ಕಡಬ ನ್ಯೂಸ್

ಉಡುಪಿ ಜಿಲ್ಲೆಯ 26 ಪ್ರದೇಶಗಳು ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಕಡಬ,ಜೂ  04 .  ಉಡುಪಿ: ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ 17 ಗ್ರಾಮಗಳ 26 ಪ್ರದೇಶಗಳನ್ನು ಕಂಟೇನ್ಮೆಂಟ್ ವಲಯವೆಂದು ಗುರುತಿಸಿ  ಬುಧವಾರ ಸೀಲ್ ಡೌನ್ ಮಾಡಲಾಗಿದೆ. ಕಾಪು ತಾಲೂಕಿನ ಶಿರ್ವ ಗ್ರಾಮ, ಬೈಂದೂರಿನ ಯಡ್ತರೆ  ಮರವಂತೆ  ಯಳಜಿತ್, ಜಡ್ಕಲ್, ನಾಡ, ಹಡವು, ಕೊಲ್ಲೂರು  ಮತ್ತು ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮ  ತಲ್ಲೂರು, ಬೀಜಾಡಿ, ಗುಲ್ವಾಡಿ, ಕರ್ಕುಂಜೆ, ಹಕ್ಲಾಡಿ ಬ್ರಹ್ಮಾವರ ತಾಲೂಕಿನ ಕಳ್ತೂರು, ಕಾರ್ಕಳ ತಾಲೂಕಿನ ಇನ್ನಾ ಗ್ರಾಮದಲ್ಲಿ ಸೀಲ್ […]

ಉಡುಪಿ ಜಿಲ್ಲೆಯ 26 ಪ್ರದೇಶಗಳು ಸೀಲ್ ಡೌನ್ Read More »

ಕರಾವಳಿ

PU ಇಂಗ್ಲಿಷ್ ಪರೀಕ್ಷೆ ➤ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ಪುನರಪಿ ತರಗತಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.04 : ಮೇ 18ರಂದು ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ನಡೆಯಲಿದ್ದು, ಆನ್ಲೈನ್ನಲ್ಲಿ ಪುನರ್ಮನನ ತರಗತಿಗಳನ್ನು ನಡೆಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚನೆ ನೀಡಿದ್ದಾರೆ. ಈ ಕುರಿತಾಗಿ ಸುತ್ತೋಲೆ ಹೊರಡಿಸಿರುವ ಅವರು, ಕೊರೊನಾ ಲಾಕ್ಡೌನ್ನಿಂದಾಗಿ ಸುಮಾರು 3 ತಿಂಗಳ ಅಂತರವಿರುವಾಗಿದ್ದು ಇದರಿಂದ ವಿದ್ಯಾರ್ಥಿಗಳು ಓದಿದ್ದನ್ನು ಮರೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ ಆನ್ಲೈನ್ನಲ್ಲಿ ಪುನರ್ಮನನ ತರಗತಿಗಳನ್ನು ನಡೆಸಬೇಕು ಎಂದು  ತಿಳಿಸಿದ್ದಾರೆ   ಈ ಬಗ್ಗೆ ಎಲ್ಲ ಕಾಲೇಜುಗಳ ಪ್ರಾಂಶುಪಾಲರು ಮತ್ತು

PU ಇಂಗ್ಲಿಷ್ ಪರೀಕ್ಷೆ ➤ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ಪುನರಪಿ ತರಗತಿಗೆ ಸೂಚನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಜೂನ್‌ 5ರಂದು ನಗರದ ಹಲವೆಡೆ ವಿದ್ಯುತ್‌ ನಿಲುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ 04: ನಗರದ ವಿವಿಧ ಫೀಡರ್‌ಗಳಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಜೂ.5ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು ಸಾರ್ವಜನಿಕರು ಸಹಕರಿಸಲು ವಿನಂತಿಸಲಾಗಿದೆ.     ಈ ಕುರಿತು ಪ್ರಕಟನೆಯಲ್ಲಿ ತಿಳಿಸಿರುವ ಮೆಸ್ಕಾಂ, ಜೂ.5ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ 33/11 ಕೆ.ವಿ. ಕದ್ರಿ ಉಪಕೇಂದ್ರದಿಂದ ಹೊರಡುವ 11ಕೆವಿ ಕದ್ರಿ ಟೆಂಪಲ್ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಇದರಿಂದ ನಗರದ ಅಲ್ವಾರಿಸ್

ಜೂನ್‌ 5ರಂದು ನಗರದ ಹಲವೆಡೆ ವಿದ್ಯುತ್‌ ನಿಲುಗಡೆ Read More »

