ಕಡಬ ನ್ಯೂಸ್

ಆರೋಗ್ಯ ಇಲಾಖೆಯಿಂದ ಪರಿಷ್ಕೃತ ಸುತ್ತೋಲೆ ➤ ಅಂತರ್‌ ರಾಜ್ಯ ಪ್ರಯಾಣಿಕರಿಗೆ ಕ್ವಾರಂಟೈನ್‌ ಅಗತ್ಯವಿಲ್ಲ…

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,25 : ರಾಜ್ಯಕ್ಕೆ ಆಗಮಿಸುವ ಅಂತರ್‌ ರಾಜ್ಯ ಪ್ರಯಾಣಿಕರಿಗೆ ಸಂಬಂಧಿಸಿದಂತೆ ಹಿಂದಿನ ಎಲ್ಲ ಸುತ್ತೋಲೆಗಳನ್ನು ರದ್ದುಗೊಳಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪರಿಷ್ಕೃತ ಸುತ್ತೋಲೆಯನ್ನು ಹೊರಡಿಸಲಾಗಿದೆ.ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ಪರಿಷ್ಕೃತ ಸುತ್ತೋಲೆ ಅನ್ವಯ, ಕೋವಿಡ್-19 ರೋಗ ಲಕ್ಷಣಗಳಿಲ್ಲದಿದ್ದಲ್ಲಿ 14 ದಿನಗಳ ಕ್ವಾರಂಟೈನ್ ಅಗತ್ಯವಿರುವುದಿಲ್ಲ, ಸೇವಾ ಸಿಂಧು ಆಪ್‌ನಲ್ಲಿ ರಿಜಿಸ್ಟರ್ ಅಗತ್ಯವಿಲ್ಲ. ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ. ಆದರೆ, ಅವರು ರಾಜ್ಯಕ್ಕಾಗಮಿಸಿದ ದಿನದಿಂದ 14 ದಿನಗಳವರೆಗೆ ಕೊರೋನಾ ರೋಗದ ಲಕ್ಷಣಗಳಾದ ಜ್ವರ, […]

ಆರೋಗ್ಯ ಇಲಾಖೆಯಿಂದ ಪರಿಷ್ಕೃತ ಸುತ್ತೋಲೆ ➤ ಅಂತರ್‌ ರಾಜ್ಯ ಪ್ರಯಾಣಿಕರಿಗೆ ಕ್ವಾರಂಟೈನ್‌ ಅಗತ್ಯವಿಲ್ಲ… Read More »

ಕರಾವಳಿ, ಕರ್ನಾಟಕ

ಬಿಜೆಪಿ ಪಕ್ಷಕ್ಕೆ ಇಂದು ಮಾಜಿ IPS ಅಧಿಕಾರಿ ‘ಸಿಂಗಂ’ ಅಣ್ಣಾಮಲೈ ಸೇರ್ಪಡೆ

(ನ್ಯೂಸ್ ಕಡಬ) newskadaba.com ನವದೆಹಲಿ . ಆ,25:  IPS ಹುದ್ದೆಗೆ ರಾಜೀನಾಮೆ ನೀಡಿದ್ದ ಮಾಜಿ ಅಧಿಕಾರಿ ಅಣ್ಣಾಮಲೈ ಇಂದು ದೆಹಲಿಯಲ್ಲಿ (ಮಂಗಳವಾರ) ಬೆಳಿಗ್ಗೆ 11 ಗಂಟೆಗೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ ಕರ್ಯಕ್ರಮ ನಡೆಯಲಿದೆ.   ನಾನು ಕಳೆದ ಕೆಲವು ತಿಂಗಳುಗಳಿಂದ ನನ್ನ ಆಯ್ಕೆಗಳನ್ನು ಪರಿಗಣಿಸುತ್ತಿದ್ದೆ ಆದರೆ ಅಂತಿಮವಾಗಿ ನಾನು ಬಿಜೆಪಿಗೆ ಸೇರಲು ಮತ್ತು ನನ್ನ ರಾಜಕೀಯ ಜೀವನವನ್ನು ಪ್ರಾರಂಭಿಸಲು ನಿರ್ಧರಿಸಿದ್ದೇನೆ” ಎಂದು ಅಣ್ಣಾಮಲೈ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಬಿಜೆಪಿ ಪಕ್ಷಕ್ಕೆ ಇಂದು ಮಾಜಿ IPS ಅಧಿಕಾರಿ ‘ಸಿಂಗಂ’ ಅಣ್ಣಾಮಲೈ ಸೇರ್ಪಡೆ Read More »

