ಕಡಬ ನ್ಯೂಸ್

ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ವನಮಹೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಇದರ ಸಹಸಂಸ್ಥೆಯಾದ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‌ ಇದರ ವತಿಯಿಂದ ಬೊಳ್ಳೂರು ಶ್ರೀ ಷಣ್ಮುಖ ಸುಬ್ರಾಯ ಸ್ವಾಮಿ ದೇವಾಲಯದ ವಠಾರದಲ್ಲಿ ವನಮಹೋತ್ಸವ ಆಚರಣೆಯನ್ನು ಗುರುವಾರ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಸಹಕಾರಿಯ ಸದಸ್ಯರಾದ ಶ್ರೀ ಶಶಿಕುಮಾರ ಕೋಲಂತ್ತಾಡಿರವರು ನವಜೀವನಕ್ಕೆ ಕಾಲಿಡುವ ಸುಸಂಧರ್ಭವನ್ನು ಸಸಿಗಳನ್ನು ನೆಡುವುದರ ಮೂಲಕ ವೈವಾಹಿಕ ಜೀವನವನ್ನು ಆರಂಭಿಸಿದರು. ಈ ಸಂಧರ್ಭದಲ್ಲಿ ವಧು-ವರರ ಬಂಧು-ಮಿತ್ರರು,ಸಹಕಾರಿಯ ಹಿತೈಷಿಗಳು,ದೇವಸ್ಥಾನದ ಆಡಳಿತ ಮಂಡಳಿಯವರು,ಹಿರಿಯರಾದ ಜನಾರ್ಧನ ಗೌಡ […]

ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ವನಮಹೋತ್ಸವ Read More »

ಕರಾವಳಿ

ಭಯೋತ್ಪಾದನೆ ನಿಗ್ರಹ, ಹವಾಮಾನ ಬದಲಾವಣೆ ಮಾತುಕತೆ

ಫ್ರಾನ್ಸ್ ಅಧ್ಯಕ್ಷ-ಮೋದಿ ಭೇಟಿ (ನ್ಯೂಸ್ ಕಡಬ) newskadaba.com ಪ್ಯಾರಿಸ್, ಜೂ.3. ಪ್ರಧಾನಿ ನರೇಂದ್ರ ಮೋದಿ ಶನಿವಾರ ಫ್ರಾನ್ಸ್‌ನ ನೂತನ ಅಧ್ಯಕ್ಷ ಇಮಾನುಯೆಲ್ ಮ್ಯಾಕ್ರೋನ್‌ರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಉಭಯ ನಾಯಕರು ಬಾಂಧವ್ಯ ವೃದ್ಧಿ, ಭಯೋತ್ಪಾದನೆ ನಿಗ್ರಹ ಮತ್ತು ಹವಾಮಾನ ಬದಲಾವಣೆ ಮುಂತಾದ ಜಾಗತಿಕ ಹಾಗೂ ದ್ವಿಪಕ್ಷೀಯ ಆಸಕ್ತಿಯ ವಿಷಯಗಳ ಬಗ್ಗೆ ಚರ್ಚಿಸಿದರು.

ಭಯೋತ್ಪಾದನೆ ನಿಗ್ರಹ, ಹವಾಮಾನ ಬದಲಾವಣೆ ಮಾತುಕತೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಲಂಡನ್: ಭಯೋತ್ಪಾದಕ ದಾಳಿಗೆ ಏಳು ಬಲಿ, 48 ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಲಂಡನ್,ಜೂ.4. ಚೂರಿಗಳನ್ನು ಝಳಪಿಸುತ್ತಿದ್ದ, ನಕಲಿ ಆತ್ಮಹತ್ಯಾ ಜಾಕೆಟ್‌ಗಳನ್ನು ಧರಿಸಿದ್ದ ಮೂವರು ಭಯೋತ್ಪಾದಕರು ಶನಿವಾರ ರಾತ್ರಿ ಮಧ್ಯ ಲಂಡನ್‌ನಲ್ಲಿ ಮಾರಣಹೋಮ ನಡೆಸಿದ್ದಾರೆ. ರಾತ್ರಿ 10 ಗಂಟೆಗೆ(ಭಾರತೀಯ ಕಾಲಮಾನ ಸೋಮವಾರ ನಸುಕಿನ 2:30 ಗಂಟೆ) ಲಂಡನ್ನಿನ ಹೆಗ್ಗುರುತು ಲಂಡನ್ ಬ್ರಿಡ್ಜ್‌ನಲ್ಲಿ ಅತಿವೇಗದಿಂದ ಚಲಿಸುತ್ತಿದ್ದ ಬಿಳಿಯ ಬಣ್ಣದ ವ್ಯಾನ್‌ನಲ್ಲಿದ್ದ ಈ ರಾಕ್ಷಸರು ಪಾದಚಾರಿ ಗಳ ಮೇಲೆ ವಾಹನವನ್ನು ನುಗ್ಗಿಸಿದ ಬಳಿಕ ಸಮೀಪದ ಮಾರುಕಟ್ಟೆ ಪ್ರದೇಶದಲ್ಲಿದ್ದ ಜನರನ್ನು ಚೂರಿಗಳಿಂದ ಮನಬಂದಂತೆ ಇರಿದಿದ್ದಾರೆ. ಈ ದಾಳಿಯಲ್ಲಿ ಏಳು ಜನರು ಸಾವನ್ನಪ್ಪಿದ್ದು,

