ಕಡಬ ನ್ಯೂಸ್

ಅಪಘಾತದ ಗಾಯಾಳು ಮುಸಲ್ಮಾನರನ್ನು ಆಸ್ಪತ್ರೆಗೆ ದಾಖಲಿಸಿದ ಹಿಂಜಾವೇ ಅಧ್ಯಕ್ಷ ► ಕರಾವಳಿಯ ಕೋಮು ಸಂಘರ್ಷದ ಮಧ್ಯೆಯೂ ಮಾನವೀಯತೆ ಜೀವಂತ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.10. ಕರಾವಳಿಯು ಕಳೆದ ಒಂದು ತಿಂಗಳಿನಿಂದ ಕೋಮು ದಳ್ಳುರಿಯಿಂದ ಹೊತ್ತಿ ಉರಿಯುತ್ತಿದ್ದು, ಕೋಮು ಸಂಘರ್ಷಕ್ಕೆ ಎರಡು ಹೆಣಗಳು ಉರುಳಿವೆ. ಎರಡೂ ಧರ್ಮಗಳ ನಡುವೆ ಸರಿಪಡಿಸಲಾಗದಷ್ಟು ದೊಡ್ಡ ಕಂದಕ ನಿರ್ಮಾಣವಾಗಿದೆ. ದಿನಂಪ್ರತಿ ಕೋಮು ಪ್ರಚೋದಿತ ಹಿಂಸಾಚಾರಗಳ ಬಗ್ಗೆ ಮಾಧ್ಯಮಗಳಲ್ಲಿ ಬರುವ ವರದಿಗಳು ಜಿಲ್ಲೆಯ ಶಾಂತಿಪ್ರಿಯ ನಾಗರೀಕರನ್ನು ಆತಂಕಕ್ಕೀಡುಮಾಡಿದೆ. ಇವೆಲ್ಲದರ ಮಧ್ಯೆ 5 ದಿನಗಳ ಹಿಂದೆ ಪುತ್ತೂರಿನ ಅರಿಯಡ್ಕದಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಗಾಯಾಳು ಯುವಕರನ್ನು ಹಿಂದೂ ಸಂಘಟನೆಯ ಪ್ರಮುಖರೊಬ್ಬರು ಆಸ್ಪತ್ರೆಗೆ […]

ಅಪಘಾತದ ಗಾಯಾಳು ಮುಸಲ್ಮಾನರನ್ನು ಆಸ್ಪತ್ರೆಗೆ ದಾಖಲಿಸಿದ ಹಿಂಜಾವೇ ಅಧ್ಯಕ್ಷ ► ಕರಾವಳಿಯ ಕೋಮು ಸಂಘರ್ಷದ ಮಧ್ಯೆಯೂ ಮಾನವೀಯತೆ ಜೀವಂತ Read More »

ಕರಾವಳಿ

ರಾಮಕುಂಜ: ಮಲೇರಿಯಾ ವಿರೋಧಿ ಮಾಸಾಚರಣೆ

(ನ್ಯೂಸ್ ಕಡಬ) newskadaba.com ರಾಮಕುಂಜ ಜು.10. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಛೇರಿ ದ.ಕ. ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಕೊೖಲ, ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ರೆಡ್ ಕ್ರಾಸ್ ಸಂಘ ಇದರ ಸಹಯೋಗದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆಯು ರಾಮಕುಂಜ ಪಂಚಾಯತ್ ಸಭಾಭವನದಲ್ಲಿ ಜರಗಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರವಿಚಂದ್ರ ಯು ಸ್ವಚ್ಛತೆ, ಆರೋಗ್ಯ

ರಾಮಕುಂಜ: ಮಲೇರಿಯಾ ವಿರೋಧಿ ಮಾಸಾಚರಣೆ Read More »