ರಾಷ್ಟ್ರೀಯ ನ್ಯೂಸ್

ಕಾಲುವೆ ಬಿದ್ದ ವೃದ್ದೆಯನ್ನ ರಕ್ಷಿಸಿದ ಯುವಕ ➤ ಯುವಕನ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ

(ನ್ಯೂಸ್ ಕಡಬ) newskadaba.com ಬಳ್ಳಾರಿ. ಆ,24:  ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನು ಯುವಕನೊಬ್ಬ ತನ್ನ ಪ್ರಾಣದ ಹಂಗುತೊರೆದು ರಕ್ಷಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರದ ಆರ್​ಟಿಓ ಕಚೇರಿಯ ಮುಂಭಾಗದ ಹೆಚ್​ಎಲ್​ಸಿ ಕಾಲುವೆಯಲ್ಲಿ ನಡೆದಿದೆ.     ಅಜಯ್​ ಎಂಬ ಯುವಕ ಅಜ್ಜಿಯನ್ನು ರಕ್ಷಿಸಿದ್ದಾನೆ.ಕಾಲುವೆಗೆ ಇಳಿದು ಮುಖ ತೊಳೆಯಲು ಹೋದ 70 ವರ್ಷದ ವೃದ್ಧೆ ಕಾಲು ಜಾರಿ ನೀರಿನಲ್ಲಿ ಬಿದ್ದಿದ್ದು, ನೀರಿನಲ್ಲಿ ಮುಳುಗಿ ಸುಮಾರು 300 ಮೀಟರ್​ ದೂರ ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದರು. ಅದನ್ನು ಕೆಲವು

ಕಾಲುವೆ ಬಿದ್ದ ವೃದ್ದೆಯನ್ನ ರಕ್ಷಿಸಿದ ಯುವಕ ➤ ಯುವಕನ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ Read More »

ಕರ್ನಾಟಕ

ಕಿರಿಮಂಜೇಶ್ವರ ಕೊಡೆರಿಯಲ್ಲಿ ದೋಣಿ ದುರಂತ ➤ ಮೃತಪಟ್ಟ 4 ಮೀನುಗಾರರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿ.ಎಂ

(ನ್ಯೂಸ್ ಕಡಬ) newskadaba.com ಬೈಂದೂರು. ಆ,24:  ಕಿರಿಮಂಜೇಶ್ವರ ಕೊಡೆರಿಯಲ್ಲಿ ದೋಣಿ ದುರಂತದಲ್ಲಿ ಮೃತಪಟ್ಟ ನಾಲ್ಕು ಮೀನುಗಾರರ ಕುಟುಂಬಗಳಿಗೆ ತಲಾ 6 ಲಕ್ಷ ರೂ.ಗಳ ಪರಿಹಾರವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.     ಪರಿಹಾರದ ಆದೇಶದ ಪ್ರತಿಯನ್ನು ಸಂತ್ರಸ್ತರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೋಮವಾರ ತಿಳಿಸಿದ್ದಾರೆ. ಇಂದು ಸಚಿವರು ಶಾಸಕ ಬಿ ಎಂ ಸುಕುಮಾರ್ ಶೆಟ್ಟಿ ಅವರೊಂದಿಗೆ ಸಂತ್ರಸ್ತರ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಆಗಸ್ಟ್ 16

ಕಿರಿಮಂಜೇಶ್ವರ ಕೊಡೆರಿಯಲ್ಲಿ ದೋಣಿ ದುರಂತ ➤ ಮೃತಪಟ್ಟ 4 ಮೀನುಗಾರರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿ.ಎಂ Read More »

