ಕಡಬ ನ್ಯೂಸ್

ನೂಜಿಬಾಳ್ತಿಲ ಗ್ರಾ.ಪಂ.ಸಾಮಾನ್ಯ ಸಭೆ ► ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ಗ್ರಾ.ಪಂ.ಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ನ.1. ನೂಜಿಬಾಳ್ತಿಲ-ರೆಂಜಿಲಾಡಿ ಗ್ರಾಮವನ್ನು ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಬೇಕೆಂದು ದೇವಸ್ಥಾನ ಪ್ರಾರ್ಥನಾ ಮಂದಿರಗಳು, ಮಸೀದಿ ಚರ್ಚ್, ಸಂಘ ಸಂಸ್ಥೆಗಳು ಗ್ರಾಮಸ್ಥರು ಗ್ರಾ.ಪಂ.ಗೆ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದ ಸದಸ್ಯೆ ಪುಷ್ಪಲತಾ ಪೇರಡ್ಕರವರು ಗ್ರಾ.ಪಂ.ಆಡಳಿತ ಮಂಡಳಿ, ಗ್ರಾಮಸ್ಥರು ಸೇರಿಕೊಂಡು ಅಷ್ಟೊಂದು ಹೋರಾಟ ನಡೆಸಿದರು ಮದ್ಯದಂಗಡಿ 2,3 ಬಾರಿ ಬಂದ್ ಮಾಡಿಸಿದ್ದರೂ ಮತ್ತೇ ನ್ಯಾಯಾಲಯದಿಂದ ತಡೆ ತಂದು ತೆರೆಯಲಾಗಿದೆ. ಈ ಬಗ್ಗೆ ಗ್ರಾ.ಪಂ.ನಿಂದ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದಲ್ಲದೆ ನ್ಯಾಯಾಲಯದಲ್ಲಿ ಸ್ಥಳೀಯ ಆಡಳಿತವಾಗಿರುವ […]

ನೂಜಿಬಾಳ್ತಿಲ ಗ್ರಾ.ಪಂ.ಸಾಮಾನ್ಯ ಸಭೆ ► ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ಗ್ರಾ.ಪಂ.ಗೆ ಮನವಿ Read More »

ಕರಾವಳಿ

ಮಧುಮೇಹದ ಕ್ರೂರ ಲೀಲೆಗೆ ಸಿಲುಕಿ ಕಾಲು ಕಳೆದುಕೊಂಡ ಕೋಡಿಂಬಾಳದ ಹುಕ್ರಪ್ಪ ► ಈ ಬಡಕುಟುಂಬಕ್ಕೆ ಬೇಕಾಗಿದೆ ನೆರವಿನ ಹಸ್ತ

(ನ್ಯೂಸ್ ಕಡಬ) newskadaba.com ಕಡಬ, ನ.1. ಕೂಲಿ ಕೆಲಸ ಮಾಡಿ ಬಡಕುಟುಂಬಕ್ಕೆ ಆಧಾರವಾಗಿದ್ದ ಜೀವವೊಂದು ಮಧುಮೇಹಕ್ಕೆ ತುತ್ತಾಗಿ ಕಾಲನ್ನು ಮಣಿಗಂಟಿನಿಂದ ಕತ್ತರಿಸಿ ಕಳೆದ ಒಂದು ವರ್ಷದಿಂದ ಕುಳಿತ್ತಲ್ಲೆ ದಿನ ಕಳೆಯುವ ಪರಿಸ್ಥಿತಿಯಿದ್ದು ಕುಟುಂಬವು ಸಂಕಷ್ಟದಲ್ಲಿದೆ. ಕಡಬ ವ್ಯಾಪ್ತಿಯ ಕೋಡಿಂಬಾಳ ಗ್ರಾಮದ ಮಜ್ಜಗುಡ್ಡೆ ದಿ. ಮಾಯಿಲಪ್ಪ ಎಂಬವರ ಪುತ್ರ ಹುಕ್ರಪ್ಪ (56ವ) ಮಧುಮೇಹದ ಕ್ರೂರ ಲೀಲೆಗೆ ಸಿಲುಕಿದವರು. ಇವರು ಸುಮಾರು 25ವರ್ಷಗಳಿಂದ ಕಡಬದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೂಲಿಕಾರ್ಮಿಕನಾಗಿದ್ದು ಗಾರೆ ಕೆಲಸ ಮಾಡಿ ಜೀವನ ನಿರ್ವಹಿಸುತ್ತಿದ್ದಾರೆ. ಕಳೆದ ವರ್ಷ ಗಾರೆ

