ಕಡಬ ನ್ಯೂಸ್

➤ ಉಡುಪಿ ಕ್ಯಾಂಪಸ್‌ನಲ್ಲಿ ಹೆಚ್ಚುತ್ತಿರುವ ಮಾದಕ ವ್ಯಸನ ಪ್ರಕರೆಣ

(ನ್ಯೂಸ್ ಕಡಬ) newskadaba.com. ಮಡಿಕೇರಿ ಫೆ.23. ಜಿಲ್ಲೆಯ ಮಡಿಕೇರಿ ಯೋಜನೆಯ 3 ಅಂಗನವಾಡಿ ಕಾರ್ಯಕರ್ತೆ ಹಾಗೂ 4 ಅಂಗನವಾಡಿ ಸಹಾಯಕಿಯರು, ಸೋಮವಾರಪೇಟೆ ಯೋಜನೆಯ 3 ಅಂಗನವಾಡಿ ಕಾರ್ಯಕರ್ತೆಯರು,  12 ಅಂಗನವಾಡಿ ಸಹಾಯಕಿಯರು ಮತ್ತು ಪೊನ್ನಂಪೇಟೆ ಯೋಜನೆಯ 11 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 22 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿಮಾಡಲು ಭೌತಿಕವಾಗಿ (ಅಪ್ ಲೈನ್) ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 24 ಕೊನೆ ದಿನವಾಗಿದೆ. ಕಾರ್ಯಕರ್ತೆ ಹುದ್ದೆಗೆ ಪಿಯುಸಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ ಎಸ್ಸೆಸ್ಸೆಲ್ಸಿ […]

➤ ಉಡುಪಿ ಕ್ಯಾಂಪಸ್‌ನಲ್ಲಿ ಹೆಚ್ಚುತ್ತಿರುವ ಮಾದಕ ವ್ಯಸನ ಪ್ರಕರೆಣ Read More »

ಕರ್ನಾಟಕ

ವಿಟ್ಲ ಅಕ್ರಮ ಜಾನುವಾರು ಸಾಗಾಟದ ಕಾರು ಪಲ್ಟಿ ➤ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com. ವಿಟ್ಲ. ಫೆ.23. ವಿಟ್ಲದ ಕಂಬಳಬೆಟ್ಟು ಮಸೀದಿ ಬಳಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ, ವೇಳೆ ಕಾರೊಂದು ಪಲ್ಟಿಯಾದ ಘಟನೆ ಇಂದು ನಡೆದಿದೆ. ಕಾರೊಂದರಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದು, ಈ ವೇಳೆ ಕಾರು ಪಲ್ಟಿಯಾಗಿ ಬಿದ್ದಿದೆ. ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.

ವಿಟ್ಲ ಅಕ್ರಮ ಜಾನುವಾರು ಸಾಗಾಟದ ಕಾರು ಪಲ್ಟಿ ➤ ಆರೋಪಿಗಳು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮೊರ್ಬಿ ತೂಗು ಸೇತುವೆ ದುರಂತ ತಲಾ 10 ಲಕ್ಷ ರೂ ‘ಮಧ್ಯಂತರ ಪರಿಹಾರ’ ➤ ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com. ಅಹ್ಮದಾಬಾದ್. ಫೆ.22.  ಇಡೀ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗುಜರಾತ್ ನ ಮೊರ್ಬಿ ತೂಗು ಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ದುರಂತದ ಸಂತ್ರಸ್ಥರಿಗೆ ತಲಾ 10 ಲಕ್ಷ ರೂ ಮಧ್ಯಂತರ ಪರಿಹಾರ ನೀಡುವಂತೆ ಆದೇಶಿಸಿದೆ. ಮೊರ್ಬಿ ತೂಗುಸೇತುವೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 10 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ಎರಡು ಲಕ್ಷ ರೂಪಾಯಿ ಮಧ್ಯಂತರ ಪರಿಹಾರ ನೀಡುವಂತೆ ಗಡಿಯಾರ ತಯಾರಕ ಒರೆವಾ ಗ್ರೂಪ್‌ಗೆ ಗುಜರಾತ್ ಹೈಕೋರ್ಟ್