ಕರಾವಳಿ, ಕರ್ನಾಟಕ

ನಾಯಿ ಅಡ್ಡ ಬಂದ ಪರಿಣಾಮ ಸ್ಕೂಟರ್ ಪಲ್ಟಿ, ಸವಾರೆ ತಂದೆ ಮೃತ್ಯು ➤ ಮದುವೆ ಮನೆಯಲ್ಲಿ ಸೂತಕದ ಛಾಯೆ

(ನ್ಯೂಸ್ ಕಡಬ) newskadaba.com ಕಡಬ. ಆ,24:  ಅವರು ಮನೆಯ ಹಿರಿಯ ಮಗಳ ಮದುವೆ ತಯಾರಿಯಲ್ಲಿದ್ದರು.  ದೇವಸ್ಥಾನಕ್ಕೆ ತೆರಳಿ ಹಿಂತಿರುತ್ತಿದ್ದವರಿಗೆ ಅಲ್ಲಿ ಆಗಿದ್ದೇ ಬೇರೆ,  ನಾಯಿಯೊಂದು ಅಡ್ಡ ಬಂದ ಪರಿಣಾಮ ಹೋಂಡಾ ಆಕ್ಟಿವಾ ಪಲ್ಟಿಯಾಗಿ ಹಿಂಬದಿ ಸವಾರ ಮೃತಪಟ್ಟ ಘಟನೆ ಇಂದು ಮಾಣಿ -ಮೈಸೂರು ಹೆದ್ದಾರಿಯ ಕೌಡಿಚ್ಚಾರು ಸಮೀಪದ ಸೇತುವೆ ಬಳಿ ಕಳೆದ ದಿನ ನಡೆದಿದೆ. ಮದುವೆ ಮನೆಯಲ್ಲಿಗೆ ಸೂತಕದ ಛಾಯೆ ಆವರಿಸಿದೆ.  ಮೃತಪಟ್ಟವರನ್ನು ಮಾಡ್ನೂರು ಗ್ರಾಮದ ಸಸ್ಪೇಟಿ ನಿವಾಸಿ 53 ವರ್ಷದ ಕೃಷ್ಣಪ್ಪ ನಾಯ್ಕ ಎಂದು ಗುರುತಿಸಲಾಗಿದೆ.

ನಾಯಿ ಅಡ್ಡ ಬಂದ ಪರಿಣಾಮ ಸ್ಕೂಟರ್ ಪಲ್ಟಿ, ಸವಾರೆ ತಂದೆ ಮೃತ್ಯು ➤ ಮದುವೆ ಮನೆಯಲ್ಲಿ ಸೂತಕದ ಛಾಯೆ Read More »

ಕರ್ನಾಟಕ

ಮಂಗಳೂರು : ಅಕ್ರಮ ಅಂಗಡಿಗಳ ತೆರವು ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,24: ಅಕ್ರಮವಾಗಿ ಬೀದಿ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ಸುಮಾರು 15 ರಿಂದ 20 ಸಣ್ಣ ಅಂಗಡಿಗಳನ್ನು ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸರು ತೆರವುಗೊಳಿಸಿದರು. ವ್ಯಾಪಾರಸ್ಥರ ವಿರೋಧದ ನಡುವೆಯೂ ನಗರದ ಕಾವೂರಿನಲ್ಲಿ ಯಾವುದೇ ಅನುಮತಿಯಿಲ್ಲದೆ ವ್ಯಾಪಾರ ಚಟುವಟಿಯನ್ನ ಮುಂದುವರಿಸುತ್ತಿದ್ದವರಿಗೆ ಅಧಿಕಾರಿಗಳು ಈ ಮೂಲಕ ಬಿಸಿ ಮುಟ್ಟಿಸಿದ್ದಾರೆ.   ಈಗಾಗಲೇ ಹಲವು ಕಡೆ ಅಕ್ರಮ ಅಂಗಡಿಗಳನ್ನ ಸಂಬಂಧಪಟ್ಟ ಅಧಿಕಾರಿಗಳು ತೆರವುಗೊಳಿಸುತ್ತ ಬರುತ್ತಿದ್ದಾರೆ.  ಕಾರ್ಯಾಚರಣೆಯ ಸಂದರ್ಭದಲ್ಲಿ ಇಲ್ಲಿನ ಕಾವೂರು ಠಾಣೆಯ ಪೊಲೀಸ್‌ ಸಿಬ್ಬಂದಿಗಳು ರಕ್ಷಣೆ ಒದಗಿಸಿದರು. ತೆರವು

