ಕಡಬ ನ್ಯೂಸ್

ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿಪೂಜೆ ➤ ನಿರ್ವಿಘ್ನವಾಗಿ ನಡೆಯಲು ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com.ಬಂಟ್ವಾಳ ,ಆ.5: ಅಯೋಧ್ಯೆಯಲ್ಲಿ ಶ್ರೀರಾಮಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೂಮಿಪೂಜೆ ನೆರವೇರಿಸಲಿದ್ದು. ಈ ಕಾರ್ಯಕ್ರಮ ಯಶಸ್ವಿಯಾಗಲಿ ಮುಂದೆ ಮಂದಿರ ನಿರ್ಮಾಣ ಕಾರ್ಯವು ಕೂಡ ಸೂಸುತ್ರವಾಗಿ ನಡೆಯಲೆಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ವತಿಯಿಂದ ಜಗನ್ಮಾತೆ ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಅಯೋಧ್ಯೆ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕರವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ […]

ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿಪೂಜೆ ➤ ನಿರ್ವಿಘ್ನವಾಗಿ ನಡೆಯಲು ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ Read More »

ಕರಾವಳಿ

ಥಲಸ್ಸೆಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗಾಗಿ ರಕ್ತದಾನ ಮಾಡಿದ ಸಂಸದೆ ಶೋಭಾ ಕರಂದ್ಲಾಜೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05:  ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗಾಗಿ ಸಂಸದೆ ಶೋಭಾ ಕರಂದ್ಲಾಜೆ ರವರು ರಕ್ತ ದಾನ ಮಾಡಿದರು. ಪ್ರತೀ 3 ತಿಂಗಳಿಗೊಂದು ಬಾರಿ ರಕ್ತದಾನ ಮಾಡುವ ಶೋಭಾ ಕರಂದ್ಲಾಜೆ, ಕಳೆದ ದಿನ ರಾಷ್ಟ್ರೋತ್ತಾನ ರಕ್ತ ನಿಧಿಯ ಮೂಲಕ ಥಲಸ್ಸೆಮಿಯಾ ಎಂಬ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ರಕ್ತದಾನ ಮಾಡಿದರು.   ಬೆಂಗಳೂರಿನ ರಾಷ್ಟ್ರೋತ್ತಾನ ರಕ್ತ ನಿಧಿಯ ವಿಶೇಷ ರೀತಿಯ ಸೇವೆ ಮಾಡುತ್ತಿದೆ. ಪ್ರತೀ ತಿಂಗಳು 700ಕ್ಕೂ ಅಧಿಕ ಥಲಸ್ಸೆಮಿಯಾ ಹಾಗೂ ಇತರ ವಿಶಿಷ್ಟ ಕಾಲಯಿಲೆಗಳಿಂದ

ಥಲಸ್ಸೆಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗಾಗಿ ರಕ್ತದಾನ ಮಾಡಿದ ಸಂಸದೆ ಶೋಭಾ ಕರಂದ್ಲಾಜೆ Read More »

ಕರಾವಳಿ, ಕರ್ನಾಟಕ

ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ➤ ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.04:  ಹಿಂದೂಗಳ ದಶಕಗಳ ಕನಸು ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಮಂಗಳೂರಿನಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.   ಆಗಸ್ಟ್ 5 ಅಂದರೆ ನಾಳೆ ಆಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅವರು ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದು, ಇದೇ ಕಾರಣಕ್ಕೆ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಮಂಗಳೂರು ಪೊಲೀಸರು ನಾಳೆ ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಸಿಆರ್ ಪಿಸಿ ಸೆಕ್ಷನ್ 144 ಜಾರಿ

ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ➤ ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ Read More »

