ಕಡಬ ನ್ಯೂಸ್

ಅಭಿವೃದ್ಧಿಯ ಹೆಸರಿನಲ್ಲಿ ನಗರದ ಹಸಿರು ಮಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.24.ಅಭಿವೃದ್ಧಿಯ ಹೆಸರಿನಲ್ಲಿ ನಗರದಲ್ಲಿ ಮರಗಳನ್ನು ಕಡಿಯಲಾಗುತ್ತಿದ್ದು, ಮಹಾನಗರ ಪಾಲಿಕೆಯ 60 ವಾರ್ಡ್‌ಗಳ ಪೈಕಿ ಬಂದರು ಮತ್ತು ಕುದ್ರೋಳಿ ವಾರ್ಡ್‌ ಗಳಲ್ಲಿ ಅತೀ ಕಡಿಮೆ ಪ್ರಮಾಣದಲ್ಲಿ ಮರ–ಗಿಡಗಳಿವೆ.ಕುದ್ರೋಳಿ, ಬಂದರು ವಾರ್ಡ್‌ ಗಳಲ್ಲಿ ಕೇವಲ ಶೇ. 0.5ನಷ್ಟು ಪ್ರದೇಶದಲ್ಲಿ ಮಾತ್ರ ಮರ–ಗಿಡಗಳಿವೆ. ಈ ವಿಚಾರವನ್ನು ಅರಣ್ಯ ಇಲಾಖೆ ಇದೀಗ ಗಂಭೀರವಾಗಿ ಪರಿಗಣಿ ಸಿದ್ದು, ಈ ಎರಡೂ ವಾರ್ಡ್‌ ಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಸುಮಾರು 100 ಗಿಡ ನೆಡುವ ಯೋಜನೆಯನ್ನು ಹಾಕಿದೆ. ಬಂದರು ವಾರ್ಡ್‌ನಲ್ಲಿ ಸದ್ಯ […]

ಅಭಿವೃದ್ಧಿಯ ಹೆಸರಿನಲ್ಲಿ ನಗರದ ಹಸಿರು ಮಾಯ Read More »

ಕರಾವಳಿ

ಸಣ್ಣ ಮಳೆ ಬಂದರೂ ಕೃತಕ ನೆರೆ ಭೀತಿ

(ನ್ಯೂಸ್ ಕಡಬ) newskadaba.com ಸುಳ್ಯ, ಜೂನ್.24.ಮಳೆ ನೀರು ಹರಿದು ಹೋಗಲು ನಗರದ ಚರಂಡಿಗಳು ಸಿದ್ಧ್ದಗೊಳ್ಳದ ಕಾರಣ ಸಣ್ಣ ಮಳೆಗೂ ರಸ್ತೆ ತೋಡಿನಂತಾಗಿದೆ. ರವಿವಾರ ಮಧ್ಯಾಹ್ನ ಮುಕ್ಕಾಲು ತಾಸು ಸುರಿದ ಮಳೆಗೆ ರಸ್ತೆ ಮಳೆ ನೀರಿನಿಂದ ತುಂಬಿ ಹೋಗಿತ್ತು. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ನಗರದ ಮಧ್ಯದಲ್ಲೇ ಹಾದು ಹೋಗಿದೆ. ಇಲ್ಲಿ ಸಣ್ಣ ಮಳೆ ಬಂದರೂ ಕೃತಕ ನೆರೆ ಭೀತಿ ಉಂಟಾಗುತ್ತಿದೆ.ಮುಖ್ಯ ರಸ್ತೆ ಈಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವ್ಯಾಪ್ತಿಗೆ ಸೇರಿದೆ. ರಸ್ತೆ ಹಾದು ಹೋಗಿರುವ ಪ್ರದೇಶ ನ.ಪಂ. ವ್ಯಾಪ್ತಿಯೊಳಗಿದೆ.

