ಕಡಬ ನ್ಯೂಸ್

ಕಡಬ : ಗ್ಯಾಸ್ ಸಿಲಿಂಡರ್ ಸ್ಪೋಟ, ಅಪಾರ ಪ್ರಮಾಣದ ನಷ್ಟ

(ನ್ಯೂಸ್ ಕಡಬ) newskadaba.com ಕಡಬ, ಆ.07:  ಕಡಬ ತಾಲೂಕು ಬಲ್ಯ ಗ್ರಾಮದ ಕೆರೆನಡ್ಕ ದರ್ಣಪ್ಪ‌ ಗೌಡ ಎಂಬುವವರ ಮನೆಯಲ್ಲಿ ಗುರುವಾ ರಾತ್ರಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ.     ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ರಭಸಕ್ಕೆ ಮನೆಯ ಮೇಲ್ಚಾವಣಿ ಭಾಗಷ: ಹಾನಿಗೊಂಡಿದೆ. ಮನೆಯ ಗೋಡೆ ಬಿರುಕು ಬಿಟ್ಟಿದೆ. ಕೋಣೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದ್ದು, ಚೆಲ್ಲಾಪಿಲ್ಲಿಯಾಗಿವೆ, ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.ಸದ್ಯ ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದರೆ. ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಕಡಬ : ಗ್ಯಾಸ್ ಸಿಲಿಂಡರ್ ಸ್ಪೋಟ, ಅಪಾರ ಪ್ರಮಾಣದ ನಷ್ಟ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ :ಗಾಳಿ ಮಳೆಗೆ ರಸ್ತೆಗೆ ಉರುಳಿದ ಮರ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಆ.07: ಕಳೆದ ದಿನ ಸುರಿದ ಭಾರಿ ಮಳೆಗೆ ಧರ್ಮಸ್ಥಳದ ಶಾಂತಿವನ ಬಳಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ರಸ್ತೆ ತಡೆ ಉಂಟಾದ ಘಟನೆ ಕಳೆದ ದಿನ ಬೀಸಿದ ಗಾಳಿ ಗೆ ನಡೆದಿದೆ.   ವಿದ್ಯುತ್ ಕಂಬದ ಮೇಲೆ ಪರಿಣಾಮ ವಿದ್ಯುತ್ ತಂತಿಗಳು ರಸ್ತೆಗೆ ಬಿದಿದ್ದೆ. ಆದರೆ ಯಾವುದೇ ರೀತಿಯ ಹಾನಿಯಾಗಿಲ್ಲ. ಇನ್ನು ರಸ್ತೆಗೆ ಉರುಳಿ ಬಿದಿದ್ದ ಮರಗಳನ್ನು ಸ್ಥಳೀಯರು ತೆರವುಗೊಳಿಸಿದ್ದಾರೆ.  

ಧರ್ಮಸ್ಥಳ :ಗಾಳಿ ಮಳೆಗೆ ರಸ್ತೆಗೆ ಉರುಳಿದ ಮರ Read More »

ಕರಾವಳಿ, ಕರ್ನಾಟಕ

ಪೆರ್ನೆಮ್ ಸುರಂಗದ ಗೋಡೆ ಕುಸಿತ➤ಕೊಂಕನ್ ರೈಲ್ವೆ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಮಂಗಳೂರು: ಆ.07., ಭಾರಿ ಮಳೆಯಿಂದಾಗಿ ಗೋವಾದ ಪೆರ್ನೆಮ್‌ನಲ್ಲಿ ಸುರಂಗ ಗೋಡೆಯ ಒಂದು ಭಾಗ ಕುಸಿದ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವ ಕೊಂಕಣ್ ರೈಲ್ವೆ ಎಲ್ಲಾ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಉತ್ತರ ಗೋವಾ ಜಿಲ್ಲೆಯ ಪೆರ್ನೆಮ್‌ನಲ್ಲಿ ಸುರಂಗದೊಳಗಿನ ಗೋಡೆಯ ಐದು ಮೀಟರ್ ಭಾಗ ಗುರುವಾರ ಮುಂಜಾನೆ 2.50 ರ ಸುಮಾರಿಗೆ ಕುಸಿದಿದೆ.  ಇದೀಗ ರೈಲ್ವೆ ಹಳಿ ಮೇಲೆ ಸುರಿದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ. ಕುಸಿದ ಗೋಡೆಯ ದುರಸ್ಥಿ ಪ್ರಗತಿಯಲ್ಲಿದೆ. ಮುಂದಿನ ಸೂಚನೆ ತನಕ

