ಕಡಬ ನ್ಯೂಸ್

ಅಬ್ಬರಿಸಿದ ಆಷಾಡ ಮಳೆ ➤ ದುಮ್ಮಿಕ್ಕಿ ಹರಿಯುತ್ತಿರುವ ಕುಮಾರಧಾರ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.7.ಕಡಬ ಭಾಗದಲ್ಲಿ ಮಳೆಗಾಲ ಪ್ರಾರಂಭವಾಗಿದ್ದರೂ ಕಳೆದ ಭಾನುವಾರ ತನಕ ಮಳೆಯ ಆರ್ಭಟ ಕಂಡು ಬಂದಿರಲಿಲ್ಲ, ಆದರೆ ಭಾನುವಾರ ರಾತ್ರಿಯಿಂದ ಆಷಾಡ ಮಳೆ ಅಬ್ಬರಿಸುತ್ತಿದ್ದು, ಹಳ್ಳಕೊಳ್ಳ ತುಂಬಿ ಹರಿಯುತ್ತಿದೆ, ಜೀವನದಿ ಕುಮಾರಧಾರ ಸೋಮವಾರ ದುಮ್ಮಿಕ್ಕಿ ಹರಿಯಲಾರಂಭಿಸಿದೆ. ಕಡಬ, ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕಿನಲ್ಲಿ ಜುಲೈ ತಿಂಗಳ ಅಂತ್ಯದವರೆಗೂ ನಿರೀಕ್ಷಿತ ಮಳೆಯಾಗಿರಲಿಲ್ಲ. ಈ ವರ್ಷ ಮಳೆಯ ಪ್ರಮಾಣ ತುಂಬಾ ಕಡಿಮೆ ಎಂದೇ ಹೇಳಲಾಗುತ್ತಿತ್ತು. ಇದಕ್ಕೆ ಪೂರಕವೆಂಬಂತೆ ಸರಿಸುಮಾರು ಅರ್ಧ ಮಳೆಗಾಲ ಕಳೆದರೂ ನದಿ, ಹೊಳೆ, […]

ಅಬ್ಬರಿಸಿದ ಆಷಾಡ ಮಳೆ ➤ ದುಮ್ಮಿಕ್ಕಿ ಹರಿಯುತ್ತಿರುವ ಕುಮಾರಧಾರ Read More »

ಕರಾವಳಿ

“ಭಟ್ ಎಸೋಸಿಯೇಟ್ಸ್ ಸಂಸ್ಥೆಯ ಉದ್ಘಾಟನೆ”

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ಗೃಹ ನಿರ್ಮಾಣ, ಅಡಮಾನ ಸಾಲ (Mortgag Loan) ಉದ್ದಿಮೆ ಸಾಲ ಹಾಗೂ ಇತರ ಸಾಲ ಸೌಲಭ್ಯಕ್ಕಾಗಿ ಬೇಕಾಗುವ ಪ್ರಾಜೇಕ್ಟ್ ರಿಪೋರ್ಟ್ ಇತ್ಯಾದಿ ಸೇವೆಗಳನ್ನು ಒದಗಿಸುವ ಸಲುವಾಗಿ ನಿವೃತ್ತ ಕೆನರಾ ಬ್ಯಾಂಕ್ ಅಧಿಕಾರಿ ಶ್ರೀ ಎ.ಎಸ್ ಭಟ್ ಅವರು “ಭಟ್ ಎಸೋಸಿಯೇಟ್ಸ್” ಎಂಬ ಸಂಸ್ಥೆಯನ್ನು ಬಿಜೈ ಆನೆಗುಂಡಿ ಸಮೀಪ ಇರುವ ಭಾರತಿ ರೆಸಿಡೆನ್ಸಿಯಲ್ಲಿ ಸ್ಥಾಪಿಸಿದ್ದಾರೆ. ಇದರ ಉದ್ಘಾಟನೆಯನ್ನು ಕೆನರಾ ಬ್ಯಾಂಕಿನ ಮಂಗಳೂರು ವೃತ್ತ ಕಚೇರಿಯ ಮಹಾ ಪ್ರಬಂಧಕ ಶ್ರೀ ಯೋಗೀಶ್ ಆಚಾರ್ಯ ಇವರು

“ಭಟ್ ಎಸೋಸಿಯೇಟ್ಸ್ ಸಂಸ್ಥೆಯ ಉದ್ಘಾಟನೆ” Read More »

