ಕಡಬ ನ್ಯೂಸ್

ಜಿಲ್ಲೆಯಾದ್ಯಂತ ಜು.4 ರವರೆಗೆ ನಿಷೇಧಾಜ್ಞೆ ಮುಂದುವರಿಕೆ

(ನ್ಯೂಸ್ ಕಡಬ) newskadaba.com ಮ0ಗಳೂರು ಜು.02. ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ಜುಲೈ 2 ರವರೆಗೆ ವಿಧಿಸಲಾಗಿದ್ದ  ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆಯನ್ನು ಜುಲೈ 4 ರ ಮಧ್ಯರಾತ್ರಿವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಆದೇಶ ಹೊರಡಿಸಿದ್ದಾರೆ.  ದಕ್ಷಿಣ ಮೇಲೆ ತಿಳಿಸಿದ ಅವಧಿಯಲ್ಲಿ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ,ಬೀದಿ,ಓಣೆ,ಕೇರಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಸರ್ಕಾರಿ ಕಛೇರಿ ಸುತ್ತಮುತ್ತ ಗುಂಪು ಸೇರಬಾರದು ಅಥವಾ ಗುಂಪು ಕೂಡುವುದನ್ನು ನಿಷೇಧಿಸಲಾಗಿದೆ. ಯಾವುದೇ ಆಯುಧ, […]

ಜಿಲ್ಲೆಯಾದ್ಯಂತ ಜು.4 ರವರೆಗೆ ನಿಷೇಧಾಜ್ಞೆ ಮುಂದುವರಿಕೆ Read More »

ಕರಾವಳಿ

ಇಂದು ಕರೋಪಾಡಿ ಗ್ರಾ.ಪಂ. ಉಪಚುನಾವಣೆ

(ನ್ಯೂಸ್ ಕಡಬ) newskadaba.com ವಿಟ್ಲ, ಜು.02. ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಲೀಲ್ ಕರೋಪಾಡಿಯವರು ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾಗಿದ್ದರಿಂದ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯು ಇಂದು ನಡೆಯುತ್ತಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಅನ್ವರ್ ಕರೋಪಾಡಿ(ಮೃತ ಜಲೀಲ್ ರವರ ಸಹೋದರ) ಮತ್ತು ಬಿಜೆಪಿ ಅಭ್ಯರ್ಥಿಯಾಗಿ ಹರೀಶ್ ಭಟ್ ಕೋಡ್ಲ ಮಧ್ಯೆ ನೇರ ಹಣಾಹಣಿ ನಡೆಯುತ್ತಿದೆ. ಮತದಾನವು ಮಿತ್ತನಡ್ಕ ಸರ್ಕಾರಿ ಶಾಲೆಯಲ್ಲಿ ನಡೆಯುತ್ತಿದ್ದು, ಮತದಾನ ಕೇಂದ್ರದ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ‌.

ಇಂದು ಕರೋಪಾಡಿ ಗ್ರಾ.ಪಂ. ಉಪಚುನಾವಣೆ Read More »

ಕರಾವಳಿ

ABVP ಕಾರ್ಯಕರ್ತರಿಗೆ ಸಿಂಹಸ್ವಪ್ನವಾದ ಎಸ್ಪಿ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜು.02. ಇಲ್ಲಿನ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿಯ ನಡುವಿನ ಕಿತ್ತಾಟಕ್ಕೆ ಮಧ್ಯಸ್ಥಿಕೆ ವಹಿಸೋಕೆ ಬಂದ ಎಬಿವಿಪಿ ಹಾಗೂ ವಿವಿಧ ಸಂಘಟನೆ ಕಾರ್ಯಕರ್ತರಿಗೆ ಎಸ್‍ಪಿ ಅಣ್ಣಾಮಲೈ ಚಾರ್ಜ್ ತೆಗೆದುಕೊಂಡಿದ್ದಾರೆ. ಎಸ್‍ಪಿ ಅಣ್ಣಾಮಲೈ ಅವರು ವಿದ್ಯಾರ್ಥಿಗಳು ಹಾಗೂ ಮ್ಯಾನೇಜ್‍ಮೆಂಟ್ ಜೊತೆ ಮಾತುಕತೆ ನಡೆಸುತ್ತಿದ್ದ ವೇಳೆ ಒಳಹೋಗಲು ಯತ್ನಿಸಿದ ಸಂಘಟನಾ ಕಾರ್ಯಕರ್ತರಿಗೆ, ಇದು ಕಾಲೇಜು. ನಿಮಗೆ ಅನುಮತಿ ಹಾಗೂ ದೂರು ಕೊಟ್ಟೋರು ಯಾರೆಂದು ಕಿಡಿಕಾರಿ ಸ್ವತಃ ಎಸ್ಪಿಯವರೇ ಕಾರ್ಯಕರ್ತರನ್ನು ಹೊರದೂಡಿದ್ದಾರೆ. ಇದಕ್ಕೂ