ಸಣ್ಣ ಮಳೆ ಬಂದರೂ ಕೃತಕ ನೆರೆ ಭೀತಿ Read More »

ಕರಾವಳಿ

ಮೀರಜ್ ರೈಲು ಪುರ್ನ ಆರಂಭಕ್ಕೆ ಪ್ರಯತ್ನ➤ಸಂಸದ ನಳಿನ್ ಕುಮಾರ್

(ನ್ಯೂಸ್ ಕಡಬ) newskadaba.com ಪುತ್ತೂರು, ಜೂನ್.24.ರವಿವಾರ ಪುತ್ತೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದ ದಕ್ಷಿಣ ಕನ್ನಡ ಸಂಸದನಳಿನ್‌ಕುಮಾರ್‌ಕಟೀಲು ಅವರು, ಜಿಲ್ಲೆಯ ರೈಲ್ವೇ ಸಂಪರ್ಕ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಮಂಗಳೂರು – ಗುರುವಾಯೂರು, ಸುಬ್ರಹ್ಮಣ್ಯ – ಕೊಲ್ಲೂರು, ಮಂಗಳೂರು – ತಿರುಪತಿ ನಡುವೆ ನೂತನ ರೈಲುಗಳ ಆರಂಭಕ್ಕೆ ಸಂಬಂಧಿಸಿದ ಬೇಡಿಕೆಗಳನ್ನು ರೈಲ್ವೇ ಸಚಿವರಿಗೆ ಪ್ರಸ್ತಾವನೆ ರೂಪದಲ್ಲಿ ಸಲ್ಲಿಸಲಾಗಿದೆ ಎಂದು ಹೇಳಿದರು.ಪುತ್ತೂರು ಎಪಿಎಂಸಿ ರಸ್ತೆಯಲ್ಲಿನ ರೈಲ್ವೇ ಗೇಟ್‌ಗೆ ಪರ್ಯಾಯವಾಗಿ ತಳ ಸೇತುವೆ ನಿರ್ಮಾಣವಾಗಲಿದೆ. ವಿವೇಕಾನಂದ ಕಾಲೇಜು ರಸ್ತೆಯ ಅಗಲ ಕಿರಿದಾದ ರೈಲ್ವೇ

ಮೀರಜ್ ರೈಲು ಪುರ್ನ ಆರಂಭಕ್ಕೆ ಪ್ರಯತ್ನ➤ಸಂಸದ ನಳಿನ್ ಕುಮಾರ್ Read More »

ಕರಾವಳಿ

ಪಿಕಪ್ ಮತ್ತು ಬೈಕ್ ಡಿಕ್ಕಿ ➤ ಬೈಕ್ ಸವಾರರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜೂನ್.24.ರವಿವಾರ ದಂದು ಪೆರುವಾಯಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್‌ ಬೈಕಿಗೆ ಢಿಕ್ಕಿ ಹೊಡೆದು ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪೆರುವಾಯಿ ಜಂಕ್ಷನ್‌ ಕಡೆಯಿಂದ ಮಾಣಿಲಕ್ಕೆ ಹೋಗುತ್ತಿದ್ದ ಪಿಕಪ್‌ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಢಿಕ್ಕಿ ಹೊಡೆದ ಪರಿಣಾಮ ಮುಂದಿನಿಂದ ಬರುತ್ತಿದ್ದ ಬೈಕ್‌ ರಸ್ತೆಯ ಬದಿಯ ಚರಂಡಿಗೆ ಎಸೆಯಲ್ಪಟ್ಟಿದೆ. ಪಿಕಪ್‌ ಸ್ವಲ್ಪ ಮುಂದೆ ಸಾಗಿ ಸೇತುವೆಯ ಕಂಬಕ್ಕೆ ಢಿಕ್ಕಿಯಾಗಿದೆ. ಢಿಕ್ಕಿ ಹೊಡೆದ ರಭಸಕ್ಕೆ ಪಿಕಪ್‌ ಚಕ್ರ ಒಡೆದು

ಪಿಕಪ್ ಮತ್ತು ಬೈಕ್ ಡಿಕ್ಕಿ ➤ ಬೈಕ್ ಸವಾರರು ಗಂಭೀರ Read More »

ಕರಾವಳಿ

ಮುಂದಿನ ಚುನಾವಣೆಗೆ ಸಜ್ಜಾಗುತ್ತಿದೆಯೇ ಜೆಡಿಎಸ್ ?

