ಕಡಬ ನ್ಯೂಸ್

ಸ್ನೇಹಿತರೊಂದಿಗೆ ಈಜಲು ಹೋಗಿ ದಾರುಣ ಅಂತ್ಯ ಕಂಡ ಬಾಲಕ ➤ ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

(ನ್ಯೂಸ್ ಕಡಬ) newskadaba.com.ಬೆಂಗಳೂರು. ಮಾ. 18. ಲಗ್ಗೆರಿ ನಿವಾಸಿಯಾದ ದರ್ಶನ್ ತನ್ನ ಸ್ನೇಹಿತರೊಂದಿಗೆ ಈಜಲು ಹೋಗಿ ದಾರುಣ ಅಂತ್ಯ ಕಂಡ ಘಟನೆ  ಬೆಂಗಳೂರು ಉತ್ತರ ತಾಲೂಕು ಲಕ್ಷ್ಮೀಪುರ ಕೆರೆಯಲ್ಲಿ ನಡೆದಿದೆ. ತಾಯಿಯ ತಂದೆಗೆ ಹುಷಾರಿಲ್ಲದ ಕಾರಣ ಮನೆಯವರೆಲ್ಲರು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಹಿರೆಸಾವೆಗೆ ಹೋಗಿರುವ ವೇಳೆ ಮನೆಯಲ್ಲಿ ಉಳಿದಿದ್ದ ಮಗ ದರ್ಶನ್  ಸ್ನೇಹಿತರೊಂದಿಗೆ ಈಜಲು ತೆರಳಿದ್ದಾನೆ. ಈ ವೇಳೆ ದರ್ಶನ್​ ಈಜು ಬಾರದೆ ನೀರಿನಾಳಕ್ಕೆ ಮುಳುಗಿ ಸಾವನ್ನಪ್ಪಿದ್ದಾನೆ. ಕೆರೆಯೊಳಗೆ ಸುಮಾರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ […]

ಸ್ನೇಹಿತರೊಂದಿಗೆ ಈಜಲು ಹೋಗಿ ದಾರುಣ ಅಂತ್ಯ ಕಂಡ ಬಾಲಕ ➤ ಮುಗಿಲು ಮುಟ್ಟಿದ ಪೋಷಕರ ಆಕ್ರಂದನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚುನಾವಣೆ ಘೋಷಣೆಗೂ ಮುನ್ನವೇ ಮತದಾರರಿಗೆ ಆಮಿಷ ➤ ರಾಜ್ಯದ ವಿವಿಧೆಡೆ ಕುಕ್ಕರ್, ಸೀರೆ ಹಾಗೂ ಆಹಾರ ಕಿಟ್ ವಿತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 18. ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ತಿಂಗಳ ಅಂತ್ಯದ ವೇಳೆಗೆ ಕೇಂದ್ರ ಚುನಾವಣಾ ಆಯೋಗದಿಂದ ಮತದಾನದ ದಿನಾಂಕ ಘೋಷಣೆಯಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ, ಟಿಕೆಟ್ ಆಕಾಂಕ್ಷಿಗಳು ಈಗಾಗಲೇ ಮತದಾರರಿಗೆ ಆಮಿಷ ಒಡ್ಡುವ ಕಾರ್ಯ ಆರಂಭಿಸಿದ್ದಾರೆ. ಈ ಮೊದಲು ಸಂಕ್ರಾಂತಿ ಸಂದರ್ಭದಲ್ಲಿ ಮತದಾರರಿಗೆ ಕೆಲವೊಂದು ಗಿಫ್ಟ್ ನೀಡುತ್ತಿದ್ದ ಆಕಾಂಕ್ಷಿಗಳು, ಇದೀಗ ಯುಗಾದಿ- ರಂಜಾನ್ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತದಾರರಿಗೆ ಕೆಲವೊಂದು ಕ್ಷೇತ್ರಗಳಲ್ಲಿ ಸೀರೆ, ಕುಕ್ಕರ್ ಹಾಗೂ ಆಹಾರ

ಚುನಾವಣೆ ಘೋಷಣೆಗೂ ಮುನ್ನವೇ ಮತದಾರರಿಗೆ ಆಮಿಷ ➤ ರಾಜ್ಯದ ವಿವಿಧೆಡೆ ಕುಕ್ಕರ್, ಸೀರೆ ಹಾಗೂ ಆಹಾರ ಕಿಟ್ ವಿತರಣೆ Read More »