ಮೊರ್ಬಿ ತೂಗು ಸೇತುವೆ ದುರಂತ ತಲಾ 10 ಲಕ್ಷ ರೂ ‘ಮಧ್ಯಂತರ ಪರಿಹಾರ’ ➤ ಹೈಕೋರ್ಟ್ ಆದೇಶ Read More »

ರಾಷ್ಟ್ರೀಯ ನ್ಯೂಸ್

➤ ಖ್ಯಾತ ಮಲಯಾಳಂ ನಟಿ, ನಿರೂಪಕಿ ಸುಬಿ ಸುರೇಶ್ ನಿಧನ

(ನ್ಯೂಸ್ ಕಡಬ) newskadaba.com. ಕೊಚ್ಚಿ. ಫೆ.22.  ಖ್ಯಾತ ಮಲಯಾಳಂ ಕಿರುತೆರೆ ನಟಿ ಹಾಗೂ ನಿರೂಪಕಿ ಸುಬಿ ಸುರೇಶ್ ಇಂದು ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಅವರಿಗೆ 42 ವರ್ಷ ವಯಸ್ಸಾಗಿತ್ತು.  ಅವರು ಯಕೃತ್ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಸುಬಿ ಓರ್ವ ನೃತ್ಯಗಾತಿ ಮತ್ತು ಕಾಮಿಡಿಯನ್ ಆಗಿ ವೃತ್ತಿಜೀವನ ಆರಂಭಿಸಿದ್ದರು. ಮುಂದೆ ಅವರು ಟಿವಿ ಶೋಗಳ ನಿರೂಪಕಿಯಾಗಿ ಅನೇಕ ಯಶಸ್ವಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದರು.

➤ ಖ್ಯಾತ ಮಲಯಾಳಂ ನಟಿ, ನಿರೂಪಕಿ ಸುಬಿ ಸುರೇಶ್ ನಿಧನ Read More »

ರಾಷ್ಟ್ರೀಯ ನ್ಯೂಸ್

ವಿಟ್ಲ ಆಕಸ್ಮಿಕವಾಗಿ ಲಾರಿಗೆ ಬೆಂಕಿ ➤ ಅಪಾರ ನಷ್ಟ

(ನ್ಯೂಸ್ ಕಡಬ) newskadaba.com. ವಿಟ್ಲ.  ಫೆ.21. ಸಾಲೆತ್ತೂರು ಸಮೀಪದ  ಮೆದು ಎಂಬಲ್ಲಿನ ಪೆಟ್ರೋಲ್ ಬಂಕ್ ಎದುರುಗಡೆ ನಿಲ್ಲಿಸಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿಯ ಮುಂದಿನ ಭಾಗ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅಪಾರ ನಷ್ಟ ಸಂಭವಿಸಿದೆ. ಪೆಟ್ರೋಲ್ ಬಂಕ್ ಎದುರು ಈ ಘಟನೆ ನಡೆದಿದ್ದು, ಸ್ಥಳೀಯರು ಹರಸಾಹಸಪಟ್ಟು ಬೆಂಕಿ ನಂದಿಸಿ ಹೆಚ್ಚಿನ ಅನಾಹುತವೊಂದನ್ನು ತಪ್ಪಿಸಿದ್ದಾರೆ. ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ್ದಾರೆ.

ವಿಟ್ಲ ಆಕಸ್ಮಿಕವಾಗಿ ಲಾರಿಗೆ ಬೆಂಕಿ ➤ ಅಪಾರ ನಷ್ಟ Read More »

ಕರಾವಳಿ, ಕ್ರೈಮ್ ನ್ಯೂಸ್

➤ಶಾಲೆಗೆ ಹೋಗುತ್ತಿದ್ದ 4 ವಿದ್ಯಾರ್ಥಿಗಳಿಗೆ ಕಚ್ಚಿದ ಹುಚ್ಚುನಾಯಿ!