ಪೆರ್ನೆಮ್ ಸುರಂಗದ ಗೋಡೆ ಕುಸಿತ➤ಕೊಂಕನ್ ರೈಲ್ವೆ ಸಂಚಾರ ಸ್ಥಗಿತ Read More »

ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ ತಾಲೂಕಿನಲ್ಲಿ ಪ್ರವಾಹದ ಆತಂಕ➤ ಮುನ್ನೆಚ್ಚರಿಕ ಕ್ರಮವಾಗಿ 32 ಕುಟುಂಬಗಳ ಸ್ಥಳಾಂತರ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಆ.7:  ಕರಾವಳಿ ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನೇತ್ರಾವತಿಯ ಉಪನದಿಗಳು ಉಕ್ಕಿಹರಿಯುತ್ತಿದೆ.ಇದರಿಂದಾಗಿ ಈ ಭಾಗದಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಹಾಗಾಗಿ ಮುನ್ನೆಚ್ಚರಿಕ ಕ್ರಮವಾಗಿ ತಾಲೂಕು ಆಡಳಿತ ಕಾಳಜಿ ಕೇಂದ್ರಕ್ಕೆ ಎಂಟು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಇನ್ನು, ಮಿತ್ತಬಾಗಿಲು ಗ್ರಾಮದ ಗಣೇಶ್ ನಗರವನ್ನು ಅಪಾಯಕಾರಿ ಪ್ರದೇಶ ಎಂದು ಗುರುತಿಸಿ ಇಲ್ಲಿ ವಾಸವಾಗಿರುವ 32 ಕುಟುಂಬಗಳನ್ನು ಗುರುವಾರ ರಾತ್ರಿಯೇ ತಾಲೂಕು ಆಡಳಿತ ಸ್ಥಳಾಂತರಿಸಿದೆ. ಜಿಲ್ಲಾಡಳಿತದ ಸೂಚನೆಯಂತೆ ಪುತ್ತೂರು ಸಹಾಯಕ ಕಮಿಷನರ್ ಯತೀಶ್ ಉಳ್ಳಾಲ್, ತಹಶೀಲ್ದಾರ್ ಮಹೇಶ್ ಜೆ. ಅವರು

ಬೆಳ್ತಂಗಡಿ ತಾಲೂಕಿನಲ್ಲಿ ಪ್ರವಾಹದ ಆತಂಕ➤ ಮುನ್ನೆಚ್ಚರಿಕ ಕ್ರಮವಾಗಿ 32 ಕುಟುಂಬಗಳ ಸ್ಥಳಾಂತರ Read More »

ಕರಾವಳಿ

ಕಡಬ : ಗರ್ಭಿಣಿ ಮಹಿಳೆಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಆ.06: ಕೊಡಿಂಬಾಳ ಗ್ರಾಮದ ಗರ್ಭಿಣಿ ಮಹಿಳೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸುಮಾರು 30ವರ್ಷದ ಪ್ರಾಯದ ಮಹಿಳೆ ಪರೀಕ್ಷೆ ಗೆಂದು ಸುಳ್ಯ ಆಸ್ಪತ್ರೆ ಗೆ ಹೊಗಿದ್ದು ಅಲ್ಲಿ ಕೊರೋನಾ ಪರೀಕ್ಷೆ ಗೆ ಒಳಪಡಿಸಲಾಗಿತ್ತು. ಅದರ ವರದಿ ಇದೀಗ ಪಾಸಿಟಿವ್ ಬಂದಿದೆ. ಮಹಿಳೆ ಇದೀಗ ಸುಳ್ಯ ಆಸ್ಪತ್ರೆ ಯಲ್ಲಿ ಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂದು ಕಡಬ ಸಮುದಾಯ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ ಡಾ. ಸುಚಿತ್ರಾ ರಾವ್ ತಿಳಿಸಿದ್ದಾರೆ.      

