ಕಡಬ ನ್ಯೂಸ್

ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ

(ನ್ಯೂಸ್ ಕಡಬ) newskadaba.com ವಿಜಯಪುರ ,ಸಪ್ಟೆಂಬರ್.13.ತೊರವಿ ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ‌ ಡಿಕ್ಕಿಯಾಗಿದ್ದು, ಇಬ್ಬರು ಚಾಲಕರು ಸೇರಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಬಸ್ ಹಾಗೂ ಲಾರಿ ಚಾಲಕರು ಕುಳಿತ ಸೀಟುಗಳಲ್ಲಿಯೇ ಸಿಲುಕಿ ಇಬ್ಬರ ದೇಹಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ. ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭಿರ ಗಾಯವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ Read More »

ಕರಾವಳಿ

ರಸ್ತೆ ಮಧ್ಯೆ ವಿದ್ಯುತ್ ಕಂಬಕ್ಕೆ ಕಟ್ಟಿದ್ದ ಫ್ಲೆಕ್ಸ್ ಬಿದ್ದು ಟೆಕ್ಕಿ ದುರಂತ ಅಂತ್ಯ

(ನ್ಯೂಸ್ ಕಡಬ) newskadaba.com ಚೆನ್ನೈ,ಸಪ್ಟೆಂಬರ್.13. ಚೆನ್ನೈನ ಐಟಿ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಾಫ್ಟ್​ವೇರ್​ ಇಂಜಿನಿಯರ್​ ಶುಭಶ್ರೀ (23) ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದರು. ಪಲ್ಲಾವರಂ-ತೋರಿಪಕ್ಕಂ ರಾಡಿಯಲ್​ ರಸ್ತೆಯಲ್ಲಿ ತೆರಳುತ್ತಿದ್ದಾಗ ಕಂಬಕ್ಕೆ ಕಟ್ಟಿದ್ದ ಫ್ಲೆಕ್ಸ್​ ಏಕಾಏಕಿ ಶುಭಶ್ರೀ ಅವರ ಮೇಲೆ ಬಿದ್ದಿದೆ. ಈ ವೇಳೆ ಅವರು ಆಯತಪ್ಪಿ ಕೆಳಗೆ ಬಿದ್ದ ಅವರ ಮೇಲೆ ಹಿಂದಿನಿಂದ ಬರುತ್ತಿದ್ದ ಲಾರಿ ಹರಿದಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು.ಇಲ್ಲಿನ ಸ್ಥಳೀಯ ಎಐಎಡಿಎಂಕೆ ಪಕ್ಷದ

ರಸ್ತೆ ಮಧ್ಯೆ ವಿದ್ಯುತ್ ಕಂಬಕ್ಕೆ ಕಟ್ಟಿದ್ದ ಫ್ಲೆಕ್ಸ್ ಬಿದ್ದು ಟೆಕ್ಕಿ ದುರಂತ ಅಂತ್ಯ Read More »

ಕರಾವಳಿ

ಮನೆಛಾವಣಿ ಕುಸಿದು ಮೂವರ ಸಾವು

(ನ್ಯೂಸ್ ಕಡಬ) newskadaba.com ನವದೆಹಲಿ,ಸಪ್ಟೆಂಬರ್.13.ಪಠಾಣ್‌ ಕೋಟ್‌ ನ ಕಲಿಹಾರಿ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಮನೆಯ ಛಾವಣಿ ಕುಸಿದು ಮೂವರು ಸಾವನ್ನಪ್ಪಿ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದು, ಮನೆಯೊಳಗೆ ಇದ್ದ ಉಳಿದವರನ್ನು ರಕ್ಷಿಸಲಾಗಿದೆ.ಗಾಯಾಳುಗಳನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನೆಛಾವಣಿ ಕುಸಿದು ಮೂವರ ಸಾವು Read More »

ಕರಾವಳಿ

ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾದ ಸಿಂಧೂ ಬಿ ರೂಪೇಶ್ ರವರರಿಗೆಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ವತಿಯಿಂದ ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾದ ಸಿಂಧೂ ಬಿ ರೂಪೇಶ್ ರವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ವತಿಯಿಂದ  ಸಂಘದ ಅಧ್ಯಕ್ಷ ಪಿ.ಕೆ. ಕೃಷ್ಣ ಅವರ ನೇತೃತ್ವದಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾದ ಸಿಂಧೂ ಬಿ ರೂಪೇಶ್ ರವರರಿಗೆಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ವತಿಯಿಂದ ಅಭಿನಂದನೆ Read More »

