ಕಡಬ ನ್ಯೂಸ್

ಪುಲ್ವಾಮಾ ದಾಳಿ ಕುರಿತು ಅವಹೇಳನಕಾರಿ ಪೋಸ್ಟ್➤ ಇಂಜಿನಿಯರಿಂಗ್ ವಿದ್ಯಾರ್ಥಿಗೆ 5 ವರ್ಷ ಜೈಲು ಶಿಕ್ಷೆ!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.14 ಫೆಬ್ರವರಿ 14, 2019 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ದಾಳಿ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬೆಂಗಳೂರಿನ 20 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗೆ ಎನ್ಐಎ ವಿಶೇಷ ನ್ಯಾಯಾಲಯವು ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಎನ್‌ಐಎ ನ್ಯಾಯಾಲಯ ಶಿಕ್ಷೆ ವಿಧಿಸಿದ್ದು, 5 ವರ್ಷಗಳ ಸಾಮಾನ್ಯ ಜೈಲು ಶಿಕ್ಷೆಯೊಂದಿಗೆ 10,000 ರೂ. ದಂಡ ವಿಧಿಸಿದೆ. ಎಚ್ ಆರ್ ಬಿಆರ್ ಲೇಔಟ್ ನಿವಾಸಿ ಫೈಜ್ ರಶೀದ್ ಎಂಬಾತನೇ ಶಿಕ್ಷೆಗೆ ಗುರಿಯಾಗಿರುವ ವಿದ್ಯಾರ್ಥಿ. […]

ಪುಲ್ವಾಮಾ ದಾಳಿ ಕುರಿತು ಅವಹೇಳನಕಾರಿ ಪೋಸ್ಟ್➤ ಇಂಜಿನಿಯರಿಂಗ್ ವಿದ್ಯಾರ್ಥಿಗೆ 5 ವರ್ಷ ಜೈಲು ಶಿಕ್ಷೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ರಾಜ್ಯದಲ್ಲಿ ಕರೆಂಟ್ ಬಿಲ್ ದರ ಮತ್ತಷ್ಟು ಹೆಚ್ಚಳ!

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.13 ರಾಜ್ಯದ ವಿದ್ಯುತ್ ವಿತರಣಾ ಕಂಪೆನಿಗಳು ವಿದ್ಯುತ್ ದರ ಪರಿಷ್ಕರಣೆ ಕೋರಿರುವ ಹಿನ್ನೆಲೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಫೆಬ್ರವರಿ 13 ರಿಂದ ಮಾರ್ಚ್ 1ರ ವರೆಗೆ ಸಾರ್ವಜನಿಕ ಆದಾಲತ್ ನಡೆಸಲಿದೆ. ಹೀಗಾಗಿ ವಿದ್ಯುತ್ ದರದಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ. ಕರೆಂಟ್ ಬಿಲ್ ಹೆಚ್ಚಾದ್ರೆ ಸಾರ್ವಜನಿಕ ವಲಯದಲ್ಲಿ ಆತಂಕ ಹೆಚ್ಚಿದ್ದು, ಹೋಟೆಲ್ ಉದ್ಯಮಗಳು ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ. ಈ ಬಗ್ಗೆ ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಶನ್ ಅಧ್ಯಕ್ಷ

➤ರಾಜ್ಯದಲ್ಲಿ ಕರೆಂಟ್ ಬಿಲ್ ದರ ಮತ್ತಷ್ಟು ಹೆಚ್ಚಳ! Read More »

ಕರ್ನಾಟಕ

ತಂಬಾಕು ಉತ್ಪನ್ನಗಳ ತೆರಿಗೆ ಇನ್ನಷ್ಟು ಹೆಚ್ಚಿಸಬೇಕು ➤ ಕೇಂದ್ರಕ್ಕೆ ಆರ್ಥಿಕ ತಜ್ಞರು, ಪರಿಣತರ ಸಲಹೆ