ಕಡಬ : ಗರ್ಭಿಣಿ ಮಹಿಳೆಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ಮತ್ತೊಬ್ಬ ನಟ ಆತ್ಮಹತ್ಯೆ ➤ ಮುಂಬೈನಲ್ಲಿ ಸಮೀರ್ ಶರ್ಮಾ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಮುಂಬೈ, ಆ.06:  ನಟ ಸುಶಾಂತ್ ಸಿಂಗ್ ಸಾವಿನ ನೋವು ಮಾಸುವ ಮುನ್ನವೇ ಕಿರುತೆರೆ ಕ್ಷೇತ್ರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ, ನಟ ಸಮೀರ್ ಶರ್ಮಾ ಮುಂಬೈ ಉಪನಗರ ನಿವಾಸದಲ್ಲಿ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ.   ಸಮೀರ್ ಶರ್ಮ ಅವರಿಗೆ 44 ವರ್ಷ ವಯಸ್ಸಾಗಿತ್ತು. ಧಾರಾವಾಹಿಗಳಲ್ಲಿ ವಿವಿಧ ಪಾತ್ರಗಳ ಮೂಲಕ ಹೆಸರುವಾಸಿಯಾಗಿದ್ದರು. “ಕ್ಯೂಂಕಿ ಸಾಸ್ ಭಿ ಕಭಿ ಬಹು ತಿ, “,”ಕಹಾನಿ ಘರ್ ಘರ್ ಕಿ “ಮತ್ತು” “ಯೆ ರಿಶ್ತೆ ಹೈ ಪ್ಯಾರ್ ಕೆ” ಮೊದಲಾದ

ಮತ್ತೊಬ್ಬ ನಟ ಆತ್ಮಹತ್ಯೆ ➤ ಮುಂಬೈನಲ್ಲಿ ಸಮೀರ್ ಶರ್ಮಾ ನೇಣಿಗೆ ಶರಣು Read More »

ಕರಾವಳಿ

ನಾಳೆ (ಆ7)ಕ್ಕೆ ಹೊರಬಿಳಲಿದೆ ಎಸ್.ಎಸ್.ಎಲ್.ಸಿ ಫಲಿತಾಂಶ➤ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳೆಂದ ಶಿಕ್ಷಣ ಸಚಿವರು

(ನ್ಯೂಸ್ ಕಡಬ) newskadaba.com.ಬೆಂಗಳೂರು, ಆ.6:  ಕೊರೊನಾ ಹೆಮ್ಮಾರಿಯ ಮಧ್ಯೆ ಸುಸೂತ್ರವಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿರುವ ವಿಧ್ಯಾರ್ಥಿಗಳು ಇದೀಗ ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ಶೀಘ್ರದಲ್ಲೇ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಬಿಡುಗಡೆ ಮಾಡಲಿದೆ, ಆದರೆ ಎಸ್ಸೆಸ್ಸೆಲ್ಸಿ ಫಲಿತಾಂಶವು ಆಗಸ್ಟ್ 7ಕ್ಕೆಂದು ಇಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸುದ್ದಿಯಾಗುತ್ತಿತ್ತು. ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ‘ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಎಂಬ ಸುದ್ದಿ ಸತ್ಯವಲ್ಲ, ಇನ್ನೂ

ನಾಳೆ (ಆ7)ಕ್ಕೆ ಹೊರಬಿಳಲಿದೆ ಎಸ್.ಎಸ್.ಎಲ್.ಸಿ ಫಲಿತಾಂಶ➤ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳೆಂದ ಶಿಕ್ಷಣ ಸಚಿವರು Read More »

ಕರ್ನಾಟಕ

ದಿವಂಗತ ಸುಷ್ಮಾ ಸ್ವರಾಜ್ ಪುಣ್ಯಸ್ಮರಣೆ ➤ ಮುಖ್ಯಮಂತ್ರಿ, ಶ್ರೀರಾಮುಲು ಗೌರವ ನಮನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.06:  ಕೇಂದ್ರದ ಮಾಜಿ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರ ಪುಣ್ಯ ಸ್ಮರಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಹಲವು ಗಣ್ಯರು ಸುಷ್ಮಾ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.   ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿ, ಭಾರತೀಯ ನಾರಿ ಶಕ್ತಿಯ ಪ್ರತೀಕದಂತಿದ್ದ, ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪುಣ್ಯ ತಿಥಿಯಂದು ಅವರನ್ನು ಸ್ಮರಿಸೋಣ. ಸವಾಲುಗಳಿಗೆ ಎಂದೂ ಅಂಜದೆ, ರಾಜಕೀಯ ವಿರೋಧಿಗಳ ವಿರುದ್ಧ ಅವರು ತಮ್ಮ ಬಲವಾದ

