ಕಡಬ ನ್ಯೂಸ್

ಸಂಗೀತ ನೃತ್ಯ ತರಬೇತಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.10.ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2019-20ನೇ ಸಾಲಿಗೆ ಶಿಷ್ಯವೇತನದ ಬದಲಾಗಿ, ಸಂಗೀತ ಹಾಗೂ ನೃತ್ಯವನ್ನು ಕಲಿಯಲು ಅವಕಾಶ ಕಲ್ಪಿಸಿದೆ. ಆದ್ದರಿಂದ  ಅಕಾಡೆಮಿ ವತಿಯಿಂದ ಪ್ರತಿಯೊಂದು ಜಿಲ್ಲೆಯಲ್ಲಿ(ಅರ್ಜಿಗಳನ್ನಾಧರಿಸಿ) ಗುರುಗಳ ಮುಖಾಂತರ ಅಕಾಡೆಮಿ ವ್ಯಾಪ್ತಿಗೆ ಒಳಪಡುವ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗಮ ಸಂಗೀತ, ನೃತ್ಯ ಕಥಾಕೀರ್ತನ; ಗಮಕ ಕಲಾಪ್ರಕಾರಗಳಲ್ಲಿ-ಕಲಿಯಲು ಆಸಕ್ತಿಯುಳ್ಳ/ಅಭ್ಯಾಸ ಮಾಡುತ್ತಿರುವ / ಹೆಚ್ಚಿನ ಅಭ್ಯಾಸ ಮಾಡಲಿಚ್ಚಿಸುವ ವಿದ್ಯಾರ್ಥಿಗಳಿಗೆ 5 ತಿಂಗಳವರೆಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 14ರಿಂದ 26 ವರ್ಷ ವಯೋಮಾನದ […]

ಸಂಗೀತ ನೃತ್ಯ ತರಬೇತಿ ಅರ್ಜಿ ಆಹ್ವಾನ Read More »

ಕರಾವಳಿ

“ವಿಧ್ವಂಸಕ’ ಕೃತ್ಯಕ್ಕೆ ಸಂಚು ರೂಪಿಸಿದ ಉಗ್ರರು! ➤ ವಿಚಾರಣೆಯ ವೇಳೆ ಮಾಹಿತಿ ನೀಡಿದ ಜೆಎಂಬಿ ಉಗ್ರ ಹಬೀಬುರ್ ರೆಹಮಾನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.9.ಕೆಲ ದಿನಗಳ ಹಿಂದೆ ದೊಡ್ಡಬಳ್ಳಾಪುರದಲ್ಲಿ ಬಂಧಿಸಲ್ಪಟ್ಟ ಜೆಎಂಬಿ ಉಗ್ರ ಹಬೀಬುರ್‌ ರೆಹಮಾನ್‌ ಎನ್‌ಐಎ ವಿಚಾರಣೆ ವೇಳೆ ಈ ಮಾಹಿತಿ ಬಾಯ್ಬಿಟ್ಟಿದ್ದಾನೆ. ಈ ಮಾಹಿತಿ ಆಧರಿಸಿ ಚಿಕ್ಕಬಾಣಾವರದಲ್ಲಿ ತನ್ನ ಮೂವರು ಸಹಚರರೊಂದಿಗೆ ಉಳಿದುಕೊಂಡಿದ್ದ ಬಾಡಿಗೆ ಮನೆ ಮೇಲೆ ಭಾನುವಾರ ರಾತ್ರಿ ದಾಳಿ ನಡೆಸಿ, ಶೋಧ ನಡೆಸಿದೆ.ಕಾರ್ಯಾಚರಣೆ ವೇಳೆ ದೊರೆತ ಏರ್‌ಗನ್‌, ಟಿಫಿನ್‌ ಬಾಕ್ಸ್‌ ಗ್ರೆನೇಡ್‌ ಸೇರಿ ಇತರ ಸ್ಫೋಟಕಗಳನ್ನು ಜಪ್ತಿ ಮಾಡಿ ಮಹಜರು ಪೂರ್ಣಗೊಳಿಸಿರುವ ಎನ್‌ಐಎ ತಂಡ, ಆರೋಪಿಗಳ ವಿರುದ್ಧ ಸೋಲದೇವನಹಳ್ಳಿ ಪೊಲೀಸ್‌

