ಕಡಬ ನ್ಯೂಸ್

ಕಡಬ ಸರಸ್ವತಿ ವಿದ್ಯಾಲಯದಲ್ಲಿ ಉದ್ಯೋಗ ನೈಪುಣ್ಯ ತರಬೇತಿ

(ನ್ಯೂಸ್ ಕಡಬ) newskadaba.com ಕಡಬ , ಸೆ. 12 :ಮಂಗಳೂರು ಗ್ರಾಮವಿಕಾಸ ಸಮಿತಿ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ, ಹಾಗೂ ದ. ಕ ಜಿಲ್ಲೆ ಸಹಕಾರ ಭಾರತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಡಬದ ವಿದ್ಯಾನಗರದಲ್ಲಿರುವ ಸರಸ್ವತಿ ವಿದ್ಯಾಲಯದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 3 ರವರೆಗೆ ಉಚಿತ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ನಡೆಯಲಿದೆ ಎಂದು  ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿ ಕೃಷ್ಣ ಶೆಟ್ಟಿ ಕಡಬ ಹೇಳಿದರು.   ಕಡಬದ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತಾನಾಡಿ […]

ಕಡಬ ಸರಸ್ವತಿ ವಿದ್ಯಾಲಯದಲ್ಲಿ ಉದ್ಯೋಗ ನೈಪುಣ್ಯ ತರಬೇತಿ Read More »

ಕರಾವಳಿ, ಕರ್ನಾಟಕ

ಆಲಂಕಾರು: ಚಲಿಸುತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರ ➤ ಚಾಲಕ ಪ್ರಾಣಾಪಯದಿಂದ ಪಾರು

(ನ್ಯೂಸ್ ಕಡಬ) newskadaba.com ಕೊಯಿಲ, ಸೆ.12: ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಕೊಯಿಲ ಸಮೀಪದ ನೀರಾಜೆ ಎಂಬಲ್ಲಿ ಚಲಿಸುತ್ತಿದ್ದ ಓಮ್ನಿಯ ಮೇಲೆ ಮರವೊಂದು ಮುರಿದು ಬಿದ್ದ ಘಟನೆ ಇಂದು(ಶನಿವಾರ) ನಡೆದಿದೆ. ಮರ ಬಿದ್ದ ಪರಿಣಾಮದಿಂದಾಗಿ ಓಮ್ನಿ ಜಖಂಗೊಂಡು ಅದರ ಚಾಲಕ, ಕೊಯಿಲ ಶ್ರೀರಾಮ ಎಲೆಕ್ಟ್ರಿಕಲ್ಸ್‌ನ ಮಾಲಕ ಯೋಗಿಶ್‌ ಅಪಾಯದಿಂದ ಪಾರಾಗಿದ್ದಾರೆ.     ನಿರಂತರವಾಗಿ ಎಡೆಬಿಡದೆ ಸುರುಯುತ್ತಿದ್ದ ಮಳೆಗೆ ಕೊಯಿಲ ನೀರಾಜೆ ಸಮೀಪ ರಸ್ತೆ ಬದಿಯಲ್ಲಿದ್ದ ಹಲಸಿನ ಮರವೊಂದು ಮುರಿದು ಬಿದ್ದಿದೆ. ಈ ಘಟನೆಯ ಪರಿಣಾಮ ಸುಮಾರು ಅರ್ಧಗಂಟೆಯಷ್ಟುರಸ್ತೆಯಲ್ಲಿ

ಆಲಂಕಾರು: ಚಲಿಸುತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರ ➤ ಚಾಲಕ ಪ್ರಾಣಾಪಯದಿಂದ ಪಾರು Read More »

ಕರಾವಳಿ

ಮಳೆಹಾನಿ ಪ್ರದೇಶಗಳಿಗೆ ಐವನ್ ಡಿಸೋಜ ಭೇಟಿ ➤ ಪುನರ್ ವ್ಯವಸ್ಥೆ ಕಲ್ಪಿಸಲು ಉಸ್ತುವಾ ಸಚಿವರಿಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12 : ನಗರದಲ್ಲಿ ವಿವಿಧ ಕಡೆಗಳಲ್ಲಿ ಕಳೆದ ಮೂರು ದಿನಗಳಲ್ಲಿ ಸುರಿದ ವಿಪರೀತ ಮಳೆಯಿಂದ ಅನೇಕ ಮನೆಗಳ ಆವರಣಗಳ ಕುಸಿತ, ತೋಟಗಾರಿಕಾ ಬೆಳೆ ನಷ್ಟ, ವಿವಿಧ ಹಂತದಲ್ಲಿ ಹಾನಿ ಸಂಭವಿಸಿದೆ. ಈ ಪ್ರದೇಶದಲ್ಲಿ ಇಂದು ಮಾಜಿ ಶಾಸಕ ಐವನ್ ಡಿಸೋಜ ಭೇಟಿ ನೀಡಿ, ಪರಿಶೀಲಿಸಿದರು.   ಸಂಕಷ್ಟಕ್ಕೊಳಗಾದವರಿಗೆ ಪುನರ್ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಮಳೆಯಿಂದಾದ ನಷ್ಟವನ್ನು ಅಂದಾಯಿಸಿ, ಶಾಸಕರು ಮತ್ತು ಉಸ್ತುವಾರಿ ಸಚಿವರು ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕೆಂದು ಜಿಲ್ಲಾಡಳಿತಕ್ಕೆ

