ಕಡಬ ನ್ಯೂಸ್

ಇಂದು ಸದ್ಭಾವನಾ ದಿನ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.ಎಲ್ಲಾ ಧರ್ಮ, ಭಾಷೆ ಹಾಗೂ ರಾಜ್ಯಗಳ ಸೌಹಾರ್ದತೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡಲು ಕೇಂದ್ರ ಸರ್ಕಾರದ ಆದೇಶದಂತೆ ಪ್ರತಿ ವರ್ಷ ಆಗಸ್ಟ್ 20 ರಂದು ಅಂದರೆ ಇಂದು “ಸದ್ಭಾವನಾ ದಿನ” ಆಚರಿಸಲಾಗುತ್ತದೆ. ಆದುದರಿಂದ ಈ ಬಾರಿಯು  ಸದ್ಭಾವನಾ ದಿನವನ್ನು ಆಚರಿಸಲು ಭಾರತ ಸ್ಕೌಟ್ಸ್ ಆಂಡ್ ಗೈಡ್ಸ್ ಮತ್ತು ಯೂತ್ ಅಸೋಸಿಯೇಷನ್ ಸಹಕಾರದೊಂದಿಗೆ ರಾಜ್ಯದ ವಿಭಾಗ, ಜಿಲ್ಲಾ ಹಾಗೂ ತಾಲೂಕು ಮಟ್ಟಗಳಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಿ ಸದ್ಭಾವನಾ ದಿನವನ್ನು ಆಚರಿಸುವುದರೊಂದಿಗೆ ಪ್ರತಿಜ್ಞೆಯನ್ನು ಸ್ವೀಕರಿಸಲು ಜಿಲ್ಲಾಧಿಕಾರಿಗಳ […]

ಇಂದು ಸದ್ಭಾವನಾ ದಿನ ಆಚರಣೆ Read More »

ಕರಾವಳಿ

ನೆರೆಯಿಂದ ಮನೆ ಹಾನಿಯಾದ ಸಿಬ್ಬಂದಿಗೆ ಸಹಾಯ ಹಸ್ತ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಗೃಹರಕ್ಷಕದಳ ಬೆಳ್ತಂಗಡಿ ಘಟಕದ ಗೃಹರಕ್ಷಕದಳ ಸಿಬ್ಬಂದಿ ಧರ್ಮಸ್ಥಳ ಠಾಣೆಯಲ್ಲಿ ಗೃಹರಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಾಕ್ಷ ಎಂಬವರು ಹೊಸದಾಗಿ ನಿರ್ಮಿಸಿರುವ ಮನೆ ಭಾರೀ ಮಳೆಯಿಂದಾಗಿ ನೆರೆ ಬಂದ ಹಿನ್ನೆಲೆಯಲ್ಲಿ ಭಾಗಶ: ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಆಗಸ್ಟ್ 8 ರಂದು ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಠರಾದ ಡಾ. ಮುರಲೀ ಮೋಹನ್ ಚೂಂತಾರು ಹಾಗೂ ಉಪ ಸಮಾದೇಷ್ಠರಾದ ರಮೇಶ್ ರವರು ಭೇಟಿ ನೀಡಿ ಜಿಲ್ಲಾ ಕಚೇರಿಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ

ನೆರೆಯಿಂದ ಮನೆ ಹಾನಿಯಾದ ಸಿಬ್ಬಂದಿಗೆ ಸಹಾಯ ಹಸ್ತ Read More »

ಕರಾವಳಿ

2019-20ನೇ ಸಾಲಿನ ದ. ಕ ಜಿಲ್ಲೆಯಲ್ಲಿರುವ ಪಡೀಲು ತೋಟಗಾರಿಕೆ ಕ್ಷೇತ್ರ ಮಂಗಳೂರು ಮತ್ತು ಕಚೇರಿ ನರ್ಸರಿ ಬೆಳ್ತಂಗಡಿ➤ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.2019-20ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪಡೀಲು ತೋಟಗಾರಿಕೆ ಕ್ಷೇತ್ರ ಮಂಗಳೂರು ಮತ್ತು ಕಚೇರಿ ನರ್ಸರಿ ಬೆಳ್ತಂಗಡಿಯಲ್ಲಿ ಶೇಡ್‍ನೆಟ್ ಮನೆ ನಿರ್ಮಿಸಲು ದ್ವಿಲಕೋಟೆ ಪದ್ದತಿಯಲ್ಲಿ ಟೆಂಡರನ್ನು ಆಹ್ವಾನಿಸಲಾಗಿದೆ. ಸಪ್ಟೆಂಬರ್ 17 ಟೆಂಡರ್ ಸಲ್ಲಿಸಲು ಕೊನೆಯ ದಿನ. ಆಸಕ್ತರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ರಾಜ್ಯವಲಯ, ಬೆಂದೂರು ಕ್ರಾಸ್, ಮಂಗಳೂರು ಇಲ್ಲಿ ಸಂಪರ್ಕಿಸಬೇಕು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8277806372, 9663247367 ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು

2019-20ನೇ ಸಾಲಿನ ದ. ಕ ಜಿಲ್ಲೆಯಲ್ಲಿರುವ ಪಡೀಲು ತೋಟಗಾರಿಕೆ ಕ್ಷೇತ್ರ ಮಂಗಳೂರು ಮತ್ತು ಕಚೇರಿ ನರ್ಸರಿ ಬೆಳ್ತಂಗಡಿ➤ಟೆಂಡರ್ ಆಹ್ವಾನ Read More »

ಕರಾವಳಿ

ಸಮಾಜ ಕಲ್ಯಾಣ ಇಲಾಖಾ ವತಿಯಿಂದ ➤ ಹಾಸ್ಟೆಲ್ ಗೆ ಬಾಡಿಗೆ ಕಟ್ಟಡ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಹಾಸ್ಟೆಲ್ ಗೆ ಬಾಡಿಗೆ ಕಟ್ಟಡ ನೀಡಲು ಇಚ್ಛಿಸುವರಿಂದ ಅರ್ಜಿ ಆಹ್ವಾನಿಸಲಾಗಿದೆ. ನಡೆಸಲ್ಪಡುತ್ತಿರುವ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿ ನಿಲಯ ಕೊಡಿಯಾಲ್‍ಬೈಲ್ ( 125 ವಿದ್ಯಾರ್ಥಿಗಳ ಸಾಮಥ್ರ್ಯ) ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿ ನಿಲಯ ಕೊಡಿಯಾಲ್‍ಬೈಲ್ ಮಂಗಳೂರು ( 119 ವಿದ್ಯಾರ್ಥಿಗಳ ಸಾಮಥ್ರ್ಯ) ಇವುಗಳನ್ನು ನಡೆಸಲು ಮಂಗಳೂರು ನಗರ ವ್ಯಾಪ್ತಿಯೊಳಗೆ ಬಾಡಿಗೆಗೆ ಕಟ್ಟಡ ಬೇಕಾಗಿರುತ್ತದೆ. ಕಟ್ಟಡವನ್ನು ಬಾಡಿಗೆಗೆ ನೀಡಲು ಇಚ್ಛಿಸುವವರು ಸಹಾಯಕ ನಿರ್ದೇಶಕರು ಗ್ರೇಡ್-1 ಸಮಾಜ

ಸಮಾಜ ಕಲ್ಯಾಣ ಇಲಾಖಾ ವತಿಯಿಂದ ➤ ಹಾಸ್ಟೆಲ್ ಗೆ ಬಾಡಿಗೆ ಕಟ್ಟಡ ಆಹ್ವಾನ Read More »

ಕರಾವಳಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ➤ 6 ತಿಂಗಳ ತರಬೇತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ 2019-20ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಆರು ತಿಂಗಳ ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕಲಾಸಕ್ತರಿಗೆ ಗುರುಶಿಷ್ಯ ಪರಂಪರೆ ಯೋಜನೆಯಡಿ ಸುಗಮ ಸಂಗೀತ, ಶಾಸ್ತ್ರೀಯ ಸಂಗೀತ ಮತ್ತು ನೃತ್ಯ ಹಾಗೂ ಜಾನಪದ ಕಲಾಪ್ರಕಾರಗಳಲ್ಲಿ  ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಗಿದೆ.ಈ ಶಿಬಿರದಲ್ಲಿ ವಿಶೇಷ ಘಟಕ ಯೋಜನೆಯಡಿ 20 ಜನ ಹಾಗೂ ಗಿರಿಜನ ಉಪಯೋಜನೆಯಡಿ 08

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ➤ 6 ತಿಂಗಳ ತರಬೇತಿ ಕಾರ್ಯಗಾರ Read More »

