ಕಡಬ ನ್ಯೂಸ್

➤ 25ರ ಯುವಕನಿಗೆ 62ರ ಅಜ್ಜಿಯೊಂದಿಗೆ ಮದುವೆ

(ನ್ಯೂಸ್ ಕಡಬ) newskadaba.com. ಜಾರ್ಜಿಯಾ ಮಾ.10. 25 ವರ್ಷದ ಕರ್ರಾನ್ ಮೆಕೇನ್ ಮತ್ತು 62 ವರ್ಷದ ಚೆರಿಲ್ ಮೆಕ್‌ಗ್ರೆಗರ್ ನಡುವೆ ನಡೆದ ಘಟನೆಯಿದು. ಒಬ್ಬರನ್ನೊಬ್ಬರು ಪ್ರೀತಿಸಿ ಮದುವೆಯಾದ ಈ ಜೋಡಿ ವಯಸ್ಸಿನ ಕಾರಣಕ್ಕೆ ಚರ್ಚೆಯಲ್ಲಿದೆ. ಅವರ ವಯಸ್ಸಿನ ಅಂತರದಿಂದಾಗಿ ಅವರನ್ನು ಅನೇಕರು ಟ್ರೋಲ್ ಮಾಡ್ತಾ ಇದ್ದಾರೆ. ಕರ್ರಾನ್ ಮತ್ತು ಚೆರಿಲ್ ಇಬ್ಬರೂ 2012 ರಲ್ಲಿ ಮೊದಲ ಬಾರಿಗೆ ಭೇಟಿಯಾದರು. ಆಗ ಅವರು ಡೈರಿ ಕ್ವೀನ್ ಎಂಬ ಫಾಸ್ಟ್ ಫುಡ್ ಚೈನ್​ನಲ್ಲಿ ಕೆಲಸ ಮಾಡುತ್ತಿದ್ದರು. ಆಗ ಕುರಾನ್​ಗೆ ಕೇವಲ […]

➤ 25ರ ಯುವಕನಿಗೆ 62ರ ಅಜ್ಜಿಯೊಂದಿಗೆ ಮದುವೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಗೀಸರ್‌ನಿಂದ ಗ್ಯಾಸ್ ಸೋರಿಕೆ ➤ ಉಸಿರುಗಟ್ಟಿ ದಂಪತಿ ಮೃತ್ಯು..!

(ನ್ಯೂಸ್ ಕಡಬ) newskadaba.com. ಮುಂಬೈಮಾ.10 ಗೀಸರ್ ಗ್ಯಾಸ್ ಸೋರಿಕೆಯಿಂದ ನವವಿವಾಹಿತರು ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ದೀಪಕ್ ಷಾ ಮತ್ತು ಟೀನಾ ಶಾ ಮೃತರು. ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಬಾತ್‌ರೂಮ್‌ನಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ನವ ವಿವಾಹಿತರ ಶವ ಪತ್ತೆಯಾಗಿದೆ. ಹೋಳಿ ಹಬ್ಬದ ಬಳಿಕ ಸ್ನಾನಕ್ಕೆಂದು ತೆರಳಿದ ಇಬ್ಬರು ಗ್ಯಾಸ್ ಸೋರಿಕೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರ ಪ್ರಕಾರ, ದಂಪತಿ ಬಾಡಿಗೆಗೆ ಮನೆಯಲ್ಲಿ ವಾಸಿಸುತ್ತಿದ್ದರು. ಹೋಳಿ ಹಬ್ಬದ ಬಳಿಕ ಸ್ನಾನಕ್ಕೆಂದು ಗೀಸರ್ ಆನ್ ಮಾಡಿದ್ದರು. ಮನೆಯ ಬಾತ್ ರೂಮ್​​ನಲ್ಲಿದ್ದ ಗೀಸರ್

ಗೀಸರ್‌ನಿಂದ ಗ್ಯಾಸ್ ಸೋರಿಕೆ ➤ ಉಸಿರುಗಟ್ಟಿ ದಂಪತಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾರುಕಟ್ಟೆ ಸಂಕೀರ್ಣಕ್ಕೆ ಹೊತ್ತಿಕೊಂಡ ಬೆಂಕಿ ➤ಪ್ರವಾಸಿಗರ ರಕ್ಷಣೆ!

