ಕಡಬ ನ್ಯೂಸ್

➤ಪ್ರವಾಸಿ ಮಂದಿರದಲ್ಲಿ PWD ಅಧಿಕಾರಿ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ.28.  ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿಯ ವ್ಯವಸ್ಥಾಪಕರೊಬ್ಬರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗಾ ಪ್ರವಾಸಿ ಮಂದಿರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ತುಮಕೂರು ಜಿಲ್ಲೆ ಮಧುಗಿರಿಯ ಲಕ್ಷ್ಮೀನರಸಿಂಹಯ್ಯ(56) ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ ಎಂದು ತಿಳಿದು ಬಂದಿದೆ. ಕಚೇರಿಗೆ ಸಂಬಂಧಪಟ್ಟ ದಾಖಲಾತಿ ಪುಸ್ತಕ ಕಳೆದು ಹೋಗಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಪೊಲೀಸರು ಪ್ರಕರಣ  ದಾಖಲಿಸಿಕೊಂಡಿದ್ದಾರೆ.

➤ಪ್ರವಾಸಿ ಮಂದಿರದಲ್ಲಿ PWD ಅಧಿಕಾರಿ ಆತ್ಮಹತ್ಯೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾನವೀಯತೆ ಮರೆತ ಪಾಪಿಗಳು ➤ ನಾಯಿಯನ್ನು  ಗೋಣಿಚೀಲದಲ್ಲಿ ಹಾಕಿ ದೊಣ್ಣೆಯಿಂದ ಹೊಡೆದು ಕೊಲೆ!

(ನ್ಯೂಸ್ ಕಡಬ) newskadaba.com, ಉಡುಪಿ, ಜ.28. ಕಾಲೇಜು ವಿದ್ಯಾರ್ಥಿನಿ ನಾಯಿಯೊಂದಿಗೆ ಆಟವಾಡಿದಳು ಎಂಬ ಕಾರಣಕ್ಕೆ ನಾಯಿಯನ್ನು ಗೋಣಿಚೀಲದಲ್ಲಿ ಹಾಕಿ ಬರ್ಬರವಾಗಿ ಬಡಿದುಕೊಲೆ ಮಾಡಿರುವ ಅಮಾನವೀಯ ಘಟನೆ ಉಡುಪಿ ಜಿಲ್ಲೆ ಕಾಪು ತಾಲೂಕಿನ ಶಿರ್ವದಲ್ಲಿ ನಡೆದಿದೆ. ಬಂಟಕಲ್ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ  ಈ ಘಟನೆ ನಡೆದಿದ್ದು, ಕಾಲೇಜಿನ ವಾರ್ಡನ್​ ರಾಜೇಶ್ ವಿಕೃತ್  ಎಂಬಾತ ಈ ನೀಚ ಕೃತ್ಯ ಮೆರೆದಿದ್ದಾನೆ. ಕಾಲೇಜು ವಿದ್ಯಾರ್ಥಿನಿ ನಾಯಿ ಜೊತೆ ಆಟವಾಡಿದ್ದಕ್ಕೆ ನಾಯಿಯನ್ನೇ ಕೊಲೆ ಮಾಡಲಾಗಿದೆ ಎನ್ನಲಾಗಿದ್ದು,

ಮಾನವೀಯತೆ ಮರೆತ ಪಾಪಿಗಳು ➤ ನಾಯಿಯನ್ನು  ಗೋಣಿಚೀಲದಲ್ಲಿ ಹಾಕಿ ದೊಣ್ಣೆಯಿಂದ ಹೊಡೆದು ಕೊಲೆ! Read More »

