ಕಡಬ ನ್ಯೂಸ್

ಸಮುದ್ರ ತೀರದಲ್ಲಿ ಕರ್ತವ್ಯನರ್ವಹಿಸಲು ಸಜ್ಜಾಗಿರುವ ಗೃಹ ರಕ್ಷಕದಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳ ಬಗ್ಗೆ ಜನರಿಗೆ ಮುನ್ನೆಚ್ಚರಿಕೆ ನೀಡುವುದರೊಂದಿಗೆ ಜೀವರಕ್ಷಣೆಗಾಗಿ ಜಿಲ್ಲೆಯ 60 ಮಂದಿ ಗೃಹ ರಕ್ಷಕರು ಕಾರ್ಯೋನ್ಮುಖರಾಗಿದ್ದಾರೆ. ಪಣಂಬೂರು, ತಣ್ಣೀರು ಬಾವಿ, ಉಳ‍್ಳಾಲ ಬೀಚ್ಗಳಲ್ಲಿ ಈಜಾಡಲು ಇಳಿದು ಜೀವಕ್ಕೇ ಕುತ್ತು ತಂದುಕೊಳ್ಳುವಂತಹ ಸನ್ನಿವೇಶಗಳು ನಿರ್ಮಾಣವಾಗುತ್ತದೆ. ಈಗಾಗಲೇ ಕಡಲಬ್ಬರವೂ ಜಾಸ್ತಿಯಾಗಿದ್ದು, ಆಗಮಿಸುವ ಪ್ರವಾಸಿಗರಿಗೆ ಸಮುದ್ರದಲ್ಲಿನ ಅಪಾಯದ ಮುನ್ಸೂಚನೆ ಇರುವುದಿಲ್ಲ. ಜಿಲ್ಲಾಡಳಿತದಿಂದ ಟೆಂಟ್‌, ಮೈಕ್‌ ವ್ಯವಸ್ಥೆ, ರೈನ್‌ ಕೋಟ್‌, ಚಯರ್‌ ಮತ್ತು ಬೋಟ್‌ಗಳನ್ನು ಗೃಹರಕ್ಷಕರಿಗೆ ನೀಡಲಾಗುತ್ತದೆ. ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಅವರ ಸಲಹೆ ಮೇರೆಗೆ […]

ಸಮುದ್ರ ತೀರದಲ್ಲಿ ಕರ್ತವ್ಯನರ್ವಹಿಸಲು ಸಜ್ಜಾಗಿರುವ ಗೃಹ ರಕ್ಷಕದಳ Read More »

ಕರಾವಳಿ

ಕಲ್ಲುಗುಡ್ಡೆ-ಕಡಬ ಮಧ್ಯೆ ದಿನದ ಮೂರು ಹೊತ್ತು ಬಸ್ಸಿಗಾಗಿ ಸಾರ್ವಜನಿಕರ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಜೂನ್.15.ನೂತನ ತಾಲೂಕು ಕೇಂದ್ರ ಕಡಬದಿಂದ ಕೇವಲ 10 ಕಿ.ಮೀ. ದೂರದಲ್ಲಿರುವ ಕಲ್ಲುಗುಡ್ಡೆಗೆ ಇಂದಿಗೂ ಸಾರಿಗೆ ವ್ಯವಸ್ಥೆಯಲ್ಲಿ ಹಿಂದುಳಿದಿದೆ. ಈ ಭಾಗದ ಜನತೆ ಇಂದಿಗೂ ಕಡಬ ಹಾಗೂ ಇತರ ಪ್ರದೇಶಗಳಿಗೆ ಪ್ರಯಾಣಿಸಲು ಖಾಸಗಿ ವಾಹನಗಳನ್ನೇ ಬಳಸುತ್ತಿದ್ದಾರೆ. ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲದೆ ಸಾರ್ವಜನಿಕರು, ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಲ್ಲಿಂದ ಕಡಬ ಹಾಗೂ ಇತರೆಡೆಗೆ ನಿತ್ಯ ಪ್ರಯಾ ಣಿಸುವವರು ಖಾಸಗಿ ವಾಹನವನ್ನೇ ಅವಲಂಭಿಸಬೇಕಾಗಿದ್ದು, ಕೆಲವೊಮ್ಮೆ ನಿಗದಿತ ಸಮಯಕ್ಕೆ ತಲುಪಲಾಗದೇ ತೊಂದರೆ ಅನು ಭವಿಸುತ್ತಿದ್ದಾರೆ. ಶಾಲಾ