(ನ್ಯೂಸ್ ಕಡಬ) newskadaba.com. ಭುವನೇಶ್ವರ, ಮಾ 10. ಪುರಿ ಜಗನ್ನಾಥ ದೇಗುಲದ ಬಳಿಯ ಮಾರುಕಟ್ಟೆ ಸಂಕೀರ್ಣವೊಂದರ ಅಂಗಡಿಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಸಂಕೀರ್ಣದ ಎಲ್ಲಾ ಕಟ್ಟಡಗಳಿಗೂ ವ್ಯಾಪಿಸಿದ ಘಟನೆ ನಡೆದಿದೆ. ಸದ್ಯ ಕಟ್ಟಡದೊಳಗಿದ್ದ ಎಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ದೇವಸ್ಥಾನ ಸಮೀಪದ ಲಕ್ಷ್ಮೀ ಮಾರುಕಟ್ಟೆ ಸಂಕೀರ್ಣ 3 ಅಂತಸ್ತಿನ ಕಟ್ಟಡವಾಗಿದ್ದು, ಈ ಸಂಕೀರ್ಣದಲ್ಲಿರುವ ಬಟ್ಟೆ ಅಂಗಡಿಯೊಂದಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿಯ ಕೆನ್ನಾಲಿಗೆ ಸಂಕೀರ್ಣದ ಎಲ್ಲಾ ಕಟ್ಟಡಗಳಿಗೂ ವ್ಯಾಪಿಸಿದ್ದರಿಂದ ಅಗ್ನಿಶಾಮಕ ದಳಕ್ಕೆ ಬೆಂಕಿ ನಂದಿಸಲು ತೀರಾ ಕಷ್ಟವಾಗಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮಾರುಕಟ್ಟೆ ಸಂಕೀರ್ಣಕ್ಕೆ ಹೊತ್ತಿಕೊಂಡ ಬೆಂಕಿ ➤ಪ್ರವಾಸಿಗರ ರಕ್ಷಣೆ! Read More »

ರಾಷ್ಟ್ರೀಯ ನ್ಯೂಸ್

ಮಾರುಕಟ್ಟೆ ಸಂಕೀರ್ಣಕ್ಕೆ ಹೊತ್ತಿಕೊಂಡ ಬೆಂಕಿ➤ಪ್ರವಾಸಿಗರ ರಕ್ಷಣೆ

(ನ್ಯೂಸ್ ಕಡಬ) newskadaba.com. ಭುವನೇಶ್ವರ, ಮಾ 10. ಪುರಿ ಜಗನ್ನಾಥ ದೇಗುಲದ ಬಳಿಯ ಮಾರುಕಟ್ಟೆ ಸಂಕೀರ್ಣವೊಂದರ ಅಂಗಡಿಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಸಂಕೀರ್ಣದ ಎಲ್ಲಾ ಕಟ್ಟಡಗಳಿಗೂ ವ್ಯಾಪಿಸಿದ ಘಟನೆ ನಡೆದಿದೆ. ಸದ್ಯ ಕಟ್ಟಡದೊಳಗಿದ್ದ ಎಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ದೇವಸ್ಥಾನ ಸಮೀಪದ ಲಕ್ಷ್ಮೀ ಮಾರುಕಟ್ಟೆ ಸಂಕೀರ್ಣ 3 ಅಂತಸ್ತಿನ ಕಟ್ಟಡವಾಗಿದ್ದು, ಈ ಸಂಕೀರ್ಣದಲ್ಲಿರುವ ಬಟ್ಟೆ ಅಂಗಡಿಯೊಂದಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿಯ ಕೆನ್ನಾಲಿಗೆ ಸಂಕೀರ್ಣದ ಎಲ್ಲಾ ಕಟ್ಟಡಗಳಿಗೂ ವ್ಯಾಪಿಸಿದ್ದರಿಂದ ಅಗ್ನಿಶಾಮಕ ದಳಕ್ಕೆ ಬೆಂಕಿ ನಂದಿಸಲು ತೀರಾ ಕಷ್ಟವಾಗಿತ್ತು. ಗುರುವಾರ ಮಧ್ಯಾಹ್ನದ ವೇಳೆಗೆ

ಮಾರುಕಟ್ಟೆ ಸಂಕೀರ್ಣಕ್ಕೆ ಹೊತ್ತಿಕೊಂಡ ಬೆಂಕಿ➤ಪ್ರವಾಸಿಗರ ರಕ್ಷಣೆ Read More »

