ಕಡಬ ನ್ಯೂಸ್

➤ ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ..

(ನ್ಯೂಸ್ ಕಡಬ) newskadaba.com. ಬೆಳಗಾವಿ ಫೆ.27.  ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿ ರೋಡ್ ಶೋ ನಡೆಸಿದರು. ಚೆನ್ನಮ್ಮ ವೃತ್ತದಿಂದ  ಮಾಲಿನಿ ಸಿಟಿಯವರೆಗೂ ಸುಮಾರು 10.7 ಕಿ.ಮೀ. ದೂರದವರೆಗೂ ಪೊಲೀಸ್ ಬಿಗಿ ಭದ್ರತೆಯಲ್ಲಿ  ಮೋದಿ  ರೋಡ್ ಶೋ ನಲ್ಲಿ ಪಾಲ್ಗೊಂಡರು. ರಸ್ತೆಯ ತುಂಬ ಸೇರಿದ್ದ ಜನಸಾಗರ ಹರ ಹರ ಮೋದಿ ಎಂಬ ಘೋಷಣೆ ಕೂಗಿ ಕಾರಿನ ಮೇಲೆ ಹೂ ಮಳೆ ಸುರಿದರು. ಕಟ್ಟಡಗಳ ಮೇಲೇರಿದ ಜನರು, ಬಿಜೆಪಿ ಭಾವುಟ ಪ್ರದರ್ಶಿಸುತ್ತಾ, ಮೋದಿ ಪರ ಜೈಕಾರ ಹಾಕಿ ಹರ್ಷೋದ್ಗಾರ ಮಾಡಿದರು. […]

➤ ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ.. Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

➤ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನ!

(ನ್ಯೂಸ್ ಕಡಬ) newskadaba.com. ನವದೆಹಲಿ ಫೆ.27. ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ. ಮಧ್ಯ ಹಗರಣ ಕೇಸ್ ಗೆ ಸಂಬಂಧಿಸಿ ಈ ಹಿಂದೆ ಸಿಬಿಐ ಈ ಪ್ರಕರಣದಲ್ಲಿ ಅಧಿಕಾರಿಯೊಬ್ಬರ ಹೇಳಿಕೆಯನ್ನು ದಾಖಲಿಸಿಕೊಂಡಿತ್ತು. ಈ ಪ್ರಕರಣದಲ್ಲಿ ಮನೀಶ್ ಅಬಕಾರಿ ನೀತಿಯನ್ನು ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಮತ್ತು ಕೆಲವು ಸೂಚನೆಗಳನ್ನು ನೀಡಿದ್ದರು ಎಂದು ಅವರು ಹೇಳಿದ್ದಾರೆ ಎಂದು ತನಿಖಾ ಸಂಸ್ಥೆ ಹೇಳಿಕೊಂಡಿದೆ. ಮನೀಶ್‌ ಸಿಸೋಡಿಯಾ ಅವರು ಸಿಬಿಐ ವಿಚಾರಣೆಗೆ ಆಗಮಿಸಬೇಕಿತ್ತು. ವಿಚಾರಣೆಗೆ ಬರುವಂತೆ ಸಿಬಿಐಯು ಇವರನ್ನು

➤ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನ! Read More »

ರಾಷ್ಟ್ರೀಯ ನ್ಯೂಸ್

➤ ವಾಲಿಬಾಲ್ ಆಡುವಾಗ ಕುಸಿದು ಬಿದ್ದು ಯುವಕ ಮೃತ್ಯು.!

(ನ್ಯೂಸ್ ಕಡಬ) newskadaba.com. ಕಾರ್ಕಳ.  ಫೆ.27.  ವಾಲಿಬಾಲ್ ಆಟವಾಡುವಾಗ ಕುಸಿದು ಬಿದ್ದು,ಯುವಕ ಮೃತಪಟ್ಟ ಘಟನೆ ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಬಳಿ ನಡೆದಿದೆ. ಸಂತೋಷ (34) ಮೃತ ದುರ್ದೈವಿ. ಸಂತೋಷ್ ನಿನ್ನೆ ಸಂಜೆ ವಾಲಿಬಾಲ್‌ ಆಡುತ್ತಿರುವಾಗ ಮೈದಾನದಲ್ಲಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕಾರ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಈ ವೇಳೆ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

➤ ವಾಲಿಬಾಲ್ ಆಡುವಾಗ ಕುಸಿದು ಬಿದ್ದು ಯುವಕ ಮೃತ್ಯು.! Read More »