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.24.ಜೆಡಿಎಸ್ ಸದ್ದಿಲ್ಲದೇ ಚುನಾವಣೆಗೆ ಸಿದ್ಧವಾಗುತ್ತಿದೆಯೇ? ಇಂಥದ್ದೊಂದು ಅನುಮಾನ ಇದೀಗ ರಾಜ್ಯ ರಾಜಕೀಯ ವಲಯದಲ್ಲಿ ಮೂಡಲಾರಂಭಿಸಿದೆ. ಈ ಬಾರಿ ಚುನಾವಣೆಗೆ ಇನ್ನು 4 ವರ್ಷವಿರುವಾಗಲೇ ಸಭೆ, ಸಮಾವೇಶ, ಜಾತಿವಾರು ಸಮಾವೇಶ ನಡೆಸುತ್ತಿದ್ದು, ರಾಜ್ಯ ರಾಜಕೀಯ ರಂಗದಲ್ಲಿ ಚರ್ಚೆಗೀಡಾಗಿದೆ.  ಹಿಂದಿನ ಎಲ್ಲ ಚುನಾವಣೆ ಗಮನಿಸಿದರೆ ಕೊನೇ ಘಳಿಗೆಯಲ್ಲೇ ತಂತ್ರ, ರಣತಂತ್ರ ರೂಪಿಸುತ್ತ ಬಂದಿದೆ. ಆದರೆ, ಜೆಡಿಎಸ್, ಚುನಾವಣೆ ಸೋಲಿನ ಕಹಿ ಅನುಭವವನ್ನು ಮರೆತು ಮುನ್ನುಗ್ಗುತ್ತಿರುವುದು ಕಾಂಗ್ರೆಸ್, ಬಿಜೆಪಿ ವಲಯದಲ್ಲಿ ಅಚ್ಚರಿ ಉಂಟು ಮಾಡಿದೆ.ನಗರ ಸ್ಥಳೀಯ

ಮುಂದಿನ ಚುನಾವಣೆಗೆ ಸಜ್ಜಾಗುತ್ತಿದೆಯೇ ಜೆಡಿಎಸ್ ? Read More »

ಕರ್ನಾಟಕ

ನವಭಾರತ ನಿರ್ಮಾಣ ಸಾಕಾರಗೊಳಿಸಲು 12 ಸಂಕಲ್ಪಗಳ ಪಟ್ಟಿ ಸಿದ್ಧ ➤ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಕೋವಿಂದ್ ಭಾಷಣ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂನ್.24.ರಾಷ್ಟ್ರಪತಿ ರಾಮನಾಥ ಕೋವಿಂದ್, ಸ್ವಾತಂತ್ರ್ಯ ಬಂದ ಅಮೃತ ಮಹೋತ್ಸವ ವೇಳೆ ನವಭಾರತ ನಿರ್ಮಾಣ ಸಾಕಾರಗೊಳಿಸಲು 12 ಸಂಕಲ್ಪಗಳ ಪಟ್ಟಿ ನೀಡಿದ್ದಾರೆ. ಈ ಮೂಲಕ ಮೋದಿ ಸರ್ಕಾರದ ಮುಂದಿನ ಐದು ವರ್ಷದ ಆಡಳಿತದ ಪಥವನ್ನು ತೆರೆದಿಟ್ಟಿದ್ದಾರೆ. ಆಡಳಿತ, ಆರ್ಥಿಕ, ಮೂಲಸೌಕರ್ಯ, ಸಾಮಾಜಿಕ ಅಭಿವೃದ್ಧಿ ಸೇರಿ ಇತರ ವಿಚಾರಗಳ ಕುರಿತು ಮೋದಿ ಸರ್ಕಾರದ ಗುರಿಯನ್ನು ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ವಿವರಿಸಿದ್ದಾರೆ. ಒಂದು ದೇಶ- ಒಂದು ಚುನಾವಣೆ, ದಿಢೀರ್ ತ್ರಿವಳಿ ತಲಾಕ್, ನಿಕಾಹ್ ಹಲಾಲ್ ನಿಷೇಧಕ್ಕೆ