ಮಂಗಳೂರು : ಅಕ್ರಮ ಅಂಗಡಿಗಳ ತೆರವು ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ

ಕೊವೀಡ್-19 ಮುಕ್ತರಾದ ಎಸ್ ಪಿ ಬಾಲಸುಬ್ರಹ್ಮಣ್ಯಂ

(ನ್ಯೂಸ್ ಕಡಬ) newskadaba.com ಚೆನ್ನೈ. ಆ,24: ಜನಪ್ರಿಯ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಕೊವಿಡ್ -19 ವರದಿ ನೆಗಟಿವ್ ಎಂದು ಬಂದಿದೆ. ಇಲ್ಲಿನ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಗಾಯಕ ಎಸ್ಪಿಬಿ ಆರೋಗ್ಯ ಸ್ಥಿತಿ ಈಗ ಸುಧಾರಿಸಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ.   ಆಗಸ್ಟ್ 5ರಂದು ಶೀತ ಮತ್ತು ಜ್ವರ ಕಾಣಿಸಿಕೊಂಡು ಉಸಿರಾಟ ತೊಂದರೆಯಾಗಿದ್ದರಿಂದ ಎಸ್‌ಪಿಬಿ

ಕೊವೀಡ್-19 ಮುಕ್ತರಾದ ಎಸ್ ಪಿ ಬಾಲಸುಬ್ರಹ್ಮಣ್ಯಂ Read More »

ಕರಾವಳಿ

ಸಾಮಾಜಿಕ ಜಾಲತಾಣದಲ್ಲಿ ಮಾನಸಿ ಸುಧೀರ್ ಹವಾ ➤ ಗಣೇಶನನ್ನು ಕನ್ನಡ ಸ್ವರಾಕ್ಷರಗಳಲ್ಲಿ ವರ್ಣಿಸಿದ ಕಲಾವಿದೆ

(ನ್ಯೂಸ್ ಕಡಬ) newskadaba.com ಉಡುಪಿ . ಆ,24:   ಕನ್ನಡ ವರ್ಣಮಾಲೆಯನ್ನು ಸೇರಿಸಿ ಗಣೇಶನ ಕುರಿತಾಗಿ ರಚಿಸಿರುವ ಗೀತೆಗೆ ಭಾವ ತುಂಬಿರುವ ಮಾನಸಿ ಸುಧೀರ್ ಅವರ ವಿಡಿಯೋ ವೈರಲ್‌ ಆಗಿದೆ. ಇವರು ಅಪ್ರತಿಮ ಭರತನಾಟ್ಯ ಕಲಾವಿದೆಯು ಹೌದು.  ಗಣೇಶ ಹಬ್ಬದ ಸಂಭ್ರಮದಲ್ಲಿ ಬಿಡುಗಡೆಯಾದ ವಿಡಿಯೋವನ್ನು ಸಾವಿರಾರು ಮಂದಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಫೇಸ್‌ಬುಕ್‌, ವಾಟ್ಸ್‌ ಆಯಪ್‌ಗಳಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ನಾಟಕೀಯ ಶೈಲಿಯ ಹಾಡುಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹವಾ ಸೃಷ್ಠಿಸಿರುವ ಕಲಾವಿದೆ, ಮಾನಸಿ ಸುಧೀರ್.   ಕಥನ ಶೈಲಿಯ

ಸಾಮಾಜಿಕ ಜಾಲತಾಣದಲ್ಲಿ ಮಾನಸಿ ಸುಧೀರ್ ಹವಾ ➤ ಗಣೇಶನನ್ನು ಕನ್ನಡ ಸ್ವರಾಕ್ಷರಗಳಲ್ಲಿ ವರ್ಣಿಸಿದ ಕಲಾವಿದೆ Read More »