ಕರಾವಳಿ

ಬಂಟ್ವಾಳ ಗಲಭೆ ಹಿನ್ನೆಲೆಯಲ್ಲಿ ಪ್ರತ್ಯೇಕ ಸೈಬರ್‍ಸೆಲ್ ತಂಡ ರಚನೆ ► ವಾಟ್ಸ್ಅಪ್‍ಗಳಲ್ಲಿ ಪ್ರಚೋದನಕಾರಿ ಸಂದೇಶ ಕಳುಹಿಸಿದರೆ ಅಡ್ಮಿನ್‍ಗಳು ಜೈಲಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ, ಸುಳ್ಳು ಮೆಸೇಜ್‌ಗಳನ್ನು ಕಳುಹಿಸುವವರ ಪತ್ತೆ ಹಚ್ಚಲು ಪ್ರತ್ಯೇಕ ಸೈಬರ್ ಸೆಲ್ ತಂಡ ರಚಿಸಲಾಗಿದೆ. ವಾಟ್ಸ್‌ಅಪ್‌ನಲ್ಲಿ ಪ್ರಚೋದನಕಾರಿ ಮೆಸೇಜ್ ಯಾರು ಕಳುಹಿಸಿದರೂ ಅಡಿಮಿನ್ ಹೊಣೆಯಾಗುತ್ತಾನೆ ಎಂದು ಎಂದು ಪಶ್ಚಿಮ ವಲಯ ಐಜಿಪಿ ಪಿ.ಹರಿಶೇಖರನ್ ಎಚ್ಚರಿಸಿದ್ದಾರೆ. ಅವರು ಭಾನುವಾರದಂದು ಬಂಟ್ವಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಂಟ್ವಾಳ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೀಗ ಪರಿಸ್ಥಿತಿ ಶಾಂತವಾಗಿದೆ. ಯಾವುದೇ ಅಹಿತಕರ ಕ್ರಮ ನಡೆಯದಂತೆ ಜಾಗ್ರತೆ ವಹಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ

ಬಂಟ್ವಾಳ ಗಲಭೆ ಹಿನ್ನೆಲೆಯಲ್ಲಿ ಪ್ರತ್ಯೇಕ ಸೈಬರ್‍ಸೆಲ್ ತಂಡ ರಚನೆ ► ವಾಟ್ಸ್ಅಪ್‍ಗಳಲ್ಲಿ ಪ್ರಚೋದನಕಾರಿ ಸಂದೇಶ ಕಳುಹಿಸಿದರೆ ಅಡ್ಮಿನ್‍ಗಳು ಜೈಲಿಗೆ Read More »

ಕರಾವಳಿ

ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣ ► ಆರೋಪಿಗಳ ಬಗ್ಗೆ ಮಹತ್ವದ ಸುಳಿವು ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.09. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸ್ ಇಲಾಖೆ, ಆರೋಪಿಗಳ ಬಗ್ಗೆ ಸಾಕಷ್ಟು ಮಹತ್ವದ ಸುಳಿವು ದೊರೆತಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪಶ್ಚಿಮ ವಲಯ ಐಜಿಪಿ ಪಿ.ಹರಿಶೇಖರನ್ ತಿಳಿಸಿದ್ದಾರೆ. ಬಂಟ್ವಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶರತ್ ಕೊಲೆ ವಿಚಾರದಲ್ಲಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಯಾರೇ ಆಗಿರಲಿ. ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು. ಇದೀಗ ಬಂಟ್ವಾಳ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಶಾಂತವಾಗಿದ್ದು,

ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣ ► ಆರೋಪಿಗಳ ಬಗ್ಗೆ ಮಹತ್ವದ ಸುಳಿವು ಪತ್ತೆ Read More »

