ಕಡಬ ನ್ಯೂಸ್

ಸಾಮೂಹಿಕ ಸ್ವಚ್ಚತಾ ಕಾರ್ಯಕ್ರಮ ಪರಿಣಾಮಕಾರಿ ➤ ಶಾಸಕ ವೇದವ್ಯಾಸ ಕಾಮತ್

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಎಂ ಆರ್ ಪಿ ಎಲ್ ಸಹಯೋಗದೊಂದಿಗೆ ಭಾನುವಾರ ಸ್ವಚ್ಚತಾ ಜನ ಜಾಗರಣ ಅಭಿಯಾನ ಹಮ್ಮಿಕೊಳ್ಳಲಾಯಿತು. ಮಠದ ಮುಖ್ಯಸ್ಥರಾದ ಬ್ರಹ್ಮಚಾರಿಣಿ ಮಂಗಳಾಮೃತ ಚೈತನ್ಯ ಅಮೃತ ಜ್ಯೋತಿ ಬೆಳಗಿ ಚಾಲನೆ ನೀಡಿದರು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಈ ಸಂದರ್ಭದಲ್ಲಿ ಮಾತನಾಡಿ ಸ್ವಚ್ಚ ಭಾರತ, ಸ್ವಚ್ಚ ಮಂಗಳೂರಿನ ಬಗ್ಗೆ ಮಠಗಳ ಪ್ರಯತ್ನ ಶ್ಲಾಘನೀಯ, 2000 ಕ್ಕೂ ಅಧಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಜನಜಾಗೃತಿ ಮೂಡಿಸುತ್ತಿರುವ ಪರಿಣಾಮ ಇಂದು ಹೆಚ್ಚಿನ ಜನರಲ್ಲಿ […]

ಸಾಮೂಹಿಕ ಸ್ವಚ್ಚತಾ ಕಾರ್ಯಕ್ರಮ ಪರಿಣಾಮಕಾರಿ ➤ ಶಾಸಕ ವೇದವ್ಯಾಸ ಕಾಮತ್ Read More »

ಕರಾವಳಿ

ಬಾಲಭವನ ಸಂಸ್ಥೆಯ ವತಿಯಿಂದ ಕಲಾಶ್ರೀ ಆಯ್ಕೆ ಶಿಬಿರಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ಬಾಲಭವನ ಸಂಸ್ಥೆಯು 2019 ನೇ ಸಾಲಿನ ತಾಲೂಕು ಮಟ್ಟದ ಮಕ್ಕಳ ಕಲಾ ಉತ್ಸವ ಹಾಗೂ ಕಲಾಶ್ರೀ ಪ್ರಶಸ್ತಿ ಶಿಬಿರ ಹಮ್ಮಿಕೊಳ್ಳಲಾಗಿದೆ. ಈ ಶಿಬಿರದಲ್ಲಿ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಕಲಾ ಪ್ರತಿಭೆಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಪ್ರತಿಭಾವಂತ ಮಕ್ಕಳನ್ನು ಆರಿಸಿ ಕಲಾಶ್ರೀ ಪ್ರಶಸ್ತಿ ಪ್ರಧಾನ ಮಾಡುವ ಉದ್ದೇಶದಿಂದ ಒಕ್ಟೋಬರ್ 15 ರಂದು ಮಂಗಳಜ್ಯೋತಿ ಸಮಗ್ರ ಶಾಲೆ, ವಾಮಂಜೂರು ಇಲ್ಲಿ ನಡೆಯುವ ತಾಲೂಕು ಮಟ್ಟದ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಪರ್ಧೆಗಳ ವಿವರ ಇಂತಿವೆ : ಸೃಜನಾತ್ಮಕ ಕಲೆ-

