ಕಡಬ ನ್ಯೂಸ್

ಕರಬೂಜ ಬೀಜಗಳಲ್ಲಿದೆ ಆರೋಗ್ಯ ವೃದ್ಧಿಸುವ ಅಂಶ

(ನ್ಯೂಸ್ ಕಡಬ) newskadaba.com, ಆರೋಗ್ಯ ಮಾಹಿತಿ : ಕರಬೂಜ ಬೇಸಿಗೆಯ ಸಮಯದಲ್ಲಿ ಹೆಚ್ಚು ಫಲದಾಯಕವಾಗುವಂತಹ ಹಣ್ಣುಗಳಲ್ಲೊಂದು. ಹಣ್ಣುಗಳು ಮಾತ್ರವಲ್ಲ, ಇದರ ಬೀಜವೂ ಅಧಿಕ ಉಪಕಾರಿಯಾದಂತಹ ಪದಾರ್ಥ. ಆರೋಗ್ಯಸಹಕಾರಿ ಗುಣಗಳು ಹಾಗೂ ಅನೇಕ ಔಷಧೀಯ ಗುಣಗಳನ್ನು ಹೊಂದಿರುತ್ತದೆ.ಕರಬೂಜದ ಬೀಜಗಳು ಪ್ರೋಟೀನ್ ಭರಿತವಾದಂಥವುಗಳು. ಕಣ್ಣಿನ ಆರೋಗ್ಯಕ್ಕೆ ಇವುಗಳ ಸೇವನೆಯು ಬಹಳ ಒಳ್ಳೆಯದು. ಮೂಳೆಗಳ ಸಾಂದ್ರತೆಯನ್ನು ಹೆಚ್ಚು ಮಾಡಲು ಕರಬೂಜದ ಬೀಜಗಳ ಸೇವನೆಯು ಸಹಕಾರಿ. ವಯಸ್ಸಾದಂತೆ ಮೂಳೆಗಳ ಸಾಂದ್ರತೆಯು ಕಡಿಮೆ ಆಗುತ್ತ ಹೋಗುತ್ತದೆ. ಆ ಮಧುಮೇಹವು ಇತ್ತೀಚಿನ ದಿನಗಳಲ್ಲಿ ಬಹಳ ಸಾಮಾನ್ಯವಾಗಿ ಕಾಡುತ್ತಿರುವಂತಹ […]

ಕರಬೂಜ ಬೀಜಗಳಲ್ಲಿದೆ ಆರೋಗ್ಯ ವೃದ್ಧಿಸುವ ಅಂಶ Read More »

ಆರೋಗ್ಯ ಮಾಹಿತಿ

ಪುತ್ರಿ ಜತೆ ಶಬರಿಮಲೆಗೆ ತೆರಳಿದ್ದ ಯುವ ಉದ್ಯಮಿ ಸಾವು

(ನ್ಯೂಸ್ ಕಡಬ) newskadaba.com,ಪುತ್ತೂರು,ಮೇ.17. ನಗರದ ಯುವ ಉದ್ಯಮಿಯೋರ್ವರು ಗುರುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ತನ್ನ 8 ವರ್ಷದ ಪುತ್ರಿ ಜತೆ ಮಾಲಾಧಾರಿಯಾಗಿ ಶಬರಿಮಲೆಗೆ ತೆರಳಿದ್ದ ವೇಳೆಯಲ್ಲಿ ಈ ಘಡನೆ ನಡೆದಿದೆ.ನರಿಮೊಗರು ಗ್ರಾಮದ ವೀರಮಂಗಲ ಗುತ್ತು ನಿವಾಸಿ, ಜನಾರ್ದನ ಗೌಡ (36) ಮೃತಪಟ್ಟವರು. ಪುತ್ತೂರಿನ ತೆಂಕಿಲದಲ್ಲಿ ಶ್ರೀ ಮಹಾಲಿಂಗೇಶ್ವರ ಎಂಟರ್‌ಪ್ರೈಸಸ್‌ ಸಂಸ್ಥೆಯನ್ನು ನಡೆಸುತ್ತಿದ್ದರು. ಅವರು ಪುತ್ರಿ, ಭಾವ ಹಾಗೂ ಇನ್ನಿಬ್ಬರ ಜತೆ ಮೇ 15ರಂದು ಪೂರ್ವಾಹ್ನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇರುಮುಡಿ ಕಟ್ಟಿ ಮಧ್ಯಾಹ್ನ ರೈಲಿನ ಮೂಲಕ ಮಂಗಳೂರಿನಿಂದ ಶಬರಿಮಲೆ ಯಾತ್ರೆ ತೆರಳಿದ್ದರು.

