ಕಡಬ ನ್ಯೂಸ್

ಸಾಪಿಯೆನ್ಶಿಯಾ ಪ್ರಥಮ ದರ್ಜೆ ಕಾಲೇಜು ನೆಲ್ಯಾಡಿ ➤ ಮಾಹಿತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಸಪ್ಟೆಂಬರ್.11.ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಎಸ್ ಬಿ ಕಾಲೇಜು ನೆಲ್ಯಾಡಿಯಲ್ಲಿ ರ್ಯಾಗಿಂಗ್, ಮಾದಕ ವಸ್ತುಗಳ ಸೇವೆನೆ, ಲೈಂಗಿಕ ದೌರ್ಜನ್ಯ ಇವುಗಳ ತೊಂದರೆ ಹಾಗೂ ಇದಕ್ಕೆ ಕಾನೂನು ಸಲಹೆ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪುತ್ತೂರು ವಿಭಾಗದ ಡಿವೈಎಸ್‍ಪಿ ದಿನಕರ ಶೆಟ್ಟಿಯವರು ಮಾತನಾಡಿ ಅವರು ರ್ಯಾಗಿಂಗ್, ಮಾದಕ ವಸ್ತುಗಳ ಸೇವೆನೆ, ಲೈಂಗಿಕ ದೌರ್ಜನ್ಯ ಇವುಗಳ ತೊಂದರೆ ಹಾಗೂ ಇದಕ್ಕೆ ಕಾನೂನು ಸಲಹೆ ಬಗ್ಗೆ ಮಾಹಿತಿ ನೀಡಿದರು.ಕಾರ್ಯಕ್ರಮದ 2ನೇ ವಿಷಯವಾದ ಪರಸರ ಸಂರಕ್ಷಣೆಯ ಬಗ್ಗೆ […]

ಸಾಪಿಯೆನ್ಶಿಯಾ ಪ್ರಥಮ ದರ್ಜೆ ಕಾಲೇಜು ನೆಲ್ಯಾಡಿ ➤ ಮಾಹಿತಿ ಕಾರ್ಯಾಗಾರ Read More »

ಕರಾವಳಿ

ಕಳಸದ ಬಸದಿಯಲ್ಲಿ ಪತ್ತೆಯಾದ ಜೈನ ಶಾಸನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.11.ಪ್ರೊ. ಟಿ. ಮುರುಗೇಶಿ. ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗ. ಎಂ.ಎಸ್.ಆರ್.ಎಸ್. ಕಾಲೇಜು, ಶಿರ್ವ-574116, ಉಡುಪಿ. ಚಿಕ್ಕಮಗಳೂರು ಜಿಲ್ಲೆ ಕಳಸದ ಚಂದ್ರನಾಥ ತೀರ್ಥಂಕರರ ಬಸದಿಯಲ್ಲಿನ ಒಂದು ಚಿಕ್ಕ ಚಂದ್ರನಾಥ ತೀರ್ಥಂಕರರ ಪ್ರತಿಮೆಯ ಹಿಂಭಾಗದಲ್ಲಿ ಜೈನ ಶಾಸನವೊಂದು ಪತ್ತೆಯಾಗಿದೆ. ಈ ಪುಟ್ಟ ಶಾಸನದಲ್ಲಿ ಪ್ರತಿ ಸಾಲನ್ನು ಒಂದು ಸೊನ್ನೆಯಿಂದ ಆರಂಭಿಸಲಾಗಿದೆ. ಕನ್ನಡ ಲಿಪಿ ಮತ್ತು ಭಾಷೆಯ 10 ಸಾಲಿನ ಶಾಸನದಲ್ಲಿ ಕಿವಿಯಲಿ ಕೇಳಿ, ಕಂಣಲಿ ನೋಡಿದ ಪಾಪಕೆ ಪ್ರಾಯಶ್ಚಿತ್ತವಾಗಿ ಪ್ರತಿ ಚಂದ್ರನಾಥನ ಅಂದರೆ,

ಕಳಸದ ಬಸದಿಯಲ್ಲಿ ಪತ್ತೆಯಾದ ಜೈನ ಶಾಸನ Read More »

ಕರಾವಳಿ

ಸೆ.12ರಂದು ಕಡಬದಲ್ಲಿ ಡಿ.ಕೆ.ಶಿ ಬಂಧನದ ವಿರುದ್ಧ ಬೃಹತ್ ಪ್ರತಿಭಟನೆ ➤ತಹಸೀಲ್ದಾರ ಮುಖಾಂತರ ರಾಜ್ಯಪಾಲರಿಗೆ, ರಾಷ್ಟ್ರಪತಿಗಳಿಗೆ ಮನವಿ.