ಕರಾವಳಿ, ಕರ್ನಾಟಕ

ಕೋವಿಡ್-19 ನಿಂದ ಕುವೈತ್ ನಲ್ಲಿ ಮೃತಪಟ್ಟ ಕಾರವಾರದ ವ್ಯಕ್ತಿ

(ನ್ಯೂಸ್ ಕಡಬ) newskadaba.com ಕಾರವಾರ,ಜು.04 : ಕಾರವಾರ ಮೂಲದ ವ್ಯಕ್ತಿಯೊಬ್ಬರು ಕೋವಿಡ್-19 ಸೋಂಕಿನಿಂದ ಕುವೈತ್ ನಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಕಾರವಾರ ತಾಲೂಕಿನ ಸದಾಶಿವಡ ಮೂಲದ ಸುಶಾಂತ ಕಡವಾಡಕರ್ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.   ಸುಶಾಂತ ಕುವೈತ್ ಹೊಟೇಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಅವರಿಗೆ ಮೇ 24 ರಂದು ಜ್ವರ ಕಾಣಿಸಿಕೊಂಡಿತ್ತು. ಮೇ.27 ರಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ನಂತರ ಸೋಂಕು ಇರುವುದು ದೃಢ ಪಟ್ಟಿದೆ. ಇದರಿಂದಲೇ ಮೃತಪಟ್ಟಿರಬಹುದು ಎಂದು ಹೇಳಲಾಗುತ್ತಿದೆ.  

ಕೋವಿಡ್-19 ನಿಂದ ಕುವೈತ್ ನಲ್ಲಿ ಮೃತಪಟ್ಟ ಕಾರವಾರದ ವ್ಯಕ್ತಿ Read More »

ಕರಾವಳಿ, ಕರ್ನಾಟಕ

ಜು.1ಕ್ಕೆ ಶಾಲೆ ಆರಂಭ ನಿರ್ಧಾರಿತವಲ್ಲ, ಯೋಜಿತವಷ್ಟೇ ➤ ಸುರೇಶ್ ಕುಮಾರ್

(ನ್ಯೂಸ್ ಕಡಬ) newskadaba.com  ಬೆಂಗಳೂರು,ಜು 03: ರಾಜ್ಯದಲ್ಲಿ ಜುಲೈ 1ರಿಂದ ಹಂತ-ಹಂತವಾಗಿ ಶಾಲೆಗಳನ್ನು ಪುನಾರಾರಂಭಗೊಳ್ಳಲು ಉದ್ದೇಶಿಸಿರುವ ಬಗ್ಗೆ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದು, ಇದು ನಿರ್ಧಾರಿತ ದಿನಾಂಕವಲ್ಲ, ಯೋಜಿತ ದಿನಾಂಕವಷ್ಟೇ ಎಂದಿದ್ದಾರೆ. ಜುಲೈ 1ಕ್ಕೆ ರಾಜ್ಯದಲ್ಲಿ ಶಾಲೆಗಳು ಆರಂಭಗೊಳ್ಳುವ ಬಗ್ಗೆ ವರದಿಗಳು ಬಂದಿದ್ದವು. ಇದರಿಂದ ಪೊಷಕರು ಮತ್ತು ಮಕ್ಕಳು ಗೊಂದಲಕ್ಕೆ ಒಳಗಾಗಿದ್ದರು. ರಾಜ್ಯದಲ್ಲಿ ಪ್ರತಿದಿನ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಮತ್ತು ಲಾಕ್ಡೌನ್ ತೆರವುಗೊಂಡಿರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ದುಸ್ಸಾಹಸವಾಗಿರುವುದರಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವ

ಜು.1ಕ್ಕೆ ಶಾಲೆ ಆರಂಭ ನಿರ್ಧಾರಿತವಲ್ಲ, ಯೋಜಿತವಷ್ಟೇ ➤ ಸುರೇಶ್ ಕುಮಾರ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸುಳ್ಯ : ವಿವಾಹದಲ್ಲಿ ಭಾಗವಹಿಸಿದವರಿಗೆ ಹೋಂ ಕ್ವಾರಂಟೇನ್

