ಕಡಬ ನ್ಯೂಸ್

ಶ್ರೀನಿವಾಸ್ ವಿಶ್ವವಿದ್ಯಾಲಯ ➤ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.5.ಶ್ರೀನಿವಾಸ್ ವಿಶ್ವವಿದ್ಯಾಲಯದ ಪಾಂಡೇಶ್ವರ ಸಿಟಿ ಕ್ಯಾಂಪಸ್‍ನಲ್ಲಿ 2019-20ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ವಿಭಾಗದಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ. ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್‍ಕಾರ್ಯಕ್ರಮವನ್ನುಕಾಲೇಜಿನಗ್ಯಾಲರಿ ಹಾಲ್‍ನಲ್ಲಿಆಯೋಜಿಸಲಾಯಿತು. ಕಾರ್ಯಕ್ರಮವನ್ನುಶ್ರೀನಿವಾಸ್ ವಿಶ್ವವಿದ್ಯಾಲಯದಕುಲಾಧಿಪತಿ ಸಿ.ಎ. ಎ. ರಾಘವೇಂದ್ರರಾವ್‍ರವರು ಉದ್ಘಾಟಿಸಿ, ಕ್ಯಾಂಪಸ್‍ನಲ್ಲಿದೊರಕುವ ಸವಲತ್ತುಗಳನ್ನು ವಿದ್ಯಾರ್ಥಿಗಳು ಉತ್ತಮರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು ಎಂದರು.ಶ್ರೀನಿವಾಸ್ ವಿಶ್ವವಿದ್ಯಾಲಯದ ಸಹಕುಲಾಧಿಪತಿಡಾ.ಎ. ಶ್ರೀನಿವಾಸ್‍ರಾವ್‍ರವರು ಶ್ರೀನಿವಾಸ್ ವಿಶ್ವವಿದ್ಯಾಲಯದಕಾಲೇಜಿನ ವಿಶೇಷತೆಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಕುಲಪತಿಡಾ. ಪಿ. ಎಸ್. ಐತಾಳ್ ವಿದ್ಯಾರ್ಥಿಗಳನ್ನು ಪ್ರೇರೇಪಿಸಿ ಮಾತನಾಡಿದರು.ಗೌರವಅತಿಥಿಯಾಗಿ ಸೋಲರೈಸರ್ ಬಿಸ್‍ನ ಸಿ.ಇ.ಓ. ಅಜಿತ್‍ಕುಮಾರ್ ಆಗಮಿಸಿದ್ದರು.ಈ ವೇಳೆ ಸಿ.ಸಿ.ಐ.ಎಸ್. ನ ಡೀನ್ […]

ಶ್ರೀನಿವಾಸ್ ವಿಶ್ವವಿದ್ಯಾಲಯ ➤ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ಕಾರ್ಯಕ್ರಮ Read More »

ಕರಾವಳಿ

2019-20ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ➤ಇದರವತಿಯಿಂದ ವಿದ್ಯಾಸಿರಿ ಸಹಾಯಧನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.5.2019-20ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ(ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಭೌಧ್ದ ಮತ್ತು ಪಾರ್ಸಿ) ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ದೊರಕದೆ ಇರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯಧನ ಒದಗಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿದ್ದು ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಠ 5

2019-20ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ➤ಇದರವತಿಯಿಂದ ವಿದ್ಯಾಸಿರಿ ಸಹಾಯಧನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಆಹ್ವಾನ Read More »

ಕರಾವಳಿ

ಕರ್ನಾಟಕ ಋಣ ಪರಿಹಾರ ವಿಧೇಯಕ – 2018 ➤ ಸಾಲ ಮನ್ನಾಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.5.ಕರ್ನಾಟಕ ಋಣ ಪರಿಹಾರ ವಿಧೇಯಕ – 2018 ಜುಲೈ 23 ರಿಂದ ಜಾರಿಗೆ ಬಂದಿರುತ್ತದೆ. ಅದರಂತೆ ಸಣ್ಣ ರೈತರು, ಭೂರಹಿತ ಕೃಷಿ ಕಾರ್ಮಿಕರು, ಮತ್ತು ದುರ್ಬಲ ವರ್ಗದ ಜನರು (ವಾರ್ಷಿಕ ಆದಾಯ ರೂ.1.20.000/- ಗಳ ಮೀರದಿರುವ) ಖಾಸಗಿ ಲೇವಾದೇವಿಗಾರರು ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಕಾಯ್ದೆಯ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ. ಕರ್ನಾಟಕ ಋಣ ಪರಿಹಾರ ಕಾಯ್ದೆಯು ಸಾಲಗಾರನೇ ಬಿಟ್ಟುಕೊಟ್ಟ ಕೃಷಿ ಭೂಮಿಯ ಸ್ವತ್ತಿನಿಂದ ಬಾಕಿ ಇರುವ ಬಾಡಿಗೆ, ಭೂಕಂದಾಯದ ಹಿಂಬಾಕಿ ವಸೂಲಿ,