ಪುತ್ರಿ ಜತೆ ಶಬರಿಮಲೆಗೆ ತೆರಳಿದ್ದ ಯುವ ಉದ್ಯಮಿ ಸಾವು Read More »

ಕರಾವಳಿ

ವಿಶ್ವಕಪ್ ಗೆ ಫಿಟ್: ಶಾದಾಬ್ ಖಾನ್

(ನ್ಯೂಸ್ ಕಡಬ) newskadaba.com,ಕರಾಚಿ,ಮೇ.17.ವೈರಲ್ ಸೋಂಕಿನಿಂದ ನರಳುತ್ತಿದ್ದ ಶಾದಾಬ್‌ ಖಾನ್‌ ಈಗ ಪೂರ್ತಿ ಚೇತರಿಸಿಕೊಂಡಿದ್ದಾರೆ. ಪಾಕಿಸ್ಥಾನದ ಯುವ ಲೆಗ್‌ಸ್ಪಿನ್‌ ಬೌಲಿಂಗ್‌ ಆಲ್ರೌಂಡರ್‌ ಶಾದಾಬ್‌ ಖಾನ್‌ ಆರೋಗ್ಯ ಸಂಪೂರ್ಣ ಚೇತರಿಸಿದ್ದು, ವಿಶ್ವಕಪ್‌ನಲ್ಲಿ ಆಡಲಿದ್ದಾರೆ ಎಂದು ಪಿಸಿಬಿ ತಿಳಿಸಿದೆ.ತವರಿಗೆ ಮರಳಿದ ಶಾದಾಬ್‌ ಗುರುವಾರ ಇಂಗ್ಲೆಂಡಿಗೆ ತೆರಳಲಿದ್ದಾರೆ.ಹೆಪಟೈಟಿಸ್‌ ಸಿ ಲಕ್ಷಣವಿದ್ದುದರಿಂದ ಅವರು ಮ್ಯಾಂಚೆಸ್ಟರ್‌ ವೈದ್ಯ ಡಾ| ಪ್ಯಾಟ್ರಿಕ್‌ ಕೆನಡಿ ಬಳಿ ಚಿಕಿತ್ಸೆ ಪಡೆದಿದ್ದರು. ವಿಶ್ವಕಪ್‌ ಆಡುವುದನ್ನು ನಾನು ಎದುರು ನೋಡುತ್ತಿದ್ದೇನೆ. ಪಾಕಿಸ್ಥಾನದ ಯಶಸ್ಸಿನಲ್ಲಿ ನನ್ನ ಪಾತ್ರವೂ ಇರಬೇಕೆಂಬ ಬಯಕೆ ಹೊಂದಿದ್ದೇನೆ’ ಎಂದು ಶಾದಾಬ್‌

ವಿಶ್ವಕಪ್ ಗೆ ಫಿಟ್: ಶಾದಾಬ್ ಖಾನ್ Read More »

ಕ್ರೀಡಾ ನ್ಯೂಸ್

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com,ಬೆಳ್ತಂಗಡಿ,ಮೇ.17. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಶೃಂಗೇರಿಯಿಂದ ಹೊರಟು ಮಧ್ಯಾಹ್ನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಗುರುವಾರ ಭೇಟಿ ನೀಡಿದರು. ಬಳಿಕ ಸಂಜೆ 5 ಗಂಟೆಗೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ರಾಜಕೀಯ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ.ದೇವರ ದರ್ಶನ ಪಡೆಯಲು ಬಂದಿದ್ದೇನೆ. ರಾಜಕೀಯ ವಿಚಾರವಾಗಿ ನೋ ಕಮೆಂಟ್ಸ್‌ ಎಂದರು. ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ. ಸದಾಶಿವ ಮತ್ತಿತರರಿದ್ದರು.  

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ Read More »

