ಕಡಬ ನ್ಯೂಸ್

ಸಾಲಮನ್ನಾ ಇಂದು ಫ್ಯಾಶನ್ ಆಗಿದೆ: ವೆಂಕಯ್ಯ ನಾಯ್ಡು ಲೇವಡಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂ.22. ಸಾಲ ಮನ್ನಾ ಎಂಬುದು ಇಂದಿನ ದಿನಗಳಲ್ಲಿ ಫ್ಯಾಶನ್ ಆಗಿದ್ದು, ತೀವ್ರ ಸಂಕಷ್ಟದ ಸ್ಥಿತಿಯಲ್ಲಿ ಮಾತ್ರ ಸಾಲಮನ್ನಾ ಮಾಡಬೇಕು. ಆದರೆ ಇದು ಸಮಸ್ಯೆಗಳಿಗೆ ಅಂತಿಮ ಪರಿಹಾರವಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಲೇವಡಿ ಮಾಡಿದ್ದಾರೆ. ಕರ್ನಾಟಕ ಸರಕಾರವು ಬುಧವಾರದಂದು ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ರೂ.ವರೆಗಿನ ರೈತರ ಸಾಲವನ್ನು ಮನ್ನಾ ಮಾಡಿ ಆದೇಶ ಹೊರಡಿಸಿತ್ತು. ಪ್ರತಿಯೊಬ್ಬ ರೈತನ 50 ಸಾವಿರ ರೂ. ಸಾಲಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದು, […]

ಸಾಲಮನ್ನಾ ಇಂದು ಫ್ಯಾಶನ್ ಆಗಿದೆ: ವೆಂಕಯ್ಯ ನಾಯ್ಡು ಲೇವಡಿ Read More »

ರಾಷ್ಟ್ರೀಯ ನ್ಯೂಸ್

ಏಣಿತಡ್ಕ(1) ಅಂಗನವಾಡಿ ಕಾರ್ಯಕರ್ತೆ ವೇದಾವತಿ ಪಿ.ಎಸ್. ರವರಿಗೆ ರಾಜ್ಯ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಕಡಬ, ಜೂ.22. ಎಳೆಯ ಮಕ್ಕಳಿಗೆ ಪುರ್ವ ಪ್ರಾಥಮಿಕ ಶಿಕ್ಷಣದ ಅರಿವು ಮೂಡಿಸುವುದು ಅಂಗನವಾಡಿ ಕೇಂದ್ರ. ಮಕ್ಕಳನ್ನು ಬೆಳೆಸುವ ಸಂದರ್ಭದಲ್ಲಿ ತಾಯಂದಿರ ಪಾತ್ರದಷ್ಟೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಜವಾಬ್ದಾರಿ ಬಹಳ ಮಹತ್ತರವಾದುದು. ಇಂತಹ ಪರಿಶ್ರಮದ ಕೆಲಸವನ್ನು ಗುರುತಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕೊೖಲ ಗ್ರಾಮದ ಏಣಿತಡ್ಕ (1) ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವೇದಾವತಿ ಅವರಿಗೆ 2016-17 ಸಾಲಿನ ರಾಜ್ಯ ಅತ್ಯುತ್ತಮ ಕಾರ್ಯಕರ್ತೆ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಿದೆ. ಅಂಗನವಾಡಿ ಕೇಂದ್ರದ ಸ್ವಚ್ಚತೆ,

ಏಣಿತಡ್ಕ(1) ಅಂಗನವಾಡಿ ಕಾರ್ಯಕರ್ತೆ ವೇದಾವತಿ ಪಿ.ಎಸ್. ರವರಿಗೆ ರಾಜ್ಯ ಪ್ರಶಸ್ತಿ Read More »

ಕರಾವಳಿ

ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಸಚಿವ ರೈ ವಿರುದ್ದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.22. ಜಿಲ್ಲೆಯ ಹಿಂದೂ ನಾಯಕರನ್ನು, ಕಾರ್ಯಕರ್ತರನ್ನು ಸುಳ್ಳು ಕೇಸು ಹಾಕಿ ಬಂಧಿಸುವಂತೆ ಪೊಲೀಸ್ ಇಲಾಖೆಗೆ ಒತ್ತಡ ಹೇರಿರುವ ಸಚಿವ ರಮನಾಥ ರೈ ವಿರುದ್ದ ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಗುರುವಾರ ಕಡಬ ತಹಶೀಲ್ದಾರ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣಶೆಟ್ಟಿ ಕಡಬ, ನಮ್ಮನ್ನಾಳುವ ಸರಕಾರ ಕೋಮು ಸಂಘರ್ಷಕ್ಕೆ ಕುಮ್ಮಕು ನೀಡಿ ಸಮಾಜ ಶಾಂತಿ ಕದಡುತ್ತಿದೆ. ಮತೀಯ ಸಂಘರ್ಷವೇರ್ಪಟ್ಟ ತಕ್ಷಣ ಅಮಾಯಕ

ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಸಚಿವ ರೈ ವಿರುದ್ದ ಪ್ರತಿಭಟನೆ Read More »

ಕರಾವಳಿ

ಜಿಲ್ಲೆಯ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ಜಿಲ್ಲೆಯಲ್ಲಿ ನಡೆದಂತಹ ಅಹಿತಕರ ಬೆಳವಣಿಗೆಗೆ ಸಂಬಂಧಿಸಿದಂತೆ ಜಿಲ್ಲೆಗೆ ನೂತನ ಎಸ್ಪಿಯಾಗಿ ಸರಕಾರದಿಂದ ನೇಮಕವಾದ C.H.ಸುಧೀರ್ ಕುಮಾರ್ ರೆಡ್ಡಿಯವರು ಗುರುವಾರದಂದು ಅಧಿಕಾರ ಸ್ವೀಕರಿಸಿದರು. ಪ್ರಸ್ತುತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದುಕೊಂಡು ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಯಾಗಿ ವರ್ಗಾವಣೆಯಾಗಿರುವಂತಹ ಭೂಷಣ್ ಜಿ. ಬೊರಸೆಯವರು ನೂತನ ಎಸ್ಪಿಯವರಿಗೆ ಅಧಿಕಾರ ಹಸ್ತಾಂತರಿಸಿದರು. 2010ನೇ ಸಾಲಿನ IPS ಅಧಿಕಾರಿಯಾಗಿರುವ ಸುಧೀರ್ ಕುಮಾರ್ ರೆಡ್ಡಿಯವರು ಮೂಲತಃ ಆಂಧ್ರಪ್ರದೇಶದ ಗುಂಟೂರಿನವರು. ಈ ಹಿಂದೆ ಭಟ್ಕಳದಲ್ಲಿ ಎಎಸ್ಪಿಯಾಗಿ, ಚಿಕ್ಕಬಳ್ಳಾಪುರ, ಬೀದರ್ ಹಾಗೂ ಮಂಡ್ಯದಲ್ಲಿ

ಜಿಲ್ಲೆಯ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ Read More »

ಕರಾವಳಿ

ಬಂಟ್ವಾಳಕ್ಕೆ ತಲುಪಿದ ಎಸ್ಪಿ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಜಿಲ್ಲಾ ಭದ್ರತಾ ಉಸ್ತುವಾರಿಯಾಗಿ ನೇಮಕಗೊಂಡಿರುವ ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಯವರು ಬುಧವಾರ ತಡರಾತ್ರಿ ಜಿಲ್ಲೆಯ ಬಂಟ್ವಾಳಕ್ಕೆ ಆಗಮಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸಿದರು. ಜಿಲ್ಲೆಯ ಅಲ್ಲಲ್ಲಿ ನಡೆಯುತ್ತಿರುವ ಕೋಮು ಹಿಂಸಾಚಾರವನ್ನು ತಡೆಗಟ್ಟಲು ಅಣ್ಣಾಮಲೈರವರು ಅಧಿಕಾರ ವಹಿಸಲಿದ್ದಾರೆ ಎನ್ನುವ ಬಗ್ಗೆ ವ್ಯಾಪಕ ಚರ್ಚೆಯಾಗಿತ್ತು. ಈ ಬಗ್ಗೆ ಹಲವು ಶಾಂತಿಪ್ರಿಯರು ಸಾಮಾಜಿಕ ಜಾಲತಾಣಗಳಲ್ಲಿ ಅಣ್ಣಾಮಲೈರವರಿಗೆ ಸ್ವಾಗತವನ್ನೂ ಕೋರಿದ್ದರು. ಆದರೆ ಕೊನೇ ಕ್ಷಣದಲ್ಲಿ ಮಂಡ್ಯ ಎಸ್ಪಿಯಾಗಿದ್ದ C.H. ಸುಧೀರ್ ಕುಮಾರ್ ರೆಡ್ಡಿಯವರನ್ನು ನೇಮಕಗೊಳಿಸಿ

ಬಂಟ್ವಾಳಕ್ಕೆ ತಲುಪಿದ ಎಸ್ಪಿ ಅಣ್ಣಾಮಲೈ Read More »