ಕರಾವಳಿ

ಹೊಸ್ಮಠ ಹಳೆ ಮುಳುಗು ಸೇತುವೆ ಮುಳುಗಡೆ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.7.ಕಳೆದರಡು ದಿನಗಳಿಂದ ಈ ಭಾಗದಲ್ಲಿ ನಿರಂತರ ಧಾರಕಾರ ಮಳೆಯಾಗುತ್ತಿದ್ದು, ಉಪ್ಪಿನಂಗಡಿ – ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹೊಸ್ಮಠ ಎಂಬಲ್ಲಿ ಗುಂಡ್ಯ ಹೊಳೆಗೆ ಅಡ್ಡಲಾಗಿರುವ ಹಳೆಯದಾದ ಮುಳುಗು ಸೇತುವೆ ಕಳೆದ ರಾತ್ರಿಯಿಂದ ಹಲವು ಭಾರಿ ಮುಳುಗಡೆಯಾಗಿ ತೆರವುಗೊಳ್ಳುತ್ತಿದೆ. ಸೇತುವೆ ಮೇಲೆ ಬೃಹತ್ ಮರದ ದಿಮ್ಮಿಗಳು, ಕಸಕಡ್ಡಿಗಳು ಸಂಗ್ರವಾಗಿದೆ. ಈ ಹಳೆ ಸೇತುವೆ ಪಕ್ಕದಲ್ಲಿರುವ ನೂತನ ಸೇತುವೆ ಈ ಭಾರಿ ಸಂಚಾರಕ್ಕೆ ಮುಕ್ತವಾಗಿದೆ. ಹಾಗಾಗಿ ಸುಗಮ ಸಂಚಾರಕ್ಕೆ ತೊಡಕಾಗುವುದಿಲ್ಲ. ಹಳೆ ಸೇತುವೆ

ಹೊಸ್ಮಠ ಹಳೆ ಮುಳುಗು ಸೇತುವೆ ಮುಳುಗಡೆ Read More »

ಕರಾವಳಿ

ಕಲ್ಲುಗುಡ್ಡೆ: ಕೃಷ್ಣ ಜನ್ಮಾಷ್ಠಮಿ ಸಮಿತಿ ರಚನೆ ➤ ಅಧ್ಯಕ್ಷರಾಗಿ ಜಯಂತ್ ಬರೆಮೇಲು

(ನ್ಯೂಸ್ ಕಡಬ) newskadaba.comಕಲ್ಲುಗುಡ್ಡೆ, ಆಗಸ್ಟ್.7.ನೂಜಿಬಾಳ್ತಿಲ ರೆಂಜಿಲಾಡಿ ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಿತಿಯನ್ನು ಆದಿತ್ಯವಾರ ಕಲ್ಲುಗುಡ್ಡೆಯಲ್ಲಿ ನಡೆದ ಸಭೆಯಲ್ಲಿ ರಚಿಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಿತಿಯ ಅಧ್ಯಕ್ಷರಾಗಿ ಜಯಂತ್ ಬರೆಮೇಲು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜಯಪ್ರಕಾಶ್ ಶಾಂತಿಗುರಿ, ಕಾರ್ಯದರ್ಶಿಯಾಘಿ ಯೋಗೀಶ್ ಹಳೆನೂಜಿ, ಜೊತೆಕಾರ್ಯದರ್ಶಿಯಾಗಿ ದಿನೇಶ್ ಕಾನ, ಕೋಶಾಧಿಕಾರಿಯಾಗಿ ಪುರುಷೋತ್ತಮ ಕುಕ್ಕುತ್ತಡಿ ಇವರುಗಳು ಆಯ್ಕೆಯಾಗದ್ದಾರೆ. ಆಗಸ್ಟ್ 25ರಂದು ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ನೂಜಿಬಾಳ್ತಿಲ ಕಲ್ಲುಗುಡ್ಡೆ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಗುವುದು ಹಾಗೂ ಈ ಪ್ರಯುಕ್ತ ಮೊಸರು ಕುಡಿಕೆ, ಕಬಡ್ಡಿ, ಹಗ್ಗಜಗ್ಗಾಟ,

ಕಲ್ಲುಗುಡ್ಡೆ: ಕೃಷ್ಣ ಜನ್ಮಾಷ್ಠಮಿ ಸಮಿತಿ ರಚನೆ ➤ ಅಧ್ಯಕ್ಷರಾಗಿ ಜಯಂತ್ ಬರೆಮೇಲು Read More »

ಕರಾವಳಿ

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆನಡೆಯನ್ನು ಆಯೋಜಿಸಲಾಗಿದೆ. ಆಗಸ್ಟ್ 19 ರಂದು ಬೆಳಿಗ್ಗೆ 11 ಗಂಟೆಗೆ ಸಮುದಾಯ ಭವನ ಸುಭಾಸ್ ನಗರದಲ್ಲಿ ನಡೆಯಲಿದೆ. ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುನ್ನೂರು ಗ್ರಾಮ ಪಂಚಾಯತ್, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ Read More »

