ಕಡಬ ನ್ಯೂಸ್

ಬಂಟ್ವಾಳ ಬೈಕ್ ಗೆ ಕಾರು ಹಿಂಬದಿಯಿಂದ ಢಿಕ್ಕಿ ➤ ಓರ್ವ ಮೃತ್ಯು, ಇನ್ನೋರ್ವ ಗಂಭೀರ!

(ನ್ಯೂಸ್ ಕಡಬ) newskadaba.com. ಬಂಟ್ವಾಳ, ಮಾ 13. ಬೈಕ್ ಗೆ  ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮವಾಗಿ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡ  ಘಟನೆ ಬಂಟ್ವಾಳ ಸಮೀಪದ ರಾಯಿ ಎಂಬಲ್ಲಿ ನಡೆದಿದೆ. ಬಂಟ್ವಾಳ ಬೈಪಾಸ್ ನಿವಾಸಿ  ಗುತ್ತಿಗೆದಾರ ಚಂದ್ರಶೇಖರ ಮೃತಪಟ್ಟ ವ್ಯಕ್ತಿ. ಬಂಟ್ವಾಳ ನಿವಾಸಿ  ಯೋಗೀಶ್ ಗಂಭೀರವಾಗಿ ಗಾಯಗೊಂಡ ವ್ಯಕ್ತಿ. ಸಿದ್ದಕಟ್ಟೆಯಿಂದ ಬಂಟ್ವಾಳ ಕಡೆ ಬರುತ್ತಿದ್ದ ವೇಳೆ  ರಾಯಿ ಎಂಬಲ್ಲಿ ಹಿಂಬದಿಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ದಲ್ಲಿ ಹಿಂಬದಿಯ ಸವಾರನಾಗಿದ್ದ ಚಂದ್ರಶೇಖರ […]

ಬಂಟ್ವಾಳ ಬೈಕ್ ಗೆ ಕಾರು ಹಿಂಬದಿಯಿಂದ ಢಿಕ್ಕಿ ➤ ಓರ್ವ ಮೃತ್ಯು, ಇನ್ನೋರ್ವ ಗಂಭೀರ! Read More »

ಕರಾವಳಿ, ಕ್ರೈಮ್ ನ್ಯೂಸ್

➤ಉಪ್ಪಿನಂಗಡಿ ಬಾಲಕಿಯ ಅತ್ಯಾಚಾರ ಯತ್ನ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com. ಉಪ್ಪಿನಂಗಡಿ, ಮಾ 13. ಬಾಲಕಿಯೋರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ  ಘಟನೆ ಉಪ್ಪಿನಂಗಡಿಯಲ್ಲಿ  ನಡೆದಿದೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿಗಳನ್ನು ಹಸೈನಾರ್ (24) ಹಾಗೂ ಅಬ್ಬಾಸ್ (30) ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಕಳೆದ ಮೂರು ದಿನಗಳಿಂದ ಮರ ತುಂಡರಿಸುವ ಕೆಲಸದ ನಿಮಿತ್ತ ಕರಾಯ ಗ್ರಾಮದಲ್ಲಿ ಕಾರ್ಯ ನಿರ್ವಹಿಸಿದ್ದು, ಈ ಸಂದರ್ಭ ನೀರು ಕೇಳುವ ನೆಪದಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ ಹೋಗಿ ಮನೆಯಲ್ಲಿನ ಸದಸ್ಯರ ಬಗ್ಗೆ ಗಮನಿಸಿದ ಆರೋಪಿಗಳ ಪೈಕಿ ಹಸೈನಾರ್

➤ಉಪ್ಪಿನಂಗಡಿ ಬಾಲಕಿಯ ಅತ್ಯಾಚಾರ ಯತ್ನ – ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