(ನ್ಯೂಸ್ ಕಡಬ) newskadaba.com. ಹೊಸದಿಲ್ಲಿ. ಫೆ.13. ಕೇಂದ್ರ ಸರಕಾರವು ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿರುವುದು ಸ್ವಾಗತಾರ್ಹ. ಇನ್ನೂ ಸಾಕಷ್ಟು ಪ್ರಮಾಣದ ತೆರಿಗೆ ಹೆಚ್ಚಳ ಮಾಡುವ ಮೂಲಕ ತಂಬಾಕು ಮುಕ್ತ ದೇಶ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಆರ್ಥಿಕ ತಜ್ಞರು, ಸಾರ್ವಜನಿಕ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ. “ಸಿಗರೇಟ್‌ ಮೇಲಿನ ಶೇ. 16ರಷ್ಟು ತೆರಿಗೆ ಹೆಚ್ಚಳವು ಅತ್ಯಂತ ಸೂಕ್ತವಾಗಿದೆ. ಆದರೆ, ‘ಶಾಪಗ್ರಸ್ತ’ ಉತ್ಪನ್ನಗಳ ಮೇಲಿನ ತೆರಿಗೆಯನ್ನು ತಂಬಾಕು ಉತ್ಪನ್ನ ಕೊಳ್ಳಲು ಸಾಧ್ಯವಾಗದ ಪ್ರಮಾಣದಲ್ಲಿ ಹೆಚ್ಚಿಸುವ ಮೂಲಕ ಆರೋಗ್ಯವಂತ ದೇಶ

ತಂಬಾಕು ಉತ್ಪನ್ನಗಳ ತೆರಿಗೆ ಇನ್ನಷ್ಟು ಹೆಚ್ಚಿಸಬೇಕು ➤ ಕೇಂದ್ರಕ್ಕೆ ಆರ್ಥಿಕ ತಜ್ಞರು, ಪರಿಣತರ ಸಲಹೆ Read More »

ರಾಷ್ಟ್ರೀಯ ನ್ಯೂಸ್

ಟರ್ಕಿ ಕೋಳಿ ಸಾಕಾಣಿಕೆಯೊಂದು ಲಾಭದಾಯಕ ಉದ್ಯಮ ➤ ಇದರ ಕುರಿತು ಮಾಹಿತಿ ಇಲ್ಲಿದೆ.

(ನ್ಯೂಸ್ ಕಡಬ) newskadaba.com. ಬೆಂಗಳೂರು.ಫೆ.11. ಟರ್ಕಿ ಕೋಳಿ ಸಾಕಾಣಿಕೆ ಇತ್ತೀಚಿನ ದಿನಗಳಲ್ಲಿ ವೇಗವಾಗಿ ಬೆಳೆಯುತ್ತಿರುವ ಉದ್ಯಮ. ಟರ್ಕಿ ಕೋಳಿ ಫಾರ್ಮಿಂಗ್ ಮಾಡಿದರೆ ಹೆಚ್ಚು ಲಾಭವನ್ನು ಪಡೆಯಬಹುದು. ಏಕೆಂದರೆ ಇದರಲ್ಲಿ ಮಾಂಸ, ಮೊಟ್ಟೆ ಜೊತೆಗೆ ಕೋಳಿ ಗೊಬ್ಬರಕ್ಕೂ ಭೇಡಿಕೆಯಿದೆ. ಟರ್ಕಿ ಕೋಳಿ ಮಾಂಸಕ್ಕೆ ಬೇಡಿಕೆ ಹೆಚ್ಚಿದೆ. ಈ ಮಾಂಸದಲ್ಲಿ ಶೇ. 25ರಷ್ಟು ಹಾಗೂ ಮೊಟ್ಟೆಗಳಲ್ಲಿ 13ರಷ್ಟು ಪ್ರೊಟೀನ್​ ಅಂಶ ಕಂಡು ಬರುತ್ತದೆ. ಜೊತೆಗೆ ಈ ಮಾಂಸದಲ್ಲಿ ಕಡಿಮೆ ಕೊಬ್ಬಿನ ಅಂಶ, ಹೆಚ್ಚು ರುಚಿಕರವಾಗಿರುತ್ತದೆ. ಇನ್ನು ಈ ಕೋಳಿಯ ಗೊಬ್ಬರದಲ್ಲಿ

ಟರ್ಕಿ ಕೋಳಿ ಸಾಕಾಣಿಕೆಯೊಂದು ಲಾಭದಾಯಕ ಉದ್ಯಮ ➤ ಇದರ ಕುರಿತು ಮಾಹಿತಿ ಇಲ್ಲಿದೆ. Read More »

