ಕಡಬ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದ ಸಹಭಾಗಿತ್ವದಲ್ಲಿ►ಜಲಕೃಷಿಯಲ್ಲಿ ಉದ್ಯಮ ಶೀಲತೆಯ ಕಲಿಕೆಯೊಂದಿಗೆ ಕ್ಷೇತ್ರ ಭೇಟಿಯ ಅಧ್ಯಯನ

(ನ್ಯೂಸ್ ಕಡಬ) newskadaba.comಮಂಗಳೂರು ,ಜ.29. ಜಲಚರ ಜೀವಿಗಳಿಗೆ ತಗಲುವ ರೋಗಗಳ ಚಿಕಿತ್ಸೆ ಮತ್ತು ಮೀನು ಸಾಕಣೆಯಲ್ಲಿ ಉದ್ಯಮ ಶೀಲತೆ ಕುರಿತು ಒಂದು ತಿಂಗಳ ತರಬೇತಿ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಎಸ್. ರವರು ಜನವರಿ 21 ರಂದು ಚಾಲನೆ ಕೊಟ್ಟರು. ಈ ತರಬೇತಿಯನ್ನು ನಗರದ ಮೀನುಗಾರಿಕಾ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದ ಸಹಭಾಗಿತ್ವದಲ್ಲಿ ನಡೆಸಲಾಗುತ್ತಿದೆ. ಹೈದರಾಬಾದ್‍ನ ರಾಷ್ಟ್ರೀಯ ಕೃಷಿ ವಿಸ್ತರಣೆ ನಿರ್ವಹಣಾ ಸಂಸ್ಥೆಯ ಧನ ಸಹಾಯದೊಂದಿಗೆ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿರುತ್ತದೆ. ಮೀನುಗಾರಿಕಾ […]

ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದ ಸಹಭಾಗಿತ್ವದಲ್ಲಿ►ಜಲಕೃಷಿಯಲ್ಲಿ ಉದ್ಯಮ ಶೀಲತೆಯ ಕಲಿಕೆಯೊಂದಿಗೆ ಕ್ಷೇತ್ರ ಭೇಟಿಯ ಅಧ್ಯಯನ Read More »

ಕರಾವಳಿ

ಬಿಪಿಎಲ್ ಕಾರ್ಡ್​ದಾರರಿಗೆ ಅಕ್ಕಿ ಬದಲು ಹಣ?► ಹೊಸ ಪ್ರಯೋಗಕ್ಕೆ ಮುಂದಾದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜ.29.ಬಿಪಿಎಲ್ಕಾರ್ಡ್​ದಾರರಿಗೆ ಅಕ್ಕಿ ಕೊಡುವ ಬದಲು ಹಣ ನೀಡುವುದನ್ನು ಪುದುಚೇರಿ, ಛತ್ತೀಸ್​ಗಢ ಮತ್ತು ದಾದರ್​ನಲ್ಲಿ ಈಗಾಗಲೇ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಇದನ್ನು ಎಲ್ಲೆಡೆ ವಿಸ್ತರಿಸುವ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ಕೇಂದ್ರ ಆಹಾರ ಸಚಿವ ರಾಮ್​ಲಾಸ್ ಪಾಸ್ವಾನ್ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪುದುಚೇರಿಯಲ್ಲಿ ಹಣದ ಬದಲು ಹಿಂದಿನ ವ್ಯವಸ್ಥೆಯಲ್ಲೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಕೊಡಲಿ ಎಂದು ಅಲ್ಲಿನ ಕಾರ್ಡ್​ದಾರರು ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿಯೂ ಅಕ್ಕಿ ಬದಲಿಗೆ ಹಣ ಕೊಡುವ ವ್ಯವಸ್ಥೆ

ಬಿಪಿಎಲ್ ಕಾರ್ಡ್​ದಾರರಿಗೆ ಅಕ್ಕಿ ಬದಲು ಹಣ?► ಹೊಸ ಪ್ರಯೋಗಕ್ಕೆ ಮುಂದಾದ ಕೇಂದ್ರ ಸರ್ಕಾರ Read More »