ಮಧುಮೇಹದ ಕ್ರೂರ ಲೀಲೆಗೆ ಸಿಲುಕಿ ಕಾಲು ಕಳೆದುಕೊಂಡ ಕೋಡಿಂಬಾಳದ ಹುಕ್ರಪ್ಪ ► ಈ ಬಡಕುಟುಂಬಕ್ಕೆ ಬೇಕಾಗಿದೆ ನೆರವಿನ ಹಸ್ತ Read More »

ಕರಾವಳಿ

ಜಾರ್ಖಂಡ್ನಲ್ಲಿ ನಡೆಯಲಿರುವ ರಾಷ್ಟ್ರೀಯ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾಟಕ್ಕೆ ► ಹೊಸ್ಮಠದ ಹುಸೇನ್ ಅಝ್ಮಾಲ್ ಆಯ್ಕೆ 

(ನ್ಯೂಸ್ ಕಡಬ) newskadaba.com ಕಡಬ, ನ.01. ಬೆಂಗಳೂರಿನ ಚಾಮರಾಜಪೇಟೆಯ ಮಕ್ಕಳ ಕ್ರೀಡಾಕೂಟ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿ 29ನೇ ರಾಷ್ಟ್ರೀಯ ಸಬ್ ಜ್ಯೂನಿಯರ್ ಕಬಡ್ಡಿ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಕಡಬ ಸೈಂಟ್ ಜೋಕಿಮ್ಸ್‌ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಹುಸೇನ್ ಅಝ್ಮಾಲ್ ಆಯ್ಕೆಯಾಗಿದ್ದಾರೆ. ಇವರು ನವೆಂಬರ್ 4ರಿಂದ 7ರವರೆಗೆ ಜಾರ್ಖಂಡ್ನಲ್ಲಿ ನಡೆಯಲಿರುವ ರಾಷ್ಟ್ರೀಯ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸುವ ದ.ಕ. ಜಿಲ್ಲೆಯ ಏಕೈಕ ಕ್ರೀಡಾಪಟುವಾಗಿದ್ದಾರೆ. ಇವರಿಗೆ ಕಡಬ

ಜಾರ್ಖಂಡ್ನಲ್ಲಿ ನಡೆಯಲಿರುವ ರಾಷ್ಟ್ರೀಯ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾಟಕ್ಕೆ ► ಹೊಸ್ಮಠದ ಹುಸೇನ್ ಅಝ್ಮಾಲ್ ಆಯ್ಕೆ  Read More »

ಕ್ರೀಡಾ ನ್ಯೂಸ್

ಕರ್ನಾಟಕ ರಾಜ್ಯದ ಮೊದಲ ಮಹಿಳಾ ಡಿಜಿ-ಐಜಿಪಿಯಾಗಿ ► ನೀಲಮಣಿ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.31.  ಪೊಲೀಸ್ ಮಹಾ ನಿರ್ದೇಶಕರ ಹುದ್ದೆಗೆ ನೀಲಮಣಿ ರಾಜು ಆಯ್ಕೆ ಆಗಿದ್ದು, ಈ ಮೂಲಕ ಕರ್ನಾಟಕ ರಾಜ್ಯದ  ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನೂತನ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ಮೂವರು ಹಿರಿಯ ಅಧಿಕಾರಿಗಳ ಮಧ್ಯೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಕೊನೆಗೂ ಮಹಿಳಾ ಅಧಿಕಾರಿಯೊಬ್ಬರು  ಡಿಜಿ-ಐಜಿಪಿಯಾಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ಕರ್ನಾಟಕದ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಆಯ್ಕೆಯಾಗಿರುವ ನೀಲಮಣಿ ಎನ್.ರಾಜು 1983ರ ಬ್ಯಾಚ್​’​ನ ಐಪಿಎಸ್​ ಅಧಿಕಾರಿಯಾಗಿದ್ದು,  23 ವರ್ಷಗಳ ಕಾಲ ಕೇಂದ್ರ

ಕರ್ನಾಟಕ ರಾಜ್ಯದ ಮೊದಲ ಮಹಿಳಾ ಡಿಜಿ-ಐಜಿಪಿಯಾಗಿ ► ನೀಲಮಣಿ ಆಯ್ಕೆ Read More »

ಕರಾವಳಿ

ಮಕ್ಕಳಿಗೆ ತಿನಸುಗಳನ್ನು ನೀಡುವಾಗ ಎಚ್ಚರ…!!! ►ಬೆಳ್ತಂಗಡಿ: ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಮಗು ಮೃತ್ಯು..!!!  