ಕರ್ನಾಟಕ

ಮಹಿಳೆ ಮೇಲೆ ಅತ್ಯಾಚಾರ‌ ಆರೋಪ ➤ ಅವಳಿ ಸಹೋದರರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ.  ಫೆ.11. ವಿಜಯಪುರದಲ್ಲಿ   ಮಹಿಳೆ ಮೇಲೆ ಅತ್ಯಾಚಾರ‌ಕ್ಕೆ ಯತ್ನಿಸಿದ ಕಾರಣಕ್ಕಾಗಿ, ತಾಲೂಕಿನ ಹೆಗಡಿಹಾಳ ತಾಂಡಾದಲ್ಲಿ  ಅವಳಿ ಸಹೋದರಾರ ಪೀರು ಹಾಗೂ ರಾಜು ತಲೆ ಬೋಳಿಸಿ ತಲೆಗೆ ಸುಣ್ಣ ಬಳಿದು, ಕೊರಳಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳಾದ ಗ್ರಾ.ಪಂ.ಅಧ್ಯಕ್ಷ ರಾಮಸಿಂಗ್ ಲಮಾಣಿ, ಅನಿಲ್​ ಲಮಾಣಿ, ಮಂಗೇಶ್, ಹೇಮು, ರಾಜು, ಚನ್ನು ಹಾಗೂ ರಮೇಶ್​ನನ್ನು ಇದೀಗ ವಿಜಯಪುರ ಗ್ರಾಮೀಣ ಪೊಲೀಸರು ಬಂಧಿಸಿದ್ದು, ಐಪಿಸಿ ಸೆಕ್ಷನ್ 504,

ಮಹಿಳೆ ಮೇಲೆ ಅತ್ಯಾಚಾರ‌ ಆರೋಪ ➤ ಅವಳಿ ಸಹೋದರರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಗ್ರಾಮಸ್ಥರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು ನಗರದೊಳಗೆ ಟ್ರಾಕ್ಟರ್ ಸಂಚಾರ ನಿಷೇಧ ➤ಚಾಲಕರು, ಮಾಲೀಕರ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.10.  ನಗರದ ರಸ್ತೆಗಳಲ್ಲಿ ಟ್ರಾಕ್ಟರ್ ಸಂಚಾರ ನಿಷೇಧಿಸಿರುವ ಕ್ರಮವನ್ನು ಖಂಡಿಸಿ ಟ್ರಾಕ್ಟರ್ ಚಾಲಕರು ಮತ್ತು ಮಾಲೀಕರು ಬೃಹತ್ ಪ್ರತಿಭಟನೆ ನಡೆಸಿದರು. ನಗರದಲ್ಲಿ ಇಂತಹ ವಾಹನಗಳ ಸಂಚಾರವನ್ನು ನಿಷೇಧಿಸಿರುವ ಬೆಂಗಳೂರು ಟ್ರಾಫಿಕ್ ಪೊಲೀಸರ ಆದೇಶವನ್ನು ವಿರೋಧಿಸಿ ಸುಮಾರು 3,000 ಟ್ರ್ಯಾಕ್ಟರ್ ಮಾಲೀಕರು ಮತ್ತು ಕಾರ್ಮಿಕರು ಗುರುವಾರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು. ನಗರದಲ್ಲಿ 35,000 ಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳಿದ್ದು, ಈ ನಿರ್ಬಂಧದಿಂದ ಸುಮಾರು ಎರಡು ಲಕ್ಷ ಕಾರ್ಮಿಕರು ತೊಂದರೆಗೀಡಾಗಿದ್ದಾರೆ ಎಂದು ಟ್ರ್ಯಾಕ್ಟರ್ ಮಾಲೀಕರ

ಬೆಂಗಳೂರು ನಗರದೊಳಗೆ ಟ್ರಾಕ್ಟರ್ ಸಂಚಾರ ನಿಷೇಧ ➤ಚಾಲಕರು, ಮಾಲೀಕರ ಬೃಹತ್ ಪ್ರತಿಭಟನೆ Read More »