ಬಾಲಭವನ ಸಂಸ್ಥೆಯ ವತಿಯಿಂದ ಕಲಾಶ್ರೀ ಆಯ್ಕೆ ಶಿಬಿರಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಹಳೆಯ ಕಡತ ಪೇಪರ್‍ಗಳ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯ ರೆಕಾರ್ಡ್ ಕೊಠಡಿಗೆ ಸಂಬಂಧಿಸಿದ ಹಳೆಯ ಕಡತಗಳಲ್ಲಿರುವ ಎಲ್ಲಾ ವಿಧದ ಪೇಪರ್ ಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯ ಆವರಣದಲ್ಲಿ ಅಕ್ಟೋಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪೊಲೀಸ್ ಕಚೇರಿ, ದ.ಕ ಜಿಲ್ಲೆ ಮಂಗಳೂರು ಇವರನ್ನು ಸಂಪರ್ಕಿಸಲು ಪೊಲೀಸ್ ಅಧೀಕ್ಷಕರು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಹಳೆಯ ಕಡತ ಪೇಪರ್‍ಗಳ ಬಹಿರಂಗ ಹರಾಜು Read More »

ಕರಾವಳಿ

ಬಸವನ ಹುಳು ನಿಯಂತ್ರಣಕ್ಕೆ ಸಲಹೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ಆಫ್ರಿಕಾದ ದೈತ್ಯ ಬಸವನ ಹುಳು (Achatina fulica) ವಿಶ್ವದ ಅತಿದೊಡ್ಡ ಮತ್ತು ಹಾನಿಕಾರಕ ಭೂಮಿ ಬಸವನ ಕೀಟಗಳಲ್ಲಿ ಒಂದು. ಇದು ಮನುಷ್ಯನ ಹಿಡಿಯಷ್ಟು ದೊಡ್ಡ ಶಂಖದ ಆಕಾರದ ಚಿಪ್ಪುನಲ್ಲಿ ಇರುವಂತಹ ಜೀವಿ. ಕೈಯಲ್ಲಿ ಹಿಡಿದಾಗ ಆಮೆಯಂತೆ ಚಿಪ್ಪಿನೊಳಗೆ ಅಡಗಿಕೊಳ್ಳುತ್ತದೆ. ರಾತ್ರಿಯಿಡೀ ಎಚ್ಚರವಿದ್ದು ತೋಟದಲ್ಲಿರುವ ಎಲ್ಲಾ ರೀತಿಯ ಬೆಳೆಗಳನ್ನು ನಾಶ ಮಾಡುತ್ತದೆ, ದಿನದ ಹಗಲು ಸಮಯದಲ್ಲಿ ಗಿಡಗಳಲ್ಲಿ/ಪೊದೆಗಳಲ್ಲಿ ಅವಿತುಕೊಂಡು ರಾತ್ರಿ ಸಮಯದಲ್ಲಿ ಹೆಚ್ಚು ಚಟುವಟಿಕೆಯಿಂದ ಕೂಡಿರುತ್ತದೆ.ಬಸವನ ಹುಳುಗಳನ್ನು ಸಮಗ್ರವಾಗಿ ನಿಯಂತ್ರಣ ಮಾಡಬಹುದಾಗಿದ್ದು ಇದರಿಂದ ನಾವು

ಬಸವನ ಹುಳು ನಿಯಂತ್ರಣಕ್ಕೆ ಸಲಹೆ Read More »

ಕರಾವಳಿ

ತಣ್ಣೀರುಬಾವಿ ಬೀಚ್- ಪ್ಲಾಸ್ಟಿಕ್ ಬಳಕೆಯ ಅರಿವು ಜಾಥಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯವು ಸೆಂಪ್ಟಂಬರ್ 21 ರಂದು ಅಂತರಾಷ್ಟ್ರೀಯ ಕರಾವಳಿ ಸ್ವಚ್ಚತಾ ದಿನದಂದು ಬೀಚ್ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿತು. ನವದೆಹಲಿಯ ಭೂ ವಿಜ್ಞಾನ ಸಚಿವಾಲಯ ಮತ್ತು ಚೆನ್ನೈನ ರಾಷ್ಟ್ರೀಯ ಕಡಲ ಸಂಶೋಧನಾ ಸಂಸ್ಥೆಗಳ ನಿರ್ದೇಶನದಂತೆ, ಕರ್ನಾಟಕದ ಏಕೈಕ ಕಾಲೇಜಾದ ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯವು ಅಂತರಾಷ್ಟ್ರೀಯ ಕರಾವಳಿ ಸ್ವಚ್ಚತಾ ದಿನವನ್ನು ತಣ್ಣೀರುಭಾವಿ ಕಡಲ ಕಿನಾರೆಯಲ್ಲಿ ನಡೆಸಿತು. ಸಂಯೋಜಕರಾದ ಕಾಲೇಜಿನ ಅರ್ಥಶಾಸ್ತ್ರ, ಸಂಖ್ಯಾಶಾಸ್ತ್ರ ಮತ್ತು ವಿಸ್ತರಣೆ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ. ಎಸ್.ಆರ್.