ಕರಾವಳಿ

ಹಿರಿಯ ನಾಗರಿಕರಿಗೆ ಒಂದು ದಿನದ ಉಚಿತ ಕಾರ್ಯಗಾರ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.17. ಮಂಗಳೂರಿನ ಕದ್ರಿಹಿಲ್ಸ್‍ನ ಐ.ಟಿ.ಐ ಕ್ಯಾಂಪಸ್‍ನಲ್ಲಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಯಲ್ಲಿ ಹಿರಿಯ ನಾಗರಿಕರಿಗಾಗಿ ಇಂಟರ್ನೆಟ್ ಹಾಗೂ ಇ-ಪೇಮೆಂಟ್ ಬಗ್ಗೆ ಅರಿವು ಮೂಡಿಸಲು ಒಂದು ದಿನದ ಕಾರ್ಯಗಾರವನ್ನು ಮೇ 21 ರಂದು ಆಯೋಜಿಸಲಾಗಿದೆ. ತ್ವರಿತವಾಗಿ ಬೆಳೆಯುತ್ತಿರುವ ತಾಂತ್ರಿಕತೆಗೆ ತಕ್ಕಂತೆ ಹಿರಿಯ ನಾಗರಿಕರು ತಮ್ಮನ್ನು ಅಗತ್ಯ ಇ-ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ಈ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ. ತರಬೇತಿ ಪಡೆಯಲು ಆಸಕ್ತಿ ಹೊಂದಿದ, ದೈಹಿಕ ಹಾಗೂ ಮಾನಸಿಕ ಕ್ಷಮತೆಯಿಂದ ಕೂಡಿದ, 60 ವರ್ಷ ಮೀರಿದ ಹಿರಿಯ ನಾಗರಿಕರು ತಮ್ಮ

ಹಿರಿಯ ನಾಗರಿಕರಿಗೆ ಒಂದು ದಿನದ ಉಚಿತ ಕಾರ್ಯಗಾರ Read More »

ಕರಾವಳಿ

ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.17.ಸರ್ಕಾರಿ ಪಾಲಿಟೆಕ್ನಿಕ್ ಬಂಟ್ವಾಳ ಇದರ ಕಟ್ಟಡ ಒಳ ಮತ್ತು ಹೊರ ಆವರಣ, ಉದ್ಯಾನವನ, ಕಾಲೇಜಿನ ವಸ್ತುಗಳು, ವರ್ಕ್‍ಶಾಪ್ ಉಪಕರಣಗಳು, ಎಲೆಕ್ಟ್ರಾನಿಕ್ ಉಪಕರಣಗಳು, ಪೀಠೋಪಕರಣಗಳು, ವಾಹನಗಳು, ಕಡತಗಳು ಇತ್ಯಾದಿಗಳ ಭದ್ರತೆಯನ್ನು ನೋಡಿಕೊಳ್ಳಲು ಭದ್ರತಾ ರಕ್ಷಕ (ಸೆಕ್ಯೂರಿಟಿ ಗಾರ್ಡ್ ) ಗುತ್ತಿಗೆ ಸೇವೆ ಒದಗಿಸಲು ಇ-ಪ್ರೊಕ್ಯೂರ್‍ಮೆಂಟ್ ಮೂಲಕ ಟೆಂಡರ್ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಪಾಲಿಟೆಕ್ನಿಕ್, ಬಂಟ್ವಾಳ ಇವರನ್ನು ಸಂಪರ್ಕಿಸಬಹುದು.

ಟೆಂಡರ್ ಆಹ್ವಾನ Read More »

ಕರಾವಳಿ

ಉಜಿರೆ ರುಡ್‍ಸೆಟ್‍ನಲ್ಲಿ ಹಲವು ಉಚಿತ ತರಬೇತಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.17. ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಹಾಗೂ ಉದ್ಯೋಗವನ್ನು ಅರಸುತ್ತಿರುವವರಿಗೆ ಆಶಾಕಿರಣವಾಗಿರುವ ಮತ್ತು ಕೇಂದ್ರ ಸರಕಾರದಿಂದ ಸ್ವ ಉದ್ಯೋಗಕ್ಕಾಗಿ ಅನುಕರಣೀಯ ಮಾದರಿ ಎಂದು ಗುರಿತಿಸಲ್ಪಟ್ಟು ದೇಶದ ಪ್ರತಿ ಜಿಲ್ಲೆಯಲ್ಲೂ ಬೇರೆ ಬೇರೆ ಬ್ಯಾಂಕುಗಳಿಂದ ರುಡ್‍ಸೆಟ್ ಮಾದರಿ ಸಂಸ್ಥೆಗಳನ್ನು ಸ್ಥಾಪಿಸಿ ಇಂದು ಅನೇಕ ಯುವ ಜನರಿಗೆ ಸ್ವ ಉದ್ಯೋಗವನ್ನು ಕಲ್ಪಿಸಿರುವ ಉಜಿರೆಯ ರುಡ್‍ಸೆಟ್ ಸಂಸ್ಥೆಯಲ್ಲಿ ಮುಂದಿನ ತಿಂಗಳುಗಳಲ್ಲಿ ನಡೆಯುವ ತರಬೇತಿಗಳ ವಿವರಗಳು: ಮಹಿಳೆಯರ ಟೈಲರಿಂಗ್ (ವಸ್ತ್ರವಿನ್ಯಾಸ) 30 ದಿನಗಳು ಮೇ 20 ರಿಂದ ಜೂನ್ 18,