ಲಂಡನ್: ಭಯೋತ್ಪಾದಕ ದಾಳಿಗೆ ಏಳು ಬಲಿ, 48 ಜನರಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸ್ವಾಮಿ ನಾರಾಯಣ ದೇವಸ್ಥಾನಕ್ಕೆ ಬ್ರಿಟನ್ ಪ್ರಧಾನಿ ಭೇಟಿ

(ನ್ಯೂಸ್ ಕಡಬ) newskadaba.com ಲಂಡನ್, ಜೂ. 4. ಬ್ರಿಟಿಶ್ ಪ್ರಧಾನಿ ತೆರೇಸಾ ಮೇ ತನ್ನ ಗಂಡ ಫಿಲಿಪ್ ಜೊತೆಗೆ ಶನಿವಾರ ವಾಯುವ್ಯ ಲಂಡನ್‌ನಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿದರು. ಬ್ರಿಟನ್ ಸಂಸತ್ತಿಗೆ ಜೂನ್ 8ರಂದು ಚುನಾವಣೆ ನಡೆಯಲಿದ್ದು, ಅದಕ್ಕಿಂತ ದಿನಗಳ ಮುಂಚೆ ತೆರೇಸಾ ಭೇಟಿ ನೀಡಿದ್ದಾರೆ. ಲಂಡನ್‌ನಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನವು ಭಾರತದ ಹೊರಗಿನ ಅತ್ಯಂತ ದೊಡ್ಡ ಹಿಂದೂ ದೇವಾಲಯವಾಗಿದೆ. ದೇವಾಲಯಕ್ಕೆ ಭೇಟಿ ನೀಡಿದ 60 ವರ್ಷದ ಪ್ರಧಾನಿ, ಭಗವಾನ್ ಸ್ವಾಮಿನಾರಾಯಣನಿಗೆ ಪುಷ್ಪ ದಳಗಳನ್ನು ಅರ್ಪಿಸಿದರು ಎಂದು ದೇವಸ್ಥಾನದ ವಕ್ತಾರರೋರ್ವರು

ಸ್ವಾಮಿ ನಾರಾಯಣ ದೇವಸ್ಥಾನಕ್ಕೆ ಬ್ರಿಟನ್ ಪ್ರಧಾನಿ ಭೇಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಬಿಎಸ್ಎಫ್ ಕಾರ್ಯಾಚರಣೆ: 4 ಲಕ್ಷ ಮುಖಬೆಲೆಯ ನಕಲಿ ನೋಟುಗಳ ವಶ

(ನ್ಯೂಸ್ ಕಡಬ) newskadaba.com ಮಾಲ್ಡಾ, ಜೂ.4. ನೂತನ 2 ಸಾವಿರ ರೂ. ಮುಖಬೆಲೆಯ 4,98,000 ನಕಲಿ ನೋಟುಗಳನ್ನು ಗಡಿಭದ್ರತಾ ಪಡೆ ವಶಪಡಿಸಿಕೊಂಡಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಬಿಎಸ್ ಎಫ್ ಭಾರತ-ಬಾಂಗ್ಲಾ ಗಡಿಪ್ರದೇಶದಿಂದ ಈ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದು, ಕಾರ್ಯಾಚರಣೆಯ ವೇಳೆ ಕತ್ತಲಾಗಿದ್ದರಿಂದ ದಂಧೆಕೋರರು ಪರಾರಿಯಾಗಿದ್ದಾರೆ. ವಶಪಡಿಸಿಕೊಂಡಿರುವ ನೋಟುಗಳನ್ನು ಕಲಿಯಾಚಕ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ತನಿಖೆ ನಡೆಯುತ್ತಿದೆ.