➤ಬೀದಿ ನಾಯಿಗಳ ದಾಳಿಗೆ ಸೋದರರು ಬಲಿ

(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ 13. ಬೀದಿ ನಾಯಿಗಳ ದಾಳಿಗೆ  5-7ವರ್ಷದ  ವಯಸ್ಸಿನ ಸೋದರರು ಮೃತಪಟ್ಟ ಘಟನೆ ದೆಹಲಿಯಲ್ಲಿ ನಡೆದಿದೆ.  ಮೃತ ಮಕ್ಕಳನ್ನು ಆನಂದ್ ಮತ್ತು ಆತನ ಕಿರಿಯ ಸಹೋದರ ಆದಿತ್ಯ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಮಕ್ಕಳು ದೆಹಲಿಯ ವಸಂತ್ ಕುಂಜ್ ನಿವಾಸಿಗಳಾಗಿದ್ದಾರೆ.  ಈ ಮಕ್ಕಳು ಮೂತ್ರ ವಿಸರ್ಜನೆಗೆಂದು  ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಬೀದಿ ನಾಯಿಗಳು ಮಕ್ಕಳನ್ನು ಸುತ್ತುವರಿದು ತೀವ್ರವಾಗಿ ಗಾಯಗೊಳಿಸಿದ್ದವು,ತಕ್ಷಣದಲ್ಲಿ  ಮಕ್ಕಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು ಮಕ್ಕಳು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು

➤ಬೀದಿ ನಾಯಿಗಳ ದಾಳಿಗೆ ಸೋದರರು ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರಿನೊಳಗೆ ಕುಳಿತ ಸ್ಥಿತಿಯಲ್ಲಿಯೇ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಮಾ. 13. ಕಾರಿನೊಳಗೆ ವ್ಯಕ್ತಿಯೋರ್ವನು ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಜಗದೀಶ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಚಾಲಕರಾಗಿದ್ದ ಇವರು, ತರವಾಡು ಮನೆಯಲ್ಲಿ ದೈವದ ಕಾರ್ಯಕ್ರಮಕ್ಕೆ ಮಕ್ಕಳ ಜೊತೆ ಹೋಗಿದ್ದರು. ವಾಪಾಸು ಮನೆಗೆ ಬರುವ ವೇಳೆ ಕಲ್ಲಡ್ಕ ತಲುಪಿದಾಗ ಕಾರು ಚಲಾಯಿಸಲು ಕಷ್ಟವಾಗುತ್ತಿದೆ ಎಂದು ಬಾವನಲ್ಲಿ ಹೇಳಿ ನಾನು ಮತ್ತೆ ಮನೆಗೆ ಬರುತ್ತೇನೆ ನೀವು ‌‌ಮಕ್ಕಳ ಜೊತೆ ಹೋಗಿ ಎಂದು ‌ಕಳುಹಿಸಿ ಕಾರಿನ ಸೀಟಿನಲ್ಲಿಯೇ ಮಲಗಿದ್ದರು. ಆದರೆ

ಕಾರಿನೊಳಗೆ ಕುಳಿತ ಸ್ಥಿತಿಯಲ್ಲಿಯೇ ಯುವಕ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

➤ಕೇರಳದಲ್ಲಿ 54 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು

(ನ್ಯೂಸ್ ಕಡಬ) newskadaba.com .ತಿರುವನಂತಪುರಂ ಮಾ 11. ದೇವರನಾಡು ಕೇರಳದಲ್ಲಿ ತಾಪಮಾನ ಹೊಸ ದಾಖಲೆ ಬರೆದಿದ್ದು, ಕೋಝಿಕ್ಕೋಡ್ ಮತ್ತು ತಿರುವನಂತಪುರಂನಲ್ಲಿ ಗರಿಷ್ಠ ಉಷ್ಣಾಂಶ 54 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಕೆಎಸ್‌ಡಿಎಂಎ) ಗುರುವಾರ ದಿನನಿತ್ಯದ ಶಾಖ ಸೂಚ್ಯಂಕವನ್ನು ಬಿಡುಗಡೆ ಮಾಡಿದ್ದು,  ಉಷ್ಣಗಾಳಿ ಬೀಸುವ ಸಾಧ್ಯತೆ ಇದೆ ಎಚ್ಚರಿಕೆ ನೀಡಿದೆ.

➤ಕೇರಳದಲ್ಲಿ 54 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು Read More »