ಕರಾವಳಿ, ಕ್ರೈಮ್ ನ್ಯೂಸ್

➤ಅಮೆರಿಕದಲ್ಲಿ ಪೊಲೀಸರ ಹೊಡೆತಕ್ಕೆ ಪ್ರಾಣಬಿಟ್ಟ ಕಪ್ಪುವರ್ಣೀಯ ➤ವ್ಯಾಪಕ ಜನಾಕ್ರೋಶ

(ನ್ಯೂಸ್ ಕಡಬ) newskadaba.com. ಅಮೆರಿಕ , ಜ.28. ಪೊಲೀಸರ ಹೊಡೆತಕ್ಕೆ ಕಪ್ಪುವರ್ಣೀಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮೃತನನ್ನು ಟೈರ್ ನಿಕೊಲಸ್ ಎಂದು ಗುರುತಿಸಲಾಗಿದೆ. ಮುಖಕ್ಕೆ ಗುದ್ದುವುದು, ಬೂಟುಗಾಲಿನಿಂದ ತುಳಿಯುವುದು ಹಾಗೂ ಲಾಠಿ ಹೊಡೆತಗಳನ್ನು ತಡೆಯಲು ಆಗದೆ ಟೈರ್ ನಿಕೊಲಸ್ ಸಾವನ್ನಪ್ಪಿದ್ದಾನೆ. ಸಾಯುವ ಮೊದಲು ಆತ ‘ಮಾಮ್’ (ಅಮ್ಮ) ಎಂದು ಹಲವು ಬಾರಿ ಕೂಗಿರುವುದು ಜನರ ಮನಸ್ಸು ಕಲಕಿದೆ. ಮೆಂಫಿಸ್ ಅಧಿಕಾರಿಗಳು ಇದೀಗ ಘಟನೆಯ ವಿಡಿಯೊ ಬಿಡುಗಡೆ ಮಾಡಿದ್ದಾರೆ. ಕಪ್ಪುವರ್ಣೀಯರೇ ಆಗಿರುವ ಪೊಲೀಸರು ನಿಕೊಲಸ್​ನನ್ನು

➤ಅಮೆರಿಕದಲ್ಲಿ ಪೊಲೀಸರ ಹೊಡೆತಕ್ಕೆ ಪ್ರಾಣಬಿಟ್ಟ ಕಪ್ಪುವರ್ಣೀಯ ➤ವ್ಯಾಪಕ ಜನಾಕ್ರೋಶ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

➤ ಒಂದೇ ಕುಟುಂಬದ ಮೂವರ ಅನುಮಾನಾಸ್ಪದ ಸಾವು..!

(ನ್ಯೂಸ್ ಕಡಬ) newskadaba.com. ಚಂಡಿಗಢ , ಜ.28. ಹರಿಯಾಣದಲ್ಲಿ ಒಂದೇ ಕುಟುಂಬದ ಮೂವರು  ಮನೆಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಸರ್ಕಾರಿ ಶಿಕ್ಷಕ, ಆತನ ಪತ್ನಿ ಹಾಗೂ ಮಗಳ ಶವ ಪತ್ತೆಯಾಗಿದೆ. ಶಿಕ್ಷಕ ಜಿತೇಂದ್ರ, ಪತ್ನಿ ಸುಶೀಲಾ, ಮಗಳು ಹಿಮಾನಿ ಮೃತರು. ಸರ್ಕಾರಿ ಶಿಕ್ಷಕ, ಅವರ ಪತ್ನಿ ಮತ್ತು ಮಗಳ ಶವಗಳು ಹರಿಯಾಣದ ಭಿವಾನಿಯ ಅವರ ಮನೆಯಲ್ಲಿ ಹಾಸಿಗೆಯ ಮೇಲೆ ಮಲಗಿರುವ ಸ್ಥಿತಿಯಲ್ಲೇ ಪತ್ತೆಯಾಗಿವೆ. ಕೋಣೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಉಸಿರುಗಟ್ಟಿ ಮೃತಪಟ್ಟಿರಬಹುದು ಎಂಬುವುದು ಪ್ರಾಥಮಿಕ ತನಿಖೆಯಲ್ಲಿ

➤ ಒಂದೇ ಕುಟುಂಬದ ಮೂವರ ಅನುಮಾನಾಸ್ಪದ ಸಾವು..! Read More »

ಕ್ರೈಮ್ ನ್ಯೂಸ್

ವಿಧವೆಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಯುವಕ ➤ಮನನೊಂದ ಯುವತಿ ಆತ್ಮಹತ್ಯೆಗೆ ಶರಣು!