ದಿವಂಗತ ಸುಷ್ಮಾ ಸ್ವರಾಜ್ ಪುಣ್ಯಸ್ಮರಣೆ ➤ ಮುಖ್ಯಮಂತ್ರಿ, ಶ್ರೀರಾಮುಲು ಗೌರವ ನಮನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ನೇತ್ರಾವತಿ ಸೇತುವೆಯ ಮೇಲೆ ಬೈಕ್ ಪತ್ತೆ ➤ ಬೈಕ್ ಸವಾರ ನಾಪತ್ತೆ, ದೂರು ದಾಖಲು

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ.06:  ನೇತ್ರಾವತಿ ಸೇತುವೆಯ ಮೇಲೆ  ಬುಧವಾರ ಬೈಕ್‌ ಒಂದು ಪತ್ತೆಯಾಗಿದ್ದು ಬೈಕ್‌ ಸವಾರ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಇವರು ನಾಪತ್ತೆಯಾಗಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪತ್ನಿ ನಾಪತ್ತೆ ದೂರು ದಾಖಲಿಸಿದ್ದಾರೆ.   ನಾಪತ್ತೆಯಾದವರನ್ನ 32 ಎರಡು ವರ್ಷ ಪ್ರಾಯದ ಎಂ. ರಘು ಎಂದು ಗುರುತಿಸಲಾಗಿದೆ. ಮೊಗವೀರಪಟ್ನದ ಪತ್ನಿ ಮನೆಯಿಂದ ಪಿಲಾರು ಲಕ್ಷ್ಮೀಗುಡ್ಡೆಯ ಖಾಸಗಿ ಆಹಾರ ಸಂಸ್ಥೆಗೆ ರಾತ್ರಿ ಪಾಳಯದ ಉದ್ಯೋಗಕ್ಕೆ ತೆರಳಿದವರು ಮರಳಿ ವಾಪಸ್ಸಾಗದೆ ನಾಪತ್ತೆಯಾಗಿದ್ದಾರೆ. ಮರುದಿನ ಉಳ್ಳಾಲ ನೇತ್ರಾವತಿ

ನೇತ್ರಾವತಿ ಸೇತುವೆಯ ಮೇಲೆ ಬೈಕ್ ಪತ್ತೆ ➤ ಬೈಕ್ ಸವಾರ ನಾಪತ್ತೆ, ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊರೊನಾ ಜೊತೆಗೆ ಇತರ ಕಾಯಿಲೆಗಳ ನಿಯಂತ್ರಣಕ್ಕೂ ಆದ್ಯತೆ ನೀಡಿ ➤ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆರೋಗ್ಯ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com.ಮಂಗಳೂರು, ಆ.6: ಅಪಾಯಕಾರಿ ಜಾಗಗಳಲ್ಲಿ ಮನೆ, ಕಟ್ಟಡ, ವಾಣಿಜ್ಯ ಸಂಕೀರ್ಣ ಸೇರಿದಂತೆ ಯಾವುದೇ ರೀತಿಯ ನಿರ್ಮಾಣ ಚಟುವಟಿಕೆಗಳಿಗೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಳೆ, ನೆರೆ ಸೇರಿದಂತೆ ಪ್ರಾಕೃತಿಕ ದುರ್ಘಟನೆಗಳು ನಡೆದಾಗ ಇಂತಹ ಸ್ಥಳಗಳಲ್ಲಿ ನಿರ್ಮಿಸಿದ ಕಟ್ಟಡಗಳೇ ಕುಸಿದು, ಜೀವಹಾನಿ ಆಗಿರುವುದು ಬೆಳಕಿಗೆ ಬಂದಿದೆ. ಗುಡ್ಡವನ್ನು ಅವೈಜ್ಞಾನಿಕವಾಗಿ ಕಡಿದು ಕಟ್ಟಡ

ಕೊರೊನಾ ಜೊತೆಗೆ ಇತರ ಕಾಯಿಲೆಗಳ ನಿಯಂತ್ರಣಕ್ಕೂ ಆದ್ಯತೆ ನೀಡಿ ➤ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆರೋಗ್ಯ ಇಲಾಖೆ ಸೂಚನೆ Read More »

ಕರಾವಳಿ
Scroll to Top