ಕಡಬ ನ್ಯೂಸ್

ಮಂಗಳೂರು ವಿಶ್ವವಿದ್ಯಾನಿಲಯ ದೂರಶಿಕ್ಷಣ ಕೋರ್ಸುಗಳಿಗೆ ಪ್ರವೇಶಾತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.2.ಮಂಗಳೂರು ವಿಶ್ವವಿದ್ಯಾನಿಲಯದ ದೂರ ಶಿಕ್ಷಣ ಕೇಂದ್ರದ 2019-20ನೇ ಸಾಲಿನ ಬಿ.ಎ., ಬಿ.ಕಾಂ., ಬಿ.ಬಿ.ಎ. ಮತ್ತು ಎಂ.ಎ., ಎಂ.ಕಾಂ., ಎಂ.ಬಿ.ಎ.(ಟೂರಿಸಂ) ಕೋರ್ಸುಗಳಿಗೆ ಪ್ರವೇಶಾತಿ ಜುಲೈ 1 ರಿಂದ ಆರಂಭಗೊಂಡು ಆಗಸ್ಟ್ 31, 2019 ಕೊನೆಯ ದಿನಾಂಕವಾಗಿರುತ್ತದೆ. ಯಾವುದೇ ವೃತ್ತಿಯಲ್ಲಿ ಅಥವಾ ಮನೆಯಲ್ಲಿದ್ದುಕೊಂಡು ವಿದ್ಯಾಭ್ಯಾಸವನ್ನು ಮುಂದುವರಿಸಲಿರುವವರಿಗೆ ಈ ಕೋರ್ಸುಗಳು ಅನುಕೂಲಕರವಾಗುತ್ತದೆ.ಮಂಗಳೂರು ವಿಶ್ವವಿದ್ಯಾನಿಲಯ ದೂರಶಿಕ್ಷಣ ಕೋರ್ಸುಗಳಿಗೆ ಪ್ರವೇಶಾತಿ ಪಡೆಯಲಿಚ್ಚಿಸುವ ಅರ್ಹ ಅಭ್ಯರ್ಥಿಗಳು ಸರಕಾರಿ ಪ್ರಥಮ ದರ್ಜೆ ಕಾಲೇಜು, ತೆಂಕನಿಡಿಯೂರು, ಉಡುಪಿ, ಎಫ್.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ, […]

ಮಂಗಳೂರು ವಿಶ್ವವಿದ್ಯಾನಿಲಯ ದೂರಶಿಕ್ಷಣ ಕೋರ್ಸುಗಳಿಗೆ ಪ್ರವೇಶಾತಿ Read More »

ಕರಾವಳಿ

“ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM-KISAN)”

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.2.ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM-KISAN)” ಯೋಜನೆಯು ರೈತ ಸಮುದಾಯಕ್ಕೆ ಉಪಯುಕ್ತವಾದ ಯೋಜನೆಯಾಗಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಘೋಷಣೆಯನ್ನು ಸಲ್ಲಿಸಿ, ಸದರಿ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ. ಮೂರು ಕಂತುಗಳಲ್ಲಿ ರೂ.2000/-ದಂತೆ ಒಟ್ಟು ರೂ.6000/- ರೈತರ ಖಾತೆಗೆ ಜಮೆ. ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ, ರೇಷ್ಮೆ ಇಲಾಖೆ, ತೋಟಗಾರಿಕೆ ಇಲಾಖೆ, ಅಟಲ್ ಸೇವಾ ಕೇಂದ್ರ, ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೊಂದಣಿ ಮಾಡಿಕೊಳ್ಳುವುದು. ಅನರ್ಹ ರೈತರು – ಮಂತ್ರಿ/ರಾಜ್ಯದ ಮಂತ್ರಿಸ್ಥಾನ/ಲೋಕಸಭಾ ಸದಸ್ಯತ್ವ/ರಾಜ್ಯಸಭೆ/ರಾಜ್ಯ ಶಾಸಕಾಂಗ

“ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM-KISAN)” Read More »

ಕರಾವಳಿ

ಉಚಿತ ಪರೀಕ್ಷಾ ಪೂರ್ವ ತರಬೇತಿ ➤ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.2.ಐ.ಎ.ಎಸ್., ಕೆ.ಎ.ಎಸ್. ಮತ್ತು ಬ್ಯಾಂಕಿಂಗ್ ಪ್ರೊಬೇಷನರಿ ಆಫೀಸರ್ಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ  ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2019-20ನೇ ಸಾಲಿನಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು, ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 12 ಆಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ www.backwardclasses.kar.nic.in ನ್ನು ಹಾಗೂ