ಕರ್ನಾಟಕ

ರೈಲು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಜಾರ್ಖಂಡ್‌ನ, ಮಾ. 18. ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ಮೂವರು ಮೃತಪಟ್ಟ ಘಟನೆ ಜಾರ್ಖಂಡ್‌ನ ಧನ್ಬಾದ್ ರೈಲ್ವೆ ವಿಭಾಗದ ನೇತಾಜಿ ಸುಭಾಸ್ ಚಂದ್ರ ಬೋಸ್ ಗೊಮೊಹ್ ರೈಲು ನಿಲ್ದಾಣದಲ್ಲಿ ನಡೆದಿದೆ. ಮೃತಪಟ್ಟವರನ್ನು ಮನೋಜ್ ಸಾಬ್ (19), ಶಿವಚರಣ್ ಸಾಬ್ (20) ಮತ್ತು ಬಬ್ಲೂ ಕುಮಾರ್ (20) ಎಂದು ಗುರುತಿಸಲಾಗಿದೆ. ಮೂವರು ರೈಲ್ವೇ ಹಳಿ ದಾಟುತ್ತಿದ್ದ ವೇಳೆ ಹೌರಾ-ನವದೆಹಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲು ವರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ  ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ರೈಲು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು..! Read More »

ಕ್ರೈಮ್ ನ್ಯೂಸ್

ಮಂಗಳೂರು: ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ ➤ ಡಿ.ಸಿ. ರವಿಕುಮಾರ್ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 18. ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದವರು ಜಿಲ್ಲೆಯಲ್ಲಿ ಕಾಡ್ಗಿಚ್ಚು ಹಾಗೂ ಇತರೆ ಬೆಂಕಿ ಅವಘಡಗಳನ್ನು ನಂದಿಸುವ ಕಾರ್ಯವನ್ನು ಉತ್ತಮವಾಗಿ ಮಾಡುತ್ತಿದ್ದು, ಈ ಕಾರ್ಯಕ್ಕೆ ಮತ್ತಷ್ಟು ಅನುಕೂಲವಾಗುವಂತೆ ಜಿಲ್ಲೆಯಲ್ಲಿರುವ ಬೃಹತ್ ಕೈಗಾರಿಕೆಗಳು, ಉದ್ದಿಮೆಗಳು ಬೆಂಕಿ ನಂದಿಸುವ ನೀರಿನ ಟ್ಯಾಂಕರ್’ಗಳನ್ನು ಒದಗಿಸಿಕೊಡಲು ಕೈಜೋಡಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಕರೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಂಗಳೂರು: ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ ➤ ಡಿ.ಸಿ. ರವಿಕುಮಾರ್ ಸೂಚನೆ Read More »

ಕರಾವಳಿ

ರಾಜ್ಯದಾದ್ಯಂತ ಇನ್ನೂ 2 ದಿನಗಳ ಕಾಲ ಮಳೆ ಸಾದ್ಯತೆ ➤ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 18. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

ರಾಜ್ಯದಾದ್ಯಂತ ಇನ್ನೂ 2 ದಿನಗಳ ಕಾಲ ಮಳೆ ಸಾದ್ಯತೆ ➤ ಹವಾಮಾನ ಇಲಾಖೆ ಮುನ್ಸೂಚನೆ Read More »

ಕರ್ನಾಟಕ

ನಾಲ್ಕೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

(ನ್ಯೂಸ್ ಕಡಬ) newskadaba.com.ಸುಳ್ಯ, ಮಾ 18.ಮಾ. 18ರಿಂದ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆ ಮಜಲು ಶ್ರೀ ವೆಂಕಟೇಶ್ವರ ಸಭಾ ಭವನದಲ್ಲಿ ಜಿಲ್ಲಾಧಿಕಾರಿಯವರು ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸ್ಥಳೀಯ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಲ್ಕೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ Read More »

