ಕಡಬ ನ್ಯೂಸ್

ಗೃಹರಕ್ಷಕ ದಳ ಕಚೇರಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

(ನ್ಯೂಸ್ ಕಡಬ) newskadaba.com.ಕಡಬ,ಜ.26.ದಿನಾಂಕ 26.01.2019ನೇ ಶನಿವಾರ ದಂದು ಮೇರಿಹಿಲ್‍ನಲ್ಲಿರುವ ಗೃಹರಕ್ಷಕ ದಳ ಕಛೇರಿಯಲ್ಲಿ ಬೆಳಗ್ಗೆ 7.30ಕ್ಕೆ ಧ್ವಜಾರೋಹಣ ನಡೆಸಲಾಯಿತು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ| ಮುರಲೀ ಮೋಹನ್ ಚೂಂತಾರುರವರು ಧ್ವಜಾರೋಹಣ ಮಾಡಿ ಮಾತನಾಡಿ ಭಾರತ ಅತೀ ದೊಡ್ಡ ಪ್ರಜಾಪ್ರಭುತ್ವವಾಗಿದ್ದು, ರಾಜ್ಯಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಸರಿಯಾಗಿ ಪೂರಕವಾಗಿ ಕೆಲಸ ಮಾಡಿದರೆ ಮಾತ್ರ ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿಯಲು ಸಾಧ್ಯ, ಗೃಹರಕ್ಷಕರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರ್ಥ ಮಾಡಿಕೊಂಡು ಗೌರವಿಸಬೇಕು ಹಾಗಾದಲ್ಲಿ ಸುಂದರ ಸಧೃಢ ರಾಷ್ಟ್ರ ನಿರ್ಮಾಣ ಸಾಧ್ಯ […]

ಗೃಹರಕ್ಷಕ ದಳ ಕಚೇರಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ Read More »

ಕರಾವಳಿ

ಧರ್ಮಸ್ಥಳ: ಫೆ.9ರಿಂದ 18ರವರೆಗೆ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ

(ನ್ಯೂಸ್ ಕಡಬ) newskadaba.com.ಕಡಬ,ಜ.26.ಶ್ರೀ ಧರ್ಮಸ್ಥಳ ಭಗವಾನ್ ಶ್ರೀ ಬಾಹುಬಲಿ ಚತುರ್ಥ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಇನ್ನು 14 ದಿನಗಳಷ್ಟೇ ಬಾಕಿ. ವೈಭವಪೂರ್ಣ ಮಹಾಮಜ್ಜನ ವೀಕ್ಷಿಸಲು ಲಕ್ಷಾಂತರ ಭಕ್ತರು ಕಾತರರಾಗಿದ್ದು, ಬಾಹುಬಲಿ ಬೆಟ್ಟದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.ಆಚಾರ್ಯ ವರ್ಧಮಾನ ಸಾಗರ್‌ಜಿ ಮಹಾರಾಜ್ ಮತ್ತು ಆಚಾರ್ಯ ಪುಷ್ಪದಂತ ಸಾಗರ್‌ಜಿ ಮಹಾರಾಜ್, ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರ ಮಾರ್ಗದರ್ಶನ ಹಾಗೂ ಕಾರ್ಕಳ ದಾನ ಶಾಲಾ ಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕರ ನೇತೃತ್ವದಲ್ಲಿ ಫೆ.9ರಿಂದ 18ರವರೆಗೆ ಮಹಾಮಸ್ತಕಾಭಿಷೇಕ ನಡೆಯಲಿದೆ. ಪೂರ್ವತಯಾರಿಯ ಪ್ರಮುಖ

ಧರ್ಮಸ್ಥಳ: ಫೆ.9ರಿಂದ 18ರವರೆಗೆ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ Read More »