(ನ್ಯೂಸ್ ಕಡಬ) newskadaba.com ಕಡಬ,ಸಪ್ಟೆಂಬರ್.11.ಕರ್ನಾಟಕ ರಾಜ್ಯದ ಬೃಹತ್ ಉದ್ಯಮಿ ಪ್ರತಿಷ್ಠಿತ ರಾಜಕಾರಣಿ ಡಿ.ಕೆ ಶಿವಕುಮಾರ್‍ರನ್ನು ವಿನಾಕಾರಣ ಇಡಿ ಮೂಲಕ ಬಂದಿಸಿ ಮಾನಸಿಕ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ಸೆ.12ರಂದು ಕಡಬ ತಾಲೂಕು ಒಕ್ಕಲಿಗ ಗೌಡ ಸಮುದಾಯ ಮತ್ತು ಜಾತ್ಯಾತೀತ ಸಾರ್ವಜನಿಕ ಅಭಿಮಾನಿ ಬಳಗದವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳು, ವಿವಿಧ ಪಕ್ಷದವರು ರಾಜಕೀಯ ರಹಿತವಾಗಿ ಕಡಬ ಪೇಟೆಯಲ್ಲಿ ಪ್ರತಿಭಟನೆ ನಡೆಸಲಾಗುವುದುದೆಂದು ಸೋಮಸುಂದರ್ ಕೂಜಿಗೋಡು ತಿಳಿಸಿದ್ದಾರೆ. ಕಡಬ ಒಕ್ಕಲಿಗ ಗೌಡ ಸಭಾಭವನದಲ್ಲಿ ಸೆ. 10ರಂದು ನಡೆದ ಪೂರ್ವಭಾವಿ ಸಭೆಯು ಅಧ್ಯಕ್ಷತೆ ವಹಿಸಿ

ಸೆ.12ರಂದು ಕಡಬದಲ್ಲಿ ಡಿ.ಕೆ.ಶಿ ಬಂಧನದ ವಿರುದ್ಧ ಬೃಹತ್ ಪ್ರತಿಭಟನೆ ➤ತಹಸೀಲ್ದಾರ ಮುಖಾಂತರ ರಾಜ್ಯಪಾಲರಿಗೆ, ರಾಷ್ಟ್ರಪತಿಗಳಿಗೆ ಮನವಿ. Read More »

ಕರಾವಳಿ

ಜೇನುಕೃಷಿ ತರಬೇತಿ ಕಾರ್ಯಕ್ರಮ ➤ ಸಿರಿ ತೋಟಗಾರಿಕೆ ಸಂಘ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10.ಸಿರಿ ತೋಟಗಾರಿಕೆ ಸಂಘದ ವತಿಯಿಂದ ಸೆಪ್ಟೆಂಬರ್ 7 ರಂದು “ಜೇನುಕೃಷಿ” ತರಬೇತಿ ಕಾರ್ಯಕ್ರಮವು ಮಂಗಳೂರಿನ ಕದ್ರಿ ಬಾಲಭವನದಲ್ಲಿ ಜರುಗಿತು. ತರಬೇತಿ ಕಾರ್ಯಕ್ರಮವನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು ಹಾಗೂ ಸಿರಿ ತೋಟಗಾರಿಕೆ ಸಂಘದ ಪದನಿಮಿತ್ತ ಕಾರ್ಯದರ್ಶಿಯವರಾದ ಜಾನಕಿ ವಿ. ದೀಪ ಬೆಳಗಿಸಿ ಉದ್ಘಾಟಿಸಿದರು. ತರಬೇತಿಯನ್ನು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಮಲ್ಲಿಕಾರ್ಜುನ್ ಮತ್ತು ಸಹಾಯಕ ತೋಟಗಾರಿಕೆ ಅಧಿಕಾರಿ ಯುಗೇಂದ್ರ ರವರು ನಡೆಸಿಕೊಟ್ಟರು. ಪ್ರಾಯೋಗಿಕ ತರಬೇತಿಯನ್ನು ಜೇನು ಪ್ರದರ್ಶಕರಾದ ಪ್ರವೀಣ್

