ಕಡಬ ನ್ಯೂಸ್

ಬಾಹ್ಯಾಕಾಶ ಅನ್ವೇಷಣೆ -ಚಲನಚಿತ್ರ ಪ್ರದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.27.ಪಿಲಿಕುಳದ ಸ್ವಾಮಿ ವಿವೇಕಾನಂದ ತಾರಾಲಯದಲ್ಲಿ ಬಾಹ್ಯಾಕಾಶಯಾನದ ಉದಯ (Dawn of the Space Age) ಎಂಬ ಖಗೋಳಶಾಸ್ತ್ರಕ್ಕೆ ಸಂಬಂಧಿಸಿದ ಹೊಸ 3ಡಿ ಚಲನಚಿತ್ರವನ್ನು ಮೇ 26 ರಿಂದ ಪ್ರದರ್ಶಿಸಲಾಗುವುದು. ಈ ಪ್ರದರ್ಶನವು ಚಂದ್ರನತ್ತ ಉಡಾವಣೆಗೊಂಡ ಪ್ರಥಮ ಬಾಹ್ಯಾಕಾಶ ಕೃತಕ ಉಪಗ್ರಹ ಸ್ಪುಟ್ನಿಕ್‍ನಿಂದ ಹಿಡಿದು ಇತ್ತೀಚಿನವರೆಗೆ ಮಾನವ ನಡೆಸಿದ ಬಾಹ್ಯಾಕಾಶ ಅನ್ವೇಷಣೆ ಕುರಿತ 4ಕೆ 3ಡಿ ಪ್ರದರ್ಶನ. ವಾರದ ಮಂಗಳವಾರ, ಗುರುವಾರ, ಶನಿವಾರ ಮತ್ತು ಭಾನುವಾರ ದಿನಗಳಲ್ಲಿ ಆಂಗ್ಲ ಮತ್ತು ಕನ್ನಡ ಭಾಷೆಗಳಲ್ಲಿ […]

ಬಾಹ್ಯಾಕಾಶ ಅನ್ವೇಷಣೆ -ಚಲನಚಿತ್ರ ಪ್ರದರ್ಶನ Read More »

ಕರಾವಳಿ

ಇಂಡಿಯಾ ಓಪನ್ ಬಾಕ್ಸಿಂಗ್ ➤ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ ತಂದಿತ್ತರು 12 ಬಂಗಾರದ ಪದಕ

(ನ್ಯೂಸ್ ಕಡಬ) newskadaba.com ನವದೆಹಲಿ,25.ಶುಕ್ರವಾರ ಮುಗಿದ ದ್ವಿತೀಯ “ಇಂಡಿಯನ್‌ ಓಪನ್‌ ಬಾಕ್ಸಿಂಗ್‌’ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಕೂಟದ ಒಟ್ಟು 18 ಬಂಗಾರದ ಪದಕಗಳಲ್ಲಿ 12 ಪದಕ ಭಾರತದ ಪಾಲಾಯಿತು. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಇಮ್ಮಡಿ ಸಾಧನೆಯಾಗಿದೆ. 2018ರಲ್ಲಿ ಭಾರತ 6 ಚಿನ್ನ ಗೆದ್ದಿತ್ತು.ಮೇರಿ ಕೋಮ್‌, ಎಲ್‌. ಸರಿತಾದೇವಿ, ಅಮಿತ್‌ ಪಂಘಲ್‌, ಶಿವ ಥಾಪ ಬಂಗಾರದ ಪದಕ ತಂದಿತ್ತ ಸಾಧಕರು. ಇದೇ ಮೊದಲ ಸಲ 60 ಕೆಜಿ ಸ್ಪರ್ಧೆಗಿಳಿದ ಅವರು ಸಿಮ್ರನ್‌ಜಿತ್‌ ಕೌರ್‌ ವಿರುದ್ಧ 3-2 ಅಂತರದ ಜಯ ಸಾಧಿಸಿದರು.