ಕರಾವಳಿ, ಕ್ರೈಮ್ ನ್ಯೂಸ್

➤ ಪ್ರೇಯಸಿಗಾಗಿ ತನ್ನ ಗೆಳೆಯನನ್ನೆ ಕ್ರೂರವಾಗಿ ಕೊಂದ ಆಸಾಮಿ

(ನ್ಯೂಸ್ ಕಡಬ) newskadaba.com. ಹೈದರಾಬಾದ್. ಫೆ.27.  ತನ್ನ ಗೆಳತಿಗೆ ಸಂದೇಶ ಕಳುಹಿಸಿದ್ದಕ್ಕಾಗಿ ಮತ್ತು ಕರೆ ಮಾಡಿದ ಎಂಬ ಕಾರಣಕ್ಕಾಗಿ  ತನ್ನ ಸ್ನೇಹಿತನನ್ನು ಕ್ರೂರವಾಗಿ ಕೊಂದ ಘಟನೆ  ಹೈದರಾಬಾದ್ ನಲ್ಲಿ ನಡೆದಿದೆ. ಇಲ್ಲಿ ನವೀನ್ (22) ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹರಿಹರ ಕೃಷ್ಣಾ ಎಂಬಾತ ಕೃತ್ಯವನ್ನು ನಡೆಸಿದ್ದಾನೆ ಎನ್ನಲಾಗಿದೆ.   ನವೀನ್ ನನ್ನು ಕೊಲೆ ಮಾಡಿ, ಆತನ ತಲೆ ಕಡಿದು,ಆತನ ಹೃದಯ ಮತ್ತು ಖಾಸಗಿ ಭಾಗಗಳನ್ನು ತೆಗೆದು, ಬೆರಳುಗಳನ್ನು ಕತ್ತರಿಸಿ, ನಂತರ ಪೊಲೀಸರಿಗೆ ಆರೋಪಿ ಶರಣಾಗಿದ್ದಾನೆಂದು ಹೇಳಾಗಿದೆ. ಆರೋಪಿಯ ಹೇಳಿಕೆ

➤ ಪ್ರೇಯಸಿಗಾಗಿ ತನ್ನ ಗೆಳೆಯನನ್ನೆ ಕ್ರೂರವಾಗಿ ಕೊಂದ ಆಸಾಮಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿ ಅತಿಕ್ರಮಣ ವಿರೋಧಿ ಅಭಿಯಾನ ➤ ಮಸೀದಿ ಮತ್ತು ದೇವಸ್ಥಾನಗಳ ನೆಲಸಮ

(ನ್ಯೂಸ್ ಕಡಬ) newskadaba.com. ನವದೆಹಲಿ .ಫೆ.27.  ದೆಹಲಿ ಸರ್ಕಾರದ ಲೋಕೋಪಯೋಗಿ ಇಲಾಖೆಯು  ಅತಿಕ್ರಮಣ ವಿರೋಧಿ ಅಭಿಯಾನದ ಭಾಗವಾಗಿ ಮಧ್ಯ ದೆಹಲಿಯ ಕಾಲುದಾರಿಯಲ್ಲಿದ್ದ ಮಸೀದಿ ಮತ್ತು ದೇವಾಲಯ ಸೇರಿದಂತೆ ಧಾರ್ಮಿಕ ಕಟ್ಟಡಗಳನ್ನು ನೆಲಸಮಗೊಳಿಸಿದೆ. ಪಾದಚಾರಿ ಮಾರ್ಗದಲ್ಲಿ ಧಾರ್ಮಿಕ ಕಟ್ಟಡಗಳನ್ನು ನಿರ್ಮಿಸಲಾಗಿದೆ ಮತ್ತು ಅವುಗಳನ್ನು ಕೆಡವಲು ನ್ಯಾಯಾಲಯ ಆದೇಶಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವ ಬಗ್ಗೆ ಪಿಟಿಐ ವರದಿ ಮಾಡಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಯೊಬ್ಬರು ಮಾತನಾಡಿ, ಪಾದಚಾರಿ ಮಾರ್ಗದಲ್ಲಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲು ಚಾಲನೆ ನೀಡಲಾಗುತ್ತಿದೆ, ಈ ಕುರಿತು ನ್ಯಾಯಾಲಯದ ಆದೇಶವಿದೆ

ದೆಹಲಿ ಅತಿಕ್ರಮಣ ವಿರೋಧಿ ಅಭಿಯಾನ ➤ ಮಸೀದಿ ಮತ್ತು ದೇವಸ್ಥಾನಗಳ ನೆಲಸಮ Read More »

ರಾಷ್ಟ್ರೀಯ ನ್ಯೂಸ್

➤ ಪಿಕಪ್, ಆಟೋ ಮುಖಾಮುಖಿ ಢಿಕ್ಕಿ ➤ ಮಹಿಳೆ ಗಂಭೀರ!