ಕರ್ನಾಟಕ ಋಣ ಪರಿಹಾರ ವಿಧೇಯಕ – 2018 ➤ ಸಾಲ ಮನ್ನಾಗೆ ಅರ್ಜಿ ಆಹ್ವಾನ Read More »

ಕರಾವಳಿ

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು ➤ ಫೀಲ್ಡ್ ಸರ್ವಿಸ್ ಇಂಜಿನಿಯರ್ ಹುದ್ದೆಗೆ ನೇರ ನೇಮಕಾತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.5.ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು, ಮಹಾನಗರಪಾಲಿಕೆ ಕಟ್ಟಡ, ಲಾಲ್‍ಬಾಗ್, ಇಲ್ಲಿ ಪೇಟಿಯಂ ಹಾಗೂ ಸೋನಿ ಕಂಪೆನಿ ವತಿಯಿಂದ ಫೀಲ್ಡ್ ಸರ್ವಿಸ್ ಇಂಜಿನಿಯರ್ ಹುದ್ದೆಗೆ (ವೇತನ–20,000) ನೇರ ನೇಮಕಾತಿಯು ಸಪ್ಟೆಂಬರ್ 7 ರಂದು ಬೆಳಿಗ್ಗೆ 10 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ನಡೆಯಲಿದೆ. ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಪದವಿ ವಿದ್ಯಾರ್ಹತೆಯೊಂದಿಗೆ ಡ್ರೈವಿಂಗ್ ಲೈಸೆನ್ಸ್ ಹೊಂದಿರುವ ಅಭ್ಯರ್ಥಿಗಳು ಹಾಗೂ ಎಂ.ಬಿ.ಎ. ಇಂಟರ್‍ನ್‍ಶಿಪ್ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ,

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು ➤ ಫೀಲ್ಡ್ ಸರ್ವಿಸ್ ಇಂಜಿನಿಯರ್ ಹುದ್ದೆಗೆ ನೇರ ನೇಮಕಾತಿ Read More »

ಕರಾವಳಿ

ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ➤ 2019-20 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.5.ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ 2019-20 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 6 ರಂದು ಬೆಳಿಗ್ಗೆ 10.30 ಗಂಟೆಗೆ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಎನ್. ನೆರವೇರಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ➤ 2019-20 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ Read More »

ಕರಾವಳಿ

ದ. ಕ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ➤ ಜಿಲ್ಲಾ ಮಟ್ಟದ ಹಾಗೂ ವಲಯ ಮಟ್ಟದ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.5.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮತ್ತು ಮಂಗಳೂರು ದಕ್ಷಿಣ ವಲಯ ಶಿಕ್ಷಕರ ದಿನಾಚರಣಾ ಸಮಿತಿ ಕರ್ನಾಟಕ ರಾಜ್ಯ ಕಲ್ಯಾಣ ನಿಧಿ ಹಾಗೂ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಇವರ ಸಹಯೋಗದಲ್ಲಿ ಇಂದು ಶಿಕ್ಷಕರದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ-2019 ಕಾರ್ಯಕ್ರಮ ಇಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ. ಮೀನುಗಾರಿಕೆ ಹಾಗೂ ಬಂದರು ಖಾತೆ ಸಚಿವ

ದ. ಕ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ➤ ಜಿಲ್ಲಾ ಮಟ್ಟದ ಹಾಗೂ ವಲಯ ಮಟ್ಟದ ಶಿಕ್ಷಕರ ದಿನಾಚರಣೆ Read More »

ಕರಾವಳಿ

ಜಿಲ್ಲಾ ಮಟ್ಟದ ಗುಂಡೆಸೆತ ➤ ಮೇಘಾ ಮತ್ತಾಯಿ ದ್ವಿತೀಯ ಹಾಗೂ ದಕ್ಷಿಣ ಭಾರತ ಮಟ್ಟಕ್ಕೆ (ಸೌತ್ ಝೋನ್) ಆಯ್ಕೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸಪ್ಟೆಂಬರ್.4.ಉಡುಪಿ ಜಿಲ್ಲಾ ಅಮೆಚ್ಯೂರ್ ಅತ್ಲೆಟಿಕ್ ಅಸೋಸಿಯೇಶನ್ ವತಿಯಿಂದ ಜಿಲ್ಲಾ ಮಟ್ಟದ ಗುಂಡೆಸೆತ ಸ್ಪರ್ಧೆ ಏರ್ಪಡಿಸಲಾಯಿತು. ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲ್ಪಟ್ಟ ಗುಂಡೆಸತ  ಸ್ಪರ್ಧೆಯಲ್ಲಿ  ಜ್ಞಾನೋದಯ ಬೆಥನಿ ಪಿಯು ಕಾಲೇಜಿನ ಮೇಘಾ ಮತ್ತಾಯಿ ದ್ವಿತೀಯ ಸ್ಥಾನ ಪಡೆದು (ಸೌತ್ ಝೋನ್) ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಜಿಲ್ಲಾ ಮಟ್ಟದ ಗುಂಡೆಸೆತ ➤ ಮೇಘಾ ಮತ್ತಾಯಿ ದ್ವಿತೀಯ ಹಾಗೂ ದಕ್ಷಿಣ ಭಾರತ ಮಟ್ಟಕ್ಕೆ (ಸೌತ್ ಝೋನ್) ಆಯ್ಕೆ Read More »

