡಿನ ಪ್ರಸಿದ್ಧ ಐತಿಹಾಸಿಕ ಹಿನ್ನೆಲೆಯುಳ್ಳ ಕಾರಣಿಕದ ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್ ಅವರನ್ನು ನೇಮಕ ಮಾಡಲಾಗಿದೆ.     ಬಂಟ್ವಾಳ ವ್ಯಾಪ್ತಿಯಲ್ಲಿ ಪ್ರಾಮಾಣಿಕ ಅಧಿಕಾರಿ ಎಂದೇ ಹೆಸರು ಪಡೆದಿದ್ದ ರಶ್ಮಿ ಎಸ್. ಆರ್ ರವರ ಸಾಧನೆ ಅಮೋಘ.  ಜನರ ಮೆಚ್ಚುಗೆಗೆ ಪಾತ್ರವಾಗಿರುವ ತಹಶೀಲ್ದಾರ್ ರಶ್ಮಿ ಎಸ್. ಆರ್ ಅವರನ್ನು ಧಾರ್ಮಿಕ ದತ್ತಿ ಇಲಾಖೆ ನೇಮಕ ಮಾಡಿ ಆದೇಶ ನೀಡಿದೆ.

ಶ್ರೀ ಕ್ಷೇತ್ರ ಪಣೋಲಿಬೈಲು ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ರಶ್ಮಿ ಎಸ್. ಆರ್ ನೇಮಕ Read More »

ಕರಾವಳಿ, ಕರ್ನಾಟಕ

ಸ್ವಿಫ್ಟ್ ಕಾರು -​​ಲಾರಿ ನಡುವೆ ಭೀಕರ ಅಪಘಾತ ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಸೆ. 15. ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿರುವ ದುರ್ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಕಾರು ಮತ್ತು ಲಾರಿ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದವು.     ತಾಲೂಕಿನ ದೊಡ್ಡಪೈಲಗುರ್ಕಿಯ ರಸ್ತೆ ಹುಬ್ಬಿನಲ್ಲಿ ಈ ಆಕ್ಸಿಡೆಂಟ್ ನಡೆದಿದೆ. ಡಿಕ್ಕಿಯ ರಭಸಕ್ಕೆ ತಾಯಿ ಹಾಗೂ ಇಬ್ಬರು ಗಂಡು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಕಾರಿನಲ್ಲಿದ್ದ ಮತ್ತೋರ್ವ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..  

ಸ್ವಿಫ್ಟ್ ಕಾರು -​​ಲಾರಿ ನಡುವೆ ಭೀಕರ ಅಪಘಾತ ➤ ಮೂವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಡಿ.ಕೆ. ಶಿವಕುಮಾರ್ ಪುತ್ರಿಯ ಮದುವೆಗೆ ಡೇಟ್ ಫಿಕ್ಸ್

 (ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 15.  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಮತ್ತು ದಿವಂಗತ ಸಿದ್ಧಾರ್ಥ್ ಹೆಗಡೆ ಪುತ್ರ ಅಮರ್ತ್ಯ ಹೆಗಡೆ ಮದುವೆಗೆ ಡೇಟ್ ಫಿಕ್ಸ್ ಆಗಿದ್ದು, ಫೆ. 24, 2021 ರಂದು ಮದುವೆ ನಡೆಸಲು ಎರಡೂ ಕುಟುಂಬಗಳು ನಿರ್ಧರಿಸಿವೆ ಎಂದು ತಿಳಿದುಬಂದಿದೆ. ಕಳೆದ ಏಪ್ರಿಲ್ 15 ರಂದು ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಸರಳ ಕಾರ್ಯಕ್ರಮದಲ್ಲಿ ಐಶ್ವರ್ಯಾ ಮತ್ತು ಅಮರ್ತ್ಯ ಉಂಗುರ ಬದಲಾಯಿಸಿಕೊಂಡಿದ್ದರು. ನವೆಂಬರ್ ನಲ್ಲಿ ಇಬ್ಬರ ನಿಶ್ಚಿತಾರ್ಥ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಪುತ್ರಿಯ ಮದುವೆಗೆ ಡೇಟ್ ಫಿಕ್ಸ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ರಮಾನಾಥ ರೈ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.14:  ಬಂಟ್ವಾಳ ಬ್ಲಾಕ್ ಕಾಂಗ್ರೆಸ್, ಬಂಟ್ವಾಳ ಯುವ ಕಾಂಗ್ರೆಸ್, ಮತ್ತು ಇರ್ವತ್ತೂರು ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆ ಇವರ ಸಹಕಾರದೊಂದಿಗೆ ಮಾಜಿ ಸಚಿವ ಬಿ.ರಮಾನಾಥ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಲಾಬಾಗಿಲು ರಝಾನಗರದ ಬುರೂಜ್ ಆಂಗ್ಲ ಮಾದ್ಯಮ ಪ್ರೌಡ ಶಾಲಾ ಸಭಾಂಗಣದಲ್ಲಿ ರವಿವಾರ ರಕ್ತದಾನ ಶಿಬಿರ ನಡೆಯಿತು.   ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಮನುಷ್ಯನ ಪ್ರಾಣವನ್ನು ಕಾಪಾಡುವಂತಹ ರಕ್ತದಾನವು