ಬಿಎಸ್ಎಫ್ ಕಾರ್ಯಾಚರಣೆ: 4 ಲಕ್ಷ ಮುಖಬೆಲೆಯ ನಕಲಿ ನೋಟುಗಳ ವಶ Read More »

ರಾಷ್ಟ್ರೀಯ ನ್ಯೂಸ್

ಸೇನಾ ವಾಹನಗಳ ಮೇಲೆ ಭಯೋತ್ಪಾದಕರ ದಾಳಿ: ಇಬ್ಬರು ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ,ಜೂ.3. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಭಾರತೀಯ ಸೇನೆಯ ವಾಹನಗಳ ಸಾಲಿನ ಮೇಲೆ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕಾಜಿಗುಂದ್ ಪ್ರದೇಶದ ಲೋವರ್ ಮುಂಡಾ ಎಂಬಲ್ಲಿ ಶನಿವಾರ ಬೆಳಿಗ್ಗೆ 11:15ರ ಸುಮಾರಿಗೆ ಈ ದಾಳಿ ನಡೆದಿದೆ. ಸೇನೆಯ ವಾಹನಗಳ ಸಾಲಿನಲ್ಲಿ ಸಾಗುತ್ತಿದ್ದ ವಾಹನವೊಂದರ ಮೇಲೆ ಭಯೋತ್ಪಾ ದಕರು ಎಕೆ

ಸೇನಾ ವಾಹನಗಳ ಮೇಲೆ ಭಯೋತ್ಪಾದಕರ ದಾಳಿ: ಇಬ್ಬರು ಯೋಧರು ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್

ಸರ್ಫಿಂಗ್: ಇಂದು ಚಾಲನೆ

(ನ್ಯೂಸ್ ಕಡಬ) newskadaba.com ಮ0ಗಳೂರು, ಮೇ .25. 2ನೇ ಇಂಡಿಯನ್ ಓಪನ್ ಸರ್ಫಿಂಗ್ ಕ್ರೀಡಾಕೂಟಕ್ಕೆ ಶುಕ್ರವಾರ ಮಂಗಳೂರು ಹೊರವಲಯದ ಸಸಿಹಿತ್ಲು ಕಡಲಿನಲ್ಲಿ ಚಾಲನೆ ದೊರಕಲಿದೆ. ಮೂರು ದಿನಗಳ ಕಾಲ ನಡೆಯುವ ಸರ್ಫಿಂಗ್ ಕ್ರೀಡಾಕೂಟ ಶುಕ್ರವಾರ ಬೆಳಿಗ್ಗೆ 7.30ಕ್ಕೆ ಪ್ರಾರಂಭವಾಗಲಿದ್ದು, ಬೆಳಿಗ್ಗೆ 10 ಗಂಟೆಗೆ ಕ್ರೀಡಾಕೂಟದ ಅಧಿಕೃತ ಉದ್ಘಾಟನೆ ನಡೆಯಲಿದೆ. ಪ್ರವಾಸೋದ್ಯಮ ಸಚಿವ ಪ್ರಿಯಾಂಕ ಖರ್ಗೆ ಸರ್ಫಿಂಗ್ ಕ್ರೀಡೆಗೆ ಚಾಲನೆ ನೀಡಲಿದ್ದಾರೆ. 2ನೇ ಇಂಡಿಯನ್ ಓಪನ್ ಸರ್ಫಿಂಗ್ ಕ್ರೀಡಾಕೂಟಕ್ಕೆ ಬಾಲಿವುಡ್ ಚಿತ್ರನಟ ಸುನೀಲ್ ಶೆಟ್ಟಿ ರಾಯಭಾರಿಯಾಗಲಿದ್ದಾರೆ. ಪ್ರತೀದಿನ ಬೆಳಿಗ್ಗೆ 7.30ರಿಂದ

ಸರ್ಫಿಂಗ್: ಇಂದು ಚಾಲನೆ Read More »

ಕರಾವಳಿ

ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಪ್ರವಾಸ

(ನ್ಯೂಸ್ ಕಡಬ) newskadaba.com ಮ0ಗಳೂರು, ಮೇ.25. ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಮೇ 26ರಂದು ಪ್ರವಾಸ ಇಂತಿವೆ. ಮೇ 26 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಸಸಿಹಿತ್ಲು ಬೀಚ್‍ನಲ್ಲಿ ಇಂಡಿಯನ್ ಒಪನ್ ಆಫ್ ಸರ್ಫಿಂಗ್-2017 ಉದ್ಘಾಟನಾ ಸಮಾರಂಭ, 11.30 ಗಂಟೆಗೆ ಅನಂತಾಡಿ-ಬಾಕಿಲಗುತ್ತು ಶ್ರೀ ವೈದ್ಯನಾಥೇಶ್ವರ ದೈವಸ್ಥಾನ ಇದರ ಶಿಲಾನ್ಯಾಸದ ಅಂಗವಾಗಿ ಸಭಾ ಕಾರ್ಯಕ್ರಮ, ಅಪರಾಹ್ನ ಸ್ಥಳೀಯ ಖಾಸಗಿ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಪ್ರವಾಸ Read More »

ಕರಾವಳಿ
Scroll to Top