ಕರಾವಳಿ

ಶಕ್ತಿ ಶಿಕ್ಷಣ ಸಂಸ್ಥೆಯಿಂದಗುರುವಂದನೆ ➤ 2019 ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.4.ಶಕ್ತಿನಗರದ ಶಕ್ತಿ ಎಜ್ಯುಕೇಶನ್‍ಟ್ರಸ್ಟ್‍ನ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪದವಿ ಪೂರ್ವಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಶಕ್ತಿ ರೆಸಿಡೆನ್ಶಿಯಲ್ ಶಾಲಾ ಆಡಿಟೋರಿಯಂನಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಸೆಪ್ಟೆಂಬರ್ 5ರಂದು ಮಧ್ಯಾಹ್ನ 1:30ಕ್ಕೆ ಗುರುವಂದನೆ– 2019 ಕಾರ್ಯಕ್ರಮವನ್ನುಆಯೋಜಿಸಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ಶಿಕ್ಷಣ ಕ್ಲೇತ್ರದಲ್ಲಿಗಣನೀಯವಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿ ಸಮಾಜ ಸೇವೆಯಲ್ಲಿತೊಡಗಿರುವ 5 ಜನ ಶಿಕ್ಷಕರಿಗೆ ಸನ್ಮಾನಕಾರ್ಯಕ್ರಮವನ್ನುಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಶ್ರೀಮತಿ ವಿಮಲ ಬಾಯಿ,

ಶಕ್ತಿ ಶಿಕ್ಷಣ ಸಂಸ್ಥೆಯಿಂದಗುರುವಂದನೆ ➤ 2019 ಕಾರ್ಯಕ್ರಮ Read More »

ಕರಾವಳಿ

ರೆಂಜಿಲಾಡಿ 23ನೇ ವರ್ಷದ ಶ್ರೀ ಗಣೇಶೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಸಪ್ಟೆಂಬರ್.4.ರೆಂಜಿಲಾಡಿ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಗೋಳಿಯಡ್ಕ ಶ್ರೀ ಅಯ್ಯಪ್ಪ ಧರ್ಮಶಿಖರದಲ್ಲಿ ಸೆ. 2ರಂದು 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಿತು. ಅಜೇಯ ಹೆಬ್ಬಾರ್ ಸುಲ್ಕೇರಿಯವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಪ್ರಭಾತ, ಗಣಹೋಮ ನಡೆದು ಶ್ರೀ ಮಹಾಗಣಪತಿ ವಿಗ್ರಹದ ಪ್ರತಿಷ್ಠೆ, ನಡೆಯಿತು. ಬಳಿಕ ಅಪ್ಪೆಜಕ್ಕೆಲ್ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಹಾಗೂ ನೂಜಿಬೈಲ್ ಶ್ರೀ ಧರ್ಮಛಾವಡಿ ಭಜನಾ ಕೂಟದಿಂದ ಭಜನಾ ಕಾರ್ಯಕ್ರಮ ನಡೆಯಿತು. ಮದ್ಯಾಹ್ನ ಮಹಾಪೂಜೆ ನಡೆದು ಪ್ರಸಾದ ವಿತರಣೆ ನಡೆಯಿತು.

ರೆಂಜಿಲಾಡಿ 23ನೇ ವರ್ಷದ ಶ್ರೀ ಗಣೇಶೋತ್ಸವ Read More »

ಕರಾವಳಿ

ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ➤ ಜ್ಞಾನೋದಯ ಬೆಥನಿ ದ್ವಿತೀಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ , ಸಪ್ಟೆಂಬರ್.4.ಅಲೋಶಿಯಸ್ ಕಾಲೇಜು ಮಂಗಳೂರಿನಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಹುಡುಗರ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಜ್ಞಾನೋದಯ ಬೆಥನಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ. ದೀಪು, ದಿಶಾಂತ್, ಶೆರ್ವಿನ್ ಶಾಜಿ, ಲಿಬಿನ್, ಅಭಿಜಿತ್,ಮ್ಯಾಥ್ಯೂ, ಅರ್ಷದ್, ಹರ್ಷಿತ್, ಆಯುಷ್, ಜಿತಿನ್ ಹಾಗೂ ಆಲ್ವಿನ್ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು. ಇವರಲ್ಲಿ ದೀಪು, ದಿಶಾಂತ್, ಶೆರ್ವಿನ್ ಶಾಜಿ, ಲಿಬಿನ್ ಹಾಗೂ ಅಭಿಜಿತ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಸಂಸ್ಥೆಯ ಪ್ರಾಂಶುಪಾಲರಾದ

ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ➤ ಜ್ಞಾನೋದಯ ಬೆಥನಿ ದ್ವಿತೀಯ Read More »

ಕರಾವಳಿ
Scroll to Top