(ನ್ಯೂಸ್ ಕಡಬ) newskadaba.com.ಕುಂದಾಪುರ. ಫೆ.27. ಪಿಕಪ್ ವಾಹನ ಆಟೋ ರಿಕ್ಷಾಗೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡ  ಘಟನೆ ಹೆಮ್ಮಾಡಿ ಸಮೀಪದ ಮೂವತ್ತುಮುಡಿ ಸೇತುವೆ ಬಳಿ ನಡೆದಿದೆ. ಅಪಘಾತದ ವೇಳೆ ಆಟೋ ರಿಕ್ಷಾ ಡಿವೈಡರ್ ಏರಿದ್ದು, ಪಿಕಪ್ ವಾಹನ ರಸ್ತೆಯಿಂದ ಕೆಳಗಿಳಿದು ಹೊಳೆಗೆ ಜಾರಿದೆ. ಆಟೋದಲ್ಲಿ ನಾಲ್ವರಿದ್ದು, ಮಹಿಳೆಗೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದು ಬಂದಿದೆ. ಇನ್ನು ಪಿಕಪ್ ವಾಹನದಲ್ಲಿ ಇಬ್ಬರು ಇದ್ದು, ಚಾಲಕನಿಗೆ  ಸಣ್ಣ ಪುಟ್ಟಗಾಯವಾಗಿದೆ. ಈ ಕುರಿತು ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

➤ ಪಿಕಪ್, ಆಟೋ ಮುಖಾಮುಖಿ ಢಿಕ್ಕಿ ➤ ಮಹಿಳೆ ಗಂಭೀರ! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಭಟ್ಕಳ ಒಂದೇ ಮನೆಯ ನಾಲ್ವರ ಹತ್ಯೆ ಪ್ರಕರಣ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com. ಭಟ್ಕಳ. ಫೆ.27. ತಾಲೂಕಿನ ಹಾಡವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿಯನ್ನು ಭಟ್ಕಳ ಪೊಲೀಸರು ಶಿವಮೊಗ್ಗದಲ್ಲಿ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದೆ  ಕೊಲೆಯಾದವರ ಸೊಸೆ ವಿದ್ಯಾ ಭಟ್ ಹಾಗೂ ಶ್ರೀಧರ್ ಭಟ್​ರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಆರೋಪಿ ವಿನಯ್​ ಭಟ್ ಪರಾರಿಯಾಗಿದ್ದ. ನಿನ್ನೆ ಆತ ಇರುವ ಖಚಿತ ಮಾಹಿತಿ ಮೇರೆಗೆ ಆರೋಪಿ ವಿನಯ್​ ಭಟ್​ನನ್ನು ಭಾನುವಾರ ಶಿವಮೊಗ್ಗದಲ್ಲಿ ಬಂಧಿಸಿ ಭಟ್ಕಳಕ್ಕೆ ಕರೆತಂದಿದ್ದಾರೆ. ಫೆಬ್ರವರಿ 24ರಂದು ಆಸ್ತಿ

ಭಟ್ಕಳ ಒಂದೇ ಮನೆಯ ನಾಲ್ವರ ಹತ್ಯೆ ಪ್ರಕರಣ ➤ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಬೇಸಿಗೆಯಲ್ಲಿ ಬ್ರಾಯ್ಲರ್ ಕೋಳಿಗಳ ಸಾವು ಹೆಚ್ಚಳ ➤ದರವೂ ಏರಿಕೆ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.27. ಬೇಸಿಗೆಯಲ್ಲಿ ಕೋಳಿಗಳು ತಿನ್ನುವ ಆಹಾರದ ಪ್ರಮಾಣ ಕಡಿಮೆ ಮಾಡುತ್ತವೆ. ಇದರಿಂದ 35-37 ದಿನಗಳಲ್ಲಿ 2 ಕೆಜಿ ಬರಬೇಕಾದ ಕೋಳಿಯ ತೂಕ ಬೇಸಿಗೆಯಲ್ಲಿ 40 ರಿಂದ 50 ದಿನಗಳು ಆಗುತ್ತವೆ. ಕೋಳಿ ಸಾಕಾಣೆದಾರರು ಕೂಡ ಬಹಳ ಎಚ್ಚರದಿಂದ ಸಾಕಲು ಮುಂದಾಗುತ್ತಾರೆ. ಇದರ ಜತೆಗೆ ಬಿಸಿಲಿನ ಹೊಡೆತವನ್ನು ತಡೆದುಕೊಳ್ಳಲು ಸಾಧ್ಯವಾಗದೇ ಕೋಳಿಗಳ ಮರಣ ಸಂಖ್ಯೆ ಕೂಡ ಹೆಚ್ಚಾಗುತ್ತದೆ, ಎಂದು ಕರ್ನಾಟಕ ಪೌಲ್ಟ್ರಿ ಫಾರ್ಮಸ್ ಬ್ರೀಡರ್ಸ್ ಅಸೋಸಿಯೇಶನ್ ಕೆಪಿಎಫ್‍ಬಿಎ ಅಧ್ಯಕ್ಷ ಡಾ. ಸುಶಾಂತ್ ರೈ