ABVP ಕಾರ್ಯಕರ್ತರಿಗೆ ಸಿಂಹಸ್ವಪ್ನವಾದ ಎಸ್ಪಿ ಅಣ್ಣಾಮಲೈ Read More »

ಕರ್ನಾಟಕ

ಅಶ್ರಫ್ ಕಲಾಯಿ ಕೊಲೆ ಪ್ರಕರಣ ►ಪ್ರಮುಖ ಆರೋಪಿ ಭರತ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.01. SDPI ಮುಖಂಡ ಅಶ್ರಫ್ ಕಲಾಯಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ, ಬಜರಂಗದಳ ಮುಖಂಡ ಭರತ್ ಕುಮ್ಡೇಲ್ ಎಂಬಾತನನ್ನು ಪೊಲೀಸರು ಶನಿವಾರದಂದು ಬಂಧಿಸಿದ್ದಾರೆ. ಜೂನ್ 21ರಂದು ಬೆಂಜನಪದವು ಬಳಿ ಅಶ್ರಫ್ ರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಕೊಲೆಗೆ ಸಂಚು ನಡೆಸಿದ ಇಬ್ಬರಲ್ಲಿ ಒಬ್ಬನಾದ ದಿವ್ಯರಾಜ್ ಶೆಟ್ಟಿ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಇದೀಗ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ, ಹತ್ಯೆಗೆ ಸಂಚು ರೂಪಿಸಿದ್ದ ಮುಖಂಡ ಭರತ್ ಕುಮ್ಡೇಲುವನ್ನು ಇಂದು

ಅಶ್ರಫ್ ಕಲಾಯಿ ಕೊಲೆ ಪ್ರಕರಣ ►ಪ್ರಮುಖ ಆರೋಪಿ ಭರತ್ ಬಂಧನ Read More »

ಕರಾವಳಿ

ಕಡಬದ MSIL ಮದ್ಯದಂಗಡಿ ಫುಲ್‌ ರಶ್

(ನ್ಯೂಸ್ ಕಡಬ) newskadaba.com ಕಡಬ, ಜೂ.30. ಹೆದ್ದಾರಿ ಬದಿಗಳಲ್ಲಿ ಕಾರ್ಯಾಚರಿಸುತ್ತಿದ್ದ ಬಾರ್ ಗಳನ್ನು 220 ಮೀಟರ್ ದೂರಕ್ಕೆ ಸ್ಥಳಾಂತರಿಸಬೇಕೆನ್ನುವ ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಕಡಬದಲ್ಲಿನ ಎರಡು ಖಾಸಗಿ ಬಾರ್‌ಗಳು, ನೆಟ್ಟಣ, ಆಲಂಕಾರು, ಪಂಜ ಸೇರಿದಂತೆ ಪರಿಸರದ ಎಲ್ಲಾ ಬಾರ್‌ಗಳನ್ನು ಮುಚ್ಚಲ್ಪಟ್ಟ ಕಾರಣದಿಂದ ಕಡಬ ಸರಕಾರಿ ಪ್ರಾಯೋಜಿತ ಎಂಎಸ್ಐಎಲ್ ಬಾರ್ ನಲ್ಲಿ ಸರತಿ ಸಾಲಿನಲ್ಲಿ ನಿಂತು ಗ್ರಾಹಕರು ಮದ್ಯಕ್ಕಾಗಿ ಕಾಯುತ್ತಿದ್ದ ದೃಶ್ಯ ಶನಿವಾರ ಸಂಜೆ ಕಂಡುಬಂದಿತು.