ರಾಷ್ಟ್ರೀಯ ನ್ಯೂಸ್

➤ಬೆಂಗಳೂರಲ್ಲಿ ಮಹಡಿಯಿಂದ ಜಿಗಿದು ಗಗನಸಖಿ ಆತ್ಮಹತ್ಯೆ

ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ 11. ಗಗನಸಖಿಯೊಬ್ಬರು ಅಪಾರ್ಟ್ ಮೆಂಟ್‍ನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ನಡೆದಿದೆ. ಮೂಲತಃ ಹಿಮಾಚಲ ಪ್ರದೇಶದ ಅರ್ಚನಾ(28) ಆತ್ಮಹತ್ಯೆ ಮಾಡಿಕೊಂಡಿರುವ ಗಗನಸಖಿ. ಕೋರಮಂಗಲದ 8ನೇ ಬ್ಲಾಕ್‍ನಲ್ಲಿರುವ ರೇಣುಕಾ ರೆಸಿಡೆನ್ಸಿ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದ ಗಗನಸಖಿ ಅರ್ಚನಾ ಅವರು ಸಾಫ್ಟ್ ವೇರ್ ಎಂಜಿನಿಯರ್ ಜೊತೆ ಲೀವಿಂಗ್ ಟುಗೆದರ್‍ ನಲ್ಲಿದ್ದರು. ಮಧ್ಯರಾತ್ರಿ 12 ಗಂಟೆ ಸುಮಾರಿನಲ್ಲಿ ಅರ್ಚನಾ ಅವರು ಅಪಾರ್ಟ್ ಮೆಂಟ್‍ನ 4ನೇ ಮಹಡಿಗೆ

➤ಬೆಂಗಳೂರಲ್ಲಿ ಮಹಡಿಯಿಂದ ಜಿಗಿದು ಗಗನಸಖಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ಯುಎಸ್ ಅಭಿವೃದ್ಧಿ ನೀತಿ ಸಮಿತಿಗೆ ಇಬ್ಬರು ಭಾರತೀಯರು ಆಯ್ಕೆ

(ನ್ಯೂಸ್ ಕಡಬ) newskadaba.com. ಅಮೇರಿಕ, ಮಾ 11. ವ್ಯಾಪಾರ ಮತ್ತು ನೀತಿ ಅಭಿವೃದ್ಧಿ ಸಮಿತಿಗೆ ಇಬ್ಬರು ಭಾರತೀಯ-ಅಮೆರಿಕನ್ನರನ್ನು ಅಧ್ಯಕ್ಷ ಜೋಬೈಡನ್ ಆಡಳಿತಕ್ಕೆ ನೇಮಕ ಮಾಡಿ ಆದೇಶ ಹೊರಡಿಸಿದೆ. ಫ್ಲೆಕ್ಸ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ರೇವತಿ ಅದ್ವೈತಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ರಕ್ಷಣಾ ಮಂಡಳಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಮನೀಶ್ ಬಾಪ್ನಾ ಅವರನ್ನು ವ್ಯಾಪಾರ ನೀತಿ ಮತ್ತು ಮಾತುಕತೆಯ ಸಲಹಾ ಸಮಿತಿಗೆ ನೇಮಿಸಲಾಗಿದೆ. ಅಮೇರಿಕಾದ ವ್ಯಾಪಾರ ನೀತಿಯ ಅಭಿವೃದ್ಧಿ, ಅನುಷ್ಠಾನ ಮತ್ತು ಆಡಳಿತದ ವಿಷಯಗಳ ಕುರಿತು ಅಮೇರಿಕಾದ ವ್ಯಾಪಾರ ಪ್ರತಿನಿಧಿ ಸಭೆಗೆ ಸಲಹೆ ನೀಡುವ

➤ಯುಎಸ್ ಅಭಿವೃದ್ಧಿ ನೀತಿ ಸಮಿತಿಗೆ ಇಬ್ಬರು ಭಾರತೀಯರು ಆಯ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ರಾಷ್ಟ್ರೀಯ ನ್ಯೂಸ್

ಅಕ್ರಮ ಮದ್ಯ ಮಾರಾಟ ➤ಒಬ್ಬನ ಬಂಧನ

(ನ್ಯೂಸ್ ಕಡಬ) newskadaba.com. ವಿಜಯಪುರ, ಮಾ 11. ಅಕ್ರಮವಾಗಿ ಗೋವಾ ಮದ್ಯ ಮಾರಾಟ ಮಾಡುವಾಗ ಪೊಲೀಸರು ದಾಳಿ ಮಾಡಿ ಒಬ್ಬನನ್ನು ಬಂಧಿಸಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಹಿರಸಂಗ ಗ್ರಾಮದಲ್ಲಿ ನಡೆದಿದೆ. ಬಸವರಾಜ ಆಕಳವಾಡಿ ಬಂಧಿತ ಆರೋಪಿ. ಆಕ್ರಮವಾಗಿ 18 ಲೀಟರ ಗೋವಾ ರಾಜ್ಯದ ಮದ್ಯ ಮಾರಾಟ ಮಾಡುತ್ತಿದ್ದ, ವೇಳೆ ಅಬಕಾರಿ ಪೊಲೀಸರು ದಾಳಿ ನಡೆಸಿ ಮದ್ಯ ಜಪ್ತಿ ಮಾಡಿದ್ದಾರೆ. ಈ ಕುರಿತು ಇಂಡಿ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಅಕ್ರಮ ಮದ್ಯ ಮಾರಾಟ ➤ಒಬ್ಬನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಳೆ ಪ್ರಧಾನಿ ಮೋದಿ ಮಂಡ್ಯ, ಮದ್ದೂರು ಪ್ರವಾಸ ಹಿನ್ನೆಲೆ ➤ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್!