ಕರ್ನಾಟಕ

➤ ಅವಶೇಷಗಳಡಿಯಲ್ಲಿ ಮಗಳ ಮೃತದೇಹ,ಆಕೆಯ ಕೈ ಹಿಡಿದು ಮೌನವಾಗಿ ಕುಳಿತ ಅಪ್ಪ

(ನ್ಯೂಸ್ ಕಡಬ) newskadaba.com. ಟರ್ಕಿ, ಫೆ.10.  ಟರ್ಕಿಯ ಭೂಕಂಪದ  ದೃಶ್ಯಗಳನ್ನು ನೋಡಿದರೆ ಎಂಥಾ ಗಟ್ಟಿ ಮನಸ್ಸು  ಕೂಡಾ ಕರಗುತ್ತದೆ. ತನ್ನ 15ರ ಹರೆಯದ ಮಗಳು ಭೂಕಂಪದಲ್ಲಿ ಸಾವಿಗೀಡಾಗಿದ್ದಾಳೆ. ಅವಶೇಷಗಳಡಿಯಲ್ಲಿ ಆಕೆಯ ದೇಹ ಸಿಕ್ಕಿಬಿದ್ದಿದ್ದು, ಆಕೆಯ ಕೈ ಮಾತ್ರ ಹೊರಗೆ ಕಾಣತ್ತದೆ. ಆ ಬಾಲಕಿಯ ಅಪ್ಪ ಆಕೆಯ ಕೈ ಹಿಡಿದು ಕೂತಿದ್ದಾನೆ. ಚಿತ್ರದಲ್ಲಿರುವ ಆ ವ್ಯಕ್ತಿ ಹೆಸರು ಮೆಸುಟ್ ಹ್ಯಾನ್ಸರ್. ಒಡೆದ ಇಟ್ಟಿಗೆಗಳ ರಾಶಿಯ ಮೇಲೆ ಹೆಪ್ಪುಗಟ್ಟುವ ಚಳಿಯಲ್ಲಿ ಒಬ್ಬಂಟಿಯಾಗಿ ಕುಳಿತುಕೊಂಡಿದ್ದಾರೆ. ಅವರ ಮನೆ ನೆಲಸಮವಾಗಿದೆ. ಅವರ ಮಗಳು

➤ ಅವಶೇಷಗಳಡಿಯಲ್ಲಿ ಮಗಳ ಮೃತದೇಹ,ಆಕೆಯ ಕೈ ಹಿಡಿದು ಮೌನವಾಗಿ ಕುಳಿತ ಅಪ್ಪ Read More »

ಅಂತರ್ರಾಷ್ಟ್ರೀಯ ನ್ಯೂಸ್

ರಾಜ್ಯ ಬಜೆಟ್ ➤ ಹೊಸ ಕೃಷಿ ನೀತಿ ಘೋಷಿಸಲು ಸರ್ಕಾರದ ಚಿಂತನೆ!

(ನ್ಯೂಸ್ ಕಡಬ)newskadaba.com.ಬೆಂಗಳೂರು. ಫೆ.10. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 17 ರಂದು ಮಂಡಿಸಲಿರುವ ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಈ ನೀತಿಯು ನೈಸರ್ಗಿಕ ಕೃಷಿಯ ಮೂಲಕ ಮಣ್ಣಿನ ಗುಣಮಟ್ಟವನ್ನು ಕಾಪಾಡಿಕೊಳ್ಳಲು, ಸುಧಾರಿಸಲು ಮತ್ತು ರಾಗಿ ಬೆಳೆಯಲು ರೈತರನ್ನು ಉತ್ತೇಜಿಸುತ್ತದೆ ಎಂದು ತಿಳಿದುಬಂದಿದೆ. ಬೊಮ್ಮಾಯಿ ಅವರು ಕಳೆದ ವರ್ಷ ಮಂಡಿಸಿದ ಚೊಚ್ಚಲ ಬಜೆಟ್‌ನಲ್ಲಿ ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 33,700 ಕೋಟಿ ರೂ ಮೀಸಲಿಟ್ಟಿದ್ದರು. ರೈತ ಶಕ್ತಿ

ರಾಜ್ಯ ಬಜೆಟ್ ➤ ಹೊಸ ಕೃಷಿ ನೀತಿ ಘೋಷಿಸಲು ಸರ್ಕಾರದ ಚಿಂತನೆ! Read More »