ಮಳೆಹಾನಿ ಪ್ರದೇಶಗಳಿಗೆ ಐವನ್ ಡಿಸೋಜ ಭೇಟಿ ➤ ಪುನರ್ ವ್ಯವಸ್ಥೆ ಕಲ್ಪಿಸಲು ಉಸ್ತುವಾ ಸಚಿವರಿಗೆ ಮನವಿ Read More »

ಕರಾವಳಿ, ಕರ್ನಾಟಕ

ಕಾಣಿಯೂರು: ಬೆಳಂದೂರಿನಲ್ಲಿ ಸೆ.14 ರಂದು ಉಚಿತ ಕೋವಿಡ್‌ ಟೆಸ್ಟ್

(ನ್ಯೂಸ್ ಕಡಬ) newskadaba.com ಕಾಣಿಯೂರು, ಸೆ.12: ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಸಾರ್ವಜನಿಕರಿಗೆ ಉಚಿತ ಕೋವಿಡ್‌ 19 ಪರೀಕ್ಷೆಯು ಸೆ.14 ರಂದು ಬೆಳಿಗ್ಗೆ ಬೆಳಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.   ಬೆಳಂದೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಾಮಣ, ಬೆಳಂದೂರು,ಕುದ್ಮಾರು ಗ್ರಾಮದ ವ್ಯಾಪ್ತಿಯಲ್ಲಿರುವ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಬಂದು ತಪಾಸನೆ ಮಾಡಿಕೊಳ್ಳುವಂತೆ ಬೆಳಂದೂರು ಗ್ರಾಮ ಪಂಚಾಯತ್‌ ಪ್ರಕಟನೆಯಲ್ಲಿ ತಿಳಿಸಿದೆ.    

ಕಾಣಿಯೂರು: ಬೆಳಂದೂರಿನಲ್ಲಿ ಸೆ.14 ರಂದು ಉಚಿತ ಕೋವಿಡ್‌ ಟೆಸ್ಟ್ Read More »

ಕರಾವಳಿ, ಕರ್ನಾಟಕ

ದೇಶಾದ್ಯಂತ ಇಂದಿನಿಂದ 80 ಹೊಸ ವಿಶೇಷ ರೈಲುಗಳ ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.12: ಇಂದಿನಿಂದ ದೇಶಾದ್ಯಂತ 80 ಹೊಸ ವಿಶೇಷ ರೈಲುಗಳ ಸಂಚಾರ ಆರಂಭವಾಗಿದೆ. ಈಗಾಗಲೇ 230 ರೈಲುಗಳು ಸಂಚಾರ ಪ್ರಾರಂಭಿಸಿವೆ. ಈ ನಡುವೆ ಇದೀಗ ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ಮತ್ತೆ 80 ಹೊಸ ವಿಶೇಷ ರೈಲುಗಳನ್ನು ಬಿಡಲಾಗಿದೆ. ಇದರ ಸೀಟು ಕಾಯ್ದಿರಿಸುವಿಕೆ ಪ್ರಕ್ರಿಯೆಯೂ ಗುರುವಾರದಿಂದ ಪ್ರಾರಂಭವಾಗಿದೆ ಎನ್ನಲಾಗಿದೆ.     ಈ ಬಗ್ಗೆ ರೈಲ್ವೆ ಮಂಡಳಿ ಮುಖ್ಯಸ್ಥ ವಿ.ಕೆ.ಯಾದವ್ ತಿಳಿಸಿದ್ದಾರೆ. ಹಾಗೇ ಪ್ರಯಾಣಿಕರು ರೈಲಿನಲ್ಲಿ ಪ್ರಯಾಣ ಮಾಡುವಾಗ ಮಾಸ್ಕ್ ಮತ್ತು ಸಾಮಾಜಿಕ ಅಂತರ