ಕಲ್ಲುಗುಡ್ಡೆ-ಕಡಬ ಮಧ್ಯೆ ದಿನದ ಮೂರು ಹೊತ್ತು ಬಸ್ಸಿಗಾಗಿ ಸಾರ್ವಜನಿಕರ ಆಗ್ರಹ Read More »

ಕರಾವಳಿ

ದ.ಕ ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ವರ್ಗಾವಣೆ ➤ಬಿ.ಎ. ಖಾದರ್ ಶಾ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಅವರನ್ನು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿಯನ್ನಾಗಿ ಬೆಂಗಳೂರಿಗೆ ವಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರವನ್ನು ಹೆಚ್ಚುವರಿಯಾಗಿ ವಹಿಸಲಾಗಿದ್ದು, ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ದ.ಕ ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ವರ್ಗಾವಣೆ ➤ಬಿ.ಎ. ಖಾದರ್ ಶಾ ಅಧಿಕಾರ ಸ್ವೀಕಾರ Read More »

ಕರಾವಳಿ

ಸಾರ್ವಜನಿಕ ಆಕ್ಷೇಪಣೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಉಪನೋಂದಣಾ ಕಚೇರಿ ನಡ್ಸಾಲು ಗ್ರಾಮದಲ್ಲಿ ಹೊಸದಾಗಿ ನಿರ್ಮಿತವಾಗಿರುವ ಸಾಚಿ ರಾಯಲ್ ಅಪಾರ್ಟ್‍ಮೆಂಟ್‍ಗೆ ಕೇಂದ್ರ ಸ್ಥಿರಾಸ್ತಿ ಮಾರುಕಟ್ಟೆ ದರ ನಿರ್ಧರಣಾ ಸಮಿತಿಯು ರೂ 22000/ ದರ ನಿಗದಿ ಪಡಿಸಲು ತಾತ್ವಿಕ ಅನುಮೋದನೆ ನೀಡಿದ್ದು ಇದಕ್ಕೆ ನಿಯಮಾವಳಿ ಅನ್ವಯ ಸಾರ್ವಜನಿಕರ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ಪರಿಶೀಲನೆಗಾಗಿ ತಾಲೂಕು ಕಚೇರಿ ಮಂಗಳೂರು, ಮಹಾನಗರ ಪಾಲಿಕೆ ಸುರತ್ಕಲ್, ವಿಶೇಷ ತಹಶೀಲ್ದಾರರ ಕಚೇರಿ ಕಾಪು ಇಲ್ಲಿ ಸಾರ್ವಜನಿಕರ ಅವಗಾಹನೆಗಾಗಿ ಜೂನ್ 13 ರಂದು ಪ್ರಕಟಿಸಲಾಗಿದೆ.

ಸಾರ್ವಜನಿಕ ಆಕ್ಷೇಪಣೆ ಆಹ್ವಾನ Read More »

