ಕಡಬ ನ್ಯೂಸ್

ಎಸ್.ಎಸ್.ಎಲ್.ಸಿ. ಮರುಮೌಲ್ಯಮಾಪನ➤ ಮನೋಜ್‍ಗೆ ಹೆಚ್ಚುವರಿ ಅಂಕ

  (ನ್ಯೂಸ್ ಕಡಬ) newskadaba.com ,ಕಲ್ಲುಗುಡ್ಡೆ  ಜೂನ್.1.ಕಳೆದ 2019ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನದ ಬಳಿಕ ಎಂಡೋಪೀಡಿತ ವಿದ್ಯಾರ್ಥಿ ಮನೋಜ್ ಕುಮಾರ್ ಕನ್ನಡದಲ್ಲಿ ಹೆಚ್ಚುವರಿ ಅಂಕಗಳನ್ನು ಪಡೆದಿದ್ದಾರೆ. ಕನ್ನಡ ವಿಷಯದಲ್ಲಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಇವರು ಈ ಮೊದಲು ಕನ್ನಡದಲ್ಲಿ 67 ಅಂಕ ಪಡೆದಿದ್ದು, ಮರುಮೌಲ್ಯಮಾಪನದ ಬಳಿಕ ಹೆಚ್ಚುವರಿ 14 ಅಂಕ ಸೇರ್ಪಡೆಗೊಂಡಿದ್ದು ಇದೀಗ ಕನ್ನಡದಲ್ಲಿ ಒಟ್ಟು 81 ಅಂಕ ಪಡೆದಿದ್ದಾರೆ. ಇವರ ಒಟ್ಟು ಅಂಕ ಇದೀಗ 406 ಆಗಿದೆ. ಮನೋಜ್ ಕುಮಾರ್ ಎಂಡೋಪೀಡಿತನಾಗಿದ್ದು, ಕೊೈಲ […]

ಎಸ್.ಎಸ್.ಎಲ್.ಸಿ. ಮರುಮೌಲ್ಯಮಾಪನ➤ ಮನೋಜ್‍ಗೆ ಹೆಚ್ಚುವರಿ ಅಂಕ Read More »

ಕರಾವಳಿ

ನರೇಂದ್ರ ಮೋದಿ ಪ್ರಮಾನವಚನ ➤ನೂಜಿಬಾಳ್ತಿಲದಲ್ಲಿ ದೀಪಹಚ್ಚಿ ಸಂಭ್ರಮಿಸಿದ ಮೋದಿ ಅಭಿಮಾನಿಗಳು

(ನ್ಯೂಸ್ ಕಡಬ) newskadaba.com , ಕಲ್ಲುಗುಡ್ಡೆ, ಜೂನ್.1. ನರೇಂದ್ರ ಮೋದಿ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾನವಚನ ಸ್ವೀಕರಿಸುತ್ತಿರುವ ಸಂದರ್ಭದಲ್ಲಿ ನೂಜಿಬಾಳ್ತಿಲದಲ್ಲಿ ದೀಪಹಚ್ಚಿ ಸಂಭ್ರಮಿಸಲಾಯಿತು. ಸತತ ಎರಡನೇ ಬಾರಿಗೆ ಬಿಜೆಪಿ ಅಧಿಕಾರ ಪಡೆದು ಪದಗ್ರಹಣ ಸಮಾರಂಭ ನಡೆಯುತ್ತಿರುವ ಸಂಭ್ರಮದಲ್ಲಿ ನೂಜಿಬಾಳ್ತಿಲ ಗ್ರಾಮದ ನೀರಾರಿ ಛತ್ರಪತಿ ವೃತ್ತದ ಬಳಿ ಸೇರಿದ ಮೋದಿ ಅಭಿಮಾನಿಗಳು, ಕಾರ್ಯಕರ್ತರು ದೀಪ ಬೆಳಗಿ ಸಂಭ್ರಮಿಸಿ, ಬೈಠಕ್ ನಡೆಸಿದರು. ಈ ಸಂದರ್ಭದಲ್ಲಿ ಹಲವರು ಉಪಸ್ಥಿತರಿದ್ದರು.ಛತ್ರಪತಿ ವೃತ್ತದ ಬಳಿ ದೀಪ ಹಚ್ಚಿ ಮೋದಿ ಅಭಿಮಾನಿಗಳು ಸಂಭ್ರಮಿಸಿದರು.