(ನ್ಯೂಸ್ ಕಡಬ) newskadaba.com.ಮಂಡ್ಯ, ಮಾ 11. ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಹಾಗೂ ಮದ್ದೂರು ಪ್ರವಾಸ ಹಿನ್ನಲೆ ಬೆಳಗ್ಗೆ 7 ಗಂಟೆಯಿಂದ ಬೆಂಗಳೂರು ರಾಷ್ಟ್ರೀಯಾ ಹೆದ್ದಾರಿ ಬಂದ್  ಆಗಲಿದ್ದು, ಸಾರ್ವಜನಿಕರ ಸುಗಮ ಪ್ರಯಾಣಕ್ಕಾಗಿ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದೆ. ಆದರೆ ಅಗತ್ಯ ಸೇವೆ ಮತ್ತು ಹಾಲಿನ ವಾಹನಗಳಿಗೆ 9 ಗಂಟೆಯವರೆಗೆ ಮಾತ್ರ ಸರ್ವಿಸ್ ರಸ್ತೆಯಲ್ಲಿ ಪ್ರವೇಶಕ್ಕೆ ಅವಕಾಶ ನೀಡಲಾಗಿದ್ದು, ಮದ್ದೂರಿನಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲು ತೆರಳುವ ವಾಹನಗಳಿಗೆ ಬೆಳಗ್ಗೆ 9.30ರ ವರೆಗೆ ಅವಕಾಶ ನೀಡಲಾಗುತ್ತಿದೆ. ಮಳವಳ್ಳಿ

ನಾಳೆ ಪ್ರಧಾನಿ ಮೋದಿ ಮಂಡ್ಯ, ಮದ್ದೂರು ಪ್ರವಾಸ ಹಿನ್ನೆಲೆ ➤ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್! Read More »

ಕರ್ನಾಟಕ

➤ ಚೀನಾದ ಅಧ್ಯಕ್ಷರಾಗಿ ಕ್ಸಿ-ಜಿನ್ ಪಿಂಗ್ ಆಯ್ಕೆ

(ನ್ಯೂಸ್ ಕಡಬ) newskadaba.com. ಚೀನಾ. ಮಾ 11. ಸಂಸತ್ತು ಸರ್ವಾನುಮತದಿಂದ ಕ್ಸಿ-ನ್ ಪಿಂಗ್ ಅವರನ್ನು ಅಧ್ಯಕ್ಷರನ್ನಾಗಿ  ಆಯ್ಕೆ ಮಾಡಿತು. 2, 952 ಮತಗಳನ್ನು ಪಡೆದ ಅವರು ಮೂರನೇ ಅವಧಿಗೆ ಚೀನಾ ಅಧ್ಯಕ್ಷರಾಗಿ ಆಯ್ಕೆಯಾದರು. ಅಲ್ಲದೆ ದೇಶದ ಕೇಂದ್ರ ಮಿಲಿಟರಿ ಆಯೋಗದ ಮುಖ್ಯಸ್ಥರಾಗಿಯೂ ಕ್ಸಿ-ಜಿನ್ ಪಿಂಗ್ ಪುನರಾಯ್ಕೆಗೊಂಡರು. ಇದೇ ವೇಳೆ ಮೂರನೇ ಅವಧಿಗೆ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಕ್ಸಿ-ಜಿನ್ ಪಿಂಗ್, ದೇಶದ ಸಂವಿಧಾನಕ್ಕೆ ಬದ್ದನಾಗಿ ಪ್ರಾಮಾಣಿಕ ಕರ್ತವ್ಯ ನಿರ್ವಹಿಸುವುದಾಗಿ ಹೇಳಿದರು.

➤ ಚೀನಾದ ಅಧ್ಯಕ್ಷರಾಗಿ ಕ್ಸಿ-ಜಿನ್ ಪಿಂಗ್ ಆಯ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top