ಕರಾವಳಿ

ಕೆ ಎಸ್‍ ಆರ್ ಟಿ ಸಿ ಹಳೇ ಬಸ್ ಪಾಸ್ ತೋರಿಸಿ ಪ್ರಯಾಣಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.2019-20ನೇ ಶೈಕ್ಷಣಿಕ ವರ್ಷದಲ್ಲಿ ತರಗತಿಗಳು ಪ್ರಾರಂಭವಾಗಿರುವುದರಿಂದ, ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಅನುಕೂಲವಾಗುವಂತೆ, ಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳು, 2018-19 ನೇ ಸಾಲಿನಲ್ಲಿ ವಿತರಣೆಯಾಗಿರುವ ವಿದ್ಯಾರ್ಥಿ ಪಾಸುಗಳನ್ನು ತೋರಿಸಿ, ಜೂನ್ 30 ರವರೆಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು 2018-19 ನೇ ಸಾಲಿನ ವಿದ್ಯಾರ್ಥಿ ಪಾಸಿನ ಜೊತೆಗೆ ಪ್ರಸಕ್ತ ಸಾಲಿನ ಭೋಧನಾ ಶುಲ್ಕ ರಸೀದಿ ಅಥವಾ ಶಾಲಾ/ಕಾಲೇಜಿನ ಗುರುತಿನ ಚೀಟಿಯನ್ನು ತೋರಿಸಿ ಪಾಸಿನಲ್ಲಿ ನಮೂದಿಸಿರುವ ಮಾರ್ಗದಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿರುತ್ತದೆ.ವಿದ್ಯಾರ್ಥಿಗಳು ಮಾಧ್ಯಮಿಕ

ಕೆ ಎಸ್‍ ಆರ್ ಟಿ ಸಿ ಹಳೇ ಬಸ್ ಪಾಸ್ ತೋರಿಸಿ ಪ್ರಯಾಣಕ್ಕೆ ಅವಕಾಶ Read More »

ಕರಾವಳಿ

ಬಂಟ್ವಾಳ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ➤ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ಬಂಟ್ವಾಳ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಡೆಸಲ್ಪಡುವ .ಡಿ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ವಾಮದಪದವು, ಮಣಿನಾಲ್ಕೂರು ಹಾಗೂ ಡಿ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಾದ ವಾಮದಪದವು, ಚೆನ್ನೈತ್ತೋಡಿ, ಬಿ.ಸಿ.ರೋಡು ಮತ್ತು ವಿಟ್ಲ ಇಲ್ಲಿಗೆ ಸಾಮಾನ್ಯ ಕೋರ್ಸುಗಳ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನಲ್ಲಿ ಹೊಸ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಲು ಅರ್ಹ ವಿದ್ಯಾರ್ಥಿಗಳಿಂದ http://karepass.cgg.gov.in  ರಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯೊಂದಿಗೆ

ಬಂಟ್ವಾಳ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ➤ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಬೋಧನಾಂಗ ಪ್ರೇರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ಆಂತರಿಕ ಗುಣಮಟ್ಟ ಖಾತರಿ ಮತ್ತು ಸಿಪಿಇ ಕೋಶ, ಟುವಡ್ರ್ಸ್ ಇನ್‍ಕ್ಲೂಸಿವ್ ಎಜುಕೇಶನ್ ಎಂಬ ಬೋಧನಾಂಗ ಪ್ರೇರಣಾ ಕಾರ್ಯಕ್ರಮ ಕಾಲೇಜಿನ ಡಾ ಶಿವರಾಮ ಕಾರಂತ ಸಭಾಭವನದಲ್ಲಿ ಜೂನ್ 17 ರಂದು ಪೂರ್ವಾಹ್ನ 10 ಗಂಟೆಗೆ ನಡೆಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಎಡಪಡಿತ್ತಾಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರಿನ ಖ್ಯಾತ ಮಾನಸಿಕ ಆರೋಗ್ಯ ಸಲಹಗಾರ್ತಿ ಡಾ. ರೊಮಿಲಾ ಶೇಖರ್ ಹಾಗೂ ವಿಶ್ವವಿದ್ಯಾನಿಲಯ ಕಾಲೇಜಿನ ಯೋಗ ವಿಜ್ಞಾನ ವಿಭಾಗದ

ಬೋಧನಾಂಗ ಪ್ರೇರಣಾ ಕಾರ್ಯಕ್ರಮ Read More »