ನರೇಂದ್ರ ಮೋದಿ ಪ್ರಮಾನವಚನ ➤ನೂಜಿಬಾಳ್ತಿಲದಲ್ಲಿ ದೀಪಹಚ್ಚಿ ಸಂಭ್ರಮಿಸಿದ ಮೋದಿ ಅಭಿಮಾನಿಗಳು Read More »

ಕರಾವಳಿ

ಮರಳು ದಿಬ್ಬ ತೆರವು ಹಾಗೂ ಮರಳು ಸಾಗಾಟ ಕಂಡು ಬಂದಲ್ಲಿ ಸೂಕ್ತ ಕಾನೂನು ಕ್ರಮ➤ ಜಿಲ್ಲಾಡಳಿತ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.1.ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದಲ್ಲಿ (CRZ) 2018-19 ನೇ ಸಾಲಿನಲ್ಲಿ ಗುರುತಿಸಿರುವ ಮರಳು ದಿಬ್ಬಗಳನ್ನು ತೆರವುಗೊಳಿಸಲು ಸಾಂಪ್ರದಾಯಿಕವಾಗಿ ಮರಳು ತೆಗಯುವವರಿಗೆ ಅವಕಾಶ ನೀಡಲಾಗಿರುತ್ತದೆ. ಅದರಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಸರ್ಕಾರಿ ಹಾಗೂ ಇತರೆ ಕಾಮಗಾರಿಗಳಿಗೆ ಮರಳನ್ನು ಪರವಾನಿಗೆಯೊಂದಿಗೆ ಪೂರೈಸಲಾಗುತ್ತಿದೆ.ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭವಾಗಲಿದ್ದು, ಮೀನುಗಳ ಸಂತಾನೋತ್ಪತ್ತಿ ಕ್ರಿಯೆ ನಡೆಯುತ್ತದೆ. ಈ ಅವಧಿಯಲ್ಲಿ ಮರಳು ದಿಬ್ಬಗಳನ್ನು ತೆರವುಗೊಳಿಸುವುದರಿಂದ ಮೀನುಗಳ ಸಂತಾನೋತ್ಪತ್ತಿಗೆ ಅಡಚಣೆ ಉಂಟಾಗುತ್ತದೆ. ಆದ್ದರಿಂದ ದಿನಾಂಕ:01-06-2019 ರಿಂದ 31-08-2019

ಮರಳು ದಿಬ್ಬ ತೆರವು ಹಾಗೂ ಮರಳು ಸಾಗಾಟ ಕಂಡು ಬಂದಲ್ಲಿ ಸೂಕ್ತ ಕಾನೂನು ಕ್ರಮ➤ ಜಿಲ್ಲಾಡಳಿತ ಆದೇಶ Read More »

ಕರಾವಳಿ

ವಿಶ್ವ ತಂಬಾಕು ರಹಿತ ದಿನಾಚರಣೆ-2019

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.1.ಮನುಕುಲಕ್ಕೆ ಮಾರಕವಾದ ತಂಬಾಕು ಸೇವನೆ ಬಗ್ಗೆ ಜಾಗೃತಿ ಮೂಡಿಸಲು ನಾವು ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು, ನ್ಯಾಯಮೂರ್ತಿ ಎ.ಜಿ. ಗಂಗಾಧರರವರು ಹೇಳಿದರು. ನಗರದ ಪುರಭವನದಲ್ಲಿ ಆಯೋಜಿಸಿದ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ

ವಿಶ್ವ ತಂಬಾಕು ರಹಿತ ದಿನಾಚರಣೆ-2019 Read More »