ಕರಾವಳಿ, ಕರ್ನಾಟಕ

ಡಾ.ಎಸ್.ಆರ್ ನಾಗೇಂದ್ರ ಆತ್ಮಹತ್ಯೆ ಪ್ರಕರಣ ➤ ಪುತ್ತೂರು ಭಾರತೀಯ ವೈದ್ಯಕೀಯ ಸಂಘದಿಂದ ಸಂತಾಪ

(ನ್ಯೂಸ್ ಕಡಬ) newskadaba.com ಪುತ್ತೂರು. ಆ,24 : ನಂಜಗೂಡಿನ ವೈದ್ಯಾಧಿಕಾರಿ ಡಾ.ನಾಗೇಂದ್ರ ರವರು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ನಾಗೇಂದ್ರ  ಆತ್ಮಹತ್ಯೆಗೆ ಜಿಲ್ಲಾ ಪಂಚಾಯತ್‌ ಸಿಇಒ ಕಾರಣ ಎಂದು ಆರೋಪಿಸಿದ ವೈದ್ಯರು ಹಾಗೂ ಇತರೆ ಸಿಬ್ಬಂದಿ ಗುರುವಾರದಂದು ರಾತ್ರಿಯಿಡೀ ಪ್ರತಿಭಟನೆಯಲ್ಲಿ ತೊಡಗಿದ್ದರು.   ಈ ಸಂದರ್ಭದಲ್ಲಿ ನಂಜನಗೂಡು ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಭಾರತೀಯ ವೈದ್ಯಕೀಯ ಸಂಘದಿಂದ ಕಳೆದ ದಿನ ಸಂಜೆ ಮುಂಬತ್ತಿ ಬೆಳಗಿಸಿ ಸಂತಾಪ ಸೂಚಿಸಲಾಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳು,

ಡಾ.ಎಸ್.ಆರ್ ನಾಗೇಂದ್ರ ಆತ್ಮಹತ್ಯೆ ಪ್ರಕರಣ ➤ ಪುತ್ತೂರು ಭಾರತೀಯ ವೈದ್ಯಕೀಯ ಸಂಘದಿಂದ ಸಂತಾಪ Read More »

ಕರಾವಳಿ

ಬೆಳ್ತಂಗಡಿ: ತಂದೆಯನ್ನೆ ಹತ್ಯೆಗೈದ ಪಾಪಿ ಪುತ್ರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ. ಆ,24: ಇಲ್ಲಿನ‌ ಜೂನಿಯರ್ ಕಾಲೇಜು ಬಳಿ ನಿವಾಸಿ ಟೂರಿಸ್ಟ್ ಕಾರು ಚಾಲಕ ವಾಸು ಎಂಬವರಿಗೆ ಅವರ‌ ಪುತ್ರನ ನೇತೃತ್ವದಲ್ಲೇ ಮೂರು ಮಂದಿಯ ತಂಡ ತಲವಾರಿನಿಂದ ಮಾರಣಾಂತಿಕವಾಗಿ ಹಲ್ಲೆಗೈದ ಪರಿಣಾಮ ಅವರು ಮೃತಪಟ್ಟ ಘಟನೆ‌ ಇಂದು ಬೆಳಗ್ಗೆ ನಡೆದಿದೆ. ನಗರದ ಪಂಚಾಯತ್ ವ್ಯಾಪ್ತಿಯ ಜ್ಯೂನಿಯರ್ ಕಾಲೇಜ್ ರಸ್ತೆ ಬಳಿಯ ನಿವಾಸಿ ಹಿರಿಯ ಚಾಲಕ ವಾಸು ಮೂಲ್ಯ (65) ಮೇಲೆ ದಾಳಿ ಮಾಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಟ್ಯಾಕ್ಸಿ ಚಾಲಕ

ಬೆಳ್ತಂಗಡಿ: ತಂದೆಯನ್ನೆ ಹತ್ಯೆಗೈದ ಪಾಪಿ ಪುತ್ರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top