ಉಚಿತ ಪರೀಕ್ಷಾ ಪೂರ್ವ ತರಬೇತಿ ➤ ಅರ್ಜಿ ಆಹ್ವಾನ Read More »

ಕರಾವಳಿ

ಕೃಷಿ ವಿಜ್ಞಾನ ಕೇಂದ್ರದಲ್ಲಿ ಭತ್ತದ ಬೀಜ ಮಾರಾಟಕ್ಕೆ ಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.2.ಬೀದರ್ ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಭತ್ತದ ಬೀಜ ಮಾರಾಟಕ್ಕಿದೆ. ಕೃಷಿ ವಿಜ್ಞಾನ ಕೇಂದ್ರದ ಪ್ರಧಾನ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ. ಎ.ಟಿ. ರಾಮಚಂದ್ರ ನಾಯ್ಕ ರವರು ಕೇಂದ್ರದಲ್ಲಿ ಉತ್ಪಾದಿಸಿದ ಎಂ.ಒ.-4 ತಳಿಯ ಭತ್ತದ ಬೀಜ ಮಾರಾಟಕ್ಕೆ ಲಭ್ಯತೆ ಇದೆ ಎಂದು ಹೇಳಿದ್ದಾರೆ.ಮಾರಾಟದ ಜೊತೆಗೆ ಈ ತಳಿಯ ವೈಜ್ಞಾನಿಕ ಕೃಷಿ ಮಾಡುವ ಪದ್ದತಿಯನ್ನು ತಿಳಿಸಿಕೊಡಲು

ಕೃಷಿ ವಿಜ್ಞಾನ ಕೇಂದ್ರದಲ್ಲಿ ಭತ್ತದ ಬೀಜ ಮಾರಾಟಕ್ಕೆ ಲಭ್ಯ Read More »

ಕರಾವಳಿ

ಅಪರಾದ ಚಟುವಟಿಕೆಗಳ ಮೇಲೆ ನಿಗಾ ➤ ನಗರಾಭಿವೃದ್ಧಿ ಸಚಿವ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.2.ಜಿಲ್ಲೆಯಲ್ಲಿ ನಡೆಯುವ ಮಾದಕ ವಸ್ತುಗಳ ಚಟುವಟಿಕೆ, ಅಕ್ರಮ ಗೋ ಸಾಗಾಟ ಸೇರಿದಂತೆ ಅಪರಾದ ಚಟುಚಟಿಕೆಗಳ ಮೇಲೆ ಗಂಭೀರವಾಗಿ ನಿಗಾ ಇಟ್ಟು ಅಪರಾಧಿಗಳ ಮೇಲೆ ಕೂಡ ನಿಗಾ ಇಡುವಂತೆ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಬಗ್ಗೆ ಜಿಲ್ಲೆಯ ಶಾಸಕರೊಂದಿಗೆ ಹಾಗೂ ಪೊಲೀಸು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜನತೆಯಲ್ಲಿ ವಿಶ್ವಾಸ ಮೂಡಿಸುವ ಕೆಲಸಗಳು ತುರ್ತಾಗಿ

ಅಪರಾದ ಚಟುವಟಿಕೆಗಳ ಮೇಲೆ ನಿಗಾ ➤ ನಗರಾಭಿವೃದ್ಧಿ ಸಚಿವ ಸೂಚನೆ Read More »

ಕರಾವಳಿ

ನಿರ್ಧಿಷ್ಟ ಸಮಯದಲ್ಲಿ ರೈತರಿಗೆ ಸವಲತ್ತುಗಳು ದೊರಕಲಿ ➤ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.2.ಸರಕಾರದಿಂದ ರೈತರಿಗೆ ವಿವಿಧ ರೀತಿಯ ಸೌಲಭ್ಯ ದೊರಕುತ್ತಿದೆ. ರೈತರು ಸವಲತ್ತು ಪಡೆಯಲು ಬರುವ ಸಂಧರ್ಭದಲ್ಲಿ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸ್ಪಂಧಿಸಿ ನಿರ್ದಿಷ್ಟ ಸಮಯದಲ್ಲಿ ರೈತರಿಗೆ ಸವಲತ್ತು ದೊರಕುವಂತೆ ಸಹಕರಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸೂಚಿಸಿದರು. ಇಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಇವರ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನ, ಮಂಗಳೂರು ಇಲ್ಲಿ ನಡೆದ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಸಮಗ್ರ ಕೃಷಿ

ನಿರ್ಧಿಷ್ಟ ಸಮಯದಲ್ಲಿ ರೈತರಿಗೆ ಸವಲತ್ತುಗಳು ದೊರಕಲಿ ➤ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ Read More »