ಕಡಬದ MSIL ಮದ್ಯದಂಗಡಿ ಫುಲ್‌ ರಶ್ Read More »

ಕರಾವಳಿ

GST ಜಾರಿ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ದರ ಇಳಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.01. ಶನಿವಾರದಿಂದ GST ಜಾರಿಯಾದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಳಿಕೆ ಕಂಡುಬಂದಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 3.42 ರು, ಮತ್ತು ಡೀಸೆಲ್ ದರ 3.57 ರು ಕಡಿತವಾಗಿದೆ ಎಂದು ತಿಳಿದುಬಂದಿದೆ. ಶುಕ್ರವಾರ ಬೆಂಗಳೂರಿನಲ್ಲಿ 57.80 ರು. ಇದ್ದ ಡೀಸೆಲ್ ದರ, ಶನಿವಾರ ಬೆಳಗ್ಗೆ 6 ಗಂಟೆಗೆ ಅನ್ವಯವಾಗುವಂತೆ 54.23 ರು.ಗೆ ಇಳಿಕೆಯಾಗಿದೆ. 67.66 ರು. ಇದ್ದ ಪೆಟ್ರೋಲ್ ದರ 64.24 ರು.ಗಳಿಗೆ ಇಳಿಕೆಯಾಗಿದೆ. ಅಂದರೆ ಡೀಸೆಲ್‍ಗೆ 3.57 ರೂ.

GST ಜಾರಿ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ದರ ಇಳಿಕೆ Read More »

ಕರ್ನಾಟಕ

ಜುಲೈ 02.ರಿಂದ ಕಡಬದ ಸಾಹಿರಾ ಡ್ರೆಸ್ ಪ್ಯಾಲೇಸ್ ನಲ್ಲಿ ಸ್ಟಾಕ್ ಕ್ಲಿಯರೆನ್ಸ್ ಸೇಲ್

(ನ್ಯೂಸ್ ಕಡಬ) newskadaba.com ಕಡಬ, ಜು.01. ಇಲ್ಲಿನ ಮುಖ್ಯಪೇಟೆಯಲ್ಲಿ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಸಾಹಿರಾ ಡ್ರೆಸ್ ಪ್ಯಾಲೇಸ್ ನಲ್ಲಿನ ಎಲ್ಲಾ ತರದ ಸಿದ್ಧ ಉಡುಪುಗಳನ್ನು ಖಾಲಿ ಮಾಡುವ ಸಲುವಾಗಿ ಜುಲೈ 02, 2017ನೇ ಭಾನುವಾರದಿಂದ ‘ಸ್ಟಾಕ್ ಕ್ಲಿಯರೆನ್ಸ್ ಸೇಲ್’ ನಡೆಯಲಿದೆ. ಅದರಂತೆ ಮಕ್ಕಳ ಸಿದ್ಧ ಉಡುಪಗಳು, ಲೇಡೀಸ್ ಟಾಪ್, ನೈಟಿ, ಲೆಗ್ಗಿಂಗ್ಸ್, ಸ್ಕೂಲ್ ಬ್ಯಾಗ್, ಟೀ-ಶರ್ಟ್, ವ್ಯಾನಿಟಿ ಬ್ಯಾಗ್, ಕೊಡೆ, ಸಾರಿಗಳು ಸೇರಿದಂತೆ ಮಳಿಗೆಯಲ್ಲಿರುವ ಎಲ್ಲಾ ವಿಧದ ಉಡುಪುಗಳನ್ನು ವಿಶೇಷ ಡಿಸ್ಕೌಂಟ್‍ಗಳೊಂದಿಗೆ ಆಕರ್ಷಕ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು.

ಜುಲೈ 02.ರಿಂದ ಕಡಬದ ಸಾಹಿರಾ ಡ್ರೆಸ್ ಪ್ಯಾಲೇಸ್ ನಲ್ಲಿ ಸ್ಟಾಕ್ ಕ್ಲಿಯರೆನ್ಸ್ ಸೇಲ್ Read More »