ದೇಶಾದ್ಯಂತ ಇಂದಿನಿಂದ 80 ಹೊಸ ವಿಶೇಷ ರೈಲುಗಳ ಸಂಚಾರ ಆರಂಭ Read More »

ಕರಾವಳಿ, ಕರ್ನಾಟಕ

ಮಂಗಳೂರು: ಭಾರೀ ಮಳೆಯಿಂದಾಗಿ ಕೊಂಚಾಡಿಯ ಫ್ಲಾಟ್ ಹಿಂಭಾಗದ ಧರೆ ಕುಸಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.12: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳ ಮನೆಗಳು ಜಲಾವೃತವಾಗಿವೆ. ಬಿಡದೇ ಸುರಿದ ಮಳೆಯಿಂದಾಗಿ ಮಂಗಳೂರಿನ ಕೊಂಚಾಡಿಯಲ್ಲಿ 12 ಅಂತಸ್ತಿನ ಎಸೆಲ್ ಹೈಟ್ಸ್ ಫ್ಲ್ಯಾಟ್ ಹಿಂಭಾಗದಲ್ಲಿ ಧರೆ ಕುಸಿದಿದೆ. ಧರೆ ಕುಸಿದು ಹಲವು ವಾಹನಗಳು ಜಖಂ ಆಗಿವೆ. ಮುಂಜಾಗ್ರತಾ ಕ್ರಮವಾಗಿ ಫ್ಲ್ಯಾಟ್​ನಲ್ಲಿದ್ದ ನೂರಾರು ಮಂದಿ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ಫ್ಲಾಟ್ ಮುಂಭಾಗದ ರಸ್ತೆ ಬಂದ್ ಮಾಡಲಾಗಿದ್ದು, ಸ್ಥಳಕ್ಕೆ

ಮಂಗಳೂರು: ಭಾರೀ ಮಳೆಯಿಂದಾಗಿ ಕೊಂಚಾಡಿಯ ಫ್ಲಾಟ್ ಹಿಂಭಾಗದ ಧರೆ ಕುಸಿತ Read More »

ಕರಾವಳಿ, ಕರ್ನಾಟಕ

ಮೈಸೂರು : ದಸರಾ ಗಜಪಡೆಗಳಿಗೂ ಕೊವೀಡ್ ಟೆಸ್ಟ್

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 12. ಸಾಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವ ಕಳೆಗಟ್ಟಲು ಕೆಲ ದಿನಗಳಷ್ಟೇ ಬಾಕಿ ಇದೆ. ಕೊವೀಡ್ ಆತಂಕದ ನಡುವೆಯೂ ನಾಡಹಬ್ಬಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಿಗೂ ಕೋವಿಡ್​ ಪರೀಕ್ಷೆ ಮಾಡಲಾಗುತ್ತದೆ.   ಈ ಬಾರಿ ಅಭಿಮನ್ಯು ಆನೆ ಅಂಬಾರಿ ಹೊರಲಿದ್ದಾನೆ. ಕಳೆದ ಬಾರಿಯ ಕ್ಯಾಪ್ಟನ್ ಅರ್ಜುನನಿಗೆ 60 ವರ್ಷ ದಾಟಿರುವ ಹಿನ್ನೆಲೆಯಲ್ಲಿ ದಸರಾದ ಯಾವುದೇ ಜವಾಬ್ದಾರಿಯನ್ನು ಅವನಿಗೆ ಕೊಡುತ್ತಿಲ್ಲ. ಅಲ್ಲದೆ ಈ ಬಾರಿ ಜಂಬೂ ಸವಾರಿಯಲ್ಲಿ

ಮೈಸೂರು : ದಸರಾ ಗಜಪಡೆಗಳಿಗೂ ಕೊವೀಡ್ ಟೆಸ್ಟ್ Read More »

