ಕಡಬ ನ್ಯೂಸ್

ಸಿರಿ ತೋಟಗಾರಿಕೆ ಸಂಘದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ಸಿರಿ ತೋಟಗಾರಿಕೆ ಸಂಘದ ವತಿಯಿಂದ ಅಕ್ಟೋಬರ್ 5 ರಂದು ಅಣಬೆ ಬೇಸಾಯದ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರುವೆಲ್ ನಲ್ಲಿ ತರಬೇತಿ ಶುಲ್ಕ ನೀಡಿ ಅಕ್ಟೋಬರ್ 4 ರೊಳಗೆ ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ರುಕ್ಮಯ ದೂರವಾಣಿ ಸಂಖ್ಯೆ: 9845523944 ಸಂಪರ್ಕಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ, ಹಾಗೂ ಪದನಿಮಿತ್ತ ಕಾರ್ಯದರ್ಶಿಗಳು ಸಿರಿ ತೋಟಗಾರಿಕೆ ಸಂಘ (ರಿ), ಮಂಗಳೂರು ಇವರ […]

ಸಿರಿ ತೋಟಗಾರಿಕೆ ಸಂಘದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಓದುವ ಹವ್ಯಾಸ ಬೆಳೆಸಿಕೊಳ್ಳಿ ➤ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ರಾಷ್ತ್ರೀಯ ಸೇವಾ ಯೋಜನೆ ದಿನ ಸೆಪ್ಟೆಂಬರ್ 24 ಇದರ ಅಂಗವಾಗಿ ಚೂಂತಾರು ಸರೋಜಿನಿ ಪ್ರತಿಷ್ಠಾನ (ರಿ) ಮಂಗಳೂರು ಇದರ ವತಿಯಿಂದ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕೃಷ್ಣಾಪುರ ಕಾಟಿಪಳ್ಳ ಇಲ್ಲಿನ ಶಾಲಾ ಗ್ರಂಥಾಲಯಕ್ಕೆ 24-09-2019 ರಂದು 350 ಪುಸ್ತಕ ಕೊಡುಗೆ ನೀಡಲಾಯಿತು. ಹಾಗೂ  ವಿದ್ಯಾರ್ಥಿಗಳಿಗೆ ಆರೋಗ್ಯ ಮಾಹಿತಿ ಶಿಬಿರ ನಡೆಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದ.ಕ. ಜಿಲ್ಲಾ ಗೃಹರಕ್ಷಕ ದಳ ಇದರ ಸಮಾದೇಷ್ಟರು ಮತ್ತು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ

ಓದುವ ಹವ್ಯಾಸ ಬೆಳೆಸಿಕೊಳ್ಳಿ ➤ ಡಾ|| ಚೂಂತಾರು Read More »

ಕರಾವಳಿ

ಪನ್ಯ ಗುರಿಯಡ್ಕ ರಸ್ತೆ ಎಸ್ಸಿ/ಎಸ್ಟಿ ಅನುದಾನದಲ್ಲಿ 10ಲಕ್ಷ

(ನ್ಯೂಸ್ ಕಡಬ) newskadaba.com ಕಡಬ,ಸಪ್ಟೆಂಬರ್.24.ಕೋಡಿಂಬಾಳ ಗ್ರಾಮದ ಪನ್ಯ ಗುರಿಯಡ್ಕ ರಸ್ತೆ ಕಾಂಕ್ರಿಟೀಕರಣಕ್ಕೆ ಎಸ್‍ಸಿ/ಎಸ್‍ಟಿ ಯಲ್ಲಿ 10ಲಕ್ಷ ಅನುದಾನ ನೀಡಲಾಗಿದ್ದು ಸೆ.23 ರಂದು ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಿ ಚಾಲನೆ ನೀಡಲಾಯಿತು. ಸ್ಥಳೀಯ ಗ್ರಾ.ಪಂ ಸದಸ್ಯ ಆದಂ ಕುಂಡೋಳಿಯವರು ತೆಂಗಿನ ಕಾಯಿ ಹೊಡೆಯುವ ಮೂಲಕ ಹಾಗೂ ಸ್ಥಳೀಯ ಗ್ರಾ.ಪಂ ಸದಸ್ಸಯೆ ಜಯಲಕ್ಷ್ಮೀ ಗುದ್ದಲಿ ಪೂಜೆ ನೆರವೇರಿಸಿದರು. ಕಡಬ ಜಿ.ಪಂ ಮಾಜಿ ಸದಸ್ಯ ಕೃಷ್ಣ ಶೆಟ್ಟಿಯವರು ಮಾತನಾಡಿ ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಈ ರಸ್ತೆಯು ಹಂತ

ಪನ್ಯ ಗುರಿಯಡ್ಕ ರಸ್ತೆ ಎಸ್ಸಿ/ಎಸ್ಟಿ ಅನುದಾನದಲ್ಲಿ 10ಲಕ್ಷ Read More »

ಕರಾವಳಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ

(ನ್ಯೂಸ್ ಕಡಬ) newskadaba.com ಕಡಬ,ಸಪ್ಟೆಂಬರ್.24.ಉಪ್ಪಿನಂಗಡಿ ಸರಕಾರಿ ಪ.ಪೂ ಕಾಲೇಜಿನಲ್ಲಿ ಸೆ. 19 ರಂದು ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ದೆಯಲ್ಲಿ ಕೋಡಿಂಬಾಳ ಉ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಹಿರಿಯ ವಿಭಾಗದ ರಸಪ್ರಶ್ನೆ ಸ್ವರ್ದೆಯಲ್ಲಿ ಭವನ್ ಕೆ.ಟಿ, ಚೈತ್ರಾ.ಕೆ, ಸಾನಿಧ್ಯ ಕೆ, ಗ್ರೇಷ್ಮಾ ಎಂ, ಭವಾನಿ ಯು, ಪವಿನ್ ಯು, ದ್ವೀತಿಯ ಸ್ಥಾನ ಗಳಿಸಿಕೊಂಡಿದ್ದಾರೆ. ಆಶುಭಾಷಣ ಸ್ಪರ್ದೆಯಲ್ಲಿ ಭವನ್ ಕೆ.ಟಿ, ದ್ವೀತಿಯ ಸ್ಥಾನ ಪಡೆದುಕೊಂಡಿದ್ದಾರೆ.

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ Read More »

ಕರಾವಳಿ

6 ಮೈಕ್ರೋ ಬಚತ್ ಪಾಲಿಸಿ ಬಾಂಡ್ ವಿತರಣೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ,ಸಪ್ಟೆಂಬರ್.24.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಳಿನೆಲೆ ವಲಯದ 102 ನೆಕ್ಕಿಲಾಡಿ ಒಕ್ಕೂಟದ ಸದಸ್ಯರಿಗೆ ಮೈಕ್ರೋ ಬಚತ್ ಪಾಲಿಸಿ ಬಾಂಡ್ ವಿತರಣೆ ರವಿವಾರ ನಡೆಯಿತು. ಬಂಟ್ರ ಮರ್ದಾಳ ಹಿ.ಪ್ರಾ ಶಾಲೆಯಲ್ಲಿ ನಡೆದ ಒಕ್ಕೂಟದ ತ್ರೈಮಾಸಿಕ ಸಭೆಯಲ್ಲಿ ಯುವ ವಕೀಲರಾದ ಪ್ರಶಾಂತ್ ಪಂಜೋಡಿ ಅವರು ಸದಸ್ಯರಿಗೆ ಮೈಕ್ರೋ ಬಚತ್ ಪಾಲಿಸಿಯ ಬಾಂಡ್ ವಿತರಿಸಿದರು. ಒಕ್ಕೂಟದ ಅಧ್ಯಕ್ಷ ಗಣಪಯ್ಯ ಗೌಡ ಪಂಜೋಡಿ, ತಾಲೂಕು ಯೋಜನಾಧಿಕಾರಿ ಜನಾರ್ದನ ಎಸ್., ಬಿಳಿನೆಲೆ ವಲಯ ಮೇಲ್ವಿಚಾರಕ ದರ್ಣಪ್ಪ, ಸೇವಾಪ್ರತಿನಿಧಿ ಸತೀಶ್

6 ಮೈಕ್ರೋ ಬಚತ್ ಪಾಲಿಸಿ ಬಾಂಡ್ ವಿತರಣೆ Read More »

ಕರಾವಳಿ

ನಗರದ ಶಕ್ತಿ ಪದವಿ ಪೂರ್ವಕಾಲೇಜಿನಲ್ಲಿ ‘ಹಿಂದಿ ದಿವಸ’ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ನಗರದ ಶಕ್ತಿ ಪದವಿ ಪೂರ್ವಕಾಲೇಜಿನಲ್ಲಿ 23.09.2019ರಂದು ‘ಹಿಂದಿ ದಿವಸ’ ಕಾರ್ಯಕ್ರಮಜರುಗಿತು. ಕಾರ್ಯಕ್ರಮವನ್ನುದ್ದೇಶಿಸಿ ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿಧ್ಯಾಲಯದ ಸ್ನಾತಕೋತ್ತರ ಹಿಂದಿ ವಿಭಾಗ ಮುಖ್ಯಸ್ಥೆಡಾ. ಸುಮ ಟಿ.ಆರ್‍ಅವರು ಮಾತನಾಡಿ ಸ್ವಾತಂತ್ರ್ಯ ಸಂಗ್ರಾಮದ ದಿನಗಳಿಂದಲೂ ಹಿಂದಿ ಭಾಷೆಯುತನ್ನ ಸೇವೆ ಹಾಗೂ ಕೊಡುಗೆ ನೀಡುತ್ತಾ ಬಂದಿದೆ. ವಂದೇ ಮಾತರಂ, ಭಾರತ್ ಮಾತಾಕೀಜೈ ನಾನಾ ಸಂದೇಶಗಳು ಹಿಂದಿ ಭಾಷೆಯ ಮೂಲಕವೇ ವ್ಯಕ್ತವಾಗಿವೆಎಂದರು. ಮತ್ತೊಬ್ಬ ಮುಖ್ಯಅತಿಥಿ ವಿಶ್ವವಿದ್ಯಾಲಯಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆಡಾ. ನಾಗರತ್ನರಾವ್‍ಇವರು ಮಾತನಾಡಿ ಭಾಷೆ ಹರಿಯುವ ನದಿಯಿದ್ದಂತೆ. ನದಿ