ಕರಾವಳಿ

 30ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

(ನ್ಯೂಸ್ ಕಡಬ) newskadaba.com.ಕಡಬ,ಜ.26. ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ 30ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹವನ್ನು ಸಡಕ್ ಸುರಕ್ಷಾ-ಜೀವನ ರಕ್ಷಾ ಎಂಬ ಧ್ಯೇಯದೊಂದಿಗೆ ಫೆಬ್ರವರಿ 4 ರಿಂದ 10 ರವರೆಗೆ ಏರ್ಪಡಿಸಲಾಗುವುದು. ಈ ಸಂದರ್ಭದಲ್ಲಿ ವಿವಿಧ ಶಾಲಾ ಕಾಲೇಜುಗಳಲ್ಲಿ ರಸ್ತೆ ಸುರಕ್ಷತೆ,  ವಾಹನ ಚಾಲನೆ ರಸ್ತೆ ನಿಯಮಗಳು ವಾಹನ ಚಲಾವಣೆ ಸಮಯದಲ್ಲಿ ಸೀಟ್‍ಬೆಲ್ಟ್ ಹಾಗೂ  ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮಟ್ ಧರಿಸುವ ಅಗತ್ಯತೆ ಕುರಿತು ಕಾರ್ಯಾಗಾರವನ್ನು ಏರ್ಪಡಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂಥ್ ಸೆಂಥಿಲ್

 30ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ Read More »

ಕರಾವಳಿ

ಕಡಬ : ಸರಸ್ವತೀ ವಿದ್ಯಾಲಯ 70ನೇ ಗಣರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com.ಕಡಬ,ಜ.26.ದಿನಾಂಕ 26.01.2019ನೇ ಶನಿವಾರದಂದು ಸರಸ್ವತೀ ವಿದ್ಯಾಲಯದಲ್ಲಿ ಎಲ್ಲಾ ಸಮೂಹ ಸಂಸ್ಥೆಗಳು ಸೇರಿ 70ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅಥಿತಿಯಾಗಿ ಶ್ರೀ ಕುಂಞಣ್ಣ ಕುದ್ರಡ್ಕ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಇವರು ಧ್ವಜಾರೋಹಣ ಮಾಡಿ ಗಣರಾಜ್ಯೋತ್ಸವದ ಶುಭಾಶಯ ಹಾಗೂ ಸಂವಿಧಾನಕ್ಕೆ ಗೌರವ ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕರು ಶ್ರೀ ವೆಂಕಟರಮಣ ರಾವ್ , ಪ್ರಾಥಮಿಕ ವಿಭಾಗದ ಮುಖ್ಯಗುರುಗಳು ಶ್ರೀ ಮಾಧವ ಕೆ, ಪ್ರೌಢ ವಿಭಾಗದ ಮುಖ್ಯಸ್ಥೆ ಶ್ರೀಮತಿ ಶೈಲಶ್ರೀ, ಕಾಲೇಜು

ಕಡಬ : ಸರಸ್ವತೀ ವಿದ್ಯಾಲಯ 70ನೇ ಗಣರಾಜ್ಯೋತ್ಸವ ಆಚರಣೆ Read More »

ಕರಾವಳಿ

ಬೆಳ್ತಂಗಡಿ: ಲಾರಿ ಹರಿದು ದ್ವಿಚಕ್ರ ವಾಹನ ಸವಾರ ಸಾವು

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜ.25. ಲಾರಿ ಹಾಗೂ ಅಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ದಾರುಣ ಘಟನೆ ನಡೆದಿದೆ. ಜ.೨೫ ರ ಶುಕ್ರವಾರ ಬೆಳ್ತಂಗಡಿ – ಉಜಿರೆಯ ಮಾರ್ಗಮಧ್ಯೆಯ ಕೊಯ್ಯೂರು ಕ್ರಾಸ್ ಎಂಬಲ್ಲಿ ದ್ವಿಚಕ್ರ ವಾಹನ ಸವಾರ ಪಡಂಗಡಿ ಪೊಯ್ಯೆಗುಡ್ಡೆ ಬೋಳ ನಿವಾಸಿ ಚೆನ್ನಪ್ಪ ಅಂಚನ್ (೫೭) ಅಸುನೀಗಿದ್ದಾರೆ.   ಚೆನ್ನಪ್ಪ ಅಂಚನ್ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿಢಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಬಿದ್ದಿದ್ದು ಅವರ ತಲೆಯ ಮೇಲೆ ಲಾರಿಯ ಚಕ್ರ ಹರಿದಿದ್ದು ಇದರ

ಬೆಳ್ತಂಗಡಿ: ಲಾರಿ ಹರಿದು ದ್ವಿಚಕ್ರ ವಾಹನ ಸವಾರ ಸಾವು Read More »