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಅ.31. ಗಂಟಲಲ್ಲಿ ಚಕ್ಕುಲಿ ಸಿಲುಕಿ ಒಂದು ವರ್ಷದ ಪುಟ್ಟ ಮಗುವೊಂದು ಮೃತಪಟ್ಟ ಆಘಾತಕಾರಿ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ನಡೆದಿದೆ. ಮೃತ  ಮಗುವನ್ನು ಅರುಷ್( 1 ವರ್ಷ) ಎಂದು ಗುರುತಿಸಲಾಗಿದ್ದು,  ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ನಿವಾಸಿ ವಿಠಲ ಎಂಬವರ ಮಗ ಎನ್ನಲಾಗಿದೆ. ಮಗ ಅರುಷ್ ಗೆ ಪೋಷಕರು ತಿನ್ನಲು ಚಕ್ಕುಲಿ ತುಂಡೊಂದನ್ನು ನೀಡಿದ್ದರು. ಏನೂ ಅರಿಯದ ಮುಗ್ಧ ಕಂದಮ್ಮನ ಗಂಟಲಿನಲ್ಲಿ ಚಕ್ಕುಲಿ ತುಂಡು ಸಿಲುಕಿದ ಪರಿಣಾಮ ಮಗುವಿಗೆ ಉಸಿರಾಡಲು ಕಷ್ಟವಾಗಿತ್ತು.

ಮಕ್ಕಳಿಗೆ ತಿನಸುಗಳನ್ನು ನೀಡುವಾಗ ಎಚ್ಚರ…!!! ►ಬೆಳ್ತಂಗಡಿ: ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಮಗು ಮೃತ್ಯು..!!!   Read More »

ಕರಾವಳಿ

ನಂದಿನಿ ಹಾಲಿನ ವಾಹನ ಡಿಕ್ಕಿ► ನೂರಾರು ಹಾಲಿನ ಪ್ಯಾಕೆಟ್ ಮಣ್ಣುಪಾಲು…!!!

(ನ್ಯೂಸ್ ಕಡಬ) newskadaba.com ಮಂಡ್ಯ, ಅ.31. ನಂದಿನಿ ಹಾಲಿನ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಸೇತುವೆಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ನಾಗಮಂಗಲ ತಾಲೂಕಿನ ಕಾಚೇನಹಳ್ಳಿ ಬಳಿ ಮಂಗಳವಾರ ಮುಂಜಾನೆ ನಡೆದಿದೆ. ವಾಹನ ಉರುಳಿ ಬಿದ್ದ ಪರಿಣಾಮ ನಂದಿನಿ ಹಾಲಿನ ನೂರಾರು ಪ್ಯಾಕೆಟ್ ಹಳ್ಳದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದು, ಕೆಲವೊಂದು ಹಾಲಿನ ಪ್ಯಾಕೆಟ್ ಒಡೆದು ಹೋಗಿ ಹಾಲು ಮಣ್ಣು ಪಾಲಾಗಿದೆ. ಚೆನ್ನಾಗಿರುವ ಹಾಲಿನ ಪ್ಯಾಕೆಟ್ ಗಳನ್ನು ಬೇರೊಂದು ವಾಹನದಲ್ಲಿ ಬೆಳ್ಳೂರಿಗೆ ಸಾಗಿಸಲಾಗಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಒಂದಷ್ಟು ಸಣ್ಣಪುಟ್ಟ ಗಾಯಗಳಾಗಿದ್ದು,

ನಂದಿನಿ ಹಾಲಿನ ವಾಹನ ಡಿಕ್ಕಿ► ನೂರಾರು ಹಾಲಿನ ಪ್ಯಾಕೆಟ್ ಮಣ್ಣುಪಾಲು…!!! Read More »