ಕರ್ನಾಟಕ

  ಚಿಕ್ಕಮಗಳೂರು ಬೆಂಕಿ ಅವಘಡ ➤ 25  ಎಕರೆ ಕುರುಚಲು ಕಾಡು ನಾಶ

(ನ್ಯೂಸ್ ಕಡಬ) newskadaba.com  ಚಿಕ್ಕಮಗಳೂರು, ಫೆ.10.  ನಗರ ಸಮೀಪದ  ಚುರ್ಚೆಗುಡ್ಡ ಅರಣ್ಯ   ಪ್ರದೇಶದಲ್ಲಿ  ನಿನ್ನೆ ರಾತ್ರಿ  ಬೆಂಕಿ  ಕಾಣಿಸಿಕೊಂಡಿದ್ದು,  ಬೆಂಕಿಯ  ಕೆನ್ನಾಲಿಗೆಗೆ  ಸುಮಾರು  25  ಎಕರೆ  ಪ್ರದೇಶದಲ್ಲಿದ್ದ  ಕುರುಚಲು  ಕಾಡು  ಸುಟ್ಟು  ಭಸ್ಮವಾಗಿದೆ. ಈ  ನಡುವೆ  ಬೆಂಕಿಯ  ಹಿಂದೆ  ಕಿಡಿಗೇಡಿಗಳ   ಕೃತದ  ಶಂಕೆ  ವ್ಯಕ್ತವಾಗಿದೆ. ನಗರದ  ಹೊರವಲಯದಲ್ಲಿರುವ  ಪವಿತ್ರವನ  ಸಮೀಪದ  ಚುರ್ಚೆಗುಡ್ಡೆ  ಅರಣ್ಯ  ಪ್ರದೇಶದಲ್ಲಿ  ಈ  ಬೆಂಕಿ  ಕಾಣಿಸಿಕೊಂಡಿದೆ.  ಬೆಂಕಿ  ನಂದಿಸಲು  ಅರಣ್ಯ  ಇಲಾಖೆಯ  ಸಿಬ್ಬಂದಿ  ಕಳೆದ  ರಾತ್ರಿ  ಹರಸಾಹಸ  ಪಟ್ಟಿದ್ದು  ಬೆಂಕಿಯನ್ನು  ಸದ್ಯ ನಿಯಂತ್ರಿಸಲಾಗಿದೆ ಎಂದು

  ಚಿಕ್ಕಮಗಳೂರು ಬೆಂಕಿ ಅವಘಡ ➤ 25  ಎಕರೆ ಕುರುಚಲು ಕಾಡು ನಾಶ Read More »

ಕರ್ನಾಟಕ

ವಿಷ ಸೇವಿಸಿದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಫೆ.10.  ವಿಷ ಸೇವಿಸಿ ಠಾಣೆಗೆ ಹೋಗಿ ರಕ್ಷಣೆಗೆ ಕೂಗಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ರಕ್ಷಣೆ ಮಾಡಿರುವ ಘಟನೆ ಚಂದ್ರಾ ಲೇಔಟ್ ನಲ್ಲಿ ನಡೆದಿದೆ.  ಡೆಲಿವರಿ ಏಜೆಂಟ್ ಆಗಿರುವ ಅನಿಲ್ (30) ಎಂಬ ವ್ಯಕ್ತಿಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಸ್ನೇಹಿತೆ ಲೀಲಾ (40) ಎಂಬುವವರೊಂದಿಗೆ ಮನಸ್ತಾಪವಾಗಿದ್ದ ಹಿನ್ನೆಲೆಯಲ್ಲಿ ಅನಿಲ್ ವಿಷ ಸೇವಿಸಿದ್ದ ಎಂದು  ತಿಳಿದಿದೆ. ಈ ಹಿಂದೆ ಕೂಡ ಇಬ್ಬರ ನಡುವೆ ಜಗಳವಾಗಿದ್ದು, ಲೀಲಾ ಅವರು ಪೊಲೀಸರಿಗೆ ದೂರು ನೀಡಿದ್ದರು.

ವಿಷ ಸೇವಿಸಿದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು! Read More »

ಕರ್ನಾಟಕ
Scroll to Top