ಕರಾವಳಿ

ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ಕರ್ನಾಟಕ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನ ಗೊಳಿಸಲಾಗಿದೆ. ಆಗಸ್ಟ್ 7 ರಂದು ಬೆಳಿಗ್ಗೆ 11 ಗಂಟೆಗೆ ವಾರ್ಡ್ ನಂ.4 ರಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಕೃಷ್ಣಾಪುರ 5ನೇ ಬ್ಲಾಕ್ ಯುವಕ ಮಂಡಲದಲಿ,್ಲ ಕೆಯುಐಡಿಎಫ್‍ಸಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ. ಎಂದು ಆಯುಕ್ತರು, ಮಂಗಳೂರು ಮಹಾನಗರ ಪಾಲಿಕೆ ಇವರ ಪ್ರಕಟಣೆ ತಿಳಿಸಿದೆ.

ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ Read More »

ಕರಾವಳಿ

ಪ.ಪಂಗಡ – ಅಭಿವೃದ್ಧಿ ಕಾರ್ಯಕ್ರಮಗಳಡಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.2018-19ನೇ ಸಾಲಿನಲ್ಲಿ ಭಾರತ ಸಂವಿಧಾನ ಅನುಚ್ಛೇಧ 275(1)ರಡಿ ಹಾಗೂ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡವರ ಅಭಿವೃದ್ಧಿ ಕಾರ್ಯಕ್ರಮಗಳಡಿ  ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಫಲಾನುಭವಿಗಳ ಆಧಾರಿತ ಕಾರ್ಯಕ್ರಮಗಳಾದ ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ/ಮೇಕೆ ಘಟಕ, ಸರಕು ಸಾಗಾಣಿಕೆ ವಾಹನ, ಹಂದಿ ಸಾಕಾಣಿಕೆ ಸೌಲಭ್ಯ ಪಡೆಯಲು ಷರತ್ತಿಗೊಳಪಟ್ಟು ಆಸಕ್ತ ಅರ್ಜಿದಾರರಿಂದ ನಿಗಧಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.ಆದ್ದರಿಂದ ಮೂಲನಿವಾಸಿ ಮತ್ತು ಅರಣ್ಯ ಅವಲಂಭಿತ ಪರಿಶಿಷ್ಟ ವರ್ಗದವರು ನಿಗಧಿತ ನಮೂನೆಯ ಅರ್ಜಿಯನ್ನು ಸಂಬಂಧಪಟ್ಟ ತಾಲೂಕಿನ

ಪ.ಪಂಗಡ – ಅಭಿವೃದ್ಧಿ ಕಾರ್ಯಕ್ರಮಗಳಡಿ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ➤ ಅನಧಿಕೃತವಾಗಿ ಅಳವಡಿಸಿರುವ ಪ್ಲೆಕ್ಸ್ ಬ್ಯಾನರು ತೆರವುಗೊಳಿಸಲು ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಹೋರ್ಡಿಂಗ್ಸ್/ದಿಕ್ಸೂಚಿ ಫಲಕ, ಕಟೌಟ್, ಪ್ಲೆಕ್ಸ್ ಬ್ಯಾನರ್, ಬಂಟಿಂಗ್ಸ್‍ಗಳನ್ನು ಅಳವಡಿಸಿರುವುದು ಕಾನೂನು ಬಾಹಿರವಾಗಿದ್ದು ನಗರದ ಸ್ವಚ್ಚತೆ ಮತ್ತು ಸೌಂದರ್ಯಕ್ಕೆ ಅಡ್ಡಿಯಾಗುತ್ತಿರುವುದು ಕಂಡುಬರುತ್ತಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಧಾರ್ಮಿಕ ಆಚರಣೆಗಳು, ಹಬ್ಬ ಹರಿದಿನಗಳು ಇರುವುದರಿಂದ ಅನೇಕ ಸಂಘಟಣೆಗಳು ಪ್ಲೆಕ್ಸ್ ಬ್ಯಾನರು/ ಕಟೌಟ್/ ಬಂಟಿಂಗ್ಸ್/ಪೋಸ್ಟರ್ಸ್‍ಗಳನ್ನು ಅಳವಡಿಸುತ್ತಿರುವುದು ಪಾಲಿಕೆಯ ಗಮನಕ್ಕೆ ಬಂದಿರುತ್ತದೆ. ನಗರದ ಸ್ವಚ್ಛತೆಯನ್ನು ಮತ್ತು ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಪ್ಲೆಕ್ಸ್ ಬ್ಯಾನರು, ಕಟೌಟ್, ಪೋಸ್ಟರ್, ಬಂಟಿಂಗ್ಸ್‍ಗಳನ್ನು ಪಾಲಿಕೆ ವ್ಯಾಪ್ತಿಯಲ್ಲಿ ಅಳವಡಿಸದಂತೆ