ಕರಾವಳಿ

ಬೆಳ್ಳಾರೆ ಘಟಕದ ಗೃಹರಕ್ಷಕದಳ ಕಛೇರಿಗೆ ಜಿಲ್ಲಾ ಸಮಾದೇಷ್ಠರ ಭೇಟಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ,ಜ.28. ಸಮಾದೇಷ್ಟರು ಡಾ| ಮುರಲೀ ಮೋಹನ್ ಚೂಂತಾರು ಬೆಳ್ಳಾರೆ ಘಟಕಕ್ಕೆದಿನಾಂಕ : 27-01-2018ನೇ ಭಾನುವಾರ ಭೇಟಿ ನೀಡಿ ಕವಾಯತು ವೀಕ್ಷಣೆ ನಡೆಸಿ ಗೃಹರಕ್ಷಕರ ಕುಂದು ಕೊರತೆಗಳ ಹಾಗೂ ಕರ್ತವ್ಯಗಳ ಬಗ್ಗೆ ಚರ್ಚಿಸಿದರು. ನಿಷ್ಕ್ರೀಯ ಗೃಹರಕ್ಷಕರನ್ನು ತೆಗೆದು ಹೊಸ ಗೃಹರಕ್ಷಕರನ್ನು ನೇಮಿಸುವಂತೆ ಸೂಚಿಸಿದರು. ಹಾಗೂ ಮುಂಬರುವ ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ಹೆಚ್ಚನ ಸಂಖ್ಯೆಯಲ್ಲಿ ಗೃಹರಕ್ಷಕರನ್ನು ನಿಯೋಜಿಸಲು ಸೂಚಿಸಿದರು. ಗೃಹರಕ್ಷಕರ ಕ್ಷೇಮಾಭಿವೃದ್ಧಿ ನಿಧಿ ವಂತಿಕೆಯನ್ನು ನೀಡಲು ಹಾಗೂ ಸಮೂಹ ವಿಮೆ ಮಾಡಿಸಲು ಸೂಚಿಸಿದರು. ಏಪ್ರಿಲ್ ತಿಂಗಳಿನಿಂದ ಎಲ್ಲಾ

ಬೆಳ್ಳಾರೆ ಘಟಕದ ಗೃಹರಕ್ಷಕದಳ ಕಛೇರಿಗೆ ಜಿಲ್ಲಾ ಸಮಾದೇಷ್ಠರ ಭೇಟಿ Read More »

ಕರಾವಳಿ

ಶಕ್ತಿನಗರ: ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು,ಜ.28.ಮಂಗಳೂರು: ಶಕ್ತಿನಗರದ ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಂಗಳೂರಿನ ಬೆಸೆಂಟ್ ಸಂಸ್ಥೆಗಳ ಆಡಳಿತ ಮಂಡಳಿ ವಿಮೆನ್ಸ್ ನ್ಯಾಶನಲ್ ಎಜ್ಯುಕೇಶನ್ ಸೊಸೈಟಿಯ ಶೈಕ್ಷಣಿಕ ಸಲಹೆಗಾರರಾಗಿರುವ ಶ್ರೀಮತಿ ಲಲಿತಾ ಮಲ್ಯ ಮಾತನಾಡುತ್ತಾ ಪ್ರತಿಯೊಬ್ಬ ವ್ಯಕ್ತಿಯೂ ದೇಶದ ಕಾನೂನು, ನೀತಿ, ನಿಯಮಗಳನ್ನು ಚಾಚೂ ತಪ್ಪದೆ ಭಾಗವಹಿಸಬೇಕಲ್ಲದೆ ತಾನು ದೇಶದ ಪ್ರಗತಿಗೆ ಹೇಗೆ ಸಹಕಾರಿಯಾಗಬೇಕೆಂಬುದರ ಕುರಿತಾಗಿ ಕ್ಷಣ ಕ್ಷಣವೂ ಯೋಚಿಸಿಬೇಕು. ವಿಶಾಲ ದೇಶವನ್ನು ತೆಗೆದುಕೊಂಡಾಗ ವ್ಯಕ್ತಿ ಮುಖ್ಯ

ಶಕ್ತಿನಗರ: ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ Read More »

ಕರಾವಳಿ

ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಸ್ನೇಹ ಸಮಾವೇಶ ಸಮಾರಂಭ.