ಕರಾವಳಿ

ಶಿಕ್ಷಣದಿಂದ ಜೀವನ ಮೌಲ್ಯಗಳನ್ನು ಕಲಿಯುವುದು ಅಗತ್ಯ ➤ ಪ್ರೊ. ಪಿ.ವಿ.ಕೃಷ್ಣ ಭಟ್

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ದಕ್ಷಿಣ ಕನ್ನಡ ಜಿಲ್ಲೆಯು ಶಿಕ್ಷಣ ಕ್ಷೇತ್ರಕ್ಕೆ ನಾಡಿಗೆ ಮತ್ತು ದೇಶಕ್ಕೆ ಬಹುದೊಡ್ಡ ಕೊಡುಗೆ ನೀಡಿದೆ. ಅದರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಬಹುಮುಖ್ಯ ಪಾತ್ರವಿದೆ ಎಂದು ಒರಿಸ್ಸಾ ಕೇಂದ್ರೀಯ ವಿಶ್ವವಿದ್ಯಾನಿಲಯ ಕುಲಾಧಿಪತಿಗಳಾದ ಪ್ರೊ. ಪಿ.ವಿ. ಕೃಷ್ಣ ಭಟ್ ಶ್ಲಾಘಿಸಿದರು. ಗುರುವಾರ ಮಂಗಳೂರು ವಿಶ್ವವಿದ್ಯಾನಿಲಯದ 40ನೇ ಯ ಸಂಸ್ಥಾಪನಾ ದಿನಾಚರಣೆಯನ್ನು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು ಈ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯು ದೇಶದ ಬ್ಯಾಂಕಿಂಗ್ ಉದ್ಯಮ, ಶಿಕ್ಷಣ ಕ್ಷೇತ್ರ, ಸಾಂಸ್ಕøತಿಕ

ಶಿಕ್ಷಣದಿಂದ ಜೀವನ ಮೌಲ್ಯಗಳನ್ನು ಕಲಿಯುವುದು ಅಗತ್ಯ ➤ ಪ್ರೊ. ಪಿ.ವಿ.ಕೃಷ್ಣ ಭಟ್ Read More »

ಕರಾವಳಿ

ಮಂಗಳೂರು ವಿಶ್ವ ವಿದ್ಯಾನಿಲಯ ➤ ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ಮಂಗಳೂರು ವಿಶ್ವ ವಿದ್ಯಾನಿಲಯ 2019-20ನೇ ಸಾಲಿಗೆ ಎಂ.ಎಡ್.(ರೆಗ್ಯುಲರ್) ಕೋರ್ಸಿಗೆ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದೆ. ಅಂಗೀಕೃತ ವಿಶ್ವವಿದ್ಯಾನಿಲಯದಿಂದ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಎಂ.ಎಡ್./ಎಂ.ಎ. ಎಜುಕೇಶನ್ ಪದವಿ ಹೊಂದಿರುವ )ಕನಿಷ್ಠ 55% ಅಂಕಗಳೊಂದಿಗೆ) ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ವರ್ಗ, ಸೇವಾನುಭವ, ದೂರವಾಣಿ ಸಂಖ್ಯೆ ಇತ್ಯಾದಿ ಸ್ವವಿವರವುಳ್ಳ ಅರ್ಜಿ ಮತ್ತು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ ಹಾಗೂ ಮೂಲ ದಾಖಲೆಗಳೊಂದಿಗೆ ಸೆಪ್ಟೆಂಬರ್ 19 ರಂದು ಬೆಳಿಗ್ಗೆ 11 ಗಂಟೆಗೆ ಕುಚಿಸಚಿವರ ಕಚೇರಿ,

ಮಂಗಳೂರು ವಿಶ್ವ ವಿದ್ಯಾನಿಲಯ ➤ ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಬೆಂಗರೆ : ಪರಿಸರ ಸಾರ್ವಜನಿಕ ಸಭೆ 14ರಂದು

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ಬಂದರು ಮತ್ತು ಮೀನುಗಾರಿಕೆ ಇಲಾಖೆ, ಉಡುಪಿ ವಿಭಾಗ ಇವರು ಸಾಗರಮಾಲ ಯೋಜನೆಯಡಿನಗರದ ಹಳೇ ಬಂದರಿನಲ್ಲಿ ಕರಾವಳಿ ಬರ್ತ್ ನಿರ್ಮಿಸಲು ಉದ್ದೇಶಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಸಪ್ಟೆಂಬರ್ 14 ರಂದು ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ಪ್ರೌಢಶಾಲೆ ಕಸಬಾ ಬೆಂಗರೆ ವಠಾರದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಿಸರ ಸಾರ್ವಜನಿಕ ಆಲಿಕೆ ಸಭೆಯನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ನಡೆಸಲಾಗುತ್ತದೆ ಎಂದು ಎಂದುಮಂಡಳಿಯ ಮಂಗಳೂರು ವಿಭಾಗದ ಪರಿಸರ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಬೆಂಗರೆ : ಪರಿಸರ ಸಾರ್ವಜನಿಕ ಸಭೆ 14ರಂದು Read More »