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ➤ ಅನಧಿಕೃತವಾಗಿ ಅಳವಡಿಸಿರುವ ಪ್ಲೆಕ್ಸ್ ಬ್ಯಾನರು ತೆರವುಗೊಳಿಸಲು ಸೂಚನೆ Read More »

ಕರಾವಳಿ

ಅಂಗನವಾಡಿ ಕೇಂದ್ರಗಳಿಗೆ ಸೊಳ್ಳೆ ಪರದೆ ವಿತರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ಸಣ್ಣ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗಿರುವ ಕಾರಣದಿಂದಾಗಿ ಅವರ ಜೊತೆಯಲ್ಲಿದ್ದು ಪಾಲನೆ ಪೋಷಣೆ ಮಾಡುವ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಿಂದ ಡೆಂಗ್ಯೂ ಜಾಗೃತಿ ಮೂಡಿಸುವ ಕಾರ್ಯ ಸುಲಭವಾಗುತ್ತದೆ. ಎಂದು ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ ಹೇಳಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಂಗಳೂರು ನಗರದ ಅಂಗನವಾಡಿಗಳಿಗೆ ಸೊಳ್ಳೆ ಪರದೆಗಳ ವಿತರಣೆ ಮತ್ತು ಡೆಂಗ್ಯೂ ಬಗ್ಗೆ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಇವರು ಅಂಗನವಾಡಿ ಕಾರ್ಯಕರ್ತೆಯರಲ್ಲಿ ಧನಾತ್ಮಕ ಶಕ್ತಿ ತುಂಬಿರುವುದರಿಂದ

ಅಂಗನವಾಡಿ ಕೇಂದ್ರಗಳಿಗೆ ಸೊಳ್ಳೆ ಪರದೆ ವಿತರಣಾ ಕಾರ್ಯಕ್ರಮ Read More »

ಕರಾವಳಿ

ಮಂಗಳೂರು ಮ.ಪಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ದಿಮೆದಾರರ ಗಮನಕ್ಕೆ➤ಆ.10ರೊಳಗೆಉದ್ದಿಮೆ ಪರವಾನಗಿ ನವೀಕರಿಸದಿದ್ದಲ್ಲಿ ಉದ್ದಿಮೆರದ್ದು

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಉದ್ದಿಮೆ ನಡೆಸುತ್ತಿರುವ ಎಲ್ಲಾ ಉದ್ದಿಮೆದಾರರು ಪ್ರತಿ ಆರ್ಥಿಕ ವರ್ಷಾಂತ್ಯದ ಮಾರ್ಚ್ ತಿಂಗಳೊಳಗೆ ತಮ್ಮ ಉದ್ದಿಮೆ ಪರವಾನಗಿಯನ್ನು ಮಂಗಳೂರು ಮಹಾನಗರಪಾಲಿಕೆಯಲ್ಲಿ ನವೀಕರಿಸಿಕೊಂಡು ಉದ್ದಿಮೆಯನ್ನು ಮುಂದುವರಿಸ ಬೇಕಾಗಿರುತ್ತದೆ. ಮತ್ತು ಹೊಸ ಉದ್ದಿಮೆ ಪ್ರಾರಂಭಿಸುವ ಮೊದಲು ಉದ್ದಿಮೆ ಪರವಾನಗಿಯನ್ನು ಪಡೆದುಕೊಂಡೇ ಉದ್ದಿಮೆಯನ್ನು ನಡೆಸಬೇಕಾಗಿರುತ್ತದೆ. ಆದರೆ ಪ್ರಸ್ತುತ ಹೆಚ್ಚಿನ ಉದ್ದಿಮೆದಾರರು ಈವರೆಗೂ ತಮ್ಮ ಉದ್ದಿಮೆ ಪರವಾನಗಿಯನ್ನು ನವೀಕರಿಸದೇ ಉದ್ದಿಮೆಯನ್ನು ಮುಂದುವರಿಸುತ್ತಿರುವುದು ಹಾಗೂ ಹೊಸ ಉದ್ದಿಮೆ ಪ್ರಾರಂಭಿಸಿದ್ದಲ್ಲಿ ಉದ್ದಿಮೆ ಪರವಾನಗಿಯನ್ನು ಪಡೆಯದೇ ಇರುವುದು ಮಂಗಳೂರು

ಮಂಗಳೂರು ಮ.ಪಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ದಿಮೆದಾರರ ಗಮನಕ್ಕೆ➤ಆ.10ರೊಳಗೆಉದ್ದಿಮೆ ಪರವಾನಗಿ ನವೀಕರಿಸದಿದ್ದಲ್ಲಿ ಉದ್ದಿಮೆರದ್ದು Read More »

ಕರಾವಳಿ
Scroll to Top