ತಣ್ಣೀರುಬಾವಿ ಬೀಚ್- ಪ್ಲಾಸ್ಟಿಕ್ ಬಳಕೆಯ ಅರಿವು ಜಾಥಾ ಕಾರ್ಯಕ್ರಮ Read More »

ಕರಾವಳಿ

ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ➤ ಪ್ಲಾಸ್ಟಿಕ್ ಪರ್ಯಾಯ ವಸ್ತುಗಳ ಪ್ರದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ಮರುಬಳಕೆ ಮಾಡಲಾಗದ ಪ್ಲಾಸ್ಟಿಕ್ ವಿರುದ್ಧ ಜಾಗೃತಿ ಮತ್ತು ಪ್ಲಾಸ್ಟಿಕ್‍ಗೆ ಪರ್ಯಾಯವಾಗಬಹುದಾದ ವಸ್ತುಗಳ ಪ್ರದರ್ಶನ ಮತ್ತು ಮಾರಾಟವನ್ನು ವಿಶ್ವವಿದ್ಯಾನಿಲಯ ಕಾಲೇಜಿನ ಸೂಕ್ಷ್ಮಾಣು ಜೀವಿಶಾಸ್ರ್ತ ವಿಭಾಗ, ಎನ್‍ಎನ್‍ಎಸ್ ಘಟಕದ ಸಹಯೋಗದೊಂದಿಗೆ ರವೀಂದ್ರ ಕಲಾಭವನದ ಬಳಿ ಇತ್ತೀಚೆಗೆ ಆಯೋಜಿಸಿತ್ತು. ಬೀಜದ ಪೆನ್‍ಗಳು ಪೆನ್ಸಿಲ್‍ಗಳು, ನೆಡಬಹುದಾದ ಪೆನ್‍ಗಳು, ಪುನರ್ಬಳಕೆ ಮಾಡಿದ ಪೇಪರ್‍ನಿಂದ ತಯಾರಿಸಿದ ನೋಟ್‍ಬುಕ್‍ಗಳು, ಸೆಣಬಿನ ಬ್ಯಾಗ್, ಕೈಚೀಲಗಳು, ಬಾಳೆ ಎಲೆ, ಪೇಪರ್ ಬ್ಯಾಗ್, ಬಟ್ಟೆಯ ಚೀಲಗಳು, ವಿಭಾಗಗಳಿರುವ ಶಾಪಿಂಗ್ ಬ್ಯಾಗ್‍ಗಳು, ಅಡಿಕೆ ಹಾಳೆಯ ತಟ್ಟೆ, ಪ್ಲೇಟ್, ಬೌಲ್,

ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ➤ ಪ್ಲಾಸ್ಟಿಕ್ ಪರ್ಯಾಯ ವಸ್ತುಗಳ ಪ್ರದರ್ಶನ Read More »

ಕರಾವಳಿ

ವಿಶ್ವವಿದ್ಯಾನಿಲಯ ಕಾಲೇಜಿನ ಪರಿಸರ ಸಂಘ ಮತ್ತು ಇನೋವೇಶನ್ ಕ್ಲಬ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24ವಿಶ್ವವಿದ್ಯಾನಿಲಯ ಕಾಲೇಜಿನ ಪರಿಸರ ಸಂಘ ಮತ್ತು ಇನೋವೇಶನ್ ಕ್ಲಬ್‍ಗಳ ಪ್ರಸಕ್ತ ವರ್ಷದ ಕಾರ್ಯ ಚಟುವಟಿಕೆಗಳಿಗೆ ರವೀಂದ್ರ ಕಲಾಭವನದಲ್ಲಿ ಶನಿವಾರ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳು ಮತ್ತು ಗಣ್ಯರು ದೀಪ ಬೆಳಗಿಸಿ ಔಪಚಾರಿಕ ಉದ್ಘಾಟನೆ ನಡೆಸಿದರು. ಕಾಗದ ಮತ್ತು ಇತರ ಮಣ್ಣಿನಲ್ಲಿ ಕರಗಬಲ್ಲ ವಸ್ತುಗಳಿಂದ ತಯಾರಿಸಿದ ಆವಿಷ್ಕಾರಕ ಪಾಪ್-ಅಪ್ ಬ್ಯಾನರನ್ನು, ಸಂಶೋಧನೆ ಮತ್ತು ಪರಿಸರ ಸ್ನೇಹಿ ನಡೆಯ ಸೂಚಕದಂತೆ ವೇದಿಕೆಯಲ್ಲಿ ಸ್ಥಾಪಿಸಿದ್ದು ವಿಶೇಷವಾಗಿತ್ತು. ಇದೇ ಸಂದರ್ಭದಲ್ಲಿ ಇಕೋ ಮತ್ತು ಇನೋವೇಶನ್ ಕ್ಲಬ್‍ಗಳ ಸಂಚಾಲಕ ಡಾ. ಸಿದ್ಧರಾಜು