ಕರಾವಳಿ

ಮುಜರಾಯಿ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ದ.ಕ.ಜಿಲ್ಲಾ ಪ್ರವಾಸ ಇಂತಿವೆ: ಸಪ್ಟೆಂಬರ್ 13ರಂದು ಬೆಳಿಗ್ಗೆ 11.15 ಗಂಟೆಗೆ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಸಭಾಭವನ ಮಂಗಳೂರು ಇಲ್ಲಿ ದಕ್ಷಿಣಕನ್ನಡ ಜಿಲ್ಲಾ ಮಟ್ಟದ ಶ್ರೀ ನಾರಾಯಣ ಗುರು ಜಯಂತೋತ್ಸವಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.50 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

ಮುಜರಾಯಿ ಸಚಿವರ ಪ್ರವಾಸ Read More »

ಕರಾವಳಿ

ಅಡಿಕೆ ಫಸಲು ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13. 2019-20ನೇ ಸಾಲಿನಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ತುಂಬೆ ತೋಟಗಾರಿಕೆ ಕ್ಷೇತ್ರದ ಅಡಿಕೆ ಫಸಲನ್ನು ಇ-ಹರಾಜು ಮತ್ತು ಟೆಂಡರ್ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ಇ-ಹರಾಜು ಅವಧಿಯು ಸೆಪ್ಟೆಂಬರ್ 9 ರಿಂದ ಆರಂಭಗೊಂಡು ಅಕ್ಟೋಬರ್ 10 ರಂದು ಕೊನೆಗೊಳ್ಳಲಿದೆ. ಆಸಕ್ತರು ತಮ್ಮ ಬಿಡ್ಡನ್ನು ಇ-ಹರಾಜು ಅಥವಾ ಟೆಂಡರ್ ಮೂಲಕ ಸಲ್ಲಿಸಬಹುದಾಗಿದೆ. ಇ-ಹರಾಜಿನಲ್ಲಿ ಭಾಗವಹಿಸಲು ಇಚ್ಚಿಸುವವರು e.procurement.kar.in ರಲ್ಲಿ ಪಡೆಯಬಹುದಾಗಿದೆ. ಟೆಂಡರ್ ಸಂಖ್ಯೆ:KSHDA /2019-20/Auction.2287.ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ,

ಅಡಿಕೆ ಫಸಲು ಹರಾಜು Read More »

ಕರಾವಳಿ

ಸಪೋಟ ಫಸಲು ಹರಾಜು ಪ್ರಕಟಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿನ ಜುಲೈ 1 ರಿಂದ ಡಿಸೆಂಬರ್ 31 ಅವಧಿಯ ಸಪೋಟ ಫಸಲನ್ನು ಟೆಂಡರು ಮೂಲಕ ವಿಲೇ ಮಾಡಲಾಗುವುದು. ಹರಾಜು ವಿವರ ಇಂತಿವೆ : ತುಂಬೆ ತೋಟಗಾರಿಕೆ ಕ್ಷೇತ್ರ, ಬಂಟ್ವಾಳ ಸೆಪ್ಟಂಬರ್ 25 ರಂದು ಮಧ್ಯಾಹ್ನ 12 ಗಂಟೆ, ವಿಟ್ಲ ತೋಟಗಾರಿಕೆ ಕ್ಷೇತ್ರ ಬಂಟ್ವಾಳ, ಸೆಪ್ಟೆಂಬರ್ 25ರಂದು ಸಂಜೆ 4 ಗಂಟೆ, ಮದ್ದಡ್ಕ ತೋಟಗಾರಿಕೆ ಕ್ಷೇತ್ರ ಬೆಳ್ತಂಗಡಿ, ಸೆಪ್ಟೆಂಬರ್ 26 ಮಧ್ಯಾಹ್ನ 12 ಗಂಟೆಗೆ ನಡೆಯಲಿವೆ. ಆಸಕ್ತರು

ಸಪೋಟ ಫಸಲು ಹರಾಜು ಪ್ರಕಟಣೆ Read More »

ಕರಾವಳಿ
Scroll to Top