ಕರಾವಳಿ

ಬರ ಪೀಡಿತ ತಾಲ್ಲೂಕುಗಳಲ್ಲಿ ಗೋಶಾಲೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಪುತ್ತೂರು ಮತ್ತು ಸುಳ್ಯ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಲಾಗಿದೆ. ಈ ಬರಪೀಡಿತ ತಾಲ್ಲೂಕುಗಳಲ್ಲಿ ಗೋಶಾಲೆ ತೆರೆಯುವಂತೆ ಮಾನ್ಯ ಉಚ್ಚ ನ್ಯಾಯಾಲಯ, ಕರ್ನಾಟಕ ಆದೇಶಿಸಿರುತ್ತದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲ್ಲೂಕುಗಳಲ್ಲಿ ಪ್ರತಿ ತಾಲ್ಲೂಕಿಗೆ ಒಂದರಂತೆ ಗೋಶಾಲೆಯನ್ನು ತೆರೆಯಲಾಗಿರುತ್ತದೆ. ಈ ಗೋಶಾಲೆಗಳಿಗೆ ಬರುವಂತಹ ಜಾನುವಾರುಗಳಿಗೆ ಪ್ರತಿ ದಿನ 5 ಕೆ.ಜಿ ಒಣ ಮೇವು ಅಥವಾ 18 ಕೆ.ಜಿ ಹಸಿರು ಮೇವು ಮತ್ತು

ಬರ ಪೀಡಿತ ತಾಲ್ಲೂಕುಗಳಲ್ಲಿ ಗೋಶಾಲೆ ಆರಂಭ Read More »

ಕರಾವಳಿ

ಭಾರತ ಸಂವಿಧಾನ ಅನುಚ್ಛೇಧ 275(1)ರಡಿ & ವಿಶೇಷ ಕೇಂದ್ರೀಯ ನೆರವಿನಡಿ ➤ ವಿವಿಧ ರೀತಿಯ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.2018-19ನೇ ಸಾಲಿನಲ್ಲಿ ಭಾರತ ಸಂವಿಧಾನ ಅನುಚ್ಛೇಧ 275(1)ರಡಿ ಹಾಗೂ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡವರ ಅಭಿವೃದ್ಧಿ ಕಾರ್ಯಕ್ರಮಗಳಡಿ ಫಲಾನುಭವಿ ಆಧಾರಿತ ಕಾರ್ಯಕ್ರಮಗಳಾದ ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ/ಮೇಕೆ ಘಟಕ, ಸರಕು ಸಾಗಾಣಿಕೆ ವಾಹನ, ಹಂದಿ ಸಾಕಾಣಿಕೆ ಸೌಲಭ್ಯ ಪಡೆಯಲು ಷರತ್ತಿಗೊಳಪಟ್ಟು ಆಸಕ್ತ ಅರ್ಜಿದಾರರಿಂದ ನಿಗಧಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ ಮೂಲನಿವಾಸಿ ಮತ್ತು ಅರಣ್ಯ ಅವಲಂಭಿತ ಪರಿಶಿಷ್ಟ ವರ್ಗದವರು ನಿಗಧಿತ ನಮೂನೆಯ ಅರ್ಜಿಯನ್ನು ಸಹಾಯಕ ನಿರ್ದೇಶಕರು, (ಗ್ರೇಡ್-1) ಸಮಾಜ

ಭಾರತ ಸಂವಿಧಾನ ಅನುಚ್ಛೇಧ 275(1)ರಡಿ & ವಿಶೇಷ ಕೇಂದ್ರೀಯ ನೆರವಿನಡಿ ➤ ವಿವಿಧ ರೀತಿಯ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ವ್ಯಕ್ತಿ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.20.ಬಾಲ್ತಿಲ ಗ್ರಾಮ, ಕಡಬ ತಾಲೂಕಿನ ನಿವಾಸಿ, ಸದಾಶಿವ (ಪ್ರಾಯ 28 ವರ್ಷ) ಎಂಬವರು ಮಂಗಳೂರಿನ ಕಂಕನಾಡಿ ರೈಲ್ವೇ ಸ್ಟೇಷನ್‍ನಲ್ಲಿ ವಾಟರಿಷ್ಟ್ ಆಗಿ ಕೆಲಸ ನಿರ್ವಹಿಸುತ್ತಿದ್ದು ಆಗಸ್ಟ್ 16 ರಂದು ರಾತ್ರಿ 9.30 ಗಂಟೆಗೆ ತನ್ನ ರೂಮಿನಿಂದ ಕೆಲಸಕ್ಕೆಂದು ತೆರಳಿ, ಕರ್ತವ್ಯಕ್ಕೂ ಹೋಗದೇ ಕಾಣೆಯಾಗಿರುತ್ತಾರೆ ಎಂದು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ಚಹರೆ ಇಂತಿವೆ: ಎತ್ತರ 5.11 ಇಂಚು, ಗೋದಿ ಮೈ ಬಣ್ಣ, ಸಾಧಾರಣ ಮೈಕಟ್ಟು, ಸಾಧಾರಣ ಮೀಸೆ