“ವಿಧ್ವಂಸಕ’ ಕೃತ್ಯಕ್ಕೆ ಸಂಚು ರೂಪಿಸಿದ ಉಗ್ರರು! ➤ ವಿಚಾರಣೆಯ ವೇಳೆ ಮಾಹಿತಿ ನೀಡಿದ ಜೆಎಂಬಿ ಉಗ್ರ ಹಬೀಬುರ್ ರೆಹಮಾನ್ Read More »

ಕರ್ನಾಟಕ

ಬೈಕ್ ಮತ್ತು ಖಾಸಗಿ ಬಸ್ಸ್ ಡಿಕ್ಕಿ

(ನ್ಯೂಸ್ ಕಡಬ) newskadaba.comಉಡುಪಿ, ಜುಲೈ.9. ಶಿರ್ವ ಕಡೆಯಿಂದ ಮೂಲ್ಕಿಗೆ ಹೋಗುತ್ತಿದ್ದ ಖಾಸಗಿ ಬಸ್ಸಿಗೆ ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿದೆ. ಸಮೀಪದ ಕುತ್ಯಾರು ವಿದ್ಯಾದಾಯಿನಿ ಶಾಲೆಯ ಬಳಿ ಈ ಘಟನೆ ನಡೆದಿದೆ. ಸವಾರ ರಾಜು ಶೆಟ್ಟಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ ಅವರು ಮುದರಂಗಡಿ ಕಡೆಯಿಂದ ಶಿರ್ವ ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಬೈಕ್ ಮತ್ತು ಖಾಸಗಿ ಬಸ್ಸ್ ಡಿಕ್ಕಿ Read More »

ಕರ್ನಾಟಕ

ಪೈಪ್ ಲೈನ್ ನ ಜಾಯಿಂಟ್ನಲ್ಲಿ ಬಿರುಕು ➤ ನೀರಿನ ಸರಬರಾಜು ಸ್ಥಗಿತ

(ನ್ಯೂಸ್ ಕಡಬ) newskadaba.comಉಪ್ಪಿನಂಗಡಿ, ಜುಲೈ.9.ತುಂಬೆಯಿಂದ ಪಡೀಲ್‌ ಪಂಪ್‌ಹೌಸ್‌ಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯಲ್ಲಿ ಅಡ್ಯಾರ್‌ನ ಮಾತಾ ನರ್ಸರಿಯ ಮುಂಭಾಗದಲ್ಲಿ ರವಿವಾರ ರಾತ್ರಿ ನೀರು ಸೋರಿಕೆಯಾಗಿತ್ತು. ಮುಖ್ಯ ಪೈಪ್‌ಲೈನ್‌ನ ಜಾಯಿಂಟ್‌ನಲ್ಲಿ ಬಿರುಕು ಕಾಣಿಸಿಕೊಂಡ ಕಾರಣ ನೀರು ಸೋರಿಕೆಯಾಗುತ್ತಿತ್ತು. ಪಡೀಲ್‌ಗೆ ತುಂಬೆಯಿಂದ ನೀರು ಸರಬರಾಜು ಆಗುವ ಪ್ರಮಾಣದಲ್ಲಿ ರವಿವಾರ ರಾತ್ರಿ ವೇಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಪೈಪ್‌ಲೈನ್‌ ಪರಿಶೀಲಿಸಿದಾಗ ಪಾಲಿಕೆ ಅಧಿಕಾರಿಗಳ ಗಮನಕ್ಕೆ ಬಂದಿದೆ. ತುಂಬೆಯಿಂದ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯು ಅಡ್ಯಾರ್‌ನ ರಾ.ಹೆ.ಯ ಸಮೀಪ