(ನ್ಯೂಸ್ ಕಡಬ) newskadaba.com. ವಿಜಯನಗರ.  ಫೆ.21. ಮಕ್ಕಳ ಮೇಲೆ ಏಕಾಏಕಿ ಹುಚ್ಚು ನಾಯಿಯೊಂದು ದಾಳಿ ಮಾಡಿರುವ ಘಟನೆ  ನಡೆದಿದೆ. ಶಾಲೆಗೆ ಹೋಗುವ ಮಕ್ಕಳಿಗೆ ಈ ರೀತಿ ಸಂಕಷ್ಟ ಎದುರಾದರೆ ಮಕ್ಕಳನ್ನು ಶಾಲೆಗೆ  ಕಳಿಸುವುದಾದರೂ ಹೇಗೆ ಎಂದು ಪಾಲಕರು ಪ್ರಶ್ನೆ ಮಾಡುತ್ತಿದ್ದಾರೆ. ಮಕ್ಕಳ ಮೇಲೆ ಹುಚ್ಚು ನಾಯಿ ಏಕಾಏಕಿ ದಾಳಿ ಮಾಡಿರುವುದರಿಂದ ವಿದ್ಯಾರ್ಥಿಗಳಿಗೆ ತೀವ್ರ ಗಾಯವಾಗಿದ್ದು,  ಶಾಲೆಗ ಬರಲು ಹೆದರುವಂತಾಗಿದೆ.  ಬೆಂಗಳೂರಿನಲ್ಲಿ ಬೀದಿ ನಾಯಿ  ಹಾವಳಿ ಮಾತ್ರ ನಿಲ್ಲುತ್ತಿಲ್ಲ. ನಿರ್ಜನ ಪ್ರದೇಶದಲ್ಲಿ ಒಬ್ಬೊಬ್ಬರೇ ತಿರುಗಾಡುವಾಗ ದಿಢೀರ್ ಎದುರಿಗೆ ಬರುವ

➤ಶಾಲೆಗೆ ಹೋಗುತ್ತಿದ್ದ 4 ವಿದ್ಯಾರ್ಥಿಗಳಿಗೆ ಕಚ್ಚಿದ ಹುಚ್ಚುನಾಯಿ! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ವರದಕ್ಷಿಣೆ ಕೊಟ್ಟಿಲ್ಲ ಎಂದು ಮದುವೆ ನಿರಾಕರಿಸಿದ ಯುವಕ

(ನ್ಯೂಸ್ ಕಡಬ) newskadaba.com. ಹೈದರಾಬಾದ್.  ಫೆ.21.  ವಧುವಿನ ಮನೆಯವರು ವರದಕ್ಷಿಣೆಯಾಗಿ ಹಳೆಯ ಫರ್ನೀಚರ್ ಕೊಟ್ಟಿದ್ದಾರೆ ಎಂದು ಮದುಮಗ ತನ್ನ ಮದುವೆಯನ್ನೇ ಮುರಿದುಕೊಂಡ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ. ಬಸ್ ಚಾಲಕನಾಗಿರುವ ವರ, ನಡೆಯಬೇಕಿದ್ದ ಮದುವೆಗೆ ಹಾಜರಾಗಿಲ್ಲ. ವರದಕ್ಷಿಣೆಯಾಗಿ ವಧುವಿನ ಕುಟುಂಬ ನೀಡಿದ್ದ ಪೀಠೋಪಕರಣವು ತುಂಬಾ ಹಳೆಯದು ಎಂದು ಕಾರಣ ನೀಡಿ, ಮದುವೆ ದಿನವೇ ಕೈಕೊಟ್ಟಿದ್ದಾನೆ. ಇದರ ಬಳಿಕ ಮದುಮಗಳ ತಂದೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ತಾವು ಕೇಳಿದ್ದ ವಸ್ತುಗಳನ್ನು ನಾವು ಅವರಿಗೆ ನೀಡಿಲ್ಲ ಎಂದು