ರಮಾನಾಥ ರೈ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ Read More »

ಕರ್ನಾಟಕ

ರಸ್ತೆ ದಾಟುತ್ತಿದ್ದ ವೇಳೆ ಬೈಕ್‌ ಡಿಕ್ಕಿ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.14: ಬಸ್ಸಿನಿಂದ ಇಳಿದ ಮಹಿಳೆ ಅಡ್ಯಾರ್ ನಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಫರಂಗಿಪೇಟೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ಅಡ್ಯಾರು ಕಟ್ಟೆ ಎಂಬಲ್ಲಿ ನಡೆದಿದೆ.     ಮೃತ ಮಹಿಳೆಯನ್ನು ಅಳಪೆ ಪಡೀಲ್‌ ನಿವಾಸಿ 48 ವರ್ಷ ಪ್ರಾಯದ ಮಾಲತಿ ಎಂದು ಗುರುತಿಸಲಾಗಿದೆ. ಇನ್ನು ಬೈಕ್‌ ಚಾಲಕನಿಗೆ ಹಾಗೂ ಹಿಂಬದಿ ಸವಾರರಾದ ಬೈಕ್‌ ಚಾಲಕನ ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ

ರಸ್ತೆ ದಾಟುತ್ತಿದ್ದ ವೇಳೆ ಬೈಕ್‌ ಡಿಕ್ಕಿ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹರಿಹರ : ಹೃದಯಾಘಾತದಿಂದ ಕುಸಿದು ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಹರಿಹರ, ಸೆ.14: ಅಡಿಕೆ ಮಾರಾಟಕ್ಕೆಂದು ಪೇಟೆಗೆ ತೆರಳಿದ ವೇಳೆ ಹರಿಹರ ಪಲ್ಲತ್ತಡ್ಕ ಪೇಟೆಯಲ್ಲಿ ವ್ಯಕ್ತಿಯೋರ್ವರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು(ಸೋಮವಾರ) ವರದಿಯಾಗಿದೆ.     ಮೃತರು ಮೂಲತಃ ಹರಿಹರ ಪಲ್ಲತ್ತಡ್ಕ ಗ್ರಾಮದ ಕೆರೆಕ್ಕೋಡಿ ನಿವಾಸಿ ಓಬಯ್ಯ ಆಚಾರ್ಯ ಎಂದು ಗುರುತಿಸಲಾಗಿದೆ. ಇವರು ಮರದ ಕೆತ್ತನೆ ಕೆಲಸ ಮಾಡುವರಾಗಿದ್ದು, ಹವ್ಯಾಸಿ ಯಕ್ಷಗಾನ ಕಲಾವಿದರಾಗಿದ್ದರು. ಮೃತರು ತಾಯಿ, ಪತ್ನಿ, ಹಾಗೂ ಓರ್ವ ಪುತ್ರ ಮತ್ತು ಬಂಧುಗಳನ್ನು ಅಗಲಿದ್ದಾರೆ.    