ಕರಾವಳಿ

ಅಡ್ಯಾರು ಕಟ್ಟೆ ಯುವಕರ ಕೊಲೆ ಯತ್ನ ಪ್ರಕರಣ: ಮೂವರು ಆರೋಪಿಗಳ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ಪೆಟ್ರೋಲ್ ಕೇಳುವ ನೆಪದಲ್ಲಿ ವಿದ್ಯಾರ್ಥಿಗಳಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಭಾನುವಾರದಂದು ನಡೆದಿದೆ. ಮಂಗಳೂರಿನ ಖಾಸಗಿ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಕೇರಳದ ಮಲಪ್ಪುರಂ ನಿವಾಸಿ ಸಾಜಿದ್ (23) ಹಾಗೂ ಆತನ ಸ್ನೇಹಿತ ನೌಫಲ್ ನ ಮೇಲೆ ದಾಳಿ ನಡೆಸಿದ ಆರೋಪಿಗಳಾದ ಅರ್ಕುಳ ನಿವಾಸಿ ನಿತಿನ್ ಪೂಜಾರಿ(21), ಕೆಂಜೂರು ನಿವಾಸಿ ಪ್ರಾಣೇಶ್ ಪೂಜಾರಿ(20) ಹಾಗೂ ಅಳಪೆ ಕಂಡೇವು ನಿವಾಸಿ ಕಿಶನ್ ಪೂಜಾರಿ(21) ಯವರನ್ನು ಬಂಧಿಸಿದ್ದಾರೆನ್ನಲಾಗಿದೆ. ಆರೋಪಿಗಳ ಪೈಕಿ ನಿತಿನ್ ಹಾಗೂ ಪ್ರಾಣೇಶ್ ಮೇಲೆ

ಅಡ್ಯಾರು ಕಟ್ಟೆ ಯುವಕರ ಕೊಲೆ ಯತ್ನ ಪ್ರಕರಣ: ಮೂವರು ಆರೋಪಿಗಳ ಸೆರೆ Read More »

ಕರಾವಳಿ

ಚೆಕ್‍ಪೋಸ್ಟ್ ನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದರೆ ಶೂಟ್ ಮಾಡಲು IGP ಆದೇಶ ► ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು 26 ಚೆಕ್‍ಪೋಸ್ಟ್ ಸ್ಥಾಪನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆದಿರುವುದರಿಂದಾಗಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಲ್ಲಲ್ಲಿ ಪೊಲೀಸ್ ಚೆಕ್ ಪೋಸ್ಟ್‍ಗಳನ್ನು ತೆರೆಯಲಾಗಿದ್ದು, ವಾಹನ ಮಾಲೀಕರು ಸಹಕರಿಸದೆ ತನಿಖೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದರೆ ಶೂಟ್ ಮಾಡಲು ಪಶ್ಚಿಮ ವಲಯ ಐಜಿಪಿ ಪಿ. ಹರಿಶೇಖರನ್ ಸೂಚಿಸಿದ್ದಾರೆ. ಪೊಲೀಸರು ವಾಹನಗಳನ್ನು ತಪಾಸಣೆ ನಡೆಸಲು ನಿಲ್ಲಿಸುವಂತೆ ಸೂಚಿಸಿದರೂ ಕೆಲವು ಸವಾರರು ಸಹಕರಿಸದೆ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಇನ್ನು ಕೆಲವರು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸುತ್ತಾರೆ. ಅಂತಹವರ ವಿರುದ್ಧ

ಚೆಕ್‍ಪೋಸ್ಟ್ ನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದರೆ ಶೂಟ್ ಮಾಡಲು IGP ಆದೇಶ ► ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು 26 ಚೆಕ್‍ಪೋಸ್ಟ್ ಸ್ಥಾಪನೆ Read More »