ಕರಾವಳಿ

ಒಳಚರಂಡಿ ಯೋಜನೆಗಳ ಕುರಿತು ಸಾರ್ವಜನಿಕ ಸಮಾಲೋಚನಾ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.1.ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2ರಡಿಯಲ್ಲಿ ಒಳಚರಂಡಿ ಯೋಜನೆಗಳ ಕುರಿತು ಜೂನ್ 3 ರಂದು ಪೂರ್ವಾಹ್ನ 11 ಗಂಟೆಗೆ ವಾರ್ಡ್ ನಂ 23 ರ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಕೊಟ್ಟಾರ ಚೌಕಿ ಬಳಿ ಆಯೋಜಿಸಲಾಗಿದೆ. ಅಪರಾಹ್ನ 4 ಗಂಟೆಗೆ ವಾರ್ಡ್ ನಂ 18 ರ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಕಾವೂರು ಮಾರ್ಕೆಟ್ ಬಳಿ ಕೆಯುಐಡಿಎಫ್ ಸಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ

ಒಳಚರಂಡಿ ಯೋಜನೆಗಳ ಕುರಿತು ಸಾರ್ವಜನಿಕ ಸಮಾಲೋಚನಾ ಕಾರ್ಯಾಗಾರ Read More »

ಕರಾವಳಿ

ಡಿ ದೇವರಾಜ ಅರಸುರವರ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.1.ಬಂಟ್ವಾಳ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಡೆಸಲ್ಪಡುವ ಡಿ ದೇವರಾಜ ಅರಸುರವರ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ಪಾಣೆಮಂಗಳೂರು ಮತ್ತು ವಾಮದಪದವು ಹಾಗೂ ಡಿ ದೇವರಾಜ ಅರಸುರವರ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯಗಳಾದ ಕಲ್ಲಡ್ಕ ಮತ್ತು ವಿಟ್ಲ ಇಲ್ಲಿಗೆ 5ನೇ ತರಗತಿಯಿಂದ 10ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನಲ್ಲಿ ಹೊಸ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯೊಂದಿಗೆ ಹಿಂದಿನ ತರಗತಿಯಲ್ಲಿ ತೇರ್ಗಡೆಯಾದ ಅಂಕ

ಡಿ ದೇವರಾಜ ಅರಸುರವರ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಜೂನ್ 3 ರಂದು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮವು ಎಂದಿನಂತೆ ತೆರೆದಿರುತ್ತವೆ.

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.1.ಜೂನ್ 3 ರಂದು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಎಲ್ಲಾ ವಿಭಾಗಗಳು,ಸಾರ್ವಜನಿಕರ ವೀಕ್ಷಣೆಗೆಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ.   ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್ ಮತ್ತು ಸಂಸ್ಕೃತಿ ಗ್ರಾಮ ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಇವರ ಪ್ರಕಟಣೆ ತಿಳಿಸಿದೆ.

ಜೂನ್ 3 ರಂದು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮವು ಎಂದಿನಂತೆ ತೆರೆದಿರುತ್ತವೆ. Read More »

ಕರಾವಳಿ

32ನೇ ರಾಜ್ಯ ಮಟ್ಟದ ಕನ್ನಡ ವಿಜ್ಞಾನ ಬರಹಗಾರರ ತರಬೇತಿ ಶಿಬಿರ

  (ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30. 32ನೇ ರಾಜ್ಯ ಮಟ್ಟದ ವಿಜ್ಞಾನ ಲೇಖಕರ ಶಿಬಿರ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ 32ನೇ ರಾಜ್ಯ ಮಟ್ಟದ ಉದಯೋನ್ಮುಖ ಕನ್ನಡ ವಿಜ್ಞಾನ ಬರಹಗಾರರ ತರಬೇತಿ ಶಿಬಿರವನ್ನು ಜೂನ್ 21 ರಿಂದ 24 ರವರೆಗೆ ಬೆಂಗಳೂರಿನ ಎಚ್.ಕೆ.ಇ.ಎಸ್ ಶ್ರೀ ವೀರೇಂದ್ರ ಪಾಟೀಲ್ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನಲ್ಲಿ ಆಯೋಜಿಸಲಾಗುತ್ತಿದೆ ಎಂದು ರಾಜ್ಯ ವಿಜ್ಞಾನ ಪರಿಷತ್ತು ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