ಕರಾವಳಿ

ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಹಾಗೂ ಸದಸ್ಯರ ಪ್ರವಾಸ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.25.ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎನ್ ಕೃಷ್ಣಮೂರ್ತಿ ಹಾಗೂ ಆಯೋಗದ ಸದಸ್ಯರಾದ ವಿ.ಬಿ ಪಾಟೀಲ್, ಹೆಚ್ ವಿ ಶಿವಶಂಕರ್, ಡಿ.ಜಿ ಹಸಬಿ, ಮಹಮ್ಮದ್ ಆಲಿ ಹಾಗೂ ಮಂಜುಳಾ ಬಾಯಿ ಅವರು ಜನವರಿ 29 ರಿಂದ ಫೆಬ್ರವರಿ 2 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜನವರಿ 29 ರಂದು ಸಂಜೆ ಆಗಮಿಸುವ ನಿಯೋಗವು ಜನವರಿ 30 ರಂದು ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕುಗಳಲ್ಲಿ ಪ್ರವಾಸ ಮಾಡಲಿದ್ದಾರೆ. ನಂತರ ಜಿಲ್ಲೆಯ ತಾಲೂಕುಗಳಿಗೆ ಭೇಟಿ

ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಹಾಗೂ ಸದಸ್ಯರ ಪ್ರವಾಸ Read More »

ಕರಾವಳಿ

ಕನಕ ಕೀರ್ತನ ಗಾಯನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.25. ಮಂಗಳೂರು ವಿಶ್ವವಿದ್ಯಾನಿಲಯ ಕನಕದಾಸ ಅಧ್ಯಯನ ಪೀಠ ಹಾಗೂ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ಪ್ರತಿವರ್ಷ ಏರ್ಪಡಿಸುತ್ತಿರುವ ಕನಕ ಕೀರ್ತನ ಗಾಯನ ಕಾರ್ಯಕ್ರಮವನ್ನು ಫೆಬ್ರವರಿ 9 ರಂದು ಪೂರ್ವಾಹ್ನ 10 ಗಂಟೆಗೆ  ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟೆ ಇಲ್ಲಿ  ನಡೆಸಲಾಗುವುದು. ಕಾರ್ಯಕ್ರಮದ ಉದ್ಘಾಟನೆಯನ್ನು  ಕನ್ನಡದ ಖ್ಯಾತ ಕವಿಯಿತ್ರಿ ಮತ್ತು ಚಿಂತಕಿ ಪ್ರತಿಭಾ ನಂದಕುಮಾರ್, ಇವರು ನೆರವೇರಿಸಲಿರುವರು.   ‘ಸಾಮುದಾಯಿಕ ಪಾಲ್ಗೊಳ್ಳುವಿಕೆ’ಯ ಆಶಯದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳುತ್ತಿರುವ  ಈ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬರುವ ಸಂಯೋಜಿತ ಕಾಲೇಜು

ಕನಕ ಕೀರ್ತನ ಗಾಯನ ಕಾರ್ಯಕ್ರಮ Read More »

ಕರಾವಳಿ

ಆರೋಗ್ಯಕರ ಡಾರ್ಕ್ ಚಾಕಲೇಟ್ ►ಇದರ ಹಲವು ವೈಶಿಷ್ಟತೆಗಳು ನಿಮಗೆ ಗೊತ್ತೇ?

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.25.ಈ ಆಧುನಿಕ ಯುಗದಲ್ಲಿ  ಮಕ್ಕಳಿಂದ  ವಯಸ್ಸಾದವರೆಗೂ ಚಾಕಲೇಟ್​ಗಳನ್ನು ಇಷ್ಟಪಡುತ್ತಾರೆ.ಅಂತೆಯೇ ಚಾಕಲೇಟ್​ಗಳಲ್ಲಿಯೂ ಅನೇಕ ವೈವಿಧ್ಯಮಯವಾದ ಚಾಕಲೇಟ್ ಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ.  ಅಂತಹ ರುಚಿಕರವಾದ ಚಾಕಲೇಟ್ ಗಳ ಗುಂಪಿಗೆ  ಡಾರ್ಕ್ ಚಾಕಲೇಟ್ ಗಳು ಸೇರುತ್ತವೆ. ಡಾರ್ಕ್ ಚಾಕಲೇಟ್​ಗಳು ಆಂಟಿ ಆಕ್ಸಿಡೆಂಟ್​ಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಹೊಂದಿರುವುದರಿಂದ ಫ್ರೀ ರ್ಯಾಡಿಕಲ್ಸ್ ಕಡಿಮೆ ಮಾಡಿ ದೇಹಕ್ಕೆ ವಯಸ್ಸಾಗುವ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ.    ಡಾರ್ಕ್ ಚಾಕಲೇಟ್​ಗಳು ಮುಖ್ಯವಾಗಿ ಸಾವಯವ ಸಂಯುಕ್ತಗಳಾದ ಜೈವಿಕವಾಗಿ ಸಕ್ರಿಯವಾಗಿರುವಂತಹ ಪಾಲಿಫಿನಾಲ್​ಗಳು, ಪ್ಲೇವನ್ಸ್, ಕೆಟಕಿನ್​ಗಳನ್ನು ಹೊಂದಿರುತ್ತದೆ. ಇದು ಇದರ ಚುರುಕಾದ