ಕರಾವಳಿ

ನೂಜಿಬಾಳ್ತಿಲ ಬೆಥನಿ ಪ.ಪೂ. ಕಾಲೇಜು: ಪಾಲಕರ ಸಮಾವೇಶ, ಕಂಪ್ಯೂಟರ್ ಕೊಠಡಿ, ತುಳು ಪಠ್ಯ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಜು.09. ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪ.ಪು.ಕಾಲೇಜಿನಲ್ಲಿ ಪಾಲಕರ ಸಮಾವೇಶ, ನೂತನ ಕಂಪ್ಯುಟರ್ ಕೊಠಡಿ ಹಾಗೂ ತುಳು ಪಠ್ಯ ಉದ್ಘಾಟನಾ ಸಮಾರಂಭ ಜು.7ರಂದು ಬೆಳಿಗ್ಗೆ ರೆ.ಫಾ.ಜೋಸ್ ಮೆಮೋರಿಯಲ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಜಿ.ಎಸ್.,ಮಾತನಾಡಿ, ಮಂಗಳೂರಿನ ಕ್ರಿಶ್ಚನ್ ಪಾಮ್ಪಾಮ್ ವಿದ್ಯಾಸಂಸ್ಥೆಯಲ್ಲಿ 18 ಮಕ್ಕಳಿಗೆ ತುಳು ಭಾಷೆ ಕಲಿಕೆ ಆರಂಭಿಸುವ ಮೂಲಕ ರಾಜ್ಯದಲ್ಲಿ ತುಳುಭಾಷೆ ಪಠ್ಯ ಆರಂಭಗೊಂಡಿದ್ದು ಈಗ ರಾಜ್ಯದಲ್ಲಿ ತೃತೀಯ ಭಾಷೆಯಾಗಿ 36 ಶಾಲೆಗಳಲ್ಲಿ ಕಲಿಸಲಾಗುತ್ತಿದೆ. ಕಡಬ ತಾಲೂಕಿನಲ್ಲಿ

ನೂಜಿಬಾಳ್ತಿಲ ಬೆಥನಿ ಪ.ಪೂ. ಕಾಲೇಜು: ಪಾಲಕರ ಸಮಾವೇಶ, ಕಂಪ್ಯೂಟರ್ ಕೊಠಡಿ, ತುಳು ಪಠ್ಯ ಉದ್ಘಾಟನೆ Read More »

ಕರಾವಳಿ

ಕುತ್ತಾರು: ಯುವಕನಿಗೆ ಚೂರಿ ಇರಿತ ► ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಪ್ರಕರಣಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಜು.08. ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರು ರಾಣಿಪುರದಲ್ಲಿ ಯುವಕನ ಮೇಲೆ ತಲವಾರು ದಾಳಿ ನಡೆಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಅಂಬ್ಲಮೊಗರು ಕೋಟ್ರಗುತ್ತು ನಿವಾಸಿ ಚಿರಂಜೀವಿ(24) ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಮೂವರು ಅಪರಿಚಿತರು ತಲೆಗೆ ತಲವಾರಿನಿಂದ ಹಲ್ಲೆ ನಡೆಸಿದ್ದಾರೆ. ಚಿರಂಜೀವಿಯನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.  ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.

ಕುತ್ತಾರು: ಯುವಕನಿಗೆ ಚೂರಿ ಇರಿತ ► ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಪ್ರಕರಣಗಳು Read More »

