ಕಡಬ ನ್ಯೂಸ್

ಉಪ್ಪಿನಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಳ್ಳತನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಸೆ.13, ಇಲ್ಲಿನ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಗೆ ಕಳ್ಳರು ನುಗ್ಗಿ ಸುಮಾರು.36 ಸಾವಿರ ರುಪಾಯಿ ನಗದು ದೋಚಿ ಪರಾರಿಯಾದ ಘಟನೆ ಬುಧವಾರ ಬೆಳಕಿಗೆ ಬಂದಿದೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಶಾಲಾ ಪ್ರಾಚಾರ್ಯರ ಕೊಠಡಿ ಹಾಗೂ ಶಿಕ್ಷಕರ ಮತ್ತು ಸಿಬಂದಿಗಳ ಕೊಠಡಿ ಸೇರಿದಂತೆ ಕಚೇರಿಗಳ ಬೀಗಗಳನ್ನು ತುಂಡರಿಸಿ ಅಲ್ಲಿದ್ದ ಸುಮಾರು.36 ಸಾವಿರ ರೂ.ಗಳನ್ನು ದೋಚಿದ್ದಾರೆ. ಸುದ್ದಿ ತಿಳಿದು ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕಾಗಮಿಸಿ ಶ್ವಾನದಳ ಹಾಗೂ […]

ಉಪ್ಪಿನಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಳ್ಳತನ Read More »

ಕರಾವಳಿ

ದೇಯಿಬೈದೆತಿಯ ಅವಹೇಳನ ಆರೋಪಿಗೆ ಸೂಕ್ತ ಶಿಕ್ಷೆಗೆ ಆಗ್ರಹ ► ವಿಹಿಂಪ, ಬಜರಂಗದಳದಿಂದ ಕಡಬದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.13. ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯರ ತಾಯಿ ದೇಯಿಬೈದೆತಿಯ ಪುತ್ತಳಿಯ ಸಮೀಪ ಕುಳಿತು ಅಶ್ಲೀಲವಾಗಿ ಫೊಟೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಡಬ ಪ್ರಖಂಡದ ವತಿಯಿಂದ ಬ್ರಹತ್ ಪ್ರತಿಭಟನೆ ಹಾಗೂ ರಸ್ತೆ ತಡೆಯು ಕಡಬದಲ್ಲಿ ನಡೆಯಿತು. ಇತ್ತೀಚೆಗೆ ಈಶ್ವರ ಮಂಗಲದ ಹನೀಫ್ ಎಂಬಾತ ದೇಯಿಬೈದಿತಿಯ ನೆನಪಿಗೋಸ್ಕರ ಸರಕಾರದಿಂದ ನಿರ್ಮಿಸಲ್ಪಟ್ಟ ದೇಯಿಬೈದಿತಿ ಔಷಧಿ ವನದಲ್ಲಿ

ದೇಯಿಬೈದೆತಿಯ ಅವಹೇಳನ ಆರೋಪಿಗೆ ಸೂಕ್ತ ಶಿಕ್ಷೆಗೆ ಆಗ್ರಹ ► ವಿಹಿಂಪ, ಬಜರಂಗದಳದಿಂದ ಕಡಬದಲ್ಲಿ ಪ್ರತಿಭಟನೆ Read More »