ಕರಾವಳಿ, ಕರ್ನಾಟಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೃಷ್ಣಾಷ್ಟಮಿ ➤ ಬಳಿಕ ಮತ್ತೆ ಕಾಶಿಕಟ್ಟೆಯವರೆಗೆ ಮೆರವಣಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.12: ಕಡಬ ತಾಲೂಕಿನ ಪ್ರಸಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ ದಿನ ಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ ನಡೆಯಿತು.     ಕಾಶಿಕಟ್ಟೆಯಲ್ಲಿ ಅಷ್ಟಮಿ ದಿನ ಪೂಜಿಸಲ್ಪಡುವ ಕೃಷ್ಣನ ವಿಗ್ರಹವನ್ನು ಮೆರವಣಿಗೆ ಮೂಲಕ ದೇವಳಕ್ಕೆ ಆಗಮಿಸಿ ಬಳಿಕ ಮತ್ತೆ ಕಾಶಿಕಟ್ಟೆಗೆ ಮೆರವಣಿಗೆಯಲ್ಲಿ ಸಾಗಿಸಲಾಯಿತು.ಈ ವೇಳೆ ರಸ್ತೆಯುದ್ದಕ್ಕೂ ಮೊಸರು ಕುಡಿಕೆಗಳನ್ನು ಒಡೆದು ಕರಷ್ಣಾಷ್ಟಮಿ ಆಚರಿಸಲಾಯಿತು. ಪುರೋಹಿತ ಸನತ್‌ ನೂರಿತ್ತಾಯ, ದೇವಳದ ನಾಗೇಶ್‌ ಎ.ವಿ, ದಿನಕರ ಮತ್ತಿತರರು ಉಪಸ್ಥಿತರಿದ್ದರು.    

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೃಷ್ಣಾಷ್ಟಮಿ ➤ ಬಳಿಕ ಮತ್ತೆ ಕಾಶಿಕಟ್ಟೆಯವರೆಗೆ ಮೆರವಣಿ Read More »

ಕರಾವಳಿ, ಕರ್ನಾಟಕ

ಏರೋ ಇಂಡಿಯಾ 2021 ವೆಬ್‌ಸೈಟ್‌ಗೆ ಸಚಿವ ರಾಜನಾಥ್‌ಸಿಂಗ್ ಚಾಲನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.12: ಬೆಂಗಳೂರಿನಲ್ಲಿ ಮುಂದಿನವರ್ಷ ಫೆಬ್ರವರಿ 3ರಿಂದ 7ರ ತನಕ ನಡೆಯಲಿರುವ ಏರೋ ಇಂಡಿಯಾ 2021ರ ವೆಬ್​ಸೈಟ್​ ( https://aeroindia.gov.in )ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಚಾಲನೆ ನೀಡಿದರು.     ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಈ ವೈಮಾನಿಕ ಪ್ರದರ್ಶನ ನಡೆಯಲಿದೆ. ಇದು 13ನೇ ಆವೃತ್ತಿಯ ಪ್ರದರ್ಶನವಾಗಿದೆ. ಇದಕ್ಕೆ ಸಂಬಂಧಿಸಿದ ಎಲ್ಲ ಆನ್​ಲೈನ್ ಸೇವೆಗಳನ್ನೂ ಈ ವೆಬ್​ಸೈಟ್ ಮೂಲಕ ಪಡೆಯಬಹುದಾಗಿದೆ. ಪ್ರದರ್ಶಕರು ಈ ಸೈಟ್​ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು.

ಏರೋ ಇಂಡಿಯಾ 2021 ವೆಬ್‌ಸೈಟ್‌ಗೆ ಸಚಿವ ರಾಜನಾಥ್‌ಸಿಂಗ್ ಚಾಲನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮೂಡುಬಿದಿರೆ ತಹಸೀಲ್ದಾರ್ ಅನಿತಾಲಕ್ಷ್ಮೀ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಸೆ. 12 : ಕಳೆದ 14 ತಿಂಗಳುಗಳಿಂದ ಮೂಡುಬಿದಿರೆ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಅನಿತಾಲಕ್ಷ್ಮೀ ಅವರು ಮೂಡುಬಿದಿರೆಯಿಂದ ಮಂಗಳೂರಿಗೆ ವರ್ಗಾವಣೆಗೊಂಡು ಚುನಾವಣೆ ವಿಭಾಗದ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಬಡವರಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗದ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಮೂಡುಬಿದಿರೆ ತಾಲೂಕಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಶ್ರಮಿಸಿದ್ದರು. ಅಕ್ರಮವಾಗಿ ನಡೆಯುತ್ತಿದ್ದ ಮರಳು ಮಾಫಿಯಾ ಮತ್ತು ಕೆಂಪು ಕಲ್ಲಿನ ಕೋರೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುತ್ತಿದ್ದ ಅವರು ರಾಜಕರಣಿಗಳ ಕೆಂಗಣ್ಣಿಗೆ ಗುರಿಯಾಗಿ ಈ ಹಿಂದೆ ಎರಡು

ಮೂಡುಬಿದಿರೆ ತಹಸೀಲ್ದಾರ್ ಅನಿತಾಲಕ್ಷ್ಮೀ ವರ್ಗಾವಣೆ Read More »

ಕರಾವಳಿ, ಕರ್ನಾಟಕ
Scroll to Top