ಕರಾವಳಿ

ಆಲಂಕಾರು : ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 163ನೇ ಗುರುಜಯಂತಿ ► ಸಾಧಕರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಅ.31. ಆಲಂಕಾರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 163ನೇ ಗುರುಜಯಂತಿಯ ಸಮಾರಂಭವು ಆಲಂಕಾರು ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಪುತ್ತೂರು ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಕೆಡೆಂಜಿಯವರು ಮಾತನಾಡಿ ಮನುಷ್ಯ ಪರೋಪಕಾರಿ ಜೀವನ ತೊರೆದು ಸ್ವಾರ್ಥ ಜೀವನ ನಡೆಸುವುತ್ತಿರುವುದರಿಂದ ಸಮಾಜದಲ್ಲಿ ಆಶಾಂತಿ ಉಂಟಾಗುತ್ತಿದೆ. ಎಲ್ಲಾ ಒಳಿತು ಕೆಲಸ ಕಾರ್ಯಗಳು ಮೊದಲು ತಮ್ಮ ಮನೆಯಿಂದ ಪ್ರಾರಂಭವಾದಾಗ ಮಾತ್ರ ಸಮಾಜ ಸುಧಾರಿಸಲು ಸಾಧ್ಯ. ತನ್ನ ಮನೆಯನ್ನು ಸರಿ

ಆಲಂಕಾರು : ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 163ನೇ ಗುರುಜಯಂತಿ ► ಸಾಧಕರಿಗೆ ಸನ್ಮಾನ Read More »

ಕರಾವಳಿ

ಕೊೖಲ: ಅಯೋಧ್ಯಾನಗರ ಶ್ರೀ ರಾಮ ಭಜನಾ ಮಂದಿರ ► ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.31. ಪುತ್ತೂರು ತಾಲೂಕು ಕೊೖಲ ಗ್ರಾಮದ ಸಬಳೂರು ಅಯೋಧ್ಯಾನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ಭಜನಾ ಮಂಡಳಿ ನಿಕಟಪೂರ್ವ ಅಧ್ಯಕ್ಷರಾದ ಶೀನಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ನಡೆಯಿತು. ಅಧ್ಯಕ್ಷರಾಗಿ ರಾಮಚಂದ್ರ ನಾಯ್ಕ, ಪ್ರಧಾನ ಕಾರ್ಯದರ್ಶಿಯಾಗಿ ಚಿದಾನಂದ ಪಾನ್ಯಾಲು ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಬೆಳಿಯಪ್ಪ ಗೌಡ ತಿಮರೆಗುಡ್ಡೆ, ಗೌರವ ಸಲಹೆಗರರಾಗಿ ಲಕ್ಷ್ಮಣ ಗೌಡ ಬುಡಲೂರು, ರಾಜೀವ ಗೌಡ ಪಟ್ಟೆದಮೂಲೆ, ಶೀನಪ್ಪ ಪೂಜಾರಿ ಸೀಗೆತ್ತಡಿ, ಜೊತೆ ಕಾರ್ಯದರ್ಶಿಯಾಗಿ ಉಮೇಶ್ ಬುಡಲೂರು,

ಕೊೖಲ: ಅಯೋಧ್ಯಾನಗರ ಶ್ರೀ ರಾಮ ಭಜನಾ ಮಂದಿರ ► ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ

ಕಡಬ: ಕೇಂದ್ರ ಜುಮ್ಮಾ ಮಸೀದಿಯಲ್ಲಿ ಕೂಟು ಝಿಯಾರತ್ ► ಇಲ್ಲಿಯ ಕರಾಮತ್ ಏನೆಂದು ಪ್ರತಿಯೊಬ್ಬರಿಗೂ ಅರ್ಥವಾಗುತ್ತಿದೆ- ಮಲ್ಲಿ ಉಸ್ತಾದ್

