ಕಡಬ ನ್ಯೂಸ್

ಕಡಬ: ಬಿಜೆಪಿ ಸುಳ್ಯ ಮಂಡಲ ಕಾರ್ಯಕಾರಿಣಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಜೂ.10. ಬಿಜೆಪಿ ಕಾರ್ಯಕರ್ತರು ಅಧಿಕಾರದ ಆಸೆಯಿಲ್ಲದೆ ಪಕ್ಷದ ವಿಚಾರಗಳಿಗೆ ಮಹತ್ವ ನೀಡಿ ಸಂಘಟನೆ ಮೂಲಕ ಪಕ್ಷ ಬೆಳೆಸುತ್ತಿದ್ದಾರೆ. ಅಧುನಿಕ ತಂತ್ರಜ್ಞಾನ ಮೂಲಕ ಕಾರ್ಯಕರ್ತರು ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದರು. ಅವರು ಕೇಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಸಭಾಭವನದಲ್ಲಿ ನಡೆದ ಬಿಜೆಪಿ ಸುಳ್ಯ ಮಂಡಲ ಕಾರ್ಯಕಾರಿಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಚಾರಕ್ಕೆ ಒತ್ತು ಕೊಡುವ ಸರಕಾರ ನಮ್ಮನ್ನಾಳುತ್ತಿದೆ. ಅಭಿವೃದ್ದಿಯೆನ್ನುವುದು ರಾಜ್ಯದಲ್ಲಿ ಮರೀಚಿಕೆಯಾಗಿದೆ. ಅಭಿವೃದ್ದಿಯ ದೂರದೃಷ್ಟಿಯಿಲ್ಲದೆ […]

ಕಡಬ: ಬಿಜೆಪಿ ಸುಳ್ಯ ಮಂಡಲ ಕಾರ್ಯಕಾರಿಣಿ ಸಭೆ Read More »

ಕರಾವಳಿ

ರಂಜಾನ್ ಉಪವಾಸ ಮತ್ತು ಆರೋಗ್ಯದ ಕಾಳಜಿ – ಡಾ|| ಮುರಲೀ ಮೋಹನ್ ಚೂಂತಾರುರವರ ಲೇಖನ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ: ಪ್ರತಿ ವರ್ಷ ಪವಿತ್ರ ಮಾಸವಾದ ರಂಜಾನ್ ತಿಂಗಳಲ್ಲಿ ಮುಸ್ಲಿಂ ಸಮುದಾಯದ ನಮ್ಮ ಸಹೋದರ ಸಹೋದರಿಯರು ಬಹಳ ಶ್ರದ್ಧೆ ಮತ್ತು ಭಕ್ತಿಯಿಂದ ಉಪವಾಸ ಮಾಡುತ್ತಾರೆ. ಸೂರ್ಯೋದಯವಾಗುವುದಕ್ಕೆ ಮೊದಲೇ ಆಹಾರ ಸೇವಿಸಿ ಬಳಿಕ 12 ರಿಂದ 14 ಗಂಟೆಗಳ ಕಾಲ ನೀರು ಕೂಡ ಸೇವಿಸದೆ ಸೂಯಾಸ್ತವಾದ ಬಳಿಕವೇ ಆಹಾರ ಸೇವಿಸುತ್ತಾರೆ, ಹಾಗಾಗಿ ಒಂದು ಊಟಕ್ಕೂ ಮತ್ತೊಂದು ಊಟಕ್ಕೂ 12 ರಿಂದ 14 ಗಂಟೆಗಳ ಬಹಳ ಅಂತರವಿರುತ್ತದೆ. ಈ ಸಮಯದ ಅಂತರ ಜಾಸ್ತಿ ಇರುವ ಕಾರಣ

ರಂಜಾನ್ ಉಪವಾಸ ಮತ್ತು ಆರೋಗ್ಯದ ಕಾಳಜಿ – ಡಾ|| ಮುರಲೀ ಮೋಹನ್ ಚೂಂತಾರುರವರ ಲೇಖನ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಎಡೆಬಿಡದೆ ಸುರಿಯತ್ತಿರುವ ಮಳೆ: ಕಳಾರ ಶಾಲಾ ಕಟ್ಟಡ ಕುಸಿತ