ಕರಾವಳಿ

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 12ಮಂದಿಗೆ ಕೊರೊನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com.ಕಡಬ,ಆ.4: ಈಗಾಗಲೇ ಪುತ್ತೂರು ಮತ್ತು ಕಡಬ ಉಭಯ ತಾಲೂಕಿನಲ್ಲಿ ತಾಂಡವವಾಡುತ್ತಿರ ಕೊರೊನಾ ಇಂದು ಮತ್ತೆ 12 ಮಂದಿಗೆ ವಕ್ಕರಿಸಿದೆ. ಪುತ್ತೂರಿನ ಪಡೀಲ್‌ ನಿವಾಸಿ 29 ವರ್ಷದ ಮಹಿಳೆ, ಬನ್ನೂರು ಆನೆಮಜಲು ನಿವಾಸಿ 53 ವರ್ಷದ ಮಹಿಳೆ, ನೆಹರೂನಗರ ನಿವಾಸಿ 32 ವರ್ಷದ ಮಹಿಳೆ, ಕಲ್ಲಾರೆಯ 30 ವರ್ಷದ ಮಹಿಳೆ,ಉಪ್ಪಿನಂಗಡಿ ನಿವಾಸಿ 85 ವರ್ಷದ ವೃದ್ಧ ತಾರಿಗುಡ್ಡೆ ನಿವಾಸಿ 34ರ ವ್ಯಕ್ತಿ, ಪೂತ್ತೂರಿನ ತೆಂಕಿಲ ನಿವಾಸಿ 53 ವರ್ಷದ ವ್ಯಕ್ತಿ, ಆರ್ಯಾಪು ಗ್ರಾಮದ ಕುರಿಯ ನಿವಾಸಿ

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 12ಮಂದಿಗೆ ಕೊರೊನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಮದುವೆ ಮಾಡಿಸಿಲ್ಲ ಎಂಬ ಕೋಪಕ್ಕೆ ನಾಲ್ವರನ್ನು ಹತ್ಯೆ ಮಾಡಿದ ಭೂಪ !

(ನ್ಯೂಸ್ ಕಡಬ) newskadaba.com.ಕಾಸರಗೋಡು,ಆ.4: ವ್ಯಕ್ತಿಯೋರ್ವ ತನಗೆ ಮದುವೆ ಮಾಡಿಸಿಲ್ಲ ಎಂಬ ಕೋಪದಿಂದ ತನ್ನ ಮೂವರು ಮಾವಂದಿರು ಮತ್ತು ಚಿಕ್ಕಮ್ಮನನ್ನು ಕೊಡಲಿಯಿಂದ ಕಡಿದು ಹತ್ಯೆ ಮಾಡಿದ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಉದಯ(45) ಎಂಬಾತ ಕೊಲೆ ಆರೋಪಿಯಾಗಿದ್ದು, ಕೂಲಿ ಕಾರ್ಮಿಕರಾಗಿರುವ ಮಾವಂದಿರದ ಬಾಬು (65), ವಿಠಲ (60), ಸದಾಶಿವ (55), ದೇವಕಿ (58) ಮೃತಪಟ್ಟವರು. ಅವಿವಾಹಿತರಾಗಿರುವ ಉದಯ, ಕಳೆದ ಕೆಲವು ವರ್ಷಗಳಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದ ಎಂದು ಹೇಳಲಾಗಿದೆ. ನಾಲ್ಕು ದಿನಗಳ ಹಿಂದೆ, ತನಗೆ

ಮದುವೆ ಮಾಡಿಸಿಲ್ಲ ಎಂಬ ಕೋಪಕ್ಕೆ ನಾಲ್ವರನ್ನು ಹತ್ಯೆ ಮಾಡಿದ ಭೂಪ ! Read More »

ಕರ್ನಾಟಕ

ಚಲಿಸುತ್ತಿದ್ದ ಪಿಕಪ್ ಮೇಲೆ ಉರುಳಿ ಬಿದ್ದ ಹೈಟೆನ್ಸನ್ ವಿದ್ಯುತ್ ಕಂಬ ➤ ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಆ.04:  ಕರಾವಳಿಯಲ್ಲಿ ಮಳೆರಾಯನ ಅಬ್ಬರ ಮುಂದವರಿಯುತ್ತಿದ್ದು, ಸಣ್ಣ ಪುಟ್ಟ ಅವಾಂತಗಳು ಸೃಷ್ಟಿಯಾಗುತ್ತಲೇ ಇದೆ. ಬೆಳ್ತಂಗಡಿ ತಾಲೂಕಿನಲ್ಲಿ ಸುರಿಯುತ್ತಿರುವ ಮಳೆಗೆ ಪಡಂಗಡಿ ಗ್ರಾಮದ ಕನ್ನಡಿ ಕಟ್ಟೆ ರಬ್ಬರ್ ನರ್ಸರಿ ಮುಂಬಾಗದಲ್ಲಿ ಚಲಿಸುತ್ತಿದ್ದ ಪಿಕಪ್ ವಾಹನದ ಮೇಲೆ ಕರೆಂಟ್ ಕಂಬವೊಂದು ಉರುಳಿ ಬಿದ್ದ ದುರ್ಘಟನೆ ಇಂದು ಮುಂಜಾನೆ ಸಂಭವಿಸಿದೆ.       ಇತ್ತಿಚೆಗೆ ಸುರಿಯುತ್ತಿರುವ ಭಾರಿ ಮಳೆಗೆ ಇಲ್ಲಿನ ಸುಬೋದ್ ಮಹಲ್ ಬಳಿ ಚಲಿಸುತ್ತಿದ್ದ ಪಿಕಪ್ ವಾಹನ ದ ಮೇಲೆ ಹೈಟೆನ್ಸನ್