ಕರಾವಳಿ, ಕರ್ನಾಟಕ

ಬೇಸಿಗೆಯಲ್ಲಿ ಬೆವರುಗುಳ್ಳೆ ಸಮಸ್ಯೆಗೆ ಸೂಕ್ತ ಪರಿಹಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 18. ಬೇಸಿಗೆ ಕಾಲದಲ್ಲಿ ಬೆವರು ಮತ್ತು ಬೆವರುಗುಳ್ಳೆಯ ಸಮಸ್ಯೆಗಳು ಸಾಮಾನ್ಯ. ಆದ್ದರಿಂದ ಬೇಸಿಗೆ ಕಾಲದಲ್ಲಿ ಚರ್ಮದ ಆರೈಕೆ ಹೆಚ್ಚು ಗಮನ ನೀಡಬೇಕು. ಸರಿಯಾದ ಆರೈಕೆಯಿಂದ ಮಾತ್ರ ನಾವು ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಬಹುದು. ಬೇಸಿಗೆಯಲ್ಲಿ ಸೂರ್ಯನ ಬಿರುಬಿಸಿಲಿನ ಕಾರಣದಿಂದ ದೇಹ ಸಾಕಷ್ಟು ಬೆವರುತ್ತದೆ. ಬೆವರಿನಲ್ಲಿ ಹಲವಾರು ಸೂಕ್ಷ್ಮ ಬ್ಯಾಕ್ಟೀರಿಯಾಗಳಿರುತ್ತವೆ. ಪ್ರತಿದಿನ ದೇಹವನ್ನು ಚೆನ್ನಾಗಿ ಶುಚಿಗೊಳಿಸದಿದ್ದರೆ ಬೆವರುಗುಳ್ಳೆಗಳುಂಟಾಗಿ ಸಮಸ್ಯೆಯಾಗುತ್ತದೆ. ಬೆವರುಗುಳ್ಳೆಗಳು ತುರಿಕೆ ಮತ್ತು ಉರಿಯನ್ನು ಉಂಟುಮಾಡುತ್ತವೆ. ಕೆಲವೊಮ್ಮೆ ಕೆಂಪಗೆ ಕಾಣಿಸಿಕೊಂಡು ತೊಂದರೆ ಕೊಡುತ್ತವೆ.

ಬೇಸಿಗೆಯಲ್ಲಿ ಬೆವರುಗುಳ್ಳೆ ಸಮಸ್ಯೆಗೆ ಸೂಕ್ತ ಪರಿಹಾರ Read More »

ಆರೋಗ್ಯ ಮಾಹಿತಿ, ಕರ್ನಾಟಕ

ತಲೆ ಕೂದಲು ಬೆಳ್ಳಗಾಗುವುದು ‘ಹೃದಯ ಸಂಬಂಧಿ’ಖಾಯಿಲೆ ಲಕ್ಷಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 18. ವಯಸ್ಸಿಗಿಂತ ಮೊದಲೇ ಕೂದಲು ಬೆಳ್ಳಗಾಗೋದು ಸಾಮಾನ್ಯ ಕೂದಲು ಬೆಳ್ಳಗಾದವರು ಇದೇ ಕಾರಣ ಹೇಳಿ ನಿರ್ಲಕ್ಷ್ಯಿಸ್ತಾರೆ. ಕೂದಲು ಬೆಳ್ಳಗಾದ್ರೆ ನಿಮ್ಮ ಸೌಂದರ್ಯವೊಂದೇ ಹಾಳಾಗೋದಿಲ್ಲ. ಇದು ಇನ್ನೊಂದು ದೊಡ್ಡ ಖಾಯಿಲೆಯ ಬಗ್ಗೆ ಮುನ್ಸೂಚನೆ ನೀಡುತ್ತೆ. ನಿಮ್ಮ ಕೂದಲು ವಯಸ್ಸಿಗಿಂತ ಮೊದಲೇ ಹೆಚ್ಚು ಬೆಳ್ಳಗಾಗಿದ್ದರೆ ನಿಮಗೆ ಹೃದಯ ಸಂಬಂಧಿ ಖಾಯಿಲೆ ಕಾಡಲಿದೆ ಎಂದೇ ಅರ್ಥ. ಅಧ್ಯಯನವೊಂದು ಈ ವಿಷ್ಯವನ್ನು ಹೇಳಿದೆ. ಕೂದಲು ಬೆಳ್ಳಗಾಗುವ ಮೂಲಕ ಹೃದಯ ಸಂಬಂಧಿ ಖಾಯಿಲೆಗಳ ಬಗ್ಗೆ ಮುನ್ಸೂಚನೆ ನೀಡುತ್ತದೆ.