(ನ್ಯೂಸ್ ಕಡಬ) newskadaba.com, ಶಿವಮೊಗ್ಗ, ಜ.27. ನಗರದ ಅನಿತಾ ಎಂಬಾಕೆ ಕೆಲ ವರ್ಷಗಳ ಹಿಂದೆ ರಾಮಮೂರ್ತಿಯನ್ನ ಮದುವೆಯಾಗಿದ್ದರು.  ಇವರಿಗೆ 13 ವರ್ಷದ ಹೆಣ್ಣು ಮಗಳಿದ್ದಾಳೆ. ಕಳೆದ ಎರಡು ವರ್ಷಗಳ ಹಿಂದೆ ಪತಿ ರಾಮಮೂರ್ತಿ ನಿಧನ ಹೊಂದಿದ್ದು,  ಮಗಳನ್ನು ಸಾಕಲು ಅನಿತಾ ಶಿವಮೊಗ್ಗದ ಗಾರ್ಡ್​ನ್ ಏರಿಯಾದ  ಚುಂಚಾದ್ರಿ ಮಹಿಳಾ ವಿವಿದೋದ್ದೇಶ ಸೌಹಾರ್ದ ಸಹಕಾರಿ ಸಂಸ್ಥೆಯಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿದ್ದಳು. ಈ ನಡುವೆ ಮಹಾನಗರ ಪಾಲಿಕೆಯಲ್ಲಿ ಸೇವೆ ಸಲ್ಲಿಸುತ್ತಿರುವ ನಾಗೇಂದ್ರ ಎನ್ನುವ ಚಾಲಕನ ಜೊತೆ ಪರಿಚಯವಾಗಿ ಇದು ಪ್ರೇಮಕ್ಕೆ ತಿರುಗಿತ್ತು.

ವಿಧವೆಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಯುವಕ ➤ಮನನೊಂದ ಯುವತಿ ಆತ್ಮಹತ್ಯೆಗೆ ಶರಣು! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ನಕಲಿ ‌ಮಾರ್ಕ್ಸ್ ಕಾರ್ಡ್ ತಯಾರಿಸುತ್ತಿದ್ದ ಬೃಹತ್ ಜಾಲ ಪತ್ತೆ!

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ.27. ಬೆಂಗಳೂರು: ಇದೀಗ ದೊಡ್ಡ ಪ್ರಮಾಣದಲ್ಲಿ ನಕಲಿ ಮಾರ್ಕ್ಸ್​ ಕಾರ್ಡ್​ ತಯಾರು ಮಾಡುತ್ತಿದ್ದ ಬೃಹತ್​ ಜಾಲ ಬೆಳಕಿಗೆ ಬಂದಿದ್ದು, ಒಮ್ಮೆಗೆ ಎಲ್ಲಾ ವಿಶ್ವವಿದ್ಯಾಲಯಗಳು ಬೆಚ್ಚಿ ಬೀಳುವಂತೆ ಮಾಡಿದೆ. ಈ ಪ್ರಕರಣ ಕುರಿತಂತೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿಕೆ ನೀಡಿದ್ದು ‘ಒಂದೂವರೆ ತಿಂಗಳ ಹಿಂದೆ ನಕಲಿ ಮಾರ್ಕ್ಸ್ ಕಾರ್ಡ್ ದಂಧೆಯನ್ನ ಸಿಸಿಬಿ ಪತ್ತೆ ಮಾಡಿತ್ತು. ಇದರ ಮುಂದುವರೆದ ಭಾಗವಾಗಿ ಸಿಸಿಬಿ ಕಾರ್ಯಾಚಾರಣೆ ಮಾಡಿತ್ತು. ಇದೇ ರೀತಿ ನಕಲಿ ಮಾರ್ಕ್ಸ್ ಮಾಡುತ್ತಿದ್ದ ಐದು

➤ ನಕಲಿ ‌ಮಾರ್ಕ್ಸ್ ಕಾರ್ಡ್ ತಯಾರಿಸುತ್ತಿದ್ದ ಬೃಹತ್ ಜಾಲ ಪತ್ತೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯ ಮಟ್ಟದ ಕೃಷಿ ಮೇಳ ➤ ಸಿಎಂ ಬೊಮ್ಮಾಯಿ ಚಾಲನೆ