(ನ್ಯೂಸ್ ಕಡಬ) newskadaba.com ಕಡಬ, ಜೂ.10. ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಕಳಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವೊಂದು ಕುಸಿದಿರುವ ಘಟನೆ ಶನಿವಾರದಂದು ನಡೆದಿದೆ. ಕಟ್ಟಡವು ಶಿಥಿಲಗೊಂಡಿದ್ದರಿಂದ ಪಕ್ಕದ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ತರಗತಿ ನಡೆಯುತ್ತಿತ್ತೆನ್ನಲಾಗಿದೆ. ಆದರೆ ಬೇರೆ ತರಗತಿಗಳಿಗೆ ಹೊಂದಿಕೊಂಡ ಈ ಕಟ್ಟಡದ ಬಳಿಯಿಂದಾಗಿ ವಿದ್ಯಾರ್ಥಿಗಳು ಸಾಗುತ್ತಿದ್ದರು. ಶನಿವಾರದಂದು ಬೆಳಗ್ಗಿನ ಜಾವ ಘಟನೆ ನಡೆದಿದ್ದು, ಆ ಸಮಯದಲ್ಲಿ ಶಾಲೆಯಲ್ಲಿ ವಿದ್ಯಾರ್ಥಿಗಳು ಇಲ್ಲದಿದ್ದುದರಿಂದ ಅನಾಹುತ ತಪ್ಪಿದೆ. 1997ರಲ್ಲಿ ಸ್ಥಾಪಿಸಲಾದ ಕಟ್ಟಡವು ಅಕ್ರಮ ಕಾಮಗಾರಿಯಿಂದಾಗಿ ಶಿಥಿಲಗೊಂಡಿದ್ದು, ಅದನ್ನು

ಎಡೆಬಿಡದೆ ಸುರಿಯತ್ತಿರುವ ಮಳೆ: ಕಳಾರ ಶಾಲಾ ಕಟ್ಟಡ ಕುಸಿತ Read More »

ಕರಾವಳಿ

ತೆರೆದ ಬಾವಿಯಲ್ಲಿ ಅಪರಿಚಿತ ಶವ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.10. ನಗರ ಠಾಣಾ ಸರಹದ್ದಿನ ಪುತ್ತೂರು ಕಸಬಾ ಗ್ರಾಮದ ನೆಲ್ಲಿಕಟ್ಟೆ ಖಾಸಗಿ ಬಸ್ಸು ನಿಲ್ದಾಣದ ಹಿಂಬದಿಇರುವ ಮನೆ ನಿವೇಶದ ತೆರೆದ ಬಾವಿಯಲ್ಲಿ ಅಪರಿಚಿತ ಶವವೊಂದು ಶನಿವಾರದಂದು ಕಂಡುಬಂದಿದೆ. ಬುಧವಾರ ಸಂಜೆಯ ನಂತರ ತೆರೆದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದ್ದು, ಈ ಬಗ್ಗೆ ಸಾಮೆತ್ತಡ್ಕ  ನಿವಾಸಿ ಪರವೀಣ್ ಕುಮಾರ್ ರೈಯವರು ನೀಡಿರುವ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೆರೆದ ಬಾವಿಯಲ್ಲಿ ಅಪರಿಚಿತ ಶವ ಪತ್ತೆ Read More »

ಕರಾವಳಿ

ನೂಜಿಬಾಳ್ತಿಲ ಬೆಥನಿ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ.10. ನೂಜಿಬಾಳ್ತಿಲ ಬೆಥನಿ ಪ.ಪು ಕಾಲೇಜಿನ ಜೋಸ್ ವಾಳಕುಝಿ ಸ್ಮಾರಕ ಸಭಾಭವನದಲ್ಲಿ ಪರಿಸರ ದಿನಾಚರಣೆ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿ ಮಾತನಾಡಿ, ನಮಗೆ ಪರಿಸರದ ಬಗ್ಗೆ ಕಾಳಜಿ ಕಡಿಮೆಯಾಗಿದೆ. ಆದರೆ ಸ್ವಚ್ಚ ಪರಿಸರ, ಗಾಳಿ, ನೀರು, ಪ್ರಕೃತಿ ರಮಣೀಯವಾದ ಕಾಡಿನೊಂದಿಗೆ ಉತ್ತಮ ಪರಿಸರ ಹೊಂದಿಕೊಳ್ಳಬೇಕಾದರೆ ನಾವು ನಮ್ಮ ಪರಿಸರದತ್ತ ಗಮನ ಹರಿಸಬೇಕಾಗಿದೆ . ಮುಂದಿನ ಪ್ರಜೆಗಳಾಗುವ ವಿದ್ಯಾರ್ಥಿಗಳಾದ ತಾವುಗಳು ಪ್ರತಿಯೊಬ್ಬರ ಮನೆ ಪರಿಸರದಲ್ಲಿ 10-10 ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ

ನೂಜಿಬಾಳ್ತಿಲ ಬೆಥನಿ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಪದವಿ ಶಿಕ್ಷಣಕ್ಕೆ ಹಣದ ಕೊರತೆಯೇ…? ಕಡಬ ಏಮ್ಸ್‌ ಕಾಲೇಜಿನಲ್ಲಿ ಉಚಿತ ಶಿಕ್ಷಣ

(ನ್ಯೂಸ್ ಕಡಬ) newskadaba.com ಕಡಬ, ಜೂ.10. ಮಂಗಳೂರು ವಿಶ್ವವಿದ್ಯಾಲಯದಿಂದ ಅನುಮತಿ ಪಡೆದ ಕಡಬದ ಏಮ್ಸ್‌ ಕಾಲೇಜು ಶೈಕ್ಷಣಿಕ ಕ್ಷೇತ್ರಕ್ಕೆ ತನ್ನದೆ ಆದ ಕೊಡುಗೆ ನೀಡುತ್ತಿದೆ. ಹೀಗಾಗಿ ಹಲವಾರು ಪ್ರಶಸ್ತಿಗಳು ಲಭಿಸಿದೆ. ಪ್ರಸಕ್ತ ಸಾಲಿನಲ್ಲಿ 100 ವಿದ್ಯಾರ್ಥಿಗಳಿಗೆ ಶುಲ್ಕ ಉಚಿವಾಗಿ ಶಿಕ್ಷಣ ನೀಡಲಾಗುವದು ಎಂದು ಸಂಸ್ಥೆಯ ಅಧ್ಯಕ್ಷೆ ಪೌಝೀಯ ಬಿ.ಎಸ್.ಹೇಳಿದರು. ಅವರು ಕಡಬದ ಪ್ರೆಸ್ ಕ್ಲಬ್ ನಲ್ಲಿ ಇತ್ತೀಚೆಗೆ ಪತ್ರೀಕಾಗೋಷ್ಟಿಯಲ್ಲಿ ಮಾತನಾಡಿ, ಸಂಸ್ಥೆಯು 2012-13 ಸಾಲಿನಲ್ಲಿ 7 ವಿದ್ಯಾರ್ಥಿಗಳ ಮೂಲಕ ಆರಂಭಗೊಂಡು ಬಳಿಕದ ಬೆಳವಣಿಗೆಯಲ್ಲಿ 2015-16 ನೇ ಸಾಲಿನಲ್ಲಿ ಕಾಲೇಜಿನ ಪ್ರಥಮ

ಪದವಿ ಶಿಕ್ಷಣಕ್ಕೆ ಹಣದ ಕೊರತೆಯೇ…? ಕಡಬ ಏಮ್ಸ್‌ ಕಾಲೇಜಿನಲ್ಲಿ ಉಚಿತ ಶಿಕ್ಷಣ Read More »

ಕರಾವಳಿ

ಎಲ್ಲಾ ಸೌಲಭ್ಯ ನೀಡಿದರೂ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಳಿಮುಖ: ಶಾಸಕ ಅಂಗಾರ ಆತಂಕ

(ನ್ಯೂಸ್ ಕಡಬ) newskadaba.com ಕಡಬ, ಜೂ.10. ಸರಕಾರಿ ಶಾಲೆಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಿದರೂ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖವಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು. ಅವರು ಶುಕ್ರವಾರ ಕುಟ್ರುಪ್ಪಾಡಿ ಗ್ರಾಮದ ಕೇಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಕ್ಷರ ದಾಸೋಹ ಕಟ್ಟಡವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ರಾಜ್ಯ ಸರಕಾರ ಸರಕಾರಿ ಶಾಲೆಗಳಿಗೆ ಉತ್ತಮ ಶಿಕ್ಷಕರು, ಸದೃಢ ಕಟ್ಟಡಗಳು, ಮಧ್ಯಾಹ್ನದ ಊಟದ ವ್ಯವಸ್ಥೆ, ಉಚಿತ ಪಠ್ಯಪುಸ್ತಕ, ಸಮವಸ್ತ್ರ ಮುಂತಾದ ಎಲ್ಲಾ ಸೌಲಭ್ಯಗಳನ್ನು ನೀಡಿ

ಎಲ್ಲಾ ಸೌಲಭ್ಯ ನೀಡಿದರೂ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಳಿಮುಖ: ಶಾಸಕ ಅಂಗಾರ ಆತಂಕ Read More »