ಪೈಪ್ ಲೈನ್ ನ ಜಾಯಿಂಟ್ನಲ್ಲಿ ಬಿರುಕು ➤ ನೀರಿನ ಸರಬರಾಜು ಸ್ಥಗಿತ Read More »

ಕರಾವಳಿ

ಸ್ಥಳೀಯ ಕಾಲೇಜು ಗಳಿಗೆ ದಾಳಿ ನಡೆಸಿದ ಉಪ್ಪಿನಂಗಡಿ ಪೋಲೀಸರು ➤ 24 ಮೊಬೈಲ್ ಗಳು ವಶಕ್ಕೆ

(ನ್ಯೂಸ್ ಕಡಬ) newskadaba.comಉಪ್ಪಿನಂಗಡಿ, ಜುಲೈ.9.ಉಪ್ಪಿನಂಗಡಿ ಪೊಲೀಸರು ಸೋಮವಾರ ಸ್ಥಳೀಯ ಕಾಲೇಜು ಗಳಿಗೆ ದಾಳಿ ನಡೆಸಿ 24 ಮೊಬೈಲ್‌ಗ‌ಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಉಪ್ಪಿನಂಗಡಿ ಎಸ್‌ಐ ನಂದ ಕುಮಾರ್‌ ನೇತೃತ್ವದ ಪೊಲೀಸ್‌ ತಂಡ ಉಪ್ಪಿನಂಗಡಿಯ ಪ್ರಥಮ ದರ್ಜೆ ಕಾಲೇಜು ಹಾಗೂ ಪದವಿಪೂರ್ವ ಕಾಲೇಜಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿತು.ಈ ಸಂದರ್ಭ ವಿದ್ಯಾರ್ಥಿ ಗಳು ಅಕ್ರಮವಾಗಿ ತಂದಿರಿಸಿದ್ದ 24 ಮೊಬೈಲ್‌ಗ‌ಳು ಪತ್ತೆಯಾದವು. ವಿದ್ಯಾರ್ಥಿಗಳು ಕಾಲೇಜಿಗೆ ಹೋಗುವ ಮುನ್ನ ಅಂಗಡಿಗಳಲ್ಲಿ ಮೊಬೈಲ್‌ ಇರಿಸುವ ಸುಳಿವು ಪಡೆದುಕೊಂಡ ಪೊಲೀಸರು ಶಂಕಿತ ಅಂಗಡಿಗಳಿಗೂ ದಾಳಿ ನಡೆಸಿ

ಸ್ಥಳೀಯ ಕಾಲೇಜು ಗಳಿಗೆ ದಾಳಿ ನಡೆಸಿದ ಉಪ್ಪಿನಂಗಡಿ ಪೋಲೀಸರು ➤ 24 ಮೊಬೈಲ್ ಗಳು ವಶಕ್ಕೆ Read More »