(ನ್ಯೂಸ್ ಕಡಬ) newskadaba.com ಸುಳ್ಯ,ಜೂ. 03: ಸುಳ್ಯ ತಾಲೂಕಿನ ಅರಂತೋಡಿನಲ್ಲಿ ನಡೆದ ಮದುವೆ ಕಾರ್ಯಕ್ರವೊಂದರಲ್ಲಿ ಕೊರೋನಾ ಸೋಂಕಿತ ವ್ಯಕ್ತಿಯ, ಪ್ರಾಥಮಿಕ ಸಂಪರ್ಕಿತರೊಬ್ಬರು ಭಾಗವಹಿಸಿದ್ದ ಹಿನ್ನಲೆಯಲ್ಲಿ , ಆ ಮದುವೆಯಲ್ಲಿ ಭಾಗಿಯಾಗಿದ್ದವರಿಗೆಲ್ಲ ಹೋಂ ಕ್ವಾರಂಟೇನ್ ಮಾಡುವ ಪರಿಸ್ಥಿತಿ ಎದುರಾಗಿದೆ. ಹೌದು, ಮಲೇಷಿಯದಲ್ಲಿದ್ದ ವೈದ್ಯ ತನ್ನ ಅರಂತೋಡು ಗ್ರಾಮದ ಸಂಬಂಧಿಕರ £ಮನೆಗೆ ಭಾನುವಾರ ಬಂದಿದ್ದರು.     ಆ ವೈದ್ಯರ ಪ್ರಾಥಮಿಕ ಸಂಪರ್ಕಿತದಲ್ಲಿದ್ದ ವ್ಯಕ್ತಿಯು ಸುಳ್ಯದ ಅರಂತೋಡಿನಲ್ಲಿ ನಡೆದ ಮದುವೆ ಕಾರ್ಯಕ್ರವೊಂದರಲ್ಲಿ ಭಾಗವಹಿಸಿದದ್ದು ಎಲ್ಲರಲ್ಲೂ ಆತಂಕ ಮನೆ ಮಾಡಿತ್ತು. ಅಷ್ಟೇ

ಸುಳ್ಯ : ವಿವಾಹದಲ್ಲಿ ಭಾಗವಹಿಸಿದವರಿಗೆ ಹೋಂ ಕ್ವಾರಂಟೇನ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಯುವತಿಗೆ ಲೈಂಗಿಕ ಕಿರುಕುಳ ➤ ಆರೋಪಿಯನ್ನ ಸುಟ್ಟ ಪೋಷಕರು

(ನ್ಯೂಸ್ ಕಡಬ) newskadaba.com ಲಖನೌ,ಜೂ 03: ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂಬ ಆರೋಪವಿದ್ದ 22ಹರೆಯದ ವ್ಯಕ್ತಿಯೊಬ್ಬನನ್ನು ಮರಕ್ಕೆ ಕಟ್ಟಿಹಾಕಿ ಸಜೀವ ದಹನ ಮಾಡಿದ ಘಟನೆ ಉತ್ತರ ಪ್ರದೇಶದ ಪ್ರತಾಪ್ಗಡದಲ್ಲಿ ಸೋಮವಾರ ರಾತ್ರಿ ನಡೆದಿದೆ. ಪ್ರತಾಪ್ಗಡ ಜಿಲ್ಲೆಯ ಫತಾನ್ಪುರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ, ಸೋಮವಾರ ರಾತ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ಜನರ ಗುಂಪು ಪೊಲೀಸರೊಂದಿಗೆ ಸಂಘರ್ಷಕ್ಕಿಳಿದು ಪೊಲೀಸ್ ವಾಹನಗಳನ್ನು ಸುಟ್ಟು ಹಾಕಿದ್ದಾರೆ. ಹತ್ಯೆಯಾದ ವ್ಯಕ್ತಿಯನ್ನು ಅಂಬಿಕಾ ಪ್ರಸಾದ್ ಪಟೇಲ್

ಯುವತಿಗೆ ಲೈಂಗಿಕ ಕಿರುಕುಳ ➤ ಆರೋಪಿಯನ್ನ ಸುಟ್ಟ ಪೋಷಕರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಾಲೆಗಳ ಪುನಾರಂಭಕ್ಕೆ ಡೇಟ್‌ ಫಿಕ್ಸ್ ➤ ಜುಲೈ 1ರಿಂದ ರೀಓಪನ್‌

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ .03:  ಕೇಂದ್ರ ಸರಕಾರದ ಮಾರ್ಗಸೂಚಿಗೆ ಅನುಗುಣವಾಗಿ ರಾಜ್ಯ ಸರಕಾರ ಶಾಲೆಗಳ ಪುನಾರಂಭಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಶಾಲೆಗಳನ್ನು ಹಂತ ಹಂತವಾಗಿ ಪುನಾರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರ ಶಾಲೆಗಳನ್ನು ಆರಂಭಿಸುವ ಸಂಬಂಧ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಆಯಾ ರಾಜ್ಯ ಸರ್ಕಾರಗಳಿಗೆ ಬಿಟ್ಟಿತ್ತು. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ನಡೆಸಿ ಶಾಲೆಗಳ ಪುನಾರಂಭ ಕುರಿತಂತೆ ನಿರ್ಧಾರ ಕೈಗೊಳ್ಳಲಾಗಿದ್ದು,