ಹರಿಹರ : ಹೃದಯಾಘಾತದಿಂದ ಕುಸಿದು ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಬಿಳಿನೆಲೆ : ಬಡ ವಿದ್ಯಾರ್ಥಿಗಳ ಆನ್ ಲೈನ್ ಶಿಕ್ಷಣಕ್ಕೆ ಸ್ಮಾರ್ಟ್ ಫೋನ್ ನೀಡಿದ ಹಳೆ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಸೆ.14:  ಪ್ರಸ್ತುತ ಶ್ರೀ ಗೋಪಾಲಕೃಷ್ಣ ಪ್ರೌಢ ಬಿಳಿನೆಲೆ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಹೆಚ್ಚಿನ ಪೋಷಕರು ಆರ್ಥಿಕವಾಗಿ ತುಂಬಾ ಹಿಂದುಳಿದವರಾಗಿದ್ದು. . ಕೊರೋನಾ ತೊಂದರೆಯಿಂದಾಗಿ ಮಕ್ಕಳು ಶಾಲೆಗಳಿಗೆ ಬರುವಂತಿಲ್ಲವಾ ದುದರಿಂದ ,ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಹಳೆ ವಿದ್ಯಾರ್ಥಿಗಳು, ಬಡ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಫೋನ್ ನೀಡುವ ಮೂಲಕ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಹ ನೀಡಿದ್ದಾರೆ. . ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢ ಶಾಲೆಯ ಮಕ್ಕಳಿಗೆ ಕಲಿಕಾ ಚಟುವಟಿಕೆಗಳನ್ನು ಆನ್ಲೈನ್ ಮೂಲಕ ಶಿಕ್ಷಕರು ನಡೆಸುತ್ತಿದ್ದಾರೆ. ಆದರೆ ಸಂಬಂಧಿಸಿದ

ಬಿಳಿನೆಲೆ : ಬಡ ವಿದ್ಯಾರ್ಥಿಗಳ ಆನ್ ಲೈನ್ ಶಿಕ್ಷಣಕ್ಕೆ ಸ್ಮಾರ್ಟ್ ಫೋನ್ ನೀಡಿದ ಹಳೆ ವಿದ್ಯಾರ್ಥಿಗಳು Read More »

ಕರಾವಳಿ

ಬೋಸ್ಟನ್ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಕನ್ನಡದ ‘ಅಮೃತಮತಿ’ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.14:  ಹಿರಿಯ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿ, ಹರಿಪ್ರಿಯಾ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಅಮೃತಮತಿ’ ಸಿನಿಮಾ ಅಮೆರಿಕದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.       ಹದಿಮೂರನೇ ಶತಮಾನದ ಜನ್ನಕವಿ ಬರೆದಿರುವ ‘ಯಶೋಧರ ಚರಿತೆ’ ಕಾವ್ಯವನ್ನು ಆಧರಿಸಿ ಈ ಚಿತ್ರವನ್ನ ಮಾಡಲಾಗಿದ್ದು, ಇದೀಗ, ಅಮೆರಿಕದ ಬೋಸ್ಟನ್ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ವಿವಿಧ ದಶಗಳ ಚಿತ್ರಗಳ ಜೊತೆಗೆ ಹೊಸ ಭಾರತೀಯ ಚಿತ್ರಗಳಿಗೆ ಹೆಚ್ಚು ಅವಕಾಶ ಕೊಡುವ ಕಾರಣದಿಂದ ಈ ಚಿತ್ರೋತ್ಸವವನ್ನು ‘ಇಂಡಿಯಾ ಅಂತರರಾಷ್ಟ್ರೀಯ

ಬೋಸ್ಟನ್ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಕನ್ನಡದ ‘ಅಮೃತಮತಿ’ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

ಮಂಡ್ಯ ಅರ್ಚಕರ ತ್ರಿಬಲ್ ಮರ್ಡರ್ ಪ್ರಕರಣ ➤ ಮೂವರು ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.14:  ಇತ್ತೀಚೆಗೆ ನಡೆದಿದ್ದ ತ್ರಿಬಲ್ ಮರ್ಡರ್ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿ ಬಂಧಿಸಿದ್ದಾರೆ. ಆಂಧ್ರ ಮೂಲದ ವಿಜಿ(25), ಮದ್ದೂರಿನ ಅರೆಕಲ್ ದೊಡ್ಡಿಯ ಗಾಂಧಿ(28) ಹಾಗೂ ತೊಪ್ಪನಹಳ್ಳಿಯ ಮಂಜು(30) ಬಂಧಿತ ಆರೋಪಿಗಳು.ಮಂಡ್ಯ ಜಿಲ್ಲೆಯ ಗುತ್ತಲಿನ ಶ್ರೀ ಅರ್ಕೇಶ್ವರ ದೇವಾಲಯದಲ್ಲಿ ಮೂವರು ಅರ್ಚಕರನ್ನು ಕೊಲೆ ಮಾಡಿದ್ದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.     ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸಲು ಪೊಲೀಸರು ಮದ್ದೂರು ತಾಲೂಕಿನ ಸಾದೊಳಲು ಗೇಟ್ ಬಳಿ ತೆರಳಿದ್ದರು.

ಮಂಡ್ಯ ಅರ್ಚಕರ ತ್ರಿಬಲ್ ಮರ್ಡರ್ ಪ್ರಕರಣ ➤ ಮೂವರು ಆರೋಪಿಗಳು ಖಾಕಿ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top