ಕಡಬ ನ್ಯೂಸ್

ಹಳೆನೇರಿಂಕಿ ಕುಡಿಯುವ ನೀರಿನ ಘಟಕಕ್ಕೆ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ಹಳೆನೇರಿಂಕಿ ಗ್ರಾಮದ ಕಲ್ಲೇರಿ ದಲಿತ ಕಾಲೋನಿಯಲ್ಲಿ ಕುಡಿಯುವ ನೀರಿನ ಘಟಕಕ್ಕೆ ಗುದ್ದಲಿ ಪುಜೆ ಸೋಮವಾರ ನಡೆಯಿತು. ತಾಲೂಕು ಪಂಚಾಯಿತಿ ಸದಸ್ಯೆ ತೇಜಶ್ವಿನಿ ಕಟ್ಟಪುಣಿ ಮಾತನಾಡಿ, ಸುಳ್ಯ ಶಾಸಕ ಎಸ್ ಅಂಗಾರ 2.30 ಲಕ್ಷ , ತಾಲೂಕು ಪಂಚಾಯಿತಿಯ 85 ಸಾವಿರ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿಯ 1ಲಕ್ಷದ 60 ಸಾವಿರ ರೂ ಅನುದಾನದಲ್ಲಿ ಕುಡಿಯುವ ನೀರಿನ ಘಟಕಕ್ಕೆ ಸಂಬಂದಪಟ್ಟಂತೆ ಕೊಳವೆಬಾವಿ, ಪಂಪ್ , ನೀರಿನ ಟ್ಯಾಂಕ್, ಪೈಪು ಅಳವಡಿಕೆಗೆ ಮಾಡಲಾಗುವುದು. ಕಾಮಗಾರಿ ಶೀಘ್ರದಲ್ಲಿ […]

ಹಳೆನೇರಿಂಕಿ ಕುಡಿಯುವ ನೀರಿನ ಘಟಕಕ್ಕೆ ಶಂಕುಸ್ಥಾಪನೆ Read More »

ಕರಾವಳಿ

ಆಲಂಕಾರು ಮೂರ್ತೆದಾರರ ಸಹಕಾರಿ ಸಂಘದಲ್ಲಿ ಇ-ಸ್ಟಾಂಪಿಂಗ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com , ಆಲಂಕಾರು ಮಾ.23. ಮೂರ್ತೆದಾರರ ಸೇವಾ ಸಹಕಾರಿ ಸಂಘ ಆಲಂಕಾರು ಪ್ರಧಾನ ಕಚೇರಿ ಹಾಗೂ ಕಡಬ ಶಾಖೆಯಲ್ಲಿ ಏಕಕಾಲದಲ್ಲಿ ಇ-ಸ್ಟಾಂಪಿಂಗ್ ವ್ಯವಸ್ಥೆಯನ್ನು ಉದ್ಘಾಟಿಸಲಾಯಿತು. ಆಲಂಕಾರು ಪ್ರಧಾನ ಕಚೇರಿಯಲ್ಲಿ ಸ್ಥಳೀಯ ಉಧ್ಯಮಿ ಆಲಂಕಾರು ವರ್ತಕರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಪ್ರಭು ಉದ್ಘಾಟಿಸಿದರು. ನಂತರ ಮಾತನಾಡಿ ಸಹಕಾರಿ ಸಂಸ್ಥೆಗಳು ಉನ್ನತ ಸೇವಾ ಮನೋಭಾವದ ಜೊತೆಗೆ ಇಂತಹ ಉನ್ನತ ಸೇವೆಗಳನ್ನು ಮಾಡುವುದರ ಮೂಲಕ ಗ್ರಾಹಕರನ್ನು ತೃಪ್ತಿಪಡಿಸುವ ಯೋಜನೆಗಳನ್ನು ಜಾರಿಗೊಳಿಸಿ ತಾಲೂಕಿಗೆ ಮಾದರಿ ಸಹಕಾರಿ ಸಂಘವಾಗಿ ಮೂಡಿ ಬರಲಿ ಎಂದು ಶುಭ