ಶಾಲೆಗಳ ಪುನಾರಂಭಕ್ಕೆ ಡೇಟ್‌ ಫಿಕ್ಸ್ ➤ ಜುಲೈ 1ರಿಂದ ರೀಓಪನ್‌ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಲ್ಪೆ ಬೋಟ್‌ ಮುಳುಗಡೆ ➤ 7 ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ,ಜೂ.03: ಮಲ್ಪೆ ಬಂದರಿನಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ವೊಂದು ಗೋವಾ ಸಮೀಪ ಮುಳುಗಡೆಯಾಗಿದ್ದು, ಬೋಟ್ನಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಇನ್ನು ಮುಳುಗಡೆಯಾಗಿರುವ ಬೋಟ್ನ್ನು ಮಲ್ಪೆ ವಡಭಾಂಡೇಶ್ವರದ ದೀಪಿಕಾ ಅವರ ಮಾಲೀಕತ್ವದ ಶ್ರೀ ದುರ್ಗಾ ಹನುಮ ಆಳ ಸಮುದ್ರ ಬೋಟ್ ಎಂದು ಹೇಳಲಾಗಿದೆ. ಈ ಬೋಟ್ ಮೇ 23ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದು,  ಮಹಾರಾಷ್ಟ್ರದಲ್ಲಿ ಮೀನುಗಾರಿಕೆ ಮುಗಿಸಿ ಹಿಂತಿರುಗಿ ಬರುವಾಗ ಗೋವಾ ಸಮೀಪದ ರೆಡ್ಹೌಸ್ ಬಳಿ ಸುಮಾರು 27 ನಾಟಿಕಲ್

ಮಲ್ಪೆ ಬೋಟ್‌ ಮುಳುಗಡೆ ➤ 7 ಮೀನುಗಾರರ ರಕ್ಷಣೆ Read More »

ಕರಾವಳಿ, ಕರ್ನಾಟಕ

ಪೋಸ್ಟ್ ಮ್ಯಾನ್ ಗೆ ಕೊರೋನಾ ನೆಗೆಟಿವ್ ➤ ಗಂಟಲ ದ್ರವ ಪರೀಕ್ಷೆ ವರದಿಯಲ್ಲಿ ದೃಢ

(ನ್ಯೂಸ್ ಕಡಬ) newskadaba.com ಬೆಳ್ಳಾರೆ,ಜೂ 02: ಬೆಳ್ಳಾರೆಯಲ್ಲಿ ಕಳೆದ ದಿನಗಳ ಹಿಂದೆಯಷ್ಟೇ ಕ್ವಾರಂಟೈನ್ ನಲ್ಲಿದ್ದ ದರ್ಖಾಸಿನ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಐವರ್ನಾಡಿನ ಪೋಸ್ಟ್ ಮ್ಯಾನ್ ಗೆ ಹೋಂ ಕ್ವಾರಂಟೈನ್ ನಲ್ಲಿರಲು ಸೂಚಿಸಲಾಗಿತ್ತು.       ಇನ್ನು ಆ ಭಾಗಕ್ಕೆ ಪೋಸ್ಟ್ ಮ್ಯಾನ್ ಕರ್ತವ್ಯಕ್ಕೆ ಹೋಗಿದ್ದಾರೆ ಎಂಬ ಮಾಹಿತಿ ಹಿನ್ನಲೆಯಲ್ಲಿ ಅವರನ್ನು ಕ್ವಾರಂಟೈನ್ ನಲ್ಲಿರಲು ಸೂಚಿಸಲಾಗಿತ್ತು. . ಮೇ.29 ರಂದು ಅವರ ಗಂಟಲ ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಅವರ ಪರೀಕ್ಷಾ ವರದಿ

ಪೋಸ್ಟ್ ಮ್ಯಾನ್ ಗೆ ಕೊರೋನಾ ನೆಗೆಟಿವ್ ➤ ಗಂಟಲ ದ್ರವ ಪರೀಕ್ಷೆ ವರದಿಯಲ್ಲಿ ದೃಢ Read More »

ಕರಾವಳಿ, ಕರ್ನಾಟಕ
Scroll to Top