ಚಲಿಸುತ್ತಿದ್ದ ಪಿಕಪ್ ಮೇಲೆ ಉರುಳಿ ಬಿದ್ದ ಹೈಟೆನ್ಸನ್ ವಿದ್ಯುತ್ ಕಂಬ ➤ ತಪ್ಪಿದ ಭಾರಿ ಅನಾಹುತ Read More »

ಕರಾವಳಿ, ಕರ್ನಾಟಕ

ವರ್ಕ್ ಫ್ರಮ್ ಹೋಮ್ ಗೆ ಇಂಟರ್ ನೆಟ್ ಸಮಸ್ಯೆ ಹಿನ್ನೆಲೆ ➤ ಕ್ಯೂಬಿಕಲ್ ಸೆಂಟರ್ ಆರಂಭ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.04:  ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಪುತ್ತೂರಿನಲ್ಲಿ ಉದ್ಯೋಗಿಗಳಿಗೆ ಕ್ಯೂಬಿಕಲ್ ಸೆಂಟರ್ ಆರಂಭಿಸುವ ಮೂಲಕ ರಾಜ್ಯದಲ್ಲೇ ಪ್ರಥಮ ಪ್ರಯತ್ನ ಮಾಡುವ ಮೂಲಕ ಉದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಕೊರೋನಾ ವಿರುದ್ಧದ ಹೋರಾಟವನ್ನು ಸಮರ್ಥವಾಗಿ ಎದುರಿಸಿ ಪುತ್ತೂರು ತಾಲೂಕನ್ನು ರಾಜ್ಯಕ್ಕೆ ಮಾದರಿಯಾಗಿ ರೂಪಿಸಿದ ಹೆಮ್ಮೆ ಇವರದ್ದು. ನಗರದಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಸದ್ಯ ಮನೆಯಿಂದಲೇ ತಮ್ಮ ಕೆಲಸವನ್ನ ಮಾಡುವ ಒತ್ತಡವನ್ನ ಎದುರಿಸುತ್ತಿದ್ದಾರೆ.   ಕೊವಿಡ್ 19 ಹಿನ್ನಲೆಯಲ್ಲಿ ಮಹಾನಗರದಲ್ಲಿ ಕೆಲಸ ಮಾಡುತ

ವರ್ಕ್ ಫ್ರಮ್ ಹೋಮ್ ಗೆ ಇಂಟರ್ ನೆಟ್ ಸಮಸ್ಯೆ ಹಿನ್ನೆಲೆ ➤ ಕ್ಯೂಬಿಕಲ್ ಸೆಂಟರ್ ಆರಂಭ Read More »

ಕರಾವಳಿ, ಕರ್ನಾಟಕ

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಭೂ ಕುಸಿತದ ಭೀತಿ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಆ.4: ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಚುರುಕುಗೊಂಡಿರುವ ಮಳೆರಾಯ ಅಲ್ಲಲ್ಲಿ ಅವಾಂತರಗಳನ್ನು ಸೃಷ್ಟಿಸುತ್ತಿದ್ದಾನೆ. ಬೆಳ್ತಂಗಡಿ ತಾಲೂಕಿನಾದ್ಯಂತ ನಿನ್ನೆ ರಾತ್ರಿ ಸುರಿದ ಬಾರಿ ಮಳೆಯಿಂದ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಭೂ ಕುಸಿತ ಸಂಭವಿಸಿದೆ. ಮೂಡಿಗೆರೆ ತಾಲೂಕಿಗೆ ಸೇರಿದ ಕೆಲವೆಡೆ ಕೂಡ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿತ ಉಂಟಾಗಿದ್ದು . ತಕ್ಷಣ ಮಣ್ಣನ್ನು ತೆರವುಗೊಳಿಸಲಾಗಿದೆ.ಬೆಳ್ತಂಗಡಿ ತಾಲೂಕಿನಲ್ಲಿ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಕಳೆದ ಕೆಲವು