ನವಭಾರತ ನಿರ್ಮಾಣ ಸಾಕಾರಗೊಳಿಸಲು 12 ಸಂಕಲ್ಪಗಳ ಪಟ್ಟಿ ಸಿದ್ಧ ➤ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಕೋವಿಂದ್ ಭಾಷಣ Read More »

ರಾಷ್ಟ್ರೀಯ ನ್ಯೂಸ್

ನಂ.1 ಸ್ಥಾನದತ್ತ ಆಸ್ಟ್ರೇಲಿಯದ ಆ್ಯಶ್ಲಿ ಬಾರ್ಟಿ

(ನ್ಯೂಸ್ ಕಡಬ) newskadaba.com ಲಂಡನ್‌, ಜೂನ್.22. ಬರ್ಮಿಂಗ್‌ಹ್ಯಾಮ್‌ನಲ್ಲಿ ಸಾಗುತ್ತಿರುವ ನೇಚರ್‌ ವ್ಯಾಲಿ ಕ್ಲಾಸಿಕ್‌ ಕೂಟದಲ್ಲಿ ಬಾರ್ಟಿ ಪ್ರಶಸ್ತಿ ಗೆದ್ದರೆ ಅಗ್ರ ಸ್ಥಾನಕ್ಕೇರಲಿದ್ದಾರೆ. ಈ ಮೂಲಕ 40ವರ್ಷಗಳ ಸುದೀರ್ಘ‌ ಸಮಯದ ಬಳಿಕ ನಂ.1 ಸ್ಥಾನಕ್ಕೇರಿದ ಆಸ್ಟ್ರೇಲಿಯದ ಮೊದಲ ವನಿತೆ ಎನಿಸಿಕೊಳ್ಳಲಿದ್ದಾರೆ. ಆಸ್ಟ್ರೇಲಿಯನ್‌ ಓಪನ್‌ ಗೆದ್ದ ಬಳಿಕ ನಂ.1 ಸ್ಥಾನಕ್ಕೇರಿದ್ದ ನವೋಮಿ ಒಸಾಕಾ ಇಲ್ಲಿ ದ್ವಿತೀಯ ಸುತ್ತಿನಲ್ಲಿ  ಸೋತ ಕಾರಣ ಬಾರ್ಟಿ ಅವರಿಗೆ ಅಗ್ರಸ್ಥಾನಕ್ಕೇರುವ ಸುವರ್ಣಾವಕಾಶ ಲಭಿಸಿದೆ.ಪ್ರಶಸ್ತಿ ಸುತ್ತಿಗೇರುವ ಮೊದಲು ಬಾರ್ಟಿ ಕ್ವಾರ್ಟರ್‌ ಫೈನಲ್‌ ಹೋರಾಟದಲ್ಲಿ ಐದು ಬಾರಿಯ ವಿಂಬಲ್ಡನ್‌ ಚಾಂಪಿಯನ್‌

ನಂ.1 ಸ್ಥಾನದತ್ತ ಆಸ್ಟ್ರೇಲಿಯದ ಆ್ಯಶ್ಲಿ ಬಾರ್ಟಿ Read More »