(ನ್ಯೂಸ್ ಕಡಬ) newskadaba.com ಕಡಬ, ಅ.31. ಕಡಬ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಅಂತ್ಯ ವಿಶ್ರಮಿಸುತ್ತಿರುವ ಹಝ್ರತ್ ಅಸಯ್ಯದ್ ಅಬ್ದುಲ್ ಖಾದಿರ್ ಷಾ ವಲಿಯುಲ್ಲಾಹಿ ಹಾಗೂ ಶುಹದಾಖಲ್ (ಖ.ಸಿ)ರವರ ದರ್ಗಾಶರೀಫ್ನಲ್ಲಿ ಮಾಸಿಕ ಕೂಟು ಝಿಯಾರತ್ ಹಾಗೂ ದಿಕ್ರ್‌ ಮಜ್ಲಿಸ್ ಕಾರ್ಯಕ್ರಮ ಆದಿತ್ಯವಾರ ನಡೆಯಿತು. ಕಡಬ ಕೇಂದ್ರ ಜುಮ್ಮಾ ಮಸೀದಿಯ ಮುದರ್ರಿಸ್ ಅಬ್ದುಲ್ ಮಜೀದ್ ಸಖಾಫಿ ಮಲ್ಲಿ ಉಸ್ತಾದ್ರವರು ಕೂಟು ಝಿಯಾರತ್ನ ನೇತೃತ್ವ ವಹಿಸಿ ದುಃವಾ ಪ್ರಾರ್ಥನೆ ನೆರವೇರಿಸಿ ಇಲ್ಲಿಯ ಅವುಲಿಯಾಗಳ ಹಾಗೂ ಶುಹದಾಖಲ್ಗಳ ಕಸುಬು ಕರಾಮತಿನಿಂದ ಅದೆಷ್ಟೋ ಊರಪರವೂರ ಪುರುಷ

ಕಡಬ: ಕೇಂದ್ರ ಜುಮ್ಮಾ ಮಸೀದಿಯಲ್ಲಿ ಕೂಟು ಝಿಯಾರತ್ ► ಇಲ್ಲಿಯ ಕರಾಮತ್ ಏನೆಂದು ಪ್ರತಿಯೊಬ್ಬರಿಗೂ ಅರ್ಥವಾಗುತ್ತಿದೆ- ಮಲ್ಲಿ ಉಸ್ತಾದ್ Read More »

ಕರಾವಳಿ

ಪುತ್ತೂರು: ಪ್ರಕೃತಿ ವೈಚಿತ್ರ್ಯಕ್ಕೆ ಸಾಕ್ಷಿಯಾದ ಬಾಳೆಗಿಡ ► ಗಿಡದ ಮಧ್ಯ ಭಾಗದಿಂದ ಹೊರಬಂದ ಬಾಳೆಗೊನೆ..!!!

(ನ್ಯೂಸ್ ಕಡಬ) newskadaba.com ಪುತ್ತೂರು, ಅ.31. ಬಾಳೆಗಿಡವು ಗೊನೆ ಹಾಕುವುದು ಸಾಮಾನ್ಯ. ಆದರೆ ಇಲ್ಲೊಂದು ಬಾಳೆಗಿಡವು ಗಿಡದ ನಡುಭಾಗದಲ್ಲಿ ಗೊನೆ ಹಾಕುವ ಮೂಲಕ ಪ್ರಕೃತಿ ವೈಚಿತ್ರ್ಯಕ್ಕೆ ಸಾಕ್ಷಿಯಾಗಿ ನಿಂತಿದೆ. ಕುಂಬ್ರದ ಕೊಲ್ಲಾಜೆಯ ಕೊಂಬರಡ್ಕದ ಬಾಲಕೃಷ್ಣ ಶೆಟ್ಟಿ ಎಂಬವರ ತೋಟದಲ್ಲಿರುವ ಬಾಳೆಗಿಡದಲ್ಲಿ ಈ ದೃಶ್ಯ ಕಂಡು ಬಂದಿದ್ದು, ಎಲ್ಲಾ ಬಾಳೆಗಿಡದಲ್ಲಿ ಗಿಡದ ತುದಿ ಭಾಗದಿಂದ ಗೊನೆ ಹೊರಬಂದರೆ, ಈ ಬಾಳೆಗಿಡದಲ್ಲಿ ಗಿಡದ ಮಧ್ಯ ಭಾಗದಿಂದ ಬಾಳೆಗೊನೆ ಹೊರಬಂದಿದೆ.

ಪುತ್ತೂರು: ಪ್ರಕೃತಿ ವೈಚಿತ್ರ್ಯಕ್ಕೆ ಸಾಕ್ಷಿಯಾದ ಬಾಳೆಗಿಡ ► ಗಿಡದ ಮಧ್ಯ ಭಾಗದಿಂದ ಹೊರಬಂದ ಬಾಳೆಗೊನೆ..!!! Read More »

ಕರಾವಳಿ
Scroll to Top