➤ ಬೇಸಿಗೆಯಲ್ಲಿ ಬ್ರಾಯ್ಲರ್ ಕೋಳಿಗಳ ಸಾವು ಹೆಚ್ಚಳ ➤ದರವೂ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

➤ ಶಿವಮೊಗ್ಗದಲ್ಲಿ ಇಂದು ಪ್ರಧಾನಿಯವರಿಂದ ವಿಮಾನ ನಿಲ್ದಾಣ ಉದ್ಘಾಟನೆ

(ನ್ಯೂಸ್ ಕಡಬ) newskadaba.com. ಶಿವಮೊಗ್ಗ. ಫೆ.27.ಶಿವಮೊಗ್ಗದಲ್ಲಿ  ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆ.27 ರಂದು ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ.  ಹಾಗೂ ಇತರೆ ಯೋಜನೆಗಳ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಪ್ರಧಾನಿಯವರು ನೆರವೇರಿಸುವರು. ಪ್ರಧಾನಿಯವರ ಕಾರ್ಯಕ್ರಮಕ್ಕೆ 1 ಲಕ್ಷ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. 2 ಕಡೆ ಊಟದ ವ್ಯವಸ್ಥೆ ಇದ್ದು ಒಂದೊಂದು ಕಡೆ 100 ಕೌಂಟರ್‍ಗಳನ್ನು ತೆರೆಯಲಾಗುವುದು. ಕಾರ್ಯಕ್ರಮದ ವೀಕ್ಷಣೆಗೆ 4 ಕಡೆ ವಿಶಾಲವಾದ ಪ್ರಾಜೆಕ್ಟರ್‍ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಒಟ್ಟು 775 ಎಕರೆ

➤ ಶಿವಮೊಗ್ಗದಲ್ಲಿ ಇಂದು ಪ್ರಧಾನಿಯವರಿಂದ ವಿಮಾನ ನಿಲ್ದಾಣ ಉದ್ಘಾಟನೆ Read More »

ಕರ್ನಾಟಕ

➤ ರಾಜಕೀಯ ನಿವೃತ್ತಿ ಸುಳಿವು ನೀಡಿದ ಸೋನಿಯಾ

(ನ್ಯೂಸ್ ಕಡಬ) newskadaba.com. ದೆಹಲಿ. ಫೆ.25.  ಭಾರತ್ ಜೋಡೊ ಯಾತ್ರೆಯೊಂದಿಗೆ ನನ್ನ ಇನ್ನಿಂಗ್ಸ್ ಮುಕ್ತಾಯವಾಗಬಹುದು ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಕೀಯ ನಿವೃತ್ತಿ ಹೊಂದುವ ಸುಳಿವು ನೀಡಿದ್ದಾರೆ. ಛತ್ತೀಸ್ ಗಢದ ರಾಜಧಾನಿ ರಾಯ್ ಪುರದಲ್ಲಿ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು ನನಗೆ ಅತ್ಯಂತ ಸಂತೋಷಕರ ಸಂಗತಿಯೆಂದರೆ ನನ್ನ ಇನ್ನಿಂಗ್ಸ್ ಭಾರತ್ ಜೋಡೊ ಯಾತ್ರೆಯೊಂದಿಗೆ ಮುಕ್ತಾಯವಾಗಬಹುದು. ಇದು ಪಕ್ಷಕ್ಕೆ ತಿರುವು ನೀಡಲಿದೆ ಎಂದಿದ್ದಾರೆ.

➤ ರಾಜಕೀಯ ನಿವೃತ್ತಿ ಸುಳಿವು ನೀಡಿದ ಸೋನಿಯಾ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top