ಕರಾವಳಿ

ಜಿಲ್ಲೆಯಲ್ಲಿ ಜೂ.27 ರವರೆಗೆ ನಿಷೇಧಾಜ್ಞೆ ಮುಂದುವರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.21. ಕಳೆದ ಹಲವಾರು ದಿನಗಳಿಂದ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವುದರಿಂದ ಮತ್ತು ಬುಧವಾರದಂದು ಬೆಂಜನಪದವಿನಲ್ಲಿ SDPI ಮುಖಂಡನ ಕೊಲೆ ಹಿನ್ನೆಲೆಯಲ್ಲಿ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂ.21 ನೇ ಬುಧವಾರ ಮಧ್ಯರಾತ್ರಿಯಿಂದ ಜೂ.27 ನೇ ಮಂಗಳವಾರ ಮಧ್ಯರಾತ್ರಿ 12.00 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಪ್ರಸ್ತಾವನೆಯಂತೆ ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್ ಆದೇಶಿಸಿದ್ದರು. ಜಿಲ್ಲೆಯಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಜೂ.27 ರವರೆಗೆ ನಿಷೇಧಾಜ್ಞೆಯನ್ನು

ಜಿಲ್ಲೆಯಲ್ಲಿ ಜೂ.27 ರವರೆಗೆ ನಿಷೇಧಾಜ್ಞೆ ಮುಂದುವರಿಕೆ Read More »

ಕರಾವಳಿ

ಜಿಲ್ಲಾ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ನೇಮಕ ►ಭೂಷಣ್ ಜಿ. ಬೊರಸೆ ಬೆಂಗಳೂರಿಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.21. ಕಳೆದ ಕೆಲವು ದಿನಗಳಿಂದೀಚೆಗೆ ಜಿಲ್ಲೆಯಲ್ಲಿ ಕೋಮು ಗಲಭೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭೂಷಣ್ ಗುಲಾಬ್ ರಾವ್ ಬೊರಸೆಯವರನ್ನು ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಿದ್ದು, ಪ್ರಸ್ತುತ ಮಂಡ್ಯ ಜಿಲ್ಲಾ ಎಸ್ಪಿಯಾಗಿ ಕರ್ತವ್ಯದಲ್ಲಿದ್ದ C.H. ಸುಧೀರ್ ಕುಮಾರ್ ರೆಡ್ಡಿಯವರನ್ನು ಜಿಲ್ಲಾ ಎಸ್ಪಿಯಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ. ಜಿಲ್ಲಾ ಭದ್ರತಾ ಉಸ್ತುವಾರಿಯನ್ನು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈಯವರಿಗೆ ವಹಿಸಲಾಗಿದೆ. ಬಂಟ್ವಾಳ ವೃತ್ತನಿರೀಕ್ಷಕರನ್ನಾಗಿ ಬೆಳಿಯಪ್ಪರವರನ್ನು ನೇಮಿಸಲಾಗಿದ್ದು,

ಜಿಲ್ಲಾ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ನೇಮಕ ►ಭೂಷಣ್ ಜಿ. ಬೊರಸೆ ಬೆಂಗಳೂರಿಗೆ ವರ್ಗಾವಣೆ Read More »

ಕರ್ನಾಟಕ

ಜಿಲ್ಲಾ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ನೇಮಕ – ಭೂಷಣ್ ಜಿ. ಬೊರಸೆ ಬೆಂಗಳೂರಿಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.21. ಕಳೆದ ಕೆಲವು ದಿನಗಳಿಂದೀಚೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ಗಲಭೆಗಳನ್ನು ನಿಯಂತ್ರಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನರ್ವಹಿಸುತ್ತಿದ್ದ ಭೂಷಣ್ ಗುಲಾಬ್ ರಾವ್ ಬೊರಸೆಯವರನ್ನು ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಿದ್ದು, ಪ್ರಸ್ತುತ ಮಂಡ್ಯ ಜಿಲ್ಲಾ ಎಸ್ಪಿಯಾಗಿ ಕರ್ತವ್ಯದಲ್ಲಿದ್ದ C.H. ಸುಧೀರ್ ಕುಮಾರ್ ರೆಡ್ಡಿಯವರನ್ನು ಜಿಲ್ಲಾ ಎಸ್ಪಿಯಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.  

ಜಿಲ್ಲಾ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ನೇಮಕ – ಭೂಷಣ್ ಜಿ. ಬೊರಸೆ ಬೆಂಗಳೂರಿಗೆ ವರ್ಗಾವಣೆ Read More »

ಕರ್ನಾಟಕ
Scroll to Top