ರಾಷ್ಟ್ರೀಯ ನ್ಯೂಸ್

➤ಪಿಲಿಕುಳ ಮೃಗಾಲಯಕ್ಕೆ ಅಪರೂಪದ ಅತಿಥಿಗಳ ಆಗಮನ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಮಾ 10. ಕೇಂದ್ರ ಮೃಗಾಲಯ ಪ್ರಾದಿಕಾರದ ಅನುಮತಿಯ ಮೇರೆಗೆ ವನ್ಯಪ್ರಾಣಿ ವಿನಿಮಯ ಯೋಜನೆಯಡಿ ನಾಗಪುರದ ಬಾಳಾ ಸಾಹೇಬ್ ಠಾಕ್ರೆ ಗೋರೆವಾದ ಇಂಟರ್ ನ್ಯಾಷನಲ್ ಮೃಗಾಲಯದಿಂದ 6 ರೆಟೆಕ್ಯುಲೇಟೆಡ್ ಹೆಬ್ಬಾವು ಮತ್ತು 4 ಗ್ರೇ  ತರಲಾಗಿದೆ. ಪಿಲಿಕುಳದಲ್ಲಿ ಈಗಾಗಲೇ 50 ಕೃಷ್ಣ ಮೃಗಗಳು ಮತ್ತು 25 ರೆಟಿಕ್ಯುಲೇಟೆಡ್ ಹೆಬ್ಬಾವುಗಳಿವೆ. ನೀಲ್ ಗೈ ಗಳು ಏಷ್ಯಾದಲ್ಲಿ ಕಾಣಸಿಗುವ ದೊಡ್ಡ ಗಾತ್ರದ ಜಿಂಕೆ ಜಾತಿಗೆ ಸೇರಿದ ಮೃಗವಾಗಿದೆ.

➤ಪಿಲಿಕುಳ ಮೃಗಾಲಯಕ್ಕೆ ಅಪರೂಪದ ಅತಿಥಿಗಳ ಆಗಮನ Read More »

ಕರ್ನಾಟಕ

ಅಗ್ನಿಅವಘಡ ➤ ಹೊತ್ತಿ ಉರಿದ ಹಾಸಿಗೆ ಮಳಿಗೆ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಮಾ. 09.  ಕರ್ಲಾನ್ ಹಾಸಿಗೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ, ಕ್ಷಣಾರ್ಧದಲ್ಲಿ ಇಡೀ ಕಟಡ್ಡವೇ ಹೊತ್ತಿ ಉರಿದ ಘಟನೆ ಸರ್ಜಾಪುರ ಮುಖ್ಯ ರಸ್ತೆಯ ಕೈಕೊಂಡ್ರ ಹಳ್ಳಿ ಬಳಿ ನಡೆದಿದೆ.   ಬೆಂಕಿಯ ತೀವ್ರತೆಗೆ ಮಳಿಗೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಜೊತೆಗೆ ಅಕ್ಕಪಕ್ಕದ ಮಳಿಗೆಗಳಿಗೂ ಬೆಂಕಿ ತಗುಲಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.  

ಅಗ್ನಿಅವಘಡ ➤ ಹೊತ್ತಿ ಉರಿದ ಹಾಸಿಗೆ ಮಳಿಗೆ Read More »

ಕರ್ನಾಟಕ

ಸಾರಂಗವನ್ನು ಕೊಂದು ಹಾಕಿದ ನಾಯಿಗಳ ಗುಂಪು

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಮಾ. 09. ಚಿತ್ರದುರ್ಗ ಸಮೀಪದ ಅರಣ್ಯದಿಂದ ದಾರಿ ತಪ್ಪಿ ವಸತಿ ಪ್ರದೇಶಕ್ಕೆ ಬಂದ ಸಾರಂಗವನ್ನು ಬೀದಿ ನಾಯಿಗಳ ಗುಂಪೊಂದು ಕೊಂದು ಹಾಕಿರುವ ಘಟನೆ ನಡೆದಿದೆ.   ಸಾರಂಗದ ಮೇಲೆ ನಾಯಿಗಳ ದಾಳಿಯನ್ನು ಗಮನಿಸಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಸಾರಂಗವನ್ನು ರಕ್ಷಿಸಿದ್ದಾರೆ. ಅರಣ್ಯ ಇಲಾಖೆಯ ಪಶು ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದರಾದರೂ ಚಿಕಿತ್ಸೆಗೆ ಸ್ಪಂದಿಸದೆ ಸಾರಂಗ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಸಾರಂಗವನ್ನು ಕೊಂದು ಹಾಕಿದ ನಾಯಿಗಳ ಗುಂಪು Read More »

ಕರ್ನಾಟಕ

➤ಕಾಸರಗೋಡು ವಿದ್ಯಾರ್ಥಿಯ ಅನುಮಾನಸ್ಪದ ಸಾವು..!