ತಲೆ ಕೂದಲು ಬೆಳ್ಳಗಾಗುವುದು ‘ಹೃದಯ ಸಂಬಂಧಿ’ಖಾಯಿಲೆ ಲಕ್ಷಣ Read More »

ಆರೋಗ್ಯ ಮಾಹಿತಿ, ಕರ್ನಾಟಕ

30 ನಗರಗಳೊಂದಿಗೆ ‘ಸಿಸ್ಟರ್ ಸಿಟಿ’ ಒಪ್ಪಂದ ಮಾಡಿಕೊಂಡ ನಿತ್ಯಾನಂದ

(ನ್ಯೂಸ್ ಕಡಬ) newskadaba.com ನವದೆಹಲಿ. ಮಾ 18. ವಿವಾದಿತ ಗುರು ನಿತ್ಯಾನಂದ, ಅತ್ಯಾಚಾರ ಮತ್ತು ಅಪಹರಣ ಪ್ರಕರಣಗಳ ಆರೋಪದ ಬಳಿಕ ಭಾರತದಿಂದ ಪರಾರಿಯಾಗಿ ದಕ್ಷಿಣ ಅಮೆರಿಕದ ದ್ವೀಪಗಳಲ್ಲಿ ನೆಲೆಸಿದ್ದು, ಆ ಪ್ರದೇಶವನ್ನು ಕೈಲಾಸ ದೇಶವೆಂದು ಘೋಷಿಸಿರುವುದಾಗಿ ವರದಿಯಾಗಿದೆ. ಇತ್ತೀಚೆಗೆ ಆ ದೇಶದ ಪ್ರತಿನಿಧಿಗಳು ವಿಶ್ವಸಂಸ್ಥೆಯಲ್ಲಿ ಭಾಗವಹಿಸಿ ಭಾರತದ ವಿರುದ್ಧ ಭಾಷಣ ಮಾಡಿದ್ದರು. ಆದರೆ, ವಿಶ್ವಸಂಸ್ಥೆಯ ಪ್ರತಿನಿಧಿಗಳು ಕೈಲಾಸ ದೇಶವನ್ನು ವಿಶ್ವಸಂಸ್ಥೆಯಿಂದ ಗುರುತಿಸಲಾಗಿಲ್ಲ ಮತ್ತು ಅವರ ಅಭಿಪ್ರಾಯಗಳನ್ನು ಪರಿಗಣಿಸದಿರಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಇದೀಗ ಮತ್ತೊಮ್ಮೆ ನಿತ್ಯಾನಂದ ಕೈಲಾಸ

30 ನಗರಗಳೊಂದಿಗೆ ‘ಸಿಸ್ಟರ್ ಸಿಟಿ’ ಒಪ್ಪಂದ ಮಾಡಿಕೊಂಡ ನಿತ್ಯಾನಂದ Read More »

ರಾಷ್ಟ್ರೀಯ ನ್ಯೂಸ್

ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ ➤ಆಟೋ ಡ್ರೈವರ್ ಅರೆಸ್ಟ್

(ನ್ಯೂಸ್ ಕಡಬ) newskadaba.com.ಬೆಂಗಳೂರು, ಮಾ. 17. ಶಾಲೆಯಿಂದ ಹಿಂತಿರುಗುತ್ತಿದ್ದಾಗ ಅಪ್ರಾಪ್ತ ಬಾಲಕಿಗೆ ಆರೋಪಿ ಆಮಿಷ ಒಡ್ಡಿ ಮನೆಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಪುನೀತ್​ನನ್ನು ಪೊಲೀಸರು ಬಂಧಿಸಿದ್ದಾರೆ. ಶಾಲೆಯಿಂದ ಹಿಂದಿರುಗುತ್ತಿದ್ದ ಅಪ್ರಾಪ್ತ ಬಾಲಕಿಗೆ ಆಮಿಷ ಒಡ್ಡಿ ಮನೆಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ರಾಮನಗರ ಜಿಲ್ಲೆಯ ರಾಮದೇವರಬೆಟ್ಟ ರಸ್ತೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಆಟೋರಿಕ್ಷಾ ಚಾಲಕ ಪುನೀತ್ (33) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ರಾಮದೇವರ ಬೆಟ್ಟ

ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ ➤ಆಟೋ ಡ್ರೈವರ್ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top