ಕರಾವಳಿ

ಮೇಲಾಧಿಕಾರಿಗಳ ಮಾನಸಿಕ ಕಿರುಕುಳ ► ನೇಣು ಬಿಗಿದು ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.13, ಇಲ್ಲಿನ ಆಸ್ಪತ್ರೆಯ ಮೇಲಾಧಿಕಾರಿಗಳ ಮಾನಸಿಕ ಕಿರುಕುಳಕ್ಕೆ ಬೇಸತ್ತ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಸ್ಫೂರ್ತಿ ಆತ್ಮಹತ್ಯೆಗೆ ಶರಣಾದ ಯುವತಿ. ಫಳ್ನೀರ್‍ನಲ್ಲಿರುವ ಯುನಿಟಿ ಆಸ್ಪತ್ರೆಯ ಇನ್ಶುರೆನ್ಸ್ ವಿಭಾಗದಲ್ಲಿ ಕೆಲಸ ಮಾಡಿಕೊಂಡಿದ್ದ ಸ್ಫೂರ್ತಿಯವರಿಗೆ ಕೆಲಸದ ವೇಳೆಯಲ್ಲಿ ಮೇಲಾಧಿಕಾರಿಗಳು ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ಬಗ್ಗೆ ಆಗಾಗ ಮನೆಯಲ್ಲಿ ತಾಯಿ ಮತ್ತು ತಂಗಿ ಬಳಿ ಸ್ಫೂರ್ತಿ ಹೇಳಿಕೊಂಡಿದ್ದರು ಎನ್ನಲಾಗಿದೆ. ತನ್ನ ತಾಯಿ ಹೊಂದಾಣಿಕೆ ಮಾಡಿಕೊಂಡು ಕೆಲಸ ಮುಂದುವರೆಸುವಂತೆ ಸಲಹೆ ನೀಡಿದ್ದರು. ಬಡತನ

ಮೇಲಾಧಿಕಾರಿಗಳ ಮಾನಸಿಕ ಕಿರುಕುಳ ► ನೇಣು ಬಿಗಿದು ಯುವತಿ ಆತ್ಮಹತ್ಯೆ Read More »

ಕರಾವಳಿ

ಮೀನಿನ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ► ಓರ್ವ ಮೃತ್ಯು, 15 ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಾರವಾರ,ಸೆ.13, ಮೀನಿನ ಲಾರಿ ಹಾಗೂ ಗಣೇಶ್ ಖಾಸಗಿ ಬಸ್ಸು ಮುಖಾಮುಖಿ ಡಿಕ್ಕಿಯಾಗಿ, ನಂತರ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಬಸ್ ಗಣೇಶ್ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಸೋಡಿಗದ್ದೆ ಕ್ರಾಸ್ ಬಳಿ ಬುಧವಾರ ನಡೆದಿದೆ. ಭೀಕರ ಅಪಘಾತದಲ್ಲಿ ಲಾರಿ ಚಾಲಕ ಅಬ್ದುಲ್ಲಾ (25 ವರ್ಷ) ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್‍ನಲ್ಲಿದ್ದ 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಭಟ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೋವಾದಿಂದ ಕೇರಳ ಕಡೆಗೆ

ಮೀನಿನ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ► ಓರ್ವ ಮೃತ್ಯು, 15 ಮಂದಿಗೆ ಗಂಭೀರ ಗಾಯ Read More »

ಕರ್ನಾಟಕ

ನೂಜಿಬಾಳ್ತಿಲ: ರೆಂಜಿಲಾಡಿ ಗ್ರಾಮ ಬಿಜೆಪಿ ಸಮಿತಿ ಅಧ್ಯಕ್ಷ ಚಂದ್ರಶೇಖರ ಹಳೆನೂಜಿ► ಗ್ರಾ.ಪಂ. ಸದಸ್ಯ ಹರೀಶ್ ನಡುವಳಿಕೆ ಪಕ್ಷದ ಹುದ್ದೆಗೆ ರಾಜೀನಾಮೆ

(ನ್ಯೂಸ್ ಕಡಬ) newskadaba.com ಕಡಬ,ಸೆ.13, ನೂಜಿಬಾಳ್ತಿಲ ರೆಂಜಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಸಮಿತಿ ಅಧ್ಯಕ್ಷ ಮಾಜಿ ಸಿ.ಎ. ಬ್ಯಾಂಕ್ ನಿರ್ದೇಶಕ ಕೊಣಾಜೆ ಗ್ರಾಮದ ಬಿಜೆಪಿ ವಿಸ್ತಾರಕ ಚಂದ್ರಶೇಖರ ಹಳೆನೂಜಿ ಹಾಗೂ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಸದಸ್ಯ ಹಾಗೂ ನೂಜಿಬಾಳ್ತಿಲ ಗ್ರಾಮದ ಬೂತ್ ಸಂಖ್ಯೆ 30ರ ಬಿಜೆಪಿ ಪಕ್ಷದ ಗ್ರಾಮ ಸಮಿತಿ ಅಧ್ಯಕ್ಷನಾಗಿರುವ ಹರೀಶ್ ನಡುವಳಿಕೆ ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ಕಡಬ ಶಕ್ತಿ ಕೇಂದ್ರದ ಅಧ್ಯಕ್ಷರಿಗೆ ಸೆ.12ರಂದು ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ತನ್ನ ವೈಯಕ್ತಿಕ