ಕರಾವಳಿ

ಮರ್ಧಾಳ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜೂ.09. ಇಲ್ಲಿನ ಐತ್ತೂರು ಗ್ರಾಮದ ಕೊಡೆಂಕೀರಿ ನಿವಾಸಿ ಬೆಳ್ಳಾರೆ ಪೊಲೀಸ್ ಠಾಣೆಯ ಎಎಸ್ಸೈ ಬಾಲಚಂದ್ರ ಎಂಬವರ ಪತ್ನಿ ಜಾನಕಿ(51) ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕೌಟುಂಬಿಕ ಕಾರಣಗಳಿಂದಾಗಿ ಮನನೊಂದು ತೋಟದಲ್ಲಿನ ಕೃಷಿಗೆ ಸಿಂಪಡಿಸಲೆಂದು ತಂದಿರಿಸಲಾಗಿದ್ದ ವಿಷವನ್ನು ಸೇವಿಸಿದ್ದು, ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಶವವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿರಿಸಲಾಗಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮರ್ಧಾಳ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ Read More »

ಕರಾವಳಿ

ರಾಮಕುಂಜ: ರಸ್ತೆ ಕಾಂಕ್ರಿಟೀಕರಣಕ್ಕೆ ಶಾಸಕ ಅಂಗಾರರಿಂದ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಕಡಬ, ಜೂ.09. ಲೋಕೋಪಯೋಗಿ ಬಂದರು ಒಳನಾಡು ಜಲಸಾರಿಗೆ ಇಲಾಖೆಯ 10 ಲಕ್ಷ ರೂ. ಅನುದಾನದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ರಾಮಕುಂಜ ಗ್ರಾಮದ ಅಂಬೇಡ್ಕರ್ ನಗರ ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ ಶಿಲಾನ್ಯಾಸ ನಡೆಯಿತು. ಸುಳ್ಯ ಶಾಸಕ ಎಸ್. ಅಂಗಾರರವರು ಶಿಲಾನ್ಯಾಸ ನೆರವೇರಿಸಿ ಸಂದರ್ಭೋಚಿತವಾಗಿ ಮಾತನಾಡಿದರು. ಬಿಜೆಪಿ ನೆಲ್ಯಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ಧರ್ಮಪಾಲ ರಾವ್ ಕಜೆ, ತಾ.ಪಂ. ಸದಸ್ಯೆಯರಾದ ಜಯಂತಿ ಆರ್. ಗೌಡ, ತೇಜಸ್ವಿನಿ ಶೇಖರ ಗೌಡ, ರಾಮಕುಂಜ

ರಾಮಕುಂಜ: ರಸ್ತೆ ಕಾಂಕ್ರಿಟೀಕರಣಕ್ಕೆ ಶಾಸಕ ಅಂಗಾರರಿಂದ ಶಿಲಾನ್ಯಾಸ Read More »

ಕರಾವಳಿ

ಇಂದಿನಿಂದ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

(ನ್ಯೂಸ್ ಕಡಬ) newskadaba.com ಮ0ಗಳೂರು, ಜೂ.09. ಕೆಎಸ್‍ಆರ್‍ಟಿಸಿ ಮಂಗಳೂರು ವಿಭಾಗವು 2017-18ನೇ ಸಾಲಿಗಾಗಿ ವಿದ್ಯಾರ್ಥಿ ರಿಯಾಯಿತಿ ಬಸ್ಸು ಪಾಸುಗಳನ್ನು ವಿತರಿಸಲು ಸಿದ್ಧವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ಪ್ರಸ್ತುತ ವರ್ಷ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿ ಪಾಸು ನೀಡಲಾಗುವುದು. (ಸಂಸ್ಕರಣ ಶುಲ್ಕ+ ಅಪಘಾತ ಪರಿಹಾರ ಶುಲ್ಕ ಪಾವತಿಸಬೇಕು) ಮೊದಲನೇ ಹಂತವಾಗಿ ಪ್ರಾಥಮಿಕ ಮತ್ತು ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಬಸ್ಸು ಪಾಸುಗಳನ್ನು ಸಂಬಂಧಪಟ್ಟ ಶೈಕ್ಷಣಿಕ ಸಂಸ್ಥೆಗಳ ಮೂಲಕ ವಿತರಿಸಲಾಗುವುದು. ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿ ಫಾರಂಗಳನ್ನು ನಿಗದಿತ ಶುಲ್ಕದೊಂದಿಗೆ

ಇಂದಿನಿಂದ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ Read More »

ಕರಾವಳಿ
Scroll to Top