ಕರಾವಳಿ

ಬಂಟ್ವಾಳ ತಾಲೂಕಿನ ಗ್ರಾಮಗಳ ಗ್ರಾಮಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ಬಂಟ್ವಾಳ ತಾಲೂಕಿನ ಗ್ರಾಮಗಳ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯ ವಿವರ ಇಂತಿವೆ, ಜುಲೈ 18 ರಂದು ಪೂರ್ವಾಹ್ನ 10.30 ಗಂಟೆಗೆ ಅಮ್ಟಾಡಿ ಗ್ರಾಮದಲ್ಲಿ ಗ್ರಾಮ ಸಭೆಯನ್ನು ಕರೆಯಲಾಗಿದೆ. ಅದೇ ರೀತಿ ಜುಲೈ 27 ರಂದು ಪೂರ್ವಾಹ್ನ 10.30 ಗಂಟೆಗೆ ಬಾಳೆಪುಣಿ ಗ್ರಾಮ, ಮೇರಮಜಲು ಗ್ರಾಮ, ಕಡೇಶ್ವಾಲ್ಯ ಗ್ರಾಮ, ಸಜಿಪಪಡು ಗ್ರಾಮ ಪಂಚಾಯತ್, ಜುಲೈ 2 ರಂದು ಪೂರ್ವಾಹ್ನ 10.30 ಇಡ್ಕಿದು ಗ್ರಾಮ, ಕಳ್ಳಿಗೆ ಗ್ರಾಮ, ನರಿಕೊಂಬು ಗ್ರಾಮ ಪಂಚಾಯತ್, ಜುಲೈ

ಬಂಟ್ವಾಳ ತಾಲೂಕಿನ ಗ್ರಾಮಗಳ ಗ್ರಾಮಸಭೆ Read More »

ಕರಾವಳಿ

ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15. ನಗರದ ಎಕ್ಕೂರಿನ ಮೀನುಗಾರಿಕಾ ಕಾಲೇಜಿನಲ್ಲಿ ವಿಶ್ವ ಪರಿಸರ ದಿನವನ್ನು ಕೇಂದ್ರದಲ್ಲಿ ಇತ್ತೀಚೆಗೆ ಆಚರಿಸಿಲಾಯಿತು. ಕೇಂದ್ರದ ಪ್ರಧಾನ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ. ಎ.ಟಿ. ರಾಮಚಂದ್ರ ನಾಯ್ಕ ಚಿಕ್ಕು ಹಣ್ಣಿನ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು. ಈ ಸಂದರ್ಭದಲ್ಲಿ ಅವರು ಮಾತನಾಡಿ ದಕ್ಷಿಣ ಏಷ್ಯಾದ ಕಲುಷಿತ ನಗರಗಳ ಟಾಪ್ 30 ರ ಪಟ್ಟಿಯಲ್ಲಿರುವ ಅಷ್ಟೂ ನಗರಗಳು ಭಾರತ, ಪಾಕಿಸ್ತಾನ, ಚೀನಾ, ಬಾಂಗ್ಲಾದೇಶಗಳು ಸೇರಿವೆ ಎಂದು ಹೇಳಿದರು. ಈ ಪೈಕೆ 22

ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ ವಸುಂಧರಾ ಭೂಪತಿ ಇವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಇಂತಿವೆ. ಜೂನ್ 21 ರಂದು ಸಂಜೆ 6 ಗಂಟೆಗೆ ಮಂಗಳೂರಿಗೆ ಆಗಮಿಸಿ ವಾಸ್ತವ್ಯ. ಜೂನ್ 22 ರಂದು ಪೂರ್ವಾಹ್ನ 6 ಗಂಟೆಗೆ ಕಾಸರಗೋಡಿಗೆ ತೆರಳಿ ಗಡಿನಾಡು ಸಾಹಿತ್ಯ ಸಾಂಸ್ಕøತಿಕ ಅಕಾಡಮಿ ವತಿಯಿಂದ ಉಪ್ಪಳದ ಲಯನ್ಸ್ ಸೇವಾ ಮಂದಿರದಲ್ಲಿ ಸೇವಾ ಮಂದಿರದಲ್ಲಿ ಕಾಸರಗೋಡು ಶಾಲಾ ಕಾಲೇಜುಗಳಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಪರಾಹ್ನ 1 ಗಂಟೆಗೆ ಬೆಂಗಳೂರಿಗೆ

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರ ಪ್ರವಾಸ Read More »

ಕರಾವಳಿ
Scroll to Top