ನೂಜಿಬಾಳ್ತಿಲ: ರೆಂಜಿಲಾಡಿ ಗ್ರಾಮ ಬಿಜೆಪಿ ಸಮಿತಿ ಅಧ್ಯಕ್ಷ ಚಂದ್ರಶೇಖರ ಹಳೆನೂಜಿ► ಗ್ರಾ.ಪಂ. ಸದಸ್ಯ ಹರೀಶ್ ನಡುವಳಿಕೆ ಪಕ್ಷದ ಹುದ್ದೆಗೆ ರಾಜೀನಾಮೆ Read More »

ಕರಾವಳಿ

ಕಲ್ಲುಗುಡ್ಡೆ: ಗ್ರಾಮಸ್ಥರ ಪ್ರತಿಭಟನೆಗೆ ಮಣಿದ ಅಬಕಾರಿ ಇಲಾಖೆ ► ಕೊನೆಗೂ ಮದ್ಯದಂಗಡಿಗೆ ಬೀಗ ಮುದ್ರೆ ಹಾಕಿದ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಸುಪ್ರೀಂ ಕೋರ್ಟ್ ಆದೇಶದನ್ವಯ ನೆಲ್ಯಾಡಿ ಹೆದ್ದಾರಿ ಬದಿಯಿಂದ ತೆರವಾಗಿದ್ದ ಮದ್ಯದಂಗಡಿಯನ್ನು ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಆರಂಭಿಸಲಾಗುತ್ತದೆ ಎಂಬ ಮಾಹಿತಿಯನ್ವಯ ಗ್ರಾಮಸ್ಥರು ಕಡಬ ತಹಶೀಲ್ದಾರ್ ಕಛೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದ್ದು, ಅದೇ ಸಮಯದಲ್ಲಿ ಕಲ್ಲುಗುಡ್ಡೆ ಪೇಟೆಯಲ್ಲಿ ಪೊಲೀಸ್ ಬಂದೋಬಸ್ತ್‌ನಲ್ಲಿ ಮದ್ಯದಂಗಡಿಯನ್ನೂ ತೆರೆದ ಘಟನೆ ನಡೆದಿದೆ. ಕಳೆದ ಮೂರು ತಿಂಗಳಿನಿಂದ ಮದ್ಯದಂಗಡಿ ತೆರೆಯಲ್ಪಡುತ್ತದೆ ಎನ್ನುವ ಸುದ್ದಿಯಿಂದ ಎಚ್ಚೆತ್ತುಕೊಂಡ ಗ್ರಾಮಸ್ಥರು ಭಾರಿ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದರು. ಭಾನುವಾರ

ಕಲ್ಲುಗುಡ್ಡೆ: ಗ್ರಾಮಸ್ಥರ ಪ್ರತಿಭಟನೆಗೆ ಮಣಿದ ಅಬಕಾರಿ ಇಲಾಖೆ ► ಕೊನೆಗೂ ಮದ್ಯದಂಗಡಿಗೆ ಬೀಗ ಮುದ್ರೆ ಹಾಕಿದ ಅಧಿಕಾರಿಗಳು Read More »

ಕರಾವಳಿ

ಪೊಳಲಿ: ಶ್ರಿ ರಾಜಾರಾಜೇಶ್ವರಿ ಸನ್ನಿಧಿಯಲ್ಲಿ ► ಕೆನರಾ ಇಂಜಿನೀಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಕರಸೇವೆ

(ನ್ಯೂಸ್ ಕಡಬ) newskadaba.com ಪೊಳಲಿ,ಸೆ.11, ಇಲ್ಲಿನ ಇತಿಹಾಸ ಪ್ರಸಿದ್ದ ಶ್ರಿ ರಾಜಾರಾಜೇಶ್ವರಿ ದೇವಾಲಯದ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗಿದ್ದು , ಹಲವಾರು ಸಂಘ ಸಂಸ್ಥೆಗಳು ಕರಸೇವೆಯ ಮೂಲಕ ದೇವಾಲಯದ ಕಾರ್ಯಗಳಲ್ಲಿ ಹುಮ್ಮಸ್ಸಿನಿಂದ ಭಾಗವಹಿಸಿರುತ್ತಾರೆ. ಬೆಂಜನಪದವು ಕೆನರಾ ಇಂಜಿನೀಯರಿಂಗ್ ಕಾಲೇಜಿನ ಸುಮಾರು ನೂರು ಮಂದಿ ವಿದ್ಯಾರ್ಥಿಗಳು  ಪೊಳಲಿ ರಾಜಾರಾಜೇಶ್ವರಿ ದೇವಾಲಯದ ಜೀರ್ಣೋದ್ಧಾರ ಕಾರ್ಯದಲ್ಲಿ ಕೈಜೋಡಿಸಿ, ನಾವೂ ಬಿಸಿಲಲ್ಲಿ ದುಡಿಯಬಲ್ಲೆವು ಎಂದು ತೋರಿಸಿಕೊಟ್ಟಿದ್ದಾರೆ. ಲವಲವಿಕೆಯಿಂದ ಕೆಲಸಗಾರರೊಂದಿಗೆ ಕೂಡಿ ಎಲ್ಲಾ ಕೆಲಸಗಳನ್ನು ಮಾಡುತ್ತಾ ನುರಿತ ಕೆಲಸಗಾರರಿಗೂ ನಿಬ್ಬೆರಗಾಗುವಂತೆ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವಂತೆ ಅವರ

ಪೊಳಲಿ: ಶ್ರಿ ರಾಜಾರಾಜೇಶ್ವರಿ ಸನ್ನಿಧಿಯಲ್ಲಿ ► ಕೆನರಾ ಇಂಜಿನೀಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಕರಸೇವೆ Read More »

ಕರಾವಳಿ

ಕಲ್ಲುಗುಡ್ಡೆ: ತೀವ್ರ ವಿರೋಧದ ನಡುವೆಯೂ ಆರಂಭವಾದ ಮದ್ಯದಂಗಡಿ ► ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಸುಪ್ರೀಂ ಕೋರ್ಟ್ ಆದೇಶದನ್ವಯ ನೆಲ್ಯಾಡಿ ಹೆದ್ದಾರಿ ಬದಿಯಲ್ಲಿನ ಬಾರನ್ನು ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿಗೆ ಸ್ಥಳಾಂತರಿಸುವುದನ್ನು ವಿರೋಧಿಸಿ ಸ್ಥಳೀಯರು ಕಡಬ ತಹಶಿಲ್ದಾರ್ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರದಂದು ನಡೆದಿದೆ. ಕಲ್ಲುಗುಡ್ಡೆಯಲ್ಲಿ ಸ್ಥಳೀಯರ ವಿರೋಧದ ನಡುವೆಯೂ ಬಾರನ್ನು ತೆರೆಯಲು ಕೆಲವರು ತೆರೆಮರೆಯಲ್ಲಿ ಕಸರತ್ತು ನಡೆಸಿ, ಊರವರು ಕಡಬದಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲೇ ಕಲ್ಲುಗುಡ್ಡೆಯಲ್ಲಿ ಸೋಮವಾರದಂದು ಬೆಳಿಗ್ಗೆ ಪೊಲೀಸ್ ರಕ್ಷಣೆಯಲ್ಲಿ ಮದ್ಯದಂಗಡಿಯನ್ನು ತೆರೆಯಲಾಯಿತು. ವಿಷಯ ತಿಳಿದ‌ ಪ್ರತಿಭಟನಾಕಾರರು ಅಬಕಾರಿ