ಕ್ರೀಡಾ ನ್ಯೂಸ್

ಐದನೇ ಅಂತಾರಾಷ್ಟ್ರೀಯ ಯೋಗಹಬ್ಬದ ಸಂಭ್ರಮ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂನ್.22. ಐದನೇ ಅಂತಾರಾಷ್ಟ್ರೀಯ ಯೋಗದಿನವನ್ನು ದೇಶಾದಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ದೇಶದಾದ್ಯಂತ ಯೋಗ ಪ್ರದರ್ಶನ ಮಾಡುವ ಮೂಲಕ ಯೋಗದಿನ ಆಚರಿಸಿದರು. 2014 ರ ಸೆಪ್ಟೆಂಬರ್ 27 ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ದಿನ ಆಚರಿಸುವ ಪ್ರಸ್ತಾಪವನ್ನಿಟ್ಟಿದ್ದರು. ಅದಕ್ಕೆ ಒಪ್ಪಿಗೆ ಸೂಚಿಸಿದ್ದ ವಿಶ್ವಸಂಸ್ಥೆ, ಜೂನ್ 21 ರಂದು ಯೋಗ ದಿನ ಆಚರಿಸಲು ಒಪ್ಪಿಗೆಸೂಚಿಸಿತ್ತು. 2015ರ ಜೂನ್21ರಂದು ಮೊದಲ ಯೋಗದಿನವನ್ನು ಆಚರಿಸಲಾಗಿತ್ತು.ಈ

ಐದನೇ ಅಂತಾರಾಷ್ಟ್ರೀಯ ಯೋಗಹಬ್ಬದ ಸಂಭ್ರಮ Read More »

ರಾಷ್ಟ್ರೀಯ ನ್ಯೂಸ್

ಕಡ್ಯ-ಕೊಣಾಜೆ: ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಜೂನ್.22. ಕೊಣಾಜೆ ಉನ್ನತ ಹಿ.ಪ್ರಾ. ಶಾಲಾ ವತಿಯಿಂದ ಕಡ್ಯ-ಕೊಣಾಜೆ ಶ್ರೀ ದುರ್ಗಾಂಬಿಕಾ ಭಜನಾ ಮಂದಿರದಲ್ಲಿ ವಿಶ್ವ ಯೋಗದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಶಿವಪ್ಪ ಗೌಡ ದೀಪ ಬೆಳಗಿಸಿ ಉದ್ಘಾಟಿಸಿದರು. ಯೋಗ ಶಿಕ್ಷಕರಾದ ವಾಸುದೇವ ಭಟ್ ಕಡ್ಯ ಯೋಗ ಪ್ರಾತ್ಯಕ್ಷಿಕೆ ಮೂಲಕ ಮಕ್ಕಳಿಗೆ ಯೋಗಾಭ್ಯಾಸ ಮಾಡಿಸಿದರು. ಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಕೆ. ಯೋಗದ ಮಹತ್ವವನ್ನು ವಿವರಿಸಿದರು. ಶಿಕ್ಷಕರಾದ ಹಾಲೇಶ್, ನಾಗವೇಣಿ, ಪ್ರಮೀಳಾ, ಲತಾ ಸಹಕರಿಸಿದರು. ಅಜಿತ್ ಜೈನ್ ವಂದಿಸಿದರು.

ಕಡ್ಯ-ಕೊಣಾಜೆ: ಯೋಗ ದಿನಾಚರಣೆ Read More »

ಕರಾವಳಿ

ಅಡೆಂಜ ಶಾಲೆ: ಯೋಗದಿನಾಚರಣೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಜೂನ್.22.ನೂಜಿಬಾಳ್ತಿಲ ಗ್ರಾಮದ ಅಡೆಂಜ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಶುಕ್ರವಾರ ಆಚರಿಸಾಯಿತು. ಶಾಲಾ ಮಕ್ಕಳು ಸಾಮೂಹಿಕವಾಗಿ ಯೋಗಾಸನಗಳನ್ನು ಮಾಡಿದರು. ಮುಖ್ಯ ಶಿಕ್ಷಕಿ ಏಲಿಯಮ್ಮ ಯೋಗದ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಕರಾದ ರವಿಕುಮಾರ್ ಜಿ.ಆರ್. ಸ್ವಾಗತಿಸಿ ವಂದಿಸಿದರು. ಶಿಕ್ಷಕಿ ವೀಣಾ ಸಹಕರಿಸಿದರು.

ಅಡೆಂಜ ಶಾಲೆ: ಯೋಗದಿನಾಚರಣೆ Read More »

ಕರಾವಳಿ
Scroll to Top