ಇಂಡಿಯಾ ಓಪನ್ ಬಾಕ್ಸಿಂಗ್ ➤ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ ತಂದಿತ್ತರು 12 ಬಂಗಾರದ ಪದಕ Read More »

ಕ್ರೀಡಾ ನ್ಯೂಸ್

ಮತ್ತೆ ಪ್ರಧಾನಿ ಪಟ್ಟ ಏರಿದ ನರೇಂದ್ರ ಮೋದಿ ➤ ಕುಖ್ಯಾತ ಭೂಗತ ಪಾತಕಿ ಕಾಡತೊಡಗಿದೆ ಜೀವಭಯ!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಮೇ.25.ನರೇಂದ್ರ ಮೋದಿ ಅವರು ಎರಡನೇ ಬಾರಿ ಬಹುಮತದಿಂದ ಪ್ರಧಾನಿ ಪಟ್ಟಕ್ಕೆ ಏರಿದ್ದಾರೆ.2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಕುಖ್ಯಾತ ಭೂಗತ ಪಾತಕಿ ದಾವೂದ್ ಹಾಗೂ ಸಹಚರರ ವಿರುದ್ಧ ಕೆಲವು ಕ್ರಮಗಳನ್ನು ಕೈಗೊಂಡಿತ್ತು. ಮುಂಬೈ ಸರಣಿ ಬಾಂಬ್ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂ ಎಂದು ಗುಪ್ತಚರ ಇಲಾಖೆ ಮೂಲಗಳು ತಿಳಿಸಿರುವುದಾಗಿ ಆಂಗ್ಲ ಮಾಧ್ಯಮ ವೆಬ್ ಸೈಟ್ ವೊಂದು ತಿಳಿಸಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲುವ ಮೂಲಕ ತಾವು ಸುರಕ್ಷಿತವಾಗಿರಬಹುದು ಎಂದು ಅಂಧ

ಮತ್ತೆ ಪ್ರಧಾನಿ ಪಟ್ಟ ಏರಿದ ನರೇಂದ್ರ ಮೋದಿ ➤ ಕುಖ್ಯಾತ ಭೂಗತ ಪಾತಕಿ ಕಾಡತೊಡಗಿದೆ ಜೀವಭಯ! Read More »

ರಾಷ್ಟ್ರೀಯ ನ್ಯೂಸ್

ಪಾಕ್ ಜೊತೆಮಾತುಕತೆ ನಡೆಸುವುದಿಲ್ಲ ➤ ಭಾರತದ ರಾಯಭಾರಿ ಹರ್ಷವರ್ಧನ್ ಶ್ರಿಂಗ್ಲಾ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಮೇ.25.ಪುಲ್ವಾಮಾ ದಾಳಿ ನಂತರದಲ್ಲಿ  ಭಾರತ ಮತ್ತು ಉಭಯ ದೇಶಗಳೊಂದಿಗಿನ ಸಂಬಂಧ ಇನ್ನಷ್ಟು ಕುಸಿದಿತ್ತು. ಅಷ್ಟೇ ಅಲ್ಲ, ಬಾಲಕೋಟ್‌ನಲ್ಲಿ ಭಾರತ ಪ್ರತಿದಾಳಿ ನಡೆಸಿ ಉಗ್ರರನ್ನು ಮಟ್ಟಹಾಕಿದ ಮೇಲಂತೂ ಇನ್ನಷ್ಟು ಬಿಗಡಾಯಿಸಿತ್ತು. ಭಾರತದ ಪ್ರತಿಯೊಬ್ಬ ಭಾರತೀಯನೂ ಪಾಕಿಸ್ತಾನದೊಂದಿಗೆ ಉತ್ತಮ ಸಂಬಂಧ ಸಾಧಿಸಬೇಕು ಎಂದೇ ಬಯಸುತ್ತಾನೆ. ಬಾಂಗ್ಲಾದೇಶ, ನೇಪಾಳ, ಭೂತಾನ್‌, ಶ್ರೀಲಂಕಾ, ಮಾಲ್ಡೀವ್ಸ್‌, ಅಫ್ಘಾನಿಸ್ತಾನದ ಜೊತೆಗೆ ನಮ್ಮ ಸಂಬಂಧ ಉತ್ತಮವಾಗಿದೆ. ಪಾಕಿಸ್ತಾನವು ಉಗ್ರ ಸಂಘಟನೆಗಳನ್ನು ಬೆಂಬಲಿಸುತ್ತಿರುವವರೆಗೂ ಭಾರತ ಮಾತುಕತೆ ನಡೆಸುವುದಿಲ್ಲ ಎಂದು ಅಮೆರಿಕಕ್ಕೆ ಭಾರತದ ರಾಯಭಾರಿ