ನಗರದ ಶಕ್ತಿ ಪದವಿ ಪೂರ್ವಕಾಲೇಜಿನಲ್ಲಿ ‘ಹಿಂದಿ ದಿವಸ’ ಕಾರ್ಯಕ್ರಮ Read More »

ಕರಾವಳಿ

ಸಮುದ್ರಕ್ಕೆ ತೆರಳದಂತೆ – ಮೀನುಗಾರರಿಗೆ ಮುನ್ನೆಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ಹವಾಮಾನ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ಮುಂದಿನ 24 ಗಂಟೆಗಳ ಕಾಲ ಸಮುದ್ರವು ಪ್ರಕ್ಷುಬ್ಧವಾಗುವ ಸಂಭವನೀಯತೆ ಇದೆ. ಆದ್ದರಿಂದ ಸೆಪ್ಟೆಂಬರ್ 23 ರಿಂದ 25 ರವರೆಗೆ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳದಂತೆ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮಂಗಳೂರು ಮೀನುಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಸಮುದ್ರಕ್ಕೆ ತೆರಳದಂತೆ – ಮೀನುಗಾರರಿಗೆ ಮುನ್ನೆಚ್ಚರಿಕೆ Read More »

ಕರಾವಳಿ

ಆಯುಷ್ಮಾನ್ ಭಾರತ್ ➤ ಜಾಥಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆ ಜಾರಿಗೆ ಬಂದು ಒಂದು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಯೋಜನೆಯ ಅರಿವು ಮೂಡಿಸಲು ಹಾಗೂ ಫಲಾನುಭವಿಗಳು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಲು ಜಾಗೃತಿ ಜಾಥ ಕಾರ್ಯಕ್ರಮ ನಡೆಯಿತು. ಸೋಮವಾರ ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಾಥ ಆರಂಭಗೊಂಡಿದ್ದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು. ಬಳಿಕ ಜಾಥವು ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ ಮಂಗಳೂರು ಇಲ್ಲಿಗೆ

ಆಯುಷ್ಮಾನ್ ಭಾರತ್ ➤ ಜಾಥಾ ಕಾರ್ಯಕ್ರಮ Read More »

ಕರಾವಳಿ

ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಸಪ್ಟೆಂಬರ್ 25 ರಂದು ಬೆಳಿಗ್ಗೆ 10 ಗಂಟೆಗೆ ಮಹಿಳಾ ಪದವಿ ಪೂರ್ವ ಕಾಲೇಜು ರಥಬೀದಿ ಮಂಗಳೂರು ಇಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮ Read More »

ಕರಾವಳಿ

ಕೊಡಗು ಸೈನಿಕ ಶಾಲೆಯ 6 ಮತ್ತು 9 ನೇ ತರಗತಿಯ ಪ್ರವೇಶ ಪರೀಕ್ಷೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.2020-21 ನೇ ಸಾಲಿನ ಅಖಿಲ ಭಾರತ ಸೈನಿಕ ಶಾಲೆಗಳ 6 ಮತ್ತು 9 ನೇ ತರಗತಿಯ ಪ್ರವೇಶ ಪರೀಕ್ಷೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಅಕ್ಟೋಬರ್ 10 ರವರೆಗೆ ಮುಂದೂಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವೆಬ್‍ಸೈಟ್ ವಿಳಾಸ    www.sainikschooladmission.in   ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08276-278963, 08276-278965 ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು, ಸೈನಿಕ ಶಾಲೆ ಕೊಡಗು ಇವರ ಪ್ರಕಟಣೆ ತಿಳಿಸಿದೆ.

ಕೊಡಗು ಸೈನಿಕ ಶಾಲೆಯ 6 ಮತ್ತು 9 ನೇ ತರಗತಿಯ ಪ್ರವೇಶ ಪರೀಕ್ಷೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ Read More »

ಕರಾವಳಿ
Scroll to Top