ಕರಾವಳಿ

“ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ”ಸ್ವಸ್ತ ಸಮಾಜಕ್ಕಾಗಿ ➤ ಯು.ಟಿ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.2.“ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ” ಸ್ವಸ್ತ ಸಮಾಜಕ್ಕಾಗಿ ಜನರಿಗೆ ತುರ್ತು ಚಿಕಿತ್ಸೆ ನೀಡುವ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅನುದಾನದ ಕೊಡುಗೆಯೊಂದಿಗೆ ಈ ಯೋಜನೆ ಸಾರ್ವಜನಿಕರಿಗೆ ಲಭ್ಯವಾಗುತ್ತಿದೆ. ಈ ಯೋಜನೆಯು ಪ್ರಾರ್ಥಮಿಕ, ಸಾಮಾನ್ಯ ದ್ವಿತೀಯ, ಸಂಕೀರ್ಣ ದ್ವಿತೀಯ, ತೃತೀಯ ಹಾಗೂ ತುರ್ತು ಹಂತದ ಚಿಕಿತ್ಸೆಗಳನ್ನು ಒದಗಿಸಲಾಗುತ್ತಿದೆ. ಬಿಪಿಎಲ್ ಕಾರ್ಡು ಹೊಂದಿರುವವರಿಗೆ ವಾರ್ಷಿಕ ರೂ. 5 ಲಕ್ಷ ಹಾಗೂ ಎಪಿಎಲ್ ಕಾರ್ಡು ಹೊಂದಿದವರಿಗೆ ವಾರ್ಷಿಕ ಮಿತಿ ರೂ. 1.50 ಲಕ್ಷ ಇರುತ್ತದೆ. ಎಂದು

“ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ”ಸ್ವಸ್ತ ಸಮಾಜಕ್ಕಾಗಿ ➤ ಯು.ಟಿ ಖಾದರ್ Read More »

ಕರಾವಳಿ

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಲ್ಲದೆ ಪರದಾಡುತ್ತಿರುವ ಗಡಿ ಗ್ರಾಮಗಳು

(ನ್ಯೂಸ್ ಕಡಬ) newskadaba.com ಜಾಲ್ಸೂರು, ಜುಲೈ.1. ಈ ಗ್ರಾಮದಲ್ಲಿ ಪ್ರಾಥಮಿಕ ಅರೋಗ್ಯ ಕೇಂದ್ರ ತೆರೆಯಬೇಕೆನ್ನುವ ಕೂಗು 15 ವರ್ಷಗಳಿಂದ ಇದ್ದರೂ ಜನರ ಬೇಡಿಕೆ ಇನ್ನೂ ಈಡೇರಿಲ್ಲ.ಮೈಸೂರು-ಮಾಣಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಜಾಲ್ಸೂರು ಗ್ರಾಮದಲ್ಲಿ ಸುಮಾರು 1,352 ಮನೆಗಳಿವೆ. 2011ರ ಜನಗಣತಿ ಪ್ರಕಾರ ಗ್ರಾಮದಲ್ಲಿ ಒಟ್ಟು 6,642 ಜನಸಂಖ್ಯೆ ಇದೆ.ಕೇರಳ- ಕರ್ನಾಟಕ ಗಡಿಭಾಗದ ಊರುಗಳ ಪ್ರಮುಖ ಪೇಟೆ ಜಾಲ್ಸೂರು. ಸರಕಾರಿ ಶಾಲೆ, ಬ್ಯಾಂಕ್‌, ಪೆಟ್ರೋಲ್ ಬಂಕ್‌, ಫ್ಯಾಕ್ಟರಿಗಳು ಎಲ್ಲವೂ ಇಲ್ಲಿವೆ. ಗ್ರಾಮದ ಮುಖ್ಯ ಪೇಟೆಯಾಗಿ ಬೆಳೆಯುತ್ತಿರುವ ಜಾಲ್ಸೂರಲ್ಲಿ ಪ್ರಾಥಮಿಕ ಆರೋಗ್ಯ

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಲ್ಲದೆ ಪರದಾಡುತ್ತಿರುವ ಗಡಿ ಗ್ರಾಮಗಳು Read More »