ಕರಾವಳಿ

ಬದುಕಿಗೆ ಭರವಸೆ ನೀಡುವ ವೈದ್ಯರಿಗೊಂದು ಸಲಾಂ ►ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಜು.01. ಬದುಕಿಗೆ ಭರವಸೆ ನೀಡುವ ವೈದ್ಯರಿಗೊಂದು ಸಲಾಮು ಜುಲೈ 1 ರಂದು ಪ್ರತಿ ವರುಷ ದೇಶಾದ್ಯಂತ ವೈದ್ಯರ ದಿನ ಎಂದು ಆಚರಿಸಲಾಗುತ್ತಿದೆ. ಇದು ಭಾರತದ ಮಹಾನ್ ಸುಪುತ್ರ. ಭಾರತರತ್ನ ಡಾ| ಬಿಷನ್ ಚಂದ್ರ ರಾಯ್ ಅವರು ಜನ್ಮವೆತ್ತ ದಿನ. ಡಾ| ಬಿ.ಸಿ. ರಾಯ್ ಅವರೊಬ್ಬರು ಮಾನವೀಯ ಕಳಕಳಿಯುಳ್ಳ ವೈದ್ಯರಾಗಿದ್ದರಲ್ಲದೆ ಅಪ್ರತಿಮ ರಾಜಕಾರಣಿ ದೇಶಭಕ್ತ ಮತ್ತು ಭಾರತ ಕಂಡ ಅತ್ಯುತ್ತಮ ವೈದ್ಯರೆಂದರೂ ತಪ್ಪಲ್ಲ. ಕಲ್ಕತ್ತಾ ವಿಶ್ವ ವಿದ್ಯಾಲಯದಲ್ಲಿ ಎಂ.ಬಿ.ಬಿ.ಎಸ್. ಪದವಿ ಪಡೆದ ಬಳಿಕ  ವಿದೇಶಕ್ಕೆ

ಬದುಕಿಗೆ ಭರವಸೆ ನೀಡುವ ವೈದ್ಯರಿಗೊಂದು ಸಲಾಂ ►ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಪೇಜಾವರ ಶ್ರೀಯವರ ಇಫ್ತಾರ್ ವಿವಾದ ► ಪ್ರವೀಣ್ ವಾಲ್ಕೆಯವರ ಆಕ್ರೋಶಿತ ಮಾತು

(ನ್ಯೂಸ್ ಕಡಬ) newskadaba.com ಮಂಗಳೂರು, ಜು.01. ನಾವು ಸೌಹಾರ್ದತೆಯಲ್ಲಿರಬೇಕೆಂದು 50 ವರ್ಷಗಳ ಮೊದಲು ಗೊತ್ತಾಗಿರುತ್ತಿದ್ದರೆ ಇವತ್ತಿನ ದಿನಗಳಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಇಷ್ಟೊಂದು ಗೊಂದಲಗಳಾಗುತ್ತಿರಲಿಲ್ಲ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ವಿಚಾರದಲ್ಲಿ ನಾವು ಪೇಜಾವರ ಶ್ರೀ ಯವರ ಮಾರ್ಗದರ್ಶನದಲ್ಲಿ ಮುಂದುವರಿದಿದ್ದೆವು. ಅಂದೇ ನಾವೆಲ್ಲ ಮುಸ್ಲಿಮರೊಂದಿಗೆ ಸೌಹರ್ದಯುತವಾಗಿ ಇರೋಣ ಎಂದು ಸ್ವಾಮೀಜಿ ಹೇಳಿದ್ದರೆ, ನಾವೂ ಅನ್ಯೋನ್ಯವಾಗಿ ಇರುತ್ತಿದ್ದೆವು. ಆದರೆ, ನಮ್ಮ ಮನಸ್ಸಿನಲ್ಲಿ ವಿಷಬೀಜ ಬಿತ್ತಿ, ತಾವು ಗುಟ್ಟಾಗಿ ಮುಸ್ಲಿಮರ ಪ್ರೀತಿಗಳಿಸಲು ಮುಂದಾಗಿರುವುದು ಎಷ್ಟು ಸರಿ. ನಮಗೆ ಮುಸ್ಲಿಮರು ವಿರೋಧಿಗಳಲ್ಲ. ಈ

ಪೇಜಾವರ ಶ್ರೀಯವರ ಇಫ್ತಾರ್ ವಿವಾದ ► ಪ್ರವೀಣ್ ವಾಲ್ಕೆಯವರ ಆಕ್ರೋಶಿತ ಮಾತು Read More »

ಕರಾವಳಿ

ಬಿಳಿನೆಲೆ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಕಡಬ, ಜು.01. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದುದರ ಪರಿಣಾಮ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಮುರಿದು ಬಿದ್ದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಕಾರು ಢಿಕ್ಕಿ ಹೊಡೆದು ಚರಂಡಿಗೆ ಇಳಿದರೂ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.bi

ಬಿಳಿನೆಲೆ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ Read More »

ಕರಾವಳಿ
Scroll to Top