ಆಲಂಕಾರು ಮೂರ್ತೆದಾರರ ಸಹಕಾರಿ ಸಂಘದಲ್ಲಿ ಇ-ಸ್ಟಾಂಪಿಂಗ್ ಉದ್ಘಾಟನೆ Read More »

ಕರಾವಳಿ

ಪರಣೆ: ಸೋಲಾರ್ ದೀಪ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.23 .ಜಿ.ಪಂ.ಅನುದಾನದಲ್ಲಿ ಸವಣೂರು ಗ್ರಾ.ಪಂ.ವ್ಯಾಪ್ತಿಯ ಪರಣೆ ಎಂಬಲ್ಲಿ ಅಳವಡಿಸಲಾದ ಸೋಲಾರ್ ದೀಪವನ್ನು  ಜಿ.ಪಂ. ಸದಸ್ಯೆ ಪ್ರಮೀಳಾ ಜನಾರ್ಧನ್ ಉದ್ಘಾಟಿಸಿದರು. ಈ ಸಂದರ್ಭ ಸವಣೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಬಿ.ಕೆ , ತಾ.ಪಂ. ಉಪಾಧ್ಯಕ್ಷೆ  ರಾಜೇಶ್ವರಿ ಕೆ, ಎಪಿಎಂಸಿ ನಿರ್ದೇಶಕ ದಿನೇಶ್ ಮೆದು, ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್, ಸದಸ್ಯರಾದ ಸತೀಶ್ ಅಂಗಡಿಮೂಲೆ, ಜಯಂತಿ ಮಡಿವಾಳ , ಗಾಯತ್ರಿ ಬರೆಮೇಲು, ಸತೀಶ್ ಬಲ್ಯಾಯ, ಪ್ರಕಾಶ್ ಕುದ್ಮನಮಜಲು, ಭಾರತಿ ಗ್ರಾಮ ವಿಕಾಸ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ  ಬಿ.ಕೆ. ರಮೇಶ್ ಕಲ್ಲೂರಾಯ, ದ.ಕ.

ಪರಣೆ: ಸೋಲಾರ್ ದೀಪ ಉದ್ಘಾಟನೆ Read More »

ಕರಾವಳಿ

ಸವಣೂರು: ನವೋದಯ ಗು೦ಪಿನ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾಯ೯ಕ್ರಮ

(ನ್ಯೂಸ್ ಕಡಬ) newskadaba.com ಸವಣೂರು, ಮಾ.23. ಸಮಾಜದಲ್ಲಿ ಮಹಿಳೆಯರು ಆಥಿ೯ಕವಾಗಿ ಸದೃಢರಾಗಲು, ಸ್ವಾವಲ೦ಬಿ ಜೀವನ ನಡೆಸಲು ಮತ್ತು ಸಾಮರಸ್ಯದಿ೦ದ ಬದುಕಲು ನವೋದಯ ಸ್ವ ಸಹಾಯ ಗು೦ಪುಗಳು ಕಾರಣವಾಗಿದೆ. ಇವತ್ತು ಮಹಿಳಾ ಸದಸ್ಯರು ನೆಮ್ಮದಿ ಜೀವನವನ್ನು ನಡೆಸಲು ಕಾರಣರಾದ ಡಾ| ಎ೦.ಎನ್.ರಾಜೇ೦ದ್ರ ಕುಮಾರ್ ರವರ ಕನಸು ನನಸಾಗಿದೆ. ಇವರನ್ನು ಕೃತಜ್ನತೆಯಿ೦ದ ಸ್ಮರಿಸುತ್ತಿರುವುದನ್ನು ನಾವು ಕಾಣುತ್ತಿದ್ದೇವೆ, ಎ೦ದು ಡಿ.ಸಿ.ಸಿ ಬ್ಯಾ೦ಕಿನ ನಿದೇ೯ಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು. ಅವರು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸ೦ಘ ಮತ್ತು ನವೋದಯ ಗ್ರಾಮ ವಿಕಾಸ