ವಿಶ್ವವಿದ್ಯಾನಿಲಯ ಕಾಲೇಜಿನ ಪರಿಸರ ಸಂಘ ಮತ್ತು ಇನೋವೇಶನ್ ಕ್ಲಬ್ ಉದ್ಘಾಟನೆ Read More »

ಕರಾವಳಿ

ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ/ಪಿ.ಎಚ್.ಡಿ./ ಸಂಶೋಧನೆ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 5. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್  www.backwardclasses.kar.nic.in  ದೂರವಾಣಿ ಸಂಖ್ಯೆ: 805077004 ನ್ನು ಸಂಪರ್ಕಿಸಬಹುದು ಎಂದು

ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ಬಂಟ್ವಾಳ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಆನ್‍ಲೈನ್  www.anganwadirecruit.kar.nic.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 19 ರಂದು ಸಂಜೆ 5.30 ಗಂಟೆ. ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆ :-ಕರ್ಪೆ ಗ್ರಾಮ-ಕರ್ಪೆಕುಟ್ಟಿಕಳ ಅಂಗನವಾಡಿ ಕೇಂದ್ರ, ಸರಪಾಡಿ ಗ್ರಾಮ- ಪಾದಿಲ ಅಂಗನವಾಡಿ ಕೇಂದ್ರ, ಬಿ.ಕಸಬಾ ಗ್ರಾಮ- ಲೊರೆಟ್ಟೊಪದವು ಅಂಗನವಾಡಿ ಕೇಂದ್ರ. ಖಾಲಿಯಿರುವ ಅಂಗನವಾಡಿ ಸಹಾಯಕಿ ಹುದ್ದೆ : ತುಂಬೆ ಗ್ರಾಮ –ತುಂಬೆಶಾಲೆ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ಸ್ಥಗಿತ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೇಚಕ ಸ್ಥಾವರಕ್ಕೆ ವಿದ್ಯುತ್ ಸರಬರಾಜು ಮಾಡುವ 33 ಕೆವಿ ವಿದ್ಯುತ್ ತಂತಿಗಳನ್ನು ಮೆಸ್ಕಾಂ ವತಿಯಿಂದ ಬದಲಾಯಿಸಿ ಹೊಸ ಕೇಬಲ್ ಅಳವಡಿಸುವ ಕಾರ್ಯವನ್ನುಇಂದು  ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ಈ ಅವಧಿಯಲ್ಲಿ ತುಂಬೆ ಎಚ್.ಎಲ್.ಪಿ.ಎಸ್-2 ಹಾಗೂ ಎಲ್.ಎಲ್.ಪಿ,ಎಸ್-2 ಸ್ಥಾವರಗಳಿಗೆ ವಿದ್ಯುತ್ ನಿಲುಗಡೆಗೊಳ್ಳುವುದರಿಂದ ನೀರು ಸರಬರಾಜು ನಿಲುಗಡೆಗೊಳಿಸಿರುವುದು. ಇದರಿಂದ ಮಂಗಳೂರು ಇಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂಪೂರ್ಣ ನಿಲುಗಡೆಗೊಳ್ಳುವುದು

ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ಸ್ಥಗಿತ Read More »

ಕರಾವಳಿ
Scroll to Top