ಆರೋಗ್ಯಕರ ಡಾರ್ಕ್ ಚಾಕಲೇಟ್ ►ಇದರ ಹಲವು ವೈಶಿಷ್ಟತೆಗಳು ನಿಮಗೆ ಗೊತ್ತೇ? Read More »

ಆರೋಗ್ಯ ಮಾಹಿತಿ

ಕಡಬ ಕಾಲೇಜಿನ ಅನುದಾನ ವಾಪಸಾತಿಗೆ ಸಿಎಂ ಆದೇಶ

(ನ್ಯೂಸ್ ಕಡಬ) newskadaba.com .ಮಂಗಳೂರು, ಜ.25.ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡ ದುರಸ್ಥಿಗೆ ಮಂಜೂರಾಗಿದ್ದ ರೂ. 1 ಕೋಟಿ ಹಣವನ್ನು ಸರಕಾರದ ಸೂಚನೆಯಂತೆ ಜಿಲ್ಲಾಧಿಕಾರಿಯವರು ತಡೆಹಿಡಿದಿದ್ದರು, ಈ ಸಂಬಂಧ ಮುಖ್ಯಮಂತ್ರಿಗಳಿಗೆ ಮಾಡಿರುವ ಮನವಿಗೆ ಸ್ಪಂದನೆ ದೊರೆತಿದ್ದು ಕೂಡಲೇ ಕಾಮಗಾರಿ ಪ್ರಾರಂಭಿಸಲು ಆದೇಶಿಸಿದ್ದಾರೆ ಎಂದು ಕಡಬ ತಾಲೂಕು ಜೆಡಿಎಸ್ ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್ ತಿಳಿಸಿದ್ದಾರೆ. ಹೇಳಿಕೆ ನೀಡಿರುವ ಅವರುಕಡಬ ಸರಕಾರಿ ಪ.ಪೂ.ಕಾಲೇಜಿನ ಶೌಚಾಲಯ, ಶಾಲಾ ಕೊಠಡಿಗಳ ಕಾಮಗಾರಿ ಕೈಗೊಳ್ಳವರೆಗೆ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ರೂ. 1 ಕೋಟಿ

ಕಡಬ ಕಾಲೇಜಿನ ಅನುದಾನ ವಾಪಸಾತಿಗೆ ಸಿಎಂ ಆದೇಶ Read More »

ಕರಾವಳಿ

  ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವೀಧರರಿ0ದ► ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com .ಮಂಗಳೂರು, ಜ.25. ವಾರ್ತಾ ಮತ್ತು ಸಾರ್ವಜನಿಕ ಸ0ಪರ್ಕ ಇಲಾಖೆಯ ಮ0ಗಳೂರು  ಕಚೇರಿಯಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಮೂಲಕ  ಎಸ್.ಸಿ.ಪಿ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವೀಧರರಿ0ದ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಕನಾಟಕ ರಾಜ್ಯದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿ0ದ ಪತ್ರಿಕೋದ್ಯಮ/ಇಲೆಕ್ಟ್ರಾನಿಕ್ ಮಾಧ್ಯಮದಲ್ಲಿ  ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪಡೆದಿರಬೇಕು. ಸ್ನಾತ್ತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಪದವೀಧರ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು. ಅಭ್ಯರ್ಥಿಗಳು

  ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವೀಧರರಿ0ದ► ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top