ನ್ಯೂಸ್ ಕಡಬ) newskadaba.com, ಬೆಂಗಳೂರು, ಜ.27. ಅರಮನೆ ನಗರಿ ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕೃಷಿ ಮೇಳವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜ.27 ರಂದು ಉದ್ಘಾಟಿಸಿದರು. ಈ ಬಾರಿ ರಾಜ್ಯ ಸರ್ಕಾರ ಮತ್ತು ಮೈಸೂರು ವಿಶ್ವವಿದ್ಯಾಲಯ ಸಹಯೋಗದಲ್ಲಿ ನಗರದ ಮಹಾರಾಜ ಕಾಲೇಜು  ಮೈದಾನದಲ್ಲಿ ಭಾನುವಾರದವರೆಗೆ ನಡೆಯುವ ಮೇಳದಲ್ಲಿ 120 ಮಳಿಗೆಗಳನ್ನು ತೆರೆಯಲಾಗಿದೆ. ಸಮಗ್ರ ಕೃಷಿ, ಸಾವಯವ ಕೃಷಿ, ಆಧುನಿಕ ಬೇಸಾಯ , ಉತ್ತಮ ಬಿತ್ತನೆ ಬೀಜಗಳು, ಕೃಷಿ ಅನ್ವೇಷಣೆ ಇನ್ನಿತರ ಮಾಹಿತಿ ಸಿಗಲಿವೆ.  ವೀರಗಾಸೆ, ಕಂಸಾಳೆ, ಸುಗ್ಗಿ ಕುಣಿತ,

ರಾಜ್ಯ ಮಟ್ಟದ ಕೃಷಿ ಮೇಳ ➤ ಸಿಎಂ ಬೊಮ್ಮಾಯಿ ಚಾಲನೆ Read More »

ಕರ್ನಾಟಕ

➤ಯೂಟ್ಯೂಬ್ ನೋಡಿ ನಕಲಿ ನೋಟು ತಯಾರಿ ಆರೋಪಿ ಅಂದರ್!

ನ್ಯೂಸ್ ಕಡಬ) newskadaba.com, ಬೆಂಗಳೂರು, ಜ.27. ನಗರದ ಅನಂತಪುರದಲ್ಲಿ ಮನೆ ಪಡೆದಿದ್ದ ಪುಲ್ಲಲರೇವು ರಾಜು ಎಂಬಾತ ಆರ್​ಬಿಐ ನೋಟ್​ಗೂ ಟಕ್ಕರ್ ಕೊಡುವಂತೆ ರೂಂನಲ್ಲಿ ಒಬ್ಬನೇ ಕುಳಿತು ನಕಲಿ ನೋಟ್ ತಯಾರಿಸುತ್ತಿದ್ದ. ಇದೀಗ ಸುಬ್ರಮಣ್ಯಪುರ ಪೊಲೀಸರ ಕಾರ್ಯಚರಣೆಯಿಂದ ಪುಲ್ಲಲರೇವು ರಾಜು ಅರೆಸ್ಟ್ ಆಗಿದ್ದಾನೆ. ಏಳನೇ ತರಗತಿ ಓದಿದ್ದ ಇತ, ಕೇವಲ ಯೂಟ್ಯೂಬ್ ವಿಡಿಯೋ ನೋಡಿ ನಕಲಿ ನೋಟು ತಯಾರಿ ಮಾಡುವುದನ್ನ ಕಲಿತಿದ್ದಾನೆ. ಮನೆಯಲ್ಲಿ ಶೋ ರೂಂನಲ್ಲಿ ಕೆಲಸ ಮಾಡುತ್ತಿದ್ದಾಗಿ ಹೇಳಿಕೊಂಡಿದ್ದ ಇತ, ಪಕ್ಕ ಬ್ಯುಸಿನೆಸ್ ಮಾದರಿಯಲ್ಲಿ ಪ್ರತ್ಯೇಕ ಮನೆ