ಕರಾವಳಿ

ಸ್ಥಳೀಯ ಕಾಲೇಜು ಗಳಿಗೆ ದಾಳಿ ನಡೆಸಿದ ಉಪ್ಪಿನಂಗಡಿ ಪೋಲೀಸರು ➤ 24 ಮೊಬೈಲ್ಗಳು ವಶಕ್ಕೆ

(ನ್ಯೂಸ್ ಕಡಬ) newskadaba.comಉಪ್ಪಿನಂಗಡಿ, ಜುಲೈ.9.ಉಪ್ಪಿನಂಗಡಿ ಪೊಲೀಸರು ಸೋಮವಾರ ಸ್ಥಳೀಯ ಕಾಲೇಜು ಗಳಿಗೆ ದಾಳಿ ನಡೆಸಿ 24 ಮೊಬೈಲ್‌ಗ‌ಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಉಪ್ಪಿನಂಗಡಿ ಎಸ್‌ಐ ನಂದ ಕುಮಾರ್‌ ನೇತೃತ್ವದ ಪೊಲೀಸ್‌ ತಂಡ ಉಪ್ಪಿನಂಗಡಿಯ ಪ್ರಥಮ ದರ್ಜೆ ಕಾಲೇಜು ಹಾಗೂ ಪದವಿಪೂರ್ವ ಕಾಲೇಜಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿತು.ಈ ಸಂದರ್ಭ ವಿದ್ಯಾರ್ಥಿ ಗಳು ಅಕ್ರಮವಾಗಿ ತಂದಿರಿಸಿದ್ದ 24 ಮೊಬೈಲ್‌ಗ‌ಳು ಪತ್ತೆಯಾದವು. ವಿದ್ಯಾರ್ಥಿಗಳು ಕಾಲೇಜಿಗೆ ಹೋಗುವ ಮುನ್ನ ಅಂಗಡಿಗಳಲ್ಲಿ ಮೊಬೈಲ್‌ ಇರಿಸುವ ಸುಳಿವು ಪಡೆದುಕೊಂಡ ಪೊಲೀಸರು ಶಂಕಿತ ಅಂಗಡಿಗಳಿಗೂ ದಾಳಿ ನಡೆಸಿ

ಸ್ಥಳೀಯ ಕಾಲೇಜು ಗಳಿಗೆ ದಾಳಿ ನಡೆಸಿದ ಉಪ್ಪಿನಂಗಡಿ ಪೋಲೀಸರು ➤ 24 ಮೊಬೈಲ್ಗಳು ವಶಕ್ಕೆ Read More »

ಕರಾವಳಿ

ಅಮೆರಿಕದ ರಾಜಧಾನಿ ಸುತ್ತಮುತ್ತ ಪ್ರವಾಹ ಪರಿಸ್ಥಿತಿ ನಿರ್ಮಾಣ ➤ ಭಾರೀ ಮಳೆಯಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಜುಲೈ.9.‌ ಭಾರೀ ಮಳೆಯಿಂದಾಗಿ ನೆರೆ ನೀರಿನಿಂದ ಅಮೆರಿಕದ ರಾಜಧಾನಿ ಸುತ್ತಮುತ್ತ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಮುಖ ನಗರಗಳು ಮತ್ತು ಶ್ವೇತಭವನದ ಸುತ್ತ ತಗ್ಗು ಪ್ರದೇಶಗಳೆಲ್ಲವೂ ಜಲಾವೃತವಾಗಿದ್ದವು. ವಾಷಿಂಗ್ಟನ್‌ ಡಿ.ಸಿ. ಸುತ್ತಮುತ್ತ ರಸ್ತೆಗಳಲ್ಲಿ ನೀರು ನಿಂತಿದ್ದು ನೂರಾರು ಕಾರುಗಳು ನೀರಿನಲ್ಲಿ ಮುಳುಗಿವೆ. ಕೆಲ ಕಾರು ಗಳು ಕೊಚ್ಚಿ ಹೋಗಿವೆ.ಕೊಲಂಬಿಯಾ, ವರ್ಜೀನಿಯಾ ಭಾಗಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಲವು ಭಾಗಗಲ್ಲಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮೆಟ್ರೋ  ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.ರಕ್ಷಣಾ ತಂಡಗಳು ಜನರನ್ನು ರಕ್ಷಿಸುವ ಕಾರ್ಯದಲ್ಲಿ