ಸವಣೂರು: ನವೋದಯ ಗು೦ಪಿನ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾಯ೯ಕ್ರಮ Read More »

ಕರಾವಳಿ

ವರ್ಗಾವಣೆ ವಿಚಾರದಲ್ಲಿ ಮೂಗು ತೂರಿಸಿದ ರಾಜ್ಯ ಸರ್ಕಾರಕ್ಕೆ ಮುಖಭಂಗ ► ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಕೆ

(ನ್ಯೂಸ್ ಕಡಬ) newskadaba.com ಮಾ.21. ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಯವರ ವರ್ಗಾವಣೆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದ್ದು,  ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಯಲಿದ್ದಾರೆ. ಅವಧಿಗಿಂತಲು ಮೊದಲೇ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಮಾ.8 ರಂದು ರೋಹಿಣಿ ಸಿಂಧೂರಿ ಯವರು ಸಿಎಟಿ ಮೊರೆ ಹೋಗಿದ್ದರು. ಈ ಹಿನ್ನಲೆಯಲ್ಲಿ ಸಿಎಟಿಯು ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ  ನೀಡಿತ್ತು. ಮಾ.13ಕ್ಕೆ ನಡೆಯಬೇಕಿದ್ದ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿದ್ದು, ಇದರ ಬಗ್ಗೆ ವಿಚಾರಣೆಯು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ ನಡೆದಿದೆ. ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಯುವಂತೆ ನ್ಯಾಯಮಂಡಳಿಯು

ವರ್ಗಾವಣೆ ವಿಚಾರದಲ್ಲಿ ಮೂಗು ತೂರಿಸಿದ ರಾಜ್ಯ ಸರ್ಕಾರಕ್ಕೆ ಮುಖಭಂಗ ► ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಕೆ Read More »

ಕರಾವಳಿ

ಸುಳ್ಶ ಶಾಸಕರನ್ನು ಅಭಿನಂದಿಸಿದ ಕುದಲೂರು ಮುಸ್ಲಿಮ್ ಮುಖಂಡರು

(ನ್ಯೂಸ್ ಕಡಬ) newskadaba.com ಮಾ.20. ಕುದುಲೂರಿಗೆ ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮದಡಯಲ್ಲಿ ರಸ್ತೆ ಕಾಂಕ್ರೀಟೀಕರಣಗೊಳಿಸಿ ಸಹಕರಿಸಿದ ಸುಳ್ಯ ಶಾಸಕ ಎಸ್.ಅಂಗಾರ ಅವರನ್ನು ಸ್ಥಳೀಯ ಅಲ್ಪಸಂಖ್ಯಾತ ಮುಖಂಡರು ಭಾನುವಾರ ರಸ್ತೆ ಉದ್ಘಾಟನೆ ಬಳಿಕ ಅಭಿನಂದಿಸಿದರು. ಸ್ಥಳೀಯ ಧರ್ಮಗುರು ಅಬೂಬಕ್ಕರ್ ಹಾಜಿ, ಇಬ್ರಾಹಿಂ ಹಾಜಿ ಸೇರಿದಂತೆ, ಐದಾರು ಮುಸ್ಲಿಮ್ ಮುಖಂಡರುಗಳು ಶಾಸಕರನ್ನು ಹಾರ ಹಾಕಿ ಗೌರವಿಸಿ ಅಭಿನಂದಿಸಿದರು. ಶಾಸಕರನ್ನು ಆತ್ಮೀಯವಾಗಿ ಬರಮಾಡಿಕೊಂಡ ಮುಸ್ಲಿಮ್ ಮುಖಂಡರು ಹತ್ತಿರದಲ್ಲೇ ಇರುವ ಅಬೂಬಕ್ಕರ್ ಅವರ ಮನೆಗೆ ಆಹ್ವಾನಿಸಿ ಲಘು ಪಾನೀಯ ನೀಡಿ ಉಪಚರಿಸಿದರು. ಈ ಸಂದರ್ಭದಲ್ಲಿ