ಉಜಿರೆ ರುಡ್‍ಸೆಟ್‍ನಲ್ಲಿ ಹಲವು ಉಚಿತ ತರಬೇತಿಗಳು Read More »

ಕರಾವಳಿ

ಪಿಂಚಣಿ ಅದಾಲತ್

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.17. ಮಂಗಳೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿ ಬಲ್ಮಠದಲ್ಲಿ ಪಿಂಚಣಿ ಅದಾಲತ್ ಜೂನ್ ತಿಂಗಳ 7 ರಂದು ಪೂರ್ವಾಹ್ನ 11 ಗಂಟೆಗೆ ಜರುಗಲಿದೆ. ಮಂಗಳೂರು ಅಂಚೆ ವಿಭಾಗದಲ್ಲಿ ಪಿಂಚಣಿ ತೆಗೆದುಕೊಳ್ಳುವ ನಿವೃತ್ತ ಅಂಚೆ ನೌಕರರು ಸಂಬಂಧಪಟ್ಟ ದೂರುಗಳೇನಾದರೂ ಇದ್ದಲ್ಲಿ ಜೂನ್ 3ರ ರೊಳಗೆ ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಬಲ್ಮಠ, ಮಂಗಳೂರು -575002 ವಿಳಾಸಕ್ಕೆ ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.

ಪಿಂಚಣಿ ಅದಾಲತ್ Read More »

ಕರಾವಳಿ

ಅಂಚೆ ಜೀವ ವಿಮೆ ಪ್ರೀಮಿಯಂ ಪಾವತಿಗೆ ಆನ್ ಲೈನ್/ಕೌಂಟರ್ ಸೌಲಭ್ಯ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.17.ಅಂಚೆ ಕಚೇರಿಯ ಅಂಚೆ ಜೀವ ವಿಮೆಗೆECS ಮೂಲಕ ಪ್ರೀಮಿಯಂ ಪಾವತಿ ಮಾಡುತ್ತಿರುವ ಗ್ರಾಹಕರು ಹೊಸ ತಂತ್ರಜಾನದ ಬಳಕೆಯ ಕಾರ್ಯವು ಪ್ರಗತಿಯಲ್ಲಿರುವುದರಿಂದ SBI ಹೊರತಾಗಿ ಇತರ ಬ್ಯಾಂಕ್ ಗಳಿಂದ ECS ಗೆ ನೋಂದಾಯಿಸಿದ ಹೆಚ್ಚಿನ ಪಾಲಿಸಿಗಳಿಗೆ  ECS ಮುಖಾಂತರ ಪ್ರೀಮಿಯಂ ಪಾವತಿ ಆಗಿರುವುದಿಲ್ಲ. ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಿ ನಿಮ್ಮ ಪಾಲಿಸಿಯ ಸ್ಟೇಟಸ್ ಅನ್ನು ಪರಿಶೀಲಿಸಬೇಕು ಹಾಗೂ ತಂತ್ರಜಾನದ ಪ್ರಗತಿಯು ಪೂರ್ಣ ಆಗುವ ತನಕ ಕೌಂಟರ್ ಮೂಲಕ ಅಥವಾ ಆನ್ ಲೈನ್ ಮೂಲಕ (https://pli.indiapost.gov.in) ಪ್ರೀಮಿಯಂ ಪಾವತಿ

ಅಂಚೆ ಜೀವ ವಿಮೆ ಪ್ರೀಮಿಯಂ ಪಾವತಿಗೆ ಆನ್ ಲೈನ್/ಕೌಂಟರ್ ಸೌಲಭ್ಯ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ್ ಗಳಲ್ಲಿ ಉಪ ಚುಣಾವಣೆಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗರೂಕತಾ ಕ್ರಮ : ನಿಷೇಧಾಜ್ಷೆ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.17.ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ್‍ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದ್ದು ಈ ಸಮಯ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗರೂಕತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ, ಕರ್ನಾಟಕ ಅಬಕಾರಿ ಸನ್ನದುಗಳ (ಸಾಮಾನ್ಯ ಷರತ್ತುಗಳು) ನಿಯಮ 1967 ರ ನಿಯಮ 10-ಬಿ ಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಪಡುಪೆರಾರ ಮತ್ತು ತಲಪಾಡಿ ಗ್ರಾಮ ಪಂಚಾಯತ್, ಪುತ್ತೂರು ತಾಲೂಕಿನ ಕಬಕ ಮತ್ತು

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ್ ಗಳಲ್ಲಿ ಉಪ ಚುಣಾವಣೆಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗರೂಕತಾ ಕ್ರಮ : ನಿಷೇಧಾಜ್ಷೆ Read More »

ಕರಾವಳಿ
Scroll to Top