ಜೇನುಕೃಷಿ ತರಬೇತಿ ಕಾರ್ಯಕ್ರಮ ➤ ಸಿರಿ ತೋಟಗಾರಿಕೆ ಸಂಘ Read More »

ಕರಾವಳಿ

ರಸ್ತೆ ಅಗಲೀಕರಣ ➤ ಸಾರ್ವಜನಿಕರ ಸಹಕಾರ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10.ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಜೆಪ್ಪು ಫೆರಿ ರಸ್ತೆಯಲ್ಲಿ ನದಿ ಕಿನಾರೆ ಬಳಿಯಿಂದ ಮಂಗಳಾ ಕಾರ್ನಿಷ್ ಪ್ರಸ್ತಾವಿತ ರಸ್ತೆಯಿಂದ ಎಂಫಾಸಿಸ್ ಜಂಕ್ಷನ್‍ವರೆಗೆ 9.0 ಮೀಟರ್ ಅಗಲ ಹಾಗೂ ಜೆಪ್ಪು ಮಾರ್ಕೆಟ್ ಜಂಕ್ಷ್‍ನ್ಎಂ ಇದೆ. ಫಾಸಿಸ್ ಜಂಕ್ಷನ್‍ನಿಂದ ಮುಂದಕ್ಕೆ ಮಂಗಳೂರು ಕ್ಲಬ್‍ವರೆಗೆ ಹಾಲಿ ರಸ್ತೆಯನ್ನು 12.0 ಮೀಟರ್ ಅಗಲೀಕರಣಗೊಳಿಸುವ ಪ್ರಸ್ತಾವನೆ ಇರುವುದರಿಂದ ಸಾರ್ವಜನಿಕರು ಮಹಾನಗರಪಾಲಿಕೆ ಅಭಿವೃದ್ಧಿ ಕಾಮಗಾರಿಗೆ ಸಹಕರಿಸುವಂತೆ ಹಾಗೂ ಸಾರ್ವಜನಿಕರು ಭೂಸ್ವಾಧೀನ/ ಟಿ.ಡಿ.ಆರ್ ಪ್ರಕ್ರಿಯೆ ಬಗ್ಗೆ ಮಹಾನಗರಪಾಲಿಕೆ ನಗರಯೋಜನಾ ವಿಭಾಗವನ್ನು ಸಂಪರ್ಕಿಸಬೇಕು ಎಂದು ಮಂಗಳೂರು

ರಸ್ತೆ ಅಗಲೀಕರಣ ➤ ಸಾರ್ವಜನಿಕರ ಸಹಕಾರ Read More »

ಕರಾವಳಿ

ರಾಷ್ಟ್ರೀಯ ಆಯುಷ್ ಅಭಿಯಾನ ➤ ಆಯುಷ್ ಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10. ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಯು.ಬಿ.ಎಂ.ಸಿ.ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕಪಿಲ ಸಾವಯವ ಕೃಷಿಕರ ಸಂಘ, ಪರಂಡೆ ಕೊಣಾಜೆ ಇವರ ಸಹಕಾರದೊಂದಿಗೆ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಸಪ್ಟೆಂಬರ್ 8 ಯು.ಬಿ.ಯಂ.ಸಿ.ಹಿರಿಯ ಪ್ರಾಥಮಿಕ ಶಾಲೆ, ಪರಂಡೆಯಲ್ಲಿ ಉಚಿತ ಆಯುಷ್ ಚಿಕಿತ್ಸಾ ಶಿಬಿರವು ನಡೆಯಿತು. ಕಲ್ಲಿಮಾರುಗುತ್ತು ಪ್ರಸಾದ್ ರೈ ಇವರು ಆಯುಷ್ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿದರು. ಆಯುಷ್ ಚಿಕಿತ್ಸಾ ವಿಧಾನವು ಪ್ರಾಚೀನ ಚಿಕಿತ್ಸಾ ಪದ್ಧತಿಯಾಗಿದ್ದು, ಜನಸಾಮಾನ್ಯರು ತಮ್ಮ