ಕರಾವಳಿ

ಕಲ್ಲುಗುಡ್ಡೆ ಕಾಲೋನಿ ಸಮೀಪ ಮದ್ಯದಂಗಡಿ ತೆರವಿಗೆ ಆಕ್ಷೇಪ

(ನ್ಯೂಸ್ ಕಡಬ) newskadaba.com ಕಡಬ, ಜು.08. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಕಾಲೋನಿ ಸಮೀಪದಲ್ಲಿ ಆರಂಭಗೊಳ್ಳಲಿದೆ ಎನ್ನಲಾದ ಮದ್ಯದಂಗಡಿಗೆ ದಲಿತ ಮುಖಂಡೆ ಕಮಲ ಅಕ್ಷೇಪ ವ್ಯಕ್ತಪಡಿಸಿದ್ದು ವಿರೋಧದ ನಡುವೆ ಆರಂಭಗೊಂಡಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಅವರು ಶನಿವಾರ ಕಡಬದಲ್ಲಿ ನಡೆದ ಪತ್ರೀಕಾಗೋಷ್ಟಿಯಲ್ಲಿ ಮಾತನಾಡಿ, ಸುಪ್ರಿಂಕೋರ್ಟ್ ಆದೇಶದಿಂದ ನೆಲ್ಯಾಡಿ ಸಮೀಪದ ಉದನೆಯಲ್ಲಿ ಮುಚ್ಚಲ್ಪಟ್ಟ ಬಾರೊಂದು ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಕಾಲೋನಿಯ ಅನತಿ ದೂರದಲ್ಲಿ ಪ್ರಾರಂಭಗೊಳ್ಳಲಿರುವ ಬಗ್ಗೆ ಗುಮಾನಿ ಇದೆ. ಈ ನಿಟ್ಟಿನಲ್ಲಿ ನೂಜಿಬಾಳ್ತಿಲ ಪಂಚಾಯಿತಿಗೆ ಈಗಾಗಲೇ

ಕಲ್ಲುಗುಡ್ಡೆ ಕಾಲೋನಿ ಸಮೀಪ ಮದ್ಯದಂಗಡಿ ತೆರವಿಗೆ ಆಕ್ಷೇಪ Read More »

ಕರಾವಳಿ

ಶವಯಾತ್ರೆಯಲ್ಲಿನ ಕಲ್ಲುತೂರಾಟ ಪೂರ್ವಯೋಜಿತ ಕೃತ್ಯವೇ…? ► ಸಂಶಯಕ್ಕೆ ಕಾರಣವಾದ ವೀಡಿಯೋ ಇದೀಗ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.08. ದುಷ್ಕರ್ಮಿಗಳಿಂದ ಕೊಲೆಯಾದ ಆರೆಸ್ಸೆಸ್ ಕಾರ್ಯಕರ್ತ ಶರತ್ ದೇವಾಡಿಗರ ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದ್ದ ಕೆಲವು ಕಿಡಿಗೇಡಿಗಳು ರಸ್ತೆಬದಿಯಲ್ಲಿನ ಕೆಲವು ಕಲ್ಲುಗಳನ್ನು ತೆಗೆದು ಕಾರಿನೊಳಗೆ ಶೇಖರಿಸುತ್ತಿರುವುದನ್ನು ಯಾರೋ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಸಂಶಯಕ್ಕೆ ಕಾರಣವಾಗಿದೆ. ಶವಯಾತ್ರೆಯಲ್ಲಿ ಕೈಕಂಬ ಹಾಗೂ ಬಿ.ಸಿ.ರೋಡಲ್ಲಿ ನಡೆದ ಕಲ್ಲು ತೂರಾಟ ಘಟನೆಯು ಹಿಂದೂ ಪರ ಸಂಘಟನೆಯ ಕೆಲವು ಗೂಂಡಾ ಪ್ರವೃತ್ತಿಯ ಕಾರ್ಯಕರ್ತರ ಪೂರ್ವಯೋಜಿತ ಕೃತ್ಯವಾಗಿರಬಹುದು ಎಂದು ಜಿಲ್ಲೆಯ ಶಾಂತಿಪ್ರಿಯ ಜನರಾಡಿಕೊಳ್ಳುತ್ತಿದ್ದಾರೆ. ಅದಕ್ಕೆ ಇದೀಗ ವೈರಲ್ ಆಗಿರುವ

ಶವಯಾತ್ರೆಯಲ್ಲಿನ ಕಲ್ಲುತೂರಾಟ ಪೂರ್ವಯೋಜಿತ ಕೃತ್ಯವೇ…? ► ಸಂಶಯಕ್ಕೆ ಕಾರಣವಾದ ವೀಡಿಯೋ ಇದೀಗ ವೈರಲ್ Read More »

ಕರಾವಳಿ
Scroll to Top