(ನ್ಯೂಸ್ ಕಡಬ) newskadaba.com. ಕಾಸರಗೋಡು,ಮಾ.9   ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಯೋರ್ವ ಶಾಲೆಯ ಸಮೀಪ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.  ಕುಂಡಂಗುಳಿ ನಿವಾಸಿ ವಿನೋದ್ ,ಶಾಲಿನಿ ದಂಪತಿಗಳ ಪುತ್ರ ಅಭಿನವ್ (17) ನಿಗೂಢವಾಗಿ ಸಾವನ್ನಪ್ಪಿದ ಪ್ಲಸ್ ವನ್ ಹೈಯರ್ ಸೆಕೆಂಡರಿ ವಿದ್ಯಾರ್ಥಿಯಾಗಿದ್ದಾನೆ. ಮಾರ್ಚ್ 7 ರಂದು ಅಭಿನವ್ ತರಗತಿ ಮುಗಿಸಿ ಸಂಜೆ ಮನೆಗೆ ಬಂದು ಆಟವಾಡಲು ಹೋಗುವುದಾಗಿ ಹೇಳಿದ್ದ. ಸಂಜೆಯಾದರೂ ವಾಪಸ್‌ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ಮನೆ ಸಮೀಪದ

➤ಕಾಸರಗೋಡು ವಿದ್ಯಾರ್ಥಿಯ ಅನುಮಾನಸ್ಪದ ಸಾವು..! Read More »

ಕ್ರೈಮ್ ನ್ಯೂಸ್

➤ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com. ಪುತ್ತೂರು, ಮಾ 9.  ಕಳೆದ ಐದುವರ್ಷಗಳ ಹಿಂದೆ ಕೌಕ್ರಾಡಿಯ ದಡ್ಡಲಪಲ್ಕೆಯಲ್ಲಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಆರೋಪಿಗಳನ್ನು ಪುತ್ತೂರು ಸಂಚಾರ ಪೊಲೀಸರು ಬಂಧಿಸಿದ್ದಾರೆ. ಕುಣಿಗಲ್ ಮೂಲದ ಮೂರ್ತಿ ಹಾಗೂ ತೆಂಕಿಲ ನಿವಾಸಿ ಪವನ್ ಬಂಧಿತ ಆರೋಪಿಗಳು. ಮೂರ್ತಿ ಬಸ್ ಚಾಲಕನಾಗಿದ್ದು, 2014ರ ಮೇನಲ್ಲಿ ದದ್ದಲಪಲ್ಕೆ ಎಂಬಲ್ಲಿ ಚಾಲನೆ ಮಾಡುತ್ತಿದ್ದ ಬಸ್ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿತ್ತು. ಬೆಂಗಳೂರಿನ ಹೊಸಕೋಟೆಯಲ್ಲಿ ಮೂರ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ತೆಂಕಿಲ ನಿವಾಸಿ

➤ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

➤ಹಿರಿಯ ವಿದ್ವಾಂಸ ಪ್ರೊ. ಮಲೆಯೂರು ಗುರುಸ್ವಾಮಿ ನಿಧನ

(ನ್ಯೂಸ್ ಕಡಬ) newskadaba.com. ಮಾ 9. ಚಾಮರಾಜನಗರ. ಹಿರಿಯ ವಿದ್ವಾಂಸ ಪ್ರೊ. ಮಲೆಯೂರು ಗುರುಸ್ವಾಮಿ (76) ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ  ಬಳಲುತ್ತಿದ್ದ ಮಲೆಯೂರು ಗುರುಸ್ವಾಮಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ನ ನಿಕಟಪೂರ್ವ ರಾಜ್ಯಾಧ್ಯಕ್ಷರಾಗಿದ್ದರು. ಇಂದು ಮಧ್ಯಾಹ್ನ ಚಾಮರಾಜನಗರ ತಾಲೂಕಿನ ಮಲೆಯೂರಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ.

➤ಹಿರಿಯ ವಿದ್ವಾಂಸ ಪ್ರೊ. ಮಲೆಯೂರು ಗುರುಸ್ವಾಮಿ ನಿಧನ Read More »

ಕರ್ನಾಟಕ
Scroll to Top