ರಾಷ್ಟ್ರೀಯ ಆಯುಷ್ ಅಭಿಯಾನ ➤ ಆಯುಷ್ ಚಿಕಿತ್ಸಾ ಶಿಬಿರ Read More »

ಕರಾವಳಿ

ಹಳೆಯಂಗಡಿ ಗ್ರಾಮದ ಜಲಶಕ್ತಿ – ಜಲಾಮೃತ ಅಭಿಯಾನದ ಬಗ್ಗೆ ➤ ವಿಶೇಷ ಗ್ರಾಮ ಸಭೆ, ವಾರ್ಡ್ ಸಭೆ ಹಾಗೂ ಜಮಾಬಂದಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10. ಮಂಗಳೂರು ತಾಲೂಕಿನ ಹಳೆಯಂಗಡಿ ಗ್ರಾಮದ ಜಲಶಕ್ತಿ- ಜಲಾಮೃತ ಅಭಿಯಾನದ ಬಗ್ಗೆ ವಿಶೇಷ ಗ್ರಾಮ ಸಭೆ ಸಪ್ಟೆಂಬರ್ 11 ರಂದು ಬೆಳಿಗ್ಗೆ 11 ಗಂಟೆಗೆ ಹಳೆಯಂಗಡಿ ಗ್ರಾಮ ಪಂಚಾಯತ್ ಕಚೇರಿಯ ರಾಜೀವಗಾಂಧಿ ಸಭಾಭವನದಲ್ಲಿ ನಡೆಯಲಿದೆ.ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳೆಯಂಗಡಿ, ಪಾವಂಜೆ ಮತ್ತು ಸಸಿಹಿತ್ಲು ಗ್ರಾಮಗಳ 2019-20ನೇ ಸಾಲಿನ ಪ್ರಥಮ ಹಂತದ ವಾರ್ಡು ಸಭೆಗಳ ವಿವರ ಇಂತಿವೆ : ಸಸಿಹಿತ್ಲು ವಾರ್ಡು ಸಂಖ್ಯೆ 1 ರ ವಾರ್ಡು ಸಭೆ ಸಪ್ಟೆಂಬರ್ 12 ರಂದು

ಹಳೆಯಂಗಡಿ ಗ್ರಾಮದ ಜಲಶಕ್ತಿ – ಜಲಾಮೃತ ಅಭಿಯಾನದ ಬಗ್ಗೆ ➤ ವಿಶೇಷ ಗ್ರಾಮ ಸಭೆ, ವಾರ್ಡ್ ಸಭೆ ಹಾಗೂ ಜಮಾಬಂದಿ Read More »

ಕರಾವಳಿ

ಸಪ್ಟೆಂಬರ್ 14 ➤ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10. ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮಂಗಳೂರು, ಮಂಗಳೂರು ಮಹಾನಗರಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಯುವಜನ ಒಕ್ಕೂಟ ಹಾಗೂ ಬರ್ಕೆ ಫ್ರೆಂಡ್ಸ್ ಕೊಡೆತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2019-20 ರ ಉದ್ಘಾಟನಾ ಸಮಾರಂಭ ಸಪ್ಟೆಂಬರ್ 14 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳಾ ಕ್ರ್ರೀಡಾಂಗಣದಲ್ಲಿ ನಡೆಯಲಿದೆ. ಮಂಗಳೂರು ದಕ್ಷಿಣ ಶಾಸಕ ಡಿ ವೇದವ್ಯಾಸ್ ಕಾಮತ್ ಸಮಾರಂಭದ ಉದ್ಘಾಟನೆ