(ನ್ಯೂಸ್ ಕಡಬ) newskadaba.com ಮಂಗಳೂರು,ಜ.28.ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಸ್ನೇಹ ಸಮಾವೇಶ ಸಮಾರಂಭವು  ದಿನಾಂಕ  27.1.2019ರ೦ದು  ಮಂಗಳೂರು ನಗರದ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ  ಕಾನೂನು ಮಹಾ ವಿದ್ಯಾಲಯದ ಸಭಾಂಗಣದಲ್ಲಿ ಜರಗಿತು. ಜಿಲ್ಲಾ ನ್ಯಾಯಾಲಯದ ತೀರ್ಪು ಬರಹಗಾರರಾದ ಶ್ರೀ ಸುಬ್ರಹ್ಮಣ್ಯ ಬಾಯಿರಿ ಇವರ ಪಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಸಂಘದ ಜತೆ ಕಾರ್ಯದರ್ಶಿ ಶ್ರೀ ರಾಜಮುಡಿ ಅವರು ಉಪಸ್ಥಿತರಿದ್ದ ಎಲ್ಲರನ್ನು ಸ್ವಾಗತಿಸಿದರು.    ಶಿರಸ್ತೇದಾರ ಶ್ರೀ ರಾಜೇಶ್ ಎಂ. ಅವರು ಪ್ರಾಸ್ತಾವಿಕ

ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಸ್ನೇಹ ಸಮಾವೇಶ ಸಮಾರಂಭ. Read More »

ಕರಾವಳಿ

ಮನೆಯಲ್ಲಿರುವ ಪ್ರಶಸ್ತಿ, ಸನ್ಮಾನ ಪತ್ರಗಳಿಂದ ಹೊಟ್ಟೆ ತುಂಬುತ್ತದೆಯೇ ►ಆರ್ಥಿಕ ನೆರವು ನೀಡದ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ ಸಾಲುಮರದ ತಿಮ್ಮಕ್ಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.28. ತಮ್ಮನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದಕ್ಕೆ ವರ್ಷದ ಸಾಲುಮರದ ತಿಮ್ಮಕ್ಕ ಒಂದೆಡೆ ಖುಷಿಯಾಗಿದ್ದರೆ ಇನ್ನೊಂದೆಡೆ ರಾಜ್ಯ ಸರ್ಕಾರ ತಮ್ಮ ಕೆಲಸವನ್ನು ಸರಿಯಾಗಿ ಗುರುತಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಕರ್ನಾಟಕ ಸರ್ಕಾರ ಹಲವು ಪ್ರಶಸ್ತಿಗಳನ್ನು ತಿಮ್ಮಕ್ಕ ಅವರಿಗೆ ನೀಡಿದ್ದರೂ,  ಅವರ ಹೆಸರಿನಲ್ಲಿ ಕೆಲವು ಹಸಿರು ಯೋಜನೆಗಳನ್ನು ಪ್ರಕಟಿಸಿದ್ದರೂ ಕೂಡ ಮಾಸಿಕ ವೃದ್ಯಾಪ್ಯ ವೇತನ ಎಂದು ರಾಜ್ಯ ಸರ್ಕಾರದಿಂದ ತಿಂಗಳಿಗೆ 500 ರೂಪಾಯಿ ಸಹಾಯ ಬಿಟ್ಟರೆ ಇದುವರೆಗೆ ಆರ್ಥಿಕ ನೆರವು ಬೇರೇನು

ಮನೆಯಲ್ಲಿರುವ ಪ್ರಶಸ್ತಿ, ಸನ್ಮಾನ ಪತ್ರಗಳಿಂದ ಹೊಟ್ಟೆ ತುಂಬುತ್ತದೆಯೇ ►ಆರ್ಥಿಕ ನೆರವು ನೀಡದ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ ಸಾಲುಮರದ ತಿಮ್ಮಕ್ಕ Read More »