ಕರ್ನಾಟಕ

ಸಾರಥಿ ಇಲ್ಲದ ಜೆಡಿಎಸ್ ಮಹಿಳಾ ಘಟಕಕ್ಕೆ ➤ ರಾಜ್ಯಾಧ್ಯಕ್ಷರಾಗಿ ಲೀಲಾದೇವಿ ಆರ್.ಪ್ರಸಾದ್ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.1.ಮಹಿಳಾ ಘಟಕಕ್ಕೆ ಸಾರಥಿ ಇಲ್ಲದೆ 2018ರ ವಿಧಾನಸಭೆ, 2019ರ ಲೋಕಸಭೆ ಚುನಾವಣೆಯ ರಥವನ್ನು ಜೆಡಿಎಸ್ ಎಳೆದದ್ದು ಇತಿಹಾಸ. ಸುಮಾರು 18 ತಿಂಗಳ ತರುವಾಯ ಜೆಡಿಎಸ್ ಮಹಿಳಾ ಘಟಕಕ್ಕೆ ಸಾರಥಿ ನೇಮಕ ಮಾಡಲಾಗಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಹೆಚ್ಚು ಮೀಸಲಾತಿ ಕಲ್ಪಿಸಿಕೊಟ್ಟ ಜೆಡಿಎಸ್ ಮಹಿಳಾ ಘಟಕಕ್ಕೆ 18 ತಿಂಗಳಿಂದ ಅಧ್ಯಕ್ಷರೇ ಇರಲಿಲ್ಲ. ಮಧ್ಯಂತರ ಚುನಾವಣೆ ಗುಮ್ಮಹರಿಬಿಟ್ಟ ದೇವೇಗೌಡರು ಈಗ ರಾಜಕೀಯ ಚಟುವಟಿಕೆಯ ಕೇಂದ್ರ ಬಿಂದುವಾಗಿದ್ದಾರೆ. ತತ್ಪರಿಣಾಮವಾಗಿ ಜೆಡಿಎಸ್ ಎಲ್ಲ ಘಟಕಗಳನ್ನು ಪುನಾರಚಿಸುತ್ತಿದ್ದು. ಒಂದೂವರೆ

ಸಾರಥಿ ಇಲ್ಲದ ಜೆಡಿಎಸ್ ಮಹಿಳಾ ಘಟಕಕ್ಕೆ ➤ ರಾಜ್ಯಾಧ್ಯಕ್ಷರಾಗಿ ಲೀಲಾದೇವಿ ಆರ್.ಪ್ರಸಾದ್ ಆಯ್ಕೆ Read More »

ಕರ್ನಾಟಕ

ನಿಗಮ-ಮಂಡಳಿ ಸ್ಥಾನ ಕೊಡಿ ಎಂದು ಕಾರ್ಯಕರ್ತರ ಒತ್ತಾಯ ➤ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ತಬ್ಬಿಬ್ಬು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.1.ಭಾನುವಾರ ಜೆ.ಪಿ ಭವನದಲ್ಲಿ ನಡೆದ ಬೆಂಗಳೂರು ನಗರ ಜೆಡಿಎಸ್ ಪದಾಧಿಕಾರಿಗಳ ಸಭೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರ ಎದುರೇ ಆಕ್ರೋಶ ಹೊರಹಾಕಿದ ಕಾರ್ಯಕರ್ತರು, ಸರ್ಕಾರ ಬಂದು ವರ್ಷವಾಗಿದೆ. ನಿಗಮ-ಮಂಡಳಿ ಸ್ಥಾನ ಏಕೆ ಭರ್ತಿ ಮಾಡಿಲ್ಲ? ಶಾಸಕರಿಗೆ ನಿಗಮ-ಮಂಡಳಿ ಕೊಡುತ್ತಿದ್ದೀರಿ. ನಾವು ಪಕ್ಷಕ್ಕೆ ದುಡಿದಿಲ್ಲವೇ? ನಮಗೂ ನಿಗಮ-ಮಂಡಳಿ ಸ್ಥಾನ ಕೊಡಿ ಎಂದು ಕೆಲವರು ಒತ್ತಾಯಿಸಿದ್ದಕ್ಕೆ ದೇವೇಗೌಡರು ಒಂದು ಕ್ಷಣ ತಬ್ಬಿಬ್ಬಾದರು. ಕಾರ್ಯಕರ್ತರ ಆಕ್ರೋಶಕ್ಕೆ ಉತ್ತರಿಸಲಾಗದೆ ಸುಮ್ಮನೆ ಕುಳಿತರು. ಕೊನೆಗೆ ಪದಾಧಿಕಾರಿಗಳು ಹಾಗೂ

ನಿಗಮ-ಮಂಡಳಿ ಸ್ಥಾನ ಕೊಡಿ ಎಂದು ಕಾರ್ಯಕರ್ತರ ಒತ್ತಾಯ ➤ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ತಬ್ಬಿಬ್ಬು Read More »

ಕರ್ನಾಟಕ
Scroll to Top