ಸಪ್ಟೆಂಬರ್ 14 ➤ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ಸಾರ್ವಜನಿಕರ ಆಕ್ಷೇಪಣೆಗೆ ಅವಕಾಶ ➤ಮಾರುಕಟ್ಟೆ ಮೌಲ್ಯ ನಿಗದಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10. ಕೇಂದ್ರೀಯ ಉಪನೋಂದಣಿ ಕಚೇರಿ, ಮಂಗಳೂರು ನಗರದ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾಪನ ಉಪಸಮಿತಿಯ ಆಗಸ್ಟ್ 31 ರಂದು ನಡೆದ ಸಭೆಯ ನಡವಳಿಯಲ್ಲಿ 2019ನೇ ಸಾಲಿನಲ್ಲಿ ಹೊಸ/ಹಳೆಯ ಬಿಟ್ಟು ಹೋದ ಅಪಾರ್ಟ್‍ಮೆಂಟ್‍ಗಳ ಮಾರುಕಟ್ಟೆ ಮೌಲ್ಯವನ್ನು ನಿಗಧಿ ಪಡಿಸಿ ಸಂಬಂಧಪಟ್ಟ ಕಚೇರಿಯಲ್ಲಿ ಸಾರ್ವಜನಿಕ ಆಕ್ಷೇಪಣೆಗಳಿಗಾಗಿ ಈಗಾಗಲೇ ಪ್ರಕಟಗೊಳಿಸಲಾಗಿದೆ. ಸಾರ್ವಜನಿಕರು ಯಾವುದೇ ಆಕ್ಷೇಪನೆಗಳಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಹದಿನೈದು ದಿವಸದೊಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬೇಕೆಂದು ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಉಪ ನೋಂದಣಾಧಿಕಾರಿ ಸ್ಥಿರ ಸ್ವತ್ತುಗಳ ಮೌಲ್ಯಮಾಪನ ಉಪಸಮಿತಿ

ಸಾರ್ವಜನಿಕರ ಆಕ್ಷೇಪಣೆಗೆ ಅವಕಾಶ ➤ಮಾರುಕಟ್ಟೆ ಮೌಲ್ಯ ನಿಗದಿ Read More »

ಕರಾವಳಿ

ವಿದ್ಯಾರ್ಥಿ ಸಂಘ ಉದ್ಘಾಟನೆ ➤ ವಿದ್ಯಾರ್ಥಿಗಳು ಇತಿಹಾಸ ಸೃಷ್ಟಿಸುವವರಾಗಬೇಕು : ರವಿಕುಮಾರ್ ಎನ್

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10. ವಿದ್ಯಾರ್ಥಿಗಳು ಇತಿಹಾಸವನ್ನು ಓದಿದವರು ಮಾತ್ರರಾಗಬಾರದು, ಬದಲಾಗಿ ಇತಿಹಾಸ ಸೃಷ್ಟಿಸುವವರಾಗಬೇಕು. ಉತ್ತಮ ಗುಣಮಟ್ಟದ ಶಿಕ್ಷಣವು ಸಮಾಜದ ಗುಣಮಟ್ಟದ ಹೆಚ್ಚಳಕ್ಕೆ ಕಾರಣವಾಗಿರುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಎನ್ ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶನಿವಾರ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದ ಬಡತನದಿಂದ ಸಮಾಜ ಸೊರಗುತ್ತಿದೆ. ಸಾಮಥ್ರ್ಯ ವೃದ್ಧಿ, ಇಚ್ಛಾಶಕ್ತಿ, ಅವಕಾಶ ನಮ್ಮ ಮೂಲಮಂತ್ರವಾಗಬೇಕು. ವಿದ್ಯಾರ್ಥಿಗಳು ಸೋಲಿನಿಂದ ಎದೆಗುಂದಬಾರದು. ಸಮಸ್ಯೆಗಳನ್ನು ವೈಭವೀಕರಿಸದೆ ಪರಿಹಾರದ ಕಡೆ ಗಮನಹರಿಸಬೇಕು

ವಿದ್ಯಾರ್ಥಿ ಸಂಘ ಉದ್ಘಾಟನೆ ➤ ವಿದ್ಯಾರ್ಥಿಗಳು ಇತಿಹಾಸ ಸೃಷ್ಟಿಸುವವರಾಗಬೇಕು : ರವಿಕುಮಾರ್ ಎನ್ Read More »

ಕರಾವಳಿ
Scroll to Top