ಪಾಕ್ ಜೊತೆಮಾತುಕತೆ ನಡೆಸುವುದಿಲ್ಲ ➤ ಭಾರತದ ರಾಯಭಾರಿ ಹರ್ಷವರ್ಧನ್ ಶ್ರಿಂಗ್ಲಾ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ಪ್ರಚಂಡ ಚುನಾವಣಾ ವಿಜಯಕ್ಕೆ ಫ್ರಾನ್ಸ್ ಅಧ್ಯಕ್ಷರಿಂದ ಅಭಿನಂದನೆ

(ನ್ಯೂಸ್ ಕಡಬ) newskadaba.com ಫ್ರಾನ್ಸ್, ಮೇ.25.ಪ್ರಧಾನಿ ನರೇಂದ್ರ ಮೋದಿ ಪ್ರಚಂಡ ಚುನಾವಣಾ ವಿಜಯಕ್ಕೆ ಫ್ರಾನ್ಸ್‌ಅಧ್ಯಕ್ಷಇಮ್ಯಾನುವೆಲ್‌ಮ್ಯಾಕ್ರೋನ್‌ಅವರು ಅಭಿನಂದಿಸಿದ್ದಾರೆ. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿರುವ ಕಾರಣ ವಿಶ್ವದ ಅತೀ ದೊಡ್ಡ ಭಾರತೀಯ ಪ್ರಜಾಸತ್ತೆಯು ಸಂವೇದನಾಶೀಲವಾಗಿದೆ ಎಂದು ಮ್ಯಾಕೋನ್‌ ಹೇಳಿದ್ದಾರೆ. ಉಭಯ ದೇಶಗಳ ಮತ್ತು ವಿಶ್ವದ ಭದ್ರತೆಗಾಗಿ ಹಾಗೂ ದೀರ್ಘ‌ಕಾಲೀನ ಅಭಿವೃದ್ಧಿಗಾಗಿ ಜತೆಗೂಡಿ ಶ್ರಮಿಸುವುದನ್ನು ಮುಂದುವರಿಸೋಣ ಎಂದು ಮ್ಯಾಕ್ರೋನ್‌ ತಮ್ಮ ಅಭಿನಂದನಾ ಸಂದೇಶದಲ್ಲಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಪ್ರಚಂಡ ಚುನಾವಣಾ ವಿಜಯಕ್ಕೆ ಫ್ರಾನ್ಸ್ ಅಧ್ಯಕ್ಷರಿಂದ ಅಭಿನಂದನೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸಿಇಟಿ ಫಲಿತಾಂಶ ಪ್ರಕಟ ➤ ಇಂಜಿನಿಯರಿಂಗ್ನಲ್ಲಿ ಬೆಂಗಳೂರಿನ ಜಫಿನ್ ಬಿಜು ಪ್ರಥಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.25.2019 ನೇ ಸಾಲಿನ ಸಿಇಟಿ ಫ‌ಲಿತಾಂಶ ಶನಿವಾರ , ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ಅವರು ಇಲಾಖೆಯ ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ಫ‌ಲಿತಾಂಶವನ್ನು ಬಿಡಗುಡೆ ಗೊಳಿಸಿದರು. ಟಾಪ್‌ 5 ರ್‍ಯಾಂಕ್‌ ಪಡೆದವರಿಗೆ ಉಚಿತ ಪ್ರವೇಶ ಎಂದು ಘೋಷಿಸಿದ್ದಾರೆ. ಇಂಜಿನಿಯರಿಂಗ್‌ನಲ್ಲಿ ಬೆಂಗಳೂರಿನ ಜಫಿನ್‌ ಬಿಜು ಪ್ರಥಮ ರ್‍ಯಾಂಕ್‌ ಪಡೆದಿದ್ದಾರೆ. ಮಂಗಳೂರಿನ ಎಕ್ಸ್‌ಪರ್ಟ್‌ ಕಾಲೇಜಿನ ಆರ್‌ ಚಿನ್ಮಯ್‌ 2 ನೇ ರ್‍ಯಾಂಕ್‌ ಪಡೆದಿದ್ದಾರೆ.ಮೊದಲ ಹತ್ತು ಸ್ಥಾನಗಳಲ್ಲಿ 7 ಬೆಂಗಳೂರು, 2 ಸ್ಥಾನ