ಕಲ್ಲುಗುಡ್ಡೆ: ತೀವ್ರ ವಿರೋಧದ ನಡುವೆಯೂ ಆರಂಭವಾದ ಮದ್ಯದಂಗಡಿ ► ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ Read More »

ಕರಾವಳಿ

ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸ ಕ್ರಾಂತಿ ►ಮೀನುಗಳು ಯಾವ ಜಾಗದಲ್ಲಿ ಇವೆ ಎಂಬುದನ್ನು ಇನ್ನ್ಮುಂದೆ ಮೊಬೈಲ್ ಆ್ಯಪ್ ಮೂಲಕ ತಿಳಿದುಕೊಳ್ಳಬಹುದು…!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.11, ಜೀವದ ಹಂಗು ತೊರೆದು ಸಮುದ್ರದಲ್ಲಿ ಮೀನು ಹಿಡಿಯುವ ಮೀನುಗಾರಿಕೆಗಾಗಿ ಹೊಸ ಮೊಬೈಲ್ ಆ್ಯಪ್ ರೆಡಿಯಾಗಿದೆ. ಮೀನು ಯಾವ ಜಾಗದಲ್ಲೇ ಇದೆ ಎಂಬುದರ ಖಚಿತ ಮಾಹಿತಿಯನ್ನು ಈ ಮೊಬೈಲ್ ಆ್ಯಪ್ ತಿಳಿಸಿಕೊಡುತ್ತದೆ. ಚೆನ್ನೈನ ಎಂ.ಎಸ್.ಸ್ವಾಮಿನಾಥನ್ ರಿಸರ್ಚ್ ಫೌಂಡೇಷನ್ ಮೀನುಗಾರ ಸ್ನೇಹಿ ಮೊಬೈಲ್ ಅಪ್ಲಿಕೇಶನ್ ಹೊರತಂದಿದ್ದು, ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಿದೆ. ಕನ್ನಡ, ಇಂಗ್ಲಿಷ್, ತಮಿಳು, ಮಲಯಾಳಂ, ತೆಲುಗು ಸೇರಿದಂತೆ ವಿವಿಧ ಭಾಷೆಗಳಲ್ಲಿ ಮೊಬೈಲ್ ಆ್ಯಪ್ ಲಭ್ಯವಿದ್ದು ಗೂಗಲ್ ಪ್ಲೇಸ್ಟೋರ್‍ನಲ್ಲಿ ಉಚಿತವಾಗಿ ಡೌನ್‍ಲೋಡ್

ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸ ಕ್ರಾಂತಿ ►ಮೀನುಗಳು ಯಾವ ಜಾಗದಲ್ಲಿ ಇವೆ ಎಂಬುದನ್ನು ಇನ್ನ್ಮುಂದೆ ಮೊಬೈಲ್ ಆ್ಯಪ್ ಮೂಲಕ ತಿಳಿದುಕೊಳ್ಳಬಹುದು…!!! Read More »

ಕರಾವಳಿ

Breaking News ► ಕಡೇಶಿವಾಲಯ ದೇವಸ್ಥಾನದಲ್ಲಿ ಕಳ್ಳತನ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಸೆ.11, ಇಲ್ಲಿನ ಕಡೇಶಿವಾಲಯ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಅಪಾರ ಪ್ರಮಾಣದ ನಗನಗದು ಕಳವುಗೈದ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಕಡೇಶಿವಾಲಯ ದೇವಸ್ಥಾನದಲ್ಲಿ ಅಳವಡಿಸಲಾದ ಸಿಸಿ ಕ್ಯಾಮರವನ್ನು ದ್ವಂಸಗೊಳಿಸಿದ ಕಳ್ಳರು ಗುಡಿಯಲ್ಲಿದ್ದ ಬಂಗಾರದ ಮೂರ್ತಿ, ಬೆಳ್ಳಿಯ ಆಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ.

Breaking News ► ಕಡೇಶಿವಾಲಯ ದೇವಸ್ಥಾನದಲ್ಲಿ ಕಳ್ಳತನ Read More »

ಕರಾವಳಿ
Scroll to Top