ಸುಳ್ಶ ಶಾಸಕರನ್ನು ಅಭಿನಂದಿಸಿದ ಕುದಲೂರು ಮುಸ್ಲಿಮ್ ಮುಖಂಡರು Read More »

ಕರಾವಳಿ

ಅನುದಾನ ಬಿಡುಗಡೆಗೆ ಸಚಿವ ರೈ ಅವರಿಂದ ತಡೆ ► ಶಾಸಕ ಅಂಗಾರ ಆರೋಪ

(ನ್ಯೂಸ್ ಕಡಬ) newskadaba.com ಮಾ.20. ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮದಡಿಯಲ್ಲಿ ಕ್ಷೇತ್ರದ ವಿವಿಧ ರಸ್ತೆಗಳ ಅಭಿವೃದ್ಧಿಗಾಗಿ ಬಿಡುಗಡೆಗೊಂಡಿದ್ದ ಎರಡು ಕೋಟಿ ಅನುದಾನವನ್ನು ಜಿಲ್ಲಾ ಉಸ್ತುವಾರಿ ಸಚಿವ ರಮನಾಥ ರೈ ಅವರು ಇಲಾಖಾಧಿಕಾರಿಗಳಿಗೆ ಒತ್ತಡ ಹಾಕಿ ತಡೆ ಹಿಡಿದು ಅಭಿವೃದ್ಧಿಯಲ್ಲಿ ರಾಜಕೀಯ ಮಾಡಿದ್ದಾರೆ ಎಂದು ಸುಳ್ಯ ಶಾಸಕ ಎಸ್.ಅಂಗಾರ ಆರೋಪಿಸಿದರು. ಅವರು ಭಾನುವಾರ ಕಡಬ ತಾಲೂಕಿನ ಕೊೖಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುದುಲೂರು ಎಂಬಲ್ಲಿ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಡಿಯಲ್ಲಿ ಹತ್ತು ಲಕ್ಷ ರೂ ಅನುದಾನದಲ್ಲಿ ನಿರ್ಮಾಣಗೊಂಡ ರಸ್ತೆ ಕಾಂಕ್ರೀಟಿಕರಣವನ್ನು ಉದ್ಘಾಟನೆಗೊಳಿಸಿ

ಅನುದಾನ ಬಿಡುಗಡೆಗೆ ಸಚಿವ ರೈ ಅವರಿಂದ ತಡೆ ► ಶಾಸಕ ಅಂಗಾರ ಆರೋಪ Read More »

ಕರಾವಳಿ

ದೇವರಿಗೆ ಇಟ್ಟ ದೀಪದಿಂದಾಗಿ ಪೈಂಟ್‌ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com .ಉಡುಪಿ, ಮಾ.20. ದೇವರಿಗೆ ಇಟ್ಟ ದೀಪ ಮಗುಚಿ ಬಿದ್ದ ಪರಿಣಾಮ ಪೈಂಟ್‌ ಅಂಗಡಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಉಡುಪಿಯಲ್ಲಿ ಮಂಗಳವಾರದಂದು ನಡೆದಿದೆ. ಉಡುಪಿಯ ಈಶ್ವರನಗರದ ನಾಲ್ಕು ಮಹಡಿಯ ಕಟ್ಟಡವೊಂದರಲ್ಲಿ ಈ ಅಗ್ನಿ ಅವಘಡ ಸಂಭವಿದ್ದರಂದಾಗಿ ಲಕ್ಷಾಂತರ ರುಪಾಯಿಯ ನಷ್ಟ ಸಂಭವಿದೆ . ಪೈಂಟ್‌ ಅಂಗಡಿಯಲ್ಲಿ ದೇವರಿಗೆ ಇಟ್ಟ ದೀಪ ಬಿದ್ದು ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಅಪಾರ ಪ್ರಮಾಣದ ಪೈಂಟ್‌ ಡಬ್ಬಗಳು ಸುಟ್ಟು ಹೋಗಿವೆ. ಕಟ್ಟಡ ಪೂರ್ತಿ ದಟ್ಟ ಹೊಗೆ ಆವರಿಸಿದ್ದರಿಂದಾಗಿ ಅಗ್ನಿ