ಸಿಇಟಿ ಫಲಿತಾಂಶ ಪ್ರಕಟ ➤ ಇಂಜಿನಿಯರಿಂಗ್ನಲ್ಲಿ ಬೆಂಗಳೂರಿನ ಜಫಿನ್ ಬಿಜು ಪ್ರಥಮ Read More »

ರಾಷ್ಟ್ರೀಯ ನ್ಯೂಸ್

ಲೋಕಸಭಾ ಚುನಾವಣೆ ಅವಧಿಯಲ್ಲಿ ಅಮಾನತು ಗೊಳಿಸಲಾದ ಶಸ್ತ್ರಾಸ್ತ್ರಗಳ ತಾತ್ಕಾಲಿಕ ಅವಧಿ ಮುಂದುಡುವಂತೆ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.25. ಲೋಕಸಭಾ ಚುನಾವಣೆ-2019ರ ಪ್ರಯುಕ್ತ ಮಂಗಳೂರು ಪೊಲೀಸು ಕಮಿಷನರೇಟ್ ವ್ಯಾಪ್ತಿಯಲ್ಲಿ ಆತ್ಮ ರಕ್ಷಣೆಗಾಗಿ ಮಂಜೂರು ಮಾಡಲಾಗಿರುವ ಎಲ್ಲಾ ಆಯುಧ ಪರವಾನಿಗೆಗಳನ್ನು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ-1959 ಕಲಂ 17(3)(ಬಿ) ರನ್ವಯ 2019ನೇ ಮಾರ್ಚ್ 11 ರಿಂದ ಮೇ 31 ರವರೆಗೆ ತಾತ್ಕಾಲಿಕ ಅವಧಿಗೆ ಅಮಾನತಿನಲ್ಲಿರಿಸಿ ಆದೇಶಿಸಲಾಗಿದೆ. ಪ್ರಸ್ತುತ ಮೂಡಬಿದ್ರೆ ಪುರಸಭೆ ಹಾಗೂ ಮುಲ್ಕಿ ಪಟ್ಟಣ ಪಂಚಾಯತ್‍ನ ಚುನಾವಣೆಯ ಅವಧಿಯಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಜೂನ್ 6

ಲೋಕಸಭಾ ಚುನಾವಣೆ ಅವಧಿಯಲ್ಲಿ ಅಮಾನತು ಗೊಳಿಸಲಾದ ಶಸ್ತ್ರಾಸ್ತ್ರಗಳ ತಾತ್ಕಾಲಿಕ ಅವಧಿ ಮುಂದುಡುವಂತೆ ಆದೇಶ Read More »

ಕರಾವಳಿ

ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರಾತಿಗಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.25.ಮಂಗಳೂರು ಮೇ 24 ಕರ್ನಾಟಕ ವಾರ್ತೆ:- 2018-19ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ, ಅಂತಿಮ ಪದವಿ, ಅಂತಿಮ ಸ್ನಾತಕೋತ್ತರ ಪದವಿಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಂಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರಾತಿಗಾಗಿ ಅಂತರ್ಜಾಲದ ಮೂಲಕ ಅರ್ಜಿಗಳನ್ನು ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ಸಲ್ಲಿಸಲು ತಿಳಿಸಿದೆ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಂಡಕ್ಕೆ ಸೇರಿದವರಾಗಿರಬೇಕು ಕರ್ನಾಟಕ ರಾಜ್ಯದವರಾಗಿರಬೇಕು.

ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರಾತಿಗಾಗಿ ಅರ್ಜಿ ಆಹ್ವಾನ Read More »