➤ವರದಕ್ಷಿಣೆ ಕೊಟ್ಟಿಲ್ಲ ಎಂದು ಮದುವೆ ನಿರಾಕರಿಸಿದ ಯುವಕ Read More »

ರಾಷ್ಟ್ರೀಯ ನ್ಯೂಸ್

➤ಏ.1ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ, ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.21.  ರಾಜ್ಯದಲ್ಲಿ ಏಪ್ರಿಲ್ 1 ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಎಲ್ಲಾ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಮಂಗಳವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಮಲ್ಟಿ ಆಕ್ಸೆಲ್ ಬಿಎಸ್ 4 -9600 ಸ್ಲೀಪರ್ ಬಸ್ಸುಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಮಹಿಳೆಯರಿಗೆ ಗೌರವದ ಜೊತೆಗೆ ಆರ್ಥಿಕವಾಗಿ ಸ್ವಾವಲಂಭಿಯಾಗಲು ಈ ಯೋಜನೆ ರೂಪಿಸಲಾಗಿದೆ. ಮಿನಿ

➤ಏ.1ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ, ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ Read More »

ಕರ್ನಾಟಕ

➤ 2023 ಗ್ರಾಮ ಸಹಾಯಕ, ಅಂಗನವಾಡಿ ಆಶಾ ಕಾರ್ಯಕರ್ತೆಯರ ಸಹಾಯಧನ ಹೆಚ್ಚಳ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಫೆ.17.  ಬೆಂಗಳೂರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಎರಡನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ.  ಗ್ರಾಮ ಸಹಾಯಕ  ಅಂಗನವಾಡಿ ಆಶಾ ಕಾರ್ಯಕರ್ತೆಯರ ಸಹಾಯಧನ ಹೆಚ್ಚಳ ಮಾಡುವ ಘೋಷಣೆ ಮಾಡಿದ್ದಾರೆ. ಗ್ರಾಮ ಸಹಾಯಕರ ಹುದ್ದೆಯನ್ನು ಜನಸೇವಕ ಎಂದು ಮರುನಾಮಕರಣ ಮಾಡಲಾಗಿದೆ. ಗ್ರಾಮ ಸಹಾಯಕರ ಮಾಸಿಕ ಗೌರವಧನ 13000 ರೂ ಗಳಿಂದ 14000 ರೂ ಗೆ ಹೆಚ್ಚಳ ಮಾಡಲಾಗುವುದು ಎಂದು ಘೋಷಿಸಿದರು.

➤ 2023 ಗ್ರಾಮ ಸಹಾಯಕ, ಅಂಗನವಾಡಿ ಆಶಾ ಕಾರ್ಯಕರ್ತೆಯರ ಸಹಾಯಧನ ಹೆಚ್ಚಳ Read More »

ಕರ್ನಾಟಕ

➤ ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ

ನ್ಯೂಸ್ ಕಡಬ) newskadaba.com.ಬೆಳ್ತಂಗಡಿ, ಫೆ.17.  ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆಯಾದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಾಪತ್ತೆಯಾದ ವಿದ್ಯಾರ್ಥಿನಿಯನ್ನು ದೀಕ್ಷಿತಾ(18) ಎಂದು ಗುರುತಿಸಲಾಗಿದೆ. ಈಕೆ ಹಾಸ್ಟೆಲ್ ನಲ್ಲಿ ಕಲಿಯುತ್ತಿದ್ದು, ಹಾಸ್ಟೆಲ್ ನಿಂದ ಮನೆಗೆ ಹೋದವಳು ಮನೆಗೆ ಹೋಗದೆ ನಾಪತ್ತೆಯಾಗಿದ್ದಾಳೆ. ಮಗಳು ನಾಪತ್ತೆಯಾಗಿರುವ ಬಗ್ಗೆ ಆಕೆಯ ತಂದೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಈಕೆಯ ಬಗ್ಗೆ ಯಾವುದಾದರೂ ಮಾಹಿತಿ ಸಿಕ್ಕಿದಲ್ಲಿ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

➤ ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top