ಅಮೆರಿಕದ ರಾಜಧಾನಿ ಸುತ್ತಮುತ್ತ ಪ್ರವಾಹ ಪರಿಸ್ಥಿತಿ ನಿರ್ಮಾಣ ➤ ಭಾರೀ ಮಳೆಯಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ➤ ಡಿಪ್ಲೊಮಾ ಆಫ್-ಲೈನ್ ಮುಖಾಂತರ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.9.ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಈ ಸಂಸ್ಥೆಯಲ್ಲಿ 2019-20ನೇ ಸಾಲಿನ ಪ್ರಥಮ ವರ್ಷ ಡಿಪ್ಲೋಮಾ ಪ್ರವೇಶಕ್ಕೆ ಸಂಬಂಧಿಸಿದಂತೆ ಭರ್ತಿಯಾಗದೇ ಖಾಲಿ ಉಳಿದಿರುವ ಸೀಟುಗಳಿಗೆ ಆಫ್-ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವೆಬ್‍ಸ್ಶೆಟ್ www.dte.kar.nic.in ಮೂಲಕ ಡೌನಲೋಡ್ ಮಾಡಿ ಜುಲೈ 15 ರಿಂದ ಜುಲೈ 19 ರವರೆಗೆ ಬೆಳಿಗ್ಗೆ 10.30 ಗಂಟೆಯಿಂದ ಸಚಿಜೆ 5.30 ಗಂಟೆಯವರೆಗೆ ಸ್ವೀಕರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಕಚೇರಿ ದೂರವಾಣಿ ಸಂಖ್ಯೆ: 0824-2211636 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ

ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ➤ ಡಿಪ್ಲೊಮಾ ಆಫ್-ಲೈನ್ ಮುಖಾಂತರ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು ವಿಭಾಗದ ಕೇಂದ್ರಿಯ ಮರಗಳ ಸಂಗ್ರಹಾಲಯ ➤ ಇ-ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.9.ಮಂಗಳೂರು ವಿಭಾಗದ ಕೇಂದ್ರಿಯ ಮರಗಳ ಸಂಗ್ರಹಾಲಯ ಸುಳ್ಯ, ನೆಟ್ಟಣ, ಮಣ್ಣಗುಂಡಿಯಲ್ಲಿ ದಾಸ್ತಾನು ಇರುವ ಅರಣ್ಯ ಉತ್ಪನ್ನಗಳನ್ನು ಜುಲೈ 20 ರಂದು ಇ-ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.mstcecommerce.com ನ್ನು ಸಂಪರ್ಕಿಸಬೇಕು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ವಿಭಾಗ ಇವರ ಪ್ರಕಟಣೆ ತಿಳಿಸಿದೆ.

ಮಂಗಳೂರು ವಿಭಾಗದ ಕೇಂದ್ರಿಯ ಮರಗಳ ಸಂಗ್ರಹಾಲಯ ➤ ಇ-ಹರಾಜು Read More »

ಕರಾವಳಿ

ಜಿಲ್ಲಾ ಮಟ್ಟದ ವಾರ್ಷಿಕ ಮಹಾಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.9.ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ವಾಹನ ಚಾಲಕರ ಕೇಂದ್ರ ಸಂಘ ಮಂಗಳೂರು ಇದರ ಜಿಲ್ಲಾ ಮಟ್ಟದ ವಾರ್ಷಿಕ ಮಹಾಸಭೆ ಹಾಗೂ ಸರಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಸರಕಾರಿ ವಾಹನ ಚಾಲಕರಿಗೆ ಸನ್ಮಾನ ಸಮಾರಂಭವು ಸಂಘದ ಆದ್ಯಕ್ಷ ಅರುಣಕಾಂತ್ ಅವರ ಅಧ್ಯಕ್ಷತೆಯಲ್ಲಿ ಜೂನ್ 7 ರಂದು ಸಂಘದ ಕಚೇರಿಯಲ್ಲಿ ನಡೆಯಿತು. ಸಂಘದ ಕಾರ್ಯದರ್ಶಿ ಕೆ ಬಾಲಕೃಷ್ಣ ಹಿಂದಿನ ಸಭೆಯ ನಡಾವಳಿಯನ್ನು ಮಂಡಿಸಿದರು. ಉಪಾಧ್ಯಕ್ಷ ಪೌಲ್ ಡಿಸೋಜ ಲೆಕ್ಕಪತ್ರಗಳನ್ನು ಮಂಡಿಸಿದರು.ಸಂಘದ ಮಾಜಿ ಅಧ್ಯಕ್ಷ ಬಿ

ಜಿಲ್ಲಾ ಮಟ್ಟದ ವಾರ್ಷಿಕ ಮಹಾಸಭೆ Read More »

ಕರಾವಳಿ
Scroll to Top