ಕರಾವಳಿ

ದುಡಿಯುವ ಮಹಿಳೆಯರಿಗಾಗಿ ಆಂತರಿಕ ದೂರು ಸಮಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.25.“ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಅಧಿನಿಯಮ-2013” ರನ್ವಯ ಸರ್ಕಾರಿ, ಖಾಸಗಿ, ನಿಗಮ ಮಂಡಳಿ, ಸಾರ್ವಜನಿಕ ಉದ್ಯಮಗಳು, ಫ್ಯಾಕ್ಟರಿಗಳು ಇತ್ಯಾದಿ 10 ಅಥವಾ 10ಕ್ಕಿಂತ ಹೆಚ್ಚಿನ ಸಿಬ್ಬಂದಿಗಳಿರುವ ಸ್ಥಳಗಳಲ್ಲಿ “ಆಂತರಿಕ ದೂರು ಸಮಿತಿ”ಯನ್ನು ರಚನೆ ಮಾಡುವುದು ಕಡ್ಡಾಯವಾಗಿರುತ್ತದೆ. ಸದರಿ “ಆಂತರಿಕ ದೂರು ಸಮಿತಿ”ಯನ್ನು ಪ್ರತಿ 3 ವರ್ಷಗಳಿಗೊಮ್ಮೆ ಪುನರಚಿಸಬೇಕು. ಇದಕ್ಕೆ ಸಂಬಂಧಿಸಿದ ಆದೇಶವನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ವೆಬ್‍ಸೈಟ್: kscw.kar.nic.in ಡೌನ್ ಲೋಡ್ ಮಾಡಿಕೊಳ್ಳಬೇಕು.

ದುಡಿಯುವ ಮಹಿಳೆಯರಿಗಾಗಿ ಆಂತರಿಕ ದೂರು ಸಮಿತಿ Read More »

ಕರಾವಳಿ

ಕನ್ನಡ ವಿಶ್ವವಿದ್ಯಾಲಯ ಹಂಪಿ ಬಾದಾಮಿ ಕೇಂದ್ರದಲ್ಲಿ ಚಿತ್ರಕಲೆ ಹಾಗೂ ಶಿಲ್ಪಕಲೆ ಪದವಿ ಕೋರ್ಸ್‍ಗಳ ವ್ಯಾಸಂಗಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.25.ಕನ್ನಡ ವಿಶ್ವವಿದ್ಯಾಲಯ ಹಂಪಿ ಬಾದಾಮಿ ಕೇಂದ್ರದಲ್ಲಿ ನಡೆಸಲಾಗುತ್ತಿರುವ ಚಿತ್ರಕಲೆ ಹಾಗೂ ಶಿಲ್ಪಕಲೆ ಪದವಿ ಕೋರ್ಸ್‍ಗಳ ವ್ಯಾಸಂಗಕ್ಕೆ 2019-20ನೇ ಸಾಲಿಗೆ ಪ್ರವೇಶಗಳು ಪ್ರಾರಂಭವಾಗಿದ್ದು ಪಿ.ಯು.ಸಿ/ಐ.ಟಿ.ಐ/ಜೆ.ಓ.ಡಿ.ಸಿ ಹಾಗೂ ತತ್ಸಮಾನ (10+2) ಪರೀಕ್ಷೆಯಲ್ಲಿ ಪಾಸಾದ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ ವಿಶ್ವವಿದ್ಯಾನಿಲಯ ಹಂಪಿಯ ವಿಸ್ತರಣಾ ಕೇಂದ್ರವಾದ ಬಾದಾಮಿ ಬನಶಂಕರಿಯಲ್ಲಿ ನಡೆಸಲಾಗುತ್ತಿರುವ ಚಿತ್ರಕಲೆ ಮತ್ತು ಶಿಲ್ಪಕಲೆಯ 4 ವರ್ಷದ ಪದವಿ ತರಗತಿಗಳು ಇನ್ನಿತರ ಸಾಮಾನ್ಯ ಪದವಿಗಳಾದ ಬಿ.ಎ/ಬಿ.ಕಾಂ/ಬಿ.ಎಸ್.ಡಬ್ಲೂ ಇನ್ನಿತರ ತತ್ಸಮಾನ ಪದವಿಗಳಂತೆ ಪದವಿ ಹಂತದ ಯಾವುದೇ ಸ್ಪರ್ಧಾತ್ಮಕ

ಕನ್ನಡ ವಿಶ್ವವಿದ್ಯಾಲಯ ಹಂಪಿ ಬಾದಾಮಿ ಕೇಂದ್ರದಲ್ಲಿ ಚಿತ್ರಕಲೆ ಹಾಗೂ ಶಿಲ್ಪಕಲೆ ಪದವಿ ಕೋರ್ಸ್‍ಗಳ ವ್ಯಾಸಂಗಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top