ಕಡಬ ನ್ಯೂಸ್

ಕೈಮಗ್ಗದ ಉಡುಪಿ ಸೀರೆಗಳಿಗೆ ಮತ್ತೆ ಬೇಡಿಕೆ ಸೃಷ್ಟಿ

(ನ್ಯೂಸ್ ಕಡಬ) newskadaba.com ಉಡುಪಿ, ಜುಲೈ.3.ತೆರೆಮರೆಗೆ ಸರಿದಿದ್ದ ಉಡುಪಿ ಕೈಮಗ್ಗ ಉದ್ಯಮ ಮತ್ತೆ ಚಿಗುರಿದ್ದು, ಇಲ್ಲಿನ ಸೀರೆಗಳಿಗೆ ಮತ್ತೆ ಬೇಡಿಕೆ ಸೃಷ್ಟಿಯಾಗತೊಡಗಿದೆ. ಪ್ರಸ್ತುತ ಕಾರ್ಕಳದ ಕದಿಕೆ ಟ್ರಸ್ಟ್‌ ಹಾಗೂ ಸಾಗರದ ಚರಕ ಗ್ರಾಮೋದ್ಯೋಗ ಸಂಸ್ಥೆ ಜತೆಯಾಗಿ ಜಿಐ ಮಾನ್ಯತೆಯ ನೈಸರ್ಗಿಕ ಬಣ್ಣದ ಉಡುಪಿ ಸೀರೆಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಮೂಲಕ ಹೊಸ ಬಗೆಯ ಅವಕಾಶಕ್ಕೆ ತೆರೆದುಕೊಳ್ಳುತ್ತಿದೆ.ನೈಸರ್ಗಿಕ ಬಣ್ಣದ ಕೈಮಗ್ಗ ಸೀರೆಗಳು ಎಲ್ಲಾ ಕಾಲಕ್ಕೂ ಹೊಂದಿಕೊಳ್ಳುವುದರಿಂದ ಹಾಗೂ ಚರ್ಮಕ್ಕೆ ಹಾನಿಕಾರಕವಲ್ಲ. ಇದರಿಂದಾಗಿ ಯುವಜನತೆ ಸೀರೆ ಖರೀದಿಯಲ್ಲಿ ಆಸಕ್ತಿ ತೋರುತ್ತಿದ್ದಾರೆ. ತಾಳಿಪಾಡಿ […]

ಕೈಮಗ್ಗದ ಉಡುಪಿ ಸೀರೆಗಳಿಗೆ ಮತ್ತೆ ಬೇಡಿಕೆ ಸೃಷ್ಟಿ Read More »

ಕರಾವಳಿ

ಗ್ಯಾಸ್ ಟ್ಯಾಂಕರ್ ಪಲ್ಟಿ

(ನ್ಯೂಸ್ ಕಡಬ) newskadaba.com ಉಡುಪಿ, ಜುಲೈ.3.ಗ್ಯಾಸ್‌ಟ್ಯಾಂಕರ್‌ ಒಂದು ಮಂಗಳೂರಿನಿಂದ ಕಾರವಾರದತ್ತ ತೆರಳುತ್ತಿದ್ದ ವೇಳೆ  ಪಲ್ಟಿಯಾಗಿದ್ದು, ಆತಂಕಕ್ಕೆ ಕಾರಣವಾಯಿತು. ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66 ರ ಬಲಾಯಿಪಾದೆ ಎಂಬಲ್ಲಿ ಈ ಘಟನೆ ನಡೆದಿದೆ. ಮೊದಲಿಗೆ ಹೆದ್ದಾರಿಯಲ್ಲಿ ಸಂಚಾರವನ್ನು ತಡೆಯಲಾಗಿದ್ದು , ಗ್ಯಾಸ್‌ ಲೀಕ್‌ ಆಗುತ್ತಿಲ್ಲ ಎನ್ನುವುದು ಖಚಿತವಾದ ಬಳಿಕ ಇನ್ನೊಂದು ಬದಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಯಿತು.ಅಗ್ನಿ ಶಾಮಕದಳ ಮತ್ತು ಪೊಲೀಸರು ಸ್ಥಳಕ್ಕಾಗಮಿಸಿ ಗ್ಯಾಸ್‌ ಟ್ಯಾಂಕರ್‌ ತೆರವುಗೊಳಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಉದ್ಯಾವರ ಬಂಕ್‌ನಲ್ಲಿ ಡಿಸೇಲ್‌ ತುಂಬಿಸಿ ಹೋದ ಚಾಲಕ