ಕರಾವಳಿ

ಕಡಬ: ಹೊನಲು ಬೆಳಕಿನ ಮ್ಯಾಟ್ ಅಂಕಣದ ಮುಕ್ತ ಕಬಡ್ಡಿ ಪಂದ್ಯಾಟ ಉಜಿರೆ ಎಸ್.ಡಿ.ಎಂ. ಪ್ರಥಮ, ಬಂಟ್ವಾಳ ಭದ್ರ ಚಾಲೆಂಜರ್ಸ್ ದ್ವಿತೀಯ

(ನ್ಯೂಸ್ ಕಡಬ) newskadaba.com ಕಡಬ, ಜ.28.  ಕಡಬ ಮಧುರ ಟೂರಿಸ್ಟ್ ವ್ಯಾನ್ ಮತ್ತು ಟ್ರಾಕ್ಸ್ ಚಾಲಕ-ಮಾಲಕರ ಸಂಘ, ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಯೋಗದೊಂದಿಗೆ ಗಣರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಅಂಕಣದ ಮುಕ್ತ ಕಬಡ್ಡಿ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ ಜ.25ರಂದು ಕಡಬ ಹೆಚ್.ಪಿ. ಪೆಟ್ರೋಲ್ ಬಂಕ್ ಬಳಿಯ ಎಸ್.ಆರ್. ಲೇಔಟ್ ಕ್ರೀಡಾಂಗಣದಲ್ಲಿ ನಡೆಯಿತು. ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಯು ನಮಗೆ ಮನೋರಂಜನೆ ಜೊತೆಗೆ

ಕಡಬ: ಹೊನಲು ಬೆಳಕಿನ ಮ್ಯಾಟ್ ಅಂಕಣದ ಮುಕ್ತ ಕಬಡ್ಡಿ ಪಂದ್ಯಾಟ ಉಜಿರೆ ಎಸ್.ಡಿ.ಎಂ. ಪ್ರಥಮ, ಬಂಟ್ವಾಳ ಭದ್ರ ಚಾಲೆಂಜರ್ಸ್ ದ್ವಿತೀಯ Read More »

ಕರಾವಳಿ

ಇಂದು ಸಬಳೂರು ಶ್ರೀರಾಮ ಭಜನಾ ಮಂಡಳಿಯ ದಶಮಾನೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜ.28. ಕಡಬ ತಾಲೂಕಿನ ಕೊೈಲ ಗ್ರಾಮದ ಸಬಳೂರು ಅಯೋಧ್ಯಾನಗರದ ಶ್ರೀ ರಾಮ ಭಜನಾ ಮಂಡಳಿಯ ದಶಮಾನೋತ್ಸವ ಕಾರ್ಯಕ್ರಮ ಜನವರಿ 28 ರಂದು ನಡೆಯಲಿದೆ.ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಸಾಯಂಕಾಲ ಶ್ರೀ ಸತ್ಯನಾಯಾರಣ ದೇವರ ಪೂಜೆ ಹಾಗೂ ಭಜನಾ ಕಾರ್ಯಕ್ರಮ, ಪ್ರಸಾದ ವಿತರಣೆ ನಡೆಯಲಿದೆ. ಬಳಿಕ ನಡೆಯುವ ಧಾರ್ಮಿಕ ಸಭೆಯಲ್ಲಿ ಭಜನಾ ಮಂಡಳಿಯ ಗೌರವಾಧ್ಯಕ್ಷ ಬೆಳಿಯಪ್ಪ ಗೌಡ ತಿಮರಗುಡ್ಡೆ ಅಧ್ಯಕ್ಷತೆವಹಿಸಲಿದ್ದಾರೆ. ಧಾರ್ಮಿಕ ವಿದ್ವಾಂಸ ಕಶೆಕೋಡಿ ಸೂರ್ಯನಾರಾಯಣ ಭಟ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಸುಳ್ಯ ಶಾಸಕ