➤ಯೂಟ್ಯೂಬ್ ನೋಡಿ ನಕಲಿ ನೋಟು ತಯಾರಿ ಆರೋಪಿ ಅಂದರ್! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಂಚನೆ ಪ್ರಕರಣ ➤ ಕಾಂತಾರ ನಟನ ಸಿನಿಮಾಗೆ ಬಂಡವಾಳ ಹೂಡಿದ್ದ ಪ್ರೊಡ್ಯೂಸರ್ ಅರೆಸ್ಟ್

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. ಬಹಳಷ್ಟು ಸಲ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ ಪ್ರಕರಣಗಳು  ನಡೆಯುತ್ತಲೇ ಇರುತ್ತವೆ. ದೊಡ್ಡ ರಾಜಕಾರಣಿಗಳ, ನಟರ ಹೆಸರನ್ನು ಬಳಸಿಕೊಂಡು ಮುಗ್ಧ ಜನರನ್ನು ಯಾಮಾರಿಸಿ ದೊಡ್ಡ ಹೊಡಿಯುವ ಜನ ಆಗಾಗ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ಳುವುದು ಸಹಜ. ಇದೀಗ ಇದೇ ರೀತಿ ವಂಚನೆ ಮಾಡಿದ ಪ್ರಕರಣದಲ್ಲಿ ಸ್ಯಾಂಡಲ್​ವುಡ್ ನಿರ್ಮಾಪಕನನ್ನು ಅರೆಸ್ಟ್) ಮಾಡಲಾಗಿದೆ. ಕೆಎಮ್​ಎಫ್ ನಲ್ಲಿ ಕೆಲಸ ಕೊಡಿಸುತ್ತೇನೆ ಎಂದು ವಂಚನೆ ಮಾಡಿದ ಸ್ಯಾಂಡಲ್​​ವುಡ್ ನಿರ್ಮಾಪಕನ ಬಂಧ‌ನವಾಗಿದೆ.

ವಂಚನೆ ಪ್ರಕರಣ ➤ ಕಾಂತಾರ ನಟನ ಸಿನಿಮಾಗೆ ಬಂಡವಾಳ ಹೂಡಿದ್ದ ಪ್ರೊಡ್ಯೂಸರ್ ಅರೆಸ್ಟ್ Read More »

ಕರ್ನಾಟಕ

ವಂಚನೆ ಪ್ರಕರಣ ➤ ಕಾಂತಾರ ನಟನ ಸಿನಿಮಾಗೆ ಬಂಡವಾಳ ಹೂಡಿದ್ದ ಪ್ರೊಡ್ಯೂಸರ್ ಅರೆಸ್ಟ್

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. ಬಹಳಷ್ಟು ಸಲ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ ಪ್ರಕರಣಗಳು  ನಡೆಯುತ್ತಲೇ ಇರುತ್ತವೆ. ದೊಡ್ಡ ರಾಜಕಾರಣಿಗಳ, ನಟರ ಹೆಸರನ್ನು ಬಳಸಿಕೊಂಡು ಮುಗ್ಧ ಜನರನ್ನು ಯಾಮಾರಿಸಿ ದೊಡ್ಡ ಹೊಡಿಯುವ ಜನ ಆಗಾಗ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ಳುವುದು ಸಹಜ. ಇದೀಗ ಇದೇ ರೀತಿ ವಂಚನೆ ಮಾಡಿದ ಪ್ರಕರಣದಲ್ಲಿ ಸ್ಯಾಂಡಲ್​ವುಡ್ ನಿರ್ಮಾಪಕನನ್ನು ಅರೆಸ್ಟ್ ಮಾಡಲಾಗಿದೆ. ಕೆಎಮ್​ಎಫ್ ನಲ್ಲಿ ಕೆಲಸ ಕೊಡಿಸುತ್ತೇನೆ ಎಂದು ವಂಚನೆ ಮಾಡಿದ ಸ್ಯಾಂಡಲ್​​ವುಡ್ ನಿರ್ಮಾಪಕನ ಬಂಧ‌ನವಾಗಿದೆ.

ವಂಚನೆ ಪ್ರಕರಣ ➤ ಕಾಂತಾರ ನಟನ ಸಿನಿಮಾಗೆ ಬಂಡವಾಳ ಹೂಡಿದ್ದ ಪ್ರೊಡ್ಯೂಸರ್ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top