ಗ್ಯಾಸ್ ಟ್ಯಾಂಕರ್ ಪಲ್ಟಿ Read More »

ಕರಾವಳಿ

ಅಂಧ ಅಭ್ಯರ್ಥಿಗಳ ಷರತ್ತು ರದ್ದು

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ರೈಲ್ವೆ ಇಲಾಖೆ ಮತ್ತು ಎಲ್.ಐ.ಸಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿತ್ತು. ಅದರಲ್ಲಿ ಅಂಧ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ನೀಡುವ ಬರಹಗಾರರ ಸೇವೆಯನ್ನು ಪಡೆಯಲು ವಿಧಿಸಿದ್ದ ಷರತ್ತುಗಳನ್ನು ರದ್ದುಗೊಳಿಸಲಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ದ.ಕ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಅಂಧ ಅಭ್ಯರ್ಥಿಗಳ ಷರತ್ತು ರದ್ದು Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣ ➤ ಜುಲೈ 11 – ಪ್ರಗತಿ ಪರಿಶೀಲನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ 2019ನೇ ಸಾಲಿನ ಜೂನ್ ತಿಂಗಳ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ  ಸಭೆ ಜುಲೈ 11 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣ ➤ ಜುಲೈ 11 – ಪ್ರಗತಿ ಪರಿಶೀಲನಾ ಸಭೆ Read More »

ಕರಾವಳಿ

ಆದಿವಾಸಿ ಕೊರಗ ಜನಾಂಗದ ಅಭಿವೃದ್ಧಿ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.2019-20ನೇ ಸಾಲಿನಲ್ಲಿ ತಾಲೂಕು ಮಟ್ಟದ ಆದಿವಾಸಿ ಕೊರಗ ಜನಾಂಗದ ಅಭಿವೃದ್ಧಿ ಸಮಿತಿ ಸಭೆ ಬಂಟ್ವಾಳ ತಾಲೂಕು ಪಂಚಾಯತ್ ನ ಕಾರ್ಯ ನಿರ್ವಾಹಣಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಜುಲೈ 3 ರಂದು ಅಪರಾಹ್ನ 3 ಗಂಟೆಗೆ ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿದೆ.ತಮ್ಮ ಸಲಹೆ ಸೂಚನೆಗಳನ್ನು ಮತ್ತು ಅಹವಾಲುಗಳನ್ನು ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಬಿ.ಸಿ ರೋಡ್, ಬಂಟ್ವಾಳ ತಾಲೂಕು ಇಲ್ಲಿಗೆ ಮುಂಚಿತವಾಗಿ ನೀಡುವಂತೆ ಪ್ರಕಟಣೆ ತಿಳಿಸಿದೆ.

ಆದಿವಾಸಿ ಕೊರಗ ಜನಾಂಗದ ಅಭಿವೃದ್ಧಿ ಸಮಿತಿ ಸಭೆ Read More »

ಕರಾವಳಿ

ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್ ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ➤ ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್ ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇಲ್ಲಿನ ಜುಲೈ -2019 ನೇ ಸಾಲಿನಲ್ಲಿ ನಡೆಸಲ್ಪಡುವ ನೇತ್ರ ಪರೀಕ್ಷಾ ಶಿಬಿರಗಳು ಇಂತಿವೆ. ಜುಲೈ 9 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಖೆ, ಕುಕ್ಕೇರಿ ಮಾದೇವಿ, ನೆಲ್ಯಾಡಿ ಗ್ರಾಮ ಜುಲೈ 23 ರಂದು ಕರಪಾಡಿ, ಬಂಟ್ವಾಳ ತಾಲೂಕು. ಸಾರ್ವಜನಿಕರು ಶಿಬಿರದ ಸದುಪಯೋಗವನ್ನು ಪಡೆಯಲು ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರು, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್ ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ➤ ನೇತ್ರ ಪರೀಕ್ಷಾ ಶಿಬಿರ Read More »

ಕರಾವಳಿ

ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3. ಬಂಟ್ವಾಳ ತಾಲೂಕು ಪಂಚಾಯತ್‍ನ 2019-20 ನೇ ಸಾಲಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷಾ ಸಭೆಯು ನಡೆಯಲಿದೆ. ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ ಅವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಜುಲೈ 9 ರಂದು ಪೂರ್ವಾಹ್ನ 10.30 ಗಂಟೆಗೆ ಸಭೆಯನ್ನು ಆಯೋಜಿಸಲಾಗಿದೆ.

ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷಾ ಸಭೆ Read More »

ಕರಾವಳಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತೀ ವರ್ಷ ರೂ 6000 ಗಳನ್ನು ಪ್ರತೀ ನಾಲ್ಕು ತಿಂಗಳಿಗೊಮ್ಮೆಯಂತೆ ಒಟ್ಟು ಮೂರು ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಲ್ಲಿಯವರೆಗೆ 2,08,918 ಒಟ್ಟು ಸಂಖ್ಯೆಯ ರೈತರಿಗೆ 1,05,780 ರೈತರನ್ನು ನೋಂದಾಯಿಸಲಾಗಿದ್ದು ಶೇಕಡಾ 50.63 ರಷ್ಟು ಪ್ರಗತಿಯಾಗಿರುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 1,00,000 ರಷ್ಟು ರೈತರು

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ Read More »

ಕರಾವಳಿ

ಯಕ್ಷಗಾನವನ್ನು ಪ್ರೀತಿಸಿ, ಅದರ ಉಳಿವಿಗೆ ತಮ್ಮ ಜೀವನವನ್ನೆ ಮುಡಿಪಾಗಿಟ್ಟು ಶ್ರಮಿಸಿದ ➤ಹಿರಿಯರ ನೆನಪು ಸಂಸ್ಕರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಯಕ್ಷಗಾನವನ್ನು ಪ್ರೀತಿಸಿ, ಅದರ ಉಳಿವು ಬೆಳವಿಗೆ ತಮ್ಮ ಜೀವನವನ್ನೆ ಮುಡಿಪಾಗಿಟ್ಟು, ಶ್ರಮಿಸಿದ ಹಾಗೂ ಸೀಮಿತ ಪ್ರದೇಶದಲ್ಲಿ ಮಾತ್ರ ಪರಿಚಯಗೊಂಡ ಹಿರಿಯ ಕಲಾವಿದರನ್ನು ಹಾಗೂ ಯಕ್ಷಗಾನಕ್ಕೆ ಅವರು ನೀಡಿರುವ ಕೊಡುಗೆಗಳನ್ನು ಸ್ಮರಿಸಿಕೊಳ್ಳುವ ನಿಟ್ಟಿನಲ್ಲಿ ಹಿರಿಯರ ನೆನಪು ಶೀರ್ಷಿಕೆಯ ಹಿರಿಯ ಕಲಾವಿದರ ಸಂಸ್ಮರಣಾ ಕಾರ್ಯಕ್ರಮವನ್ನು ನಡೆಸುವ ವಿಭಿನ್ನ ಯೋಜನೆಯೊಂದನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಕಾರ್ಯಕ್ರಮ ನಡೆಸಲು ಸಂಸ್ಥೆಗೆ ರೂ 10,000 ಗಳನ್ನು ನೀಡಲಾಗುವುದು. ಹೆಚ್ಚಿನ ವೆಚ್ಚಗಳನ್ನು ಸಂಸ್ಥೆಯವರೇ ವಹಿಸಿಕೊಳ್ಳಬೇಕು. ಒಂದು ಕಾರ್ಯಕ್ರಮದಲ್ಲಿ ಹಲವರು

ಯಕ್ಷಗಾನವನ್ನು ಪ್ರೀತಿಸಿ, ಅದರ ಉಳಿವಿಗೆ ತಮ್ಮ ಜೀವನವನ್ನೆ ಮುಡಿಪಾಗಿಟ್ಟು ಶ್ರಮಿಸಿದ ➤ಹಿರಿಯರ ನೆನಪು ಸಂಸ್ಕರಣಾ ಕಾರ್ಯಕ್ರಮ Read More »

ಕರಾವಳಿ

ಉದರ ದರ್ಶಕ ಶಸ್ತ್ರಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2019ನೇ ಜುಲೈ ಮಾಹೆಯಲ್ಲಿ ನಡೆಯಲಿರುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರಗಳು ಇಂತಿವೆ: ಜುಲೈ 5 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಜುಲೈ 9 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ಜುಲೈ 10 ರಂದು ಸರ್ಕಾರಿ ಆರೋಗ್ಯ ಕೇಂದ್ರ ಕಡಬ, ಜುಲೈ 12 ರಂದು ತಾಲೂಕು ಆಸ್ಪತ್ರೆ ಬಂಟ್ವಾಳ, ಜುಲೈ 15 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ನಾಟೆಕಲ್, ಜುಲೈ 16 ರಂದು ತಾಲೂಕು

ಉದರ ದರ್ಶಕ ಶಸ್ತ್ರಚಿಕಿತ್ಸಾ ಶಿಬಿರ Read More »

ಕರಾವಳಿ
Scroll to Top