ಇಂದು ಸಬಳೂರು ಶ್ರೀರಾಮ ಭಜನಾ ಮಂಡಳಿಯ ದಶಮಾನೋತ್ಸವ Read More »

ಕರಾವಳಿ

ಕೋಚಕಟ್ಟೆ: ವಿದ್ಯುತ್ ಪರಿವರ್ತಕ ಉದ್ಘಾಟನೆ

(ನ್ಯೂಸ್ ಕಡಬ) newskadaba.com.ಕಡಬ,ಜ.26. ಕಡಬ ಮೆಸ್ಕಾಂ ವಿಭಾಗದ ಆಲಂಕಾರು ಶಾಖೆಯ ಪೆರಾಬೆ ಗ್ರಾಮದ ಕೊಚಕಟ್ಠೆ ಎಂಬಲ್ಲಿ ನೂತನವಾಗಿ ಅಳವಡಿಸಲಾದ ವಿದ್ಯುತ್ ಪರಿವರ್ತಕದ ಉದ್ಘಾಟನಾ ಸಮಾರಂಭ  ನಡೆಯಿತು.  ಪೆರಾಬೆ ಗ್ರಾ.ಪಂ.ಉಪಾಧ್ಯಕ್ಷ ಜನಾರ್ದನ ಶೆಟ್ಟಿ ಸುರುಳಿ ಉದ್ಘಾಟಿಸಿದರು. ಬಳಿಕ ಪೆರಾಬೆ ಗ್ರಾ.ಪಂ.ಸಭಾಂಗಣದಲ್ಲಿ ಗ್ರಾ.ಪಂ.ಸದಸ್ಯೆ ಅಮೃತ ರೈಯವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಮೆಸ್ಕಾಂ ಕಡಬ ವಿಭಾಗದ ಸಹಾಯಕ ಇಂಜಿನಿಯರ್ ಸಜಿಕುಮಾರ್‍ರವರು ಸಭಾ ಕಾರ್ಯಕ್ರಮ ಉದ್ಘಾಟಿಸಿದರು.    ಪೆರಾಬೆ ಗ್ರಾ.ಪಂ.ಸದಸ್ಯೆ ಬೇಬಿ.ಸಿ.ಪಾಟಾಲಿ, ಮೆಸ್ಕಾಂ ಆಲಂಕಾರು ಶಾಖಾಧಿಕಾರಿ ಗೌತಮ್ ಎಸ್., ಪ್ರಭಾರ ಪಿಡಿಒ ಲಲಿತಾ ಜಿ.ಡಿ.,ಯವರು

ಕೋಚಕಟ್ಟೆ: ವಿದ್ಯುತ್ ಪರಿವರ್ತಕ ಉದ್ಘಾಟನೆ Read More »

ಕರಾವಳಿ

ಬಂಟ್ವಾಳ: ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com.ಬಂಟ್ವಾಳ,ಜ.26.ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು  ಅರಣ್ಯಇಲಾಖೆಯವರು ಬಂಟ್ವಾಳ ಸಮೀಪದ ಮೆಲ್ಕಾರ್ ಎಂಬಲ್ಲಿ ವಶಪಡಿಸಿಕೊಂಡ ಘಟನೆ ನಡೆದಿದೆ.ಸಕಲೇಶಪುರದಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಲಾರಿಯಲ್ಲಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖಾ ಸಿಬ್ಬಂದಿ ಗಳು ಮೆಲ್ಕಾರ್ ಎಂಬಲ್ಲಿ ದಾಳಿ ನಡೆಸಿದಾಗ ಲಾರಿ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಲಾರಿ ಸಹಿತ ಮರದ ದಿಮ್ಮಿಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಲಾಗಿದೆ.   ಉಪ ಅರಣ್ಯ ಸಂರಕ್ಷಣಾ ಧಿಕಾರಿ ಡಾ.

ಬಂಟ್ವಾಳ: ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು Read More »

ಕರಾವಳಿ
Scroll to Top