32ನೇ ರಾಜ್ಯ ಮಟ್ಟದ ಕನ್ನಡ ವಿಜ್ಞಾನ ಬರಹಗಾರರ ತರಬೇತಿ ಶಿಬಿರ Read More »

ಕರಾವಳಿ

ಉಜಿರೆ ರುಡ್‍ಸೆಟ್‍ನಲ್ಲಿ ಎಸ್.ಡಿ.ಎಮ್ ಶಾಲಾ ಶಿಕ್ಷಕರಿಗೆ ಒಂದು ದಿನದ ಸಬಲೀಕರಣ ಮಾಹಿತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30.ಶಾಲೆಗಳು ಪ್ರಾರಂಭವಾಗುವ ಮೊದಲು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲಾ ಎಲ್ಲಾ ಶಿಕ್ಷಕರಿಗೆ ಒಂದು ದಿನದ ಸಬಲೀಕರಣ ಕಾರ್ಯಗಾರವನ್ನು ಉಜಿರೆ ರುಡ್‍ಸೆಟ್‍ನಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಗಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರದ್ಧಾ ಅಮಿತ್ ರವರು ಉದ್ಘಾಟಿಸಿ ಮಾತನಾಡುತ್ತಾ ಮಕ್ಕಳಲ್ಲಿ ಸ್ಫೂರ್ತಿಯನ್ನು ತುಂಬುವವನೇ ನಿಜವಾದ ಶಿಕ್ಷಕ ಎಂದು ಅಭಿಪ್ರಾಯಪಟ್ಟರು. ಈ ಕಾರ್ಯಗಾರದಲ್ಲಿ ಶಿಕ್ಷಕರಿಗೆ ಮಂಜುಗಡ್ಡೆ ಕರಗಿಸುವ ಆಟ, ಮಾನವೀಯ ಸಂಬಂಧಗಳ ಕುರಿತು ತರಬೇತಿ ಹಾಗೂ ಶಿಕ್ಷಕ ಮತ್ತು ಮಕ್ಕಳ ಸಂಬಂಧದ ಕುರಿತು ವಿಶೇಷ ಉಪನ್ಯಾಸವನ್ನು

ಉಜಿರೆ ರುಡ್‍ಸೆಟ್‍ನಲ್ಲಿ ಎಸ್.ಡಿ.ಎಮ್ ಶಾಲಾ ಶಿಕ್ಷಕರಿಗೆ ಒಂದು ದಿನದ ಸಬಲೀಕರಣ ಮಾಹಿತಿ ಕಾರ್ಯಗಾರ Read More »

ಕರಾವಳಿ

ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟಗಳಿಗೆ ವಿಶೇಷ ಸೂಚನೆ ➤ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

  (ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಟಾನಗೊಳಿಸಲು ಅರ್ಹ ಕ್ರೀಡಾಪಟುಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2018ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಹ ಕ್ರೀಡಾಪಟುಗಳು http://serviceonline.gov.in/karnataka ಮೂಲಕ ಅರ್ಜಿಗಳನ್ನು ಜೂನ್ 30ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪ್ರದೀಪ್ ಡಿ’ಸೋಜ, ಉಪನಿರ್ದೇಶಕರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು (ದೂ.0824-2451264) ಇವರನ್ನು ಸಂಪರ್ಕಿಸಬಹುದಾಗಿದೆ.

ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟಗಳಿಗೆ ವಿಶೇಷ ಸೂಚನೆ ➤ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ Read More »

ಕರಾವಳಿ
Scroll to Top