ವ್ಯಕ್ತಿ ಕಾಣೆಯಾಗಿದ್ದಾರೆ Read More »

ಕರಾವಳಿ

ಸರ್ಕಾರಿ ಮಹಿಳಾ ಕೈಗಾರಿಕಾ ಸಂಸ್ಥೆ ➤ ಕೈಗಾರಿಕಾ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.ಸರ್ಕಾರಿ ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ಐ.ಎಂ.ಸಿ (Management) ಕೋಟಾದಡಿಯಲ್ಲಿ ವೃತ್ತಿಗಳಲ್ಲಿ ತರಬೇತಿ ಪಡೆಯಲು ಸ್ಥಾನಗಳು ಖಾಲಿ ಇದ್ದು, ಈ ಖಾಲಿ ಸ್ಥಾನಗಳನ್ನು ಭರ್ತಿಗೊಳಿಸಲು ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸದೆ ಇರುವ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಪ್ರವೇಶ ಬಯಸಿದಲ್ಲಿ ತಕ್ಷಣ ಸಂಸ್ಥೆಗೆ ಹಾಜರಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆದುಕೊಳ್ಳಹುದು. ಸರ್ಕಾರಿ ಮಹಿಳಾ ಐ.ಟಿ.ಐ ಕದ್ರಿ ಹಿಲ್ಸ್ ಮಂಗಳೂರು ಇಲ್ಲಿ ಐ.ಎಂ.ಸಿ(Management) ಖೋಟಾದಡಿಯಲ್ಲಿ ಲಭ್ಯವಿರುವ ವೃತ್ತಿಗಳ ವಿವರ ಇಂತಿವೆ:ಸಿ.ಒ.ಪಿ.ಎ

ಸರ್ಕಾರಿ ಮಹಿಳಾ ಕೈಗಾರಿಕಾ ಸಂಸ್ಥೆ ➤ ಕೈಗಾರಿಕಾ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಬೀಟ್ ಪೊಲೀಸರಿಂದ ಕಾಲೋನಿಯಲ್ಲಿ ಸಭೆ ➤ ಕುಡಿತದ ಚಟದಿಂದ ದೂರವಿರಿ – ಕೆ. ಚಿನ್ನಪ್ಪ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.19.  ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ದೋಂತಿಲಡ್ಕ ಬಾಬು ರವರ ಮನೆಯಲ್ಲಿ ನೂಜಿಬಾಳ್ತಿಲ ಬೀಟ್ ಪೋಲಿಸರ ಸಭೆ ಆದಿತ್ಯವಾರ ನಡೆಯಿತು. ಕಡಬ ಪೊಲೀಸ್ ಠಾಣಾ ಹೆಡ್‍ಕಾನ್ಸ್‍ಸ್ಟೇಬಲ್, ನೂಜಿಬಾಳ್ತಿಲ ಬೀಟ್ ಅಧಿಕಾರಿ ಕೆ. ಚಿನ್ನಪ್ಪರವರು ಅಧ್ಯಕ್ಷತೆ ವಹಿಸಿ ಮಾತನಾಡಿ, ನಿಮ್ಮ ಯಾವುದೇ ಸಮಸ್ಯೆಗಳಿದ್ದಲ್ಲಿ ತಕ್ಷಣ ನನಗೆ ಅಥವಾ ದಲಿತ ಮುಖಂಡರಿಗೆ ತಿಳಿಸಿದಲ್ಲಿ ಕ್ರಮಕೈಗೊಳ್ಳಲಾಗುವುದು, ಮಧ್ಯಪಾನದಿಂದ ದೂರವಿರುವಂತೆ ಸಲಹೆ ನೀಡಿದ ಅವರು, ಕುಡಿತದ ಚಟದಿಂದ ಮನೆಯ ನೆಮ್ಮದಿ ಕೆಡುವುದರೊಂದಿಗೆ, ತಮ್ಮ ಮಕ್ಕಳ ಭವಿಷ್ಯಕ್ಕೆ ಹೊಡೆತ ಬೀಳಲಿದೆ

ಬೀಟ್ ಪೊಲೀಸರಿಂದ ಕಾಲೋನಿಯಲ್ಲಿ ಸಭೆ ➤ ಕುಡಿತದ ಚಟದಿಂದ ದೂರವಿರಿ – ಕೆ. ಚಿನ್ನಪ್ಪ Read More »

ಕರಾವಳಿ
Scroll to Top