ದೇವರಿಗೆ ಇಟ್ಟ ದೀಪದಿಂದಾಗಿ ಪೈಂಟ್‌ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ Read More »

ಕರಾವಳಿ

ಮಾ.23 ರಿಂದ ಎ.06 ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ► ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಾ.20.ಮಾರ್ಚ್ 23 ರಿಂದ ಎಪ್ರಿಲ್ 6 ರವರೆಗೆ ಜಿಲ್ಲೆಯ 94 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಸದ್ರಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅಹಿತಕರ ಘಟನೆಗಳನ್ನು ತಡೆಗಟ್ಟುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಕೆಂದ್ರಗಳನ್ನು ಮುಚ್ಚಿಸಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದ.ಕ ಜಿಲ್ಲೆಯಲ್ಲಿ ಪೊಲೀಸು ಕಮಿಷನರೇಟ್ ವ್ಯಾಪ್ತಿಯನ್ನು

ಮಾ.23 ರಿಂದ ಎ.06 ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ► ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ Read More »

ಕರಾವಳಿ

ಕಡಬ: ದಲಿತರನ್ನು ಬೌದ್ಧ ಧರ್ಮಕ್ಕೆ ಬಲವಂತದಿಂದ ಮತಾಂತರಿಸಲಾಗಿದೆ ► ಸಾಮಾಜಿಕ ಕಾರ್ಯಕರ್ತ ತಿಮ್ಮಪ್ಪ ವಿ.ಕೆ. ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಮಾ.19. ದಲಿತ ಸಂಘರ್ಷ ಸಮಿತಿ ಮುಖಂಡನ ನೇತೃತ್ವದಲ್ಲಿ ಹನ್ನೊಂದು ಜನ ಹಿಂದುಗಳು ಕಡಬ ತಾಲೂಕಿನ ಆಲಂಕಾರಿನಲ್ಲಿ ಬೌದ್ಧ ಧರ್ಮಕ್ಕೆ ಧರ್ಮಾಂತರವಾಗಿರುವುದು ಸ್ವಯಂಪ್ರೇರಿತ ಧರ್ಮ ಸ್ವೀಕಾರ ಅಲ್ಲ. ಅದು ಕಾನೂನುಬಾಹಿರವಾಗಿದ್ದು, ಬಲವಂತದ ಮತಾಂತರ ಎಂದು ಸಾಮಾಜಿಕ ಕಾರ್ಯಕರ್ತ, ಮೊಗೇರ ಸಮುದಾಯದ ಮುಂದಾಳು ತಿಮ್ಮಪ್ಪ ವಿ.ಕೆ ಆರೋಪಿಸಿದ್ದಾರೆ. ಅವರು  ಕಡಬ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಮಾಯಕ ಜನರನ್ನು ಬೌದ್ಧ ಧರ್ಮಕ್ಕೆ ಮತಾಂತರಗೊಳಿಸುವ ಮೂಲಕ ದಲಿತ ಸಮಾಜದ ಮೇಲೆ ದಾಳಿ ಮಾಡುವ ಹುನ್ನಾರವಾಗಿದೆ. ದಲಿತ

ಕಡಬ: ದಲಿತರನ್ನು ಬೌದ್ಧ ಧರ್ಮಕ್ಕೆ ಬಲವಂತದಿಂದ ಮತಾಂತರಿಸಲಾಗಿದೆ ► ಸಾಮಾಜಿಕ ಕಾರ್ಯಕರ್ತ ತಿಮ್ಮಪ್ಪ ವಿ.ಕೆ. ಆರೋಪ Read More »

ಕರಾವಳಿ
Scroll to Top