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಭೂ ಕುಸಿತದ ಭೀತಿ Read More »

ಕರಾವಳಿ

ಮಾತೃಭಾಷೆಯಾಗಿ ಒಂದನೇ ತರಗತಿಯಿಂದಲೇ ಕೊಂಕಣಿ ಕಲಿಕೆಗೆ ಅವಕಾಶ ಕೋರಿಕೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಆ.4:  ದೇಶದ ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಬದಲಿಸಿದ ರಾಷ್ಟ್ರೀಯ ಶಿಕ್ಷಣ ನೀತಿ 2020 ಕ್ಕೆ ಅನುಗುಣವಾಗಿ ಕೊಂಕಣಿಗರಿಗೆ ಒಂದನೇ ತರಗತಿಯಿಂದಲೇ ಮಾತೃಭಾಷೆ ಕಲಿಯಲು ಅನುವು ಮಾಡಿಕೊಡುವಂತೆ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲು ವಿಶ್ವ ಕೊಂಕಣಿ ಕೇಂದ್ರ ನಿರ್ಧರಿಸಿದೆ. ಈ ಬಗ್ಗೆ ನಗರದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ಬಸ್ತಿ ವಾಮನ ಶೆಣೈ ಅವರು ಮಾತನಾಡಿ, ರಾಜ್ಯದಲ್ಲಿ ಅಲ್ಪಸಂಖ್ಯಾಕ ಭಾಷೆಯಾಗಿರುವ ಕೊಂಕಣಿಯನ್ನು ಶಾಲೆಗಳಲ್ಲಿ ತೃತೀಯ ಐಚ್ಛಿಕ ಭಾಷೆ

ಮಾತೃಭಾಷೆಯಾಗಿ ಒಂದನೇ ತರಗತಿಯಿಂದಲೇ ಕೊಂಕಣಿ ಕಲಿಕೆಗೆ ಅವಕಾಶ ಕೋರಿಕೆ Read More »

ಕರಾವಳಿ

ನಾಳೆ ಬಿಳಿನೆಲೆಯಲ್ಲಿ ಉಚಿತ ಕೊರೋನಾ ಟೆಸ್ಟ್

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಆ.04: ನಾಳೆ ದಿನಾಂಕ 05/08/2020 ನೆ ಬುಧವಾರ ದಂದು ದ. ಕ. ಜಿ.ಪ.ಹಿ. ಪ್ರ ಶಾಲೆ ಬೈಲು ಬಿಳಿನೆಲೆ ಬಳಿ ಉಚಿತವಾಗಿ ಉಚಿತ ಕೊವೀಡ್ ಪರೀಕ್ಷೆ  (CORONA RAPID TEST CAMP)  ನಡೆಯಲಿದೆ.   ಬೆಳಿಗ್ಗೆ ಗಂಟೆ 10.30 ರಿಂದ 1.00 ಗಂಟೆ ವರೆಗೆ  ಕೊರೋನಾ ಹರಡದಂತೆ ಮಾಡಲು ಪರೀಕ್ಷೆ ಮಾಡಿಸಿಕೊಳ್ಳುವುದು ಸುಲಭ ಮತ್ತು ಉಚಿತ ವಿಧಾನ ಇದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮದ ಜನರು ಸ್ವಯಂ ಪ್ರೇರಿತರಾಗಿ ಬಂದು ಪರೀಕ್ಷೆ ಮಾಡಿಸಿಕೊಳ್ಳಲು

ನಾಳೆ ಬಿಳಿನೆಲೆಯಲ್ಲಿ ಉಚಿತ ಕೊರೋನಾ ಟೆಸ್ಟ್ Read More »

ಕರಾವಳಿ, ಕರ್ನಾಟಕ
Scroll to Top